Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 09 ನವೆಂಬರ್ 2025ರಂದು ಲೇಖಕಿ ರುಬೀನಾ ಎಂ.ಎ. ಇವರ ಚೊಚ್ಚಲ ಕೃತಿ ‘ಕಣ್ಣಾ ಮುಚ್ಚಾಲೆ’ಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕೃತಿ ಬಿಡುಗಡೆಗೊಳಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ “ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕು. ಹಿಂದೆ ಸಾಹಿತ್ಯ ಕ್ಷೇತ್ರದಲ್ಲಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದರು. ಇಂದು ಮಹಿಳೆಯರು ಪುರುಷರಿಗೆ ಸಮಾನವಾಗಿ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಹಿಂದೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಿತ್ತು. ಇಂದು ಅತಿಯಾದ ತಂತ್ರಜ್ಞಾನದ ಬಳಕೆಯಿಂದಾಗಿ ಓದುಗರ ಸಂಖ್ಯೆ ಕಡಿಮೆಯಾಗಿದೆ. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಆಸಕ್ತಿ ಹೊಂದಬೇಕು. ಪುಸ್ತಕ ರಚನೆ ಕಷ್ಟಕರ ಕೆಲಸ, ಆದರೂ ಸವಾಲಿನ ನಡುವೆ ಮಹಿಳಾ ಪ್ರಧಾನವಾದ ಪುಸ್ತಕವನ್ನು ರುಬೀನಾ ಅವರು ಹೊರತಂದಿದ್ದು, ಶ್ರಮಕ್ಕೆ ತಕ್ಕ…
ಮಂಗಳೂರು : ಬಿಜೈಯಲ್ಲಿರುವ ನೃತ್ಯಾಂಗನ್ ಸಂಸ್ಥೆಯ ವತಿಯಿಂದ ‘ನೃತ್ಯೋಲ್ಲಾಸ 2025’ ಕಾರ್ಯಕ್ರಮವನ್ನು ದಿನಾಂಕ 16 ನವೆಂಬರ್ 2025ರಂದು ಸಾಯಂಕಾಲ 5-00 ಗಂಟೆಗೆ ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ವೇದ್ಯ ಸ್ಪೂರ್ತಿ ಕೊಂಡ ಇವರು ಕೂಚಿಪುಡಿ ಪ್ರದರ್ಶನ ನೀಡಲಿದ್ದಾರೆ. ಅದ್ವಿತಾ ಜಿ. ರಾವ್, ಪ್ರೇರಣಾ ಶೆಣೈ ಮತ್ತು ಅವನಿ ಎಸ್. ಇವರಿಂದ ಹಾಗೂ ನೃತ್ಯಾಂಗನ್ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆಯುವ ಭರತನಾಟ್ಯ ಪ್ರದರ್ಶನಕ್ಕೆ ನಟುವಾಂಗದಲ್ಲಿ ರಾಧಿಕಾ ಶೆಟ್ಟಿ, ಹಾಡುಗಾರಿಕೆಯಲ್ಲಿ ವಿದ್ಯಾಶ್ರೀ ರಾಧಾಕೃಷ್ಣ, ಮೃದಂಗದಲ್ಲಿ ಬಾಲಚಂದ್ರ ಭಾಗವತ್ ಮತ್ತು ಕೊಳಲಿನಲ್ಲಿ ರಾಜಗೋಪಾಲ ಕಾಂಞಗಾಡ್ ಇವರುಗಳು ಸಹಕರಿಸಲಿದ್ದಾರೆ.
ಮಂಗಳೂರು : ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಮಂಗಳೂರು ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಕುಂಜತ್ತಬೈಲ್ ಆಸರೆ ಮನೆಯಲ್ಲಿ ದಿನಾಂಕ 09 ನವೆಂಬರ್ 2025ರಂದು ‘ರಂಗಾಂತರಂಗ’ ಸ್ವರ-ಕರಗಳ ಸಮ್ಮಿಳನ ಹಾಗೂ ಕಲಾವಿದ ನಾದ ಮಣಿ ನಾಲ್ಕೂರು ಇವರಿಂದ ವಿನೂತನ ತತ್ವ-ಭಾವ ಗಾನಯಾನ ‘ಕತ್ತಲ ಹಾಡು’ ಕಾರ್ಯಕ್ರಮ ಜರುಗಿತು. ಸ್ವರೂಪ ಅಧ್ಯಯನ ಸಮೂಹ ಮಂಗಳೂರು ನಿರ್ದೇಶಕ ಗೋಪಾಡ್ಕರ್, ಸಾಹಿತಿ ಡಾ. ವಸಂತ್ ಕುಮಾರ್ ಪೆರ್ಲಾ, ಕಲಾವಿದ ದಿನೇಶ್ ಹೊಳ್ಳ, ಶೈಕ್ಷಣಿಕ ಸಲಹೆಗಾರ ಮೊಹಮ್ಮದ್ ರಫೀಕ್ ಅವರು ಮಾತನಾಡಿ ರಂಗ ಸ್ವರೂಪ ತಂಡದ ಸಾಮಾಜಿಕ, ಶೈಕ್ಷಣಿಕ ಹಾಗೂ ಪರಿಸರ ಸ್ನೇಹಿ ಕಾರ್ಯಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹುಸೈನ್ ರಿಯಾಝ್, ಜ್ಯೋತಿ ಸುಬ್ರಹ್ಮಣ್ಯ, ತಸ್ಲೀಮಾ ಬಾನು, ಹನೀಷಾ, ಅರವಿಂದ ಕುಡ್ಲ, ರೈಹಾನ್, ವೈಷ್ಣವಿ, ಆದಂ ಖಾನ್, ಬದ್ರುದ್ದೀನ್ ಕೂಳೂರು, ಸುಮನಾ ರೆಬೆಲ್ಲೋ, ಸಂಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ತಂಡದ ಸ್ಥಾಪಕರಾದ ಗೋಪಾಡ್ಕರ್ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ರಂಗ ಸ್ವರೂಪ…
ಉಡುಪಿ : ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 09 ನವೆಂಬರ್ 2025ರಂದು ಹೇರಂಜಾಲು ಯಕ್ಷ ಬಳಗದಿಂದ ಹೇರಂಜಾಲು ಯಕ್ಷ ಸಂಭ್ರಮ, ಹೇರಂಜಾಲು ಕೃತಿ ಲೋಕಾರ್ಪಣೆ ಹಾಗೂ ಹೇರಂಜಾಲು ಗೌರವ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಶಿವರಾಮ ಶೆಟ್ಟಿ “ಓರ್ವ ಯಕ್ಷಗಾನ ಕಲಾವಿದ, ಓರ್ವ ಭಾಗವತ ಹೇಗಿರಬೇಕು ಎಂಬುದಕ್ಕೆ ಹೇರಂಜಾಲು ಗೋಪಾಲ ಗಾಣಿಗರೇ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಯಕ್ಷಗಾನ ಕಲೆಗೆ ಅವರ ಕೊಡುಗೆ ಅಪಾರ. ಸುಮಾರು 25 ವರ್ಷಗಳ ಕಾಲ ಕನ್ನರ್ಪಾಡಿಯಲ್ಲಿ ಮಂದಾರ್ತಿ ಮೇಳದ ಯಕ್ಷಗಾನವನ್ನು ಆಡಿಸಿ, ಹೇರಂಜಾಲು ಗೋಪಾಲ ಗಾಣಿಗರೇ ಭಾಗವತರಾಗಬೇಕು ಎಂಬ ಅಭಿಲಾಷೆ ಹೊಂದಿದ್ದ, ಗೋಪಾಲ ಗಾಣಿಗರು ಉಚ್ಛಾಯ ಸ್ಥಿತಿಯಲ್ಲಿದ್ದ ಕಾಲವದು. ಅಂತಹ ಮೇರು ಕಲಾವಿದ ತನಗೇನೂ ಗೊತ್ತಿಲ್ಲ ಎಂಬಂತೆ ವಿನಮ್ರನಾಗಿ ಕಲಾಸೇವೆಯನ್ನು ಮಾಡುತ್ತಿರುವುದನ್ನು ಕಂಡಾಗ ಅಭಿಮಾನ ಉಕ್ಕಿ ಬರುತ್ತದೆ. ಸುಮಾರು 9 ಕೃತಿಗಳನ್ನು ಅವರು ಬರೆದಿದ್ದಾರೆ. ಯಕ್ಷಗಾನ ಅಕಾಡೆಮಿ ಕೊಡಮಾಡುವ ಯಕ್ಷಗಾನದ ಶ್ರೇಷ್ಠ ಪಾರ್ಥಿಸುಬ್ಬ ಪ್ರಶಸ್ತಿಯನ್ನು…
ಸುರತ್ಕಲ್ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಇಡ್ಯಾ ಸುರತ್ಕಲ್ ಇವರ ವತಿಯಿಂದ ಮನು ಇಡ್ಯಾ ಇವರ ‘ಗಂಧದ ಕೊರಡ್’ ಮತ್ತು ‘ತಾಂಗ್ ನಿರೆಲ್’ ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಚಾವಡಿ ತಮ್ಮನ ಕಾರ್ಯಕ್ರಮವನ್ನು ದಿನಾಂಕ 13 ನವೆಂಬರ್ 2025ರಂದು ಸಂಜೆ 4-00 ಗಂಟೆಗೆ ಸುರತ್ಕಲ್ ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ವಿಜಯ ಕರ್ನಾಟಕದ ನಿವೃತ್ತ ಸ್ಥಾನೀಯ ಸಂಪಾದಕರಾದ ಯು.ಕೆ. ಕುಮಾರನಾಥ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಇವರು ಚಾವಡಿ ತಮ್ಮನದ ಅಭಿನಂದನಾ ಮಾತುಗಳನ್ನಾಡಲಿದ್ದು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀಮತಿ ಯಮುನಾ ಶೇಖರ್, ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀಮತಿ ಗುಣವತಿ ರಮೇಶ್ ಮತ್ತು ಸಿಂಗಾರ…
ಮಂಗಳೂರು : ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಈ ಬಾರಿ ಹಿರಿಯ ಸ್ವರ್ಣೋದ್ಯಮಿ ಎಂ. ರವೀಂದ್ರ ಶೇಟ್ ಆಯ್ಕೆಯಾಗಿದ್ದಾರೆ. ಯಕ್ಷಗಾನ ಆಟ ಕೂಟಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ನೀಡುವ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಯನ್ನು ಹಿರಿ ತಲೆಮಾರಿನ ವೇಷಧಾರಿ ಬೋಳಾರ ಸುಬ್ಬಯ್ಯ ಶೆಟ್ಟಿ ಇವರಿಗೆ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ದಿನಾಂಕ 23 ನವೆಂಬರ್ 2025ರಂದು ಮಂಗಳೂರು ವಿ.ವಿ.ಯ ರವೀಂದ್ರ ಕಲಾ ಭವನದಲ್ಲಿ ಜರಗುವ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ಮತ್ತು ದಿನಾಂಕ 29 ನವೆಂಬರ್ 2025ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಯನ್ನು ಪ್ರದಾನಿಸಲಾಗುವುದು. ಎಂ. ರವೀಂದ್ರ ಶೇಟ್ : ಚಿನ್ನಾಭರಣಗಳ ವ್ಯಾಪಾರದಲ್ಲಿ ದಂತಕಥೆಯಾಗಿರುವ ದಿ. ಸುಬ್ರಾಯ ಲಕ್ಷ್ಮಣ ಶೇಟ್ (ಎಸ್.ಎಲ್. ಶೇಟ್ ) 1947ರಲ್ಲಿ ಸ್ಥಾಪಿಸಿದ ‘ಎಸ್.ಎಲ್.…
ಬೆಂಗಳೂರು : ಶತಮಾನೋತ್ಸವ ಆಚರಿಸುತ್ತಿರುವ ಶ್ರೀ ಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಹುಕ್ಲಮಕ್ಕಿ ಮೇಳದ ಅಪರೂಪದ ‘ಶಬರಾರ್ಜುನ’ ಯಕ್ಷಗಾನ ಪ್ರದರ್ಶನವು ದಿನಾಂಕ 08 ನವೆಂಬರ್ 2025ರಂದು ಬೆಂಗಳೂರಿನ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಡಾಕ್ಟರ್ ಬಿ.ಡಿ. ಪಟೇಲ್, ಜಿ. ಮೃತ್ಯುಂಜಯ, ಶ್ರೀಮತಿ ಮಾಲತಿ ಹೆಗಡೆ ಇವರೊಂದಿಗೆ ಉದ್ಘಾಟಿಸಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ಹುಕ್ಲಮಕ್ಕಿ ಮೇಳದ ಮ್ಯಾನೇಜರ್, ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ ಗೋಪಾಲಕೃಷ್ಣ ಹೆಗಡೆ ಇವರು ಮಾತನಾಡಿ “ಬಾಲಕರ, ಮಹಿಳೆಯರ ಸಹಿತ ಪ್ರದರ್ಶನಗೊಳ್ಳುವ ಎಲ್ಲ ಯಕ್ಷಗಾನ ತಾಳಮದ್ದಳೆಗಳಲ್ಲಿ ಕನ್ನಡವನ್ನು ಮಾತ್ರ ಬಳಸುತ್ತಿದ್ದು, ಈ ಕ್ಷೇತ್ರ, ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿವೆ. ಸಂಪರ್ಕ, ಸಕಲ ಸೌಲಭ್ಯಗಳಿಂದ ದೂರದ ಬೆಟ್ಟ-ಗುಡ್ಡಗಳ ನಡುವೆ ಇರುವ ಹಳ್ಳಿಯೊಂದರಲ್ಲಿ ಸ್ಥಾಪಿತವಾಗಿ, ಕಷ್ಟ ನಷ್ಟ ಎದುರಿಸಿಯೂ ಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಕುವೆಂಪು ಅವರಿಂದ 1924ರಲ್ಲಿ ಭಾರತ ಜನನಿಯ ತನುಜಾತೆ ನಾಡಗೀತೆ ರಚಿತವಾದರೆ, ಮಾರನೆಯ ವರ್ಷ 1925ರಲ್ಲಿ ನಮ್ಮ ಹುಕ್ಲಮಕ್ಕಿ…
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಇವರು ದಿನಾಂಕ 08 ನವೆಂಬರ್ 2025ರಂದು ಸುಳ್ಯದಲ್ಲಿ ಘೋಷಿಸಿದರು. 2024ನೇ ಸಾಲಿನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕವನ್ನು ಹೊಂದಿದ್ದು, ವಿಶೇಷವಾಗಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ‘ಅಪ್ಪ’ ಎಂಬ ಅರೆಭಾಷೆ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರಶಸ್ತಿ ಆಯ್ಕೆಯು ಆಯ್ಕೆ ಸಮಿತಿ ಆಯ್ಕೆ ಬಯಸಿ ಅರ್ಜಿ ಸಲ್ಲಿಸಿದವರ ಅರೆಭಾಷೆ ಕೊಡುಗೆಯನ್ನು ಗಮನಿಸಿ ರಾಷ್ಟ್ರ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಅರೆಭಾಷೆ ನಿಘಂಟು ರಚನೆಕಾರ ಕೆ.ಆರ್. ಗಂಗಾಧರ, ಕೊಡಗು ದಕ್ಷಿಣ ಕನ್ನಡ ಒಕ್ಕಲಿಗರ ಯಾನೆ ಗೌಡ ಸಮಾಜ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೆ.ಎಸ್.ಎಫ್.ಸಿ. ಸೇವೆ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯಾದ್ಯಂತ ಅರೆಭಾಷಿಕರನ್ನು ಸಂಘಟಿಸುವಲ್ಲಿ ಶ್ರಮ…
ಬೆಳಗಾವಿ : ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಇದರ ವತಿಯಿಂದ ನೀಡುವ ಹಿರಿಯ ಮತ್ತು ಯುವ ಸಾಹಿತಿಗಳಿಗೆ 2023, 2024 ಮತ್ತು 2025ನೇ ಸಾಲಿನ ವಾರ್ಷಿಕ ಕಥೆ, ಕಾವ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಳಗಾವಿಯಲ್ಲಿ ದಿನಾಂಕ 11 ನವೆಂಬರ್ 2025ರಂದು ಬೆಳಿಗ್ಗೆ ಗಂಟೆ 11-00ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಶಸ್ತಿ ಪ್ರದಾನ ಮಾಡುವರು. ‘ಕವಿ ಎಚ್.ಎಸ್. ಶಿವಪ್ರಕಾಶ ಇವರನ್ನು 2023ನೇ ಸಾಲಿನ ಕಾವ್ಯ ಪ್ರಶಸ್ತಿ, ಚಿಂತಕ ಮತ್ತು ಪತ್ರಕರ್ತ ಜಿ. ರಾಮಕೃಷ್ಣ ಇವರನ್ನು 2024ನೇ ಸಾಲಿನ ವೈಚಾರಿಕ ಮತ್ತು ಪತ್ರಿಕೋದ್ಯಮ ಪ್ರಶಸ್ತಿ, ಕಥೆಗಾರ್ತಿ ಬಿ.ಟಿ. ಜಾಹ್ನವಿ ಇವರನ್ನು 2025ನೇ ಸಾಲಿನ ಕಥಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ತಲಾ ರೂ. ಐವತ್ತು ಸಾವಿರ ಒಳಗೊಂಡಿವೆ ಎಂದು ಟ್ರಸ್ಟ್ ಅಧ್ಯಕ್ಷೆ ವಿನಯಾ ಒಕ್ಕುಂದ ಇಲ್ಲಿ ತಿಳಿಸಿದರು. ‘ಯುವ ಸಾಹಿತ್ಯ ಪುರಸ್ಕಾರ’ಕ್ಕೆ ಮೂವರು ಆಯ್ಕೆ ಆಗಿದ್ದಾರೆ. ಶಿವಮೊಗ್ಗದ ಕೆ. ಅಕ್ಷತಾ (2023), ಮಂಗಳೂರಿನ ವಿಲ್ಸನ್ ಕಟೀಲ್ (2024) ಮತ್ತು…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಸಹಭಾಗಿತ್ವದಲ್ಲಿ ತುಳು ಭವನದಲ್ಲಿ ದಿನಾಂಕ 08 ನವೆಂಬರ್ 2025ರಂದು ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೊಂದಿಗೆ ಮಾತುಕತೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಜಾನಪದ ವಿದ್ವಾಂಸ, ಡಾ. ಶಿವರಾಮ ಕಾರಂತ ಟ್ರಸ್ಟಿನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು “ಜಾನಪದ ಕಲಾವಿದರು ಯಾವುದೇ ಪ್ರತಿಫಲ ಬಯಸದೆ ಸೇವಾ ನಿರತರಾಗಿರುತ್ತಾರೆ. ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್, ಉಮೇಶ್ ಪಂಬದ ಗಂಧಕಾಡು ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ. ದೈವಾರಧನೆಯೂ ತುಳು ನಾಡಿನ ಆರಾಧನಾ ಶಕ್ತಿಯ ಮೂಲ ಸೆಲೆಯಾಗಿದ್ದು, ಉಮೇಶ್ ಪಂಬದ ಅವರಂತ ನೂರಾರು ದೈವಾರಾಧಕರು ಶತಮಾನಗಳಿಂದ ಪರಂಪರೆ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇವತ್ತು ತುಳುನಾಡಿನ ಭೂತಾರಾಧನೆ ಪಡೆದಿರುವ ಜನಪ್ರಿಯತೆ ಹಿಂದೆ ಶತಮಾನಗಳ ಶ್ರದ್ಧೆ, ಬದ್ಧತೆಯ ಫಲ ಇದೆ.” ಎಂದು ಹೇಳಿದರು.…