Author: roovari

ಪುತ್ತೂರು : ಪುತ್ತೂರಿನ ನಾಟ್ಯರಂಗದ ನೃತ್ಯ ಗುರುಗಳಾದ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರು ದಿನಾಂಕ 04-02-2024ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋ ಸೇವಾ ಬಳಗದ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಧರ್ಮಧೇನು’ ನೃತ್ಯ ರೂಪಕ ನೀಡಿದರು. ಗೋವಿನ ಬಗ್ಗೆ ಭಾಷಣ ಮಾಡುವುದು, ಪ್ರಬಂಧ ಬರೆಯುವುದು ಸುಲಭ. ಆದರೆ ಪ್ರಯೋಗಶೀಲ ನೃತ್ಯ ಪ್ರಸ್ತುತಿಗೆ ಕಥಾವಸ್ತುವನ್ನು ಜೋಡಿಸಿಕೊಳ್ಳುವುದು ಸವಾಲೇ ಸರಿ. ಇಲ್ಲಿ ಕ್ರಿಯಾಶೀಲ ಆಲೋಚನೆ ಮತ್ತು ದುಡಿಮೆಯ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ‘ಧರ್ಮಧೇನು’ ನೃತ್ಯ ರೂಪಕ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಗೋ ಮಹಿಮೆಯನ್ನು ವರ್ಣಿಸುವ ಶ್ಲೋಕದೊಂದಿಗೆ ಆರಂಭವಾದ ಪ್ರಸ್ತುತಿ ಗೋಮಾತೆಯನ್ನು ಅಪಮಾನಿಸಿದರೆ ಉಂಟಾಗುವ ಕ್ಲೇಶ – ದೋಷಗಳನ್ನು ಗೋ ಸೇವೆಯಿಂದಲೇ ಮುಕ್ತವಾಗಿಸಿ ಸಂತಾನ ಭಾಗ್ಯ ಪಡೆದುಕೊಂಡ ದಿಲೀಪನ ಕಥಾ ಹಂದರವನ್ನು ಧರ್ಮಧೇನು ನೃತ್ಯ ರೂಪಕ ಹೊಂದಿತ್ತು .ಗೋ ಸೇವೆಯ ಮಹತ್ವ ಹಾಗೂ ಪಾವಿತ್ರ್ಯತೆಗೆ ‘ಧರ್ಮಧೇನು’ ನೃತ್ಯ ರೂಪಕ ಪೂರ್ವರಂಗವಾಯಿತು. ಕಾಳಿದಾಸನ ರಘುವಂಶದ ಕಥೆಯನ್ನು ಆಧರಿಸಿ ಕವಿತಾ ಅಡೂರು ಇವರ…

Read More

ಉಪ್ಪಿನಂಗಡಿ : ಕಾಂಚನ ಶ್ರೀ ಲಕ್ಷ್ಮೀನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ವತಿಯಿಂದ ‘ಕಾಂಚನೋತ್ಸವ-2024’ ಹಾಗೂ 70ನೇ ವರ್ಷದ ಶ್ರೀ ತ್ಯಾಗರಾಜ, ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ, ಸ್ಥಾಪಕ ಗುರುಗಳಾದ ಸಂಗೀತರತ್ನ ಕಾಂಚನ ವೆಂಕಟಸುಬ್ರಮಣ್ಯಂ ಹಾಗೂ ಕರ್ನಾಟಕ ಕಲಾಶ್ರೀ ಕಾಂಚನ ವಿ. ಸುಬ್ಬರತ್ನಂ ಅವರ ಪುಣ್ಯ ದಿನಾಚರಣೆ ದಿನಾಂಕ 03-02-2024 ಮತ್ತು 04-02-2024ರಂದು ಕಾಂಚನ ಶ್ರೀ ಲಕ್ಷ್ಮೀನಾರಾಯಣ ಸಂಗೀತ ಕಲಾ ಶಾಲೆಯಲ್ಲಿ ನಡೆಯಿತು. ದಿನಾಂಕ 03-02-2024ರಂದು ಸಂಜೆ ಅತಿಥಿ ಕಲಾವಿದರು ಮತ್ತು ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ದಿನಾಂಕ 04-02-2024ರಂದು ಬೆಳಿಗ್ಗೆ ಶ್ರೀ ತ್ಯಾಗರಾಜರ ಉತ್ಸವ ಸಂಪ್ರದಾಯ ಮತ್ತು ದಿವ್ಯನಾಮ ಸಂಕೀರ್ತನೆಗಳ ವಾದ್ಯ-ಗಾಯನ ಭಜನೆಯೊಂದಿಗೆ ಕಾಂಚನ ಮನೆಯಿಂದ ಸಂಗೀತ ಶಾಲೆಯ ತನಕ ಸಂಗೀತ ನಡಿಗೆ ‘ಉಂಛ ವೃತ್ತಿ’ ನಡೆಯಿತು. ಬಳಿಕ ಶ್ರೀ ಪುರಂದರ ದಾಸರ ಪಿಳ್ಳಾರಿ ಗೀತೆಗಳು ಮತ್ತು ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿಗಾನ ಹಾಗೂ ಅತಿಥಿ ಕಲಾವಿದರು ಮತ್ತು ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರಗಿತು.…

Read More

ಹಳೆಯಂಗಡಿ : ಮೂಲ್ಕಿ ಕಸಾಪ ಘಟಕ ಆಯೋಜಿಸಿದ ಸಾಹಿತಿ ವಸಂತ ಮಾಧವರ ‘ಇತಿಹಾಸ ಯಾನ ಸಾಂಸ್ಜೃತಿಕ ನೋಟಗಳು’ ಕೃತಿ ಹಾಗೂ ಡಾ. ಪದ್ಮನಾಭ ಭಟ್ ಬರೆದ ‘ಡಾ. ಕೆ. ಜಿ. ವಸಂತಮಾಧವರ ಪರಿಚಯ’ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 03-02-2024ರಂದು ಪಾವಂಜೆಯ ಡಾ. ವಸಂತ ಮಾಧವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ “ನಮ್ಮ ನಾಡಿನ ಹೆಮ್ಮೆಯ ಇತಿಹಾಸ ಬರಹಗಾರರಲ್ಲಿ ಡಾ. ವಸಂತ ಮಾಧವರು ಒಬ್ಬರು. ಅವರ ಬರಹಗಳು ಅನೇಕ ಸಂಗತಿಗಳತ್ತ ಬೆಳಕು ಚೆಲ್ಲಿವೆ. ಅವರ ಕೃತಿಗಳು ಅಧ್ಯಯನಕಾರರಿಗೆ ಮಾರ್ಗದರ್ಶಕವಾಗಿವೆ. ಅವರ ಆಸಕ್ತಿ ಮತ್ತು ಬರವಣಿಗೆಗೆ ವಯಸ್ಸು ಲೆಕ್ಕವೇ ಅಲ್ಲ.” ಎಂದು ಹೇಳಿದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ಕೃತಿಗಳನ್ನು ದುಡ್ಡು ಕೊಟ್ಟು ಕೊಂಡು ಓದಿ. ಇತರರಿಗೂ ಓದಲು ಪ್ರೇರೇಪಿಸಿ, ಬರಹಗಾರರನ್ನು ಪ್ರೋತ್ಸಾಹಿಸಬೇಕು. ವಸಂತಮಾಧವರ ಸಂಶೋಧನೆಯ ಸಾಧನೆ ಅಭಿನಂದನೀಯ.” ಎಂದರು. ಪುಸ್ತಕ ಲೋಕಾರ್ಪಣೆಯ ಬಳಿಕ ಕೃತಿಕಾರರನ್ನು ಸಂಮಾನಿಸಲಾಯಿತು. ವಿದ್ವಾಂಸ ಡಾ.…

Read More

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ 7, 8 ಮತ್ತು 9ರಂದು ಮಂಡ್ಯದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಿಎಂ ಅಧ್ಯಕ್ಷತೆಯಲ್ಲಿ ದಿನಾಂಕ 01-02-2024ನೇ ಗುರುವಾರ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಜೂನ್ ವೇಳೆ ಲೋಕಸಭಾ ಚುನಾವಣೆ ಪ್ರಕ್ರಿಯೆ ಕೊನೆಗೊಂಡು ನೀತಿ ಸಂಹಿತೆ ಕೂಡ ರದ್ದಾಗಿರುತ್ತದೆ. ಶಾಲೆಗಳೂ ಕೂಡ ಆರಂಭವಾಗಿರುತ್ತವೆ. ಮಳೆಗಾಲ ಇನ್ನೂ ಆರಂಭವಾಗಿರುವುದಿಲ್ಲ ಎಂಬ ಅಂಶಗಳನ್ನು ಆಧರಿಸಿ ಜೂನ್‌ನಲ್ಲಿಯೇ ಸಮ್ಮೇಳನ ನಡೆಯುವುದು ಸೂಕ್ತ ಎಂಬ ಬಗ್ಗೆ ಸಭೆಯಲ್ಲಿ ಅಭಿಪ್ರಾಯಕ್ಕೆ ಬರಲಾಯಿತು. ಅದಕ್ಕೆ ಸಿಎಂ ಕೂಡ ಸಮ್ಮತಿ ಸೂಚಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ “ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕು. ಈ ಬಾರಿಯ ಸಮ್ಮೇಳನವನ್ನು ಅದ್ಧೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ, ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಬೇಕು, ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು ಹಾಗೂ…

Read More

ಬೆಂಗಳೂರು : ಬೆಂಗಳೂರಿನ ಉಳ್ಳಾಲು ಗ್ರಾಮದಲ್ಲಿರುವ ತೊ. ನಂಜುಂಡಸ್ವಾಮಿ ಗೆಳೆಯರ ಬಳಗದ ವತಿಯಿಂದ ತೊಟವಾಡಿ ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಮಲ್ಲತ್ತಹಳ್ಳಿ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿರುವ ಕಲಾಗ್ರಾಮದಲ್ಲಿ ದಿನಾಂಕ 10-02-2024ರಂದು ನಡೆಯಲಿರುವುದು. ಎರಡನೇ ವರ್ಷದ ಪ್ರಶಸ್ತಿಯನ್ನು ನಾಟಕಕಾರ, ಕಥೆ ಮತ್ತು ಕಾದಂಬರಿಕಾರರಾದ ಶ್ರೀ ಹೂಲಿ ಶೇಖರ್ ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಶ್ರೀ ಜೋಗಿಲ ಸಿದ್ಧರಾಜು ಮತ್ತು ತಂಡದವರಿಂದ ರಂಗಗೀತೆ ಮತ್ತು ಜನಪದ ಗಾಯನ ಹಾಗೂ ಮೈಸೂರಿನ ನಟನ ತಂಡದವರು ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ ನೀಡಲಿದ್ದಾರೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ನಡೆಯುವ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 05-01-2024ರಂದು ನಡೆಯಿತು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ವಿರಚಿತ ‘ವಾಲಿ ಮೋಕ್ಷ’ ಪ್ರಸಂಗದ ತಾಳಮದ್ದಳೆ ನಡೆಯಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಸರ್ವಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಇರ್ದೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಮತ್ತು ಮಾ.ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಪೂಕಳ ಲಕ್ಷ್ಮೀ ನಾರಾಯಣ ಭಟ್ ಮತ್ತು ಶ್ರೀಮತಿ ಶುಭಾ ಅಡಿಗ (ಶ್ರೀ ರಾಮ), ಗುಂಡ್ಯಡ್ಕ ಶ್ರೀ ಈಶ್ವರ ಭಟ್ (ವಾಲಿ), ಶ್ರೀ ಗುಡ್ಡಪ್ಪ ಬಲ್ಯ ಮತ್ತು ಶ್ರೀಮತಿ ಜಯಂತಿ ಹೆಬ್ಬಾರ್ (ಸುಗ್ರೀವ), ಶ್ರೀ ಭಾಸ್ಕರ ಬಾರ್ಯ (ಲಕ್ಷ್ಮಣ), ಮಾಂಬಾಡಿ ಶ್ರೀ ವೇಣುಗೋಪಾಲ್ ಭಟ್ (ತಾರೆ) ಪಾತ್ರದಲ್ಲಿ ಸಹಕರಿಸಿದರು. ಸಂಘದ ನಿರ್ದೇಶಕ ಶ್ರೀ…

Read More

ಮಂಗಳೂರು : 2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್ ಪಿಂಟೊ (ಜೆರಿ, ನಿಡ್ಡೋಡಿ) ಇವರನ್ನು ಆಯ್ಕೆ ಮಾಡಲಾಗಿದೆ. ಜೆರಿ ನಿಡ್ಡೋಡಿ ಅವರ 6 ಕಾದಂಬರಿಗಳು, 75 ಕತೆಗಳು ಹಾಗೂ 900ಕ್ಕೂ ಮೇಲ್ಪಟ್ಟು ಲೇಖನಗಳು ಕೊಂಕಣಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ಕುಡ್ಮಿ ಕೊಂಕ್ಣಿ ಲೋಕ್‌ವೇದ್’ ಎಂಬ ಸಂಶೋಧನಾ ಗ್ರಂಥ ಹಾಗೂ ‘ವಿಸಾವ್ಯಾ ಶೆಕ್ಡ್ಯಾಚೆ ಕೊಂಕ್ಣಿ ಮ್ಹಾನ್ ಮನಿಸ್’ ಎಂಬ ಕೃತಿಯನ್ನು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಕಟಿಸಿದ್ದಾರೆ. ಅವರು ಬರೆದ ಇನ್ನಿತರ ಪುಸ್ತಕಗಳಲ್ಲಿ ತುಜೆಂ ಶಿಕಾಪ್, ತುಜಿ ವೃತ್ತಿ, ಗ್ಯಾಲಕ್ಸಿ, ವಿಶ್ವ್ ವಿಜ್ಞಾನ್ ಪ್ರಮುಖವಾದವುಗಳು. ಶ್ರೀಯುತರ ಸಾಹಿತ್ಯ ಸೇವೆಗೆ ಕೊಂಕ್ಣಿ ಕುಟಮ್ ಬಾಹ್ರೇಯ್ನ್ , ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ದಾಯ್ಜಿ ದುಬಾಯ್, ದಿವೊ ಸಾಹಿತ್ಯ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಲಭಿಸಿವೆ. ‘ರಾಕ್ಣೊ’ ಸಂಪಾದಕೀಯ ಮಂಡಳಿಯ ಸದಸ್ಯರಾಗಿ, ‘ಆಮ್ಚೊ ಸಂದೇಶ್’ ಪತ್ರಿಕೆಯ ಸಂಪಾದಕರಾಗಿ, ‘ಮಿಲಾರ್‌ಚಿಂ ಲ್ಹಾರಾಂ’ ತ್ರೈ ಮಾಸಿಕದ ಸಂಪಾದಕರಾಗಿ ಸೇವೆ…

Read More

ಮಂಗಳೂರು : ನೃತ್ಯಾಂಗನ್ ಪ್ರಸ್ತುತ ಪಡಿಸುವ 11ನೇ ಆವೃತ್ತಿಯ ನೃತ್ಯ ಪ್ರದರ್ಶನ ‘ಸಮರ್ಪಣ್ 2024’ ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ಗೌರವ ದಿನಾಂಕ 10-02-2024 ಮತ್ತು ದಿನಾಂಕ 11-02-2024ರಂದು ಸಂಜೆ 5.45 ಗಂಟೆಗೆ ಮಂಗಳೂರಿನ ಡಾನ್ ಬೊಸ್ಕೋ ಹಾಲಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ಗುರು ಶ್ರೀಮತಿ ರಾಜಶ್ರೀ ಉಳ್ಳಾಲ್ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಲಿರುವರು. ಈ ಕಾರ್ಯಕ್ರಮದಲ್ಲಿ ಚೆನ್ನೈಯ ಮೇಧಾ ಹರಿ, ಬೆಂಗಳೂರಿನ ಅವಿಜಿತ್ ದಾಸ್, ಉಡುಪಿಯ ಪಿ.ಜಿ. ಪನ್ನಗ ರಾವ್, ಬೆಂಗಳೂರಿನ ಪಿ. ಸ್ನಾವಜ ಕೃಷ್ಣನ್, ಕಾವ್ಯಾ ಗಣೇಶ್ ಮತ್ತು ಪ್ರೀತಂ ದಾಸ್ ಇವರುಗಳು ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

Read More

ಮಂಗಳೂರು : ಕದ್ರಿಯಲ್ಲಿರುವ ನೃತ್ಯ ಭಾರತಿ (ರಿ.) ಇದರ ವತಿಯಿಂದ ‘ನೃತ್ಯ ಯಜ್ಞ’ ಕಾರ್ಯಕ್ರಮವು ದಿನಾಂಕ 12-02-2024ರಂದು ಸಂಜೆ 5 ಗಂಟೆಗೆ ಪುರಭವನದಲ್ಲಿ ನಡೆಯಲಿದೆ. ಕದ್ರಿ ಮಲ್ಲಿಕಾ ಕಲಾ ವೃಂದ ಇದರ ಅಧ್ಯಕ್ಷರಾದ ಶ್ರೀ ಸುಧಾಕರ್ ರಾವ್ ಪೇಜಾವರ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಉರ್ವ ನಾಟ್ಯಾಲಯದ ನಿರ್ದೇಶಕಿಯಾದ ಕಲಾಶ್ರೀ ವಿದುಷಿ ಶ್ರೀಮತಿ ಕಮಲಾ ಭಟ್, ಬಿಜೈಯ ಸನಾತನ ನಾಟ್ಯಾಲಯದ ನಿರ್ದೇಶಕಿಯಾದ ಕಲಾಶ್ರೀ ವಿದುಷಿ ಶ್ರೀಮತಿ ಶಾರದಾಮಣಿ ಶೇಖರ್, ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಕಲಾ ಒಕ್ಕೂಟದ ಅಧ್ಯಕ್ಷರಾದ ವಿದ್ವಾನ್ ಸಾಯಿ ನಾರಾಯಣ, ಮಂಗಳೂರಿನ ಶ್ರೀಮತಿ ರೂಪಲಕ್ಷ್ಮೀ ಎಚ್. ರಾವ್, ಶ್ರೀ ಮಂಜುನಾಥ ನೃತ್ಯ ಕಲಾಶಾಲೆಯ ನಿರ್ದೇಶಕರಾದ ವಿದ್ವಾನ್ ಮಂಜುನಾಥ್ ಪುತ್ತೂರು ಮುಂತಾದವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಈ ಕಾರ್ಯಕ್ರಮದಲ್ಲಿ ನೃತ್ಯ ಭಾರತಿ ಸಂಸ್ಥೆಯ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.

Read More

ಬಜಪೆ : ಭ್ರಾಮರಿ ಹವ್ಯಾಸಿ ಯಕ್ಷಗಾನ ಬಳಗದ 9ನೇ ವಾರ್ಷಿಕೋತ್ಸವವು ದಿನಾಂಕ 25-01-2024ರಂದು ಎಕ್ಕಾರು ಶ್ರೀ ಕುಂಭಕಂಠಿಣೀ ದೈವಸ್ಥಾನದ ಬಳಿಯಲ್ಲಿ ನಡೆಯಿತು. ಸಹಕಾರ ರತ್ನ ಪ್ರಶಸ್ತಿ ಪಡೆದ ಮೋನಪ್ಪ ಶೆಟ್ಟಿ ಎಕ್ಕಾರು ಹಾಗೂ ಸಮಾಜ ಸೇವಕ ಸಂತೋಷ್ ಕುಮಾರ್ ಹೆಗ್ಡೆ ಎಳತ್ತೂರುಗುತ್ತು ಅವರನ್ನು ಗೌರವಿಸಲಾಯಿತು. ಎಕ್ಕಾರು ಶ್ರೀಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ, ಭ್ರಾಮರಿ ಹವ್ಯಾಸಿ ಯಕ್ಷಗಾನ ಬಳಗದ ಅಧ್ಯಕ್ಷ ಭರತೇಶ್ ಶೆಟ್ಟಿ ಮಾಡರಮನೆ ಎಕ್ಕಾರು, ರತ್ನಾಕರ ಶೆಟ್ಟಿ ಬಡಕರೆ ಬಾಳಿಕೆ, ಸಂಪತ್‌ ಶೆಟ್ಟಿ ನಡ್ಯೋಡಿಗುತ್ತು, ಸಂತೋಷ್ ಶೆಟ್ಟಿ ಮಿತ್ತೊಟ್ಟು ಬಾಳಿಕೆ, ಶ್ಯಾಮ್ ಶೆಟ್ಟಿ ಮೇಲೆಕ್ಕಾರು, ಉದಯ ಪ್ರಕಾಶ್ ನಾಯಕ್ ಎಕ್ಕಾರು ಮತ್ತು ಗಣೇಶ್ ಪೂಜಾರಿ ನೆಲ್ಲಿತೀರ್ಥ ಭಾಗವಹಿಸಿದ್ದರು. ಭರತೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವಿಕುಮಾರ್ ಮುಂಡಾಜೆ ನಿರ್ದೇಶನದಲ್ಲಿ ಶ್ಯಾಮ ಶೆಟ್ಟಿ ಮೇಲೆಕ್ಕಾರು ಅವರ ಸಂಯೋಜನೆಯಲ್ಲಿ ಶ್ರೀಭ್ರಾಮರಿ ಹವ್ಯಾಸಿ ಯಕ್ಷಗಾನ ಬಳಗದ ಸದಸ್ಯರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಂಡಿತು.

Read More