Author: roovari

ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ತೃತೀಯ ವ್ರತಾಚರಣೆ ಅಂಗವಾಗಿ ಶ್ರೀಮಠದಲ್ಲಿ ಶ್ರೀ ಬೊಡ್ಡಜ್ಜ ಯಕ್ಷ ಭಾರತಿ ಮಧೂರು ಕಾಸರಗೋಡು ಇವರಿಂದ ಶ್ರೀಕೃಷ್ಣ ಲೀಲೆ ಕಂಸ ವಧೆ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 12/07/2023ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುರೇಶ್ ಆಚಾರ್ಯ ನೀರ್ಚಾಲು, ಉದಯಶಂಕರ ಭಟ್ ಮಜಲು, ಬಾಲಕೃಷ್ಣ ಆಚಾರ್ಯ ನೀರ್ಚಾಲು, ಪ್ರತಾಪ ಕುಂಬಳೆ, ಪ್ರಸನ್ನ ಕೆದಿಲ್ಲಾಯ ಕಾಞಂಗಾಡು, ಸುಧಾ ನಟರಾಜ ಕಲ್ಲೂರಾಯ ಮಧೂರು ಭಾಗಹಿಸಿದ್ದರು. ರವಿರಾಜ್ ಪನೆಯಾಲ ಸಾಗತಿಸಿ, ವಂದಿಸಿದರು.

Read More

ಮಂಗಳೂರು : ಯಕ್ಷ ರಂಗದ ಪ್ರತಿಭಾವಂತ ಕಲಾವಿದ ದೀಪಕ್ ರಾವ್ ಪೇಜಾವರ ಅವರ ಪರಿಕಲ್ಪನೆ, ನಿರ್ಮಾಣ, ನಿರ್ದೇಶನದಲ್ಲಿ ‘ಹರಿ ದರುಶನ’ ಏಕವ್ಯಕ್ತಿ ನವ ರೂಪಂ ಎಂಬ ಯಕ್ಷಗಾನದ ಟ್ರೈಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ದಿನಾಂಕ : 16-07-2023ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡುತ್ತಾ “ಯಕ್ಷಗಾನ ವಿಮರ್ಶೆ ಅಂದರೆ ಕಲಾಕೃತಿಯನ್ನು ಅರ್ಥ ಮಾಡುವ ಪ್ರಯತ್ನವೇ ಹೊರತು ದೋಷ ಹೇಳುವುದಲ್ಲ ಪ್ರಯೋಗ ರಂಗಭೂಮಿಯಲ್ಲಿ ಅನೇಕ ಸವಾಲುಗಳಿವೆ. ಕಲಾವಿದರು ತಮ್ಮ ವೇಷದಲ್ಲಿ ತನ್ನನ್ನೇ ಮೀರುವ ಪ್ರಯತ್ನ ಮಾಡಲು ಮುಂದಾಗಬೇಕು” ಎಂದು ಹೇಳಿದರು. ಹಿರಿಯ ಯಕ್ಷಗಾನ ಕಲಾವಿದರಾದ ಸೂರಿಕುಮೇರು ಗೋವಿಂದ ಭಟ್, ಅಶೋಕ್ ಭಟ್ ಉಜಿರೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಕೋಳ್ಯೂರು ರಾಮಚಂದ್ರ ರಾವ್, ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮ೦ಡಳಿ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ…

Read More

ಮಂಗಳೂರು : ಕೊಟ್ಟಾರದ ಭರತಾಂಜಲಿ ಹಾಗೂ ಶ್ರೀ ಮಹಾಗಣಪತಿ ದೇವಸ್ಥಾನ, ಗಣೇಶಪುರ, ಕಾಟಿಪಳ್ಳ ಇವರ ಆಶ್ರಯದಲ್ಲಿ ದಿನಾಂಕ : 23-07-2023ನೇ ಆದಿತ್ಯವಾರ, ಬೆಳಿಗ್ಗೆ ಗಂಟೆ 10:00ಕ್ಕೆ ‘ಗುರು ಪೂರ್ಣಿಮಾ ಉತ್ಸವ’ ಗುರು ನಮನ, ಮಾತಾಪಿತರ ಚರಣ ಪೂಜನ ಕಾರ್ಯಕ್ರಮವು ಕಾಟಿಪಳ್ಳದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಗಣೇಶಪುರದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಧರ್ಮೇಂದ್ರ ಗಣೇಶಪುರ ವಹಿಸಲಿದ್ದು, ಮ.ನ.ಪಾ. ಸದಸ್ಯರಾದ ಶ್ರೀ ಲೋಕೇಶ್ ಬೊಳ್ಳಾಜೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಾವಂಜೆಯ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ ನಾವಡ ಇವರಿಗೆ ಗುರು ನಮನ ನಡೆಯಲಿದ್ದು, ಶಕ್ತಿ ರೆಸಿಡೆನ್ಶಿಯಲ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ರವಿಶಂಕರ್ ಹೆಗಡೆ ದೊಡ್ನಲ್ಲಿ ಇವರು ಉಪನ್ಯಾಸ ನೀಡಲಿದ್ದಾರೆ. ಭರತಾಂಜಲಿಯ ಮ್ಯಾನೇಜಿಂಗ್ ಟ್ರಸ್ಟಿಗಳು ಸರ್ವರಿಗೂ ಗೌರವದ ಸ್ವಾಗತ ಬಯಸಿದ್ದಾರೆ.

Read More

ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ದಿನಾಂಕ : 19-07-2023ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ನಿವೃತ್ತ ಉಪನ್ಯಾಸಕ, ಕಲಾವಿದ ಪ್ರೊ.ಕೆ.ಜಿ. ಮಂಜುನಾಥ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ಸದಸ್ಯ ಕೆ. ಅಜಿತ್ ಕುಮಾರ್, ಪ್ರಾಂಶುಪಾಲರಾದ ಭಾಸ್ಕರ ಎ. ಅಭ್ಯಾಗತರಾಗಿ ಶುಭಾಶಂಸನೆಗೈದರು. ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರೊ. ವೈ. ಭಾಸ್ಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ಈ ಸಂದರ್ಭದಲ್ಲಿ ಯಕ್ಷಗಾನದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಯಕ್ಷ ಗುರುಗಳಾದ ಸತೀಶ್ ಆಚಾರ್ಯರು ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಶಿಕ್ಷಕಿ ಸುಪ್ರೀತಾ ಶೆಟ್ಟಿ ನಿರ್ವಹಿಸಿದರು. ಶಿಕ್ಷಕ ಗಣೇಶ ಶೆಟ್ಟಿ ಸಂಯೋಜಿಸಿದ ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ವೀಣಾ ಧನ್ಯವಾದ ಸಮರ್ಪಿಸಿದರು. ಈ ಯಕ್ಷಗಾನ ತರಬೇತಿಯಲ್ಲಿ…

Read More

ಬಂಟ್ವಾಳ : ಅಮು೦ಜೆಯಲ್ಲಿ ಇತ್ತೀಚಿಗೆ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ದಿನಾಂಕ : 15-07-2023ರಂದು ನಡೆಯಿತು. ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್‌ ಕಾರ್ಯಕ್ರಮ ಉದ್ಘಾಟಿಸಿ, “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯಲ್ಲಿರುವ ಹಿರಿಯ ಸಾಹಿತಿಗಳಾದ ಪ್ರೊ. ಕೆ.ಟಿ. ಗಟ್ಟಿ, ಡಾ. ವಾಮನ ನಂದಾವರ, ಶ್ರೀ ಸದಾನಂದ ಸುವರ್ಣ ಹಾಗೂ ಶ್ರೀ ಕೇಶವ ಕುಡ್ಲ ಇವರುಗಳ ಮನೆಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳಲಾಯಿತು. ನಿರಂತರ ಕಾರ್ಯಕ್ರಮದ ಮೂಲಕ ಸಾಹಿತ್ಯವನ್ನು ಮನೆ, ಮನೆಗೆ ಪರಿಚಯಿಸುವ ಕಾರ್ಯದಲ್ಲಿ ಕಸಾಪ ನಿರತವಾಗಿದೆ. ಸಮ್ಮೇಳನದ ದಾಖಲೀಕರಣ ಮತ್ತು ಇದನ್ನು ಶಾಶ್ವತವಾಗಿ ನೆನಪಿನಲ್ಲಿಡುವ ನಿಟ್ಟಿನಲ್ಲಿ ಸ್ಮರಣ ಸಂಚಿಕೆಯ ಅಗತ್ಯವಿದೆ. ಬಹುತೇಕ ತಾಲೂಕಿನ ಸಾಹಿತ್ಯ ಸಮ್ಮೇಳನಗಳ ಸ್ಮರಣ ಸಂಚಿಕೆ ಬಿಡುಗಡೆಯಾಗಿದ್ದು, ಶೀಘ್ರವೇ ಜಿಲ್ಲಾ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ” ಎಂದರು. ಪೊಳಲಿ ಶ್ರೀ…

Read More

ಚನ್ನರಾಯಪಟ್ಟಣ: ಪ್ರತಿಮಾ ಟ್ರಸ್ಟ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಿದ್ಯಾರ್ಥಿ ನಿಲಯದಲ್ಲಿ ಒಂದು ತಿಂಗಳ ಸೋಬಾನೆ ಪದಗಳ ಕಲಿಕಾ ತರಬೇತಿ ದಿನಾಂಕ 16-07-2023 ರಂದು ಪ್ರಾರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನೀನಾಸಂ ರಂಗ ನಿರ್ದೇಶಕ ಶಿವಶಂಕ‌ರ್ “ಜಾನಪದ ಪ್ರಕಾರಗಳಲ್ಲಿ ಒಂದಾದ ಸೋಬಾನೆ ಪದಗಳ ಬಗ್ಗೆ ಇತ್ತೀಚಿನ ಮಕ್ಕಳಿಗೆ ಪರಿಚಯವೇ ಇಲ್ಲದಿರುವುದು ವಿಪರ್ಯಾಸ. ಈ ಸಂದರ್ಭದಲ್ಲಿ ಪ್ರತಿಮಾ ಟ್ರಸ್ಟ್ ಸೋಬಾನೆ ಪದಗಳನ್ನು ಪರಿಚಯಾತ್ಮಕ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಒಂದು ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಿರುವುದು ಅಭಿನಂದನೀಯ” ಎಂದರು. ಉಮೇಶ್ ತೆಂಕನಹಳ್ಳಿ ಮಾತನಾಡಿ “ಪ್ರತಿಮಾ ಟ್ರಸ್ ಜಾನಪದ ಸೊಗಡಿನ ಬಹಳಷ್ಟು ತರಬೇತಿ ಶಿಬಿರ ಆಯೋಜನೆ ಮಾಡುತ್ತಿದ್ದು, ಈ ಬಾರಿ ಸೋಬಾನೆ ಪದಗಳನ್ನು ತರಬೇತಿಗೊಳಿಸುವುದು ಶಿಬಿದ ವಿಶೇಷತೆ. ಬಹಳ ದಿನಗಳಿಂದ ಈ ಸೋಬಾನೆ ಪದಗಳ ತರಬೇತಿ ಶಿಬಿರ ಆಯೋಜನೆ ಮಾಡಬೇಕು ಎಂದು ಅಂದುಕೊಂಡಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಕಾಲ ಕೂಡಿ ಬಂದಿದೆ. ಅದರಲ್ಲೂ ನಮ್ಮ ಹಳ್ಳಿ…

Read More

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಕೊಡವ ಎಂ.ಎ. ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ದಿನಾಂಕ : 15-07-2023ರಂದು ನಾಲ್ಕು ಕೃತಿಗಳು ಲೋಕಾರ್ಪಣೆಗೊಂಡವು. ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ 1) ಬೊಪ್ಪಂಡ ಶ್ಯಾಮ್ ಪೂಣಚ್ಚ, 2) ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), 3) ಐಚಂಡ ರಶ್ಮಿ ಮೇದಪ್ಪ, 4) ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), 5) ಆಪಾಡಂಡ ಎನ್. ಹೇಮಾವತಿ (ಜಾನ್ಸಿ-ತಾಮನೆ-ಬೊಳ್ಳಾರ್‍ಪಂಡ), 6) ಬೊಳ್ಳಜಿರ ಅಯ್ಯಪ್ಪ, 7) ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), 8) ಬೊಳ್ಳಜಿರ ಯಮುನ ಅಯ್ಯಪ್ಪ (ತಾಮನೆ-ಮನ್ನೆರ) 9) ಕರವಂಡ ಸೀಮಾ ಗಣಪತಿ ಇವರೆಲ್ಲರೂ…

Read More

ಪುತ್ತೂರು : ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ನೆಕ್ಕಿಲಾಡಿಯ ಸಹಕಾರದೊಂದಿಗೆ ದಿನಾಂಕ : 22-07-2023ನೇ ಶನಿವಾರ ಬೆಳಗ್ಗೆ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ‘ಗ್ರಾಮ ಸಾಹಿತ್ಯ ಸಂಭ್ರಮ – 2023’ ಸರಣಿ ಕಾರ್ಯಕ್ರಮ-7 ನಡೆಯಲಿದೆ. ಈ ಕಾರ್ಯಕ್ರಮವು ‘ಚಿಗುರೆಲೆ ಸಾಹಿತ್ಯ ಬಳಗ’ ಪುತ್ತೂರು ಇದರ ಸಂಯೋಜನೆಯಲ್ಲಿ ನೆಕ್ಕಿಲಾಡಿಯ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯುವುದು. ನೆಕ್ಕಿಲಾಡಿ ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್‌ ನಾಯಕ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ನೆಕ್ಕಿಲಾಡಿಯ ಅಧ್ಯಕ್ಷರಾದ ಶ್ರೀ ರಾಜೀವ ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸಿ.ಆರ್.ಪಿ. ನೆಕ್ಕಿಲಾಡಿಯ ಶ್ರೀ ಮಹಮ್ಮದ್ ಅಶ್ರಫ್ ಹಾಗೂ ಪುತ್ತೂರಿನ ಕ ಸಾ ಪ ದ ಕಾರ್ಯಕಾರಿ ಸಮಿತಿ…

Read More

ಬಂಟ್ವಾಳ: ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಆಯೋಜಿಸುವ ತಾಳ ಮದ್ದಳೆ, ದತ್ತಿ ಉಪನ್ಯಾಸ ಹಾಗೂ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 22-07-2023 ರಂದು ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ನಡೆಯಲಿದೆ. ಅಪರಾಹ್ನ ಶ್ರೀ ಪುರುಷೋತ್ತಮ ಪೂಂಜ ವಿರಚಿತ ಪ್ರಸಂಗ ‘ಉಲೂಪಿ ವಿವಾಹ’ ಯಕ್ಷಗಾನ ತಾಳಮದ್ದಳೆ ನಡೆಯುವುದು. ಹಿಮ್ಮೇಳದಲ್ಲಿ ಸರ್ವಶ್ರೀಗಳಾದ ಗೋಪಾಲಕೃಷ್ಣ ಭಟ್ ಪುಂಡಿಕಾಯಿ, ಟಿ. ಡಿ. ಗೋಪಾಲಕೃಷ್ಣ ಭಟ್ ಪುತ್ತೂರು ಮತ್ತು ಮಾ. ಅದ್ವೈತ್ ಕನ್ಯಾನ ಭಾಗವಹಿಸಲಿದ್ದಾರೆ. ಅರ್ಥದಾರಿಗಳಾಗಿ ಸರ್ವಶ್ರೀಗಳಾದ ಶಂಭು ಶರ್ಮ ವಿಟ್ಲ, ಜಯರಾಮ್ ಭಟ್ ದೇವಸ್ಯ, ರಾಜಗೋಪಾಲ ಕನ್ಯಾನ ಭಾಗವಹಿಸಲಿರುವರು. ತಾಳಮದ್ದಳೆ ಕಾರ್ಯಕ್ರಮದ ಬಳಿಕ ದತ್ತಿ ಉಪನ್ಯಾಸ ಕಾರ್ಯಕ್ರಮವು ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಲ| ರಮಾನಂದ ನೂಜಿಪ್ಪಾಡಿ, ಎಮ್. ಜೆ. ಎಫ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ‘ಕಳಸ ಪುಟ್ಟದೇವರಯ್ಯ ನಾಗಮ್ಮ ದತ್ತಿ’ ಉಪನ್ಯಾಸದಲ್ಲಿ ಗಂಗಾ ಪಾದೆಕಲ್ಲು ಅವರ “ಮೌನ ರಾಗಗಳು” ಕಾದಂಬರಿಯ ಅವಲೋಕನ ನಡೆಯಲಿದ್ದು, ಉಪನ್ಯಾಸಕಿ ಮತ್ತು  ಕವಯತ್ರಿಯಾದ ಶ್ರೀಮತಿ ಗೀತಾ ಕೊಂಕೋಡಿಯವರು…

Read More

ಕೋಟ: ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ ನಡೆಸಿದ 2020-21ಸಾಲಿನ ಭಾರತದ ಯುವ ಪ್ರತಿಭಾ ಶೋಧದಲ್ಲಿ ಜಾನಪದ ರಂಗಭೂಮಿ (ಯಕ್ಷಗಾನ) ಯುವ ಪ್ರತಿಭೆ, ವಿಧ್ಯಾರ್ಥಿ ವೇತನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಸುದೀಪ್ ಉರಾಳರು ಆಯ್ಕೆಯಾಗಿದ್ದಾರೆ. ಯಕ್ಷದೇಗುಲದ ಹಂದಟ್ಟು ಶ್ರೀ ಸುದರ್ಶನ ಉರಾಳ ಹಾಗೂ ಶ್ರೀಮತಿ ರಾಧಿಕಾ ದಂಪತಿಗಳ ಸುಪುತ್ರರಾದ ಇವರು ಯಕ್ಷಗಾನ ಚಂಡೆವಾದನದಲ್ಲಿ ಕರಾವಳಿ ಭಾಗದಲ್ಲಿ ಗುರುತಿಸಿಕೊಂಡಿದ್ದು, ಹಿಂದೆ ಸಾಲಿಗ್ರಾಮ ಮಕ್ಕಳ ಮೇಳದ ಕಲಾವಿದನಾಗಿ ಹಲವಾರು ಪ್ರದರ್ಶನಗಳಲ್ಲಿ ವೇಷ ಧರಿಸಿದ್ದರು. ಸುದರ್ಶನ ಉರಾಳರು ಯಕ್ಷಗಾನದ ಚಂಡೆ ವಾದನದ ವಿಭಾಗದಲ್ಲಿ ಆಸಕ್ತಿ ತಳೆದು ಏಕಲವ್ಯನಂತೆ ಮನೆಯಲ್ಲಿಯೇ ಅಭ್ಯಾಸ ಪ್ರಾರಂಭಿಸಿದವರು. ಮಾಧವ ಮಣೂರು, ಕೋಟ ಶಿವಾನಂದರವರಿAದ ಕೆಲವು ಪೆಟ್ಟು, ಉರುಳಿಕೆಗಳನ್ನು ತನ್ನದಾಗಿಸಿಕೊಂಡ ಸುದೀಪ್ ಹವ್ಯಾಸಿ ಕಲಾವಿದನಾಗಿ ಗುರುತಿಸಿಕೊಳ್ಳುತ್ತಾ ಇತ್ತೀಚೆಗೆ ಯಶಸ್ವೀ ಕಲಾವೃಂದದ ಹಲವು ವೇದಿಕೆಯಲ್ಲಿ ಚಂಡೆ ನುಡಿಸುತ್ತಾ ಜನಪ್ರಿಯರಾದರು. ಡೇರೆ ಮೇಳವಾದ ಸಾಲಿಗ್ರಾಮ ಮೇಳದಲ್ಲಿಯೂ ಅತಿಥಿಯಾಗಿ ಚಂಡೆವಾದಕರಾಗಿ ಕಾಣಿಸಿಕೊಂಡದ್ದಲ್ಲದೇ ಅಮೃತೇಶ್ವರಿ ಮೇಳದ ಸ್ಥಳೀಯ ಪ್ರದರ್ಶನಗಳಲ್ಲಿ ಖಾಯಂ ಸದಸ್ಯ. ವೃತ್ತಿ…

Read More