Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಸಭಾ ಮಂದಿರದಲ್ಲಿ ಶ್ರೀಮತಿ ಲಕ್ಷ್ಮೀದೇವಿ ಮತ್ತು ಎಸ್.ರಾಮಚಂದ್ರ ಬಾಯರ್ ದತ್ತಿ, ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಹಾಗೂ ಶ್ರೀಮತಿ ನಿಂಗಮ್ಮ ಹುಚ್ಚೇಗೌಡ ಕೋಡಿಹೊಸಹಳ್ಳಿ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 04-8-2023ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಹಿ.ಚಿ.ಬೋರಲಿಂಗಯ್ಯನವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ತನ್ನದೇ ಆದ ಮಹತ್ವವನ್ನು ಹೊಂದಿದೆ. ನಿಜವಾದ ಸಾಧಕರಿಗೆ ಯೋಗ್ಯ ಪ್ರಶಸ್ತಿಗಳು ಲಭ್ಯವಾಗುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಿಷ್ಟೆಯಿಂದ ಕೆಲಸ ಮಾಡುತ್ತಿದೆ. ನಮ್ಮ ದೇಶದಲ್ಲಿ ಅತಿಹೆಚ್ಚು ಜನಪದ ಕಲಾ ಪ್ರಾಕಾರಗಳು ಇವೆ. ನಮ್ಮ ನಾಡಿನಲ್ಲಿ ಬರೋಬರಿ 184 ಅಧಿಕೃತ ಕಲಾ ಪ್ರಾಕಾರಗಳನ್ನು ದಾಖಲಿಸಲಾಗಿದೆ. 21 ಜನಪದ ಮಹಾಕಾವ್ಯಗಳು ಪ್ರಕಟಗೊಂಡಿವೆ. ಆದರೂ ಕನ್ನಡ ನಾಡಿನಲ್ಲಿ ಬಹುತೇಕ ಜನಪದ ಕಲೆಗಳು ನಾಪತ್ತೆಯಾಗುವ ಹಂತಕ್ಕೆ ಬಂದಿವೆ. ಮೂಡಲಪಾಯ ಶೇ.99ರಷ್ಟು ನಾಪತ್ತೆಯಾಗಿದೆ.” ಎಂದು ಕಳವಳ ವ್ಯಕ್ತ ಪಡಿಸಿದರು. ಪ್ರಶಸ್ತಿ ಪ್ರದಾನ ಮಾಡಲು ಆಗಮಿಸಿದ…
ಮಂಗಳೂರು : ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ದ.ಕ. ಇದರ ವತಿಯಿಂದ ದಿನಾಂಕ 30-07-2023ರಂದು ‘ಭಾವೈಕ್ಯ ಸಮ್ಮಿಲನ’ದಲ್ಲಿ ಕವಿಗೋಷ್ಠಿ, ಸಾಧಕ ಸನ್ಮಾನ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮವು ಜೆರೊಸಾ ಹೈಸ್ಕೂಲ್ ಎದುರು ಜೆಪ್ಪು ಚರ್ಚ್ ಪ್ರಾಂಗಣದ ಮರಿಯಾ ಸಭಾ ಭವನದಲ್ಲಿ ದಿನಪೂರ್ತಿ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಭಾವೈಕ್ಯತಾ ಪರಿಷತ್ ಅಧ್ಯಕ್ಷರಾದ ಶ್ರೀ ಕೆ.ಎಂ. ಇಖ್ಬಾಲ್ ಬಾಳಿಲರವರು ಮಾತನಾಡುತ್ತಾ “ಭಾವೈಕ್ಯತೆ ಭಾರತ ದೇಶದ ಪರಂಪರಾಗತ ಸಂಸ್ಕೃತಿ ಮತ್ತು ಜೀವಾಳವಾಗಿದ್ದು ಅವರವರ ಧರ್ಮಾಚರಣೆಯನ್ನು ಚಾಚೂ ತಪ್ಪದೆ ಮಾಡಿದರೆ ಬದುಕು ಸಾರ್ಥಕ್ಯವನ್ನು ಪಡೆಯುತ್ತದೆ. ಸಾಹಿತ್ಯಕ್ಕೆ ಜನರನ್ನು ಒಗ್ಗೂಡಿಸುವ ಅದ್ಭುತ ಶಕ್ತಿಯಿದ್ದು ಕವಿಗಳು, ಲೇಖಕರು, ಸಾಹಿತಿಗಳು ನಾಡನ್ನು ಕಟ್ಟಲು ಪರಸ್ಪರ ಒಂದಾಗಬೇಕಾದ ಅನಿವಾರ್ಯತೆಯಿದೆ. ಭವ್ಯ ಭಾರತ ದೇಶವು ಸೌಹಾರ್ದತೆಯ ತಳಹದಿಯಲ್ಲಿ ಸಾಗಿ ಬಂದಿದ್ದು, ಕರ್ನಾಟಕ ಹಿಂದಿನಿಂದಲೂ ಭಾವೈಕ್ಯತೆಗೆ ಹೆಸರುವಾಸಿಯಾಗಿದೆ. ಎಲ್ಲಾ ವರ್ಗದ ಜನರೂ ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಸಹಬಾಳ್ವೆ ನಡೆಸುವ ಭವ್ಯ ಪರಂಪರೆಯ ಇತಿಹಾಸ ಭಾರತದ ವೈಶಿಷ್ಟ್ಯತೆಗಳಲ್ಲೊಂದಾಗಿದ್ದು ಮಹಾನ್ ತ್ಯಾಗಿವರ್ಯರುಗಳ ಪರಿಶ್ರಮದ ಫಲವಾಗಿ…
ಮಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಕ್ವಿಜಿಂಗ್ ಫೌಂಡೇಶನ್ ವತಿಯಿಂದ ಆಗಸ್ಟ್ 13ರಂದು ಪಾಂಡೇಶ್ವರ ಫಿಜಾ ಬೈ ನೆಕ್ಸಸ್ ಮಾಲ್ನಲ್ಲಿ ‘ಅಲ್ಟಿಮೇಟ್ ಇಂಡಿಯಾ ರಸಪ್ರಶ್ನೆ’ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಶಾಲಾ ಮಕ್ಕಳಿಗಾಗಿ (10ನೇ ತರಗತಿಯವರೆಗೆ) ಮತ್ತು ಮುಕ್ತ ಹೀಗೆ ಎರಡು ವಿಭಾಗದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ಗಂಟೆಗೆ ಮತ್ತು ಸಾರ್ವಜನಿಕರಿಗೆ ಅಪರಾಹ್ನ 2 ಗಂಟೆಗೆ ಸ್ಪರ್ಧೆ ನಡೆಯಲಿದೆ. ರಸ ಪ್ರಶ್ನೆಯು ಭಾರತಕ್ಕೆ ಕೇಂದ್ರೀಕೃತವಾಗಿದೆ. ಎರಡೂ ವಿಭಾಗದಲ್ಲೂ ಮುಕ್ತ ಪ್ರವೇಶವಿದೆ. ರಸ ಪ್ರಶ್ನೆ ಇಂಗ್ಲಿಷ್ನಲ್ಲಿ ನಡೆಯಲಿದ್ದು, ಮೊದಲಿಗೆ ಲಿಖಿತ ಸುತ್ತು ನಡೆಯಲಿದೆ. ಆಯ್ಕೆಯಾದ ಮೊದಲ 6 ತಂಡಗಳು ಅಂತಿಮ ಸ್ಪರ್ಧೆಗೆ ಅರ್ಹತೆ ಪಡೆಯಲಿವೆ. ಫೈನಲ್ನಲ್ಲಿ ‘ಪೆಹಚಾನ್ ಕೌನ್’, ‘ಹಿಟ್ ಲಿಸ್ಟ್ ಕ್ರಾಸ್ ಕನೆಕ್ಷನ್’ ಮತ್ತು ‘ತೂ ತೂ ಮೈಮೈ’ನಂತಹ ಆಸಕ್ತಿದಾಯಕ ಸುತ್ತಗಳಿವೆ. ಸಾರ್ವಜನಿಕರ ವಿಭಾಗದಲ್ಲಿ ಮೊದಲ ಮೂರು ತಂಡಗಳಿಗೆ ಒಟ್ಟು ರೂ.50,000/- ಮೌಲ್ಯದ ನಗದು ಬಹುಮಾನ ದೊರೆಯಲಿದ್ದು, ಶಾಲಾ ರಸಪ್ರಶ್ನೆ ವಿಭಾಗದಲ್ಲಿ ವಿಜೇತರಿಗೆ 30 ಸಾವಿರ ರೂ.…
ಮಂಗಳೂರು : ಹಿರಿಯ ಸಾಹಿತಿ ಡಾ.ವಾಮನ ನಂದಾವರ ಅವರ ಬಹುಮಾನಿತ ‘ಸಿಂಗದನ’ ಕೃತಿಯ ಮೂರನೇ ಮುದ್ರಣವನ್ನು ನಗರದ ಬಲ್ಲಾಳ್ ಬಾಗ್ನ ಪತ್ತುಮುಡಿ ಸೌಧದಲ್ಲಿ ದಿನಾಂಕ 05-08-2023ರಂದು ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ನಿಕಟಪೂರ್ವ ಯೋಜನ ನಿರ್ದೇಶಕ ಡಾ. ಬಿ. ಶಿವರಾಮ ಶೆಟ್ಟಿ ಬಿಡುಗಡೆಗೊಳಿಸಿದರು. ಅವರು ಮಾತನಾಡುತ್ತಾ “ನಮಗೆ ಸಂಶೋಧನೆಯ ಬದಲು, ಸಂಶೋಧನ ವಿಷಯದ ಆಯ್ಕೆ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಾಹಿತಿ ಡಾ. ವಾಮನ ನಂದಾವರ ಅವರ ‘ಸಿಂಗದನ’ ಪುಸ್ತಕ ಜಾನಪದ ಸಂಶೋಧನೆಗೆ ದಿಕ್ಕೂಚಿ ಕೃತಿ. ಸಂಶೋಧನಾರ್ಥಿಗಳಿಗೆ ಬೇಕಾಗುವ ಅನೇಕ ಸಂಗತಿಗಳನ್ನು ಈ ಕೃತಿ ಹೊಂದಿದೆ. ನಮ್ಮತನವನ್ನು ತೋರಿಸುವ ಪ್ರಯತ್ನ, ದೇಸೀಯತೆ, ಸಾಂಸ್ಕೃತಿಕ ನೆಲೆಯಲ್ಲಿ ತುಳುವಿನ ವಿವೇಚನ ಮಾಡುವ ಚಿಂತನೆ ಈ ಪುಸ್ತಕದಲ್ಲಿ ಕಾಣಬಹುದು. ‘ಸಿಂಗದನ’’ ಕೃತಿಗೆ ಮೂರನೇ ಮರುಹುಟ್ಟು ಪ್ರಾಪ್ತವಾಗಿದೆ. 104 ಪುಟಗಳನ್ನು ಹೊಂದಿದ ಅಷ್ಟದಳದ ನಾಲ್ಕು ಲೇಖನವನ್ನು ಈ ಪುಸ್ತಕ ಹೊಂದಿದೆ. ಈ ನೆಲದ ತೌಳವ ಸಂಸ್ಕೃತಿ, ಭೂತಾರಾಧನೆಯ ಹುಟ್ಟು, ಪ್ರಸರಣ, ಮಡಿವಾಳ ಜಾತಿಗೆ…
ಮಂಗಳೂರು : ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಕಲ್ಲಾಪು ಬಳಿಯ ‘ಕದಿಕೆ’ ತುಳುಚಾವಡಿಯಲ್ಲಿ ‘ಆಷಾಢದ ಆಶಯ’ ಸಂವಾದ ಕಾರ್ಯಕ್ರಮ ದಿನಾಂಕ 03-08-2023ರಂದು ಜರಗಿತು. ಪ್ರತಿಷ್ಠಾನದ ಪ್ರಧಾನ ಸಂಚಾಲಕರಾದ ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿಯವರು ಮಾತನಾಡುತ್ತಾ “ಸೂರ್ಯ ಹಾಗೂ ಚಂದ್ರರ ಚಲನೆಯನ್ನು ಅನುಸರಿಸಿ ಅವರವರ ಪದ್ಧತಿಯಂತೆ ಕಾಲದ ಪರಿಗಣನೆ ನಡೆಯುತ್ತದೆ. ತುಳುವರ ಆಟಿ ಆಚರಣೆಗಳು ಚಾಂದ್ರಮಾನ ಪದ್ಧತಿಯ ಆಷಾಢ ತಿಂಗಳಿಗೆ ಅನ್ವಯಿಸುವುದಿಲ್ಲ. ಆದ್ದರಿಂದ ಆಟಿ ಆಟಿಯೇ; ಅದನ್ನು ಆಷಾಢವೆಂದು ತಿಳಿಯುವುದು ಸರಿಯಲ್ಲ. ಪ್ರತೀ ಸಂಕ್ರಾಂತಿಯ ಮರುದಿನದಿಂದ ಸೌರಮಾನಿಗಳ ಹೊಸ ತಿಂಗಳು ಆರಂಭವಾದರೆ ಹುಣ್ಣಿಮೆ – ಅಮಾವಾಸ್ಯೆಗಳ ತಿಥಿಯನ್ನನುಸರಿಸಿ ಚಾಂದ್ರಮಾನಿಗಳು ತಿಂಗಳ ಲೆಕ್ಕಾಚಾರ ಮಾಡುತ್ತಾರೆ.” ಎಂದವರು ವಿಶ್ಲೇಷಿಸಿದರು. ಪದಾಧಿಕಾರಿಗಳಾದ ಪಿ.ಡಿ.ಶೆಟ್ಟಿ, ಲಕ್ಷ್ಮೀನಾರಾಯಣ ರೈ ಹರೇಕಳ, ಲಾಲಿತ್ಯ, ವಿಷ್ಣುಸ್ಮರಣ್ ರೈ, ವಿಜಯಲಕ್ಷ್ಮಿ ಬಿ. ಶೆಟ್ಟಿ, ನಮಿತಾ ಶಾಮ್, ಸುಮಾ ಪ್ರಸಾದ್, ಗೀತಾ ಜ್ಯುಡಿತ್ ಮಸ್ಕರೇನ್ಹಸ್,…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಶವಂತ ಚಿತ್ತಾಲರ 95ನೆಯ ಜನ್ಮ ದಿನದ ಹಿನ್ನೆಯಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮ ದಿನಾಂಕ 03-08-2023ರಂದು ನಡೆಯಿತು. ಚಿತ್ತಾಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು “ಕನ್ನಡ ಕಥಾಲೋಕಕ್ಕೆ ಬಹಳ ದೊಡ್ಡ ಕೊಡುಗೆಯನ್ನು ನೀಡಿದ ಯಶವಂತ ಚಿತ್ತಾಲರು. ಅದುವರೆಗೂ ಕನ್ನಡ ಸಾಹಿತ್ಯಕ್ಕೆ ಅಪರಿಚಿತವಾಗಿದ್ದ ಕಾರ್ಪೂರೇಟ್ ಲೋಕದ ಅನುಭವವನ್ನು ಪರಿಚಯಿಸಿದವರು. ಹನೇಹಳ್ಳಿಯ ಹುಲುಸಾದ ಅನುಭವವನ್ನು ಮತ್ತು ಮುಂಬೈ ಮಾಯಾನಗರಿಯ ಆತಂಕಗಳನ್ನು ತಮ್ಮ ವಿಶಿಷ್ಟ ಕಥನದ ಮೂಲಕ ಹಿಡಿದಿಟ್ಟ ಚಿತ್ತಾಲರು ಕನ್ನಡ ಸಾಹಿತ್ಯ ಲೋಕದ ಸೀಮೆಯನ್ನು ವಿಸ್ತರಿಸಿದರು. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಇರುವ ಸಣ್ಣ ಊರು ಹನೇಹಳ್ಳಿಯಲ್ಲಿ ದಿನಾಂಕ 03-08-1928 ರಂದು ಹುಟ್ಟಿ ಬೆಳೆದವರು ಯಶವಂತ ವಿಠೋಬಾ ಚಿತ್ತಾಲರು. ಕುಮಟಾ, ಧಾರವಾಡ, ಮುಂಬಯಿ, ನ್ಯೂಜರ್ಸಿ (ಅಮೆರಿಕಾ)ಗಳಲ್ಲಿ ಓದು ಮುಗಿಸಿದ ಇವರು ರಸಾಯನ ವಿಜ್ಞಾನದ ಶಾಖೆಯಾದ ಪಾಲಿಮಾರ್ ತಂತ್ರಜ್ಞಾನದಲ್ಲಿ ತಜ್ಞತೆಯ ಸಂಪಾದನೆಯ ಜೊತೆಗೆ ಮುಂಬಯಿ ವಿಶ್ವವಿದ್ಯಾನಿಲಯದ ಪ್ಲ್ಯಾಸ್ಟಿಕ್ ವಿಭಾಗದಲ್ಲಿ…
ಮಂಗಳೂರು : ಕಲಾಶ್ರೀ ಕುಸಾಲ್ದ ಕಲಾವಿದೆರ್ ಕುಡ್ಲ-ಬೆದ್ರ ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಈ ವರ್ಷದ ಹೊಸ ನಾಟಕದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 11-08-2023ರ ಸಂಜೆ 5.00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಅತಿಥಿ ಅಭ್ಯಾಗತರ ಸಮ್ಮುಖದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ರಮೇಶ್ ಮಿಜಾರ್ ಸಾರಥ್ಯದ ಸಂದೀಪ್ ಶೆಟ್ಟಿ ರಾಯಿ ರಚಿಸಿ, ನಟಿಸಿ, ನಿರ್ದೇಶಿಸಿದ ಸುಧಾಕರ್ ಶೆಟ್ಟಿ ಬೆದ್ರ ಇವರ ಸಂಗೀತವಿರುವ ‘ನಾಲಾಯಿ ಮಗುರುಗಿ’ ತುಳು ಹಾಸ್ಯಮಯ ಪ್ರಶಸ್ತಿ ವಿಜೇತ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕದಲ್ಲಿ ಕಲಾವಿದರಾಗಿ ಕಾಮಿಡಿ ಎಕ್ಸ್ ಪ್ರೆಸ್ ಖ್ಯಾತಿಯ ಪ್ರವೀಣ್ ಮರ್ಕಮೆ, ಬಲೆ ತೆಲಿಪಾಲೆ ಖ್ಯಾತಿಯ ಸಂದೀಪ್ ಶೆಟ್ಟಿ ರಾಯಿ, ನಿರಂಜನ್ ಎಸ್. ಕೊಂಡಾಣ, ಮನೀಷ್ ಉಪ್ಪಿರ, ಪೃಥ್ವಿನ್ ಪೊಳಲಿ, ಹೊನ್ನಯ ಅಮೀನ್,ಪ್ರಭಾಕರ್ ಕರ್ಕೇರ, ಪ್ರತೀಕ್ ಸಾಲಿಯಾನ್, ಸವ್ಯರಾಜ್ ಕಲ್ಲಡ್ಕ, ದಿನೇಶ್ ಕುದ್ಕೊಳ್ಳಿ, ಸೂರಜ್ ಪೂಂಜ, ಶ್ರೀಮತಿ ಅಶ್ವಿನಿ ಹಾಗೂ ಕುಮಾರಿ ಭಾಮಿತಾ ಅಭಿನಯಿಸಲಿದ್ದಾರೆ.
ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ‘ಮಳೆ ಹಾಡುಗಳ ಕಲರವ’ ಕಾರ್ಯಕ್ರಮವು ದಿನಾಂಕ 12-08-2023ನೇ ಶನಿವಾರ ಪೂರ್ವಾಹ್ನ 11-00ರಿಂದ ನಡೆಯಲಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಶ್ರೀನಾಥ ರೈ ಬಾಳಿಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ ಉಪಸ್ಥಿತರಿರುವರು. ಸುಳ್ಯದ ಭಾವನಾ ಸುಗಮ ಸಂಗೀತ ಬಳಗ (ರಿ.) ಇದರ ಶ್ರೀ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಕ.ಸಾ.ಪ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ‘ಮಳೆ ಹಾಡುಗಳ ಕಲರವ’ ಕಾರ್ಯಕ್ರಮವು ದಿನಾಂಕ 09-08-2023ನೇ ಬುಧವಾರ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲದಲ್ಲಿ ಪೂರ್ವಾಹ್ನ 11.00ರಿಂದ ನಡೆಯಲಿದೆ. ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಸಂಚಾಲಕರಾದ ಶ್ರೀ ಪಿ.ಜಿ.ಎಸ್.ಎನ್.ಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಯಶೋಧರ ನಾರಾಲು ಉಪಸ್ಥಿತರಿರುವರು. ಸುಳ್ಯದ ಭಾವನಾ ಸುಗಮ ಸಂಗೀತ ಬಳಗ (ರಿ.) ಇದರ ಶ್ರೀ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಕ.ಸಾ.ಪ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು : ಮಂಗಳೂರು ಗಮಕ ಕಲಾ ಪರಿಷತ್ತಿನ ಮನೆ ಮನೆ ಗಮಕದ 5ನೇ ಪಲ್ಲವದ ಕಾರ್ಯಕ್ರಮ ದಿನಾಂಕ 31-07-2023ರಂದು ಮಂಗಳೂರಿನ ಅತ್ತಾವರದ ಅಭಿಷ್ ಪರ್ಲ್ ನಲ್ಲಿರುವ ಶ್ರೀಯುತ ಪ್ರಸನ್ನಕುಮಾರ್ ಇವರ ಮನೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸುರೇಶ್ ರಾವ್ ಅತ್ತೂರು ಇವರು ವಾಚನ ಮಾಡಿದರೆ ಶಕ್ತಿ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ವಿದ್ವಾನ್ ರವಿಶಂಕರ್ ಹೆಗಡೆ ದೊಡ್ನಳ್ಳಿ ವ್ಯಾಖ್ಯಾನಿಸಿದರು. ಜೈಮಿನಿ ಭಾರತದ ‘ಚಂದ್ರಹಾಸ ಚರಿತ್ರೆ’ಯನ್ನು ಆಯ್ಕೆ ಮಾಡಿಕೊಂಡಿದ್ದು ರಸಪೂರ್ಣವಾದ ವಾಚನ ವಿದ್ವತ್ ಪೂರ್ಣವಾದ ವ್ಯಾಖ್ಯಾನ ಸೇರಿದ ಶೋತೃಗಳ ಮನಸೆಳೆಯಿತು. ಆತಿಥೇಯರಾದ ಶ್ರೀ ಪ್ರಸನ್ನ ಕುಮಾರ್ ಅತಿಥಿಗಳನ್ನು ಸ್ವಾಗತಿಸಿ, ಗಮಕಲಾ ಪರಿಷತ್ತಿನ ಖಜಾಂಚಿಗಳಾದ ಶ್ರೀಮತಿ ಚಂದ್ರಿಕಾ ಸುರೇಶ್ ವಂದಿಸಿದರು.