Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಯಕ್ಷೇಶ್ವರಿ ಯಕ್ಷಗಾನ (ರಿ.) ಬೆಂಗಳೂರು ಇವರ ವತಿಯಿಂದ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು ಜೂನ್ ತಿಂಗಳ ಎರಡನೇ ವಾರದಲ್ಲಿ ಬೆಂಗಳೂರು ಮಹಾನಗರದಲ್ಲಿ ಪ್ರಾರಂಭವಾಗಲಿದೆ. ಶ್ರೀ ಸುಬ್ರಾಯ ಹೆಬ್ಬಾರ್ ಇವರ ನೇತೃತ್ವದಲ್ಲಿ ‘ಹೆಜ್ಜೆ ಹಾಗೂ ಭಾಗವತಿಗೆ’ ಹಾಗೂ ಶ್ರೀನಿವಾಸ್ ಪ್ರಭು ಮತ್ತು ಅಕ್ಷಯ್ ಆಚಾರ್ ಬಿದ್ಕಲ್ ಕಟ್ಟೆ ಇವರ ನೇತೃತ್ವದಲ್ಲಿ ‘ಚಂಡೆ ಮದ್ದಳೆ ತರಗತಿಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9611640186 ಮತ್ತು 8660565110 ಸಂಖ್ಯೆಯನ್ನು ಸಂಪರ್ಕಿಸಿರಿ.
ಕುಷ್ಟಗಿ : ಕನ್ನಡ ಸಾಹಿತ್ಯ ಪರಿಷತ್ತು ಕುಷ್ಟಗಿ ತಾಲೂಕು ಹಾಗೂ ‘ಸಂಗಾತ ಪುಸ್ತಕ’ ಪ್ರಕಾಶನ ಇವರ ಸಹಯೋಗದೊಂದಿಗೆ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಬೆಳಗ್ಗೆ 10-00 ಗಂಟೆಗೆ ಕುಷ್ಟಗಿಯ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಡಾ. ಐ.ಜೆ. ಮ್ಯಾಗೇರಿ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಕುಷ್ಟಗಿ ಕ.ಸಾ.ಪ.ದ ಅಧ್ಯಕರಾದ ಲೆಂಕೆಪ್ಪ ವಾಲಿಕಾರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಿಂಧನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಜಾಜಿ ದೇವೇಂದ್ರಪ್ಪ ಇವರು ಕಾದಂಬರಿ ಲೋಕಾರ್ಪಣೆಗೊಳಿಸಲಿದ್ದು, ಅಕ್ಷರ ಸಂಗಾತದ ಸಂಪಾದಕರಾದ ಡಾ. ಟಿ.ಎಸ್. ಗೊರವರ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಮಹೇಶ ಬಳ್ಳಾರಿ, ಡಾ. ವಸಂತಕುಮಾರ ಕಡ್ಲಿಮಟ್ಟಿ, ಜಹಾನ್ಅರಾ ಕೋಳೂರು, ಶ್ರೀಕಾಂತ ಬೆಟಗೇರಿ, ಮಹಾಂತೇಶ ಹಿರೇಕುರುಬರ, ಅಶೋಕ ಹೊಸಮನಿ, ರವಿ ದೇವರೆಡ್ಡಿ, ರವಿ ಹಾದಿಮನಿ, ದೇವರಾಜ ವಿಶ್ವಕರ್ಮ, ಶಿವನಗೌಡ ಪೊಲೀಸ್ ಪಾಟೀಲ್, ಮಹಾಂತೇಶ ಗೆದಗೇರಿ ಶರಣಪ್ಪ ಲೈನದ, ಮಹೇಶ ಹಡಪದ ಇವರುಗಳು…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 04 ಜೂನ್ 2025ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ, ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ “ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು. ಕೊಡಗಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ಬುಡಕಟ್ಟು…
ಮೈಸೂರು : ತಿರಂಗಾ ಥಿಯೇಟರ್ ಪ್ರಸ್ತುತ ಪಡಿಸುವ ಅಂಬಿಕಾ ಈಡಿಗ ರಚನೆ ಮತ್ತು ನಿರ್ದೇಶನದಲ್ಲಿ ‘ಕೃಷ್ಣಗೀತೆ’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7259537777 ಮತ್ತು 8123729998 ಸಂಖ್ಯೆಯನ್ನು ಸಂಪರ್ಕಿಸಿರಿ.
ಬೆಂಗಳೂರು : ಯಕ್ಷರಂಗದ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆಯಲ್ಲಿ ಹೆಬ್ಬಾಡಿ ಸುದೀಪ್ ಶೆಟ್ಟಿ ಸಂಯೋಜನೆಯಲ್ಲಿ ‘ಯಕ್ಷ ಸಮಾಗಮ 7’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 07 ಜೂನ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ‘ಕುರುಕುಲ ತಿಲಕ’, ‘ಮುದುಕನ ಮದುವೆ’, ‘ಅಮೃತ ಕಲಶ’ ಮತ್ತು ‘ಪ್ರಚಂಡ ಪರಶುಧರ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9591311056 ಸಂಖ್ಯೆಯನ್ನು ಸಂಪರ್ಕಿಸಿರಿ.
ಮಂಗಳೂರು : ಕೊಂಕಣಿ ಸಾಂಸ್ಕೃತಿಕ ಸಂಘ ಮಂಗಳೂರು, ಸಿದ್ದಿವಿನಾಯಕ ದೇವಸ್ಥಾನ ಮಂಗಳೂರು ವತಿಯಿಂದ ‘ದಮಯಂತಿ ಪುನಃ ಸ್ವಯಂವರ’ ಕೊಂಕಣಿ ಯಕ್ಷಗಾನ ಪ್ರದರ್ಶನ ದಿನಾಂಕ 31 ಮೇ 2025ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ. ಎ. ನಂದಗೋಪಾಲ ಶೆಣೈ ಮಾತನಾಡಿ “ಪ್ರಸ್ತುತ ದಿನಗಳಲ್ಲಿ ವಿವಿಧ ಕೊಂಕಣಿ ಕಾರ್ಯಕ್ರಮಗಳು ಸಾಕಷ್ಟು ನಡೆಯುತ್ತಿವೆ. ಆದರೆ, ಕೊಂಕಣಿ ಪ್ರೇಕ್ಷಕ ವರ್ಗ ಹೇಗೆ ಹೆಚ್ಚಿಸುವುದು ಎಂಬುದು ಸವಾಲಿನದ್ದಾಗಿದೆ. ಕೊಂಕಣಿ ಭಾಷಿಗರು ಕೊಂಕಣಿಯ ಕಂಪು ಮತ್ತಷ್ಟು ಪಸರಿಸಲು ನೆರವಾಗಬೇಕು. ಕೊಂಕಣಿಗರು ವಿಶ್ವದಲ್ಲೇ 40 ಲಕ್ಷ ಮಂದಿ ಇದ್ದೇವೆ. ಸಂಖ್ಯೆಯಲ್ಲಿ ಕಡಿಮೆ ಇದ್ದರೂ ವಿಶ್ವದಾದ್ಯಂತ ವ್ಯಾಪಿಸಿಕೊಂಡಿದ್ದೇವೆ. ಕೊಂಕಣಿ ಮಾತನಾಡುವ 40 ವಿವಿಧ ಪಂಗಡಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ವಿದೇಶದಲ್ಲಿದ್ದಾರೆ. ಕೊಂಕಣಿಯಲ್ಲಿ ಯಾವುದೇ ಸಂಸ್ಥೆ ಕಾರ್ಯಕ್ರಮ ಇದ್ದರೂ ಎಲ್ಲರೂ ಭಾಗವಹಿಸಬೇಕು. ಯಾರಿಗೂ ನಿರ್ಬಂಧವಿರಬಾರದು. ಎಲ್ಲರಿಗೂ ಅವಕಾಶ ನೀಡಬೇಕು. ಗೋವಾದಲ್ಲಿ ಕೊಂಕಣಿ ಭಾಷೆಯನ್ನು ಪ್ರೀತಿಸುವಂತೆ ನಮ್ಮಲ್ಲೂ ಭಾಷೆಯನ್ನು ಬೆಳೆಸುವ ಪ್ರವೃತ್ತಿ ಹೆಚ್ಚಾಗಬೇಕು.…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 141ನೆಯ ಜಯಂತ್ಯುತ್ಸವ ಕಾರ್ಯಕ್ರಮ ದಿನಾಂಕ 04 ಜೂನ್ 2025 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೂ ಕನ್ನಡ ಸಾಹಿತ್ಯ ಪರಿಷತ್ತಿಗೂ ಇದ್ದ ಸಂಬಂಧ ತಾಯಿ-ಮಗುವಿನಷ್ಟೇ ನಿಕಟವಾದದ್ದು. ಅವರು ಕೇವಲ ಸಂಸ್ಥಾಪಕರು ಮಾತ್ರವಲ್ಲದೆ ಅದರ ಬೆಳವಣಿಗೆಯಲ್ಲಿಯೂ ಕೂಡ ನಿರಂತರವಾಗಿ ಆಸಕ್ತಿ ವಹಿಸುತ್ತಾ ಪೋಷಕರಾಗಿ, ಮಾರ್ಗದರ್ಶಕರಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸುವುದರ ಜೊತೆಗೆ ಅದು ಸ್ವಾಯತ್ತ ಸಂಸ್ಥೆಯಾಗ ಬೇಕು ಎಂದು ಆರಂಭದಿಂದಲೇ ಪ್ರತಿಪಾದಿಸುತ್ತಾ ಬಂದವರು. 1918ರಲ್ಲಿ ನಾಲ್ಕನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಧಾರವಾಡದಲ್ಲಿ ಅಯೋಜಿತವಾದಾಗ ಸಮ್ಮೇಳನಾಧ್ಯಕ್ಷತೆಯ ಕಲ್ಪನೆ ಬಂದಿತು. ಸಮ್ಮೇಳನಾಧ್ಯಕ್ಷತೆಯ ಕುರಿತು ಮಹಾರಾಜರ ಸೂಚನೆಯನ್ನು ಅಪೇಕ್ಷಿಸಿ ಪಂಡಿತರ ನಿಯೋಗವು ಬಂದಾಗ ‘ಕನ್ನಡ ಸಾಹಿತ್ಯ ಪರಿಷತ್ತನ್ನು ನೋಡಿ ಕೊಳ್ಳಲು ಪರಿಣಿತರು ಇದ್ದಾರೆ, ಅವರು ನಿರ್ಣಯಿಸಲಿ, ಅರಮನೆ ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ”…
ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ.)ಕಮತಗಿ ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಜ್ಯಮಟ್ಟದ “ಮೇಘರತ್ನ ಪ್ರಶಸ್ತಿ”ಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರಂಗಕರ್ಮಿ, ಹಿರಿಯ ಸಾಹಿತಿ, ನಟ ಹಾಗೂ ನಾಟಕಕಾರರಾದ ಶ್ರೀ ಮಹಾಂತೇಶ ಎಂ.ಗಜೇಂದ್ರಗಡ ಅವರು ಆಯ್ಕೆಯಾಗಿದ್ದಾರೆ. ಈ ವಾರ್ಷಿಕ ಪ್ರಶಸ್ತಿಯನ್ನು ಉತ್ತರ ಕರ್ನಾಟಕದ ಜೀವಮಾನ ಸಾಧನೆ ಮಾಡಿದ ಒಬ್ಬ ಮಹನೀಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯು ರೂಪಾಯಿ 5 ಸಾವಿರ ನಗದು ಹಾಗೂ ನೆನಪಿನ ಕಾಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ ತಿಂಗಳ ಕೊನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆಯಲಿದೆ.
ಆಧುನಿಕ ಕನ್ನಡ ಕಾವ್ಯ ನಿರ್ಮಾಪಕರಲ್ಲಿ ಬೇಂದ್ರೆಯವರದು ಎದ್ದು ಕಾಣುವ ಹೆಸರು. “ಒಂದು ಪೂರ್ಣ ಆಯುಷ್ಯವನ್ನು ಸಾರ್ಥಕವಾಗಿ ಸಫಲವಾಗಿ ಯಾರ ಕಾವ್ಯದ ಅಭ್ಯಾಸಕ್ಕಾಗಿ ಮೀಸಲಾಗಿಡಬಹುದೋ ಅಂಥ ಕನ್ನಡ ಕವಿಗಳಲ್ಲಿ ಶ್ರೀಮಾನ್ ಬೇಂದ್ರೆಯವರು ಅತ್ಯಾಧುನಿಕರು. ಇಪ್ಪತ್ತನೆಯ ಶತಮಾನದಲ್ಲಿ ಇಂಥ ಕವಿ ಕನ್ನಡದಲ್ಲಿ ಇರುವುದು ಕನ್ನಡ ಭಾಷೆಯ ಸುದೈವವೇ ಸರಿ” ಎಂಬುದಾಗಿ ಖ್ಯಾತ ಸಾಹಿತಿ ವಿಮರ್ಶಕ ಶಂಕರ ಮೊಕಾಶಿ ಪುಣೇಕರ ಅವರು ಹೇಳಿರುವ ಮಾತಿನಲ್ಲಿ ಅತ್ಯುಕ್ತಿ ಇಲ್ಲ. ಬೇಂದ್ರೆ ಕನ್ನಡಿಗರ ಭಾವಕೋಶದಲ್ಲಿ ಸೇರಿಹೋದ ಅದ್ಭುತ ಕವಿ ಚೇತನ. ಅವರ ಸಮಗ್ರ ಸಾಹಿತ್ಯವನ್ನು ತಾಳೆ ಹಾಕಿ ಒರೆಗೆ ಹಚ್ಚಿ ನೋಡಿ ಅವರನ್ನು ‘ಭುವನದ ಭಾಗ್ಯ’ ಎಂದು ಕರೆದು ಅವರ ದೈತ್ಯ ಪ್ರತಿಭೆಯ ಪ್ರಕಾಶವನ್ನು ಲೋಕ ಸಮ್ಮುಖಗೊಳಿಸಿದವರು ವಿಮರ್ಶಕ ಡಾ. ಆಮೂರ. ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’ ಈ ಮಹಾಕೃತಿಯನ್ನು ವಿಮರ್ಶಕ ಡಾ. ಜಿ.ಎಂ. ಹೆಗಡೆಯವರು ಇತ್ತೀಚಿಗೆ ಸಂಪಾದಿಸಿ ಕೊಟ್ಟಿದ್ದಾರೆ. “ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳುವ ಪ್ರಕ್ರಿಯೆ ಒಂದು ಸಜೀವ ವಿಕಾಸ ಪ್ರಕ್ರಿಯೆ. ಅದಕ್ಕೆ ಶತಮಾನಗಳೂ…
ಪುತ್ತೂರು : ಹಲಸು ಹಣ್ಣು ಮೇಳದ ಸಭಾಂಗಣದಲ್ಲಿ ಪನಸೋಪಾಖ್ಯಾನ ‘ಹಲಸಿನ ಅರಿವಿನ ಹರಿವು’ ಕಾಲ್ಪನಿಕ ಕಥೆ ತಾಳಮದ್ದಲೆಯನ್ನು ದಿನಾಂಕ 07 ಜೂನ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾಗಿದೆ. ಕುಂಬಳೆಯ ಶ್ರೀ ಶೇಡಿಗುಮ್ಮೆ ವಾಸುದೇವ ಭಟ್ ಇವರು ಪ್ರಸಂಗ ಕವಿ, ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ ಕಥಾ ಹಂದರ, ಪೆರಾಜೆಯ ನಾ. ಕಾರಂತ ಇವರ ಪರಿಕಲ್ಪನೆ ಹಾಗೂ ಪುತ್ತೂರಿನ ಶ್ರೀ ರಮೇಶ್ ಭಟ್ ಸಂಯೋಜನೆ ಮಾಡಲಿದ್ದಾರೆ.