Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 25 ಫೆಬ್ರವರಿ 2025ರಂದು ಕನ್ನಡ ಪರಿಷತ್ತಿನ ಪ್ರತಿಷ್ಟಿತ ದತ್ತಿ ಪ್ರಶಸ್ತಿಗಳಾದ ಪ್ರೊ. ಸಿ.ಎಚ್. ಮರಿದೇವರು ಪ್ರತಿಷ್ಠಾನ ದತ್ತಿ ಹಾಗೂ ರಾಜಸಭಾ ಭೂಷಣ ಶ್ರೀ ಕರ್ಪೂರ ಶ್ರೀನಿವಾಸ ರಾವ್ ದತ್ತಿ ಹಾಗೂ ಕರ್ಪೂರ ರಾಮರಾವ್ ಜನ್ಮ ಶತಾಬ್ದಿ ದತ್ತಿ ಪುರಸ್ಕಾರಗಳ ಪ್ರದಾನ ಸಮಾರಂಭವು ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿಗೆ ಕಟ್ಟಡ ಮತ್ತು ಬುನಾದಿ ಎರಡೂ ಮುಖ್ಯವೆಂದು ರೂಪಕದ ಮೂಲಕ ಹೇಳಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಆಧುನಿಕತೆಗೆ ಸ್ಪಂದಿಸುವಂತೆಯೇ ತನ್ನ ನಿರ್ಮಾತೃಗಳನ್ನು ಪರಿಷತ್ತು ಸದಾ ಸ್ಮರಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿ ಇಟ್ಟಿಗೆಯೂ ಕರ್ಪೂರ ಶ್ರೀನಿವಾಸ ರಾಯರು ಪರಿಷತ್ತಿಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳುತ್ತದೆ. ಅವರ ಮೊಮ್ಮಗಳು ಮತ್ತು ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಅಪಾರ ಸಂತೋಷ ತಂದಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳಿಗೆ ವಿಶಿಷ್ಟ ಪರಂಪರೆ ಇದ್ದು, ಅದರ ದಾನಿಗಳು ಪರಿಷತ್ತಿನ ಮೇಲೆ ಅಪಾರ…
ದೇಲಂಪಾಡಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ ದೇಲಂಪಾಡಿ ಇವರ ಸಹಕಾರದಲ್ಲಿ ಯಕ್ಷಗಾನ ಪ್ರಸಂಗಕರ್ತ, ಸಾಹಿತಿ, ಕಲಾವಿದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಇವರ ‘ಸ್ಮರಣಾಂಜಲಿ’ ಬದುಕು – ಬರಹದ ಬಗ್ಗೆ ಮೆಲುಕು ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಅಪರಾಹ್ನ 2-00 ಗಂಟೆಗೆ ದೇಲಂಪಾಡಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ದಿವಂಗತ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಇವರ ಭಾವಚಿತ್ರಕ್ಕೆ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಂದ ಪುಷ್ಪಾರ್ಚನೆ ನಡೆಯಲಿದ್ದು, ನಿವೃತ್ತ ಮುಖ್ಯ ಶಿಕ್ಷಕರಾದ ಡಿ. ರಾಮಣ್ಣ ಮಾಸ್ಟರ್ ಸಂಸ್ಮರಣೆ ಮಾಡಲಿರುವರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ವಿರಾಜ್ ಅಡೂರು ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ –…
ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲೂಕು ಘಟಕ ಇವರ ಆಶ್ರಯದಲ್ಲಿ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡ ಧತ್ತಿ ‘ಜಾನಪದ’ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 27 ಫೆಬ್ರವರಿ 2025ರಂದು ಸಂಜೆ 06-00 ಗಂಟೆಗೆ ಕುಶಾಲನಗರ ಗುಮ್ಮನಕೊಲ್ಲಿ ಬೃಂದಾವನ ಬಡಾವಣೆಯಲ್ಲಿ ನಡೆಯಲಿದೆ. ಕ.ಸಾ.ಪ. ಕುಶಾಲನಗರ ಇದರ ಅಧ್ಯಕ್ಷರಾದ ಕೆ.ಎಸ್. ನಾಗೇಶ್ ಇವರ ಅಧ್ಯಕ್ಷತೆಯಲ್ಲಿ ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾದೇವಿ ಸೋಮಪ್ಪ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಶಿರಂಗಾಲ ಉಪನ್ಯಾಸಕರಾದ ಶ್ರೀ ಹಂಡರಂಗಿ ನಾಗರಾಜ್ ಇವರು ಉಪನ್ಯಾಸ ನೀಡಲಿದ್ದಾರೆ.
ಮಂಗಳೂರು: ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ, ಜರ್ನಿ ಥಿಯೇಟರ್ ಗ್ರೂಪ್, ಸೇಂಟ್ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ ಹಾಗೂ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ನಿರಂಜನ ಬದುಕಿನ ‘ನೂರರ’ ಅವಲೋಕನ ಕಾರ್ಯಕ್ರಮ ದಿನಾಂಕ 22 ಫೆಬ್ರವರಿ 2025ರ ಶನಿವಾರದಂದು ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕೃತಿಗಳ ಅವಲೋಕನ, ನಾಟಕ ರೂಪದಲ್ಲಿ ಕಾದಂಬರಿಯ ಪರಿಚಯ, ವಿದ್ಯಾರ್ಥಿಗಳಿಂದ ವಿಚಾರ ಮಂಡನೆ ಮುಂತಾದ ಕಾರ್ಯಕ್ರಮ ವೈವಿಧ್ಯಗಳು ಸಾಹಿತಿ ಕುಳ್ಳುಂದ ಶಿವರಾಯ ಎಂಬ ‘ನಿರಂಜನ’ರ ನೂರರ ನೆನಪಿಗೆ ಬಿಸುಪು ತುಂಬಿದವು. ಕಾರ್ಯಕ್ರಮವನ್ನು ಡೋಲು ನುಡಿಸಿ ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಮಾತನಾಡಿ “ವೈರುಧ್ಯಗಳು ತುಂಬಿದ್ದ ನಿರಂಜನರ ಬದುಕು ಕಾವ್ಯದ ಝರಿಯಂತಿತ್ತು. ನಿರಂಜನ ಸೇರಿದಂತೆ ಪ್ರಗತಿಶೀಲ ಕಾಲಘಟ್ಟದ ಸಾಹಿತಿಗಳು ಮಾರ್ಕ್ಸ್ವಾದಿಗಳಾಗಿದ್ದರು. ಸೈದ್ಧಾಂತಿಕವಾಗಿ ಒಂದು ಬಗೆಯ ಹಿಂಸೆಯನ್ನು ಒಪ್ಪಿಕೊಂಡವರು ಮಾರ್ಕ್ಸ್ವಾದಿಗಳು. ಆದರೆ ಅಹಿಂಸಾ ತತ್ವವನ್ನು ಪಾಲಿಸಿದ ಗಾಂಧೀವಾದಕ್ಕೆ ನಿರಂಜನರು ಮಾರುಹೋಗಿದ್ದರು. ಬಂಡವಾಳಶಾಹಿ ಒಲವಿನ ಸಮಾಜವಾದವನ್ನು ಪ್ರತಿಪಾದಿಸಿದ್ದ ನೆಹರು ಕೂಡ ನಿರಂಜನರಿಗೆ ಇಷ್ಟವಾಗಿದ್ದರು. ಈ…
ಮಂಗಳೂರು : ಮಂಗಳೂರಿನ ಪುರಭವನದಲ್ಲಿ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ದಿನಾಂಕ 14 ಫೆಬ್ರವರಿ 2025 ರಂದು ನಡೆದ 10 ಪುಸ್ತಕಗಳ ಲೋಕರ್ಪಣಾ ಕಾರ್ಯಕ್ರಮದಲ್ಲಿ ಕರುಣಾಕರ ಬಳ್ಕೂರು ಇವರ ಎರಡನೇಯ ಕೃತಿ ‘ಬೆಳಕು’ ಕವನ ಸಂಕಲನವನ್ನು ಅರೆಹೊಳೆ ಪ್ರತಿಷ್ಠಾನದ ರೂವಾರಿ ಶ್ರೀ ಅರೆಹೊಳೆ ಸದಾಶಿವ ರಾವ್ ಬಿಡುಗಡೆಗೊಳಿಸಿ ಮಾತನಾಡುತ್ತಾ “ಈ ಕವನ ಸಂಕಲನವು ಅರ್ಥಪೂರ್ಣವಾಗಿದೆ. ಕಾರಣ ತಂದೆ ತಾಯಿ ಮಕ್ಕಳನ್ನು ಬೆಳಕಾಗಿ ಮುನ್ನಡೆಸಬೇಕು ಎಂಬ ಪ್ರಜ್ಞೆಯನ್ನು ಈ ಕೃತಿ ನಮ್ಮಲ್ಲಿ ಮೂಡಿಸುತ್ತಾರೆ. ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇಲ್ಲಿನ ಕನ್ನಡ ಉಪನ್ಯಾಸಕರಾದ ಸಂಜಯ ಬಿಳಿಕಿಕೊಪ್ಪ ಇವರು ‘ಬೆಳಕು’ ಕವನ ಸಂಕಲನವನ್ನು ಪರಿಚಯ ಮಾಡುತ್ತಾ “ಬೆಳಕು ಇರುವಂತದ್ದೇ. ಆದರೆ ಆ ಬೆಳಕು ಕೆಲವರಿಗೆ ಕತ್ತಲಾಗಬಹುದು ಮತ್ತು ಕೆಲವರಿಗೆ ಗುರುತಿಸಲಾಗದ ಸ್ಥಿತಿಯಲ್ಲಿ ಇರಬಹುದು. ಆ ಸಂದರ್ಭದಲ್ಲಿ ಬಳ್ಕೂರು ಬರೆದ ಕವನಗಳಲ್ಲಿ ಅರ್ಥೈಸಿಕೊಳ್ಳಬಹುದು ಎನ್ನುವುದು ಇಲ್ಲಿನ ಕವನಗಳ ಮೂಲಕ ತಿಳಿಯಪಡಿಸಿದ್ದಾರೆ. ಸಹೃದಯರಲ್ಲಿ ಇವರ ಕವನಗಳು ಬೆಳಕು ಮೂಡಿಸಲಿ ಎಂದು ಶುಭ ಹಾರೈಸುತ್ತೇನೆ.…
ಕುಶಾಲನಗರ: ಬೆಂಗಳೂರಿನ ರಂಗಮಂಡಲ ಹಾಗೂ ಕೊಡಗು ಕವಿ ಬಳಗ ಜಂಟಿಯಾಗಿ ಆಯೋಜಿಸಿದ ಕೊಡಗು ‘ಕಾವ್ಯ ಸಂಸ್ಕೃತಿ ಯಾನ’ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 23 ಫೆಬ್ರವರಿ 2025ರಂದು ಕುಶಾಲನಗರದ ಕೂದ್ದೂರು ಗ್ರಾಮದ ಪೂರ್ಣಚಂದ್ರ ಕುಟೀರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಮಾತನಾಡಿ “ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ. ಕವಿತೆಗಳು ಜನರಲ್ಲಿ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸೌಹಾರ್ದತೆಯನ್ನು ಒಡಮೂಡಿಸುತ್ತವೆ. ಮಾಧ್ಯಮಗಳು ಕಾವ್ಯಗಳನ್ನು ಜನರಿಂದ ದೂರ ಮಾಡುತ್ತಿವೆ. ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಕಾವ್ಯ ರಂಗದಲ್ಲಿ ಒಂದಷ್ಟು ಚಟುವಟಿಕೆಗಳು ಕಾಣುತ್ತಿವೆ. ಈ ಮೂಲಕ ನಾಡಿನೆಲ್ಲೆಡೆ ಇರುವ ಚುಟುಕು ಕವಿಗಳ ಸಮಾಗಮ ಹಾಗೂ ಸ್ನೇಹ ಸಂಗಮ ಸಾಧ್ಯವಾಗುತ್ತಿದೆ. ಇಂದಿನ ಆಧುನಿಕ ಕಾಲಘಟ್ಟದ ಬದಲಾದ ಪರಿಸ್ಥಿತಿಯಲ್ಲಿ ಆಧುನಿಕ ಕವಿಗಳು ಆಯಾಯ ಪರಿಸರ ಹಾಗೂ ಸಂದರ್ಭಗಳ ಕುರಿತು ರಚಿಸುವ ಕವನಗಳನ್ನು ವಾಚಿಸುವ ಸಂದರ್ಭ ಪರಂಪರೆಯ ಮರೆವು ಆಗದಂತೆ ಎಚ್ಚರ ವಹಿಸಬೇಕು. ಹೊಸ ಕವಿಗಳು ಹಾಗೂ ಕವಿತೆಗಳನ್ನು ಅಸ್ವಾದಿಸುವ…
ಮಡಿಕೇರಿ : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 20 ಫೆಬ್ರವರಿ 2025ರಂದು ಕೊಡಗು ಜಿಲ್ಲೆ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರುಗಿದ ‘ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಂಜೆಯವರ ಕುರಿತ ವಿಚಾರಗೋಷ್ಠಿ ನಡೆಯಿತು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಮತ್ತು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ಇವರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿಯಲ್ಲಿ ನಾಲಂದ ಮಹಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಕೆ. ಕಮಲಾಕ್ಷರವರು ‘ಪಂಜೆಯವರ ಶಿಶು ಸಾಹಿತ್ಯ’ದ ಕುರಿತು ಮಾತನಾಡುತ್ತಾ “ಪಂಜೆಯವರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರಿಗೆ ಸಣ್ಣ ಕಥೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಈ ಶಾಲೆಗೆ ಅವರು ಬಂದ ಸಂದರ್ಭದಲ್ಲಿ ಅವರಿಗೆ ಪ್ರೀತಿಯ ಸ್ವಾಗತವೇನೂ ಸಿಕ್ಕಿರಲಿಲ್ಲ. ಆದರೂ ಅವರು ತಾಳ್ಮೆಯಿಂದ ಎಲ್ಲರ ಮನ ಗೆದ್ದು, ಎಲ್ಲಾ ಅದ್ಯಾಪಕರ ಮತ್ತು ವಿದ್ಯಾರ್ಥಿಗಳ ಪ್ರೀತಿಯ ಸ್ನೇಹಿತರಾಗಿ,…
ಬೆಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸಂಘಸಂಸ್ಥೆಗಳು ಹಾಗೂ ಮೇಳಗಳ ಬಗ್ಗೆ ಬೆಂಗಳೂರಿನ ಯಕ್ಷವಾಹಿನಿ ಸಂಸ್ಥೆ ಮಾಹಿತಿ ಸಂಗ್ರಹಿಸುತ್ತಿದ್ದು, ಪೂರಕ ಮಾಹಿತಿಯನ್ನು ಸಂಸ್ಥೆ ಮುಖ್ಯಸ್ಥರು ಅಥವಾ ಸಂಘಟನೆ ಬಗ್ಗೆ ತಿಳಿದವರು ದಾಖಲಿಸುವಂತೆ ತಿಳಿಸಿದೆ. ಸಂಘಸಂಸ್ಥೆ ಅಥವಾ ಮೇಳದ ಹೆಸರು, ಸ್ಥಾಪನೆಯಾದ ವರ್ಷ, ಸಂಘಟನೆ ಉದ್ದೇಶ ಅಥವಾ ಹಿನ್ನೆಲೆ, ಪದಾಧಿಕಾರಿಗಳ ವಿವರ ಮತ್ತು ಸಂಪರ್ಕ ಮಾಹಿತಿ ಇತ್ಯಾದಿ ವಿವರಗಳನ್ನು ವ್ಯಾಟ್ಸಪ್ ಮೂಲಕ ತಿಳಿಸುವಂತೆ ಕೊರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಮೇಶ್ ಶಿರೂರ್: 9448353910 ಅಥವಾ ರವಿ ಮತ್ತೋಡಿ: 9986384205 ಇವರನ್ನು ಸಂರ್ಕಿಸಬಹುದು.
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಯ ಆಯ್ಕೆ ಸಮಿತಿಯು 2024ನೇ ಸಾಲಿನ ಪ್ರಶಸ್ತಿಗೆ ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯರವರನ್ನು ಸೂಚಿಸಿದೆ. ಆಯ್ಕೆ ಸಮಿತಿಯ ಸದಸ್ಯರಾದ ಡಾ. ತಾಳ್ತಜೆ ವಸಂತ ಕುಮಾರ್, ಡಾ. ಕೆ. ಚಿನ್ನಪ್ಪ ಗೌಡ, ಡಾ. ಪ್ರಭಾಕರ ಜೋಶಿ, ಡಾ. ಕಿಶೋರಿ ನಾಯಕ್, ಡಾ. ಎಸ್.ವಿ. ಪಾಡೀಗಾರ್ ಸಹಕರಿಸಿದ್ದಾರೆ. ಈ ಪ್ರಶಸ್ತಿಯನ್ನು ಶ್ರೀ ಟಿ.ವಿ. ಮೋಹನ್ದಾಸ್ ಪೈಯವರು ಸ್ಥಾಪಿಸಿದ್ದು, ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ದಿನಾಂಕ 23 ಮಾರ್ಚ್ 2025ರಂದು ಗೋವಿಂದ ಪೈ ಸಂಶೋಧನಾ ಸಂಪುಟದ ದ್ವಿತೀಯ ಭಾಗದ ಲೋಕಾರ್ಪಣೆ ಕಾರ್ಯಕ್ರಮದೊಂದಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಹಂಪನಾ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಂ.ಪ. ನಾಗರಾಜಯ್ಯರವರು, ಕರ್ನಾಟಕದ ಚಿಕ್ಕಬಳ್ಳಾಪುರ…
ಕಾರ್ಕಳ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ನಿಟ್ಟೆ ಕೆಮ್ಮಣ್ಣು ಇವರ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವ್ಯಾಖ್ಯಾನಕಾರರಾಗಿರುವ ಶ್ರೀ ಸರ್ಪಂಗಳ ಈಶ್ವರ ಭಟ್ ಮಂಗಳೂರು, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಇವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಯಜ್ಞೇಶ್ ಆಚಾರ್ಯ ಸುರತ್ಕಲ್ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಶ್ರೀ ಕೆ. ಶಾಮರಾಯ ಆಚಾರ್ಯ ಕಾರ್ಕಳ ಇವರ ದತ್ತಿನಿಧಿಯ ‘ಕಾಷ್ಠಶಿಲ್ಪಕಲಾ ಪ್ರಶಸ್ತಿ’ಗೆ ರಥಶಿಲ್ಪಿ ಶಂಕರ ಆಚಾರ್ಯ ಕೋಟೇಶ್ವರ ಇವರು ಆಯ್ಕೆಯಾಗಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಡಾ. ನಾ. ಮೊಗಸಾಲೆ ಘೋಷಿಸಿದ್ದು, ಈ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯುವ ‘ಮುದ್ದಣ ಸಾಹಿತ್ಯೋತ್ಸವ’ದಲ್ಲಿ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ‘ಮುದ್ದಣ ಸಾಹಿತ್ಯ ಪ್ರಶಸ್ತಿ’ಗಳ ಜೊತೆ ಈ ಪ್ರಶಸ್ತಿಗಳನ್ನೂ ನೀಡುವರು…