Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಗಾನ ಗಂಧರ್ವ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಜನ್ಮದಿನೋತ್ಸವದ ಅಂಗವಾಗಿ ಗಾಯಕ ಯಶವಂತ ಎಂ. ಜಿ. ಅವರಿಂದ 24 ಗಂಟೆಗಳ ಕಾಲ ನಿರರ್ಗಳವಾಗಿ ಗಾಯನ ಕಾರ್ಯಕ್ರಮ ‘ಬಾಲಗಾನ ಯಶೋಯಾನ’ಕ್ಕೆ ಚಾಲನಾ ಕಾರ್ಯಕ್ರಮ ದಿನಾಂಕ 03 ಜೂನ್ 2025ರ ಮಂಗಳವಾರದಂದು ಮಂಗಳೂರಿನ ಕುದ್ದುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ವಿರಾಜಪೇಟೆ ಡಿವೈಎಸ್ಪಿ ಎಸ್. ಮಹೇಶ್ ಕುಮಾರ್ ಮಾತನಾಡಿ “ಒಬ್ಬನೇ ವ್ಯಕ್ತಿ 24 ಗಂಟೆ ಹಾಡುವುದು ಸಾಮಾನ್ಯ ವಿಷಯವಲ್ಲ. ಇದೊಂದು ಅದ್ಭುತ ಕಾರ್ಯಕ್ರಮ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಸಲ್ಲಿಸುವ ನೈಜ ಗೌರವವಾಗಿದೆ” ಎಂದರು. ಉದ್ಯಮಿ ಮಲ್ಲಿಕಾ ಶೆಟ್ಟಿ, ಕರಾವಳಿ ಸಂಗೀತ ಒಕ್ಕೂಟದ ಅಧ್ಯಕ್ಷರಾದ ಕೇಶವ ಕನಿಲ, ಶ್ರೀರಂಗ ಕನ್ಸ್ಟಕ್ಷನ್ಸ್ ಇದರ ರಾಘವೇಂದ್ರ ಆಚಾರ್ಯ, ಉದ್ಯಮಿ ಕೆ. ಕೆ. ನೌಷಾದ್ ಮುಖ್ಯ ಅತಿಥಿಗಳಾಗಿದ್ದರು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷಿಯಾ ಮುಖ್ಯಸ್ಥ ಡಿ.ಮನೀಶ್ ವಿಲ್ಲೋಯ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮ್ಯಾಂಡೋಲಿನ್ ವಾದಕ ದೇವರಾಜ ಆಚಾರ್, ಕೀಬೋರ್ಡ್ ವಾದಕ ಸತೀಶ್ ಸುರತ್ಕಲ್,…
ಸುರತ್ಕಲ್ : ಸುರತ್ಕಲ್ ಹಿಂದು ವಿದ್ಯಾದಾಯಿನಿ ಸಂಘದ ಆಡಳಿತಕ್ಕೆ ಒಳಪಟ್ಟ ಇಡ್ಯಾ ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭ ಉತ್ಸವ, ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಸಮಾರಂಭ ದಿನಾಂಕ 02 ಜೂನ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕಿ ಕಸ್ತೂರಿ ಪಿ. ಮಾತನಾಡಿ “ಪ್ರಾಥಮಿಕ ಶಾಲಾ ಶಿಕ್ಷಣದ ಹಂತದಲ್ಲಿಯೇ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಮೂಡಿಸಿಕೊಳ್ಳಬೇಕು. ಬದುಕಿನ ಉನ್ನತಿಗೆ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ವಿದ್ಯಾ ಸಂಸ್ಥೆಗಳು ನೀಡಬೇಕು” ಎಂದರು. ಸಮಾರಂಭವನ್ನು ಉದ್ಘಾಟಿಸಿ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಗೋವಿಂದದಾಸ ಕಾಲೇಜ್ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಕೃಷ್ಣಮೂರ್ತಿ. ಪಿ. “ನೂರ ಒಂಬತ್ತು ವರ್ಷಗಳ ಭವ್ಯ ಪರಂಪರೆ ಹೊಂದಿರುವ ವಿದ್ಯಾದಾಯಿನಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ. ಪುಸ್ತಕ ಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯ ಮಹತ್ವದ ಪಾತ್ರ ವಹಿಸುತ್ತದೆ” ಎಂದು ನುಡಿದರು.…
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ `ವೃತ್ತಿಪರ ಕಲಾವಿದರಿಗಾಗಿ ಕಲಾಪಗಳು ‘ ಕಾರ್ಯಕ್ರಮ ದಿನಾಂಕ 31 ಮೇ 2025ರ ಶನಿವಾರದಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಹಿಂದೆ ಶ್ರದ್ಧಾಭಕ್ತಿಯಿಂದ ಕಲಾವಿದರು ವೃತ್ತಿಪರರಾಗಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿದರು. ಇಂದು ಈ ಕ್ಷೇತ್ರಕ್ಕೆ ವೈದ್ಯರು, ಇಂಜೀನಿಯರ್, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಕಲೆಯ ತೇರನ್ನು ಮುಂದೆಳೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ ಮತ್ತೊಂದೆಡೆ ಯಕ್ಷಗಾನ ತನ್ನ ಸಾಂಪ್ರಾದಾಯಿಕ ಚೌಕಟ್ಟನ್ನು ಮೀರುತ್ತಿದೆ ಎಂಬ ದೂರುಗಳು ಕೂಡಾ ಅಕಾಡೆಮಿಯ ಕದವನ್ನು ತಟ್ಟುತ್ತಿವೆ. ಆದ್ದರಿಂದ ಈ ಸಂಕ್ರಮಣ ಕಾಲದಲ್ಲಿ ಯಕ್ಷಗಾನ ಕಲೆಯ ಗರಿಮೆಗೆ ಚ್ಯುತಿ ಬಾರದಂತೆ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯಕ್ಷಗಾನ ಕಲಾವಿದರ ಮೇಲಿದೆ. ಯಕ್ಷಗಾನ ಕರಾವಳಿ ಮಾತ್ರವಲ್ಲದೆ ವಿವಿಧ ಜಿಲ್ಲೆಗಳಲ್ಲಿ, ರಾಜ್ಯಗಳಲ್ಲಿ ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೂ ಯಕ್ಷಗಾನವನ್ನು ಕೊಂಡೊಯ್ಯುವ ಕಾರ್ಯ ಅಕಾಡೆಮಿ ಮಾಡಲಿದೆ.…
ಮಂಗಳೂರು: ಮಂಗಳೂರಿನ ಬಿಜೈಯಲ್ಲಿರುವ ನೃತ್ಯಾಂಗನ್ ಸಂಸ್ಥೆ ಆಯೋಜಿಸುವ ‘ಯುವ ನೃತ್ಯೋತ್ಸವ – 2025’ ಕಾರ್ಯಕ್ರಮವು ಡಾ. ಅರುಣ್ ಕುಮಾರ್ ಮೈಯಾ ಇವರ ಸ್ಮರಣಾರ್ಥ ದಿನಾಂಕ 08 ಜೂನ್ 2025ರಂದು ಮಂಗಳೂರಿನ ಡಾನ್ಬಾಸ್ಕೋ ಸಭಾಂಗಣದಲ್ಲಿ ನಡೆಯಲಿದೆ. ಅಂದು ಸಾಯಂಕಾಲ ಘಂಟೆ 5.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಭರತಾಂಜಲಿ ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ಚಾಲನೆ ನೀಡುವರು. ಯುವ ನೃತ್ಯೋತ್ಸವ-2025ರ ಪ್ರಯುಕ್ತ ಉದಯೋನ್ಮುಖ ಕಲಾವಿದೆಯರಾದ ಶ್ರೇಷ್ಠಾ ಆರ್. ದೇವಾಡಿಗ, ಪೂಜಾ ಸುಗಮ್, ಶ್ರೇಯಾ ಜಿ. ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಪಡಿಸುವರು. ಪೃಥ್ವಿ ನಾಯಕ್ ಏಕವ್ಯಕ್ತಿ ಒಡಿಸ್ಸಿ ನೃತ್ಯ ಪ್ರಸ್ತುತಪಡಿಸುವರು. ಬಳಿಕ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರ ಶಿಷ್ಯೆಯಂದಿರು ಸಮೂಹ ನೃತ್ಯ ಪ್ರಸ್ತುತಪಡಿಸುವರು. ಆಸಕ್ತರಿಗೆ ಉಚಿತ ಪ್ರವೇಶ ಎಂದು ನೃತ್ಯಾಂಗನ್ ಸಂಸ್ಥೆಯ ನಿರ್ದೇಶಕಿ, ಕಲಾವಿದೆ ರಾಧಿಕಾ ಶೆಟ್ಟಿ ತಿಳಿಸಿದ್ದಾರೆ.
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಅಧ್ಯಕ್ಷರಾಗಿ ಬಳಿಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಹಾಗೂ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿ ಸೇವೆ ಸಲ್ಲಿಸಿದ ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಅಭಿವಂದನ ಸಮಾರಂಭವು ದಿನಾಂಕ 03 ಜೂನ್ 2025ರ ಮಂಗಳವಾರದಂದು ಮಂಗಳೂರು ವಿವಿಯಲ್ಲಿ ನಡೆಯಿತು. ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದ ಅವರು “ನಾವು ಕರಾವಳಿಯಲ್ಲಿ ದ್ವೇಷ ಬಿತ್ತುವುದು ಬೇಡ. ಬೆಂಕಿ ಹಚ್ಚೋದೂ ಬೇಡ. ಮನುಷ್ಯ ಪ್ರೀತಿಯ ದೀಪ ಹಚ್ಚೋಣ. ಬಹುತ್ವದ ಈ ಮಣ್ಣಿನಲ್ಲಿ ನಾಡಿಗೆ ಹೊಸ ಸಂವೇದನೆಯನ್ನು ದಾಟಿಸಬಲ್ಲ ಶಕ್ತಿಯಿದೆ. ಎಲ್ಲ ಅಭಿಪ್ರಾಯಗಳಿಗೂ ಕಿಟಕಿ ಬಾಗಿಲುಗಳನ್ನು ತೆರೆದಿಟ್ಟು ಪರಸ್ಪರ ಗೌರವ ಪ್ರೀತಿಗೆ ಬದ್ಧವಾದ ಸಮಾಜವನ್ನು ಕಟ್ಟೋಣ. ವಿಶ್ವವಿದ್ಯಾನಿಲಯಗಳನ್ನು ಕಟ್ಟಡ, ಹಣದಿಂದ ಕಟ್ಟಲು ಸಾಧ್ಯವಿಲ್ಲ. ಶೈಕ್ಷಣಿಕ ಕಾಳಜಿ, ಜ್ಞಾನದ ಬಗೆಗಿನ ಹಸಿವು ಮತ್ತು ಮಾನವೀಯ ಸಂಬಂಧಗಳ ಸಂಘಟಿತ ಪ್ರಯತ್ನದ ಮೂಲಕ ಕಟ್ಟಬೇಕು. ಕುವೆಂಪು ಮತ್ತು…
ಮಂಗಳೂರು : ಮಂಗಳೂರಿನ ಕಲಾಂಗಣದಲ್ಲಿ ಗಾಯನ, ನಾಟಕ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ದಿನಾಂಕ 01 ಜೂನ್ 2025ರಂದು ಶಕ್ತಿನಗರದ ಕಾಲಾಂಗಣದಲ್ಲಿ ನಡೆಯಿತು. ಎರಡನೇ ವರ್ಷದ ಸುರ್ ಸೊಭಾಣ್ ಗಾಯನ ತರಬೇತಿಯ ಗ್ರೇಡ್ I ಮತ್ತು ಗ್ರೇಡ್ I I ವರ್ಗಗಳ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇದೇ ಸಂದರ್ಭದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಅಬ್ಬಲಿಗೆ ಹೂವಿನ ಬುಟ್ಟಿಯಿಂದ ಪಾಠ ಪುಸ್ತಕಗಳನ್ನು ತೆಗೆದು ಉದ್ಘಾಟಿಸಿದ ಹಿರಿಯ ಗಾಯಕಿ ಜೊಯ್ಸ್ ಒಝೇರಿಯೊ ಮಾತನಾಡಿ “ನಾವು ಸಣ್ಣವರಿರುವಾಗ ನಮ್ಮಲ್ಲಿ ಪ್ರತಿಭೆಯಿದ್ದರೂ ತರಬೇತಿ ಪಡೆಯುವ ಅವಕಾಶಗಳಿರಲಿಲ್ಲ. ಹಾಗಾಗಿ ಸ್ವಪ್ರಯತ್ನದಿಂದಲೇ ಕಲಿಯಬೇಕಾಯಿತು. ಆದರೆ ಇಂದು ತರಬೇತಿ ಇಲ್ಲದಿದ್ದರೆ ಯಾವುದೇ ಪ್ರತಿಭೆ ಅರಳಲು ಕಷ್ಟ. ಇಂತಹ ಸಂದರ್ಭದಲ್ಲಿ ಸುರ್ ಸೊಭಾಣ್ ತರಬೇತಿಯ ಅಗತ್ಯ ಮನದಟ್ಟಾಗುತ್ತದೆ. ವ್ಯವಸ್ಥಿತವಾಗಿ ಮಾಂಡ್ ಸೊಭಾಣ್ ನಿಮಗೆ ತರಬೇತಿ ನೀಡುತ್ತಿದೆ. ಇದರ ಪ್ರಯೋಜನ ಪಡೆಯಿರಿ. ನಿಮ್ಮಿಂದ ಕೊಂಕಣಿಗೆ ಉನ್ನತ ಗಾಯಕ ಗಾಯಕಿಯರು ಲಭಿಸಲಿ.’’ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಶಿಕ್ಷಕಿ ಶಿಲ್ಪಾ ತೇಜಸ್ವಿನಿ ಕುಟಿನ್ಹಾ,…
‘ಗ್ರಂಥಾಲೋಕ’ ಹಿರಿಯ ವಿದ್ವಾಂಸರಾದ ಪ್ರೊ. ಪಾದೇಕಲ್ಲು ವಿಷ್ಣು ಭಟ್ಟರು ಬರೆದ ಗ್ರಂಥ ಪರಿಚಯ ಲೇಖನಗಳ ಸಂಕಲನ. ಇದು ಕಥೆ-ಕಾದಂಬರಿ-ಕಾವ್ಯ-ನಾಟಕ ಕೃತಿಗಳ ಅವಲೋಕನವಲ್ಲ. ಇದರಲ್ಲಿರುವುದು ಭಾರತೀಯ ಪ್ರಾಚೀನ ಸಾಹಿತ್ಯದ ಮೇಲೆ ಕನ್ನಡದಲ್ಲಿ ಬಂದ ಹಲವು ಕೃತಿಗಳ ಪರಿಚಯ ಲೇಖನಗಳು. ಕೆಲವು ಸ್ಥೂಲ ನೋಟಗಳಾದರೆ ಇನ್ನು ಕೆಲವು ಸಮಗ್ರ ಚಿತ್ರಣವನ್ನು ನೀಡುವ ದೀರ್ಘ ಬರಹಗಳು. ಇದರಲ್ಲಿ ಇಂದಿನ ಸಾಹಿತ್ಯ ಸಂದರ್ಭದಲ್ಲಿ ಮಹತ್ವವೆನ್ನಿಸುವ 53 ಕೃತಿಗಳನ್ನು ವಿಷ್ಣು ಭಟ್ಟರು ಪರಿಚಯಿಸಿದ್ದಾರೆ. ಸಾಂಸ್ಕೃತಿಕ ಪದಕೋಶ, ಸಂಶೋಧನ ಸಂಪುಟ, ಕನ್ನಡ ವ್ಯಾಕರಣ, ಪೌರಾಣಿಕ ಪದಕೋಶ, ಅನುವಾದಿತ ಗ್ರಂಥಗಳು, ರಾಮಾಯಣ-ಮಹಾಭಾರತಗಳನ್ನು ಆಧರಿಸಿ 20ನೆಯ ಶತಮಾನದಲ್ಲಿ ಬೇರೆ ಬೇರೆ ಕವಿಗಳಿಂದ ಬರೆಯಲ್ಪಟ್ಟ ಕಾವ್ಯ ಕೃತಿಗಳು, ವಚನ ಸಾಹಿತ್ಯ ಮತ್ತು ಹೊಸ ಆಲೋಚನೆಗಳ ಮೇಲೆ ಮಾಡಿದ ಪ್ರಯೋಗಗಳು- ಹೀಗೆ ಅತ್ಯಂತ ಗಂಭೀರ ಮತ್ತು ಆಸಕ್ತಿಕರ ಕೃತಿಗಳನ್ನು ಅವರು ಚರ್ಚಿಸಿದ್ದಾರೆ. ಇಲ್ಲಿ ಚರ್ಚಿಸಲಾದ ಕೆಲವು ಕೃತಿಗಳು – ಕೆ. ಅನಂತರಾಮು ಅವರು ದಕ್ಷಿಣ ಕನ್ನಡದ ಬಗ್ಗೆ ಬರೆದ ‘ದಕ್ಷಿಣದ ಸಿರಿನಾಡು’ (1800 ಪುಟಗಳ ಬೃಹತ್…
ಬೆಂಗಳೂರು : ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರು ಮತ್ತು ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕಲಬುರಗಿ ಇದರ ಸಹಯೋಗದೊಂದಿಗೆ ಮಕ್ಕಳ ಕೃತಿಗಳ ಲೋಕಾರ್ಪಣೆ ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 05 ಜೂನ್ 2025ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಜಮಖಂಡಿ ಶಾಸಕರಾದ ನಾಡೋಜ ಜಗದೀಶ ಶಿವಯ್ಯ ಗುಡಗುಂಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ಣಾಟಕ ಗಾಂಧಿ ಸ್ಮಾರಕ ನಿಧಿ ಇವರ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಇವರು ದೇವುಡು ಹೇಳಿದ ಮಕ್ಕಳ ಕಥೆಗಳು ಎಂಬ ಐದು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮದರಾಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ತಮಿಳ್ ಸೆಲ್ವಿ ಇವರಿಗೆ ನಾಡೋಜ ಕುಂ. ವೀರಭದ್ರಪ್ಪ ಇವರು ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಿರುವರು.
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3’ ಶೀರ್ಷಿಕೆಯಡಿ ಕವಿಗೋಷ್ಠಿಯು ದಿನಾಂಕ 07 ಜೂನ್ 2025ರಂದು ಮಂಗಳೂರಿನ ಅಕಾಡೆಮಿಯ ಸಭಾಂಗಣದಲ್ಲಿ ನಡೆಯಲಿದೆ. ”ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಪ್ಯಾನಿ ಆಲ್ವಾರಿಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಹುಕಾರ್ ಕಿರಣ್ ಪೈ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಮತ್ತು ಕವಿ ನವೀನ್ ಕುಲಶೇಕರ್ ಇವರನ್ನು ಸಮ್ಮಾನಿಸಲಾಗುವುದು. ಕವಿ ಟೈಟಸ್ ನೊರೊನ್ಹಾ ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಡಾ. ಪ್ಲಾವಿಯಾ ಕ್ಯಾಸ್ತೆಲಿನೊ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಷ್ಠಿಯಲ್ಲಿ ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಗೋಡ್ವನ್ ಪಿಂಟೊ, ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ ಮೊದಲಾದವರು ತಮ್ಮ ಕವಿತೆಗಳನ್ನು ವಾಚಿಸುವರು.
ಉಡುಪಿ : ನಾದಾವಧಾನ ಪ್ರತಿಷ್ಠಾನ (ರಿ.) ಕುಂದಾಪುರ ಇದರ ವಾರ್ಷಿಕೋತ್ಸವವನ್ನು ದಿನಾಂಕ 07 ಜೂನ್ 2025ರಂದು ಬೆಳಿಗ್ಗೆ 7-00 ಗಂಟೆಗೆ ಉಡುಪಿ ಜಿಲ್ಲೆಯ ಕಿರಿ ಮಂಜೇಶ್ವರದಲ್ಲಿರುವ ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9-00 ಗಂಟೆಗೆ ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಲಿದೆ. 10-30 ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ತಾಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಉಮೇಶ್ ಶಾನಭೋಗ್ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ತಾಳಮದ್ದಲೆ ಅರ್ಥದಾರಿಗಳಾದ ವಾಸುದೇವರಂಗಾ ಭಟ್ ಇವರಿಂದ ‘ಭಾಗವತಿಕೆ – ಒಂದು ಸ್ವರೂಪ ವಿವೇಚನೆ’, ರಾಘವೇಂದ್ರ ಆಚಾರ್ಯ ಜನ್ಸಾಲೆ ಇವರಿಂದ ‘ವಿಶೇಷ ಮಟ್ಟುಗಳ ಪ್ರಾತ್ಯಕ್ಷಿಕೆ’, ಮಧ್ಯಾಹ್ನ 2-30 ಗಂಟೆಗೆ ಉಭಯ ತಿಟ್ಟುಗಳ ಅಗ್ರಗಣ್ಯ ಭಾಗವತರುಗಳಿಂದ ಪೌರಾಣಿಕ ಪ್ರಸಂಗಗಳಿಂದ ಆಯ್ದ ಅಪರೂಪದ ‘ಯಕ್ಷ ಗಾನ ವೈಭವ’ ಪ್ರಸ್ತುತಗೊಳ್ಳಲಿದೆ. ಹಿರಿಯ ಯಕ್ಷಗಾನ ಭಾಗವತರಾದ ಶ್ರೀ ಗೋಪಾಲ್ ಗಾಣಿಗ ಹೆರಂಜಲು ಇವರಿಗೆ ಗುರುವಂದನೆ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಅಶ್ವಿನಿ ಕೊಂಡದಕುಳಿ…