Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ವತಿಯಿಂದ ದಿನಾಂಕ 06-05-2024ರಿಂದ ಪ್ರಾರಂಭಗೊಂಡ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ಬೇಸಿಗೆ ಶಿಬಿರವು ದಿನಾಂಕ 13-05-2024ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಲ.ವಿ.ಜಿ. ಶೆಟ್ಟಿಯವರು “ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇದು ಯಕ್ಷಗಾನದ ಮೂಲಮಠ ಎಂಬುದಾಗಿ ಹೇಳುವುದು ಸಾರ್ಥಕವಾಗಿದೆ. ಯಕ್ಷಗಾನದ ಪಾರಂಪರಿಕ ಶೈಲಿಯ ಸಂರಕ್ಷಣೆಗೆ ಈ ಕೇಂದ್ರ ಅನುಪಮವಾದ ಕೊಡುಗೆ ಸಲ್ಲಿಸಿದೆ. ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರಗಳು ಎಲ್ಲಾ ಕಡೆ ನಡೆಯುತ್ತದೆ. ಆದರೆ ಇದೊಂದು ವಿಶಿಷ್ಟವಾದ ಶಿಬಿರ” ಎಂಬುದಾಗಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆಯವರು ಯಕ್ಷಗಾನ ಕೇಂದ್ರವು ಈ ವಿಶಿಷ್ಟ ಶಿಬಿರ ನಡೆಸುವುದಕ್ಕೆ ಕಾರಣವಾದ ಪ್ರೇರಣೆಯನ್ನು ತಿಳಿಸಿ ಕೇಂದ್ರದ ಚಟುವಟಿಕೆಗಳ ಬಗ್ಗೆ ವಿವರವನ್ನಿತ್ತರು. ವೇದಿಕೆಯಲ್ಲಿ ಸಲಹಾ ಸಮಿತಿ ಸದಸ್ಯರಾದ ಶ್ರೀ ಭುವನ ಪ್ರಸಾದ್ ಹೆಗ್ಡೆ, ಶ್ರೀ ಮಂಜುನಾಥ ಮಯ್ಯ ಹಾಗೂ ಶ್ರೀಮತಿ ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ…
ಮಂಗಳೂರು : ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀ ಸಾಯಿ ಪರಿವಾರ್ ಟ್ರಸ್ಟ್ (ರಿ.) ಇದರ ಆಶ್ರಯದಲ್ಲಿ ಉಳ್ಳಾಲದಲ್ಲಿ ಪ್ರಪ್ರಥಮ ಬಾರಿಗೆ ‘ಸುಗಿತ್ ನಲಿಪುಗ -2024’ ತ್ರಿವಳಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯನ್ನು ದಿನಾಂಕ 19-05-2024ರಂದು ಬೆಳಗ್ಗೆ 10-00ರಿಂದ ತೊಕ್ಕೊಟ್ಟು ಅಂಬಿಕಾರೋಡು ಗಟ್ಟಿ ಸಮಾಜ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ತಂಡಗಳಿಂದ ನಗದು, ಮಾನ ಫಲಕ, ಪ್ರಶಂಸಾ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹ ಧನ ಮತ್ತು ಪ್ರಶಂಸಾ ಪತ್ರ ನೀಡಲಾಗುವುದು.
ಸುರತ್ಕಲ್ : ಹಿರಿಯ ಸಂಗೀತ ಗುರುಗಳಾದ ದಿವಂಗತ ಪಡುಬಿದ್ರೆ ಸುಬ್ರಾಯ ಮಾಣಿ ಭಾಗವತರ್ ಇವರ ಸ್ಮರಣಾರ್ಥ ಸಂಗೀತ ಕಛೇರಿಯು ದಿನಾಂಕ 12-05-2024ರಂದು ಸುರತ್ಕಲ್ಲಿನ ‘ಅನುಪಲ್ಲವಿ’ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುರತ್ಕಲ್ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಶ್ರೀಮತಿ ಗುಣವತಿ ಇವರು ಮೆಚ್ಚಿಗೆಯ ನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಮಂಗಳೂರು ವಿಭಾಗದ ಸ್ಪಿಕ್ ಮೆಕೆ ಸಂಸ್ಥೆಯಲ್ಲಿ ಕಳೆದ ಮೂರು ವರ್ಷಗಳ ಕಾಲ ದುಡಿದ ಸೂರ್ಯ ಗಣೇಶ್ ಮತ್ತು ಪ್ರಣವ್ ಸುಬ್ರಹ್ಮಣ್ಯ ಇವರನ್ನು ಅಭಿನಂದಿಸಿ ಗೌರವಿಸಲಾಯಿತು. ಸಂಗೀತ ಕಛೇರಿಗೆ ಮೊದಲು ದೀಕ್ಷಾ ಶೆಟ್ಟಿ ಇವರು ಪ್ರಾರ್ಥನೆಯ ರೂಪದಲ್ಲಿ ಕೃತಿಗಳು ಹಾಗೂ ನಾಮ ಸಂಕೀರ್ತನೆಯನ್ನು ಪ್ರಸ್ತುತಪಡಿಸಿದರು. ಸಂಗೀತ ಕಛೇರಿ ನಡೆಸಿಕೊಟ್ಟ ಶ್ರೇಯಾ ಕೊಳತ್ತಾಯ ತನ್ನ ಶಾಸ್ತ್ರೀಯತೆ ಹಾಗೂ ಗಾಂಭೀರ್ಯದಿಂದ ಎಲ್ಲರ ಮನ ಸೆಳೆದರು. ಪಿ. ನಿತ್ಯಾನಂದ ರಾವ್ ಇವರ ಸಾಹಿತ್ಯಕ್ಕೆ ಡಾ. ರಾಜಕುಮಾರ್ ಭಾರತಿಯವರಿಂದ ರಾಗ ಸಂಯೋಜನೆಗೊಂಡ ‘ನಾಟಕುರುಂಜಿ’ ರಾಗ ವರ್ಣದ ಪ್ರಕೃತಿಯು ಸಂಗೀತ ಕಚೇರಿಗೆ ಉತ್ತಮ ಮುನ್ನುಡಿಯನ್ನು ಬರೆಯಿತು. ಪ್ರಧಾನವಾಗಿ…
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಶ್ರೀನಿವಾಸ ಯೋಗ-ಸಂಸ್ಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಆಯೋಜಿಸಿದ ‘ಆಧುನಿಕ ಭಾರತದಲ್ಲಿ ಪ್ರಾಚೀನ ಸಂಸ್ಕೃತ ಸಾಹಿತ್ಯದ ಕೊಡುಗೆ ಮತ್ತು ಅಪ್ಲಿಕೇಶನ್’ ಕುರಿತು ರಾಷ್ಟ್ರೀಯ ಸಮ್ಮೇಳನವು ದಿನಾಂಕ 11-05-2024 ರಂದು ಮುಕ್ಕದ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ನಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಂ ಇಲ್ಲಿಂದ ಶ್ರೀ ಜನಾರ್ದನತೀರ್ಥ ಪೀಠ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಸಂಸ್ಕೃತ ಭಾಷೆಯ ಸಾಂಸ್ಕೃತಿಕ ಮಹತ್ವವನ್ನು ವಿವರಿಸಿ. “ಇದನ್ನು ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳಲ್ಲಿ ವ್ಯಾಪಕವಾಗಿ ಅಳವಡಿಸಲಾಗಿದೆ. ಧ್ಯಾನದ ಪ್ರಾಮುಖ್ಯತೆ ಮಾನಸಿಕ ಗಮನ ಮತ್ತು ಯಶಸ್ಸನ್ನು ಸಾಧಿಸಲು ದೇವರ ಅನುಗ್ರಹ ಅಗತ್ಯ.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮಾತನಾಡಿ “ಸಂಸ್ಕೃತ ಮತ್ತು ವೇದಗಳಲ್ಲಿ ಆಳವಾದ ಸಂಶೋಧನೆ ನಡೆಸುವುದು ವಿಶ್ವವಿದ್ಯಾಲಯದ ಧ್ಯೇಯ. ಸಂಸ್ಕೃತವು ಹೆಚ್ಚು ವ್ಯಾಪಕವಾಗಿ…
ಶಾಸ್ತ್ರೀಯ ನೃತ್ಯ ಕ್ಷೇತ್ರದಲ್ಲಿ ವಿದುಷಿ. ಸರಿತಾ ಪ್ರಸಾದ್ ಕೊಟ್ಟಾರಿ ಉತ್ತಮ ಭರತನಾಟ್ಯ ಕಲಾವಿದೆ ಹಾಗೂ ದಕ್ಷ ಗುರುಗಳಾಗಿ ಹೆಸರು ಮಾಡಿದ್ದಾರೆ. ‘ಚಿಗುರು ನೃತ್ಯಾಲಯ’ದ ಸ್ಥಾಪಕಿ . ತಮ್ಮ ಶಿಷ್ಯರ ಬೆಳವಣಿಗೆಗೆ ಪೂರಕವಾಗುವಂತೆ ನಾಡಿನಾದ್ಯಂತ ಅನೇಕ ವೇದಿಕೆಗಳನ್ನು ಒದಗಿಸಿ ಉದಯೋನ್ಮುಖ ಕಲಾವಿದರ ಪ್ರತಿಭೆಯನ್ನು ಬೆಳೆಸುತ್ತಿರುವ ಪ್ರಗತಿಪರ ಮನೋಭಾವದ ಮಾರ್ಗದರ್ಶಕಿ ಕೂಡ. ಇವರ ನುರಿತ ಗರಡಿಯಲ್ಲಿ ತಯಾರಾಗುತ್ತಿರುವ ಭರವಸೆಯ ಪ್ರತಿಭೆ ಕೆ. ಎ. ತುಷಾರ ಇವರು ಶ್ರೀ ಕಮಲೇಶ್ ಮತ್ತು ನಂದಾ ಅವರ ಪುತ್ರಿ. ನೃತ್ಯದ ಬಗ್ಗೆ ಅಪಾರ ಆಸಕ್ತಿಯುಳ್ಳ ಹನ್ನೆರಡು ವರ್ಷದ ಈ ಬಾಲಪ್ರತಿಭೆ ದಿನಾಂಕ 18-05-2024 ರಂದು ಸಂಜೆ 5 ಗಂಟೆಗೆ ಜಯನಗರದ ಜೆ.ಎಸ್.ಎಸ್. ಆಡಿಟೋರಿಯಂನಲ್ಲಿ ವಿದ್ಯುಕ್ತವಾಗಿ ತನ್ನ ರಂಗಪ್ರವೇಶವನ್ನು ನೆರವೇರಿಸಿಕೊಳ್ಳಲಿದ್ದಾಳೆ.ಅವಳ ಸುಂದರ ನರ್ತನ ವಲ್ಲರಿಯನ್ನು ಕಣ್ತುಂಬಿಕೊಳ್ಳಲು ಎಲ್ಲರಿಗೂ ಆದರದ ಸುಸ್ವಾಗತ. ಪುಟ್ಟಬಾಲಕಿ ತುಷಾರಳಿಗೆ ಬಾಲ್ಯದಿಂದಲೂ ನೃತ್ಯ ಎಂದರೆ ಅತೀವ ಆಸಕ್ತಿ. ಸಾಂಸ್ಕೃತಿಕ ಕುಟುಂಬದ ವಾತಾವರಣ. ಗಾಯನ-ನರ್ತನದಲ್ಲಿ ಆಸಕ್ತಿ ತೋರಿದ ಮಗಳ ಪ್ರತಿಭೆಗೆ ತಂದೆ ಕಮಲೇಶ್ ಮತ್ತು ತಾಯಿ ನಂದಾ ಸಂಪೂರ್ಣ…
ಬೆಂಗಳೂರು: 2023ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ‘ಚಾವುಂಡ ರಾಯ ದತ್ತಿ` ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಪ್ರೀತಿ ಶುಭಚಂದ್ರ ಆಯ್ಕೆಯಾಗಿದ್ದಾರೆ. ಶ್ರವಣ ಬೆಳಗೊಳದ ಜಗದ್ಗುರು ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು, ಪ್ರಾಚೀನ ಜೈನ ಸಾಹಿತ್ಯವನ್ನು ಆಧರಿಸಿ ಆಧುನಿಕ ಕನ್ನಡ ಭಾಷೆಯಲ್ಲಿ ರಚಿಸಿದ ಪ್ರಬಂಧ, ಸಂಶೋಧನೆ, ವಿಮರ್ಶೆ, ಕಾದಂಬರಿ, ನಾಟಕ, ಕಥಾ ಸಾಹಿತ್ಯ ಪ್ರಕಾರಗಳ ಲೇಖಕರಿಗೆ ಅಥವಾ ಗ್ರಂಥ ಸಂಪಾದಕರಿಗೆ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವುದು ದತ್ತಿಯ ಆಶಯವಾಗಿದೆ. ವಿಮರ್ಶಕಿಯಾಗಿ, ಲೇಖಕಿಯಾಗಿ, ಮಹಿಳಾವಾದಿಯಾಗಿ ಹೆಸರನ್ನು ಮಾಡಿರುವ ಡಾ. ಪ್ರೀತಿ ಶುಭಚಂದ್ರ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದವರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಮೊತ್ತ ಮೊದಲ ಮಹಿಳಾ ನಿರ್ದೇಶಕಿಯಾದ ಹೆಗ್ಗಳಿಕೆ ಇವರದು. ವಚನ ಸಾಹಿತ್ಯ ಮತ್ತು ಜೈನ ಸಾಹಿತ್ಯ ಇವರ ಪ್ರಧಾನ ಆಸಕ್ತಿಯ ವಿಷಯಗಳು. ‘ಇಪ್ಪತ್ತನೆಯ ಶತಮಾನದ ವಚನ ಸಾಹಿತ್ಯ: ಒಂದು ಅಧ್ಯಯನ’ ಅವರ ಪಿ. ಎಚ್.ಡಿ. ಮಹಾ ಪ್ರಬಂಧ. ಸ್ತ್ರೀವಾದದ ಕುರಿತೂ…
ಮಂಗಳೂರು : ಯೂತ್ ಆಫ್ ಜಿ. ಎಸ್. ಬಿ. ವಾಹಿನಿಯಿಂದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪರವಾಗಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಹಾನ್ ಸಾಧಕರಾದ ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ ಕಾರ್ಯಕ್ರಮವು ದಿನಾಂಕ 04-05-2024 ರಂದು ಟಿ. ವಿ. ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪಂಡಿತ್ ಉಪೇಂದ್ರ ಭಟ್ ತಮ್ಮ ಗುರು ಭಾರತ್ ರತ್ನ ಭೀಮಸೇನ್ ಜೋಷಿಯವರು ತಮ್ಮ ಸಂಗೀತ ಬದುಕಿಗೆ ಹಾಕಿಕೊಟ್ಟ ಅಡಿಪಾಯವನ್ನು ಸ್ಮರಿಸಿ “ಯೂತ್ ಆಫ್ ಜಿ. ಎಸ್. ಬಿ. ವಾಹಿನಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ತಮ್ಮಂತಹ ಸರಸ್ವತಿ ಆರಾಧಕರನ್ನು ಗೌರವಿಸುತ್ತಿರುವುದು ನಿಜಕ್ಕೂ ಮಾದರಿಯಾಗಿದೆ.” ಎಂದರು. ಪಂಡಿತ್ ಉಪೇಂದ್ರ ಭಟ್ ಅವರ ಸಾಧನೆಯ ಬಗ್ಗೆ ವಿದ್ವಾಂಸ ಪ್ರಭಾಕರ ಜೋಷಿ ಅಭಿನಂದನೆಯ ನುಡಿಗಳನ್ನಾಡಿದರು. ಸನ್ಮಾನ ಸ್ವೀಕರಿಸುವ ಪೂರ್ವಭಾವಿಯಾಗಿ ಪಂಡಿತ್ ಉಪೇಂದ್ರ ಭಟ್ ಅವರು ತಮ್ಮ ಜನಪ್ರಿಯ ಗೀತೆಗಳನ್ನು ಹಾಡಿ ನೆರೆದ ಅಸಂಖ್ಯಾತ ಸಂಗೀತಾಭಿಮಾನಿಗಳನ್ನು…
ಕಾಸರಗೋಡು : ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಮತ್ತು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ (ರಿ.) ದೇಲಂಪಾಡಿ ಇವುಗಳ ಆಶ್ರಯದಲ್ಲಿ ‘ಕೃತಿಗಳ ಅನಾವರಣ’ವು ದಿನಾಂಕ 19-05-2024 ಆದಿತ್ಯವಾರ ಅಪರಾಹ್ನ ಗಂಟೆ 2.00ರಿಂದ ಶ್ರೀ ಎಡನೀರು ಕ್ಷೇತ್ರದ ಭಾರತೀಸದನ ಸಭಾಂಗಣ ನಡೆಯಲಿದೆ. ಅಪರಾಹ್ನ ಗಂಟೆ 2.00ರಿಂದ ಡಾ. ಬನಾರಿಯವರ ‘ಕಾವ್ಯವಾಚನ ಮತ್ತು ಗಾಯನ’ ಕವಿಗಳು ಮತ್ತು ಗಾಯಕರಿಂದ ಹಾಗೂ ‘ಕರ್ನಾಟಕದೊಂದಿಗೆ ಕಾಸರಗೋಡಿನ ವಿಲೀನೀಕರಣ’ ಎಂಬ ವಿಷಯದ ಬಗ್ಗೆ ಸಂವಾದ ಗೋಷ್ಠಿ ನಡೆಯಲಿದೆ. ಮಾಧ್ಯಮತಜ್ಞರು ಹಾಗೂ ಕಲಾವಿದರಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರು ಸಂವಾದ ಗೋಷ್ಠಿ ನಡೆಸಿಕೊಡಲಿದ್ದು, ಡಾ. ರಮಾನಂದ ಬನಾರಿ, ಡಾ. ವಸಂತಕುಮಾರ ಪೆರ್ಲ, ಶ್ರೀ ಟಿ.ಎ.ಎನ್. ಖಂಡಿಗೆ, ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರುಗಳು ಸಹಭಾಗಿಗಳಾಗುವರು. ಅಪರಾಹ್ನ ಗಂಟೆ 3.30ರಿಂದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಇವರ ಆಶೀರ್ವಚನದೊಂದಿಗೆ ಕೃತಿಗಳ ಲೋಕಾರ್ಪಣೆ ನೆರವೇರಲಿದ್ದು, ಮೈಸೂರಿನ ಖ್ಯಾತ ಸಂಶೋಧಕರು, ಅಷ್ಟಾವಧಾನಿಗಳಾದ ಡಾ. ಕಬ್ಬಿನಾಲೆ ವಸಂತ…
ಬಂಟ್ವಾಳ : ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ರಂಗ ಭೂಮಿಕಾ -2024 ದಿನಾಂಕ 17-05-2024ರಿಂದ 19-05-2024ರವರೆಗೆ ಕುಕ್ಕಾಜೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ದಿನಾಂಕ 17-05-2024ರಂದು ಸಂಜೆ 6-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಂತರಾಷ್ಟ್ರೀಯ ಜಾದೂಗಾರರಾದ ಪ್ರೊ. ಶಂಕರ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ನಾಟಕೋತ್ಸವವನ್ನು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಧ್ಯಕ್ಷರಾದ ಶ್ರೀ ವಿಶ್ವನಾಥ ಶೆಣೈ ಉಡುಪಿ ಇವರು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಲಿ. ಇದರ ನಿರ್ದೇಶಕರಾದ ಡಾ. ಜಯಪ್ರಕಾಶ್ ನಾರಾಯಣ ಟಿ.ಕೆ. ಮತ್ತು ಶಿವಮೊಗ್ಗ ರಂಗಾಯಣದ ಮಾಜಿ ನಿರ್ದೇಶಕರಾದ ಶ್ರೀ ಸಂದೇಶ ಜವಳಿ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ತೀರ್ಥಹಳ್ಳಿಯ ‘ನಟ ಮಿತ್ರರು’ ತಂಡದವರು ಶಿವಕುಮಾರ್ ತೀರ್ಥಹಳ್ಳಿ ಇವರ ನಿರ್ದೇಶನದಲ್ಲಿ ‘ಸಂಸಾರದಲ್ಲಿ ಸನಿದಪ’ ಕನ್ನಡ ನಾಟಕ ಪ್ರಸ್ತುತ ಪಡಿಸಲಿದ್ದಾರೆ. ದಿನಾಂಕ 18-05-2024ರಂದು…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಅಧ್ಯಾಯವು ದಿನಾಂಕ 18-05-2024ರಂದು ಸಂಜೆ 5-30ಕ್ಕೆ ಪೆನ್ನು ಮತ್ತು ಕುಂಚಗಳೊಂದಿಗೆ ಕುಡ್ಲಾವನ್ನು ಜೋಡಿಸುವ ಮಂಗಳೂರಿನ ಪರಂಪರೆಯ ರೇಖಾಚಿತ್ರಗಳು ಮತ್ತು ರೇಖಾಚಿತ್ರಗಳ ಪ್ರದರ್ಶನವು ನಗರದ ಬಂಗಾರು ಗುತ್ತು ರೋಡ್, ಕೊಡಿಯಾಲ್ ಗುತ್ತು (ಪಶ್ಚಿಮ), ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರ ಇಲ್ಲಿ ಜರಗಲಿದೆ. ಹರೀಶ್ ಕೊಡಿಯಾಲ್ಬೈಲ್, ಜೀವನ್ ಸಾಲಿಯಾನ್, ಸಂತೋಷ್ ಅಂದ್ರಾದೆ, ಸೈಯದ್ ಆಸಿಫ್ ಅಲಿ ಮತ್ತು ವಿಲ್ಸನ್ ಸೋಜಾ ಮುಂತಾದ ಕಲಾವಿದರು ಭಾಗವಹಿಸಲಿದ್ದು, ರೇಖಾಚಿತ್ರಗಳ ಪ್ರದರ್ಶನವು ದಿನಾಂಕ 25-05-2024ರವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ 7-00 ಗಂಟೆಯವರೆಗೆ ನಡೆಯಲಿದೆ.