Author: roovari

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯ ಕಿನ್ಯಾ ಕಜೆಯ ದಯಾನಂದ ಹಾಗೂ ವಾರಿಜ ದಂಪತಿಗಳ ಪುತ್ರಿಯಾಗಿ ಪ್ರತೀಕ್ಷಾ ದಯಾನಂದ ಪೂಜಾರಿ ಅವರು 31 ಅಕ್ಟೋಬರ್ 1999 ರಂದು ಜನಿಸಿದರು. ಯಕ್ಷಗಾನದ ಸುಗಂಧ ತುಂಬಿದ ಕುಟುಂಬದಲ್ಲಿ ಬೆಳೆದ ಪ್ರತೀಕ್ಷಾ ಅವರಿಗೆ ಕಲೆಯ ಆಸಕ್ತಿ ಬಾಲ್ಯದಿಂದಲೇ ಮೂಡಿತು. ಅಜ್ಜ ಸಂಜೀವ ಸಾಲ್ಯಾನ್, ತಂದೆ ದಯಾನಂದ, ಹಾಗೂ ಚಿಕ್ಕಪ್ಪ ಯತೀಶ್ — ಇವರು ಎಲ್ಲರೂ ಖ್ಯಾತ ಯಕ್ಷಗಾನ ಕಲಾವಿದರು. ಬಾಲ್ಯದಲ್ಲಿಯೇ ಅನೇಕರ ಪ್ರದರ್ಶನಗಳ ವೀಕ್ಷಣೆಯಿಂದಲೇ ಈ ಕಲೆ ಅವರ ಹೃದಯದಲ್ಲಿ ಬೇರು ಬಿಟ್ಟಿತು ಎನ್ನುವುದು ಅವರ ನಂಬಿಕೆ. ಬಿ.ಕಾಂ ಪದವೀಧರೆಯಾಗಿರುವ ಪ್ರತೀಕ್ಷಾ, ಪ್ರಸ್ತುತ ದುಬೈನಲ್ಲಿ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಉದ್ಯೋಗದಲ್ಲಿದ್ದಾರೆ. ಉದ್ಯೋಗದ ಮಧ್ಯೆಯೂ ಯಕ್ಷಗಾನದೊಂದಿಗೆ ಹತ್ತಿರದ ನಂಟನ್ನು ಉಳಿಸಿಕೊಂಡು, ಅವಕಾಶ ಸಿಕ್ಕಾಗಲೆಲ್ಲ ವೇದಿಕೆಯತ್ತ ಮರಳುವ ಅಭಿರುಚಿ ಅವರು ಹೊಂದಿದ್ದಾರೆ. ಯಕ್ಷಗಾನ ಪಾಠದಲ್ಲಿ ಮಾರ್ಗದರ್ಶಕರು ಪ್ರತೀಕ್ಷಾ ಅವರಿಗೆ ಯಕ್ಷಗಾನದ ಪಾಠ ಕಲಿಸಿದ ಗುರುಗಳು: ಸೂರ್ಯನಾರಾಯಣ ಪದಕಣ್ಣಾಯ ರವಿ ಅಲೆವೂರಾಯ ದಯಾನಂದ ಪಿಲಿಕೂರ್ ಅಶ್ವಥ್ ಮಂಜನಾಡಿ ಅವರ ಹೇಳಿಕೆಯ…

Read More

ಮಂಗಳೂರು : ಪಾವಂಜೆ ಮೇಳದ ಕಲಾವಿದ, ಪ್ರಬಂಧಕ ‘ಯಕ್ಷ ರಾಮ’ ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಇವರಿಗೆ ಕದ್ರಿ ದೇವಸ್ಥಾನದಲ್ಲಿ ದಿನಾಂಕ 04 ನವೆಂಬರ್ 2025ರಂದು ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ‘ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು. ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ವಿಜಯ ಕುಮಾರ್ ಮೊಯ್ಲೊಟ್ಟು, ಸಂಜಯ್ ಕುಮಾ‌ರ್ ಗೋಣಿಬೀಡು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕದ್ರಿ ಯಕ್ಷ ಬಳಗದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಇವರು ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿಯವರ ಸ್ಮರಣೆ ಮಾಡಿದರು. ಅರ್ಚಕ ಕದ್ರಿ ರವಿ ಅಡಿಗ ಅವರು ಶನೀಶ್ವರನ ಕಥೆಯ ‘ಛಾಯಾ ನಂದನ’ ನೂತನ ಪ್ರಸಂಗದ ಮೊದಲ ಪ್ರದರ್ಶನ ಆಕರ್ಷಣೀಯವಾಗಿ ಮೂಡಿ ಬಂದಿದ್ದು, ಸಾವಿರಾರು ಪ್ರದರ್ಶನಗಳನ್ನು ಕಾಣುವಂತಾಗಲಿ” ಎಂದು ಹರಸಿದರು. ಪ್ರಸಂಗ ಕರ್ತ ಕದ್ರಿ ನವನೀತ ಶೆಟ್ಟಿಯವರು…

Read More

ಉಡುಪಿ : ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇದರ ವತಿಯಿಂದ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ಆಯೋಜಿಸಿದ್ದ ಹದಿನೆಂಟನೇ ವರ್ಷದ ‘ಚಿಟ್ಟಾಣಿ ಯಕ್ಷಗಾನ ಸಪ್ತಾಹ’ವು ದಿನಾಂಕ 05 ನವೆಂಬರ್ 2025ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಈ ಸಪ್ತಾಹಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು “ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಯಕ್ಷಗಾನ ಕ್ಷೇತ್ರದ ಅಪೂರ್ವ ಪ್ರತಿಭೆ. ಎಲ್ಲ ಪಾತ್ರಗಳನ್ನೂ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ಅವರು, ಯಕ್ಷಗಾನ ಕಲೆಯ ಕೀರ್ತಿಯನ್ನೂ ಹೆಚ್ಚಿಸಿದವರು. ಚಿಟ್ಟಾಣಿ ಸಂಸ್ಮರಣೆಯಲ್ಲಿ ನಡೆಯುತ್ತಿರುವ ಈ ಸಪ್ತಾಹ ಕಾರ್ಯಕ್ರಮ ಯಕ್ಷಗಾನದ ಕಿರಿಯ ಕಲಾವಿದರಿಗೆ ಪ್ರೇರಣೆಯಾಗಲಿ” ಎಂದು ನುಡಿದರು. ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಂ ಶೆಟ್ಟಿ, ಧರ್ಮಸ್ಥಳ ಶಾಂತಿವನ ಟ್ರಸ್ಟಿನ ಅಧ್ಯಕ್ಷ ಸೀತಾರಾಮ ತೋಳ್ಪಡಿತ್ತಾಯ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.…

Read More

ಬಂಟ್ವಾಳ : ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕ ರತ್ನ ನಯನ ಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 01 ನವೆಂಬರ್ 2025ರಂದು ಬಿ.ಸಿ. ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ದೀಪಪ್ರಜ್ವಲನ ಬಳಿಕ ಕಲಾಕೇಂದ್ರದ ವಿದ್ಯಾರ್ಥಿನಿಯರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೃತ್ಯಗುರು ಪುತ್ತೂರು ವಿಶ್ವ ಕಲಾನಿಕೇತನದ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ ಕುದ್ಮಾಡಿ ವಹಿಸಿ ಮಾತನಾಡಿ “ಭರತನಾಟ್ಯ ಕಲೆಗೆ ಅವಕಾಶಗಳೊಂದಿಗೆ ಪ್ರೋತ್ಸಾಹಗಳು ದೊರಕುತ್ತಿದ್ದು, ಸಾಂಸ್ಕೃತಿಕವಾಗಿ ನಮ್ಮ ಬೆಳವಣಿಗೆಗೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಉತ್ತಮ ಕೆಲಸವನ್ನು ಮಾಡುತ್ತಿದೆ” ಎಂದು ಶುಭ ಹಾರೈಸಿದರು. ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ಡಾ. ವೈ.ಉಮಾನಾಥ ಶೆಣೈಯವರಿಗೆ ಪ್ರದಾನಗೈದು ಗೌರವಿಸಲಾಯಿತು. ನಿವೃತ್ತ ಅಧಿಕಾರಿ…

Read More

ಧಾರವಾಡ : ಅಕ್ಷರ ದೀಪ ಪ್ರಕಾಶನ ಗದಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕನಕೋತ್ಸವ 2025ರ ಪ್ರಯುಕ್ತ ಫಾರೆಸ್ಟ್ ಕಾಲೊನಿ ನಿವಾಸಿಯಾಗಿರುವ ಡಾ. ಎ.ಡಿ. ಕೊಟ್ನಾಳ ಇವರ ಬಹುಮುಖ ಸೇವೆಯನ್ನು ಗುರುತಿಸಿ ‘ಕನಕಶ್ರೀ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆ ಮಾಡಿದ್ದಾರೆ. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನ ಬೆಳೆಸಿಕೊಂಡವರು ಜೊತೆಗೆ ಸಮಾಜ ಸೇವೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತನ್ನ ಸೇವಾ ಕಾರ್ಯವನ್ನು ಮಾಡಿದವರು. ಸಾಹಿತ್ಯಾಸಕ್ತರಾಗಿರುವ ಇವರು ಕೃಷಿ ಕ್ಷೇತ್ರದಲ್ಲೂ ಕಳೆದ 35 ವರ್ಷಗಳಿಂದ ರೈತ ಸಮುದಾಯದ ಅಭಿವೃಧಿಗೆ ಶ್ರಮಿಸುತ್ತಿದ್ದಾರೆ. ಡಾ. ಕೊಟ್ನಾಳ ಇವರ ಬಹುಮುಖ ಸೇವೆಗೆ ವಿವಿಧ ಸಂಘ ಸಂಸ್ಥೆಗಳು ನೀಡುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಕ್ಷರ ದೀಪ ಪ್ರಕಾಶನ ಗದಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಇವರು ಕೊಡಮಾಡುವ ‘ಕನಕಶ್ರೀ ರಾಷ್ಟ್ರೀಯ ಪ್ರಶಸ್ತಿ’ಯು ಇವರ ಅಪ್ರತಿಮ ಸಾಧನೆಗೆ ಸಂದ ಗೌರವವಾಗಿದೆ. ದಿನಾಂಕ…

Read More

ಮಂಗಳೂರು : ಭರತಾಂಜಲಿ (ರಿ.) ಕೊಟ್ಟಾರ ಇವರ ವತಿಯಿಂದ ಕಿಂಕಿಣಿ ತ್ರಿಂಶತ್ ಸಂಭ್ರಮದ ಹಿನ್ನೆಲೆಯಲ್ಲಿ ಮೀರಾ ಶ್ರೀನಾರಾಯಣನ್ ಇವರಿಂದ ಏಕವ್ಯಕ್ತಿ ಪ್ರದರ್ಶನವು ದಿನಾಂಕ 09 ನವೆಂಬರ್ 2025ರಂದು ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ನಡೆಯಲಿದೆ. ಈ ನೃತ್ಯ ಸಂಭ್ರಮವನ್ನು ನಾಟ್ಯಾಚಾರ್ಯ ಉಳ್ಳಾಲ ಮೋಹನ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಕೃಷ್ಣ ಬಾಪಿ ರಾಜು ಜಿ. ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಮೈಸೂರು : ಸ್ಟೇಜ್ ಬೆಂಗಳೂರು ಅಭಿನಯಿಸುವ ‘ಶಾಶ್ವತ ಪರಿಹಾರ’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 09 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರದ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಡಾ. ಬೇಲೂರು ರಘುನಂದನ್ ಇವರು ರಚಿಸಿ ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗೆ 72595 37777, 90088 30011 ಮತ್ತು 83102 98978 ಸಂಖ್ಯೆಯನ್ನು ಸಂಪರ್ಕಿಸಿರಿ. ಸ್ಟೇಜ್ ಬೆಂಗಳೂರು ಕರ್ನಾಟಕ ಸರ್ಕಾರದ ಅಧೀನದಲ್ಲಿ ನೋಂದಾಯಿತ ಸಂಸ್ಥೆಯಾಗಿದ್ದು, ಯುವ ಪೀಳಿಗೆ ಮತ್ತು ರಂಗಭೂಮಿ ಉತ್ಸಾಹಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯೊಂದಿಗೆ ದಿನಾಂಕ 07 ಏಪ್ರಿಲ್ 2019ರಂದು ಸ್ಥಾಪಿಸಲಾಗಿದೆ. ಇದು ಭಾರತದಾದ್ಯಂತ ವ್ಯವಸ್ಥಿತವಾಗಿ ಸಾಂಸ್ಕೃತಿಕ ಮತ್ತು ನಾಟಕ ಪ್ರದರ್ಶನಗಳ ಪ್ರಚಾರ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದೆ. ನಾವು ವೃತ್ತಿಪರವಾಗಿ ಸಾಂಸ್ಕೃತಿಕ ಮತ್ತು ರಂಗಭೂಮಿ ಸಂಬಂಧಿತ ಚಟುವಟಿಕೆಗಳಲ್ಲಿ ತರಬೇತಿ, ಅಭ್ಯಾಸ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಸ್ಟೇಜ್ ಬೆಂಗಳೂರು ಥಿಯೇಟರ್ ತಂಡವು ವಿವಿಧ ಐಟಿ ಕಂಪನಿಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಪ್ರದರ್ಶನ ಕಲೆ…

Read More

ಕೋಲಾರ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆ ‘ರಂಗಕಹಳೆ’ ಬೆಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ‘ಮಕ್ಕಳ ರಂಗ ಉತ್ಸವ’ವನ್ನು ದಿನಾಂಕ 09 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಕೋಲಾರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನಿಶ್ಚಲ ಎಂ., ರಕ್ಷಿತಾ, ಪೂಜ ಮತ್ತು ತಂಡದವರಿಂದ ಭರತನಾಟ್ಯ, ಅನಿಲ್ ಕುಮಾರ್ ಮತ್ತು ತಂಡದವರಿಂದ ಜನಪದ ಗೀತೆ, ಕಲಾಭಾರತಿ ನೃತ್ಯ ಮತ್ತು ಸಂಗೀತ ಶಾಲೆ, ಸಿದ್ಧಪ್ರಿಯಾ, ಯುಕ್ತ ರಾವ್, ಪಾವನಿ ಮತ್ತು ತಂಡದವರಿಂದ ಸಮೂಹ ನೃತ್ಯ, ಆರ್.ಕೆ. ಫಿಲಂ ಸ್ಟೂಡಿಯೋಸ್ ಇವರಿಂದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರ ಜೀವನಾಧಾರಿತ ‘ಸಾಕ್ಷ್ಯಚಿತ್ರ’, ಸಿ. ಲಕ್ಷ್ಮಣ ಇವರ ನಿರ್ದೇಶನದ ‘ಕಲಾತ್ಮಕ ಚಲನಚಿತ್ರ ಕಾರಣಿಕ ಶಿಶು’ ಪ್ರದರ್ಶನ, ಕೋಲಾರದ ಶ್ರೀ ಜಯನಾಟ್ಯ ಕಲಾ ಅಕಾಡೆಮಿ ತಂಡದವರಿಂದ ‘ನೃತ್ಯ ವೈಭವ’, ಗೌರಿಶಂಕರ ಅಕಾಡೆಮಿ ಫಾರ್ ಕಲ್ಚರ್ ಅಂಡ್ ಸ್ಪೋರ್ಟ್ಸ್ ಟ್ರಸ್ಟ್ ಇವರಿಂದ ‘ಬೊಮ್ಮನಹಳ್ಳಿಯ ಕಿಂದರಿ ಜೋಗಿ’ ನಾಟಕ ಪ್ರಸ್ತುತಿ, ಬೆಂಗಳೂರಿನ ಧನಲಕ್ಷ್ಮಿ…

Read More

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಭ್ಯಾಸ ಮಾಡಿರುವ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿಗಳನ್ನು ಸಾಮುದಾಯಿಕವಾಗಿ ಒಗ್ಗೂಡಿಸುವ ಸಲುವಾಗಿ ಆರಂಭಗೊಂಡಿರುವ ಗಿಳಿವಿಂಡು (ರಿ.) ವಿವಿಧ ಯೋಜನೆಗಳನ್ನು ಹಮ್ಮಿಗೊಂಡಿದೆ. ಈಗಾಗಲೇ ಮೂರು ಸಮಾವೇಶಗಳನ್ನು ನಡೆಸಿದ್ದು ನಾಲ್ಕನೇ ಸಮಾವೇಶವು ದಿನಾಂಕ 09 ನವೆಂಬರ್ 2025ರಂದು ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಗಿಳಿವಿಂಡಿನ ಅಧ್ಯಕ್ಷ ಪ್ರೊ. ಬಿ. ಶಿವರಾಮ ಶೆಟ್ಟಿ ನುಡಿದರು. ಅವರು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. 1968ರಲ್ಲಿ ಆರಂಭಗೊಂಡು 1979ರವರೆಗಿನ ಮೈಸೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದ ಮತ್ತು 1980ರಲ್ಲಿ ಆರಂಭಗೊಂಡ ಮಂಗಳೂರು ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಎಂ.ಎ., ಎಂ.ಫಿಲ್. ಮತ್ತು ಪಿ.ಎಚ್.ಡಿ. ವಿದ್ಯಾರ್ಥಿಗಳು ಮತ್ತು ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಗಳನ್ನು ಒಳಗೊಂಡಿರುವ ಗಿಳಿವಿಂಡಿನ ಸುಮಾರು ಐನೂರು ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 10-00 ಗಂಟೆಗೆ ವಿಭಾಗದ ಮೊದಲ ತಂಡದ ವಿದ್ಯಾರ್ಥಿಯಾಗಿದ್ದ ಪಂಪ ಪ್ರಶಸ್ತಿ ಪುರಸ್ಕೃತರು ಮತ್ತು…

Read More

ಮೂಲ್ಕಿ : ಪ್ರಸಿದ್ಧ ಛಾಂದಸ ಯಕ್ಷಗಾನ ಕವಿ, ವಿಮರ್ಶಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ ಗಣೇಶ ಕೊಲೆಕಾಡಿಯವರು (54) ದಿನಾಂಕ 07 ನವೆಂಬರ್ 2025ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರು ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು ಹಾಗೂ ಛಾಂದಸರಾದ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರಲ್ಲಿ ಯಕ್ಷಗಾನ ಕಾವ್ಯ ರಚನೆಯನ್ನು ಅಭ್ಯಾಸ ಮಾಡಿದ್ದರು. ಸುಮಾರು 50ಕ್ಕಿಂತಲೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದರು. ಯಕ್ಷಗಾನದಲ್ಲಿ ಬಳಕೆಯಾಗಿರುವ ಛಂದಸ್ಸಿನ ವೈಶಿಷ್ಟ್ಯದ ಕುರಿತು ವಿದ್ವತ್ಪೂ ಣವಾಗಿ ಮಾತನಾಡಬಲ್ಲವರಾಗಿದ್ದರು. ತಮ್ಮ ಮನೆಯಲ್ಲೇ ಆಸಕ್ತರಿಗೆ ಛಂದಸ್ಸಿನ ಸೂಕ್ಷ್ಮತೆಗಳನ್ನು, ವಿವಿಧ ಮಟ್ಟುಗಳನ್ನು ತಿಳಿಸಿಕೊಟ್ಟು ಬಹುಸಂಖ್ಯೆಯಲ್ಲಿ ಭಾಗವತರನ್ನು ರೂಪಿಸಿದ ಹೆಗ್ಗಳಿಕೆ ಕೊಲೆಕಾಡಿಯವರದ್ದು. ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದರು. ತಾಯಿಯೊಂದಿಗೆ ಮುಲ್ಕಿ ಬಳಿಯ ಮೈಲೊಟ್ಟು ಎಂಬಲ್ಲಿ ವಾಸಿಸುತ್ತಿದ್ದ ಅವರಿಗೆ ಯಕ್ಷಗಾನ ಕಲಾರಂಗವು 2014ರಲ್ಲಿ ಮನೆಯನ್ನು ನಿರ್ಮಿಸಿ ಕೊಟ್ಟಿತ್ತು. ಯಕ್ಷಗಾನ ಕಲಾರಂಗ ಅವರ ನಿರ್ದೇಶನದಲ್ಲಿ ಭಾಗವತಿಕೆಯ ಕಮ್ಮಟವನ್ನು ಆಯೋಜಿಸಿತ್ತು. ಇವರಿಗೆ ಸಂಸ್ಥೆಯು ಕನಕಾ…

Read More