Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರ ಹೆಬ್ರಿ ಇವರ ಸಹಯೋಗದೊಂದಿಗೆ ‘ದತ್ತಿ ಉಪನ್ಯಾಸ’ ಹಾಗೂ ‘ಓದುವ ಬೆಳಕು’ ಕಾರ್ಯಕ್ರಮ ದಿನಾಂಕ 18-11-2023ರಂದು ಹೆಬ್ರಿಯ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದಲ್ಲಿ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ತಿಂಗಳ ಸಡಗರ ಕಾರ್ಯಕ್ರಮದಲ್ಲಿ ಅಂಬಲಪಾಡಿ ಜಾನಕಿ ವ್ಯಾಸ ಬಲ್ಲಾಳ ದತ್ತಿ ಹಾಗೂ ಶ್ರೀ ಸದಾನಂದ ಸುವರ್ಣ ದತ್ತಿ ಉಪನ್ಯಾಸವು ಅ.ಪೊಳಲಿ ಬಾಲಕೃಷ್ಣ ಶೆಟ್ಟಿ ಮತ್ತು ಡಾ.ಶಿವರಾಮ ಕಾರಂತ ಬದುಕು ಮತ್ತು ಬರಹ ಎಂಬ ಎರಡು ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಮೃತ ಭಾರತಿ ಪ್ರೌಢಶಾಲೆ ಹೆಬ್ರಿ ಇಲ್ಲಿಯ ಕನ್ನಡ ಅಧ್ಯಾಪಕರಾದ ಮಹೇಶ್ ಹೈಕಾಡಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯದ ಅರಿವು ಕೇಂದ್ರದ ವತಿಯಿಂದ ನಡೆಸಲಾದ ‘ಓದುವ ಬೆಳಕು’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾವು ಓದಿದ ಮೆಚ್ಚಿನ…
ಮಡಿಕೇರಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ದಿನಾಂಕ 17-11-2023ರಂದು ಹಾಕತ್ತೂರು ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಬಿ.ಆರ್. ಸಾಯಿನಾಥ್’ ಮತ್ತು ತ್ರಿಭಾಷಾ ಸಾಹಿತಿ ಮುಲ್ಲೇಂಗಡ ದಿ. ಬೇಬಿ ಚೋಂದಮ್ಮ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇ ಗೌಡ ಇವರು ಉದ್ಘಾಟಿಸಿ ಮಾತನಾಡುತ್ತಾ “ಶಾಲೆಗಳಿಗೆ ಸಾಹಿತ್ಯವನ್ನು ಕೊಂಡೊಯ್ದು ವಿದ್ಯಾರ್ಥಿಗಳನ್ನು ಸಾಹಿತ್ಯಾಸಕ್ತರನ್ನಾಗಿ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಪ್ರತಿಯೊಂದು ಶಾಲೆಗಳಲ್ಲಿ ವ್ಯವಸ್ಥಿತವಾಗಿ ನಡೆಯಬೇಕು” ಎಂದು ನುಡಿದರು. ಕೊಡಗಿನ ಮಹಿಳಾ ಸಾಹಿತ್ಯದಲ್ಲಿ ಕಥೆಗಾರ್ತಿ ಗೌರಮ್ಮ ಅವರ ಸಾಧನೆಯ ಕುರಿತು ಮಾತನಾಡಿ, “ನಂಜನಗೂಡು ತಿರುಮಲಾಂಬಾ ಕಲ್ಯಾಣಮ್ಮನವರ ಸಮಕಾಲೀನರಾಗಿ ಗೌರಮ್ಮನವರು ಬರೆದ ಪುಸ್ತಕಗಳು ಇಂದು ಓದುಗರ ಮನದಲ್ಲಿ ಅಚ್ಚಳಿಯದೆ ಉಳಿದಿವೆ. ಹತ್ತನೇ ಶತಮಾನದ ಕವಿ ನಾಗವರ್ಮ 15ನೇ ಶತಮಾನದ ಜೈನ ಕವಿ ದೇವಪ್ಪ ರೆ.ಫಾ.ಕಿಟಲ್ ಅನಂತರ ಪಂಜೆ ಮಂಗೇಶರಾಯರು, ಭಾರತೀಸುತರು,…
ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಶ್ರೀಹರಿ ಚರಿತ್ರೆ’ ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023 ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ದಿನಾಂಕ 19-11-2023ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಮಾತನಾಡುತ್ತಾ “ಯಕ್ಷಗಾನ ಹಲವು ರೋಗಗಳಿಗೆ ಔಷಧ ರೂಪದಲ್ಲಿ ಪರಿಣಾಮ ಬೀರುತ್ತದೆ. ಯಕ್ಷಗಾನ ವೀಕ್ಷಣೆಯಿಂದ ಮಾನಸಿಕ ಒತ್ತಡ ದೂರವಾಗಿ ನೆಮ್ಮದಿ ಪಡೆಯಬಹುದು. ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ “ಇಂದಿನ ಪೀಳಿಗೆ ಮೊಬೈಲ್ ವೀಕ್ಷಣೆಗೆ ಸಮಯ…
ಕಾಸರಗೋಡು : ಕಾಸರಗೋಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ರಂಗ ಚಿನ್ನಾರಿಯ ಅಂಗ ಸಂಸ್ಥೆಯಾದ ನಾರಿ ಚಿನ್ನಾರಿಯ ಹನ್ನೊಂದನೆಯ ಸರಣಿ ಕಾರ್ಯಕ್ರಮವು ದಿನಾಂಕ 19-11-2023ರಂದು ಚತುರ್ಭಾಷೆಗಳ ನಾರಿಯರ ಸಮ್ಮಿಲನದ ‘ರಸ ಪಯಸ್ವಿನಿ’ ಪದ್ಮಗಿರಿ ಕಲಾಕುಟೀರ ಕರಂದಕ್ಕಾಡಿನಲ್ಲಿ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಸಂಪನ್ನಗೊಂಡಿತು. ಪ್ರಪ್ರಥಮವಾಗಿ ಕಾಸರಗೋಡಿನ ನಾಲ್ಕು ಭಾಷೆಗಳ ಮಹಿಳೆಯರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಲೆತು ಸಂಭ್ರಮಿಸಿದರು. ಈ ವಿಶಿಷ್ಟ ಕಾರ್ಯಕ್ರಮವನ್ನು ಹಿರಿಯ ಲೇಖಕಿ, ವಿಶ್ರಾಂತ ಪ್ರಾಧ್ಯಾಪಕಿ ಡಾ. ಪ್ರಮೀಳಾ ಮಾಧವ್ (ಕನ್ನಡ), ಸಂಶೋಧಕಿ, ಸಾಹಿತಿ, ಕುಶಾಲಾಕ್ಷಿ ಕುಲಾಲ್ (ತುಳು), ಗಾಯಕಿ, ಗೃಹಿಣಿ ಮಾಯಾ ಮುಕುಂದ ರಾಜ್ (ಕೊಂಕಣಿ), ಸಮಾಜ ಸೇವಕಿ, ಮಾನವ ಹಕ್ಕು ಸಂರಕ್ಷಣಾ ಸಮಿತಿ ಅಧ್ಯಕ್ಷೆ ಜುಲೇಖಾ ಮಾಹಿನ್ (ಮಲಯಾಳ) ಜತೆಗೂಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಪ್ರಮೀಳಾ ಮಾಧವ್ “ನಾಲ್ಕು ಭಾಷೆಗಳ ಅಕ್ಕತಂಗಿಯರೆಲ್ಲ ಸೇರಿ ಸಂತೋಷಗೊಳ್ಳುವ ಸಂದಭ೯ವನ್ನು ಮೊದಲ ಬಾರಿಗೆ ಸೃಷ್ಟಿಸಿದ ನಾರಿಚಿನ್ನಾರಿಯ ಹೆಜ್ಜೆಯನ್ನು ಶ್ಲಾಘಿಸಿದರು. ಹೆಣ್ಣು ಮಕ್ಕಳ ಕುರಿತಾಗಿ ಇರುವ ಅನೇಕ ಪೂವಾ೯ಗ್ರಹಗಳು ಕಡಿಮೆಯಾಗಿವೆ.…
ವಿರಾಜಪೇಟೆ : ಮೊಗರಗಲ್ಲಿಯಲ್ಲಿ ಸಾಧಿಕ್ ಆರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕಲಾ ಉತ್ಸವ ಕೊಡಗು -2023’ ವರ್ಣಚಿತ್ರಗಳು, ಶಿಲ್ಪಗಳು, ಅನುಸ್ಥಾಪನ ಕಲೆ, ಛಾಯಾಗ್ರಹಣ ಇವುಗಳ ತಯಾರಿಕೆ ಮತ್ತು ಪ್ರದರ್ಶನವು ದಿನಾಂಕ 11-11-2023ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವು ದಿನಾಂಕ 31-12-2023ರ ತನಕ ನಡೆಯಲಿದೆ. ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಈ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿ “ಕೊಡಗು ರಮ್ಯ ಪರಿಸರದ, ಪ್ರಕೃತಿ ಸೊಬಗಿನ ನಾಡು. ಇದು ಕಲಾವಿದರಿಗೆ ಸ್ಫೂರ್ತಿ ನೀಡುತ್ತದೆ. ಇದನ್ನೇ ಕುಂಚದಲ್ಲಿ ಅರಳಿಸಿದರೆ ಉತ್ತಮ ಕಲಾ ಚಿತ್ರ ಮೂಡಿ ಬರುತ್ತದೆ. ಆದ್ದರಿಂದ ಕಲಾವಿದರಿಗೆ ಒತ್ತಾಸೆ ನೀಡುವಂತಹ ತಾಣಗಳನ್ನು ಆರಿಸಿ ಚಿತ್ರಕಲಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಕಲೆ, ಸಾಹಿತ್ಯಕ್ಕೆ ಕೊಡಗು ಮರುಭೂಮಿಯಂತೆ. ವಿದ್ಯಾವಂತರಿದ್ದರೂ ಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಬರುವುದಿಲ್ಲ ಹಾಗೂ ಪ್ರೋತ್ಸಾಹ ನೀಡುವುದಿಲ್ಲ. ಕಲಾವಿದರಿಗೆ ಪ್ರೋತ್ಸಾಹ ನೀಡಿ ವೇದಿಕೆ ಒದಗಿಸಬೇಕು” ಎಂದು ಅಭಿಪ್ರಾಯಪಟ್ಟರು. ಕೊಡಗು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್…
ಗದಗ : ಲಕ್ಷ್ಮೇಶ್ವರದ ಕಲಾ ವೈಭವ ಸಾಂಸ್ಕೃತಿಕ ವಿವಿದೋದ್ದೇಶ ಸಂಸ್ಥೆಯು ಒಂದು ದಿನದ ಭರತನಾಟ್ಯ ಕಾರ್ಯಗಾರವನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿತ್ತು. ಯುವ ಭರತನಾಟ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ದಿನಾಂಕ 19-11-2023ರಂದು ಈ ಕಾರ್ಯಕ್ರಮವನ್ನು ನಡೆಸಿಕೊಂಡರು. ಸಂಸ್ಥೆಯ ನಿರ್ದೇಶಕಿಯಾಗಿರುವ ಯುವ ಭರತನಾಟ್ಯ ಕಲಾವಿದೆ ಕು. ಭವ್ಯ.ಎಸ್ ಕತ್ತಿ ಇವರ ಶಿಷ್ಯರು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು. ಇದು ಮಂಜುನಾಥ್ ಇವರ 77ನೇ ಕಾರ್ಯಾಗಾರವಾಗಿದೆ.
ಶಿವಮೊಗ್ಗ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ. ಸುರೇಶ ನೆಗಳಗುಳಿ ಇವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಿನಾಂಕ 19-11-2023ದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ.ಹೆಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ ಹೊನ್ಕಲ್, ಮಂಗಳೂರಿನ ನ್ಯಾಯವಾದಿ ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ. ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ, ಲತಾ ಎಂ.ಕೆ. ತುರುವೇಕೆರೆ, ಜೆ.ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ…
ಸಕಾರಾತ್ಮಕ ಚಿಂತನೆಗಳು ಮಾತ್ರ ನಮ್ಮನ್ನು ಗುರಿಯಡೆಗೆ ತಲುಪಿಸುವುದಿಲ್ಲ, ಅದರೊಂದಿಗೆ ಕಠಿಣ ಪರಿಶ್ರಮವೂ ಬೇಕು ಎಂಬ ಮಾತಿದೆ. ಬಹುಶ: ನಂದಾವರ ದಂಪತಿಗಳಲ್ಲಿ ಇಂದು ಇಂತಹ ಕಠಿಣ ಪರಿಶ್ರಮವು ಜೊತೆಗಿತ್ತು ಎಂದರೆ ತಪ್ಪಾಗಲಾರದು. ಸುಂದರಿ ಮತ್ತು ವಾಮನ ಮೇಷ್ಟ್ರ ಹಿರಿಯ ಮಗಳಾಗಿ ದಿನಾಂಕ 21-11-1950ರಲ್ಲಿ ನಮ್ಮೆಲ್ಲರ ಪ್ರೀತಿಯ ಕೆ.ವಿ. ಚಂದ್ರಕಲಾ ಮೇಡಂ ಜನಿಸಿದರು. ಮುನಿಸಿಪಲ್ ಹಾಯರ್ ಪ್ರೈಮರಿ ಶಾಲೆ, ಕಾಪಿಕಾಡು ಇಲ್ಲಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮುಗಿಸಿ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಬೆಸೆಂಟ್ ಬಾಲಿಕಾ ಪ್ರೌಢಶಾಲೆ ಕೊಡಿಯಾಲ್ ಬೈಲಿನಲ್ಲಿ ಪೂರೈಸಿದರು. ಪದವಿ ಪೂರ್ವ ಶಿಕ್ಷಣವನ್ನು ನಗರದ ಸರಕಾರಿ ಕಾಲೇಜಿನಲ್ಲಿ ಪಡೆದ ಇವರು ನಂತರ ಹಿಂದಿ ರಾಷ್ಟ್ರಭಾಷಾ ಪ್ರವೀಣ ಪರೀಕ್ಷೆಯಲ್ಲಿ ದ್ವಿತೀಯ ಶ್ರೇಣಿ ಹಾಗೂ ಸಂಸ್ಕೃತ ಕೋವಿದ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡರು. ಮೈಸೂರು ವಿಶ್ವವಿದ್ಯಾನಿಲಯದ ಎರಡು ವರ್ಷದ ಕನ್ನಡ ಡಿಪ್ಲೋಮಾ ಪದವಿಯನ್ನು ಮೂರನೇಯ ರ್ಯಾಂಕಿನೊಂದಿಗೆ ಉತ್ತಿರ್ಣರಾದ ನಂತರ ಬಜ್ಪೆಯ ಹೋಲಿ ಫ್ಯಾಮಿಲಿ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ವೃತ್ತಿಗೆ ಸೇರಿಕೊಂಡರು. ಮಂಗಳ ಗಂಗೋತ್ರಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಕನ್ನಡ…
ಕಟೀಲು : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ ದಿನಾಂಕ 18-11-2023ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. “ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ, ಶ್ರೀಮಂತ ಕಲೆಯಾದ ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ದೊಡ್ಡದು. ಅವರು ಸದಾ ಅಭಿನಂದನೀಯರು. ಅಂತಹ ಕಲಾವಿದರನ್ನು ಗೌರವಿಸುವುದು ಸ್ತುತ್ಯರ್ಹ” ಎಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಕಲಾವಿದರಾದ ಚಿದಂಬರಬಾಬು, ಕೋಟ ಗೋವಿಂದ ಉರಾಳ, ಮುಂಡ್ಕೂರು ವಸಂತ ಶೆಟ್ಟಿ, ತೀರ್ಥಹಳ್ಳಿ ಶಿವಶಂಕರ ಭಟ್, ಸಿದ್ದಾಪುರ ಸಂಜೀವ ಕೊಠಾರಿ, ಸೀತೂರು ಅನಂತಪದ್ಮನಾಭ ರಾವ್, ಕವ್ವಾಳೆ ಗಣಪತಿ ರಾಮಚಂದ್ರ ಭಾಗ್ವತ, ಮಂದಾರ್ತಿ ರಘುರಾಮ ಮಡಿವಾಳ, ಕೋಡಿ ವಿಶ್ವನಾಥ ಗಾಣಿಗ, ಸಿದ್ದಾಪುರ ಅಶೋಕ್ ಭಟ್, ಗುಣವಂತೆ ಸುಬ್ರಾಯ ನಾರಾಯಣ ಭಂಡಾರಿ, ಚೋರಾಡಿ ವಿಠಲ ಕುಲಾಲ್, ಎರ್ಮಾಳು ವಾಸುದೇವ ರಾವ್, ಈಚಲಕೊಪ್ಪ ಪ್ರಭಾಕರ ಹೆಗಡೆ, ಮಧೂರು ರಾಧಾಕೃಷ್ಣ ನಾವಡ, ಪಡುಬಿದ್ರೆ ರತ್ನಾಕರ ಆಚಾರ್ಯ,…
ಮಂಗಳೂರು : ಸುರತ್ಕಲ್ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ದಿನಾಂಕ 18-11-2023ರಂದು ಜರಗಿದ ತುಳು ಕೂಟ (ರಿ) ಕುಡ್ಲದ ಬಂಗಾರ್ ಪರ್ಬ ವೈಭವ ಸರಣಿ -09ರ ‘ತುಳುವೆರೆ ತುಡರ ಪರ್ಬೊ’ ಕಾರ್ಯಕ್ರಮವನ್ನು ಅಗರಿ ಶ್ರೀ ರಾಘವೇಂದ್ರ ರಾವ್ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ “ತುಳುವಿನಲ್ಲಿ ಪರಂಪರಾನುಗತ ತುಳು ಮಾತನಾಡಲು ಕಷ್ಟವಾದರೂ ನಾವು ಸಮಯ – ಸಂದರ್ಭದಲ್ಲಿ ತುಳು ಭಾಷೆಯನ್ನಾಡಲೇ ಬೇಕಾಗುತ್ತದೆ. ಕೆಲವೊಮ್ಮೆ ತಪ್ಪಿದರೂ ಅದನ್ನು ತಿದ್ದಿಕೊಂಡು ತುಳು ನಮ್ಮದು ಎಂಬ ವಿಶೇಷ ಮಮತೆಯಿಟ್ಟು ಬೆಳಸೋಣ” ಎಂಬ ಸಂದೇಶವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸನ್ನಿಧೀಸ್ ಹೋಟೆಲ್ಸ್ (ಪ್ರೈ) ಲಿ. ಇದರ ಜನರಲ್ ಮ್ಯಾನೇಜರ್ ಶ್ರೀ ಭಾಸ್ಕರ ಸಾಲ್ಯಾನರು “ನಾವು ತುಳುವರೆಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವಾದರೂ ನಾವು ಭಾಷೆಯನ್ನು ಅಷ್ಟಾಗಿ ದುಡಿಸಿಕೊಂಡಿಲ್ಲ. ಎಷ್ಟೇಷ್ಟೋ ಕವಿಗಳು, ಸಾಹಿತಿಗಳು ಬೆಳೆದರೂ ಭಾಷೆ ಹಿಂದುಳಿದಿದೆ. ನಾವು ಗ್ರಾಂಥಿಕವಾದ ತುಳು ಮಾತನಾಡಲು ಅಸಾಧ್ಯವಾದರೂ ನಮ್ಮ ಮನೆಯ ಭಾಷೆಯಾಗಿ ತುಳುವನ್ನು ಸ್ವೀಕರಿಸಬೇಕು. ಖಂಡಿತಾ ದೈನಂದಿನ ಚಟುವಟಿಕೆಗಳಲ್ಲಿ, ಪರಸ್ಪರ ಸಂಭಾಷಣೆಗಳಲ್ಲಿ ತುಳು…