Author: roovari

ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ-ಮಾಲಿಕೆ 14 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 28 ಫೆಬ್ರವರಿ 2025ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಾಟ್ಯನಿಕೇತನ ಕೊಲ್ಯದ ಹಿರಿಯ ಶಿಷ್ಯೆ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿಯ ವಿದುಷಿ ಶಾಲಿನಿ ಆತ್ಮಭೂಷಣ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

Read More

ಮಂಗಳೂರು : ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ (ರಿ.) ಉರ್ವಾ ಮಂಗಳೂರು ಇವರ ಸಹಯೋಗದಲ್ಲಿ ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಇದರ ರಜತ ಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಗ್ರಂಥ ಲೋಕರ್ಪಣಾ ಸಮಾರಂಭವನ್ನು ದಿನಾಂಕ 01 ಮಾರ್ಚ್ 2025ರಂದು ಸಂಜೆ 4-00 ಗಂಟೆಗೆ ಉರ್ವಾದ ಕಾ. ವಾ. ಆಚಾರ್ಯ ಸಂಸ್ಕೃತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಸಂಜೆ 4-00 ಗಂಟೆಗೆ ಸ್ವರ್ಣಕುಡ್ಲ ಸೀಸನ್ 6 ವಿನ್ನರ್ ಮಾಸ್ಟರ್ ಆಯುಷ್ ಪ್ರೇಮ ಇವರಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಗಾಯನ ನಡೆಯಲಿದೆ. ಗ್ರಂಥ ಲೋಕರ್ಪಣಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟಿನ ಎಸ್.ವಿ. ಆಚಾರ್ ಇವರ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರು ಉದ್ಘಾಟನೆ ಮಾಡಲಿರುವರು. ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿಯ ಸಂಚಾಲಕರಾದ ಇಂ. ಭೀಮಸೇನ ಬಡಿಗೇರ…

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025’ಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ. ರಂಗ ನಟ, ಸಂಘಟಕ ಹಾಗೂ ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ ಹಾಗೂ ಕಂಠದಾನ ಕಲಾವಿದೆ ಪ್ರಿಯಾಸರೋಜಾದೇವಿ ಮುಂಬೈ, ರಂಗನಟ ಹಾಗೂ ಸಂಘಟಕ ಪ್ರಕಾಶ್ ಜಿ. ಕೊಡವೂರು, ರಂಗನಟಿ ಮಂಜುಳಾ ಜನಾರ್ದನ್ ಮಂಗಳೂರು ಇವರುಗಳಿಗೆ ದಿನಾಂಕ 26 ಮಾರ್ಚ್ 2025ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2025 ‘ ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ತಿಳಿಸಿರುತ್ತಾರೆ. ಅರವಿಂದ ಕುಲಕರ್ಣಿ…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬ್ರಹ್ಮಾವರ ತಾಲೂಕು ಘಟಕ ಇದರ ವತಿಯಿಂದ ಸಾಹಿತ್ಯ ಸಂಚಾರ -43ನೇ ಸರಣಿಯ ‘ಸಾಹಿತ್ಯ ಪ್ರೇರಣೆ’ ಕಾರ್ಯಕ್ರಮವನ್ನು ದಿನಾಂಕ 01 ಮಾರ್ಚ್ 2025ರಂದು ಪೂರ್ವಾಹ್ನ 10-00 ಗಂಟೆಗೆ ಆವರ್ಸೆ ಬ್ರಹ್ಮಾವರ ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕ.ಸಾ.ಪ. ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ರಾಮಚಂದ್ರ ಐತಾಳ ಗುಂಡ್ಮಿ, ಕ.ಸಾ.ಪ. ಕೋಟ ಹೋಬಳಿಯ ಅಧ್ಯಕ್ಷರಾದ ಅಚ್ಚುತ ಪೂಜಾರಿ ಕಾರ್ಕಡ, ಯಕ್ಷಗಾನ ಶಿಕ್ಷಕ ನರಸಿಂಹ ತುಂಗ ಮತ್ತು ಸಂಗೀತ ಶಿಕ್ಷಕಿ ಶ್ರೀಮತಿ ಭಾಗ್ಯೇಶ್ವರಿ ಮಯ್ಯ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಹಯೋಗದಲ್ಲಿ ‘ಯಶಸ್ವಿ ಮಹಿಳಾ ಸಮ್ಮಿಳನ’ ಕಾರ್ಯಕ್ರಮ ಸಮಾರೋಪ ಸಮಾರಂಭ ದಿನಾಂಕ 23 ಫೆಬ್ರವರಿ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆನಂದ ಉರಾಳ್ ಇವರನ್ನು ಗೌರವಿಸಿದ ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಇದರ ಅಧ್ಯಕ್ಷರಾದ ಹೆರಿಯ ಮಾಸ್ಟರ್ ಮಾತನಾಡಿ “ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಂಘಟನೆಗಳಲ್ಲಿ ಇತ್ತೀಚೆಗೆ ಮಹಿಳೆಯರದೇ ಮೇಲುಗೈ. ಮಹಿಳೆಯರು ಸಂಪೂರ್ಣವಾಗಿ ತೊಡಗಿಸಿಕೊಂಡು ಯಶಸ್ಸುಗೊಳಿಸುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುವ ತಾಯಂದಿರು ಸಮಾಜದ ಶಕ್ತಿ. ಮಹಿಳೆಯರು ತಾನು ಕಲಿಯುವುದರ ಮೂಲಕ ತನ್ನ ಮಕ್ಕಳಿಗೂ ಕಲಿಸಿ ಭವಿಷ್ಯದ ರೂವಾರಿಗಳಾಗುತ್ತಾರೆ. ಮುಂದಿನ ಪೀಳಿಗೆಗೆ ಕಲೆಯನ್ನು ಪಸರಿಸುವ ಕಾರ್ಯ ಮಹಿಳೆಯರಿಂದ ಯಶಸ್ಸು ಕಾಣುವುದಕ್ಕೆ ಸಾಧ್ಯ” ಎಂದರು. ಸಮಾರಂಭದಲ್ಲಿ ಕಲಾ ಪ್ರೋತ್ಸಾಹಕ ಆನಂದ ಉರಾಳ್ ಹಾಗೂ ಯಕ್ಷಗುರು ಸುಧಾ ಮಣೂರು ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಅಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಮಂಜುನಾಥ ಕೆದಲಾಯ ಮಾತನಾಡಿ “ಮಹಿಳೆಯರು ಕಲಾ ವಲಯದಲ್ಲಿ ಕಾಲಿಟ್ಟರೆ ಮನೆಯ ಮಕ್ಕಳು ಕಲಿತಂತೆ. ತನ್ನ ಆಸಕ್ತಿಯನ್ನು ಮಕ್ಕಳಲ್ಲಿ ತೋರಿಸಿ,…

Read More

ಮೈಸೂರು : ಸ್ಪಂದನ ಸಾಂಸ್ಕೃತಿಕ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಸ್ಮಯ ಪ್ರಕಾಶನದ ವತಿಯಿಂದ ರಾಜ್ಯ ಮಟ್ಟದ ಯುಗಾದಿ ಕವಿಗೋಷ್ಠಿಯನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ನಾಡಿನ ಆಸಕ್ತ ಕವಿಗಳಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ. ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಯಾವುದೇ ವಯೋಮಾನದ ಕವಿ-ಕವಯತ್ರಿಯರು ಯಾವುದೇ ವಸ್ತು ವಿಷಯ ಕುರಿತು ಕವನಗಳನ್ನು ರಚಿಸಬಹುದು. ಆದರೆ, ಕವನಗಳು ಗರಿಷ್ಟ ಇಪ್ಪತ್ತು ಸಾಲುಗಳ ಮಿತಿಯೊಳಗೆ ಇರಬೇಕು. ಕವನ /ಗಜಲುಗಳಾದರೆ ಎರಡನ್ನೂ ಅಥವಾ ಗರಿಷ್ಠ ಆರು ಸಾಲುಗಳ ಮಿತಿಯೊಳಗಿನ ಚುಟುಕು, ವಚನ, ಹನಿಗವನಗಳಾದರೆ ಎಂಟನ್ನೂ ಕಳುಹಿಸಿಕೊಡಬಹುದು. ಆಯ್ಕೆಯಾದ ಕವಿಗಳಿಗೆ ದಿನಾಂಕ 06 ಏಪ್ರಿಲ್ 2025ರಂದು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುಗಾದಿ ಕವಿಮೇಳದಲ್ಲಿ ಕವನ ವಾಚನ ಮಾಡಲು ಅವಕಾಶ ನೀಡುವ ಜತೆಗೆ, ಪ್ರತಿಯೊಬ್ಬ ಕವಿಗೂ ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಮೊದಲು ಕವನಗಳನ್ನು ಕಳುಹಿಸಿದ 60…

Read More

ಬೆಂಗಳೂರು : ದೀಪಾ ಭಸ್ತಿಯವರು ಇಂಗ್ಲೀಷ್ ಗೆ ಅನುವಾದಿಸಿರುವ ಬಾನು ಮುಷ್ತಾಕ್ ಅವರ ಸಣ್ಣಕಥೆಗಳ ಸಂಕಲನ ‘ಹಾರ್ಟ್ ಲ್ಯಾಂಪ್’ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಪ್ರಧಾನ ಸುತ್ತಿಗೆ ಆಯ್ಕೆಯಾಗಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಅಪಾರ ಸಂತಸ ವ್ಯಕ್ತ ಪಡಿಸಿ, ಕೃತಿಯು ಅಂತಿಮ ಸುತ್ತಿಗೂ ಆಯ್ಕೆಯಾಗಲಿ, ಪ್ರಶಸ್ತಿಗೆ ಕೂಡ ಆಯ್ಕೆಯಾಗಲಿ, ಈ ಮೂಲಕ ಐವತ್ತು ಸಾವಿರ ಪೌಂಡ್ ಗಳ (ಸರಿಸುಮಾರು 55 ಲಕ್ಷ ರೂಪಾಯಿಗಳು) ಪುರಸ್ಕಾರ ಮೊಟ್ಟ ಮೊದಲಿಗೆ ಕನ್ನಡಕ್ಕೆ ಲಭಿಸಲಿ, ಈ ಮೂಲಕ ಕನ್ನಡದ ಕೀರ್ತಿ ಪತಾಕೆ ಜಾಗತಿಕವಾಗಿ ಹಾರಲಿ ಎಂದು ಆಶಿಸಿದ್ದಾರೆ. ಇದಕ್ಕೆ ಕಾರಣರಾದ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಇವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಬಾನು ಮುಷ್ತಾಕ್ ಇವರ ‘ಹಸೀನಾ’ ಕಥೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿಯವರು ನಿರ್ದೇಶಿಸಿದ ಚಿತ್ರ ರಾಷ್ಟ್ರ ಪುರಸ್ಕಾರವನ್ನು ಪಡೆದಿರುವುದನ್ನು ನೆನಪು ಮಾಡಿಕೊಂಡಿರುವ ಅವರು, ಇನ್ನೊಮ್ಮೆ ಬಾನು ಮುಷ್ತಾಕ್ ಇವರಿಂದ ಇತಿಹಾಸ ಸೃಷ್ಟಿಯಾಗಲಿ ಎಂದು ಆಶಿಸಿದ್ದಾರೆ. 2023ನೇ ಇಸವಿಯಲ್ಲಿ ಬಾನು…

Read More

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 08 ಮಾರ್ಚ್ 2025ರಂದು ಒಂದು ದಿನದ ತುಳು – ಕನ್ನಡ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಭಾಂಗಣ ‘ಸಾಹಿತ್ಯ ಸದನ’ದಲ್ಲಿ ಹಮ್ಮಿಕ್ಕೊಳ್ಳುವ ಈ ಕಾರ್ಯಾಗಾರದಲ್ಲಿ ಖ್ಯಾತ ಭಾಷಾಂತರಕಾರರು ತುಳುವಿನಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ತುಳುವಿಗೆ ಭಾಷಾಂತರ ಮಾಡುವಾಗ ಎದುರಾಗುವ ಸಮಸ್ಯೆಗಳನ್ನು ಕುರಿತು ತರಗತಿಗಳನ್ನು ನೀಡಲಿದ್ದಾರೆ. ಕನ್ನಡ ಮತ್ತು ತುಳು ಗೊತ್ತಿರುವ, ಅನುವಾದದಲ್ಲಿ ಆಸಕ್ತಿಯುಳ್ಳವರು ದಿನಾಂಕ 02 ಮಾರ್ಚ್ 2025ರರೊಳಗೆ ನಿಮ್ಮ ಹೆಸರು ನೋಂದಾಯಿಸಬಹುದು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು. ನೋಂದಣಿ ಶುಲ್ಕವಿಲ್ಲ. ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕಮ್ಮಟದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷೆ ಡಾ. ಸುಷ್ಮಾ ಶಂಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901041889 ಡಾ. ಸುಷ್ಮ ಶಂಕರ್…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಆಯೋಜಿಸುವ ‘ಅಕಾಡೆಮಿಡ್ ಒಂಜಿ ದಿನ’ ಬಲೆ ತುಳು ಓದುಗ ಸರಣಿಯ 3ನೇ ಕಾರ್ಯಕ್ರಮವು ದಿನಾಂಕ 27 ಫೆಬ್ರವರಿ 2025ನೇ ಗುರುವಾರದಂದು ಬೆಳಿಗ್ಗೆ ಘಂಟೆ 10.00ಕ್ಕೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸೆಂಟ್ರಲ್ ಬ್ಯುರೋ ಆಫ್ ಕಮ್ಯುನಿಕೇಷನ್, ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಜಿತು ನಿಡ್ಲೆ ಉದ್ಘಾತಿಸಲಿದ್ದು, ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕರಾದ ಡಾ. ಜ್ಯೋತಿ ಪ್ರಿಯಾ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಘಂಟೆ 10.30 ರಿಂದ 1.30ರ ವರೆಗೆ ಓದು ಮತ್ತು…

Read More

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತುಪ್ಪೆಕಲ್ಲು ನರಸಿಂಹ ಶೆಟ್ಟಿ , ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ, ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ ವಿದ್ಯಾಸಾಗರ್, ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್, ಸಂಧ್ಯಾ ಆಳ್ವ, ಕವಿತಾ, ಮಮತಾ, ಗಾಯತ್ರಿ, ಪ್ರೊ. ಗಿರಿಯಪ್ಪ, ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ. ತುಪ್ಪೆಕಲ್ಲು ನರಸಿಂಹ ಶೆಟ್ಟಿ  ಚಂದ್ರಪ್ರಭಾ ದಿವಾಕರ್ ಯಶೋದಾ ಕುಮಾರಿ ರವಿಕಲಾ ಸುಂದರ್ ಬೀನಾ ವಿದ್ಯಾಸಾಗರ್ 

Read More