Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು: ಬೆಂಗಳೂರಿನ ವೀರಲೋಕ ಪ್ರಕಾಶನದ ದೇಸಿ ಜಗಲಿ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ಕಥಾ ಕಮ್ಮಟವು ದಿನಾಂಕ 23-09-2023 ಮತ್ತು 24-09-2023 ರಂದು ಉಪ್ಪಳದ ಬಾಯಿಕಟ್ಟೆ ಸಮೀಪದ ಲಕ್ಷ್ಮಿ ಮಿಲ್ಸ್ ಸಭಾಭವನದಲ್ಲಿ ನಡೆಯಲಿದೆ. ಖ್ಯಾತ ಸಂಶೋಧಕ ಮತ್ತು ಅನುವಾದಕ ಡಾ.ಮೋಹನ ಕುಂಟಾರು ಕಥಾ ಕಮ್ಮಟದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುವರು. ಜಿಲ್ಲೆಯ ಉದಯೋನ್ಮುಖ ಬರಹಗಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, 40 ವರ್ಷದೊಳಗಿನ ಆಸಕ್ತ ಬರಹಗಾರರು ಈ ಕಥಾ ಕಮ್ಮಟದಲ್ಲಿ ಶಿಬಿರಾರ್ಥಿಗಳಾಗಿ ಪಾಲ್ಗೊಳ್ಳಬಹುದು. ಈ ಕಮ್ಮಟದ ಎರಡು ದಿನಗಳ ಕಾಲ ಊಟ ಮತ್ತು ಉಪಹಾರಗಳ ವ್ಯವಸ್ಥೆಯಿದ್ದು ಪ್ರವೇಶವು ಉಚಿತವಾಗಿದೆ. ಆಸಕ್ತ ಬರಹಗಾರರು ಹೆಚ್ಚಿನ ಮಾಹಿತಿಗಾಗಿ ಸಂಚಾಲಕ ಡಾ.ಸುಭಾಷ್ ಪಟ್ಟಾಜೆ 9645081966, ಹಿರಿಯ ಲೇಖಕ ಪ್ರೊ.ಪಿ.ಎನ್.ಮೂಡಿತ್ತಾಯ 9495296720 ಇವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಬಹುದು.
ಕಾಪು : ಯಕ್ಷ ಶಿಕ್ಷಣ ಟ್ರಸ್ಟ್( ರಿ) ಉಡುಪಿ ಇವರು ಈ ವರ್ಷ ಕಾಪು ವಿಧಾನ ಸಭಾ ಕ್ಷೇತ್ತದ 15 ಪ್ರೌಢ ಶಾಲೆಗಳಲ್ಲಿ ಯಕ್ಷ ಶಿಕ್ಷಣ ಆರಂಭಿಸಿದ್ದು, ಕುತ್ಯಾರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಯಕ್ಷಗಾನ ತರಗತಿ ಉದ್ಘಾಟನೆ ದಿನಾಂಕ 02-09-2023 ರಂದು ಜರಗಿತು. ಜ್ಯೋತಿ ಬೆಳಗಿಸಿ ಶುಭ ಕೋರಿದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಇವರು “ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ಶಿಕ್ಷಣವೂ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ.” ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ.ಜಿ.ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ ಎಂ.ಹೆಗಡೆ, ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸೂರ್ಯ ಕುಮಾರ್ ಹಳೆಯಂಗಡಿ, ಉಪಾಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಕುತ್ಯಾರು ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಹಾಗೂ ಯಕ್ಷಗುರು ನಂದಿಕೂರು ರಾಮಕೃಷ್ಣ ಆಚಾರ್ಯ ಉಪಸ್ಥಿತರಿದ್ದರು. ಇಲ್ಲಿ 28 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ ಪಡೆಯುತ್ತಿದ್ದಾರೆ.
ಉಡುಪಿ : ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಉಡುಪಿ ಅಶ್ರಯದಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ (ರಿ.) ಮಂಗಳೂರು ಸಂಯೋಜಿಸುವ ‘ಕಿಶೋರ ನೃತ್ಯ ಪ್ರತಿಭೋತ್ಸವ’ ಕಾರ್ಯಕ್ರಮವು ದಿನಾಂಕ 10-09-2023ರ ಆದಿತ್ಯವಾರ ಸಂಜೆ ಘಂಟೆ 3.30ರಿಂದ ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ.ನಿ.ಬಿ.ವಿಜಯ ಬಲ್ಲಾಳ ಉದ್ಘಾಟಿಸಲಿದ್ದು, ವಿದ್ವಾನ್ ಪಿ.ಕಮಲಾಕ್ಷ ಆಚಾರ್, ವಿದ್ವಾನ್ ಚಂದ್ರಶೇಖರ್ ನಾವಡ, ವಿದ್ವಾನ್ ಸುರೇಶ್ ಅತ್ತಾವರ್ ಉಪಸ್ಥಿತಲಿರುವರು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಯು.ಕೆ.ಪ್ರವೀಣ್, ಕಾರ್ಯದರ್ಶಿಯಾದ ಕೆ.ಸುಧೀರ್ ರಾವ್ ಕೊಡವೂರು ಹಾಗೂ ಪದಾಧಿಕಾರಿಗಳು ಎಲ್ಲರಿಗೂ ಆತ್ಮೀಯ ಸ್ವಾಗತ ಬಯಸಿದ್ದಾರೆ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ‘ಶ್ರೀ ಕೃಷ್ಣ ಸಂಧಾನ’ ಎಂಬ ತಾಳಮದ್ದಳೆಯು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ದಿನಾಂಕ 04-09-2023ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ ಮತ್ತು ಶ್ರೀ ಸತೀಶ್ ಇರ್ದೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಜಯರಾಮ ಭಟ್ ಮತ್ತು ಶ್ರೀ ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಪೂಕಳ ಲಕ್ಷ್ಮೀ ನಾರಾಯಣ ಭಟ್ (ವಿದುರ), ಶ್ರೀ ಭಾಸ್ಕರ ಬಾರ್ಯ (ಶ್ರೀ ಕೃಷ್ಣ), ಶ್ರೀ ಗುಂಡ್ಯಡ್ಕ ಈಶ್ವರ ಭಟ್ (ಕೌರವ) ಮತ್ತು ಶ್ರೀ ಅಚ್ಯುತ ಪಾಂಗಣ್ಣಾಯ ಕೋಡಿಬೈಲು (ಭಾನುಮತಿ) ಸಹಕರಿಸಿದರು. ಈ ಸಂದರ್ಭದಲ್ಲಿ ದೇವಾಲಯದವರು ಹಮ್ಮಿಕೊಂಡ ಏಕಾದಶ ಕೋಟಿ ಜಪ ಯಜ್ಞದ ಪ್ರಯುಕ್ತ ‘ಓಂ ಶ್ರೀ ಮಹಾಲಿಂಗೇಶ್ವರಾಯ ನಮಃ’ ಎಂಬ ಜಪದಲ್ಲಿ ಕಲಾವಿದರೆಲ್ಲ ಪಾಲ್ಗೊಂಡರು. ಶ್ರೀ ರಂಗನಾಥ ರಾವ್ ಬೊಳುವಾರು ಮತ್ತು ಶ್ರೀಮತಿ ಶುಭಾ ಅಡಿಗ ಸಹಕರಿಸಿದರು.
ಬೆಂಗಳೂರು: ದೇಶಹಳ್ಳಿ ಜಿ.ನಾರಾಯಣ ಇವರ 100ನೆಯ ಜನ್ಮದಿನದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 02-09-2023 ರಂದು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರು “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ತ್ರೈವಾರ್ಷಿಕ ಮತ್ತು ಪಂಚವಾರ್ಷಿಕ ಯೋಜನೆಗಳ ಮೂಲಕ ಪರಿಷತ್ತಿನ ಅಭಿವೃದ್ಧಿಗೆ ಕಾರಣೀಕರ್ತರಾಗಿ, ಪರಿಷತ್ತಿನಲ್ಲಿ ಒಂದು ಹೊಸ ಶಕೆ ಪ್ರಾರಂಭಿಸಿದವರು ದೇಶಹಳ್ಳಿ ಜಿ.ನಾರಾಯಣರು. 1969 ರಿಂದ 1978ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀಯುತರು ಕನ್ನಡ ನಾಡು ನುಡಿಗೆ ಅಪಾರ ಸೇವೆಯನ್ನು ಸಲ್ಲಿಸಿದ್ದರು. ಇವರು 1942ರಲ್ಲಿ `ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿʼ ಭಾಗವಹಿಸಿ ಸೆರೆಮನೆ ಸೇರಿದ್ದರು. 1957ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿದ್ದ ನಾರಾಯಣ ಅವರು 1964ರಲ್ಲಿ ಬೆಂಗಳೂರಿನ ಮೇಯರಾಗಿ ಸೇವೆ ಸಲ್ಲಿಸಿದವರು. ಕನ್ನಡ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದ ಅವರು ನಿರಂತರ ಕನ್ನಡ…
ಉಡುಪಿ : ಬೈಲೂರು ಶ್ರೀ ಮಹಿಷಮರ್ದಿನಿ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ತೆಂಕುತಿಟ್ಟು ಯಕ್ಷಗಾನ ಚಂಡೆ ಮದ್ದಳೆ ತರಬೇತಿ ತರಗತಿಯು ದಿನಾಂಕ 22/8/2023 ಮಂಗಳವಾರ ಪ್ರಾರಂಭಗೊಂಡಿತು.ಈ ಕಾರ್ಯಕ್ರಮವನ್ನು ಗಣಪತಿ ಸ್ತುತಿಯೊಂದಿಗೆ ದೀಪ ಬೆಳಗುವುದರ ಮೂಲಕ ಉದ್ಘಾಟಿಸಲಾಯಿತು. ಯಕ್ಷಗಾನ ಮಂಡಳಿಯ ನಿರ್ದೇಶಕರು ಹಾಗೂ ಗುರುಗಳೂ ಆದ ಶ್ರೀ ಮುರಳೀಧರ ಭಟ್, ತರಬೇತಿ ಗುರುಗಳಾದ ಶ್ರೀ ಆನಂದ ಗುಡಿಗಾರ್ ಕೆರ್ವಾಶೆ, ಭಾಗವತರಾದ ಶ್ರೀ ನಕ್ರೆ ನಾಗರಾಜ್ ಭಟ್, ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಶ್ರೀ ಜಯಕರ್ ಬೈಲೂರು, ಕಾರ್ಯದರ್ಶಿ ಶ್ರೀ ವಾದಿರಾಜ ಆಚಾರ್ಯ, ಕೋಶಾಧಿಕಾರಿ ಶ್ರೀ ಮೋಹನ ಆಚಾರ್ಯ, ಸಹ ಕಾರ್ಯದರ್ಶಿ ಶ್ರೀ ಪತಿ ನಾಯಕ್, ಶ್ರೀ ಕಿಶೋರ್.ಸಿ.ಉದ್ಯಾವರ, ರಾಮಕೃಷ್ಣ ಕೊಂಡಂಚ, ನಾರಾಯಣರಾವ್, ಗೌರವಾಧ್ಯಕ್ಷ ಶ್ರೀ ಜಯರಾಮ ಆಚಾರ್ಯ ಹಾಗೂ ಸಂಘದ ಸದಸ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ತರಗತಿಗಳು ಪ್ರತಿ ಮಂಗಳವಾರ ಸಂಜೆ 6.00ರಿಂದ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9844634464, 9481426796 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಮಂಗಳೂರು : ಸ್ವಚ್ಛ ಮಂಗಳೂರು ಫೌಂಡೇಷನ್ ಮತ್ತು ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಂಗಳೂರು ರಾಮಕೃಷ್ಣ ಮಠದ ವಿವೇಕಾನಂದ ಸಭಾಭವನದಲ್ಲಿ ‘ಜಿಜ್ಞಾಸಾ’ : ಸನಾತನ ಚಿಂತನ ಗಂಗಾ : ದ್ವೈಮಾಸ ಮೊದಲ ಸರಣಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 03-09-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ವಿಜ್ಞಾನಿ, ಲೇಖಕ ಮತ್ತು ಸಂಶೋಧಕ ಡಾ. ಆನಂದ್ ರಂಗನಾಥನ್ ಇವರು ‘ಭಾರತ 2047 – ಅವಕಾಶಗಳ ತಾಣ’ ವಿಷಯದ ಕುರಿತು ಉಪನ್ಯಾಸ ನೀಡಿ “ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯುವ ದೇಶವಾಗಿ ಮಾರ್ಪಾಟುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ. ಇಂದು ನಮ್ಮ ಮುಂದೆ ಬೇರೆ ಬೇರೆ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ. ಮುಂದಿನ 25 ವರ್ಷಗಳು ನಿಜಕ್ಕೂ ಭಾರತದ ಇತಿಹಾಸದಲ್ಲಿ ಅಮೃತ ಕಾಲವಾಗಲಿದೆ” ಎಂದು ಹೇಳಿದರು. ಮಂಗಳೂರು ರಾಮಕೃಷ್ಣ…
ಮಂಗಳೂರು : ಶ್ರೀ ಕೃಷ್ಣ ಸೇವಾ ಟ್ರಸ್ಟ್ ಹಾಗೂ ರಜತ ಮಹೋತ್ಸವ ಸಮಿತಿ ಶ್ರೀ ಕೃಷ್ಣ ಮಂದಿರ ಅಶೋಕನಗರ ಇದರ ಆಶ್ರಯದಲ್ಲಿ ಬೆಳ್ಳಿ ಹಬ್ಬ ವರ್ಷಾಚರಣೆಯ ಪ್ರಯುಕ್ತ ‘ಬೆಳ್ಳಿ ಹಬ್ಬದ ಸಂಭ್ರಮ 2023-24’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07-09-2023ರ ಗುರುವಾರ ದಂದು ಮಂಗಳೂರಿನ ಅಶೋಕನಗರದಲ್ಲಿರುವ ಗೋಕುಲ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರು ಮತ್ತು ಯಕ್ಷಗಾನ ಅರ್ಥಧಾರಿಗಳಾದ ಡಾ.ವಿನಾಯಕ ಭಟ್ ಗಾಳಿಮನೆ ಉದ್ಘಾಟಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಾರಾಧನ ಕಲಾಕೇಂದ್ರ ಉರ್ವ ಇದರ ನಿರ್ದೇಶಕಿ ನೃತ್ಯ ವಿದುಷಿ ಶ್ರೀಮತಿ ಸುಮಂಗಲಾ ರತ್ನಾಕರ ರಾವ್ ಮತ್ತು ಬಳಗದವರಿಂದ ‘ಜಾಂಬವತೀ ಕಲ್ಯಾಣ’ ಯಕ್ಷಗಾನ ನಡೆಯಲಿರುವುದು.
ಬಂಟ್ವಾಳ : ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇದರ ಸದಸ್ಯೆಯರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಚಂದ್ರಹಾಸ ಚರಿತ್ರೆ’ ಎಂಬ ಯಕ್ಷಗಾನ ತಾಳಮದ್ದಳೆಯು ದಿನಾಂಕ 08-09-2023ರಂದು ಮಧ್ಯಾಹ್ನ ಗಂಟೆ 2ರಿಂದ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಇಲ್ಲಿ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಹರೀಶ ಬಳಂತಿಮುಗರು, ಚೆಂಡೆಯಲ್ಲಿ ಶ್ರೀ ಸುಬ್ರಹ್ಮಣ್ಯ ಭಟ್ ದೇಲಂತಮಜಲು ಮತ್ತು ಮದ್ದಳೆಯಲ್ಲಿ ಮಾ.ಸಮರ್ಥ ಉಡುಪ. ಮುಮ್ಮೇಳದಲ್ಲಿ ಚಂದ್ರಹಾಸನಾಗಿ ಶ್ರೀಮತಿ ರಾಜಶ್ರೀ ನಾವಡ, ಕಪ್ಪದ ದೂತನಾಗಿ ಶ್ರೀಮತಿ ಸುಲೋಚನ ನಾವಡ, ದುಷ್ಟಬುದ್ಧಿಯಾಗಿ ಶ್ರೀಮತಿ ಸರಸ್ವತಿ ಹೊಳ್ಳ, ವಿಷಯೆಯಾಗಿ ಶ್ರೀಮತಿ ಶ್ರೀಲತಾ ನಾವಡ, ಕುಳಿಂದ ಮತ್ತು ಕಾಳಿಕಾದೇವಿಯಾಗಿ ಶ್ರೀಮತಿ ಜಯಲಕ್ಷ್ಮೀ ಮಯ್ಯ ಮತ್ತು ಮದನನಾಗಿ ಶ್ರೀಮತಿ ಜಯಲಕ್ಷ್ಮೀ ಕಾರಂತ್ ಸಹಕರಿಸಲಿದ್ದಾರೆ.
ಮಂಗಳೂರು : ಕವನ ಸಂಕಲನಗಳಿಗೆ ಲೇಖಕ-ಲೇಖಕಿಯರಿಂದ ಕವನಗಳ ಆಹ್ವಾನ. ಮಂಗಳೂರಿನ ಕಥಾಬಿಂದು ಪ್ರಕಾಶನ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಹಲವು ಸಾಹಿತ್ಯ ಸ್ನೇಹಿ ಯೋಜನೆಗಳನ್ನು ನೀಡುತ್ತಾ ಬಂದಿದೆ. ಈ ವರ್ಷದ ಅಕ್ಟೋಬರ್ 29ರಂದು ಸಂಸ್ಥೆಯ 16ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಿನಪೂರ್ತಿ ಕಾರ್ಯಕ್ರಮವನ್ನು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಪುಸ್ತಕ ಪ್ರಕಟಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಅನ್ವಯ 32 ಪುಟ ಮೀರದ ಸೈಡ್ ಪಿನ್ ಪುಸ್ತಕಗಳನ್ನು ಹೊರ ತರುವ ಗುರಿ ಇಡಲಾಗಿದೆ. ಲೇಖಕರು ಈ ಕೆಳಗಿನ ಒಳ ಹೂರಣವನ್ನು ಕಳಿಸಬೇಕಾಗುತ್ತದೆ. 1. ಒಂದು ಪುಟ ಮೀರದ 30 ಕವನಗಳನ್ನು ವಾಟ್ಸಪ್ ಮುಖಾಂತರ 9341410153 WhatsApp ಗೆ ಸೆಪ್ಟೆಂಬರ್ 20ರ ಒಳಗಾಗಿ ತಲುಪಿಸಬೇಕು. 2. 150 ಶಬ್ದ ಮೀರದ ಲೇಖಕರ ಮಾತು 3. 150 ಶಬ್ದ ಮೀರದ ಮುನ್ನುಡಿ 4. 50 ಶಬ್ಬ ಮೀರದ ಲೇಖಕರ ಪರಿಚಯ ಮತ್ತು ಕಲರ್ ಫೋಟೋ ಇವೆಲ್ಲವನ್ನೂ ಏಕ…