Author: roovari

ನೀರಗೋಡು : ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ಶ್ರೀ ಕದಂಬೇಶ್ವರ ಯಕ್ಷಗಾನ ಕಲಾಪೋಷಕ ಗೆಳೆಯರ ಬಳಗ ನೀರಗೋಡು (ಹರಿಗಾರು) ಇವರ ಸಂಯೋಜನೆಯಲ್ಲಿ ದಿನಾಂಕ 12-03-2024ರಂದು ಸಂಜೆ ಗಂಟೆ 9.30ಕ್ಕೆ ಶ್ರೀ ಕದಂಬೇಶ್ವರ ದೇವಾಲಯ ನೀರಗೋಡು ಇದರ ಬಯಲು ಆವಾರದಲ್ಲಿ ‘ಯಕ್ಷಲೋಕ ವಿಜಯ’ ಮತ್ತು ‘ವೀರ ಬರ್ಭರಿಕ’ ಪೌರಾಣಿಕ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಗೌರವ ಪ್ರವೇಶ ರೂ.500/- ಟಿಕೆಟ್ ದರ 300/-, 200/- ನೆಲ 100/-

Read More

ಕಾಸರಗೋಡು : ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಬೆಳಗಾವಿ ಮತ್ತು ಶಂಪಾ ಪ್ರತಿಷ್ಠಾನ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಆನಂದಕಂದ ಸಾಹಿತ್ಯ ಹಬ್ಬ ಕಾಸರಗೋಡು’ ದಿನಾಂಕ 16-03-2024 ಮತ್ತು 17-03-2024ರಂದು ಕಾಸರಗೋಡಿನ ಚೇವಾರ್ ವಯಾ ಉಪ್ಪಳ, ಕುಡಾಲ್, ಕುಡ್ತಡ್ಕ, ನಿಸರ್ಗ ಧಾಮದಲ್ಲಿ ನಡೆಯಲಿದೆ. ದಿನಾಂಕ 16-03-2024ರಂದು ಬೆಳಿಗ್ಗೆ 10-00 ಗಂಟೆಗೆ ಈ ಕಾರ್ಯಕ್ರಮವು ಲಕ್ಷ್ಮೀಶ ತೊಳ್ಪಾಡಿಯವರಿಂದ ಉದ್ಘಾಟನೆಗೊಳ್ಳಲಿದೆ. ಗೋಷ್ಠಿ 1ರಲ್ಲಿ ‘ಕವಿತೆ ವಾಚನ, ಗಾಯನ ಮನನ’ ಈ ಕಾರ್ಯಕ್ರಮದಲ್ಲಿ ಯು. ಮಹೇಶ್ವರಿ, ಚಂದ್ರಶೇಖರ ವಸ್ತ್ರದ, ಕಲ್ಲಚ್ಚು ಮಹೇಶ, ಸಿ.ಕೆ. ನಾವಲಗಿ ಮತ್ತು ವಿಭಾಶ್ರೀ ಬೆಳ್ಳಾರೆ ಮತ್ತು ಗೋಷ್ಠಿ 2ರಲ್ಲಿ ‘ಕಥೆ ವಾಚನ – ಮನನ’ ಈ ಕಾರ್ಯಕ್ರಮದಲ್ಲಿ ಪ್ರವೀಣ ಪದ್ಯಾಣ, ಮಹಾದೇವ ಹಡಪದ, ವಿಕಾಸ ಹೊಸಮನಿ ಇವರುಗಳು ಭಾಗವಹಿಸಲಿರುವರು. ಗೋಷ್ಠಿ 3ರಲ್ಲಿ ‘ಕನ್ನಡ ವಿಮರ್ಶೆ ಎತ್ತ ಸಾಗಿದೆ ?’ ಈ ಕಾರ್ಯಕ್ರಮದಲ್ಲಿ ಗಿರೀಶ ಭಟ್ಟ ಅಜಕ್ಕಳ, ಬಾಲಕೃಷ್ಣ ಹೊಸಂಗಡಿ ಮತ್ತು ವಿಕಾಸ ಹೊಸಮನಿ ಚರ್ಚೆಯಲ್ಲಿ ಪಾಲ್ಗೊಳ್ಳುವವರು. ಗೋಷ್ಠಿ 4ರಲ್ಲಿ ‘ಹಿರಿಯ…

Read More

ಉಡುಪಿ : ಪೆರ್ಡೂರಿನ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಹಾಗೂ ಮಲ್ಪೆಯ ಮತ್ಸ್ಯರಾಜ್ ಗ್ರೂಪ್ ಸಹಯೋಗದಲ್ಲಿ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನ ದಿ. ತೋಮ ಶ್ಯಾನುಭಾಗ್ ವೇದಿಕೆಯ ‘ತ್ಯಾಗ ಮಂಟಪ’ದಲ್ಲಿ ಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಭಜನಾ ಸ್ಪರ್ಧೆಯು ದಿನಾಂಕ 10-03-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿಯ ಗೌರವಾಧ್ಯಕ್ಷ ಶಾಂತಾರಾಮ ಸೂಡ ಇವರು ಮಾತನಾಡುತ್ತಾ “ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದೆ. ಧಾರ್ಮಿಕ ಕ್ಷೇತ್ರವಾದ ಭಜನೆಯಲ್ಲಿ ಸ್ಪರ್ಧೆಯನ್ನು ಆಯೋಜಿಸುತ್ತಿರುವುದು ಆರೋಗ್ಯಕರ ಬೆಳವಣಿಗೆ. ಇದರಿಂದ ಯುವಜನತೆಯನ್ನು ಭಜನೆಯತ್ತ ಆಕರ್ಷಿಸುವುದರೊಂದಿಗೆ ಭಜನೆಯ ಮಹತ್ವವನ್ನು ಎಲ್ಲೆಡೆ ಪಸರಿಸುವ ಆರೋಗ್ಯಕರ ಬೆಳವಣಿಗೆಯೂ ಮೂಡಿಸಿದಂತಾಗುತ್ತದೆ” ಎಂದು ನುಡಿದರು. ಮತ್ತೋರ್ವ ಮುಖ್ಯ ಅತಿಥಿ ಪ್ರಮೋದ್ ರೈ ಪಳಜೆ ಅವರು ಮಾತನಾಡಿ “ಭಜನಾ ಸ್ಪರ್ಧೆಗಳನ್ನು ಕಳೆದ ಹನ್ನೊಂದು ವರ್ಷಗಳಿಂದ ಪೆರ್ಡೂರಿನಲ್ಲಿ ನಡೆಸುತ್ತಿದ್ದು, ಈ ಸ್ಪರ್ಧೆಯು ಇಂದು ಜಿಲ್ಲಾ ಕೇಂದ್ರದಲ್ಲಿ ಜರಗುತ್ತಿದೆ. ಮುಂದೆ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸುವುದರ ಮೂಲಕ ಉಡುಪಿಯ…

Read More

ಬೈಂದೂರು : ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ‘ಲಾವಣ್ಯ’ದ ‘ರಂಗಪಂಚಮಿ-2024’ ಐದು ದಿನಗಳ ನಾಟಕೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮವು ದಿನಾಂಕ 05-03-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದ ಖ್ಯಾತ ರಂಗ ನಿರ್ದೇಶಕ ಡಾ. ಜೀವನ್‌ರಾಂ ಸುಳ್ಯ “ಅಭಿವೃದ್ಧಿಯ ನೆಪದಲ್ಲಿ ಜಲ, ವಾಯು, ಭೂಮಿಯ ಮೇಲೆ ಜನರು ಪ್ರಹಾರ ಮಾಡುತ್ತಿದ್ದು, ಆ ಮೂಲಕ ನಮ್ಮೊಳಗಿನ ಸಂಬಂಧಗಳು ಬೇರ್ಪಡುತ್ತಾ ಹೋಗುತ್ತಿದೆ. ಆದರೆ ರಂಗಭೂಮಿಯ ಮೂಲಕ ‘ಲಾವಣ್ಯ’ವು ಸಂಬಂಧವನ್ನು ಗಟ್ಟಿಮಾಡುವ ಪ್ರಯತ್ನ ಮಾಡುತ್ತಿದೆ. ಕಲಾವಿದರು ದೇಶದ ಸಾಂಸ್ಕೃತಿಕ ಸ್ವತ್ತಾಗಿದ್ದು, ಒಂದು ಊರಿನಲ್ಲಿ ಕಲಾವಿದರ ಸಂಖ್ಯೆ ಗರಿಷ್ಠವಾಗಿದ್ದರೆ ಅದು ಶ್ರೀಮಂತವಾದ ಊರಾಗಿರುತ್ತದೆ. ಕಳೆದ 46 ವರ್ಷಗಳಿಂದ ಹಲವು ತ್ರಾಸದಾಯಕ ಪರಿಸ್ಥಿತಿಯನ್ನು ಎದುರಿಸಿಯೂ, ತಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ, ಪರಸ್ಪರ ವಿಶ್ವಾಸದಿಂದ ಮುನ್ನೆಡೆದುಕೊಂಡು ಹೋಗುತ್ತಿರುವುದಲ್ಲದೇ, ಈ ಭಾಗದ ಜನರಿಗೆ ಮನೋರಂಜನೆಯೊಂದಿಗೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿದೆ” ಎಂದು ಶ್ಲಾಘಿಸಿದರು. ‘ಲಾವಣ್ಯ’ದ ಹಿರಿಯ ಸದಸ್ಯ ಸದಾಶಿವ ಶ್ಯಾನುಭೋಗ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಂಚೆ ಸೇವಕ ಶಂಕರ ನಾಯ್ಕ್ ಹಾಗೂ ಚಲನಚಿತ್ರ…

Read More

ಸೋಮವಾರಪೇಟೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಆಯೋಜಿಸಿರುವ 3 ದಿನಗಳ ‘ಮಕ್ಕಳ ಸಾಹಿತ್ಯ ಸಂಭ್ರಮ’ ದಿನಾಂಕ 04-03-2024 ರಂದು ಸೋಮವಾರಪೇಟೆಯ ಚನ್ನಬಸಪ್ಪ ಸಭಾಂಗಣದಲ್ಲಿ ಉದ್ಘಾಟಣೆಗೊಂಡಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಮಾತನಾಡಿ “ಮಕ್ಕಳಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಇದೊಂದು ಕಲಿಕೆಗೆ ಪೂರಕ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಪಠ್ಯದೊಂದಿಗೆ ಪತ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಬೇಕಾಗಿದೆ. ಚಿಕ್ಕಂದಿನಿಂದಲೇ ಮಕ್ಕಳು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು.” ಎಂದರು. ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯರಾದ ಸೌಭಾಗ್ಯ ಬೇಲೂರು ಮಾತನಾಡಿ “ಸಾಹಿತ್ಯಾಭಿರುಚಿಯನ್ನು ಬೆಳೆಸಿ ಮಕ್ಕಳನ್ನು ಗ್ರಂಥಾಲಯದ ಕಡೆಗೆ ಸೆಳೆಯುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಮುಂದಿನ ವರ್ಷ ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ನಡೆಯಲಿದೆ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿ. ಇ. ಒ. ಭಾಗ್ಯಮ್ಮ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ…

Read More

ಶಿರ್ವ : ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಐದನೆಯ ಸಾಹಿತ್ಯ ಸಮ್ಮೇಳನದ ಸವಿನೆನಪಿನ ಸ್ಮರಣ ಸಂಚಿಕೆ ‘ಕಡಲು’ ಇದರ ಲೋಕಾರ್ಪಣೆ ಸಮಾರಂಭವು ದಿನಾಂಕ 01-03-2024ರಂದು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ “ಕನ್ನಡ ಪರಿಶುದ್ಧವಾದ ಶ್ರೀಮಂತ ಭಾಷೆಯಾಗಿದ್ದು, ಬರೆದ ಹಾಗೆಯೇ ಓದುವ ಭಾಷೆಯಾಗಿದೆ. ಅಲ್ಪಪ್ರಾಣ, ಮಹಾಪ್ರಾಣದಲ್ಲಿ ವ್ಯತ್ಯಾಸ ಆದರೂ ಬೇರೆಯೇ ಅರ್ಥವನ್ನು ಕೊಡುತ್ತದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಹಾಗೂ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸ ಆಗಬೇಕು.” ಎಂದು ನುಡಿದರು. ಕಸಾಪ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ “ಹೊಸ ತಾಲೂಕುಗಳ ರಚನೆಯ ಬಳಿಕ ಸತತ ಐದು ಸಾಹಿತ್ಯ ಸಮ್ಮೇಳನಗಳನ್ನು ನಡೆಸಿದ ರಾಜ್ಯದ ಏಕೈಕ ತಾಲೂಕು ಕಾಪು ಆಗಿದ್ದು, ವೈಶಿಷ್ಟ್ಯಪೂರ್ಣ ಕಾಲಮಿತಿಯ ಸಾಹಿತ್ಯ ಚಟುವಟಿಕೆಗಳು ಜಿಲ್ಲೆಗೆ ಮಾದರಿಯಾಗಿದೆ.” ಎಂದು ಹೇಳಿದರು. ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಐದನೆಯ…

Read More

ಕಾಸರಗೋಡು : ಕಾಸರಗೋಡಿನ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಇದರ ಸಂಗೀತ ಘಟಕ ‘ಸ್ವರ ಚಿನ್ನಾರಿ’, ಮಹಿಳಾ ಘಟಕ ‘ನಾರಿ ಚಿನ್ನಾರಿ’ಯು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ಏರ್ಪಡಿಸುವ ಸಂತವಾಣಿ ಕಾರ್ಯಕ್ರಮ ‘ಕಾಯೋ ಕರುಣಾಕರಾ…’ ದಿನಾಂಕ 17-03-2024ನೇ ಆದಿತ್ಯವಾರ ಕಾಸರಗೋಡಿನ ಕರಂದಕಾಡಿನಲ್ಲಿರುವ ಪದ್ಮಗಿರಿ ಕಲಾ ಕುಟೀರದಲ್ಲಿ ನಡೆಯಲಿದೆ. ಖ್ಯಾತ ನೇತ್ರ ತಜ್ಞರಾದ ಡಾ. ಅನಂತ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಖ್ಯಾತ ವೈದ್ಯರಾದ ಡಾ. ಕೆ. ಕೆ. ಶ್ಯಾನ ಭೋಗ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನದ ಆಡಳಿತ ಮುಕ್ತೇಸರರಾದ ಕೆ. ಜಗದೀಶ್ ಕಾಮತ್ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಅಂತರಾಷ್ಟ್ರೀಯ ಖ್ಯಾತಿಯ ಗಾಯಕ ಹಾಗೂ ಪ್ರಸಾರ ಭಾರತೀ ಹಿಂದೂಸ್ಥಾನೀ ಸಂಗೀತ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ‘ಯುವ ಕಲಾಮಣಿ’ ಪ್ರಶಸ್ತಿ ವಿಜೇತ ಬಾಲಚಂದ್ರ ಪ್ರಭು ಕಾರ್ಯಕ್ರಮ ನಡೆಸಿಕೊಡಲಿದ್ದು, ಇವರಿಗೆ ತಬ್ಲಾದಲ್ಲಿ ರಾಜೇಶ್ ಭಾಗವತ್ ಹಾಗೂ ಹಾರ್ಮೋನಿಯಮ್ ನಲ್ಲಿ ಹೇಮಂತ್ ಭಾಗವತ್ ಸಾಥ್…

Read More

ಕೋಟಾ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕಥೆ ಕವನ ರಚನೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇರಣೆ ಎಂಬ ವಿನೂತನ ಕಾರ್ಯಕ್ರಮವು ದಿನಾಂಕ 02-03-2024ರ ಶನಿವಾರದಂದು ಸಾಲಿಗ್ರಾಮದ ಕಾರ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ.ಉಪೇಂದ್ರ ಸೋಮಯಾಜಿ ಚಿತ್ರಪಾಡಿ, ಕಸಾಪ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಸಾಪ ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಗುಂಡ್ಮಿ ರಾಮಚಂದ್ರ ಐತಾಳ, ಕಸಾಪ ಕೋಟ ಹೋಬಳಿ ಅಧ್ಯಕ್ಷರಾದ ಅಚ್ಯುತ ಪೂಜಾರಿ ಹಾಗೂ ಕಾವಯತ್ರಿಯಾದ ಸವಿತಾ ಶಾಸ್ತ್ರಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಪಿ. ಸ್ವಾಗತಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣ್ ಅಡಿಗ ಉಪಸ್ಥಿತರಿದ್ದರು.

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 11-03-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ಕುಮಾರಿ ಶ್ರೀಕರೀ ಮಂಗಳೂರು ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಶ್ರೀಕರೀಯು ಹೊಸಬೆಟ್ಟು ರಾಮದಾಸ್ ಹೆಚ್. ಮತ್ತು ಶ್ರೀಲತಾ ಅವರ ಜೇಷ್ಠ ಪುತ್ರಿ. ಮಂಗಳೂರಿನ ಸನಾತನ ನಾಟ್ಯಾಲಯದಲ್ಲಿ ನೃತ್ಯಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಅವರಲ್ಲಿ 13 ವರ್ಷಗಳಿಂದ ಭರತನಾಟ್ಯವನ್ನು ಕಲಿಯುತ್ತಿದ್ದಾಳೆ. ಪ್ರಸ್ತುತ ಪೂರ್ವ ವಿದ್ವತ್ ಅಭ್ಯಾಸ ಮಾಡುತ್ತಿದ್ದಾಳೆ. ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದಿರುವ ಇವರು ಕೆನರಾ ಪಿ.ಯು. ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ. ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ಪದವೀದರೆ, ಕೀ ಬೋರ್ಡ್ ಮತ್ತು ಪಿಟೀಲು ಕಲಿಯುತ್ತಿದ್ದಾರೆ.…

Read More

ತೆಕ್ಕಟ್ಟೆ : ಕೈಲಾಸ ಕಲಾ ಕ್ಷೇತ್ರ ಟ್ರಸ್ಟ್ ಮತ್ತು ಯಶಸ್ವೀ ಕಲಾ ವೃಂದ (ರಿ.) ಕೊಮೆ ಇದರ ವತಿಯಿಂದ ‘ರಜಾ ರಂಗು 2024’ ಬೇಸಿಗೆ ಶಿಬಿರವನ್ನು ದಿನಾಂಕ 11-04-2024ರಿಂದ 05-05-2024ರವರೆಗೆ ಬೆಳಿಗ್ಗೆ 9ರಿಂದ ಸಂಜೆ 5ರ ತನಕ ತೆಕ್ಕಟ್ಟೆಯ ಜ್ಞಾನ ವಸಂತ ಪ್ರಕೃತಿ ಪಾಠ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮಕ್ಕಳ ಬೇಸಿಗೆ ಶಿಬಿರವು ರೋಹಿತ್ ಎಸ್. ಬೈಕಾಡಿ ಮತ್ತು ಶ್ರೀಶ ಭಟ್ ಚುಕ್ಕಾಣಿಯಲ್ಲಿ ನಡೆಯಲಿದ್ದು, 8ರಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ ವೈದ್ಯ 9945947771 ಮತ್ತು ಶ್ರೀಶ ತೆಕ್ಕಟ್ಟೆ 8073998079 ಇವರನ್ನು ಸಂಪರ್ಕಿಸಬಹುದು. ವಿಶೇಷತೆಯನ್ನೇ ಸಾಧಿಸುತ್ತಾ ಬಂದ ಸಂಸ್ಥೆ ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಏನೆಲ್ಲಾ ಕಲಿಸಲು ಸಾಧ್ಯ. ಹೆಚ್ಚು ಹೆಚ್ಚು ಕಲಿಸಬೇಕು. ಮಕ್ಕಳು ಸಂಭ್ರಮಿಸಬೇಕು. ಸಂಪೂರ್ಣ ಬಾಲ್ಯ ದೊರಕಬೇಕು. ಆಡುತ್ತ, ನಲಿಯುತ್ತಾ ಕಲಿಯಬೇಕು. ಮುಂದೊಂದು ಸಂದರ್ಭದಲ್ಲಿ ಇದನ್ನೆಲ್ಲಾ ನೆನಪಿಸಿ ಸಂತಸ ಪಡುವ ಶಿಬಿರ ನಮ್ಮದಾಗಬೇಕೆಂಬ ಹುಡುಕಾಟದಲ್ಲಿದ್ದೇವೆ. ನಿಮ್ಮ ನಿಮ್ಮವರ ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕವೂ ನೀವು…

Read More