Author: roovari

ಕನ್ನಡದಲ್ಲಿ ಕಾದಂಬರಿಯು ಅತ್ಯಂತ ಹುಲುಸಾಗಿ ಬೆಳೆದ ಸಾಹಿತ್ಯ ಪ್ರಕಾರವಾಗಿದೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಅದು ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ. ಅದರ ಬೆಳವಣಿಗೆಯನ್ನು ಸ್ಥೂಲವಾಗಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಯುಗಗಳೆಂದು ಗುರುತಿಸಲಾಗುತ್ತದೆ. ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯ ಈ ಹಂತಗಳನ್ನು ಕಾಲ ಕ್ರಮದಲ್ಲಿ ಒಂದು ಮುಗಿದ ನಂತರ ಇನ್ನೊಂದು ಆರಂಭವಾಯಿತು ಎನ್ನುತ್ತಿದ್ದರೂ ಅವುಗಳೆಲ್ಲ ಏಕ ಕಾಲದಲ್ಲಿ ಅಸ್ತಿತ್ವದಲ್ಲಿರುವುದನ್ನು ಅಲ್ಲಗೆಳೆಯುವಂತಿಲ್ಲ. ಈಗ ಬಂಡಾಯ ಯುಗವು ಮುಗಿದರೂ ಅದರ ಸೂಕ್ಷ್ಮ ದನಿಯನ್ನು ಹೊಂದಿದ ಅನೇಕ ಕಾದಂಬರಿಗಳು ಬರುತ್ತಿವೆ. ನವ್ಯ ಮಾರ್ಗದ ಕೃತಿಗಳೂ ಬೆಳಕು ಕಾಣುತ್ತಿವೆ. ನಾರಾಯಣ ಕಂಗಿಲ ಅವರ ‘ಶಬ್ದ ಮತ್ತು ನೂಪುರ’ ಎಂಬ ಕಾದಂಬರಿಯು ನವ್ಯದ ಸತ್ವವನ್ನು ಹೀರಿಕೊಂಡು ರೂಪು ತಾಳಿದೆ. ವಿಶಾಲ ಎಂಬ ವ್ಯಕ್ತಿಯ ಆತ್ಮಶೋಧನೆ, ದ್ವಂದ್ವ, ಸ್ವಗತಗಳಿಂದ ಆರಂಭಗೊಳ್ಳುವ ಕಾದಂಬರಿಯು ಆಪ್ತವಾದ ನಿರೂಪಣೆಯೊಂದಿಗೆ ಬದುಕಿನ ಸಂಕೀರ್ಣ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತದೆ. ಮಾನವೀಯ ಸಂಬಂಧಗಳ ಸೂಕ್ಷ್ಮ ರೂಪವನ್ನು ಹಿಡಿದಿಡುತ್ತದೆ. ಇಲ್ಲಿ ‘ಶಬ್ದ’ ಎಂಬುದು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ನೆಲೆಗಳಲ್ಲಿ ಕಾಣಿಸಿಕೊಳ್ಳುವ ಸದ್ದು…

Read More

ಬೆಂಗಳೂರು : ಸಂಧ್ಯಾ ಕಲಾವಿದರು ಅಭಿನಯಿಸುವ ಎಸ್.ವಿ. ಕೃಷ್ಣಶರ್ಮ ರಚಿಸಿ ನಿರ್ದೇಶಿಸಿರುವ ‘ಸುಯೋಧನ’ ನಾಟಕವು ದಿನಾಂಕ 07-06-2024ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ ‘ಚೌಡಯ್ಯ ಮೆಮೋರಿಯಲ್ ಹಾಲ್’ನಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕದ ನಿರ್ವಹಣೆ ವೈ.ಕೆ. ಸಂಧ್ಯಾ ಶರ್ಮ ಅವರದ್ದು. ಮಹಾಭಾರತದಲ್ಲಿ ನಡೆದು ಹೋದ ಘಟನೆ, ಕಥಾನಕವನ್ನು ದುರ್ಯೋಧನ ತನ್ನ ವಿಮರ್ಶಕ ಚಕ್ಷುಗಳಿಂದ ಪರಾಮರ್ಶಿಸುವ, ವಿಶ್ಲೇಷಿಸುವ ಚಿಂತನ ಮಂಥನಗಳಿಗೆ ಒತ್ತು ನೀಡುವ ‘ಸುಯೋಧನ’ ನಾಟಕ ಬೇರೆ ನಾಟಕಗಳಿಗಿಂತ ವಿಭಿನ್ನವಾಗಿದೆ. ಇಲ್ಲಿಯ ರಾಜಕಾರಣದಲ್ಲಿ ಕಂಡು ಬರುವ ಕೃಷ್ಣನ ಕಪಟ, ಶಕುನಿಯ ಕುತಂತ್ರ, ಸುಯೋಧನನ ಛಲ ಮುಂದಿನ ರಾಜಕೀಯಕ್ಕೆ ಭದ್ರ ಬುನಾದಿಯೆನ್ನುವ ನಾಟಕದ ಮಾತು, ಅವರ ನಡೆ ಇವತ್ತಿನ ರಾಜಕೀಯ ಪ್ರಸ್ತುತತೆಯನ್ನು ಎತ್ತಿಹಿಡಿಯುತ್ತದೆ. ಮಹಾಭಾರತದ ಕಥೆಗೊಂದು ಹೊಸ ಆಯಾಮ ನೀಡುವ ಪ್ರಯತ್ನವನ್ನು ನಾಟಕಕಾರರು ಮಾಡಿದ್ದಾರೆ. ಮಹಾಭಾರತದ ಬಹುತೇಕ ವಿವರಗಳು ನಾಟಕದಲ್ಲಿ ಹಾದು ಹೋಗುತ್ತವೆ. ಈ ನಾಟಕದಲ್ಲಿ ಸುಯೋಧನ ಕೂಡ ತನ್ನ ದೃಷ್ಟಿಯಿಂದಲೇ ಎಲ್ಲವನ್ನೂ ವಿಶ್ಲೇಷಿಸುತ್ತಾನೆ. ಇಲ್ಲಿ ನಾಟಕದ ಕಥಾ ನಾಯಕ ದುರ್ಯೋಧನನಾದ್ದರಿಂದ ಅವನು ಕಂಡಂತೆ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಹಾಗೂ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಸಹಯೋಗದೊಂದಿಗೆ ಸುರತ್ಕಲ್ ಅಮರಾಲ್ಡ್ ಬೇ ಬೀಚ್ ರೆಸಾರ್ಟ್ ನ ‘ಕನಸು’ ಮನೆಯಂಗಳದಲ್ಲಿ ಆಯೋಜಿಸಿದ  ‘ವರ್ಷ ವೈಭವ’ ಕವಿ ಗೋಷ್ಠಿ ಹಾಗೂ ಕನ್ನಡ ಹಾಡು ಕಾರ್ಯಕ್ರಮ ದಿನಾಂಕ 02-06-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಮಾತನಾಡಿ “ಇಂತಹ ತಳಮಟ್ಟದ ಕಾರ್ಯಕ್ರಮಗಳು  ಕನ್ನಡದ ಕಂಪು ಹರಡುವಲ್ಲಿ ಹೆಚ್ಚು ಪರಿಣಾಮಕಾರಿ. ಈ ನಿಟ್ಟಿನಲ್ಲಿ ತಾಲೂಕು ಘಟಕ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ.” ಎಂದರು. ಎಸ್. ಕೆ. ಗೋಪಾಲಕೃಷ್ಣ ಭಟ್, ಗೋಪಾಲಕೃಷ್ಣ ಬೊಳುಂಬು , ಡಾ. ಶೈಲಜಾ ಏತಡ್ಕ, ಅಕ್ಷತಾ ಶೆಟ್ಟಿ, ಗಣೇಶ್ ಪ್ರಸಾದ್ ಜೀ ಹಾಗೂ  ಎನ್. ಸುಬ್ರಾಯ ಭಟ್ ವರ್ಷದ ಸ್ಪರ್ಶದ ಕವನಗಳ ಮೂಲಕ ಸಾಹಿತ್ಯಾಸಕ್ತರಿಗೆ ಹರ್ಷ ತಂದರೆ ಮುರಳೀಧರ ಭಾರದ್ವಾಜ್ , ಪ್ರತೀಕ್ಷಾ ಭಟ್ ಕೋಂಬ್ರಾಜೆ , ಪುಟಾಣಿ ಸಹಸ್ರ ಕೋಂಬ್ರಾಜೆ…

Read More

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ‘ಅಮೃತ ಪ್ರಕಾಶ’ ಪತ್ರಿಕೆ ಹಾಗೂ ಸರೋಜಿನಿ ಮಧುಸೂದನ ಕುಶೆ ಶಾಲೆ ಇವರ ಜಂಟಿ ಆಶ್ರಯದಲ್ಲಿ 2024-25ನೇ ಸಾಲಿನ ಸಾಹಿತ್ಯ ಅಭಿರುಚಿ ಕಾರ್ಯಕ್ರವು ದಿನಾಂಕ 01-06-2024ರ ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರು. 2024-25ನೇ ಸಾಲಿನ ‘ಸಾಹಿತ್ಯ ಅಭಿರುಚಿ 101’ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಪ್ರೋ. ಎಂ. ಪಿ. ಶ್ರೀನಾಥ ಅವರು ಚಾಲನೆ ನೀಡಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಡಾ. ಮೀನಾಕ್ಷಿ ರಾಮಚಂದ್ರ, ಗೌರವ ಉಪನ್ಯಾಸಕರಾದ ಉಮೇಶ್ ಕಾರಂತ ಹಾಗೂ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರೊಫೆಸರ್ ಹಾಗೂ ಜೆಪ್ಪು ಬಂಟರ ಸಂಘದ ಅಧ್ಯಕ್ಷರಾದ ವಸಂತ ಶೆಟ್ಟಿ, ಅತ್ತಾವರ ನಗರ ನಿವಾಸಿಗಳ ಸಂಘದ ಅಧ್ಯಕ್ಷರಾದ ಉಮೇಶ್ ರಾವ್ ಕುಂಬ್ಳೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರೋಜಿನಿ ಮಧುಸೂದನ ಕುಶೆ ಶಾಲೆಯ ಪ್ರಾಂಶುಪಾಲರಾದ ಬಿಂದುಸಾರ…

Read More

ದಾವಣಗೆರೆ : ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ದಾವಣಗೆರೆಯ ಪ್ರತಿಷ್ಟಿತ ಬಾಪೂಜಿ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಹಾಗೂ ನಿವೃತ್ತ ಪ್ರಾಚಾರ್ಯ ಡಾ. ಎಂ.ಜಿ. ಈಶ್ವರಪ್ಪನವರು ದಿನಾಂಕ 01-06-2024ರಂದು ನಿಧನರಾದರು. ಇವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. “ಜಾನಪದ ವಿದ್ವಾಂಸ ಡಾ. ಜೀ.ಶಂ. ಪರಮಶಿವಯ್ಯನವರ ನೆಚ್ಚಿನ ಶಿಷ್ಯರಾದ ಈಶ್ವರಪ್ಪನವರು ಚಿತ್ರದುರ್ಗವನ್ನು ಕೇಂದ್ರವಾಗಿರಿಸಿದ ಮಧ್ಯ ಕರ್ನಾಟಕದ ಜಾನಪದ ಕ್ಷೇತ್ರದಲ್ಲಿ ಮಹತ್ವದ ಸಂಶೋಧನೆಗಳನ್ನು ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಅವರು ನಿಕಟ ಸಂಬಂಧವನ್ನು ಇಟ್ಟುಕೊಂಡಿದ್ದನ್ನು ಸ್ಮರಿಸಿ 1992ರಲ್ಲಿ ದಾವಣಗೆರೆಯಲ್ಲಿ ಡಾ. ಜಿ.ಎಸ್. ಶಿವರುದ್ರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸನ್ನು ಕಾಣಲು ಈಶ್ವರಪ್ಪನವರ ದಕ್ಷತೆಯೇ ಕಾರಣ. 1987ರಿಂದ 1990ರವರೆಗೆ ಮೈಸೂರು ವಿಶ್ವವಿದ್ಯಾನಿಲಯ ಮತ್ತು 2003ರಿಂದ 2006ರವೆರಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಮತ್ತು 2007ರಿಂದ 2010ರವರೆಗೆ ಕುವೆಂಪು ವಿಶ್ವವಿದ್ಯಾಲಯ ಹೀಗೆ ಮೂರು ವಿಶ್ವವಿದ್ಯಾಲಯಗಳ ಸೆನೆಟ್ ಸದಸ್ಯರಾದ ವಿಶಿಷ್ಟ ದಾಖಲೆಯನ್ನು ಹೊಂದಿರುವ…

Read More

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 140ನೆಯ ಜನ್ಮ ದಿನಾಚರಣೆಯನ್ನು ದಿನಾಂಕ 04-06-2024ರಂದು ಬೆಳಗ್ಗೆ 11-00 ಗಂಟೆಗೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ಶ್ರೀ ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ವಿಘ್ನೇಶ್ವರಯ್ಯ ನೀ ಸೋಲಾಪುರ ಇವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿಗಳು ವಿಶ್ರಾಂತ ಉಪನ್ಯಾಸಕರಾದ ಡಾ. ಕೆ.ಜಿ. ವೆಂಕಟೇಶ್ ಇವರು ಉಪನ್ಯಾಸ ನೀಡಲಿದ್ದಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಚನಿಯಪ್ಪ ಹಾಗೂ ಲೀಲಾ ಇವರ ಮಗಳಾಗಿ 23.04.1988ರಂದು ಶ್ರದ್ಧಾ ಶಶಿಧರ್ ಅವರ ಜನನ. ಕನ್ನಡ ಎಂ.ಎ ಇವರ ವಿದ್ಯಾಭ್ಯಾಸ. ಶೇಖರ ಶೆಟ್ಟಿ ಬಾಯಾರು, ಸುಧಾಕರ ಕಾಂತಮಂಗಲ ಹಾಗೂ ಮಾಂಬಾಡಿ ಸುಬ್ರಮಣ್ಯ ಭಟ್ (ಹಿಮ್ಮೇಳ) ಇವರ ಯಕ್ಷಗಾನ ಗುರುಗಳು. ತಂದೆ ಮತ್ತು ಚಿಕ್ಕಪ್ಪ ಯಕ್ಷಗಾನ ಆಸಕ್ತರು. ಸಣ್ಣವಳಿದ್ದಾಗ ತಾಳಮದ್ದಲೆ, ಯಕ್ಷಗಾನ ಬಯಲಾಟಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಊರಿನಲ್ಲಿ ಯಕ್ಷಗಾನ ವಾತಾವರಣ ಹಾಗೂ ಅವಕಾಶವಿದ್ದ ಕಾರಣ ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆಯಾಯಿತು ಎಂದು ಹೇಳುತ್ತಾರೆ ಶ್ರದ್ಧಾ ಶಶಿಧರ್. ರಂಗಕ್ಕೆ ಹೋಗುವ ಮೊದಲು ಹಿರಿಯ ಕಲಾವಿದರಲ್ಲಿ ಮತ್ತು ಗುರುಗಳಲ್ಲಿ ಪ್ರಸಂಗದ ಬಗ್ಗೆ ತಿಳಿದುಕೊಂಡು, ಪೂರಕ ಪುಸ್ತಕಗಳ ಅಧ್ಯಯನ ಮಾಡಿ,  ತಯಾರಿಯನ್ನು ಮಾಡಿಕೊಳ್ಳುತ್ತೇನೆ ಎಂದು ಹೇಳುತ್ತಾರೆ ಶ್ರದ್ಧಾ ಶಶಿಧರ್. ಸುಧನ್ವಾರ್ಜುನ, ಕೃಷ್ಣಾರ್ಜುನ, ಗದಾಯುದ್ಧ, ಇಂದ್ರಜಿತು ಕಾಳಗ ಅಭಿಮನ್ಯು ಕಾಳಗ, ದಕ್ಷಯಜ್ಞ, ದೇವಿ ಮಹಾತ್ಮೆ, ಕೃಷ್ಣ ಲೀಲೆ ಇತ್ಯಾದಿ ಪೌರಾಣಿಕ ಪ್ರಸಂಗಗಳು ಇವರ ನೆಚ್ಚಿನ ಪ್ರಸಂಗಗಳು. ಯಕ್ಷಗಾನದ ಇಂದಿನ ಸ್ಥಿತಿ…

Read More

ಉಡುಪಿ : ಯಕ್ಷಗಾನ ಕಲಾರಂಗ ಆಯೋಜಿಸಿದ 25ನೇ ವರ್ಷದ ಯಕ್ಷಗಾನ ಕಲಾವಿದರ ಸಮಾವೇಶವು ದಿನಾಂಕ 31-05-2024 ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು “ಯಕ್ಷಗಾನ ಕಲೆಯು ಎಲ್ಲಾ ಅಂಗಗಳನ್ನು ಹೊಂದಿರುವ ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು, ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ.” ಎಂದರು. ಶ್ರೀ ಮಠದ ದಿವಾನರಾದ ಶ್ರೀ ನಾಗರಾಜ ಅಚಾರ್ಯ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿಯವರನ್ನು ಸ್ವಾಮೀಜಿಯವರು ಸ್ಮರಣಿಕೆ, ಶಾಲು, ಅಭಿನಂದನಾ ಪತ್ರ ನೀಡಿ ಹರಸಿದರು. ಸಮಾರಂಭದಲ್ಲಿ ಸುಬ್ರಹ್ಮಣ್ಯ ಬೈಪಡಿತ್ತಾಯ ಬರೆದ ‘ಆಗಸದ ಬೆಳಕು’ ಪುಸ್ತಕವನ್ನು ಶ್ರೀಪಾದರು ಲೋಕಾರ್ಪಣೆಗೊಳಿಸಿದರು. ಇತ್ತೀಚೆಗೆ ನಿಧನರಾದ ಪುತ್ತೂರು ಗಂಗಾಧರ ಜೋಗಿಯವರ…

Read More

ಮಡಿಕೇರಿ : ಕೊಡವ ಮಕ್ಕಡ ಕೂಟದ ವತಿಯಿಂದ ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಪಿ. ಅಪ್ಪಣ್ಣ ಹಾಗೂ ರಾಣು ಅಪ್ಪಣ್ಣ ಅವರು ಬರೆದ ‘ಅಲಾಸ್ಕ’ ಪ್ರವಾಸ ಕಥನ ಕನ್ನಡ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 28-05-2024 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಳಿಸಿದ ಐ. ಎ. ಪಿ. ಪ್ರೈವೆಟ್ ಲಿಮಿಟೆಡ್‌ ಇದರ ಸಿ. ಇ. ಒ. ಮುಕ್ಕಾಟಿರ ಸೋಮಣ್ಣ ಮಾತನಾಡಿ “ಕೊಡವ ಮಕ್ಕಡ ಕೂಟದಿಂದ ಬರಹಗಾರರನ್ನು ಪ್ರೋತ್ಸಾಹಿಸವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರ ಬರಲಿ.” ಎಂದು ಶುಭ ಹಾರೈಸಿದರು. ಹಿರಿಯ ಸಾಹಿತಿ ಹಾಗೂ ‘ಅಲಾಸ್ಕ’ ಪುಸ್ತಕದ ಬರಹಗಾರ ಬಾಚರಣಿಯಂಡ ಪಿ. ಅಪ್ಪಣ್ಣ ಮಾತನಾಡಿ “ಹೃದಯವಂತ ಸಾಹಿತ್ಯ ಪೋಷಕರು ಇದ್ದಾಗ ಮಾತ್ರ ಸಾಹಿತ್ಯ ಕ್ಷೇತ್ರ ಅಗಾಧ ರೂಪದಲ್ಲಿ ಬೆಳೆಯಲು ಸಾಧ್ಯ.” ಎಂದರು. 2015ರಲ್ಲಿ ಯು.ಎಸ್.ಎ. ಗೆ ಸೇರಿದ ‘ಅಲಾಸ್ಕ’ ಪ್ರದೇಶಕ್ಕೆ ಪ್ರವಾಸ ತೆರಳಿದ್ದೆ. ಇದನ್ನು ಆಧರಿಸಿ ಪುಸ್ತಕ ಬರೆಯುತ್ತಿದ್ದ ವೇಳೆ ನಮ್ಮನ್ನು ಅಲಾಸ್ಕಕ್ಕೆ ಕರೆದೊಯ್ದ ಅಳಿಯ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ತನ್ನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 140ನೆಯ ಜಯಂತ್ಯುತ್ಸವವನ್ನು ದಿನಾಂಕ 04-06-2024ರಂದು ಸಂಜೆ 5-00 ಗಂಟೆಗೆ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಏರ್ಪಡಿಸಿದೆ. ‘ಮಾದರಿ ಮೈಸೂರು ರಾಜ್ಯ’ವನ್ನು ರೂಪಿಸಿದ ನಾಲ್ವಡಿಯವರ ಆಳ್ವಿಕೆಯಲ್ಲಿ ಕಲೆ, ಸಂಸ್ಕೃತಿಗೆ ವಿಶೇಷ ಮನ್ನಣೆಗಳು ದೊರಕಿದವು. ಪ್ರಜಾಪ್ರತಿನಿಧಿ ಸಭೆಯನ್ನು ಶಾಸನಬದ್ಧ ಸಂಸ್ಥೆಯನ್ನಾಗಿ ಮಾಡಿದ ಅವರು ಮಿಲ್ಲರ್ ಆಯೋಗದ ಮೂಲಕ ಮೀಸಲಾತಿಯನ್ನು ಜಾರಿಗೆ ತಂದು ‘ಸಾಮಾಜಿಕ ಕಾನೂನು’ಗಳ ಹರಿಕಾರ ಎನ್ನಿಸಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ತು ಕೂಡ ಅವರ ಕಾಲದಲ್ಲಿಯೇ ಸ್ಥಾಪಿತವಾಯಿತು. ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ಅವರು ಸ್ಥಾಪಿಸಿರುವ ಸಂಸ್ಥೆಗಳ ಪಟ್ಟಿ ಬಹಳ ದೊಡ್ಡದಾಗಿದೆ. ಪರಿವರ್ತನೆಯ ಹರಿಕಾರರಾದ ನಾಲ್ವಡಿಯವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ವಹಿಸಲಿದ್ದು, ಸಾಮಾಜಿಕ ಇತಿಹಾಸಕಾರರಾದ ಶ್ರೀ ಧರ್ಮೇಂದ್ರ ಕುಮಾರ್ ಅವರು ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳ ಕುರಿತು ವಿಶೇಷ…

Read More