Subscribe to Updates
Get the latest creative news from FooBar about art, design and business.
Author: roovari
ಉಡುಪಿ : ನಿಟ್ಟೂರು ಪ್ರೌಢಶಾಲೆಯ ಸನಿಹದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ 60 ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ತರಬೇತಿಯು ದಿನಾಂಕ 21-08-2023ರಂದು ಆರಂಭಗೊಂಡಿತು. ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಮಾಜಿ ಶಾಸಕರೂ ಆದ ಶ್ರೀ ಕೆ.ರಘುಪತಿ ಭಟ್ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, “ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಕರಾವಳಿಯ ಅಪೂರ್ವಕಲೆ ಯಕ್ಷಗಾನವನ್ನು ಅಭ್ಯಾಸ ಮಾಡಿ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಮಾಜಕ್ಕೆ ಆಸ್ತಿಯಾಗಬೇಕೆಂಬುದು ಯಕ್ಷಶಿಕ್ಷಣದ ಆಶಯ. ಅಂತರಾಷ್ಟ್ರೀಯ ಖ್ಯಾತಿಯ ಸಂಜೀವ ಸುವರ್ಣರು ಗುರುಗಳಾಗಿ ಲಭ್ಯವಾದದ್ದು ವಿದ್ಯಾರ್ಥಿಗಳ ಭಾಗ್ಯ” ಎಂದು ಸಂತಸ ವ್ಯಕ್ತಪಡಿಸಿದರು. . ಸಭೆಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಎಸ್.ವಿ. ಭಟ್, ಶಿಕ್ಷಕರಾದ ಎಚ್.ಎನ್.ಶೃಂಗೇಶ್ವರ, ಸೀಮಾ, ಅಶೋಕ ಎಂ. ಹಳೆ ವಿದ್ಯಾರ್ಥಿಗಳಾದ ಪಿ.ದಿನೇಶ್ ಪೂಜಾರಿ, ಡಾ. ಪ್ರತಿಮಾ ಜಯಪ್ರಕಾಶ್ ಆಚಾರ್ಯ, ಹರೀಶ್ ಆಚಾರ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿ,ವಸತಿ ನಿಲಯದ ಮೇಲ್ವಿಚಾರಕರಾದ ಮಂಜುನಾಥ ರಾವ್ ಧನ್ಯವಾದ ಸಲ್ಲಿಸಿದರು.
ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಬರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಅಧ್ಯಾಯವು ‘ಕರಾವಳಿ ಕರ್ನಾಟಕದಲ್ಲಿ ರಾಕ್ ಆರ್ಟ್’ (ಬಂಡೆ ಚಿತ್ರ) ಕುರಿತು ಪ್ರೊ. ಮುರುಗೇಶಿ ಟಿ. ಅವರ ಉಪನ್ಯಾಸವನ್ನು ಶನಿವಾರ 19-8-2023ರಂದು ಸಂಜೆ 6:00 ಗಂಟೆಗೆ ನಗರದ ಪಶ್ಚಿಮ ಕೊಡಿಯಾಲ್ಗುತ್ತಿನ ಬಂಗಾರುಗುತ್ತು ರಸ್ತೆಯಲ್ಲಿರುವ ಕೊಡಿಯಾಲ್ ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಆಯೋಜಿಸಿತು. ಪ್ರೊ. ಮುರುಗೇಶಿ ಅವರು ಪ್ರಸಿದ್ಧ ಸಂಶೋಧಕರು ಮತ್ತು ಈ ಪ್ರದೇಶದಲ್ಲಿನ ಇತಿಹಾಸ ಪೂರ್ವದ ಬಂಡೆ ಚಿತ್ರಗಳ ಬಗ್ಗೆ ಅನುಭವಿ ಪರಿಣತರು. ಅವರು ಇತ್ತೀಚೆಗೆ ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಪ್ರೊ.ಮುರುಗೇಶಿಯವರು ಯುವ ಉಪನ್ಯಾಸಕರಾಗಿದ್ದಾಗ ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥರಾಗಿದ್ದ ದಿವಂಗತ ಡಾ.ಬಿ.ವಸಂತ ಶೆಟ್ಟಿಯವರು ನೀಡಿದ ಪ್ರೋತ್ಸಾಹವನ್ನು ತಮ್ಮ ಭಾಷಣದಲ್ಲಿ ನೆನಪಿಸಿಕೊಂಡರು. “ಡಾ.ವಸಂತ ಶೆಟ್ಟಿಯವರು ಈ ಪ್ರದೇಶದ ಪುರಾತತ್ವ ಶಾಸ್ತ್ರದ…
ಮಂಗಳೂರು : ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ಘಟಕವು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದೊಂದಿಗೆ ಜಂಟಿಯಾಗಿ ಆಯೋಜಿಸಿದ ‘ಕಡಲ ಕಿನಾರೆಯಲ್ಲಿ ವರ್ಷವೈಭವ, ಖ್ಯಾತ ಸಾಹಿತಿ ಭುವನೇಶ್ವರಿ ಹೆಗಡೆಯವರೊಂದಿಗೆ ಸಂವಾದ ಮತ್ತು ಕವಿಗೋಷ್ಠಿ’ ಕಾರ್ಯಕ್ರಮವು ದಿನಾಂಕ 19-08-2023ರಂದು ಜರಗಿತು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಕಾರ್ಯದರ್ಶಿ ಡಾ.ಮುರಲಿ ಮೋಹನ ಚೂಂತಾರು ಇವರ ಕಡಲ ಕಿನಾರೆಯ ಪ್ರಕೃತಿ ರಮಣೀಯ ಪರಿಸರದ ‘ಕನಸು’ ಮನೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಮಂಜುನಾಥ ಎಸ್.ರೇವಣ್ಕರ್ ವಹಿಸಿದ್ದರು. “ಹಾಸ್ಯ ಸಾಹಿತಿಗೆ ಪಂಥ ಇಲ್ಲ. ಹಾಸ್ಯ ಎಂದರೆ ಅಪಹಾಸ್ಯ ಅಲ್ಲ. ಬಡವರನ್ನು, ಅಂಗವಿಕಲರನ್ನು, ಹುಚ್ಚರನ್ನು, ಜಾತಿಗಳನ್ನು ಹಾಸ್ಯ ಮಾಡಬಾರದು. ಏನೇನೋ ಕಲ್ಪಿಸಿ ಸಾಹಿತ್ಯ ಬರೆಯುವುದು ನನಗೆ ಸೇರದು. ನಮ್ಮ ಸಮಾಜದಲ್ಲಿರುವ ಸ್ವಭಾವ ವೈಚಿತ್ರ್ಯಜನರನ್ನು ಗಮನಿಸುತ್ತ ಹಾಸ್ಯವನ್ನು ಮಾತ್ರ ನಾನು ಬರೆದೆ. ಜನರು ನಕ್ಕು ಹಗುರಾಗಬೇಕು. ಕಷ್ಟಗಳನ್ನು ಮರೆತು ನಗದಿದ್ದರೆ ಬದುಕು ಮುಂದುವರಿಯದು. ಅದಕ್ಕಾಗಿ ನಾನು ನಲಿವನ್ನು…
ಮಂಗಳೂರು : ಎಲ್ಲೂರು ಶ್ರೀನಿವಾಸ್ ರಾವ್ ಸಂಗೀತ ನಿರ್ದೇಶನದ ಥಂಡರ್ ಕಿಡ್ಸ್ ತಂಡದ ಮಕ್ಕಳು ಹಾಡಿದ ಹಾಡುಗಳ ಬಿಡುಗಡೆ ಸಮಾರಂಭವು ಕೆನರಾ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 20-08-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕರಾವಳಿ ಲೇಖಕಿಯರ ವಾಚಿಕಿಯರ ಸಂಘದ ಅಧ್ಯಕ್ಷೆಯಾದ ಡಾ.ಜ್ಯೋತಿ ಚೇಳ್ಯಾರು ಮಾತನಾಡುತ್ತಾ “ಮಕ್ಕಳನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಿಕವಾಗಿ ಕಟ್ಟುವ ಕೆಲಸ ಇಂದು ಅಗತ್ಯವಾಗಿ ಆಗಬೇಕಾಗಿದೆ. ನಮ್ಮ ಮಣ್ಣಿನ, ನಮ್ಮ ನೆಲದ ಗುಣಗಳನ್ನು ಮಕ್ಕಳು ಆವಾಹಿಸಿಕೊಂಡಾಗಲೇ ಅವರಿಗೆ ನಮ್ಮ ಸಂಸ್ಕೃತಿಯ ಅರಿವು ಉಂಟಾಗಿ ಬದುಕನ್ನು ಪ್ರೀತಿಸುವ ಕಲೆ ಸಿದ್ಧಿಸುತ್ತದೆ” ಎಂದರು. ಇದೇ ಸಂದರ್ಭದಲ್ಲಿ ಕುಶಾಲಾಕ್ಷಿ ವಿ.ಕುಲಾಲ್, ಕಣ್ವತೀರ್ಥ ಅವರ ‘ತಗೊರಿ ಮಿತ್ತ್ ದ ಮಣ್ಣ್’ ತುಳು ಅನುವಾದಿತ ಕವನಗಳ ಸಂಕಲನವನ್ನು ಅವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಶ್ರೀಮತಿ ಸುಮಂಗಲ ರಾವ್ ಥಂಡರ್ ಕಿಡ್ಸ್ ನ ಮಕ್ಕಳನ್ನು ಸನ್ಮಾನಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ…
ಮಂಗಳೂರು : ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೋಶದ ಆಶ್ರಯದಲ್ಲಿ ‘ಕಲೋತ್ಸವ 2023’ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯು ಕಾಲೇಜಿನ ಎಲ್.ಎಫ್. ರಸ್ಕೀನ್ಹಾ ಸಭಾಂಗಣದಲ್ಲಿ ದಿನಾಂಕ 18-08-2023ರಂದು ನಡೆಯಿತು. ಮುಖ್ಯ ಅತಿಥಿಯಾಗಿದ್ದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಭರತನಾಟ್ಯ ಕಲಾವಿದ ಮೋಹನ್ ರಾಜ್ ಮಾತನಾಡಿ, ಕಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ತಾವು ಕಲಾರಂಗದಲ್ಲಿ ನಡೆದು ಬಂದ ತಮ್ಮ ಸಾಧನೆಗಳನ್ನು ತೆರೆದಿಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಮಾತನಾಡಿ, “ಸಂತ ಅಲೋಶಿಯಸ್ ಕಾಲೇಜು ಮಕ್ಕಳ ಕಲಾಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು” ಎಂದರು. ಕಾಲೇಜಿನ ಕುಲಸಚಿವ, ಡಾ. ಆಲ್ವಿನ್ ಡೇಸಾ, ವಿದ್ಯಾರ್ಥಿ ಸಂಘದ ನಾಯಕ ಕ್ರಿಸ್ಟನ್ ಜೋಶುವಾ ಮಿನೇಜಸ್ ಉಪಸ್ಥಿತರಿದ್ದರು. ಲೆನ್ವಿನ್ ಕಾರ್ಲ್ ನಿರೂಪಿಸಿದರು. ವಿದ್ಯಾರ್ಥಿ ಚಟುವಟಿಕೆ ಕೋಶದ ಡೀನ್ ಡಾ. ಈಶ್ವರ ಭಟ್ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಕಲೋತ್ಸವ 2023ರ ಬಗ್ಗೆ ವಿವರಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ…
ಮಂಗಳೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ‘ಗಡಿನಾಡ ಕನ್ನಡ ಉತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ’ ದಿನಾಂಕ 26-08-2023 ಶನಿವಾರ ಬೆಳಿಗ್ಗೆ 9.00ರಿಂದ ತಲಪಾಡಿಯ ವಿಶ್ವಾಸ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9.00ರಿಂದ ಮಂಗಳೂರಿನ ಪಜೀರು, ನೃತ್ಯ ಲಹರಿ ನಾಟ್ಯಾಲಯದ ನೃತ್ಯಗುರು ವಿದುಷಿ ಶ್ರೀಮತಿ ರೇಷ್ಮಾ ನಿರ್ಮಲ್ ಭಟ್ ಇವರ ಶಿಷ್ಯ ವೃಂದದವರಿಂದ ‘ನೃತ್ಯ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಇವರಿಂದ ಉದ್ಘಾಟನೆಗೊಳ್ಳುವ ಈ ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ವಹಿಸಲಿರುವರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕೆ.ಎಂ. ಆಶ್ರಫ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ಮುಲ್ಲೈ ಮುಗಿಲನ್ ಇವರುಗಳು ವಿಶೇಷ ಅಭ್ಯಾಗತರಾಗಿ ಭಾಗವಹಿಸುತ್ತಾರೆ. ಘಂಟೆ 11.30ಕ್ಕೆ ಗಡಿನಾಡಿನ ಸಮಸ್ಯೆ – ಸವಾಲುಗಳು ಇದರ ಬಗ್ಗೆ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿ. ಬಿ.ಎಸ್.ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಜಿಲ್ಲೆಯ ಹಿರಿಯ ಸಾಹಿತಿಗಳು ಪತ್ರಕರ್ತರು ಶಕ್ತಿ ದಿನ ಪತ್ರಿಕೆಯ ಸಂಸ್ಥಾಪಕರು ಆಗಿದ್ದ ಬಿ.ಎಸ್. ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅವರ ಪುತ್ರ ಬಿ.ಜಿ. ಅನಂತಶಯನ ಈ ದತ್ತಿ ಸ್ಥಾಪಿಸಿದ್ದು, ಕೊಡಗು ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕಥೆಯನ್ನು ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ರಚಿಸತಕ್ಕದ್ದು. ಕಥೆ ಬರೆದು ಸಲ್ಲಿಸಲು ದಿನಾಂಕ 28-08-2023 ಕೊನೆಯ ದಿನವಾಗಿದ್ದು ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್.ಜಿ.ಆರ್.ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಸಂಪರ್ಕಿಸಲು ದೂರವಾಣಿ ಸಂಖ್ಯೆ: ಎಂ.ಪಿ.ಕೇಶವ ಕಾಮತ್, ಅಧ್ಯಕ್ಷರು 94483 46276, ಎಸ್.ಐ. ಮುನೀರ್ ಅಹಮದ್ ಗೌರವ ಕಾರ್ಯದರ್ಶಿ 98861 81613 ಮತ್ತು ಶ್ರೀಮತಿ ರೇವತಿ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕತೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಕಥಾ ಸ್ಪರ್ಧೆ ಕೊಡಗು ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯು ಗುರುವಾರ ದಿನಾಂಕ 24.08.2023ರಂದು 10.30 ಗಂಟೆಗೆ ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಥಾಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕಥಾ ರಚನೆ ಮಾಡುವ ಕುರಿತು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಸೌಮ್ಯ ಪೊನ್ನಪ್ಪ ನಡೆಸಲಿದ್ದಾರೆ. ಸಣ್ಣ ಕಥೆಗಳ ರಚನಾಕ್ರಮದ ಕುರಿತು ಜಿಲ್ಲೆಯ ಹಿರಿಯ ಸಾಹಿತಿ ಶ್ರೀ ಗಿರೀಶ್ ಕಿಗ್ಗಾಲು ಇವರು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್, ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಆರ್.ಪಿ. ಚಂದ್ರಶೇಖರ್, ಸರ್ಕಾರಿ ಪದವಿ ಪೂರ್ವ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ವತಿಯಿಂದ ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ ಡಿಸೋಜಾರವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಾ ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕಥೆ ರಚನಾ ವಿಧಾನದ ಕುರಿತು ಉಪನ್ಯಾಸವು ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ದಿನಾಂಕ 25-08-2023ರ ಶುಕ್ರವಾರ ಸಮಯ 10.30 ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವ ಕಾಮತ್ ವಹಿಸಿಕೊಳ್ಳಲಿದ್ದು, ಉದ್ಘಾಟನೆಯನ್ನು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕರಾದ ಪುಟ್ಟರಾಜುರವರು ನೆರವೇರಿಸಲಿದ್ದಾರೆ. ಕತೆ ರಚನೆ ಕುರಿತು ಉಪನ್ಯಾಸವನ್ನು ಸಾಹಿತಿ ಶ್ರೀಮತಿ ಸುನೀತಾ ಕುಶಾಲನಗರ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ…
ಮುಂಬೈ : ಕರ್ನಾಟಕ ಸೇವಾ ಸಂಘ ಮೋಹನೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದಲ್ಲಿ ದಿನಾಂಕ 18-08-2023ರಂದು ಆರ್.ಎಸ್.ಡೈರಿ ಫಾರ್ಮ್ ಮೋಹನೆ ಬಳಿಯ ದಿ.ರಾಜೀವಿ ಪದ್ಮನಾಭ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸಂಚಾಲಕತ್ವದಲ್ಲಿ ತವರೂರ ನಾಮಾಂಕಿತ ಕಲಾವಿದರಿಂದ ‘ಸ್ವಾಮಿ ಕೊರಗಜ್ಜ’ ತುಳು ತಾಳಮದ್ದಳೆಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸೇವಾ ಸಂಘ (ರಿ.) ಮೋಹನೆ, ಕಲ್ಯಾಣ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಶಿಮುಂಜೆ ಪರಾರಿಯವರು ಮಾತನಾಡುತ್ತಾ “ಕರಾವಳಿಯ ಯಕ್ಷಗಾನ ಕಲೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ವಿಶೇಷವಾಗಿ ತುಳುನಾಡಿನಲ್ಲಿ ನಮ್ಮ ಹಿರಿಯರು ಅದನ್ನು ಪೋಷಿಸಿಕೊಂಡು ಬಂದಿದ್ದಾರೆ. ಮುಂಬೈಯಲ್ಲಿ ನೆಲೆಯೂರಿದ ನಾವೆಲ್ಲ ಇಲ್ಲಿ ಹುಟ್ಟಿ ಬೆಳೆದ ಮಕ್ಕಳಿಗೆ ತುಳು ಸಂಸ್ಕೃತಿ ಮತ್ತು ಯಕ್ಷಗಾನದ ಸೊಗಡನ್ನು ಪರಿಚಯಿಸುವ ಮೂಲಕ ಆ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ” ಎಂದು ಹೇಳಿದರು. ಸಂಘದ ಗೌರವಾಧ್ಯಕ್ಷ ದಯಾಶಂಕರ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸೇವಾ ಸಂಘದ…