Author: roovari

ಮೂಲ್ಕಿ : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ಇದರ ಸಂಯೋಜನೆಯಲ್ಲಿ ‘ಒಡ್ಡೋಲಗ’ ಯಕ್ಷಗಾನ ವಿಶೇಷ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 02-06-2024 ರಂದು ಮೂಲ್ಕಿ ಕೆರೆಕಾಡುವಿನ ತನು ಎಲೆಕ್ಟ್ರಿಕಲ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಅಜಿತ್ ಕೆರೆಕಾಡು ಮಾತನಾಡಿ “ಯಕ್ಷಗಾನದಂತಹ ಸಮಷ್ಟಿಯ ಕಲೆಯಿಂದ ಇಂದು ಸಾಂಸ್ಕೃತಿಕ ಪರಂಪರೆ ಉಳಿದಿದ್ದು, ಈ ಕಲೆಯಲ್ಲಿ ಇನ್ನೂ ಹೆಚ್ಚು ಮಕ್ಕಳನ್ನು ತೊಡಗಿಸಿಕೊಂಡು, ಕಲಾ ಪ್ರಕಾರಗಳಲ್ಲಿ ಯಕ್ಷಗಾನದ ಮಹತ್ವವನ್ನು ತಿಳಿಹೇಳಬೇಕು.” ಎಂದು ಹೇಳಿದರು. ಶ್ರೀ ಕ್ಷೇತ್ರ ದೇಂದಡ್ಕ ಇಲ್ಲಿನ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕೆರೆಕಾಡು ಯಕ್ಷಕಲಾ ಫೌಂಡೇಶನ್ ಇದರ ಅಧ್ಯಕ್ಷರಾದ ಜಯಂತ್ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕರ್ಯಕ್ರಮದಲ್ಲಿ ಕೆರೆಕಾಡು ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕೆರೆಕಾಡು, ಯಕ್ಷಗಾನ ಕಲಾವಿದರಾದ ಜಿತೇಶ್ ಕುಲಾಲ್ ಸೂರಿಂಜೆ, ಶ್ರೀಪಾದ್ ಭಟ್, ಫೌಂಡೇಶನ್‌ನ ದುರ್ಗಾಪ್ರಸಾದ್, ರೇಷ್ಮಾ ಗಣೇಶ್, ಪ್ರೇಮಲತಾ, ಅಭಿಜಿತ್, ಅಜಿತ್, ಅನ್ವಿತಾ, ವಾಣಿ, ವಿಜೇತಾ ಶೆಟ್ಟಿ, ಉಷಾ ಪರಮೇಶ್ವರ, ಶ್ರೇಯಸ್, ನೀಲೇಶ್ ಆಚಾರ್ಯ,…

Read More

ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರಾದ ಡಾ. ನಾ. ಮೊಗಸಾಲೆ ಅವರ ‘ಭಾರತ ಕಥಾ’ ಎಂಬ ಕಾದಂಬರಿಯು ರಾಜಕೀಯದ ಮುಷ್ಠಿಯೊಳಗೆ ಸಿಲುಕುವ ಊರಿನ ವಿದ್ಯಮಾನಗಳನ್ನು ವಾಸ್ತವದ ನೆಲೆಯಲ್ಲಿ ಬಿಚ್ಚಿಡುತ್ತದೆ. ಬೇಡವೆಂದರೂ ನಮ್ಮ ಬದುಕಿನೊಳಗೆ ನುಸುಳುವ, ಇಷ್ಟವಿಲ್ಲದಿದ್ದರೂ ನಮ್ಮನ್ನು ಕರಾಳ ಕೈಗಳಲ್ಲಿ ಅಪ್ಪಿಕೊಳ್ಳುವ, ದೂರವಾಗಲು ಹೊರಟವರನ್ನು ಬೆಂಬತ್ತಿ ಒಳಗೆ ಎಳೆದುಕೊಳ್ಳುವ ಕ್ರೌರ್ಯವು ಈ ಕಾದಂಬರಿಯನ್ನು ಮುನ್ನಡೆಸುತ್ತದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಸೀತಾಪುರ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವುದಾದರೂ ಅದನ್ನು ಭಾರತದ ಯಾವುದೇ ಹಳ್ಳಿಗೂ ಅನ್ವಯಿಸಬಹುದಾಗಿದೆ. ಒಂದರ್ಥದಲ್ಲಿ ಮೊಗಸಾಲೆಯವರ ಕಾಳಜಿಯೇ ಗ್ರಾಮ ಭಾರತ. ಹಳ್ಳಿಯಲ್ಲಿ ನಿಂತು ಸಾಮಾಜಿಕ ವಿದ್ಯಮಾನಗಳ ಬದಲಾವಣೆಗಳನ್ನು ವೀಕ್ಷಿಸುವ ಅವರಿಗೆ ಗ್ರಾಮ ಭಾರತವು ರಾಜಕೀಯದ ಬಲೆಯೊಳಗೆ ಬಿದ್ದು ನರಳುವಂತೆ ಕಾಣಿಸುತ್ತದೆ. ರಾಜಕೀಯ ಸ್ಥಿತ್ಯಂತರವು ಮನುಷ್ಯನ ಬದುಕು ಭಾವಗಳನ್ನು ಪ್ರಭಾವಿಸುವ ವಿವರಗಳಿರುವುದರಿಂದ ಈ ಕಾದಂಬರಿಗೆ ರಾಜಕೀಯ ಅರ್ಥವ್ಯಾಪ್ತಿಯು ಒದಗಿದೆ. ಈ ಪರಿಸ್ಥಿತಿಯು ರಾಜಕೀಯ ದೃಷ್ಟಿಕೋನವಿಲ್ಲದವರ ಬದುಕನ್ನೂ ಸೆರೆಹಿಡಿಯುತ್ತದೆ. ಕಣ್ಣಿಗೆ ಕಾಣದ ಕೆಟ್ಟ ವ್ಯವಸ್ಥೆಯು ನಮ್ಮ ಕತ್ತು ಹಿಸುಕುತ್ತಾ ಇದೆ ಎಂಬ ಭಾವವನ್ನು ಉಂಟು…

Read More

ಬೆಂಗಳೂರು : ತೇಜು ಪಬ್ಲಿಕೇಷನ್ಸ್ ವತಿಯಿಂದ ಎ. ಭಾನು ಇವರ ರಚಿಸಿರುವ ‘ಭಾನು ಗೀತ’ ಮತ್ತು ‘ಭಾವ ಸೌರಭ’ ಎಂಬ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 09-06-2024ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ನ.ರಾ. ಕಾಲೋನಿಯ ಡಾ. ಸಿ. ಅಶ್ವತ್ಥ್ ಕಲಾ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಎಚ್. ದುಂಡಿರಾಜ್ ಇವರ ಅಧ್ಯಕ್ಷತೆಯಲ್ಲಿ ಡಾ. ನಾ. ದಾಮೋದರ ಶೆಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ವೈ.ವಿ. ಗುಂಡೂರಾವ್ ಇವರ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಕೊರ್ಗಿ ಶಂಕರ ನಾರಾಯಣ ಉಪಾಧ್ಯಾಯ ಇವರು ‘ಭಾನು ಗೀತ’ ಕೃತಿಯ ಬಗ್ಗೆ ಮತ್ತು ದಿವ್ಯ ಹೆಗಡೆ ಕಬ್ಬಿನಗದ್ದೆ ಇವರು ‘ಭಾವ ಸೌರಭ’ ಕೃತಿ ಪರಿಚಯ ಮಾಡಲಿರುವರು.

Read More

ಮಡಿಕೇರಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ದಿನಾಂಕ 01-06-2024ರಂದು ಆಯೋಜಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆದ ಪರಿಸರ ಸ್ಪರ್ಧಾ ಕಾರ್ಯಕ್ರಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತಮಾಡಿದ ಅವರು, “ನಾವು ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ…

Read More

ಮಂಡ್ಯ : ಬೆಂಗಳೂರಿನ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ (ರಿ.) ಇದರ ವತಿಯಿಂದ ನೀಡುವ 2023ನೇ ಸಾಲಿನ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 09-06-2024ರಂದು ಬೆಳಗ್ಗೆ 10-00 ಗಂಟೆಗೆ ಮಂಡ್ಯದ ಸುಭಾಷ್ ನಗರ, ಶಿವ ನಂಜಪ್ಪ ಪಾರ್ಕ್ ಎದುರಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಈ ಪ್ರಶಸ್ತಿಯನ್ನು ಚಾಮರಾಜ ನಗರದ ಸ್ವಾಮಿ ಪೊನ್ನಾಚಿಯವರ ‘ದಾರಿ ತಪ್ಪಿಸುವ ಗಿಡ’ ಕೃತಿಗೆ ಖ್ಯಾತ ಲೇಖಕರಾದ ಪ್ರೊ. ಕಾಳೇಗೌಡ ನಾಗವಾರ ಇವರು ಪ್ರದಾನ ಮಾಡಲಿರುವರು. ಪ್ರಶಸ್ತಿಯು ರೂ.25,000/- ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ವಿಮರ್ಶಕರಾದ ಶ್ರೀಮತಿ ಆರ್. ಸುನಂದಮ್ಮ ಪ್ರಶಸ್ತಿ ವಿಜೇತ ಕೃತಿಯ ಕುರಿತು ಮಾತನಾಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಎಚ್.ಆರ್. ಸುಜಾತಾ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ ಖ್ಯಾತ ಗಾಯಕಿ ಶ್ರೀಮತಿ ಎಂ.ಡಿ. ಪಲ್ಲವಿ ಮತ್ತು ಸಂಗಡಿಗರು ಭಾವಗಾಯನ ಕಾರ್ಯಕ್ರಮ ನೀಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಅವರ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್ ಅವರ 136ನೆಯ ಜಯಂತಿ ಕಾರ್ಯಕ್ರಮವು ದಿನಾಂಕ 05-06-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಮಾತೃಸಂಸ್ಥೆಯಾಗಿ ಈ ವಿಸ್ತಾರವನ್ನು ಪಡೆದು ಬೆಳೆಯುವುದಕ್ಕೆ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್ ಅವರ ಕೊಡುಗೆ ಬಹಳ ಮಹತ್ವದ್ದು. ಸಂಸ್ಥೆಯ ನಿಬಂಧನೆ ಎಂಬುದು ಸಂಸ್ಥೆಗೆ ದಿಕ್ಸೂಚಿ–ಅಂಕುಶವಿದ್ದಂತೆ. ಅದು ಸಕಾಲಿಕವಾಗಿರಬೇಕು, ಸಮರ್ಪಕವಾಗಿರಬೇಕು ಮತ್ತು ಸಮಗ್ರವಾಗಿರಬೇಕು ಎಂದು ಅದುವರೆಗೆ ಹಲವಾರು ವಾರ್ಷಿಕಾಧಿವೇಶನಗಳಲ್ಲಿ ಆಗಿದ್ದ ನಿಬಂಧನೆಯ ತಿದ್ದುಪಡಿಗಳನ್ನೆಲ್ಲ ಸೇರ್ಪಡೆ ಮಾಡಿ ಒಂದೂಗೂಡಿಸಿ ನಿಬಂಧನಾವಳಿಯನ್ನು ಪ್ರಕಟಿಸಿದ್ದು ಅವರ ಮಹತ್ವದ ಸಾಧನೆ. ಪರಿಷತ್ತಿನ ಕಾರ್ಯಾಲಯವನ್ನು ಪುನರ್ಘಟಿಸಿ ವ್ಯವಸ್ಥಿತಗೊಳಿಸಿ ಸಮಯ ಪಾಲನೆ, ವೇಷಭೂಷಣಗಳಲ್ಲಿ ಶಿಸ್ತನ್ನು ತಂದರು. ಪ್ರತಿವಾರವೂ ಸಾರ್ವಜನಿಕ ಕಾರ್ಯಕ್ರಮವಾಗಿ ಉಪನ್ಯಾಸ, ಕಾವ್ಯವಾಚನಗಳ ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದಕ್ಕೆ ಪರಿಷತ್ತಿಗೆ ಬರುವ ಜನರು ಹೆಚ್ಚಾದರು. ಇವರ ಕಾಲದಲ್ಲಿ ವಸಂತೋತ್ಸವ ಕಾರ್ಯಕ್ರಮವನ್ನು ಬೇಸಿಗೆ ಕಾಲದಲ್ಲಿ ನಡೆಸುವ…

Read More

ಯಕ್ಷಗಾನ ಎಂದರೆ ಪುರುಷ ಪ್ರಧಾನವಾದದ್ದು. ರಂಗದಲ್ಲಿ ಪುರುಷರೇ ಮಹಿಳೆಯರಾಗುತ್ತಿದ್ದರು. ಇಲ್ಲಿ ಎಲ್ಲವೂ ಪುರುಷಮಯ ಎಂಬ ಕಾಲ ಬದಲಾಗಿದೆ. ಪುರುಷ ಪ್ರಧಾನವಾದ ಯಕ್ಷಗಾನ ಕ್ಷೇತ್ರದಲ್ಲಿ ಇರುವ ತಾಳಮದ್ದಳೆಯಲ್ಲೂ ಮಹಿಳೆಯರು ಲಗ್ಗೆ ಇಟ್ಟಿದ್ದಾರೆ. ಮೇಲಾಗಿ ಮಹಿಳೆಯರೇ ಸೇರಿ ಯಕ್ಷಗಾನ ತಾಳಮದ್ದಳೆ ಸಂಘಟಿಸಿ, ಪುರುಷರಿಗೆ ಸವಾಲೊಡ್ಡುತ್ತಿದ್ದಾರೆ. ಸ್ತ್ರೀ ಸಹಜ ಬೆಡಗು, ಬಿನ್ನಾಣವಷ್ಟೇ ಅಲ್ಲ; ಭಯಾನಕ, ಭೀಭತ್ಸ, ಶೃಂಗಾರ, ಕರುಣೆ, ವೀರ ಹೀಗೆ ಎಲ್ಲಾ ತರಹದ ಪುರುಷ ಪಾತ್ರವನ್ನು ಮಾಡಿ ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲಿ ಸೈ ಎನಿಸಿಕೊಳ್ಳುತ್ತಿದ್ದಾರೆ ಮಹಿಳೆಯರು. ಹೀಗೆ ಯಕ್ಷಗಾನ ರಂಗದಲ್ಲಿ “ಯಕ್ಷ ಮಂಜುಳಾ” ಕದ್ರಿ ಎಂಬ ಒಂದು ತಂಡ ಕಟ್ಟಿ ಯಕ್ಷಗಾನ ರಂಗದಲ್ಲಿ ಹಾಗೂ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವವರು ಶ್ರೀಮತಿ ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ. ಕೊಡಗಿನ ಕಾವೇರಿಯ ಪದತಲದಲ್ಲಿರುವ ಭಾಗಮಂಡಲದ ದಿ.ನಾರಾಯಣ ಸರಳಾಯ ಮತ್ತು ಭವಾನಿ ಸರಳಾಯ ಇವರ ಮಗಳಾಗಿ 16.02.1959ರಂದು ಜನಿಸಿದ ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ ವಾಣಿಜ್ಯ ಪದವೀಧರೆ (B.Com). ಕಾಲೇಜು ದಿನಗಳಲ್ಲಿ ಡಾ.ಚಂದ್ರಶೇಖರ ದಾಮ್ಲೆ, ಸುಳ್ಯ…

Read More

ಉಡುಪಿ : ಹಿರಿಯ ಸಾಹಿತಿ, ಸಂಶೋಧಕ ಡಾ. ಬಿ.ವಿ. ಶಿರೂರು ಇವರು 2024ನೇ ಸಾಲಿನ ‘ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ’ಗೆ ಆಯ್ಕೆಯಾಗಿರುತ್ತಾರೆ. ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿರುತ್ತಾರೆ. ಪ್ರಶಸ್ತಿಯು ರೂಪಾಯಿ 10,000ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. 1941 ಮಾರ್ಚ್ 2ರಂದು ಜನಿಸಿದ ಡಾ. ಬಿ.ವಿ. ಶಿರೂರು 1963ರಲ್ಲಿ ಬಿ.ಎ., 1965ರಲ್ಲಿ ಎಂ.ಎ. ಹಾಗೂ ಪಿ.ಎಚ್.ಡಿ. ಪದವಿ ಪಡೆದರು. ಶ್ರೀಯುತರು 1966ರಿಂದ 1985ರವರೆಗೆ ನರೇಗಲ್‌ ಇಲ್ಲಿನ ಶ್ರೀ ಅನ್ನದಾನೀಶ್ವರ ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರವಾಚಕರಾಗಿ ಹಾಗೂ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ನಂತರ 1985ರಲ್ಲಿ ಕರ್ನಾಟಕ ವಿ.ವಿ.ಯ ಕನ್ನಡ ಅಧ್ಯಯನ ಪೀಠದಲ್ಲಿ ಜೈನಸಾಹಿತ್ಯ ಪ್ರವಾಚಕರಾಗಿ ಸೇರಿ 1994ರಲ್ಲಿ ಪ್ರಾಧ್ಯಾಪಕರಾಗಿ 2001ರಲ್ಲಿ ನಿವೃತ್ತಿಯಾದರು. ಹಳೆಗನ್ನಡ ವಚನ ಸಾಹಿತ್ಯ…

Read More

ಮಂಗಳೂರು : ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಹಾಗೂ ದ. ಕ. ಜಿಲ್ಲಾ ಘಟಕ ವತಿಯಿಂದ ಮಂಗಳೂರು ತಾಲೂಕು ಘಟಕದ ಪದಗ್ರಹಣ ಮತ್ತು ಜಾನಪದ ವಿಚಾರ ಸಂಕಿರಣ ಕಾರ್ಯಕ್ರಮವು ದಿನಾಂಕ 08-06-2024ರ ಅಪರಾಹ್ನ 2.30ಕ್ಕೆ ಉರ್ವ ತುಳು ಭವನದ ಸಮೀಪವಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ಅಧ್ಯಕ್ಷೆ ಚಂಚಲಾ ತೇಜೋಮಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉರ್ವ ಠಾಣೆಯ ಪೊಲೀಸ್ ಇನ್ ಸೆಕ್ಟರ್ ಭಾರತಿ ಜಿ. ಉದ್ಘಾಟಿಸಲಿರುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅತಿಥಿಯಾಗಿ ಭಾಗವಹಿಸಲಿದ್ದು, ಕ. ಜಾ. ಪ. ಅಧ್ಯಕ್ಷ ಪ್ರವೀಣ್ ಕುಮಾರ್, ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ಕೋಶಾಧಿಕಾರಿ ತಾರಾನಾಥ ಶೆಟ್ಟಿ ಬೋಳಾರ, ಜಿಲ್ಲಾ ಸಂಚಾಲಕ ರಾಜೇಶ್ ಆಳ್ವ, ಪ್ರಾಧ್ಯಾಪಕ ಪುರುಷೋತ್ತಮ ಬಲಾಯ ಭಾಗವಹಿಸಲಿದ್ದಾರೆ.

Read More

ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಪೆರಿಯ ಇಲ್ಲಿನ ಕನ್ನಡ ವಿಭಾಗದ ವತಿಯಿಂದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪೆರಿಯ ಕಾಲೇಜಿನಲ್ಲಿ ಕನ್ನಡದ ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿಯವರ ‘ಅಬಚೂರಿನ ಪೋಸ್ಟಾಫೀಸು’ ಎಂಬ ಕಥಾಸಂಕಲನದ ಕಥೆಗಳ ಕುರಿತ ವಿಮರ್ಶಾ ಸ್ಪರ್ಧೆಯು ದಿನಾಂಕ 30-05-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಲಕ್ಷ್ಮೀ ನಾರಾಯಣ ಕಜಿಗದ್ದೆ ಮಾತನಾಡಿ ಪೂರ್ಣಚಂದ್ರ ತೇಜಸ್ವಿಯವರ ಬರವಣಿಗೆಯ ವಿಶೇಷತೆಯನ್ನು ವಿವರಿಸಿದರು. ಅಲ್ಲದೆ ಜೀವನದಲ್ಲಿ ಸಾಹಿತ್ಯದ ಓದು, ಆಸಕ್ತಿಯ ಮಹತ್ವದ ಕುರಿತು ತಿಳಿಸಿದರು. ಸಾಹಿತ್ಯದ ಓದು ನಮ್ಮನ್ನು ಇತರರಿಗಿಂತ ಭಿನ್ನವಾಗಿಸುತ್ತದೆ ಎಂದರು. ಕಾರ್ಯಕ್ರಮದ ಸಂಯೋಜಕ ಕೇರಳ ಕೇಂದ್ರಿಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ. ಸೌಮ್ಯಾ ಎಚ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್‌ಕುಮಾರ್ ಕೆ. ಆರ್. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಿಕೆಯರಾದ ಡಾ.ಜಯಶ್ರೀ ಮತ್ತು ಸರಸ್ವತಿ ಕೆ. ಉಪಸ್ಥಿತರಿದ್ದರು. ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ…

Read More