Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಲೇಖಕಿ ಉಪತಹಶೀಲ್ದಾರ್ ಸುಲೋಚನಾ ಪಿ.ಕೆ. ಅವರು ಬರೆದಿರುವ ‘ಸತ್ಯದರ್ಶನ ನುಡಿಮುತ್ತುಗಳು’ ಮತ್ತು ‘ಅಮ್ಮನ ಮಾತ್ ಭಸ್ಮ ಕಟ್ಟಿದ ತಗಡ್ನ ತಾಯಿತಾತ್’ ಅರೆಭಾಷೆ ಕವನ ಸಂಕಲನದ ಲೋಕಾರ್ಪಣೆಯು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ದಿನಾಂಕ 31-12-2023ರಂದು ಬೆಳಿಗ್ಗೆ ದರ್ಬೆ ಬೈಪಾಸ್ ರಸ್ತೆಯ ಮಕ್ಕಳ ಮಂಟಪದಲ್ಲಿ ನಡೆಯಿತು. ಪುಸ್ತಕ ಲೋಕಾರ್ಪಣೆ ಮಾಡಿದ ದರ್ಬೆ ಮಕ್ಕಳ ಮಂಟಪದ ಶಿಕ್ಷಣ ಸಿದ್ಧಾಂತಿ ಡಾ. ಎನ್. ಸುಕುಮಾರ ಗೌಡ ಅವರು ಮಾತನಾಡಿ, “ಲೇಖಕಿ ಸುಲೋಚನಾ ಅವರು ಬರೆದಿರುವ ಪುಸ್ತಕವನ್ನು ಓದಿ ಮಂಥನ ಮಾಡಿಕೊಳ್ಳಬೇಕು. ಅವರು ಬರೆದಿರುವ ಪುಸ್ತಕದ ಬಗ್ಗೆ ಏನಾದರೂ ವಿಚಾರಗಳು ಅಥವಾ ಪ್ರತಿಕ್ರಿಯೆಗಳಿದ್ದರೆ ಅವರನ್ನು ಸಂಪರ್ಕಿಸಬಹುದು. ಸುಲೋಚನಾ ಅವರ ಬರವಣಿಗೆಯು ನಿರಂತರವಾಗಿ ಮುಂದುವರಿಯಲಿ” ಎಂದರು. ಕಾರ್ಯಕ್ರಮ ಉದ್ಘಾಟಸಿದ ತಹಶೀಲ್ದಾರ್ ಜೆ. ಶಿವಶಂಕರ್ ಅವರು ಮಾತನಾಡಿ, “ನಮ್ಮ ಇಲಾಖೆಯಲ್ಲಿ ಉಪ ತಹಶೀಲ್ದಾರ್ ಆಗಿದ್ದುಕೊಂಡು ಸುಲೋಚನಾ ಅವರು ಪುಸ್ತಕ ಬರೆದಿರುವುದು ಸಂತೋಷ ತಂದಿದೆ. ಈ ಪ್ರಸ್ತಕವನ್ನು ಪ್ರತಿಯೊಬ್ಬರೂ ಓದಿ ಅರ್ಥ ಮಾಡಿಕೊಂಡು ಅದರಲ್ಲಿರುವ…
ಕೋಟ : ಶ್ರೀ ನಂದಿಕೇಶ್ವರ ಗೆಳೆಯರ ಬಳಗ ಕೋಟತಟ್ಟು ಪಡುಕರೆ ಇದರ 12ನೇ ವರ್ಷದ ಯಕ್ಷಸಂಭ್ರಮವು ಕೋಟತಟ್ಟು ಪಡುಕರೆಯ ನಂದಿಕೇಶ್ವರ ದೇವಸ್ಥಾನ ವಠಾರದಲ್ಲಿ ದಿನಾಂಕ 16-12-2023ರಂದು ಸಂಪನ್ನಗೊಂಡಿತು. ಶ್ರೀ ನಂದಿಕೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಭಾಸ್ಕರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರಘು ತಿಂಗಳಾಯ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ 25ನೇ ವರ್ಷದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆಗೈದ ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಮತ್ತು ಮತ್ಸ್ಯೋದ್ಯಮಿ ಮಹಾಬಲ ತಿಂಗಳಾಯ ಪಡುಕರೆ ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ನಂದಿಕೇಶ್ವರ ದೇವಸ್ಥಾನ ಅರ್ಚಕ ನಾಗರಾಜ ಕಾರಂತ ಮತ್ತು ಭಗವತ್ ಭಜನಾ ಮಂದಿರದ ಅರ್ಚಕ ಬಾಬು ಪೂಜಾರಿ ಸಭೆಯಲ್ಲಿ ಉಪಸ್ಥಿತರಿದ್ದರು. ಲಕ್ಷ್ಮಣ್ ಪೂಜಾರಿ ಬೆಂಗಳೂರು ಸ್ವಾಗತಿಸಿ, ಶಿವರಾಮ ಪೂಜಾರಿ ಪ್ರಸ್ತಾವನೆಗೈದರು. ಮಂಜುನಾಥ ಭಂಡಾರಿ ಪಡುಕರೆ ನಿರೂಪಿಸಿ, ವಂದಿಸಿದರು.
ಬೆಳಗಾವಿ : ಕನ್ನಡ ಸಾಹಿತ್ಯ ಭವನದಲ್ಲಿ ಡಾ. ಡಿ.ಎಸ್. ಕರ್ಕಿ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಡಾ. ಡಿ.ಎಸ್. ಕರ್ಕಿ 116ನೇ ಜನ್ಮದಿನೋತ್ಸವ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಾವೇರಿ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಡಾ. ಗೀತಾಂಜಲಿ ಕುರಡಗಿ ಇವರು ಮಾತನಾಡುತ್ತಾ “ಗಡಿಯಲ್ಲಿ ಕನ್ನಡ ಕಟ್ಟಿ ಬೆಳೆಸಿದ ಕೀರ್ತಿ ಡಾ. ಡಿ.ಎಸ್. ಕರ್ಕಿ ಅವರಿಗೆ ಸಲ್ಲುತ್ತದೆ. ಅವರು, ಹಚ್ಚಿದ ಕನ್ನಡ ದೀಪ ನಿರಂತರವಾಗಿ ಬೆಳಗುತ್ತಿದ್ದು, ನಾಡು-ನುಡಿಗೆ ಕರ್ಕಿಯವರ ಅಪಾರ ಕೊಡುಗೆಯನ್ನು ಸ್ಮರಿಸುವಂತಿದೆ. 1907ರಲ್ಲಿ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ಹುಟ್ಟಿದ ಕರ್ಕಿಯವರು ಹುಟ್ಟಿ, ಶಿಕ್ಷಕರಾಗಿ ಜೀವನ ನಿರ್ವಹಿಸಿ, ಕನ್ನಡ ಜ್ಯೋತಿ ಬೆಳೆಗಿದವರು. ಡಿ.ಎಸ್. ಕರ್ಕಿ ಅವರಿಗೆ ಕಾವ್ಯ ಕೃಷಿ ವಿಶೇಷ ಕ್ಷೇತ್ರವಾದರೂ ಎಲ್ಲ ಸಾಹಿತ್ಯ ಪ್ರಕಾರಗಳಲ್ಲಿಯೂ ಜನಪರ ವಿಚಾರಗಳನ್ನು ನೀಡಿದ್ದಾರೆ” ಎಂದು ಹೇಳಿದರು. ಡಾ. ಡಿ.ಎಸ್.ಕರ್ಕಿಯವರು ನವೋದಯ ಪಾವಿತ್ರ್ಯತೆ ಕಾಪಾಡಿಕೊಂಡು ಬಂದ ನಾಡಿನ ಅಗ್ರಗಣ್ಯ ಕವಿಗಳು. ಸತ್ಯವನ್ನು ಕೊಲ್ಲಲು ಆಗಲ್ಲ, ಸತ್ಯ…
ಕಾಸರಗೋಡು : ಕಾಸರಗೋಡಿನ ಸಿರಿಬಾಗಿಲಿನಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದಿಂದ ನಿರ್ಮಿಸಲ್ಪಟ್ಟ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನವು ದಿನಾಂಕ 26-12-2023ರಂದು ಲೋಕಾರ್ಪಣೆಗೊಂಡಿತು. ಗಡಿನಾಡ ಕವಿ, ಪಾರ್ತಿ ಸುಬ್ಬರ ಯಕ್ಷ ಪ್ರಸಂಗಗಳನ್ನು ತಾಳೆ ಗರಿಗಳಲ್ಲಿ ಸಂಗ್ರಹಿಸಿ ಪುಸ್ತಕ ರೂಪಕ್ಕಿಳಿಸಿದ ಮಹಾನುಭಾವ ದಿ. ಸಿರಿಬಾಗಿಲು ವೆಂಕಪ್ಪಯ್ಯರ ಸ್ಮರಣಾರ್ಥ ಅವರ ಮಗ ಧರ್ಮಸ್ಥಳ ಮೇಳದ ಮುಖ್ಯ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಭಗೀರಥ ಯತ್ನದ ಫಲ ಈ ಭವ್ಯ ಭವನ. ಯಕ್ಷಗಾನೀಯ ಮತ್ತು ಇನ್ನಿತರ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೇಂದ್ರವನ್ನಾಗಿಸಬೇಕೆಂಬ ಮಹದಾಸೆಯಿಂದ ನಿರ್ಮಾಣಗೊಂಡ ಈ ಭವನದಲ್ಲಿ ಸುಸಜ್ಜಿತವಾದ ಸಭಾಂಗಣ, ಗ್ರಂಥಾಲಯ, ಮ್ಯೂಸಿಯಂ, ವಿಶ್ರಾಂತಿ ಕೊಠಡಿಗಳಿದ್ದು ಈಗಾಗಲೇ ಇಲ್ಲಿ ಅನೇಕ ಕಾರ್ಯಕ್ರಮಗಳು ನಡೆದಿವೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಭವನವನ್ನು ದೀಪ ಪ್ರಜ್ವಲನಗೊಳಿಸಿ, ದಿ. ವೆಂಕಪ್ಪಯ್ಯರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಲೋಕಾರ್ಪಣೆಗೊಳಿಸಿದರು. “ಕಾಸರಗೋಡು ಯಕ್ಷಗಾನಕ್ಕೆ ಅನೇಕ ಕಲಾವಿದರನ್ನು ಕೊಡುಗೆಯನ್ನಾಗಿ ನೀಡಿದ ನೆಲ. ಧರ್ಮಸ್ಥಳ ಮೇಳದಲ್ಲೂ ಇಲ್ಲಿನವರು ಅನೇಕರು ಇದ್ದರು, ಈಗಲೂ ಇದ್ದಾರೆ.…
ಮೂಲ್ಕಿ : ಕಾರ್ನಾಡಿನಲ್ಲಿ ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ.ಕ. ಜಿಲ್ಲಾ ಕ.ಸಾ.ಪ. ಮೂಲ್ಕಿ ತಾಲೂಕು ಘಟಕ ಆಯೋಜಿಸಿದ ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 27-12-2023ರಂದು ನಡೆಯಿತು. ಈ ಸಮ್ಮೇಳನ ಉದ್ಘಾಟಿಸಿದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು “ಆಧುನೀಕರಣದ ಭರಾಟೆಯಲ್ಲಿ ಅಂಗ್ಲ ಮಾಧ್ಯಮದ ಪ್ರಭಾವದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿ ಬಂದಿದೆ. ಕನ್ನಡ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು” ಎಂದರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ಮಾತನಾಡಿ “ಮೂಲ್ಕಿ ತಾಲೂಕಿನಲ್ಲಿ ಒಂಭತ್ತು ಯಕ್ಷಗಾನ ಮೇಳಗಳು ತಿರುಗಾಟ ನಡೆಸುತ್ತಿದ್ದು, ಕನ್ನಡ ಸಾಹಿತ್ಯಕ್ಕೆ ಭಾಷೆಗೆ ದೊಡ್ಡ ಕೊಡುಗೆ ಸಿಕ್ಕಿದೆ. ಮೂಲ್ಕಿಯಲ್ಲಿ ಆಯುರ್ವೇದ ಗಿಡಗಳಿದ್ದ ಕಾರಣ ಮೂಲಿಕಾ ಪುರವಾಗಿ ಪ್ರಸಿದ್ದವಾಗಿದೆ, ಮೂಲ್ಕಿ ತಾಲೂಕು ಅನೇಕ ಕವಿಗಳನ್ನು ಕೊಟ್ಟಿದೆ. ಇಲ್ಲಿನ ಜನಪದ ಮೌಖಿಕ ಸಂಪತ್ತು, ಕಂಬಳಗಳು, ದೇವಾಲಯಗಳು, ಪತ್ರಿಕೆಗಳು ಮಹತ್ವದ್ದು. ಏಳಿಂಜೆ, ಸೀಮಂತೂರು, ಪೊಸ್ರಾಲು, ಪಾವಂಜೆ, ಕೊಡೆತ್ತೂರು, ಬಪ್ಪನಾಡು…
ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜನೆಯ ಬಯಲಾಟ ಕಾರ್ಯಕ್ರಮವು ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದಿನಾಂಕ 28-12-2023ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಪಣಂಬೂರು ನಂದನೇಶ್ವರ ದೇವಳದ ಪ್ರಧಾನ ಅರ್ಚಕರಾದ ಶ್ರೀ ದೇವದತ್ತ ಶರ್ಮರು “ಯಕ್ಷಗಾನ ಕಲೆ ಈಗ ಸರ್ವಮಾನ್ಯವಾಗಿದೆ. ಹಿಂದಿಗಿಂತಲೂ ಹೆಚ್ಚಿನ ರಾಜ ಗಾಂಭೀರ್ಯದಿಂದ ಮೆರೆದು ಸಂಪನ್ನಗೊಳ್ಳುತ್ತಿದೆ. ಕಲಾಪೋಷಕರೂ ಹೆಚ್ಚಿನ ಸಂಖ್ಯೆಯಲ್ಲಿ ಕಲೆಯನ್ನು ಗೌರವ ಭಾವನೆಯಿಂದ ಕಂಡು ಸಂಭ್ರಮಿಸುತ್ತಿದ್ದಾರೆ. ಕಲಾವಿದರೂ ಹೊಸ ರೀತಿಯಲ್ಲಿ ಹಳೆಯ ಪರಂಪರೆಯನ್ನು ರಸಿಕರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿದ್ದಾರೆ. ಇದು ಕಲೆಗೆ-ಕಲಾವಿದರಿಗೆ ನೀಡುವ ಪ್ರೋತ್ಸಾಹ. ಇಂದು ಸರಕಾರವು ಸಂಸ್ಕೃತಿ ಇಲಾಖೆಯ ಮೂಲಕ ಕಲೆಗೆ ಬೇರೆ ಬೇರೆ ರೀತಿಯಲ್ಲಿ ಸಹಕರಿಸುತ್ತಾ ಬರುತ್ತಿರುವುದು ಸ್ವಾಗತಾರ್ಹ. ಇಂದಿನ ಕಾರ್ಯಕ್ರಮವನ್ನು ಸಂಘಟಿಸಿದ ಶ್ರೀ ರವೀಂದ್ರ ಪೂಜಾರಿಯವರಿಗೆ ಅಭಿನಂದನೆಗಳು” ಎಂದು ಹೇಳಿದರು. ಹಿರಿಯ ಯಕ್ಷಗಾನ ಕಲಾವಿದ ಪಿ. ಶ್ರೀಧರ ಐತಾಳರು “ಯಕ್ಷಗಾನದಲ್ಲಿ ಹೊಸ ಹೊಸ ಕಲಾವಿದರ ಪ್ರವೇಶ ಕಲೆಯ ಬೆಳವಣಿಗೆಗೆ ಪೂರಕ. ಕಲೆಯ…
ಪುತ್ತೂರು : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವೇಕಾನಂದ ಬಿ.ಎಡ್. ಕಾಲೇಜು, ರೇಡಿಯೋ ಪಾಂಚಜನ್ಯ 90.80 ಎಫ್.ಎಂ. ಮತ್ತು ವಿದ್ಯಾಭಾರತೀ ಉಚ್ಚ ಶಿಕ್ಷಾ ಸಂಸ್ಥಾನ್- ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 27-12-2023ರಂದು ‘ಭಾರತೀಯ ಭಾಷಾ ಉತ್ಸವದ’ ಪ್ರಯುಕ್ತ ಪುತ್ತೂರಿನ ತೆಂಕಿಲದ ವಿವೇಕಾನಂದ ಬಿ.ಎಡ್. ಕಾಲೇಜಿನಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು. ಪುತ್ತೂರಿನ ಖ್ಯಾತ ಆಯುರ್ವೇದಿಕ್ ವೈದ್ಯರಾದ ಡಾ. ಹರಿಕೃಷ್ಣ ಪಾಣಾಜೆ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ “ದೀಪವು ಬೆಳಕನ್ನು ನೀಡಿ ಕತ್ತಲೆಯನ್ನು ಹೋಗಲಾಡಿಸುವಂತೆ ಉತ್ತಮ ಸಾಹಿತ್ಯದ ಮೂಲಕ ಜ್ಞಾನದ ಬೆಳಕು ಹರಿದು ತನ್ಮೂಲಕ ಅಜ್ಞಾನದ ಅಂಧಕಾರ ತೊಲಗಿಸಬೇಕು” ಎಂದು ಶುಭ ಹಾರೈಸುತ್ತಾ ತಮ್ಮ ಸ್ವರಚಿತ ಕವನ ಒಂದನ್ನು ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಬಿ.ಎಡ್. ಕಾಲೇಜಿನ ಸಂಚಾಲಕರಾದ ಶ್ರೀಮತಿ ಗಂಗಮ್ಮ ಎಚ್. ಶಾಸ್ತ್ರಿ ಅವರು ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶ್ರೀ ವಸಂತ ಮಾಧವ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವಿವೇಕಾನಂದ…
ಕುಂದಾಪುರ : ಕೊಮೆ, ತೆಕ್ಕಟ್ಟೆ ಯಶಸ್ವೀ ಕಲಾವೃಂದದ ಚಿಣ್ಣರು ದಿನಾಂಕ 25-12-2023ರಂದು ಕುಂದಾಪ್ರ ರೇಡಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷ್ಣಾರ್ಜುನರ ಕಾಳಗದ ರುಕ್ಮಿಣಿ ಸುಭದ್ರ ಸಂವಾದ ಹಾಗೂ ಕೃಷ್ಣಾರ್ಜುನರ ಸಂವಾದವನ್ನು ಹೂವಿನಕೋಲು ಪ್ರಕಾರದಲ್ಲಿ ಪ್ರಸ್ತುತಪಡಿಸಿದರು. “ಕಳೆದ ಹಲವಾರು ವರ್ಷಗಳಿಂದ ಅಳಿವಿನಂಚಿನಲ್ಲಿರುವ ಯಕ್ಷಗಾನದ ಪ್ರಕಾರವಾದ ಹೂವಿನಕೋಲು ಕಾರ್ಯಕ್ರಮವನ್ನು ಮತ್ತೆ ಮನೆ ಮನೆಗಳಲ್ಲಿ ನವರಾತ್ರಿ ಸಂದರ್ಭಗಳಲ್ಲಿ ಪ್ರಸ್ತುತ ಪಡಿಸುತ್ತಿರುವ ಸಂಸ್ಥೆ ಯಶಸ್ವೀ ಕಲಾವೃಂದದ ಕಾರ್ಯ ಸಮಾಜದ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸಂಸ್ಥೆಯ ಕಾರ್ಯವನ್ನು ಮನಗಂಡು ಸುಪ್ರೀತಾ ಪುರಾಣಿಕ್ ಕುಂದ ಕಂಠಗಳ ಪ್ರಕೃತಿಯ ಸ್ವರ ‘ರೇಡಿಯೋ ಕುಂದಾಪ್ರ’ ಇಲ್ಲಿ ಸಮಾರೋಪವಾಗಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡದ್ದು ನಿಜಕ್ಕೂ ಹೆಚ್ಚು ಪ್ರಸ್ತುತ. ರೇಡಿಯೋ ಕುಂದಾಪುರದ ಮೂಲಕ ಇನ್ನಷ್ಟು ಜನರಿಗೆ ಕಲೆಯನ್ನು ಧ್ವನಿ ವಾಹಿನಿಯ ಮೂಲಕ ಬಿತ್ತರಿಸುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ” ಎಂದು ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಅಭಿಪ್ರಾಯಪಟ್ಟರು. “ನವರಾತ್ರಿ ಸಂದರ್ಭದಿಂದ ಮೊದಲ್ಗೊಂಡು ಶಿರಸಿಯಿಂದ ಮಂಗಳೂರು ತನಕ ತಿರುಗಾಡಿ ಸುಮಾರು 180 ಮನೆಗಳು, ದೇವಸ್ಥಾನಗಳು, ಇನ್ನಿತರ ಪ್ರದೇಶಗಳಲ್ಲಿ ಹೂವಿನಕೋಲು ಯಕ್ಷ ಪ್ರಕಾರದ…
ಮರವಂತೆ : ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆ, ಹಳೆ ವಿದ್ಯಾರ್ಥಿ ಸಂಘ, ಆಸರೆ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಐ. ವಸಂತಕುಮಾರಿ ಕಲಾಂಗಣದಲ್ಲಿ ದಿನಾಂಕ 24-12-2023ರಂದು ನಡೆದ ಸಮಾರಂಭದಲ್ಲಿ ಯೋಗೀಂದ್ರ ಮರವಂತೆ ಅವರ ‘ಏರೋ ಪುರಾಣ-ವಿಮಾನ ಲೋಕದ ಅನುಭವ, ಅಚ್ಚರಿ’ ಪ್ರಬಂಧ ಸಂಕಲನ ಬಿಡುಗಡೆಯಾಯಿತು. ಕೃತಿ ಬಿಡುಗಡೆ ಮಾಡಿದ ಕತೆ, ಕಾದಂಬರಿಕಾರ, ವಿಮರ್ಶಕ ಶ್ರೀಧರ ಬಳೆಗಾರ್ ಇವರು ಮಾತನಾಡುತ್ತಾ “ಯಂತ್ರ ಜಗತ್ತು ಈಗ ಮನುಷ್ಯನನ್ನು ಜೀವ ಜಗತ್ತನಿಂದ ದೂರ ಸೆಳೆಯುತ್ತಿದೆ ಮತ್ತು ಜೀವ ಜಗತ್ತನ್ನು ನಾಶಮಾಡುತ್ತಿದೆ. ಮನುಷ್ಯನ ಜೀವನದ ಎಲ್ಲಾ ವಿಭಾಗಗಳನ್ನು ವಿಜ್ಞಾನ ಆಕ್ರಮಿಸಿರುವ ಸನ್ನಿವೇಶದಿಂದಾಗಿ ಈ ಪ್ರಕ್ರಿಯೆಯನ್ನು ತಡೆಯಲಾಗುವುದಿಲ್ಲ. ಈಗ ವೈದ್ಯರು, ವಿಜ್ಞಾನಿಗಳು ಮನುಷ್ಯನನ್ನು ಯಂತ್ರವೆಂದು ಪರಿಗಣಿಸುತ್ತಿರುವಾಗ ವಿಮಾನ ತಂತ್ರಜ್ಞ ಆಗಿರುವ ಯೋಗೀಂದ್ರ ಈ ಕೃತಿಯಲ್ಲಿ ವಿಮಾನಗಳನ್ನು ಜೀವಿಗಳಾಗಿ ಬಿಂಬಿಸುತ್ತಾರೆ. ಜೀವಿಗಳಿಗಿದ್ದಂತೆ ಅವುಗಳಿಗೆ ಹುಟ್ಟು, ಬಾಲ್ಯ, ಯೌವನ, ವೃದ್ಧಾಪ್ಯ, ಸಾವು ಇದೆ. ಅವುಗಳ ಜೀವಯಾನ ಅವುಗಳದ್ದೇ ಆದ ಸ್ಮಶಾನದಲ್ಲಿ ಅಂತ್ಯಗೊಳ್ಳುತ್ತದೆ ಎನ್ನುವುದನ್ನು ವಿವಿಧ…
ಉಡುಪಿ : ಅಂಬಲಪಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಳದ ಆಶ್ರಯದಲ್ಲಿ ರಂಗಭೂಮಿ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದಲ್ಲಿ ಆಯೋಜಿಸಲಾದ ಎರಡು ದಿನಗಳ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನ ‘ಅಂಬಲಪಾಡಿ ನಾಟಕೋತ್ಸವ -2023’ವು ದೇವಳದ ಬಯಲು ರಂಗ ಮಂದಿರದಲ್ಲಿ ದಿನಾಂಕ 31-12-2023ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ಎನ್.ಬಿ. ವಿಜಯ ಬಲ್ಲಾಳ್ ಇವರು ಉದ್ಘಾಟಿಸಿ ಮಾತನಾಡಿ “ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಜನರನ್ನು ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ರಂಗಭೂಮಿಯ ಕೊಡುಗೆ ಅಪಾರ. ಜಗದೀಶನಾಡುವ ಜಗವೇ ನಾಟಕ ರಂಗ ಎಂದು ದಾಸರ ಹಾಡಿನಂತೆ ನಾಟಕಗಳ ಕಥಾ ವಸ್ತುಗಳು ಜನರ ಬದುಕಿನ ನಾನಾ ರೀತಿಯ ಘಟನೆಗಳಲ್ಲಿ ಹಾಸುಹೊಕ್ಕಾಗಿರುವುದರಿಂದ ಸಮಾಜದ ಅಂಕುಡೊಂಕುಗಳ ಬಗ್ಗೆ ನಾಟಕಗಳು ವಿಮರ್ಶೆ ಮಾಡುತ್ತವೆ. ಜನರಲ್ಲಿ ಸಮಾಜಕ್ಕೆ ಬೇಕಾದ ಒಳಿತು ಕೆಡುಕನ್ನು ನಿರ್ಧರಿಸುವಲ್ಲಿ ಜಾಗೃತಿ ಮೂಡಿಸುತ್ತವೆ. ಬ್ರಿಟಿಷರ ಕಾಲದಲ್ಲಿಯೂ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೆಚ್ಚಿಸಲು ಇದೇ ನಾಟಕಗಳು ಕಾರಣವಾಗಿದ್ದವು. ಅಂಬಲಪಾಡಿ…