Author: roovari

ಪುತ್ತೂರು : ಡಿಸೆಂಬರ್ 2023ರಲ್ಲಿ ನಡೆಯಲಿರುವ ಶ್ರೀ ಆಂಜನೇಯ 55ರ ಸಂಭ್ರಮಕ್ಕೆ ಪೂರಕವಾಗಿ ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ರೂಪುಗೊಂಡು ಪ್ರಾರಂಭವಾದ ‘ಯಕ್ಷ ಬಾನುಲಿ ಸರಣಿ ತಾಳಮದ್ದಳೆ’ ಎಂಬ ಕಾರ್ಯಕ್ರಮದಡಿಯಲ್ಲಿ ದಿನಾಂಕ : 06-07-2023ರಂದು, ವಿವೇಕಾನಂದ ಕಾಲೇಜಿನ ಆಡಳಿತಕ್ಕೊಳಪಟ್ಟ ರೇಡಿಯೋ ಪಾಂಚಜನ್ಯದಲ್ಲಿ ‘ಯಕ್ಷ ದಾಂಪತ್ಯ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು, ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ತಾರಾನಾಥ್ ಸವಣೂರು ಹಾಗೂ ಅಮೋಘ ಶಂಕರ ಸಹಕರಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ (ವಾಲಿ), ಮನೋರಮಾ ಜಿ. ಭಟ್ (ತಾರೆ), ಸುಬ್ಬಪ್ಪ ಕೈಕಂಬ (ಶ್ರೀ ರಾಮ), ಶಾರದಾ ಅರಸ್ (ಸೀತೆ) ಸಹಕರಿಸಿದರು. ತೇಜಸ್ವಿನಿ ಕೆಮ್ಮಿಂಜೆ ಹಾಗೂ ಪ್ರಶಾಂತ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Read More

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಇಲ್ಲಿನ ಕನ್ನಡ ಭವನದಲ್ಲಿ ದಿನಾಂಕ : 04-07-2023ರಂದು ‘ಕಚೇರಿ ಉದ್ಘಾಟನೆ’ ಮತ್ತು ಕೊರಗಪ್ಪ ಶೆಟ್ಟಿ ಅವರ ಅಭಿನಂದನಾ ಗ್ರಂಥ ‘ರಂಗಸ್ಥಳದ ರಾಜ ಅರುವ’ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಸಾಪ ಮೂಡಬಿದರೆ ತಾಲೂಕು ಘಟಕ ಕಛೇರಿಯನ್ನು ಉದ್ಘಾಟನೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್‌ ಮಾತನಾಡುತ್ತಾ “ಜನರಲ್ಲಿ ಓದುವ ಆಸಕ್ತಿ ಕುಂಠಿತಗೊಳ್ಳುತ್ತಿದ್ದು, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಬೆಳಸುವ ಜವಾಬ್ದಾರಿಯನ್ನು ‘ಕಸಾಪ’ ಹೊತ್ತುಕೊಂಡಿದೆ. ಕಸಾಪ ಪ್ರತಿ ವರ್ಷ ನೂರಾರು ಕಾರ್ಯಕ್ರಮ ಹಮ್ಮಿಕೊಳ್ಳುತ್ತದೆ. ಸದಸ್ಯರ ಸಕ್ರಿಯತೆ ಮತ್ತು ಉತ್ಸುಕತೆಯಿಂದ ಉತ್ತಮ ಕೊಡುಗೆ ನೀಡಬಹುದಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಸಾಪ ಸದಸ್ಯತ್ವ ಕಡಿಮೆ ಇದೆ. ಇದು ಬೇಸರದ ಸಂಗತಿ. ಯುವಜನತ ಕಸಾಪ ಅಜೀವ ಸದಸ್ಯರಾಗುವ ಮೂಲಕ ಸಾಹಿತ್ಯಕ್ಕೆ ಕೊಡುಗೆ ನೀಡಬೇಕಾಗಿದೆ” ಎಂದರು. ‘ರಂಗಸ್ಥಳದ ರಾಜ ಅರುವ’ ಅಭಿನಂದನಾ…

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನ ‘ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ’ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು.ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ದತ್ತಿ ದಾನಿಗಳ ಆಶಯದಂತೆ ಪ್ರತಿವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಒಬ್ಬರು ಕ್ರೈಸ್ತ ಕನ್ನಡ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯು ತಲಾ ರೂ 10,000 (ಹತ್ತು ಸಾವಿರ)ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ‘ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಯನ್ನು ʻಸಂಚಲನ ಬಳಗ’ದವರು 2017ರಲ್ಲಿ ಸ್ಥಾಪಿಸಿದ್ದು ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. “ತಮ್ಮ ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರನ್ನು ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ…

Read More

ಮಂಗಳೂರು: ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ತು (ರಿ) ಇವರು ಆಯೋಜಿಸುವ ಪ್ರಸಕ್ತ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ದಿನಾಂಕ 02-07-2023 ರಂದು ಶರವು ದೇವಳದ ಧ್ಯಾನ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶರವು ಶ್ರೀ ಮಹಾಗಣಪತಿ ದೇವಳದ ಧರ್ಮದರ್ಶಿಯಾದ ರಾಘವೇಂದ್ರ ಶಾಸ್ತ್ರಿಯವರು “ಪಾಶ್ಚಾತ್ಯ ಸಂಸ್ಕೃತಿ ಇಂದು ಬೇರೆ ಬೇರೆ ರೀತಿಯಲ್ಲಿ ಪ್ರವೇಶ ಮಾಡುತ್ತಿರುವ ಕಾಲಘಟ್ಟದಲ್ಲಿ ಭರತನಾಟ್ಯಂತಹ ಪ್ರಾಚೀನ ಮತ್ತು ಅಗತ್ಯವಾದ ಕಲೆಯನ್ನು ಮಕ್ಕಳಿಗೆ ಕಲಿಸಿ ಪ್ರದರ್ಶಿಸುವುದು ನಮ್ಮ ಸಂಸ್ಕೃತಿಯನ್ನು ರಕ್ಷಿಸಿದಂತೆ. ಭಾರತದ ಖ್ಯಾತ ನಾಟ್ಯ ಶಾಸ್ತ್ರಜ್ಞ ಭರತಮುನಿಯ ನಾಟ್ಯ ಶಾಸ್ತ್ರ ಗ್ರಂಥವು ನಾಟ್ಯ ಮತ್ತು ರಂಗಭೂಮಿಗೆ ಹೊಸ ದಿಶೆಯನ್ನು ತೋರಿದ ಗ್ರಂಥವಾಗಿದೆ ಈ ಗ್ರಂಥದ ಆಧಾರದಲ್ಲೇ ನೃತ್ಯ ಗುರುಗಳು ಮತ್ತಷ್ಟು ಸಾಧನೆ ಮಾಡುವಂತಾಗಲಿ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಲಾ ಗುರುಗಳ ಮತ್ತು ಕಲಾವಿದ್ಯಾರ್ಥಿಗಳ ಔನ್ನತಿಗಾಗಿ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಹಮ್ಮಿಕೊಳ್ಳಲಾಗಿರುವ ನೃತ್ಯ ಸಮ್ಮೇಳನವು ಯಶಸ್ವಿಯಾಗಿ ಜರಗಲಿ” ಎಂದು ಶುಭಹಾರೈಸಿದರು. ಪರಿಷತ್ತಿನ ಅಧ್ಯಕ್ಷ ವಿದ್ವಾನ್ ಯು.…

Read More

ತೆಕ್ಕಟ್ಟೆ: ಯಕ್ಷಾಂತರಂಗ (ರಿ.) ವ್ಯವಸಾಯಿ ಯಕ್ಷತಂಡ ಕೋಟ ಇವರ ಸಪ್ತಮ ವಾರ್ಷಿಕೋತ್ಸವ ಹಾಗೂ ‘ಯಕ್ಷ ವಿಭೂಷಣ- 2023’ ನೂತನ ಯಕ್ಷಾಭರಣ ಅನಾವರಣ ಕಾರ್ಯಕ್ರಮವು ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಇವರ ಸಹಕಾರದೊಂದಿಗೆ 01-07-2023ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು “ತೆಂಕು, ಬಡಗು, ಬಡಾಬಡಗು ತಿಟ್ಟಿನ ಯಕ್ಷ ನೆಲದಲ್ಲಿ ಸಚಿವನಾಗಿ ಒಂದಿಷ್ಟು ಕೆಲಸ ಮಾಡಿದ ಸಾರ್ಥಕತೆ, ಧನ್ಯತೆ ನನಗಿದೆ. ಈ ಮೂರು ನೆಲದ ಮನೆ ಮನೆಗಳಲ್ಲಿ ಯಕ್ಷಗಾನ ಸದ್ದು ಮಾಡುತ್ತಿರುವುದನ್ನು ಕಂಡಿದ್ದೇನೆ. ಹಾಗಾಗಿ ಯಕ್ಷಗಾನ ಮನುಷ್ಯರಲ್ಲಿ ಶಕ್ತಿಯನ್ನು, ಶೃದ್ದೆಯನ್ನು, ಆಸಕ್ತಿಯನ್ನು ಮತ್ತು ಆತ್ಮವಿಶ್ವಾಸವನ್ನು ಇಮ್ಮಡಿಯಾಗಿಸುತ್ತದೆ. ಉತ್ತಮ ವಾಕ್ಚಾತುರ್ಯವು ಯಕ್ಷಗಾನದಿಂದ ಸಾಧ್ಯವಾಗುತ್ತದೆ. ಈ ಕಾರಣಕ್ಕಾಗಿಯೇ ಯಕ್ಷಗಾನ ತನ್ನ ಪರಿಧಿಯನ್ನು ಮೀರಿ ಬೆಳೆಯುತ್ತಿದೆ. ಯಕ್ಷಗಾನದಲ್ಲಿ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ. ಅಂಥವರ ಗರಡಿಯಲ್ಲಿ ಬೆಳೆದ ಕಲಾವಿದರನೇಕರನ್ನು ಒಡಗೂಡಿ ಕೃಷ್ಣಮೂರ್ತಿ ಉರಾಳರು ತಂಡವೊಂದನ್ನು ಕಟ್ಟಿ ಕಾರಂತ ಥೀಂ ಪಾರ್ಕಿನಲ್ಲಿ ನೆಲೆಸಿ, ಅವರ ಹೆಸರಿನ ಪ್ರಶಸ್ತಿಯನ್ನು ಕೊಡುತ್ತಿರುವುದು ನಿಜಕ್ಕೂ ಸ್ತುತ್ಯರ್ಹ”…

Read More

ಮಂಗಳೂರು : ಸಂಸ್ಕಾರ ಭಾರತಿಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅತೀವ ಸಾಧನೆ ಮಾಡಿದ ಮತ್ತು ಯಾರೂ ಗುರುತಿಸದೇ ಉಳಿದ ಎಪ್ಪತ್ತು ವರ್ಷಗಳಿಗೆ ಮೇಲ್ಪಟ್ಟ ಕಲಾ ಸಾಧಕರನ್ನು ಗುರುತಿಸಿ, ಅವರಿರುವಲ್ಲಿಗೆ ಹೋಗಿ ಗೌರವಿಸುವ ಕಾರ್ಯಕ್ರಮ ಸುಮಾರು 20 ವರ್ಷಗಳಿಂದ ನಿರಂತರವಾಗಿ ನಡೆಯುತ್ತಾ ಬಂದದ್ದು ಅಭಿನಂದನಾರ್ಹವಾಗಿದೆ. ಪ್ರಸ್ತುತ ವರ್ಷ ದಿನಾಂಕ : 03-07-2023ರಂದು ಗುರು ಪೂರ್ಣಿಮೆಯ ಪುಣ್ಯ ದಿನದಂದು ಹೊಸದಿಗಂತ ದಿನಪತ್ರಿಕೆಯ ಸ್ಥಾನೀಯ ಸಂಪಾದಕರಾದ ಪ್ರಕಾಶ್ ಇಳ0ತಿಲ ಗುರುವಂದನೆ ಮಾಡುತ್ತಾ “ಗುರು ಪೂರ್ಣಿಮೆಯ ಪುಣ್ಯ ದಿನದಂದು ವಿವಿಧ ಕ್ಷೇತ್ರದಲ್ಲಿ ಎಲೆ ಮರೆಯ ಕಾಯಿಯಂತೆ ಸೇವೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವ ಸಮರ್ಪಣೆ ಮಾಡುವ ಸಂಸ್ಕಾರ ಭಾರತೀಯ ಕೆಲಸ ಶ್ಲಾಘನೀಯ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿರಂತರ ಸೇವೆ ಗೈಯುತ್ತಿರುವವರನ್ನು ಗುರುತಿಸಿ ಗುರು ಪೂರ್ಣಿಮೆ ಪುಣ್ಯ ದಿನದಂದು ಗೌರವಿಸುವುದು ಔಚಿತ್ಯ ಪೂರ್ಣವಾದುದು” ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದು,…

Read More

ಒಂದು ಸಂಗೀತ ಕಾರ್ಯಕ್ರಮ ಅತಿಯಾದ ಭಾವನಾತ್ಮಕ ಅಂಶಗಳನ್ನು ಒಳಗೊಂಡಿದ್ದರೆ ಕೇಳುವವರಿಗೆ ಒಂದು ಮಟ್ಟದ ರಂಜನೆಯನ್ನು ಕೊಟ್ಟೀತು. ಆದರೆ ಅದರಿಂದ ಮೆದುಳಿಗೆ ಯಾವುದೇ ಆಹಾರ ದಕ್ಕಲಾರದು. ಕೆಲವು ಬಾರಿ ಅತಿಯಾದ ಬೌದ್ಧಿಕ ವ್ಯಾಪಾರವಿದ್ದರೆ ಶೋತೃ ವರ್ಗ ರಂಜನೆಗೆ ಒಳಗಾಗುವ ಬದಲು ಕೇಳಿ ದಣಿಯುತ್ತದೆ. ಬುದ್ಧಿ ಮತ್ತು ಭಾವ ಎರಡೂ ನೆಲೆಗಳಿಗೂ ಕೂಡ ಸರಿಯಾದ ಆಹಾರವಿದ್ದರೆ ಕೇಳುಗನು ಆನಂದ ಪಡುವಂತೆ ಆಗುತ್ತದೆ. ದಿನಾಂಕ 17 ಜೂನ್ 2023ರಂದು ಪರ್ಕಳದ ಡಾ. ಕೃಷ್ಣಮೂರ್ತಿ ಭಟ್ ಅವರ ಮನೆಯಲ್ಲಿ ನಡೆದ ರಾಗಧನ ಗೃಹ ಸಂಗೀತ ಮಾಲಿಕೆಯ ಸಂಗೀತ ಕಚೇರಿಯಲ್ಲಿ ಇಂಥದೊಂದು ಸೊಗಸಾದ ಕಾರ್ಯಕ್ರಮವನ್ನು ಸವಿಯುವ ಅವಕಾಶ ಕೇಳುಗರಿಗೆ ಒದಗಿತು. ಶ್ರೀಮತಿ ಕಾಂಚನ ಶ್ರೀರಂಜಿನಿ ಹಾಗೂ ಶ್ರೀಮತಿ ಕಾಂಚನ ಶ್ರುತಿರಂಜನಿ ಇವರ ದ್ವಂದ್ವ ಕರ್ನಾಟಕ ಸಂಗೀತ ಕಾರ್ಯಕ್ರಮ ಒಂದು ಸೊಗಸಾದ ಅನುಭವವನ್ನು ಕೊಟ್ಟಿತು. ಕಳೆದ ಶತಮಾನದ ಪ್ರಾರಂಭದಿಂದಲೂ ಕಾಂಚನ ಎನ್ನುವುದು ಕರ್ನಾಟಕದ ತಿರುವಯ್ಯಾರು ಎಂದೇ ಪ್ರಸಿದ್ಧ. ಖ್ಯಾತ ಪಿಟೀಲು ವಾದಕ ಕಾಂಚನ ಸುಬ್ಬರತ್ನಂ ಅವರ ಮಕ್ಕಳಾದ ಇವರು ಅವಧಾನ…

Read More

ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 24-06-2023 ರ ಶನಿವಾರದಂದು ಬೆಂಗಳೂರಿನ ಕುಮಾರಪಾರ್ಕ್ ಪೂರ್ವದಲ್ಲಿರುವ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಿತು. ಡಾ| ಪಿ. ಎಸ್. ಶಂಕರ್, ಕೌಶಿಕ್ ಕೂಡುರಸ್ತೆ, ಪ್ರೊ.ಬಿ.ಎನ್.ಶ್ರೀರಾಮ, ಜಿ. ಎಚ್. ಕೃಷ್ಣಮೂರ್ತಿ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಲವು ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಭಂಗ ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದಾಗ, ಮಾತನಾಡಿದ ಸಿದ್ದರಾಮಯ್ಯನವರು “ಸಾಹಿತಿಗಳ ಬಗ್ಗೆ ತಮಗೆ ಅಪಾರ ಗೌರವ ಇದೆ. ಸಮಾಜವನ್ನು ತಿದ್ದುವ ನಿಮ್ಮ ಗೌರವಕ್ಕೆ ಧಕ್ಕೆ ಬರಲು ಬಿಡುವುದಿಲ್ಲ” ಎಂದರು. ಸಂಘದ ಅಧ್ಯಕ್ಷ ನಡೆಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ “ರಾಜ್ಯದಲ್ಲಿ ಮೂರು ವರ್ಷದಿಂದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡಿಲ್ಲ. ಬಜೆಟ್‌ನಲ್ಲಿ ಪುಸ್ತಕ ಖರೀದಿಗೆ ರೂ25 ಕೋಟಿ ಹಾಗೂ ಜ್ಞಾನಭಾಗ್ಯ ಯೋಜನೆಗೆ ರೂ50 ಕೋಟಿ ಮೀಸಲಿಡಬೇಕು ಎಂದರು.” ನಾಡೋಜ ಹಂ.ಪ.ನಾಗರಾಜಯ್ಯ ಸಾಹಿತಿಗಳಿಗೆ…

Read More

ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆಯು ದಿನಾಂಕ 01-07-2023 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿ, ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ “ಕನ್ನಡ ಹೋರಾಟಕ್ಕೆ ಶಕ್ತಿ ತುಂಬುವಲ್ಲಿ ಕಾಸರಗೋಡಿನ ಪತ್ರಿಕೆಗಳ ಕೊಡುಗೆ ಗಣನೀಯವಾದದ್ದು. ಕನ್ನಡದ ಅಸ್ತಿತ್ವವನ್ನು ಭದ್ರಪಡಿಸಲು ಕನ್ನಡ ಪತ್ರಕರ್ತರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಭಾಷಾವಾರು ಪ್ರಾಂತ್ಯ ರಚನೆಯಾದಾಗ ಅಚ್ಚಗನ್ನಡ ಪ್ರದೇಶ ಕಾಸರಗೋಡು ಅನ್ಯಾಯವಾಗಿ ಕೇರಳಕ್ಕೆ ಸೇರಿಸಲ್ಪಟ್ಟಿತು. ಅಂದಿನಿಂದಲೇ ಇಲ್ಲಿ ಕನ್ನಡಿಗರ ಹೋರಾಟ ಪ್ರಾರಂಭಿಸಲಾಯಿತು. ಕನ್ನಡ ಪತ್ರಕರ್ತರು ಮಾತ್ರವಲ್ಲದೆ ಪತ್ರಿಕೆಗಳ ಮಾಲಕರೂ ಆ ಹೋರಾಟದಲ್ಲಿ ಸಕ್ರಿಯರಾಗುವ ಮೂಲಕ ವರದಿ, ಲೇಖನಗಳಿಂದ ಜಾಗೃತಿ ಮೂಡಿಸಿ ಸರ್ವ ಕನ್ನಡಿಗರನ್ನು ಬಡೆದೆಬ್ಬಿಸಿದರು. ಕಾಸರಗೋಡು ಸಮಾಚಾರ, ನಾಡ ಪ್ರೇಮಿ ಮತ್ತು ಕಾಸರಗೋಡು ಕನ್ನಡ ಕಹಳೆ ಸಹಿತ ಹಲವು ಪತ್ರಿಕೆಗಳು ಕನ್ನಡಿಗರ ಹೋರಾಟಕ್ಕೆ ಸ್ಫೂರ್ತಿ ನೀಡಿದವು. ಈಗಲೂ ಪತ್ರಿಕೆಗಳು ಕನ್ನಡದ ಅವಗಣನೆಯ ವಿರುದ್ಧ ಧ್ವನಿಯೆತ್ತುತ್ತಲೇ ಇವೆ” ಎಂದು ಹೇಳಿದರು. ಲೇಖಕಿ, ಕಲಾವಿದೆ, ವಿದುಷಿ ಅನುಪಮಾ ರಾಘವೇಂದ್ರ…

Read More

ಮಂಗಳೂರು: ಸಾಯಿಶಕ್ತಿ ಯಕ್ಷಕಲಾ ಬಳಗದಿಂದ ನಗರದ ಪುರಭವನದಲ್ಲಿ ದಿನಾಂಕ : 03-07-2023ರಂದು ಸೀನ್ ಸೀನರಿಯ ಯಕ್ಷನಾಟಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಮಾತನಾಡುತ್ತಾ “ಯಾವುದೇ ಕಲೆಯ ಮೂಲ ಆಶಯ ಮತ್ತು ಮೌಲ್ಯಕ್ಕೆ ಚ್ಯುತಿ ಬಾರದಂತೆ ವಿಭಿನ್ನ ರೀತಿಯ ಪ್ರಯೋಗಗಳು ಸ್ವಾಗತಾರ್ಹವಾಗಿರುವುದರೊಂದಿಗೆ, ಪ್ರಸ್ತುತ ಕಾಲಘಟಕ್ಕೆ ಅದರ ಅನಿವಾರ್ಯತೆಯೂ ಇದೆ. ಯಕ್ಷಗಾನದಲ್ಲೂ ಅನೇಕ ಪ್ರಯೋಗಗಳು ನಡೆಯುತ್ತಿದ್ದು, ಈ ಮೂಲಕ ಜಗತ್ತಿಗೆ ಕಲೆಯ ಹಿರಿಮೆಯನ್ನು ತೋರಿಸಿಕೊಟ್ಟಿದೆ. ಸೀನ್ ಸೀನರಿಯೂ ಕೂಡಾ ಅಂತಹ ಪ್ರಯೋಗಗಳಲ್ಲಿ ಒಂದಾಗಿದ್ದು ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಕಟೀಲು ಯಕ್ಷಗಾನ ಮೇಳಗಳ ಯಜಮಾನ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಸಾಲಿಗ್ರಾಮ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆ, ವಿದ್ವಾಂಸ ಡಾ.ಎಂ. ಪ್ರಭಾಕರ ಜೋಷಿ, ಸಾಯಿಶಕ್ತಿ ಕಲಾ ಬಳಗ ಮುಂಬಯಿ ಸಂಚಾಲಕ ಬಾಲಕೃಷ್ಣ ಶೆಟ್ಟಿ ಅಜೆಕಾರು, ಶಿರಡಿ ಸಾಯಿ ಮಂದಿರದ ಮುಖ್ಯಸ್ಥ ವಿಶ್ವಾಸ್ ಕುಮಾರ್ ದಾಸ್, ಯಕ್ಷನಾಟಕದ ನಿರ್ಮಾಪಕಿ ಲಾವಣ್ಯ ವಿಶ್ವಾಸ ಕುಮಾರ್,…

Read More