Subscribe to Updates
Get the latest creative news from FooBar about art, design and business.
Author: roovari
ಕನ್ನಡದ ಖ್ಯಾತ ಕವಿಯಾಗಿ, ಸಾಹಿತಿಯಾಗಿ, ಸಮಾಜದ ಆದರ್ಶ ವ್ಯಕ್ತಿಯಾಗಿ ಬಾಳಿದ ದಿನಕರ ದೇಸಾಯಿಯವರು ತಮ್ಮ ಸೃಜನಶೀಲವಾದ ಚುಟುಕು ಸಾಹಿತ್ಯದ ಮೂಲಕ ಅಮರರಾದರು. “ಚುಟುಕು ಬ್ರಹ್ಮ” ಎಂಬ ಸತ್ಕೀರ್ತಿ ಅವರ ಪಾಲಿಗೆ ಸ್ಥಿರವಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಲಗೇರಿ ಎಂಬ ಪುಟ್ಟ ಹಳ್ಳಿಯಲ್ಲಿ 10-09-1909ರಲ್ಲಿ ಹುಟ್ಟಿದರು. ತಂದೆ ದತ್ತಾತ್ರೇಯ ದೇಸಾಯಿ ತಾಯಿ ಅಂಬಿಕಾ. ಇವರ ತಂದೆ ಶಾಲಾ ಶಿಕ್ಷಕರಾಗಿದ್ದ ಕಾರಣ ತಂದೆಯ ಪ್ರಭಾವ, ವರ್ಚಸ್ಸು ಇವರಲ್ಲಿ ರಕ್ತಗತವಾಗಿತ್ತು. ರಂಗ ರಾವ್ ಹಿರೇಕರೂರು ಎಂಬ ಪಂಡಿತರು ಇವರನ್ನು ಪ್ರತಿಭಾ ಸಂಪನ್ನರಾಗಿ ಬೆಳೆಸಿದರು. ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆ, ಇಂಟರ್ ಮೀಡಿಯೇಟ್ ಶಿಕ್ಷಣ ಬೆಂಗಳೂರಿನಲ್ಲಿ, ಬಿ.ಎ. ಕನ್ನಡ ಮೈಸೂರಿನಲ್ಲಿ ಅಧ್ಯಯನ ಮಾಡುತ್ತಾ ಎಂ.ಎ., ಎಲ್.ಎಲ್.ಬಿ. ಪದವೀಧರರಾದರು. ಬಿ.ಎಂ.ಶ್ರೀ ಅವರ ಇಂಗ್ಲೀಷ್ ಗೀತೆಗಳ ಪ್ರಭಾವ, ಬಿ.ಎಂ. ಶ್ರೀಕಂಠಯ್ಯ, ಬಿ.ಸೀತಾ ರಾಮಯ್ಯ, ಬಿ.ಎಸ್. ವೆಂಕಣ್ಣ ಮೊದಲಾದ ಸಾಹಿತಿ ಸಾಧಕರ ಗಾಢವಾದ ಪ್ರಭಾವದಿಂದ ದಿನಕರ ದೇಸಾಯಿಯವರು ಸಮರ್ಥ ಸಾಹಿತಿಯಾಗಿ ಬೆಳೆದು ಪ್ರವರ್ಧಮಾನರಾದರು. ಮಾತ್ರವಲ್ಲ ರಾಜಕೀಯ ಧುರೀಣರಾದರು. ಭಾರತ ಸೇವಕ…
ಯಕ್ಷಗಾನ ನಮ್ಮ ಹೆಮ್ಮೆಯ ಸಂಕೇತವಾದ ಒಂದು ಶ್ರೇಷ್ಠ ಕಲೆ. ಅದು ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಮೇರುಕಲೆ. ಇಂತಹ ಶ್ರೀಮಂತ ಕಲೆಯಲ್ಲಿ ಮಿಂಚುತ್ತಿರುವ ಕಲಾವಿದರು ಮಂಜುನಾಥ ಮೊಗವೀರ ಮತ್ಯಾಡಿ. ಅಕ್ಕಣಿ ಮೊಗವೀರ ಹಾಗೂ ಸದಿಯ ಮೊಗವೀರ ಮತ್ಯಾಡಿ ಇವರ ಮಗನಾಗಿ 26.01.1978ರಂದು ಜನನ. ಬಿ.ಎ ಪದವಿಯನ್ನು ಪಡೆದಿರುತ್ತಾರೆ. ಯಕ್ಷಗಾನದ ಪ್ರಥಮ ಗುರುಗಳು ಶ್ರೀಯುತ ಸುಬ್ರಾಯ ಮಲ್ಯ ಹಲ್ಲಾಡಿ, ಈಗ ಪೂರ್ಣ ಗುರುಗಳಾಗಿ ತಿದ್ದಿ ತೀಡಿದವರು ಪ್ರಸಾದ್ ಕುಮಾರ್ ಮೊಗೆಬೆಟ್ಟು. ಚಿಕ್ಕವನಿರುವಾಗ ಊರಿನ ಕಲಾ ಸಂಘ ಅಂಬಾ ಯಕ್ಷಗಾನ ಕಲಾ ಸಂಘ ಇದರ ಪ್ರದರ್ಶನ. ಅದರಲ್ಲಿ ನನ್ನ ನೆಚ್ಚಿನ ಕಲಾವಿದರು ವಾಸುದೇವ ರಾವ್ ಮತ್ಯಾಡಿ. ಇವರ ಅಭಿನಯ, ಕುಣಿತ ಮಾತು ಇದಕ್ಕೆ ತುಂಬಾ ಆಕರ್ಷಿತನಾಗಿ, ಹಾಗೆಯೇ ಅವರನ್ನೇ ಅನುಸರಿಸಿದೆ. ಅವರು ಪ್ರಸ್ತುತ ಕಾರ್ಕಳದಲ್ಲಿ ಲೆಕ್ಕ ಪರಿಶೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಂದೆ ತಾಯಿ ಕೂಡ ಪ್ರೇರಕರು. ಏಕೆಂದರೆ, ನಾನು ಯಕ್ಷಗಾನ ಮನೆಯಲ್ಲಿ ಕುಣಿದಾಗ ಅವರು ಸಂತೋಷ ಪಡುತ್ತಿದ್ದರು. ಅದೇ ನನಗೆ ಪ್ರೇರಣೆ. ರಂಗಕ್ಕೆ ಹೋಗುವ ಮೊದಲು…
ಮೈಸೂರು : ಆನ್ ಸ್ಟೇಜ್ ಯೂತ್ ಥೀಯೆಟರ್ ಪ್ರಸ್ತುತ ಪಡಿಸುವ ಪಿ. ಲಂಕೇಶ್ ರಚಿಸಿರುವ ವಿನೋದ ಸಿ.ಮೈಸೂರು ಇವರ ಪರಿಕಲ್ಪನೆ ಮತ್ತು ನಿರ್ದೇಶನದ ‘ಪೊಲೀಸರಿದ್ದಾರೆ ಎಚ್ಚರಿಕೆ’ ನಾಟಕದ ಪ್ರದರ್ಶನವು ಮೈಸೂರಿನ ಕಲಾಮಂದಿರ ಆವರಣದ ಕಿರುರಂಗ ಮಂದಿರದಲ್ಲಿ ದಿನಾಂಕ 10-09-2023ರಂದು ಸಂಜೆ 7 ಗಂಟೆಗೆ ನಡೆಯಲಿದೆ. ನಾಟಕದ ಸಂಗೀತ ನಿರ್ವಹಣೆ ಉಲ್ಲಾಸ್ ಮತ್ತು ಮೇಕಪ್ ಅಂಕೇಶ್ ಮಾಡಲಿದ್ದು, ಪಾತ್ರಧಾರಿಗಳಾಗಿ ಗಣೇಶ್ ಬಿ.ಎಲ್., ನಂದೀಶ್ ಯು. ಮತ್ತು ಮನೋಹರ್ ವೈ. ಕಲಾಭಿಮಾನಿಗಳನ್ನು ರಂಜಿಸಲಿದ್ದಾರೆ. ನಿರ್ದೇಶಕ ವಿನೋದ ಸಿ. ಮೈಸೂರು : ಮಂಡ್ಯ ರಮೇಶ್ ರವರ “ನಟನ” ರಂಗ ಶಾಲೆಯಲ್ಲಿ 2 ವರ್ಷ ವಿದ್ಯಾರ್ಥಿಯಾಗಿ, ಶ್ರೀ ಶಿವಕುಮಾರ ರಂಗ ಪ್ರಯೋಗ (ಸಾಣೀಹಳ್ಳಿ) ಶಾಲೆಯಲ್ಲಿ ಪದವೀಧರರು, ಶಿವ ಸಂಚಾರ ತಿರುಗಾಟ, ಡಾ. ಗಂಗೂ ಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಎಂ.ಎ. ಡ್ರಾಮಾ ಮಾಡಿರುತ್ತಾರೆ. ನಟನಾ ತಯಾರಿ ವರ್ಕ್ ಶಾಪ್ : Workshop in Mysuru… for theatre ನಲ್ಲಿ 21 ದಿನಗಳ workshop.…
ಮಂಗಳೂರು : ವಸಂತ ಪ್ರೇಮೀ ಮಂಡಳಿ ಮತ್ತು ಬೆಸೆಂಟ್ ಹಳೆ ವಿದ್ಯಾರ್ಥಿ ಸಂಘ ಕೊಡಿಯಾಲಬೈಲ್ ಇದರ ವತಿಯಿಂದ ವಿವಿಧ ಸ್ಪರ್ಧೆಗಳನ್ನು ದಿನಾಂಕ 12-09-2023ರಂದು ಬೆಸೆಂಟ್ ಪಿಯು ಕಾಲೇಜಿನ ಶ್ರೀನಿವಾಸ ಕಲಾರಂಗದಲ್ಲಿ ಆಯೋಜಿಸಲಾಗಿದೆ. ಬಿ.ಕೃಷ್ಣಪ್ಪ ಸ್ಮಾರಕ ಅಂತರ್ ಶಾಲಾ ಕನ್ನಡ ಭಾಷಣ ಸ್ಪರ್ಧೆಯ ವಿಷಯ ‘ಆಧುನಿಕ ಯುಗದಲ್ಲಿ ಜಾಲತಾಣಗಳ ಪಾತ್ರ’ ಮತ್ತು ಡಾ.ಕೆ.ಗಿರಿಧರ ರಾವ್ ಸ್ಮಾರಕ ಭಕ್ತಿಗೀತೆ ಮತ್ತು ಭಜನ ಸ್ಪರ್ಧೆಗಳು ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಹೈಸ್ಕೂಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮಾತ್ರ ಭಾಗವಹಿಸಬಹುದಾದ ಈ ಸ್ಪರ್ಧೆಯ ಕಾಲಾವಕಾಶ ಕೇವಲ 4 ನಿಮಿಷಗಳು. ನೋಂದಣಿ ಸೆಪ್ಟೆಂಬರ್ 12ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.
ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿವಿ, ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಕಜೆಮಾರು ಕೆದಂಬಾಡಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಆಯೋಜಿಸಲಾದ ಸರ್ವ ಸಮಾನತೆ-ಗಾಂಧೀಜಿ ವಿಚಾರಧಾರೆಯ ಪ್ರಸ್ತುತತೆ, ನಾಗರಿಕ ಸೇವೆಯಲ್ಲಿ ಸ್ವಚ್ಛತೆ ಮತ್ತು ಪ್ರಾಮಾಣಿಕತೆ ಕುರಿತ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 01-09-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಉದ್ಘಾಟಿಸಿ, ಮುಖ್ಯ ಅತಿಥಿಯಾಗಿ ಸಿ.ಪಿ.ಎಂ ಪಾಲಿಟ್ ಬ್ಯೂರೋ ಸದಸ್ಯ ಕೇರಳದ ಮಾಜಿ ಸಚಿವ ಎಂ.ಎ.ಬೇಬಿ ಭಾಗವಹಿಸಿದರು. ಮಾಜಿ ಸಂಸದ ಪಿ.ಕರುಣಾಕರನ್, ನಿವೃತ್ತ ಸೆಂಟ್ರಲ್ ಆಡಳಿತ ಟ್ರಿಬ್ಯೂನಲ್ ಸದಸ್ಯ ಸುಧೀರ್ ಕುಮಾರ್ ಉಪಸ್ಥಿತರಿದ್ದು, ಮಂಗಳೂರು ವಿವಿ.ಉಪ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ‘ಸಮಾನತೆಗಾಗಿ ಸಂಘರ್ಷ’ (ಹೋರಾಟದಲ್ಲೇ ಕೃಷ್ಣ ಶೆಟ್ಟಿ ಬದುಕು) ಕೃತಿಯನ್ನು ಸಂಸತ್ ಮಾಜಿ ಸದಸ್ಯ ಪಿ.ಕರುಣಾಕರನ್ ಅವರ ಪತ್ನಿ ಲೈಲಾ ಕರುಣಾಕರನ್…
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ.ಚೌಟ ದತ್ತಿನಿಧಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ತುಳು ಮತ್ತು ಕನ್ನಡ ಯಕ್ಷಗಾನ ಪ್ರಸಂಗಗಳ ವಿಭಿನ್ನ ಗತಿಯ ವೇಷಧಾರಿ ಜಪ್ಪು ದಯಾನಂದ ಶೆಟ್ಟಿ ಆಯ್ಕೆ ಆಗಿದ್ದಾರೆ. ಪ್ರೊ.ಜಿ.ಆರ್.ರೈ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಪಳ್ಳಿ ಕಿಶನ್ ಹೆಗ್ಡೆಯವರನ್ನೊಳಗೊಂಡ ಸಲಹಾ ಸಮಿತಿಯ ಶಿಫಾರಸಿನ ಮೇರೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ದಯಾನಂದ ಶೆಟ್ಟಿ ಜಪ್ಪು: ಕರ್ನಾಟಕ, ಕುಂಡಾವು, ದೇಲಂತಪುರಿ ಮತ್ತು ಸಸಿಹಿತ್ಲು ಮೇಳಗಳಲ್ಲಿ ಒಟ್ಟು 52 ವರ್ಷ ತಿರುಗಾಟ ಮಾಡಿರುವ ದಯಾನಂದ ಶೆಟ್ಟರು ಬೆಳ್ತಂಗಡಿ ಸವಣಾಲಿನ ದಿ.ದೇವಪ್ಪ ಶೆಟ್ಟಿ ಮತ್ತು ಲಕ್ಷ್ಮೀ ದಂಪತಿಯ ಮಗನಾಗಿ 1948ರಲ್ಲಿ ಜನಿಸಿದರು. ಕೇವಲ ಎರಡನೆಯ ತರಗತಿ ಕಲಿತ ಇವರು ತನ್ನ 12ನೇ ವಯಸ್ಸಿನಲ್ಲಿ ಯಕ್ಷಗಾನ ವೃತ್ತಿಗಿಳಿದು ಹಲವು ಹಿರಿಯ ಕಲಾವಿದರ ಒಡನಾಟದಲ್ಲಿ ಖ್ಯಾತರಾದರು. ಕರ್ನಾಟಕ ಮೇಳವೊಂದರಲ್ಲೇ 36 ವರ್ಷ ಪೂರೈಸಿದ ಅವರು ಮಂಡೆಚ್ಚ, ಅಳಿಕೆ, ಬೋಳಾರ, ಮಂಕುಡೆ, ರಾ.ಸಾಮಗ, ಮಿಜಾರು, ಅರುವ, ಕೋಳ್ಯೂರು ಮೊದಲಾದ ದಿಗ್ಗಜರೊಂದಿಗೆ ಸ್ತ್ರೀವೇಷ, ಪುಂಡು ವೇಷ,…
ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಾಹಿತಿಗಳ 6ನೆಯ ರಾಜ್ಯ ಸಮ್ಮೇಳನವು ದಿನಾಂಕ 05-09-2023ರಂದು ಉಡುಪಿಯ ಅಂಬಲ್ಪಾಡಿ ಶ್ರೀ ಭವಾನಿ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ 34ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಯಾನಂದ ಪೆರಾಜೆಯವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಮತ್ತು ಗ್ರಾಮೀಣ ಹಿಂದುಳಿದ ಪ್ರದೇಶದ ಬಡ, ದೀನ, ದಲಿತ ಮಕ್ಕಳಿಗೆ ಶಿಕ್ಷಣ ಹಾಗೂ ತರಬೇತಿಯನ್ನು ನೀಡಿರುವ ಅಮೂಲ್ಯ ಸೇವೆಗೆ ರಾಜ್ಯ ಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿಯನ್ನು ನೀಡಿ ಸಮ್ಮಾನಿಸಲಾಯಿತು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ಸಾಹಿತಿ ನೆಂಪು ನರಸಿಂಹ ಭಟ್ಟರ ಅಧ್ಯಕ್ಷತೆಯಲ್ಲಿ ಜರಗಿದ ಈ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಂಬಲ್ಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಕಾರ್ಯದರ್ಶಿ ಡಾ. ವಿಜಯ ಬಲ್ಲಾಳ, ಉದ್ಯಮಿ ವಿಶ್ವನಾಥ ಶೆಣೈ, ಕ.ಚು.ಸಾ.ಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ…
ಬೆಂಗಳೂರು : ಹೊನ್ನಾವರದ ಜಾನಪದ ವಿಶ್ವಪ್ರತಿಷ್ಠಾನ, ಅಭಿನವ ಬಳಗ, ಪ್ರಣತಿ ದೊಡ್ಡಹೊಂಡ ಮತ್ತು ಬುಕ್ ಬ್ರಹ್ಮ ಸಹಯೋಗದಲ್ಲಿ ಏರ್ಪಡಿಸಿದ್ದ ‘ಜನಪದ ದೀಪಾರಾಧನೆ 43’ ಪ್ರಶಸ್ತಿ ಪ್ರದಾನ, ಧ್ವನಿ ಸಾಂದ್ರಿಕೆ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭವು ದಿನಾಂಕ 05-09-2023ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿನ ಭಾರತೀಯ ವಿದ್ಯಾಭವನದ ಕೆ.ಆರ್.ಜಿ. ಹಾಲ್ ಇಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಕುವೆಂಪು ದೀಪಪ್ರಶಸ್ತಿ ಸ್ವೀಕರಿಸಿದ ಬಹುಮುಖಿ ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡುತ್ತಾ “ಜಾನಪದರಿಗೆ ಲೋಕಜ್ಞಾನ ಅರಿವಿತ್ತು ಅವರು ಯಾವತ್ತೂ ಆತ್ಮತೃಪ್ತಿ ಮತ್ತು ಸಹಬಾಳ್ವೆಗೆ ಹೆಚ್ಚು ಮಹತ್ವ ನೀಡುತ್ತಿದ್ದರು. ಮಾಸ್ತಿಯವರು ಯಾವಾಗಲೂ ಹೇಳುತ್ತಿದ್ದ ಮಾತೆಂದರೆ ಸಾತ್ವಿಕ ಶಕ್ತಿ ಸುಮ್ಮನಿದ್ದರೆ ತಾಮಸ ಶಕ್ತಿ ವಿಜೃಂಭಿಸುತ್ತದೆ. ಆಧುನಿಕ ಶಿಕ್ಷಣ ಪದ್ಧತಿ ನಮ್ಮ ಪರಿಸರವನ್ನು ಮಾತ್ರವಲ್ಲ ಅಂತರಂಗವನ್ನು ಕಲುಷಿತಗೊಳಿಸಿದೆ. ನಾವು ಮತ್ತೆ ಸ್ಥಳೀಯ ಸಂಸ್ಕೃತಿಯ ಕಡೆಗೆ ಮುಖಮಾಡಬೇಕಿದೆ ಎಂದರು. ಹೊನ್ನಾವರದಂಥ ತಾಲ್ಲೂಕು ಕೇಂದ್ರದಲ್ಲಿ ನಲವತ್ತು ವರ್ಷಗಳಿಂದ ದೀಪಾರಾಧನೆಯಂಥ ವಿಶಿಷ್ಟ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವ ಎನ್.ಆರ್.ನಾಯಕ ದಂಪತಿಯ ಕೆಲಸ ಮಾದರಿಯಾದದ್ದು. ಒಂದು ವಿಶ್ವವಿದ್ಯಾಲಯ ಮಾಡುವಷ್ಟು…
ಬೆಂಗಳೂರು : ಜಂಗಮ ಕಲೆಕ್ಟಿವ್ ಆಯೋಜನೆಯಲ್ಲಿ ‘ಪಯಣ’ ಪ್ರಸ್ತುತ ಪಡಿಸುವ ಶ್ರೀಜಿತ್ ಸುಂದರಂ ನಿರ್ದೇಶನದ ‘ತಲ್ಕಿ’ ನಾಟಕದ ಪ್ರದರ್ಶನವು ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ದಿನಾಂಕ 15-09-2023ರಂದು ಸಂಜೆ ಗಂಟೆ 7.30ಕ್ಕೆ ನಡೆಯಲಿದೆ. ನಾಟಕದ ಕುರಿತು : ‘ತಲ್ಕಿ’ ನಾಟಕವು ಸಮುದಾಯದವರ ಜೀವನ ಕಥೆಗಳ ಆಧಾರದ ಸತ್ಯ ಕಥೆಗಳು. ಬರವಣಿಗೆ, ಸಮಾಜಸೇವೆ, ಸಮುದಾಯ ಮುಖ್ಯಸ್ಥರು, ಅಮ್ಮಂದಿರು, ಹೀಗೆ ಸಮಾಜದ ಬೇರೆ ಬೇರೆ ಘಟಕಗಳಲ್ಲಿ ಕೆಲಸ ಮಾಡುತ್ತಿರುವ, ಐವತ್ತು ವರ್ಷ ದಾಟಿರುವ ಮಂಗಳಮುಖಿಯರು ತಮ್ಮ ಈಡೇರದ ಕನಸ್ಸುಗಳನ್ನು ನನಸು ಮಾಡಿಕೊಳ್ಳಲು ನಟನೆ ಹಾಗೂ ರಂಗ ಪ್ರಕ್ರಿಯೆಗಳ ನೆರವಿನಿಂದ ಹೋರಾಡಲು ಅವಕಾಶ ಕಲ್ಪಿಸಿಕೊಡುವ ವಿಶಿಷ್ಟ ಯತ್ನ ಈ ನಾಟಕ. ಇವರೆಲ್ಲರಿಗೂ ಇರುವ ಒಂದು ಸಾಮ್ಯತೆ ಎಂದರೆ ಸಮಯ ಹಾಗೂ ಸಮಾಜ ನೀಡಿರುವ ಗಾಯದ ಗುರುತುಗಳು. ಬೆಂಗಳೂರಿನ ಬೇರೆ ಬೇರೆ ಪ್ರದೇಶಗಳ ಜೊತೆ ಅವಿನಾಭಾವ ಸಂಬಂಧವಿರುವ ಅವರ ದೇಹದ ಮೇಲಿನ ಗುರುತುಗಳು, ಆ ಪ್ರದೇಶಗಳ ಗುರುತುಗಳಾಗಿ ಮಾರ್ಪಟ್ಟಿವೆ ಎನ್ನಬಹುದು. ಇಂತಹ ಹಿಂಸೆ, ನೋವಿನ ನಡುವೆಯೂ, ಹೋರಾಡಿ ಬದುಕುವ…
‘ಮಾಧುರ್ಯ’ ಹೆಸರಿಗೆ ಅನ್ವರ್ಥಕ ಜೀವನಯಾನ ಕು.ಮಾಧುರ್ಯಳದು. ಕಲಾರಾಧನೆ, ವಿದ್ಯಾಭ್ಯಾಸ – ಸಾಧನೆಗಳ ಕನಸಿನ ಹಾದಿಯಲ್ಲಿ ಸಾಗುತ್ತಿರುವ ಮಾಧುರ್ಯ ಆತ್ಮವಿಶ್ವಾಸದ ಪ್ರತಿಮೂರ್ತಿ. ನೃತ್ಯ, ಸಂಗೀತ ಅವಳ ಬಾಲ್ಯದ ಒಲವು. ಮಗಳ ಆಸೆ, ಪ್ರತಿಭೆಯನ್ನು ಪೋಷಿಸಿಕೊಂಡು ಬಂದವರು ಅವಳ ಹೆತ್ತವರಾದ ಶ್ರೀ ಸುರೇಂದ್ರ ಮತ್ತು ಶ್ರೀಮತಿ ಗಾಯತ್ರೀದೇವಿ. ನಾಡಿನಾದ್ಯಂತ ಹಲವಾರು ವೇದಿಕೆಗಳಲ್ಲಿ ನರ್ತಿಸಿದ ಇವಳು, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೇರಿಕಾದ ಕ್ಯಾಲಿಫೋರ್ನಿಯಾ ಸೇರಿದಾಗ ‘ನೃತ್ಯಲೀಲಾ ಡ್ಯಾನ್ಸ್ ಸ್ಕೂಲ್’ ನಾಟ್ಯಗುರು ವಿದುಷಿ ಪಂಚಮಿ ಫಡ್ಕೆ ಅವರಲ್ಲಿ ನೃತ್ಯ ಕಲಿಕೆ ಮುಂದುವರಿಸಿ ವಿದೇಶದಲ್ಲಿ ಅನೇಕ ನೃತ್ಯ ಪ್ರದರ್ಶನಗಳನ್ನು ನೀಡಿದ್ದು ವಿಶೇಷ. ಇದೀಗ ಮಾಧುರ್ಯ ವಿಧ್ಯುಕ್ತವಾಗಿ ತನ್ನ ರಂಗಪ್ರವೇಶವನ್ನು ದಿನಾಂಕ 10-09-2023ರ ಭಾನುವಾರದಂದು ಬೆಳಗ್ಗೆ 10 ಗಂಟೆಗೆ ಜಯನಗರದ ಜೆ.ಎಸ್.ಎಸ್. ಆಡಿಟೋರಿಯಂನಲ್ಲಿ ನೆರವೇರಿಸಿಕೊಳ್ಳಲಿದ್ದಾಳೆ. ಅವಳ ನೃತ್ಯ ಸೊಬಗನ್ನು ಕಣ್ತುಂಬಿಕೊಳ್ಳಲು ಎಲ್ಲ ಕಲಾರಸಿಕರಿಗೂ ಆದರದ ಸ್ವಾಗತ. ಬೆಂಗಳೂರಿನಲ್ಲಿ ಜನಿಸಿದ ಮಾಧುರ್ಯ ತನ್ನ ಎಂಟರ ಎಳವೆಯಲ್ಲಿ, ಪ್ರಭಾತ್ ಕಲಾವಿದರು ಅವರೊಂದಿಗೆ ನೃತ್ಯಾಭ್ಯಾಸ ಆರಂಭಿಸಿದಳು. ಮಾಧುರ್ಯಳ ಮೊದಲ ಗುರು ಶಕುಂತಲಾ ಪ್ರಭಾತ್. ಇವಳ ಪ್ರಾಥಮಿಕ…