Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಮಂಗಳೂರಿನ ಕೋಡಿಕಲ್ಲಿನ ಸರಯೂ ಮಕ್ಕಳ ಮೇಳದ ‘ಸರಯೂ ಸಪ್ತಾಹ-2024’ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳ ಮದ್ದಳೆ ಕಾರ್ಯಕ್ರಮದ ನಾಲ್ಕನೇ ದಿನದ ಕಾರ್ಯಕ್ರಮವು ದಿನಾಂಕ 28-05-2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಯಮದಲ್ಲಿ ಅತಿಥಿಯಾಗಿ ಭಾಗವಹಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ವಿಮರ್ಶಕ ಡಾ. ಎಂ.ಪ್ರಭಾಕರ ಜೋಷಿ “ವಿಶ್ವದ ರಂಗಭೂಮಿ ಅದ್ಭುತವಾಗಿ ಬೆಳೆದಿದೆ. ಅಂತೆಯೇ ಯಕ್ಷಗಾನ ರಂಗಭೂಮಿಯೂ ತನ್ನನ್ನು ತಾನು ತೆರೆದುಕೊಂಡು ವಿಶಾಲ ಭಾವದಿಂದ ವಿಕಾಸಗೊಳ್ಳಬೇಕಾಗಿದೆ. ಮಕ್ಕಳ ಯಕ್ಷಗಾನ, ಮಹಿಳಾ ಯಕ್ಷಗಾನ ಹೀಗೆಲ್ಲಾ ಎಗ್ಗೆಗಳು ಆರಂಭವಾಗಿದೆ ಆ ದೃಷ್ಟಿಯಲ್ಲಿ ರಜತ ವರ್ಷದ ಹೊಸ್ತಿಲಲ್ಲಿರುವ ಸರಯೂ ಮಕ್ಕಳ ಮೇಳವೂ ಯೋಚಿಸಬೇಕು. ಪ್ರಬುದ್ಧ ಕಾರ್ಯಕ್ರಮಗಳ ಮೂಲಕ ಬೆಳೆಯಬೇಕು. ಹಿರಿಯರ ಮಾರ್ಗದರ್ಶನ, ಕಿರಿಯರ ಬಾಗೀದಾರಿಕೆಯಿಂದ ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿ ಸರಯೂ ಮನೆ ಮಾತಾಗಲಿ.” ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಪ್ರೋತ್ಸಾಹಕ ಹಾಗೂ ತೆಂಕು-ಬಡಗಿನ ಸಮನ್ವಯಕಾರ ಕೆರೆಮನೆ ಶ್ರೀಶಿವಾನಂದ ಹೆಗಡೆ…
ಮಂಗಳೂರಿನ ದುರ್ಗಾಮಹಿ ಪ್ರಕಾಶನ ಪ್ರಕಟಿಸಿರುವ ಕವಯಿತ್ರಿ ಮತ್ತು ಸಂಘಟಕಿ ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ (ಪ್ರಕಾಶನ: 2023) ಮೂವತ್ತು ಕವನಗಳಿರುವ ಒಂದು ತುಳು ಕವನ ಸಂಕಲನ. ಪುಟದ ಎಡಭಾಗದಲ್ಲಿ ತುಳುಲಿಪಿಯಲ್ಲಿ ಕವನವನ್ನು ಮುದ್ರಿಸಲಾಗಿದ್ದು ಪುಟದ ಬಲಗಡೆ ಅದೇ ಕವನವನ್ನು ಕನ್ನಡ ಲಿಪಿಯಲ್ಲಿ ಮುದ್ರಿಸಿರುವುದು ಈ ಸಂಕಲನದ ವೈಶಿಷ್ಟ್ಯ. ತುಳುಲಿಪಿಯನ್ನು ಪ್ರಚುರಪಡಿಸುವುದು ಕೂಡ ತನ್ನ ಉದ್ದೇಶಗಳಲ್ಲೊಂದು ಎಂದು ಕವಯಿತ್ರಿ ಹೇಳಿಕೊಂಡಿದ್ದಾರೆ. ಅದು ನಿಜವೂ ಹೌದು; ಈ ಕೃತಿಯಲ್ಲಿ ತುಳುಲಿಪಿಯ ಪರಿಚಯ ಕೂಡ ಮಾಡಿಕೊಡಲಾಗಿದೆ. ತುಳುವಿನ ಸ್ವರಾಕ್ಷರಗಳು, ವ್ಯಂಜನಗಳು, ಗುಣಿತಾಕ್ಷರಗಳು ಮತ್ತು ಒತ್ತಕ್ಷರಗಳನ್ನು ನೀಡಲಾಗಿದ್ದು ತುಳುಲಿಪಿಯನ್ನು ಕಲಿಯುವವರಿಗೆ ಅನುಕೂಲವಾಗಲಿದೆ. ‘ಪೆರ್ಗದ ಸಿರಿ’ ಎಂದರೆ ಸ್ವರ್ಗದ ಶ್ರೀಮಂತಿಕೆ ಎಂದು ಅರ್ಥ. ನಮ್ಮ ಈ ತುಳುನಾಡು ಸ್ವರ್ಗದಂತಹ ಭೂಮಿ ಎಂದು ಕವಯಿತ್ರಿ ಹೇಳುತ್ತಾರೆ. ನಂದಿನಿ ನದಿಯ ತಟದಲ್ಲಿ ಕಟೀಲಿನ ದುರ್ಗಾಂಬಿಕೆಯ ವರದಹಸ್ತದ ನೆರಳಿನಲ್ಲಿ ಸಮೃದ್ಧಿಯ ಜೀವನ ನಡೆಸುತ್ತಿರುವ ನಾವು ಪುಣ್ಯವಂತರು ಎಂದು ಜನ್ಮ ನೀಡಿದ ತಾಯಿಯನ್ನು ಮತ್ತು ಪೊರೆಯುವ ಭೂಮಿಯನ್ನು ನೆನೆಯುತ್ತಾರೆ: ‘ಪೈರುಪಚ್ಚೆಗಳಿಲ್ಲಿ ಉಕ್ಕುತ್ತದೆ ಹಾಲಿನ…
ಬಂಟ್ವಾಳ: ‘ಅಭಿರುಚಿ’ ಜೋಡುಮಾರ್ಗ ಆಯೋಜಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ ಎಂಬ ವಿನೂತನ ಕಾರ್ಯಕ್ರಮ ಬಿ. ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ದಿನಾಂಕ 26-05-2024ರ ಭಾನುವಾರ ಸಂಜೆ ನಡೆಯಿತು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಮಹಾಭಾರತ ಯಾತ್ರೆ’ ಕುರಿತು ಅವಲೋಕನ, ಸಂವಾದ, ಗೌರವಾರ್ಪಣೆ ನಡೆಯಿತು. ಈ ಸಂದರ್ಭ ಮಹಾಭಾರತದ ಪಾತ್ರಗಳ ವ್ಯಕ್ತಿತ್ವ ವಿಸ್ತಾರದ ಕುರಿತು ಮೂಡಿದ ಜಿಜ್ಞಾಸೆಗಳಿಗೆ ಉತ್ತರಿಸಿದ ಲಕ್ಷ್ಮೀಶ ತೋಳ್ಪಾಡಿ “ಮಹಾಭಾರತ ದಟ್ಟ ಲೌಕಿಕತೆಯೊಂದಿಗೆ ಅಷ್ಟೇ ಆಧ್ಯಾತ್ಮಿಕವಾಗಿರುವ ಕೃತಿಯಾಗಿದೆ. ಸೃಷ್ಟಿಶೀಲವಾದುದು ಮಹಾಭಾರತ ಎಂದರು. ಬಿ. ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷರಾದ ಕಜೆ ರಾಮಚಂದ್ರ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೇಖಕ ಪೃಥ್ವಿರಾಜ್ ಕವತ್ತಾರ್ ಭಾಗವಹಿಸಿ ಮಾತನಾಡಿದರು. ಸಂವಾದದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ ಭಟ್ಟ, ರಂಗಕರ್ಮಿ ಮೂರ್ತಿ ದೇರಾಜೆ, ಕೃಷಿಕ ಹಾಗೂ…
ಮಂಗಳೂರು : ಸೋಮೇಶ್ವರದ ಕೊಲ್ಯ ಇಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ಕರ್ನಾಟಕ ರಾಜ್ಯೋತ್ಸವ ಮತ್ತು ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ – ಮಾಲಿಕೆ 5ರಲ್ಲಿ ‘ನಾಟ್ಯ ಮೋಹನ ನವತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 31-05-2024ರಂದು ಸಂಜೆ ಗಂಟೆ 5-00ಕ್ಕೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪುಣೆಯ ನೃತ್ಯನಿಕೇತನದ ನಿರ್ದೇಶಕರು ಹಾಗೂ ಕೊಲ್ಯದ ನಾಟ್ಯನಿಕೇತನ ಹಿರಿಯ ವಿದ್ಯಾರ್ಥಿನಿಯಾದ ಶ್ರೀಮತಿ ಕವಿತಾ ತೋಳ್ಪಾಡಿ ನೃತ್ಯ ಪ್ರಸ್ತುತಿ ನೀಡಲಿದ್ದಾರೆ. ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು ದೇವತಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಉರ್ವಸ್ಟೋರ್ ಇದರ ಅತಿಥಿ ಉಪನ್ಯಾಸಕಿ ಹಾಗೂ ಭರತನಾಟ್ಯ ಕಲಾವಿದೆ ಶ್ರೀಮತಿ ಅರುಣಾ ಸುರೇಶ್ ಇವರು ಭಾಗವಹಿಸಲಿದ್ದಾರೆ.
ಉಳ್ಳಾಲ : ದ.ಕ. ಜಿಲ್ಲಾ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ಸಂಘಟನೆಯು ತ್ರಿವಳಿ (ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು) ಜಿಲ್ಲಾ ಮಟ್ಟದ ‘ಸುಗಿತ್ ನಲಿಪುಗ 2024’ ಕುಣಿತ ಭಜನಾ ಸ್ಪರ್ಧೆಯನ್ನು ದಿನಾಂಕ 19-05-2024ರಂದು ಅಂಬಿಕಾ ರಸ್ತೆಯ ಗಟ್ಟಿ ಸಮಾಜ ಭವನದಲ್ಲಿ ಆಯೋಜಿಸಿದ್ದರು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು “ಹಿಂದೆ ಭಜನೆ ಮತ್ತು ಯಕ್ಷಗಾನವನ್ನು ತಾತ್ಸಾರವಾಗಿ ನೋಡುತ್ತಿದ್ದು, ಇಂದು ಶಿಕ್ಷಣ, ಪದವಿ ಪಡೆದವರೇ ಈ ಕ್ಷೇತ್ರದತ್ತ ಬರುತ್ತಿದ್ದಾರೆ. ಭಜನೆ ಎನ್ನುವುದು ಧರ್ಮ ಶಿಕ್ಷಣದ ಪಠ್ಯ, ಅಸ್ಪೃಶ್ಯತೆಯ ಘಾಟು ಇದರಲ್ಲಿಲ್ಲ, ಇಹ ಪರದ ಸೇರುವಿಕೆಯಾಗಿರುವ ಭಜನೆಯ ಮೂಲಕ ಬದುಕು ಕಟ್ಟಿಕೊಳ್ಳಬಹುದು. ಹತ್ತು ಮಂದಿಗೆ ಜಾಗೃತಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧೆ ಅಗತ್ಯ” ಎಂದು ನುಡಿದರು. ಈ ವೇಳೆ ಸಾಯಿ ಪರಿವಾರ್ ಟ್ರಸ್ಟಿನ ಮಹಾಪೋಷಕರಾದ ಪ್ರವೀಣ್ ಶೆಟ್ಟಿ ಪಿಲಾರು ಮೇಗಿಮನೆ ಇವರಿಗೆ ‘ಸಾಯಿ…
ಸುರತ್ಕಲ್ : ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ-2024’ ದಿನಾಂಕ 14-05-2024ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಯಾದ ಭಾಸ್ಕರ್ ರಾವ್ ಬಾಳ “ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತ ಪ್ರತಿಭೆ ಅಡಕವಾಗಿದ್ದು ಉತ್ತಮ ವೇದಿಕೆಗಳು ದೊರಕಿದಾಗ ಆ ಪ್ರತಿಭೆಗಳು ಅನಾವರಣಗೊಳ್ಳುತ್ತದೆ. ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ನಾಯಕತ್ವ ಗುಣ ಬೆಳೆಯಲು ಸಾಧ್ಯ.” ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್ ಇದರ ಅಧ್ಯಕ್ಷೆ ಡಾ. ಸಾಯಿಗೀತಾ ಮತ್ತು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಡಿ. ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ “ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೋವಿಂದ ದಾಸ ಕಾಲೇಜು ಅತ್ಯುತ್ತಮ ವೇದಿಕೆಗಳನ್ನು ಒದಗಿಸುತ್ತಿದೆ.” ಎಂದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿಂದೂ ವಿದ್ಯಾದಾಯಿನೀ ಸಂಘ (ರಿ)ದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ಮಾತನಾಡಿ…
ಹೊಸದುರ್ಗ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಇರುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ, ದೃಶ್ಯ, ಶ್ರವ್ಯ ಹಾಗೂ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ವಿಳಾಸ : ಪ್ರಾಚಾರ್ಯರು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ-577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ನಮ್ಮ ರಂಗಶಾಲೆಯ…
ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಕೊಡಗು ಇದರ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಕೊಡಗು ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯು ದಿನಾಂಕ 01-06-2024ರಂದು ಮಡಿಕೇರಿಯ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯಲ್ಲಿ ಬೆಳಗ್ಗೆ ಘಂಟೆ 9.30ರಿಂದ ನಡೆಯಲಿದೆ. ಸ್ಪರ್ಧೆಗೆ ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು.ಈ ವರ್ಷದ ಘೋಷ ವಾಕ್ಯವು ‘ಭೂ ಮರುಸ್ಥಾಪನೆ’, ‘ಮರುಭೂಮೀಕರಣ’ ಹಾಗು ‘ಬರ ತಡೆಯುವಿಕೆ’ ಆಗಿರುತ್ತದೆ. ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ. ಜಿ. ರಘುರಾಮ್ ಪರಿಸರ ಅಧಿಕಾರಿಗಳು – 9845026348, ಆಸ್ಟಿನ್ ಕೆ. ಎ. ಯೋಜನಾ ಸಹಾಯಕರು – 7760738447 ( 08272- 221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಇವರನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ…
ಮಂಗಳೂರು : ಮಂಗಳೂರಿನ ಕೋಡಿಕಲ್ಲಿನ ಸರಯೂ ಮಕ್ಕಳ ಮೇಳದ ‘ಸರಯೂ ಸಪ್ತಾಹ-2024’ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳ ಮದ್ದಳೆ ಕಾರ್ಯಕ್ರಮದ ಮೂರನೇ ದಿನದ ಕಾರ್ಯಕ್ರಮವು ದಿನಾಂಕ 27-05-2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವೇದಮೂರ್ತಿ ವೆಂಕಟ್ರಮಣ ಅಸ್ರಣ್ಣ ಮಾತನಾಡಿ “ಧರ್ಮ ಹಾಗೂ ನಂಬಿಕೆಯ ಮೇಲೆ ಯಕ್ಷಗಾನ ಬೆಳೆದಿದೆ. ಯಕ್ಷಗಾನವು ಶುದ್ಧ ಧಾರ್ಮಿಕ ಕಲೆ. ಧರ್ಮಪ್ರಸಾರದ ಜೊತೆ ಜೊತೆಯಲ್ಲೇ ನಮ್ಮ ಪೌರಾಣಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಸಾಗಿದೆ. ದೇವಿ ಮಹಾತ್ಮೆಯು ಜನಮಾನಸದಲ್ಲಿ ಅಚ್ಚಳಿಯದೇ ಉಳಿಯಲು ಅದೇ ಕಾರಣ. ಕ್ಷೇತ್ರಗಳ ಮೂಲಕ ಹೊರಡುವ ಮೇಳಗಳೂ ಇದೇ ಸಂದೇಶವನ್ನು ಸಾರುತ್ತಿವೆ. ಸರಯೂ ಮಕ್ಕಳ ಮೇಳವೂ ಇದೇ ತತ್ತ್ವದ ಮೇಲೆ ಬೆಳಗಲಿ” ಎಂದು ಆಶೀರ್ವಚನವಿತ್ತರು. ಇದೇ ಸಂದರ್ಭದಲ್ಲಿ ಕಟೀಲು ಮೇಳದ ಪ್ರಧಾನ ಸ್ತೀ ವೇಷಧಾರಿ ಶ್ರೀ ಅರಣ್ ಕುಮಾರ್ ಕೋಟ್ಯಾನ್ ಇವರಿಗೆ ‘ಯಕ್ಷ ಸರಯೂ’ ಬಿರುದು ನೀಡಿ ಸನ್ಮಾನಿಸಲಾಯಿತು. ಪೂರ್ಣಿಮಾ ಪ್ರಭಾಕರ ರಾವ್ ಅಭಿನಂದನಾ…
ಕನ್ನಡ ಸಾಹಿತ್ಯ ಪರಿಷತ್ತಿನ 2023ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿತ್ತು, 01-01 2023 ರಿಂದ 31-12-2023 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದು, 31-05-2024ಕೊನೆ ದಿನವೆಂದು ಈ ಹಿಂದಿನ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದರು. ನಾಡಿನೆಲ್ಲೆಡೆಯಿಂದ ಸಾಹಿತ್ಯಾಸಕ್ತರು, ಬರಹಗಾರರು ಕೊನೆಯ ದಿನವನ್ನು ವಿಸ್ತರಿಸುವಂತೆ ಕೋರಿದ್ದರಿಂದ ಕೊನೆಯ ದಿನವನ್ನು 15-06-2024ರ ವರೆಗೆ ವಿಸ್ತರಿಸಲಾಗಿದ್ದು, ಸಾಹಿತ್ಯಾಸಕ್ತರು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ತಿಳಿಸಿದ್ದಾರೆ. 2023ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು…