Subscribe to Updates
Get the latest creative news from FooBar about art, design and business.
Author: roovari
ಅಪರಾಧ ಮಾಡಿದ ವ್ಯಕ್ತಿಯ ಪತ್ತೆಗೆ ಕಾರಣವಾಗುವ ಸುಳಿವುಗಳನ್ನು ಒಬ್ಬ ಪತ್ತೇದಾರಿ ಹುಡುಕುತ್ತಾನೆ. ಅದೇ ರೀತಿ ಒಬ್ಬ ಸಾಹಿತಿಯಾದವನು ತನ್ನ ಪತ್ತೇದಾರಿ ಸಾಹಿತ್ಯದಲ್ಲಿ ‘ಪತ್ತೇದಾರಿ’ ಎನ್ನುವ ಪಾತ್ರಕ್ಕೆ ಪ್ರಾಮುಖ್ಯತೆ ನೀಡಿ ಮೊದಲಿನಿಂದ ಕೊನೆಯವರೆಗೆ ಓದುಗನೊಬ್ಬನನ್ನು ಸೆರೆ ಹಿಡಿಯುವುದೆಂದರೆ ಸುಲಭದ ಮಾತಲ್ಲ. ಪ್ರತಿಕ್ಷಣ ಪ್ರತಿ ಹಂತದಲ್ಲೂ ರೋಚಕತೆ, ಕುತೂಹಲ, ಉತ್ಸುಕತೆ ತುಂಬಲು ಅಂತಹ ಸನ್ನಿವೇಶಗಳನ್ನು ಆತನ ಬರವಣಿಗೆಯಲ್ಲಿ ಸೃಷ್ಟಿಸಿರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಓದುಗರನ್ನು ತನ್ನದೇ ಶೈಲಿಯಲ್ಲಿ ಮೋಡಿ ಮಾಡಿದ ಕೀರ್ತಿ ಖಂಡಿತವಾಗಿಯೂ ಎನ್. ನರಸಿಂಹಯ್ಯನವರಿಗೆ ಸಲ್ಲುತ್ತದೆ. ಎನ್. ನರಸಿಂಹಯ್ಯನವರ ಕುರಿತಾದ ಬರಹ ಎಂಬ ವಿಚಾರ ಬಂದಾಗ ಅವರ ಬಗೆಗೆ ತಿಳಿದುಕೊಳ್ಳುವ ಸಲುವಾಗಿ ಜಾಲಾಡಿದಾಗ ನನಗೆ ದೊರೆತ ಹಾಗೂ ಮನಸ್ಸಿಗೆ ತೋಚಿದ ಕೆಲವೊಂದು ವಿಚಾರಗಳನ್ನು ಬರೆಯುವುದಕ್ಕೆ ಮುಂದಾದೆ. ಎನ್. ನರಸಿಂಹಯ್ಯನವರು ತಮ್ಮ ಪತ್ತೇದಾರಿ ಕಾದಂಬರಿಗಳಲ್ಲಿ ಓದುಗರನ್ನು ಸೆರೆ ಹಿಡಿಯುವಲ್ಲಿ ಹೇಗೆ ಯಶಸ್ಸನ್ನು ಕಂಡುಕೊಂಡಿದ್ದರು ಎಂಬುದಕ್ಕೆ ಅವರ ಓದುಗ ಅಭಿಮಾನಿಯೊಬ್ಬರು ಪ್ರಮುಖ ಪತ್ತೇದಾರಿ ಸಾಹಿತಿಗಳ ಹೆಸರಿನ ಪಟ್ಟಿಯನ್ನು ಮುಂದಿಡುತ್ತಾ, ಇವರೆಲ್ಲಾ ಪತ್ತೇದಾರಿ ಸಾಹಿತ್ಯವನ್ನು ಬರೆದರೂ “ಎನ್. ನರಸಿಂಹಯ್ಯನವರು…
03.06.1994ರಂದು ನಾಗೇಶ್ ರಾವ್ ಎನ್ ಹಾಗೂ ಸರೋಜ ಎನ್ ಇವರ ಮಗನಾಗಿ ಕಿಶನ್ ರಾವ್ ನೂಜಿಪ್ಪಾಡಿ ಜನನ. MBA (HR & Marketing) ಇವರ ವಿದ್ಯಾಭ್ಯಾಸ. ಪ್ರಸ್ತುತ ಪುತ್ತೂರಿನ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅಂದಿನ ಕಾಲದಲ್ಲಿ ಪ್ರಸಿದ್ಧ ಕಲಾವಿದರಾದ ಅಗರಿ ಭಾಗವತರು, ಶೇಣಿ ಗೋಪಾಲಕೃಷ್ಣ ಭಟ್, ಕೋಳ್ಯೂರು ರಾಮಚಂದ್ರ ರಾವ್, ಬಣ್ಣದ ಮಹಾಲಿಂಗಜ್ಜ ಮೊದಲಾದವರು ಇದ್ದಂತಹ ಗಜಮೇಳವಾಗಿದ್ದ ಕೂಡ್ಲು ಮೇಳದ ಯಜಮಾನರಾಗಿದ್ದ ನನ್ನ ಅಜ್ಜ ನೂಜಿಪ್ಪಾಡಿ ಶಂಕರನಾರಾಯಣಪ್ಪಯ್ಯ ಇವರ ಸಾಧನೆ ಹಾಗೂ ಪ್ರಸಿದ್ಧಿ ನಾನು ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆ. ತಂದೆಯವರು ತಮ್ಮ ಬಾಲ್ಯದಲ್ಲಿ ಯಕ್ಷಗಾನ ಕಲಿತು ಇನ್ನೇನು ಮರುದಿನ ಯಕ್ಷಗಾನ ಪ್ರದರ್ಶನದಲ್ಲಿ ವಿಭೀಷಣನ ವೇಷ ಮಾಡಲು ಸಿದ್ಧರಿದ್ದಾಗ ಅವರ ತಂದೆ ತೀರಿಕೊಂಡು ವೇಷ ಮಾಡಲು ಸಾಧ್ಯವಾಗದೆ, ನಂತರ ತೀವ್ರ ಬಡತನದಿಂದ ಅವಕಾಶ ಮತ್ತು ಪ್ರೋತ್ಸಾಹ ವಂಚಿತರಾಗಿದ್ದರು. ತನಗೆ ಆಸಕ್ತಿ ಇದ್ದರೂ ಸರಿಯಾದ ಅವಕಾಶ ಮತ್ತು ಪ್ರೋತ್ಸಾಹ ಸಿಗದಿದ್ದಾಗ ತನ್ನ ಮಗನಿಗೆ ಯಕ್ಷಗಾನ ಕಲಿಸಿ ಅಜ್ಜ ಶಂಕರನಾರಾಯಣಪ್ಪಯ್ಯನವರು…
ಮಂಗಳೂರು : ಪುರಭವನದಲ್ಲಿ ಕುಂದೇಶ್ವರ ಪ್ರತಿಷ್ಠಾನದ ವತಿಯಿಂದ ‘ಶ್ರೀಪ್ರಾಪ್ತಿ ಕಲಾವಿದೆರ್ ಕುಡ್ಲ’ ತಂಡವು ‘ಮಣೆ ಮ೦ಚೊದ ಮಂತ್ರಮೂರ್ತಿ’ ನಾಟಕದ ಮೊದಲ ಪ್ರದರ್ಶನವು ಅಕ್ಷರಶಃ ಪ್ರೇಕ್ಷಕರನ್ನು ಮಂತ್ರ ಮುಗ್ಧಗೊಳಿಸಿತು. ಕಲಾವಿದರ ಕಲಾ ಕೌಶಲಕ್ಕೆ ಕರತಾಡನಗಳ ಸದ್ದು ನಾಟಕ ಪ್ರದರ್ಶನಕ್ಕೆ ಮೆರುಗು ಕಟ್ಟಿಕೊಟ್ಟಿತು. ಈ ಸಂದರ್ಭದಲ್ಲಿ ಚತುರ್ಭಾಷಾ ಕಲಾವಿದ, ರಂಗಭೂಮಿ ನಟ ಶ್ರೀ ಗೋಪಿನಾಥ್ ಭಟ್ ಅವರಿಗೆ ‘ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು ಮತ್ತು ಹಿರಿಯ ದೈವಾರಾಧಕರಾದ ಸೀನ ಶೆಡ್ಯ ಅವರನ್ನು ಸನ್ಮಾನಿಸಲಾಯಿತು. ನಾಟಕಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ ಅವರು ಚಾಲನೆ ನೀಡಿ ಮಾತನಾಡಿ, “ಕುಂದೇಶ್ವರ ಪ್ರತಿಷ್ಠಾನವು ಹಲವು ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ. ನಾಟಕ, ಯಕ್ಷಗಾನಗಳ ಪ್ರದರ್ಶನ ನೀಡುವ ಜತೆಗೆ ಕಲಾವಿದರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ” ಎಂದು ಸ್ಮರಿಸಿದರು. ದೇವದಾಸ್ ಕಾಪಿಕಾಡ್ ಅವರು ಮಾತನಾಡಿ, “ಜನಪದ, ಪೌರಾಣಿಕ ನಾಟಕ ಪ್ರದರ್ಶನ ಸುಲಭ ಸಾಧ್ಯದ ಮಾತಲ್ಲ. ದೈವಭಕ್ತಿ ಪೂರಿತ ನಾಟಕಗಳು ಅತುತ್ತಮ…
ಕೋಟ : ಕಾರ್ಕಡ ಸಾಲಿಗ್ರಾಮ ಗೆಳೆಯರ ಬಳಗದ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ನೀಡಲ್ಪಡುವ ‘ಗೆಳೆಯರ ಬಳಗ ಕಾರಂತ ಪುರಸ್ಕಾರ 2023’ಕ್ಕೆ ಈ ಬಾರಿ ಖ್ಯಾತ ಸಾಹಿತಿ ವೈದೇಹಿ ಅವರು ಆಯ್ಕೆಯಾಗಿದ್ದಾರೆ. ದಿನಾಂಕ 14-10-2023ರಂದು ಕಾರ್ಕಡದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.
ಕೋಟ: ಕೋಟದ ಮಣೂರು ಪಡುಕೆರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ.ಸಿ.ಕುಂದರ್ ಸ್ಮಾರಕ ಭವನದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ “ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ” ಕಾರ್ಯಕ್ರಮವು ದಿನಾಂಕ 09-09-2023ರಂದು ನಡೆಯಿತು. ದೀವಟಿಕೆಗೆ ಎಣ್ಣೆ ಹಾಕುವುದರ ಮೂಲಕ ಚಾಲನೆ ನೀಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ.ಕುಂದರ್ “ಯಕ್ಷಗಾನ ಪೂರ್ವರಂಗ ಎನ್ನುವಂತದ್ದು ನಶಿಸಿ ಹೋದ ಕಾಲದಲ್ಲಿ ಯಶಸ್ವೀ ಕಲಾವೃಂದದ ಬಳಗ ಶಾಲೆಗಳಿಗೆ ತೆರಳಿ ಭವಿಷ್ಯದ ರೂವಾರಿ ಶಾಲಾ ಮಕ್ಕಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಎಳೆ ಎಳೆಯಾಗಿ ಹೇಳಿ ಕೊಡುವ ಕಾರ್ಯ ಮಾಡುತ್ತಿದೆ. ಕೋಡಂಗಿಯಿಂದ ಹಿಡಿದು ಪಾಂಡವರ ಒಡ್ಡೋಲಗದ ವರೆಗಿನ ಪೂರ್ವರಂಗದ ಭಾಗವಷ್ಟೇ ಅಲ್ಲದೇ ಕೃಷ್ಣನ ಒಡ್ಡೋಲಗ, ಕಿರಾತ ಒಡ್ಡೋಲಗವನ್ನು ಅಚ್ಚು ಕಟ್ಟಾಗಿ ಚಿಣ್ಣರೇ ರಂಗದಲ್ಲಿ ಅಭಿನಯಿಸಿ, ಶಾಲಾ ಚಿಣ್ಣರಿಗೆ ಮನದಟ್ಟು ಮಾಡುವ ಕಾರ್ಯ ನಿಜಕ್ಕೂ ಸ್ತುತ್ಯಾರ್ಹ. ಅವಿರತ ಪ್ರಯತ್ನದಿಂದ ಯಶಸ್ಸು ಸಾಧಿಸಿದ ಸಂಸ್ಥೆ ಯಶಸ್ವೀ ಕಲಾವೃಂದ ಎನ್ನುವುದನ್ನು ಪದೇ ಪದೇ ಸಾಬೀತು ಮಾಡುತ್ತಿರುವುದು ಶ್ಲಾಘನೀಯ.” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವ ಉಪಸ್ಥಿತಿಯಲ್ಲಿ…
ಮೂಡುಬಿದಿರೆ : ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ಪಾಠ ಉದ್ಘಾಟನೆ ಹಾಗೂ ಜಿನಧರ್ಮ ದೀಪಿಕೆ ಕೃತಿ ಬಿಡುಗಡೆಯ ಸಮಾರಂಭ ದಿನಾಂಕ 09-09-2023ರಂದು ಜರಗಿತು. ಈ ಸಮಾರಂಭದಲ್ಲಿ ಜೈನಮಠ ಕಂಬದ ಹಳ್ಳಿಯ ಸ್ವಸ್ತಿ ಶ್ರೀ ಬಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಮ ಸ್ವಾಮೀಜಿಯವರು ಜೈನ ಪಾಠ ಉದ್ಘಾಟಿಸಿ, ‘ಜಿನಧರ್ಮ ದೀಪಿಕೆ’ ಕೃತಿ ಬಿಡುಗಡೆಗೊಳಿಸಿ ಅಶೀರ್ವಚನಗಳನ್ನು ನೀಡಿ “ಅಹಿಂಸಾ ಪರಮೋಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಅನುಸರಿಸುವುದೇ ವೃತ, ಮನುಷ್ಯ ಜನ್ಮ ಸಿಗುವುದು ತುಂಬಾ ವಿರಳ. ಈ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಜೈನಧರ್ಮದ ತತ್ವಗಳನ್ನು ವಿಜ್ಞಾನವೂ ಕೂಡ ಒಪ್ಪುತ್ತದೆ. ಪ್ರತಿಯೊಂದು ಜೀವಿಯೂ ದೇವರಾಗಬಹುದು. ಅದ್ವೈತ ಜ್ಞಾನದ ಮೂಲಕ ಮೋಕ್ಷವನ್ನು ಸಾಧಿಸುವ ಬದಲಾಗಿ, ಅಹಿಂಸೆಯ ಮೂಲಕ ಮೋಕ್ಷವನ್ನು ಸಂಪಾದಿಸುವುದು ಜೈನಧರ್ಮದ ಉದ್ದೇಶವಾಗಿದೆ. ಆ ಜೈನ ಧರ್ಮದ ಮೂಲಗಳು ಪಂಚಪರಮೇಷ್ಠಿಗಳ ಉಪದೇಶಗಳ ಮೇಲೆ ನಿರೂಪಿತವಾಗಿವೆ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್, “ವಿದ್ಯೆಗೆ ಸಂಸ್ಕಾರ ಭೂಷಣ, ಜೈನ ಧರ್ಮದಲ್ಲಿ…
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ಇದರ 16ನೇ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 23-09-2023ರಂದು ಬೆಳಿಗ್ಗೆ ಗಂಟೆ 9.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಿನಾಂಕ 17-09-2023ರಂದು ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ‘ಸ್ವರ ಕುಡ್ಲ’ ಸೀಸನ್-5 ಸಂಗೀತ ಸ್ಪರ್ಧೆಯು ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ದಿ. ಲಿಯಾಂಡರ್ ವರ್ನನ್ ನೊರೊನ್ಹಾ ಇವರ ಸ್ಮರಣಾರ್ಥ ‘ಸಿಂಫನಿ ಮ್ಯೂಸಿಕಲ್ ಇನ್ ಸ್ಟ್ರುಮೆಂಟ್ ಮಳಿಗೆಯ ಶ್ರೀ ಲಾಯ್ ನೊರೊನ್ಹಾ ಇವರ ಸಹಕಾರದೊಂದಿಗೆ ಈ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ದಿನಾಂಕ 23-09-2023ರಂದು ಪುರಭವನದಲ್ಲಿ ‘ಸ್ವರ ಕುಡ್ಲ’ ಸೀಸನ್-5 ಇದರ ಗ್ರಾಂಡ್ ಫಿನಾಲೆ ಹಾಗೂ ವಾರ್ಷಿಕೋತ್ಸವ ಸಮಾರಂಭ, ಸನ್ಮಾನ ಗೌರವ ಜರಗಲಿದೆ. ಈ ಕಾರ್ಯಕ್ರಮವು ಬೆಳಗ್ಗೆ 9ಕ್ಕೆ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಚರಣ್ ಕುಮಾರ್ ರಾಗದೇವ್ ಇವರಿಂದ ಉದ್ಘಾಟನೆಗೊಳ್ಳಲಿದೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವರು ಅಧ್ಯಕ್ಷತೆ…
ಮಂಗಳೂರು : ಅಶೋಕ ನಗರದಲ್ಲಿರುವ ಶ್ರೀಕೃಷ್ಣ ಮಂದಿರದ ಬೆಳ್ಳಿ ಹಬ್ಬ ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಗೋಕುಲ ಕಲ್ಯಾಣ ಮಂಟಪದಲ್ಲಿ ದಿನಾಂಕ 07-09-2023ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡುಬಿದರೆ ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ವಿದ್ವಾನ್ ಡಾ. ವಿನಾಯಕ ಭಟ್ ಗಾಳಿಮನೆ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರಿನ ಉರ್ವದ ಯಕ್ಷಾರಾಧನ ಕಲಾ ಕೇಂದ್ರದ ನಿರ್ದೇಶಕಿ, ನೃತ್ಯ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಮತ್ತು ಬಳಗದವರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಂಡಿತು. ವಿದುಷಿ ಸುಮಂಗಲಾ ರತ್ನಾಕರ್ ರಾವ್, ಶ್ರೀಮತಿ ಸುಮಾಡ್ಕರ್, ಕುಮಾರಿ ಛಾಯಾಲಕ್ಷ್ಮೀ ಆರ್.ಕೆ., ಆದಿಸ್ವರೂಪ, ಸನತ್ ಆಚಾರ್ಯ, ಸಾಕ್ಷಿ ಶೇಷಾದ್ರಿ, ವೈಶಾಕ್ ರಾವ್, ಸಂಪ್ರೀತ್ ಹಂದೆ, ಪೂರ್ವಿ ಗಟ್ಟಿ, ಪ್ರಜ್ಞಾಶ್ರೀ ಸಾಮಗ, ವರುಣ್ ಕಾರಂತ್, ಸೂರಜ್ ಸಾಮಗ, ಸಮೀಕ್ಷಾ ಆಚಾರ್ಯ, ಪ್ರತೀಕ್ ಜಗತಾಪ್, ಸ್ವಸ್ತಿಕ್ ರಾವ್, ಹಿಮ್ಮೇಳದಲ್ಲಿ ಕವಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ, ಶ್ರೀ ಪ್ರಫುಲ್ಲಚಂದ್ರ ನೆಲ್ಯಾಡಿ, ಶಿತಿಕಂಠ ಭಟ್ ಉಜಿರೆ, ಶ್ರೀ ಸುಬ್ರಹ್ಮಣ್ಯ…
ಧಾರವಾಡ : ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವ ವಿದ್ಯಾನಿಲಯ ಧಾರವಾಡ, ಚೇತನಾ ಫೌಂಡೇಶನ್ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಆಯೋಜನೆಯಗೊಂಡ ‘ಧಾರವಾಡ ನುಡಿ ಸಡಗರ-ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದ ಎರಡನೆಯ ದಿನದ ಗಮಕ ವಾಚನ, ಮುಕ್ತ ಗಜ್ಲ್, ಕವಿಗೋಷ್ಠಿ ಅಂಗವಾಗಿ ಗಂಗೊಳ್ಳಿ ಸರಸ್ವತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಮತ್ತು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ತೃತೀಯ ಬಿ.ಎಸ್ಸಿ. ಪದವೀಧರೆ ಗಮಕಿ ಕುಮಾರಿ ಕಾವ್ಯ ಹಂದೆಯವರಿಂದ ಗಮಕ ವಾಚನ ವ್ಯಾಖ್ಯಾನ ಪ್ರಾತ್ಯಕ್ಷಿಕೆಯು ದಿನಾಂಕ 09-09-2023ರಂದು ಧಾರವಾಡ ಕರ್ನಾಟಕ ವಿಶ್ವ ವಿದ್ಯಾನಿಲಯದ ಕನಕ ಪೀಠದ ಕನಕ ಭವನದಲ್ಲಿ ನಡೆಯಿತು. ಕುಮಾರಿ ಕಾವ್ಯ ಅವರು ನಾಟಿ, ಹಂಸಧ್ವನಿ, ಹಿಂದೋಳ, ಅಮೀರ್ ಕಲ್ಯಾಣಿ, ಕಲ್ಯಾಣಿ, ಶಿವರಂಜಿನಿ, ಜೋಗ್ ಮೊದಲಾದ ರಾಗಗಳ ಮೂಲಕ ಗಮಕ ವಾಚನದಲ್ಲೂ, ಸುಜಯೀಂದ್ರ ಹಂದೆ ವ್ಯಾಖ್ಯಾನಕಾರರಾಗಿಯೂ ದಾಸ ವರೇಣ್ಯ, ಭಕ್ತಿ ಕಾವ್ಯ ಪರಂಪರೆಯ ಕನಕದಾಸರ ನಳಚರಿತ್ರೆಯ ಆರನೇಯ ಸಂಧಿಯ ಕಾರ್ಕೋ ಟಕ ದಂಶನ ಪ್ರಸಂಗವನ್ನು ಕನಕ ಪೀಠದ ವಿದ್ಯಾರ್ಥಿ ಮತ್ತು…
ಕಾಸರಗೋಡು : ಭರತಾಂಜಲಿ (ರಿ.) ಕೊಟ್ಟಾರ ಮಂಗಳೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ‘ನೃತ್ಯ ವಂದನಾ’ ಕಾರ್ಯಕ್ರಮವು ದಿನಾಂಕ 08-09-2023 ರ ಶುಕ್ರವಾರದಂದು ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದಲ್ಲಿ ನಡೆಯಿತು. ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ನಿರ್ದೇಶನದಲ್ಲಿ, ಗುರು ಶ್ರೀಧರ ಹೊಳ್ಳ ಸಂಯೋಜನೆಯಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಕಲಾವಿದೆಯರಾದ ವಿದುಷಿ ಪ್ರಕ್ಷಿಲಾ ಜೈನ್, ಶಿವಪ್ರಣಾಮ್ ಸಂಸ್ಥೆಯ ವಿದುಷಿ ಅನ್ನಪೂರ್ಣ ರಿತೇಶ್, ವಿದುಷಿ ಮಾನಸ ಕುಲಾಲ್, ವಿದುಷಿ ಅದಿತಿ ಸಹಕರಿಸಿದ್ದರು. ಹಿಮ್ಮೇಳ ಕಲಾವಿದರಾಗಿ ಹಾಡುಗಾರಿಕೆಯಲ್ಲಿ ಸ್ವರಾಗ್ ಕಣ್ಣೂರು, ಮೃದಂಗನಲ್ಲಿ ವಿದ್ವಾನ್ ಸುರೇಶ್ ಬಾಬು, ಕೊಳಲಿನಲ್ಲಿ ರಾಹುಲ್ ಕಣ್ಣೂರು ಸಹಕರಿಸಿದ್ದರು. ವಿದುಷಿ ಮಧುರಾ ಕಾರಂತ್ ನಿರೂಪಿಸಿದರು.