Subscribe to Updates
Get the latest creative news from FooBar about art, design and business.
Author: roovari
ಕಯ್ಯಾರು : ಮಹಿಳಾ ಯಕ್ಷಕೂಟ (ರಿ.) ಪೊನ್ನೆತ್ತೋಡು ಕಯ್ಯಾರು ಹಾಗೂ ಶ್ರೀ ಭಗವತೀ ಕೃಪಾ ವೀರಾಂಜನೇಯ ವ್ಯಾಯಾಮ ಶಾಲೆ (ರಿ.) ಭಗವತೀ ನಗರ ಅಡ್ಕ ಇವರ ಸಹಯೋಗದೊಂದಿಗೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ನಾಲ್ಕನೆಯ ವರ್ಷದ ತಾಳಮದ್ದಳೆ ಸಪ್ತಾಹವು ದಿನಾಂಕ 15-04-2024ರಿಂದ 21-04-204ರವರೆಗೆ ಅಡ್ಕ ಶ್ರೀ ಭಗವತೀ ಕೃಪಾ ವೀರಾಂಜನೇಯ ವ್ಯಾಯಾಮ ಶಾಲಾ ಸಭಾಂಗಣದಲ್ಲಿ ಜರಗಿತು. ಪ್ರತೀ ದಿನ ಮಧ್ಯಾಹ್ನ 3ರಿಂದ 4ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು 4ರಿಂದ 4.45ರವರೆಗೆ ಸಭಾ ಕಾರ್ಯಕ್ರಮ ಹಾಗೂ 5ರಿಂದ 7.30ರವರೆಗೆ ವಿವಿಧ ಮಹಿಳಾ ತಂಡಗಳಿಂದ ತಾಳಮದ್ದಳೆ ಕಾರ್ಯಕ್ರಮ ನೆರವೇರಿತು. ದಿನಾಂಕ 15-04-2024ನೇ ಸೋಮವಾರ ಸಪ್ತಾಹದ ಉದ್ಘಾಟನೆಯನ್ನು ಶ್ರೀ ಗೋಪಾಲ ಕೃಷ್ಣ ಮಾಸ್ಟರ್ ಪಂಜತ್ತೊಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶ್ರೀ ಚಂದ್ರಹಾಸ ಭಗವತೀ ನಗರ ವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ಶಂಕರ ಕಾಮತ್ ಚೇವಾರು ಪಾಲ್ಗೊಂಡರು. ಬಳಿಕ ಮಹಿಳಾ ಯಕ್ಷಕೂಟ ಪೊನ್ನೆತ್ತೋಡು ಕಯ್ಯಾರು ಇವರಿಂದ ‘ದೇವಯಾನಿ ಕಲ್ಯಾಣ’ ಎಂಬ ತಾಳಮದ್ದಳೆ ಪ್ರಸ್ತುತಿಗೊಂಡಿತು. ದಿನಾಂಕ 16-04-2024ನೇ ಮಂಗಳವಾರ ಸಭಾ…
ಕಾಸರಗೋಡು : ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಕಾಸರಗೋಡು ಮಾನ್ಯದ ಶ್ರೀ ಅಯ್ಯಪ್ಪ ಮಂದಿರದಲ್ಲಿ ನಡೆಸಿದ ಗ್ರಾಮ ಪರ್ಯಟನೆಯ ಎಂಟನೇ ಕಾರ್ಯಕ್ರಮವು ದಿನಾಂಕ 29-04-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ಮಾನ್ಯ ಸುಂದರಶೆಟ್ಟಿ “ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಊರೂರುಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಈ ಮಣ್ಣಿನ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯ ಶ್ಲಾಘನೀಯ” ಎಂದು ಹೇಳಿದರು. ಮಾನ್ಯ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಎಂ., ಪದಾಧಿಕಾರಿ ರಾಮ ಮಾನ್ಯ, ರಂಗಸಿರಿಯ ಸಂಗೀತ ಶಿಕ್ಷಕಿ ಸಂಗೀತ ವಿದುಷಿ ಗೀತಾ ಸಾರಡ್ಕ ಶುಭ ಹಾರೈಸಿದರು. ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ಕೆದಿಲಾಯ ಪುಂಡೂರು ಅಧ್ಯಕ್ಷತೆ ವಹಿಸಿದ್ದರು. ಅನ್ವಿತ ಟಿ. ಹಾಗೂ ಸುಮೇಧ ಕೆ. ಪ್ರಾರ್ಥಿಸಿ, ಅಭಿಜ್ಞಾ ಭಟ್ ಬೊಳುಂಬು ಸ್ವಾಗತಿಸಿದರು. ಬಳಿಕ ಸಂಗೀತ ವಿದುಷಿ ಗೀತಾ ಸಾರಡ್ಕ ಅವರ ನಿರ್ದೇಶನದಲ್ಲಿ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.…
ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಆಯೋಜಿಸಿದ ಸಾಹಿತ್ಯ ಪರಿಷತ್ ನಡಿಗೆ, ಹಿರಿಯ ಸಾಧಕರ ಎಡೆಗೆ’ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಕಲಾವಿದ, ಪ್ರಸಂಗಕರ್ತ, ಭಾಗವತ, ತಾಳಮದ್ದಲೆ ಅರ್ಥಧಾರಿ ಮಧೂರು ವೆಂಕಟಕೃಷ್ಣ ಅವರನ್ನು ಮಧೂರಿನ ಅವರ ನಿವಾಸದಲ್ಲಿ ದಿನಾಂಕ 30-04=2024ರಂದು ಅಭಿನಂದಿಸಲಾಯಿತು. ಅಭಿನಂದನಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟಿತ್ತೋಡಿ ಅಧ್ಯಕ್ಷತೆಯಲ್ಲಿ ವೆಂಕಟಕೃಷ್ಣ ದಂಪತಿಯನ್ನು ಅಭಿನಂದಿಸಲಾಯಿತು . ಅಭಿನಂದನಾ ಭಾಷಣ ಮಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಯೋಗೀಶ ರಾವ್ ಚಿಗುರುಪಾದೆ ಮಾತನಾಡಿ “ಹವ್ಯಾಸಿ ಯಕ್ಷಗಾನ ಕಲಾವಿದರಾಗಿ, ಪ್ರಸಂಗಕರ್ತರಾಗಿ, ತಾಳಮದ್ದಲೆ ಅರ್ಥಧಾರಿಯಾಗಿ, ಕನ್ನಡ ತುಳು ಭಕ್ತಿ ಗೀತೆಗಳ ಗೀತ ರಚನಕಾರರಾಗಿ, ತಾಳಮದ್ದಲೆ ಸಂಘಟಕನಾಗಿ, ಮಧೂರು ವೆಂಕಟಕೃಷ್ಣರು ನೀಡಿದ ಕೊಡುಗೆ ಅನನ್ಯವಾದುದು.” ಎಂದು ಹೇಳಿದರು. ನಿವೃತ್ತ ಪ್ರಿನ್ಸಿಪಾಲ್ ಡಾ.ಕೆ. ಕಮಲಾಕ್ಷ ಮಾತನಾಡಿ “ಯಕ್ಷಗಾನದ ಪ್ರತಿಯೊಂದು ವಿಷಯದ ಪರಿಜ್ಞಾನ ವೆಂಕಟಕೃಷ್ಣರಿಗಿದೆ. ಭಾಗವತರಾಗಿ ಅರ್ಥಧಾರಿಗಳಲ್ಲಿ ಸ್ಫೂರ್ತಿ ತುಂಬಬಲ್ಲ ಇವರು ಅರ್ಥಧಾರಿಯಾಗಿ ಸಹ…
ಶಿರ್ವ: ಸಂತ ಮೇರಿ ಕಾಲೇಜು ಶಿರ್ವ ಇಲ್ಲಿನ ಗ್ರಂಥಾಲಯ ವಿಭಾಗ ಮತ್ತು IQAC ಇವರ ಸಹಯೋಗದೊಂದಿಗೆ “ವಿಶ್ವ ಪುಸ್ತಕ ದಿನಾಚರಣೆ”ಯನ್ನು ದಿನಾಂಕ 23-04-2024ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾರ್ವಜನಿಕ ಗ್ರಂಥಾಲಯ ಕಾಪು ಪುರಸಭೆ ಇದರ ಗ್ರಂಥಾಲಯ ಮೇಲ್ವಿಚಾರಕಿಯಾದ ಶ್ರೀಮತಿ ಪೂರ್ಣಿಮಾ ಮಾತನಾಡಿ “ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಇಂದು ಯಾರು ಕದಿಯಲು ಸಾಧ್ಯವಿಲ್ಲದ ಸಂಪತ್ತು ಇದ್ದರೆ ಅದು ಜ್ಞಾನ ಮಾತ್ರ. ‘ಮೈಯಲ್ಲಿ ಹರಿದ ಬಟ್ಟೆ ಇದ್ದರೂ ಚಿಂತೆಯಿಲ್ಲ, ಆದರೆ ಕೈಯಲ್ಲಿ ಒಂದು ಪುಸ್ತಕವಿರಲಿ’ ಎಂಬ ಅಂಬೇಡ್ಕರ್ ಅವರ ಇದೊಂದೇ ಮಾತು ಪುಸ್ತಕದ ಮಹತ್ವವನ್ನು ತಿಳಿಸಿಕೊಡುತ್ತದೆ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಗ್ರಂಥಾಲಯ ಬಳಕೆದಾರರಿಗೆ ಬಹುಮಾನವನ್ನು ನೀಡಲಾಯಿತು. ತೃತೀಯ ಬಿ.ಎ ವಿದ್ಯಾರ್ಥಿನಿಯಾದ ಕುಮಾರಿ ಕೌಶಲ್ಯ, ತೃತೀಯ ಬಿ. ಸಿ. ಎ. ವಿದ್ಯಾರ್ಥಿನಿಯಾದ ಕುಮಾರಿ ಹೇಮಶ್ರೀ ಮತ್ತು ತೃತೀಯ ಬಿ. ಕಾಂ. ವಿದ್ಯಾರ್ಥಿನಿಯಾದ ಕುಮಾರಿ ಅಫ್ಸಾನ ಬಹುಮಾನವನ್ನು ಪಡೆದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೊನಿಸ್…
ಮಂಗಳೂರು : ಮಂಗಳೂರು ಪ್ರೆಸ್ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ‘ಮಂಗಳೂರು ಪ್ರೆಸ್ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮವು ಪತ್ರಿಕಾ ಭವನದಲ್ಲಿ ದಿನಾಂಕ 30-04-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ “ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ. ಈಗಾಗಲೇ 4 ಸಾವಿರಕ್ಕೂ ಅಧಿಕ ಮಕ್ಕಳಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ. ಈಗಾಗಲೇ ಆಳ್ವಾಸ್ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ ಯಶಸ್ವಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟಿನ ಉದ್ದೇಶವಾಗಿದೆ. ಹಿರಿಯ ಕಲಾವಿದರ…
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡವು ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿನಿಧಿಯ ಅಂಗವಾಗಿ ಕನ್ನಡದ ಯುವ ಲೇಖಕರಿಗಾಗಿ ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಸೂಚನೆಗಳು : * ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18 ರಿಂದ 35 ವರ್ಷ * ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20-05-2024 * ಕಡ್ಡಾಯವಾಗಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಕಳಿಸಬೇಕು. * ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು. * ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ. * ಈ ವರೆಗೆ ಎಲ್ಲಿಯೂ ಪ್ರಕಟವಾಗಿರಬಾರದು. * ನುಡಿ ತಂತ್ರಾಂಶದೊಂದಿಗೆ ವರ್ಡ್ ಫೈಲ್ ನಲ್ಲಿ ಟೈಪ್ ಮಾಡಿ ಮೇಲ್ ಮೂಲಕ ಕಳುಹಿಸಬೇಕು. * ನಿರ್ಣಾಯಕರ ನಿರ್ಣಯವೇ ಅಂತಿಮ.. * ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 28 ರಂದು ಡಾ. ಚನ್ನವೀರ ಕಣವಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. *…
ಮಂಗಳೂರು : ರಂಗ ಸ್ವರೂಪ ಮಂಗಳೂರು ಸಂಘಟನೆ ಆಯೋಜಸಿದ ‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 01-05-2024 ರಂದು ಮರಕಡದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕರಾದ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಪೊರೇಟರ್ ಶರತ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್ ಉಪಸ್ಥಿತರಿದ್ದರು. ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿ, ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ, ಕಲಾವಿದ ಝುಬೇರ್ ಕುಡ್ಲ ವಂದಿಸಿದರು.
ಮೂಡಬಿದಿರೆ : ‘ಕ್ರಿಯೇಟಿವ್ ಪುಸ್ತಕ ಮನೆ’ಯ ನೂತನ ಶಾಖೆಯು ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ದಿನಾಂಕ 05-05-2024ರಂದು ಬೆಳಿಗ್ಗೆ ಘಂಟೆ 10.00ಕ್ಕೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹಾಗೂ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು ಕಲ್ಲಬೆಟ್ಟು ಇದರ , ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ ಪೋಷಕ ಯೋಜನೆ’, ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಇಂತಹ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದೆ. ಇದೀಗ ಪುಸ್ತಕ ಮನೆಯ ಎರಡನೇ ಶಾಖೆಯು ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳುತ್ತಿದ್ದು, ಪುಸ್ತಕಗಳು ಹಾಗೂ ಎಲ್ಲಾ ರೀತಿಯ ಉಡುಗೊರೆಗಳ ಮೇಲೆ ವಿಶೇಷ ರಿಯಾಯಿತಿ ಇದ್ದು, ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಮಂಗಳೂರು : ವೇಷ ಕಳಚುತ್ತಿರುವಾಗಲೇ ಹೃದಯಾಘಾತವಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಖ್ಯಾತ ಕಲಾವಿದ ಗಂಗಾಧರ ಪುತ್ತೂರು (60) ಅವರು ಇಹಲೋಕ ತ್ಯಜಿಸಿದ್ದಾರೆ. ದಿನಾಂಕ 01-05-2024ರ ಬುಧವಾರ ರಾತ್ರಿ ಕೋಟದ ಗಾಂಧಿ ಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಶ್ರೀಯುತರು 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ್ದರು. ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.
ಧಾರವಾಡ : ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧೆಯಲ್ಲಿ ಆಯ್ಕೆಯಾದ ಮೂರು ಅತ್ಯುತ್ತಮ ಕಥೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಮತ್ತು ವಿಜೇತರಿಗೆ ಪ್ರಶಸ್ತಿ ಪತ್ರ (ಹಾರ್ಡ್ ಕಾಪಿ) ಜೊತೆಗೆ ಪುಸ್ತಕಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯ ನಿಯಮಗಳು * ಹೈಸ್ಕೂಲ್, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಅಥವಾ ಓದು ಮುಗಿಸಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. * ಪಿ. ಎಚ್. ಡಿ. ಮಾಡುತ್ತಿರುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. * ಸ್ಪರ್ಧಿಗಳ ವಯಸ್ಸು 28 ಮೀರುವಂತಿಲ್ಲ. * ಒಬ್ಬ ಸ್ಪರ್ಧಿ ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. * ಸ್ವತಂತ್ರ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುತಿದ್ದು ಅನುವಾದ, ಅನುಸೃಷ್ಟಿ ಮತ್ತು ರೂಪಾಂತರ ಮಾಡಿದ ಕಥೆಗಳಿಗೆ ಅವಕಾಶವಿಲ್ಲ. * ಕಥೆಯು 3000 ಪದಗಳ ಮಿತಿಯನ್ನು ಮೀರುವಂತಿಲ್ಲ. * ಕಥೆಯನ್ನು ಡಾಕ್ಸ್…