Author: roovari

ಯಕ್ಷಗಾನವು ನಮ್ಮ ನಾಡಿನ ಹೆಮ್ಮೆಯ ಸಂಕೇತವಾದ ಕಲೆ. ಪಂಡಿತರಿಂದ ತೊಡಗಿ ಪಾಮರರವರೆಗೆ ಪ್ರತಿಯೊಬ್ಬರನ್ನೂ ಆಕರ್ಷಿಸಿ, ಅವರೆಲ್ಲರ ಮನಸೂರೆಗೊಂಡು ರಂಜನೆಯನ್ನು ನೀಡಿದ ಕಲಾಪ್ರಕಾರವು ಯಕ್ಷಗಾನದಂತೆ ಬೇರೊಂದಿಲ್ಲ. ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಪ್ರತಿ ಮನೆಗಳಲ್ಲೂ ಕಲಾವಿದರೋ, ಪ್ರದರ್ಶನಗಳನ್ನು ನೋಡಿ ಆಸ್ವಾದಿಸುವ ಕಲಾಭಿಮಾನಿಗಳೋ, ಕಲಾಪೋಷಕರೋ ಇದ್ದೇ ಇರುತ್ತಾರೆ. ಜನಮಾನಸದಲ್ಲಿ ಯಕ್ಷಗಾನ ಎಂಬ ಅನುಪಮವಾದ ಕಲೆಯು ಈ ತೆರನಾಗಿ, ಭದ್ರವಾಗಿ ನೆಲೆಯೂರಿ ವಿಜೃಂಭಿಸುತ್ತಿದೆ ಎಂಬುದು ನಮಗೆಲ್ಲರಿಗೂ ಸಂತೋಷದ ವಿಚಾರ. ಇಂತಹ ಶ್ರೀಮಂತ ಕಲೆಯಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಿರುವ ಕಲಾವಿದ ನವೀನ ಎನ್ ಜೆ. 19.03.1996ರಂದು ಜಡೆ ನಾಗರಾಜ ರಾವ್ ಹಾಗೂ ವೀಣಾ ಅವರ ಮಗನಾಗಿ ಜನನ. M.Com ಇವರ ವಿದ್ಯಾಭ್ಯಾಸ. ಯಕ್ಷಗಾನ ಕ್ಷೇತ್ರಕ್ಕೆ ಬರಲು ಮೂಲ ಪ್ರೇರಣೆ ಇವರ ತಾಯಿ. ಶ್ರೀ ಗಣಪತಿ ಹೆಗಡೆ ಪುರಪ್ಪೆಮನೆ ಹಾಗೂ ಐನಬೈಲು ಪರಮೇಶ್ವರ ಹೆಗಡೆ ಇವರ ಯಕ್ಷಗಾನ ಗುರುಗಳು. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ :- ಪೂರ್ಣ…

Read More

ವೇದಿಕೆ ಏರಿದರೆ ಈಕೆ ಜಿಂಕೆಯಂತೆ ಚುರುಕು. ನವಭಾವಗಳ ನವರಸಗಳ ಪ್ರದರ್ಶನಕ್ಕೆ ಪ್ರೇಕ್ಷಕರ ಕರತಾಡನವೇ ಧ್ವನಿಯಾಗುವುದು. ವೃತ್ತಿಯಲ್ಲಿ ವೈದ್ಯೆಯಾದರೂ ಜನ್ಮತಃ ಕಲಾವಿದೆ ಅಂದರೂ ತಪ್ಪಲ್ಲ. ಡಾ. ರಚನಾ ಸೈಪಂಗಲ್ಲು ಹುಟ್ಟಿ ಬೆಳೆದದ್ದು ಶಾಂತಿಯಡಿ ಎಂಬ ಹಳ್ಳಿ ಮನೆಯಲ್ಲಾದರೂ ಬಾಲ್ಯದಲ್ಲೇ ನೃತ್ಯದಲ್ಲಿ ಒಲವು ಕಂಡವಳು. ರಚನಾಳ ಆಸಕ್ತಿಗೆ ಅಪರಿಮಿತ ಪ್ರೋತ್ಸಾಹದೊಂದಿಗೆ ವೇದಿಕೆ ಕಲ್ಪಿಸಿ ಕೊಟ್ಟವರು ಅವಳ ಹೆತ್ತವರಾದ ಕಾಸರಗೋಡಿನ ಬದಿಯಡ್ಕದ ಪ್ರಸಿದ್ಧ ವ್ಯಾಪಾರಿ ಶ್ರೀನಿವಾಸ್ ರಾವ್ ಹಾಗೂ ನಿವೃತ್ತ ಅಧ್ಯಾಪಿಕೆ ಶ್ರೀಮತಿ ಪುಷ್ಪ ರಾಜೀವಿಯವರು. ಸಹೋದರ ರೋಷನ್ ಕಿರಣ್ ಸೇರಿದಂತೆ ಕುಟುಂಬದ ಎಲ್ಲರ ಪ್ರೋತ್ಸಾಹ ಈ ಕಲಾವಿದೆಗೆ ಉತ್ತಮ ವೇದಿಕೆಗಳನ್ನು ಒದಗಿಸಿ ಕೊಟ್ಟದ್ದು ಸುಳ್ಳಲ್ಲ. ಡಾ. ರಚನಾ ಸೈಪಂಗಲ್ಲು ತನ್ನ ಆರರ ವಯಸ್ಸಿನಲ್ಲೇ ಶಾಲಾ ಕಲೋತ್ಸವಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಗಿಟ್ಟಿಸಿಕೊಂಡವಳು. ಮುಂದೆ ನೃತ್ಯ ಶಿಕ್ಷಕ ಗೋವಿಂದ ಪೈ ಪುರಸ್ಕೃತ ನಾಟ್ಯ ನಿಲಯಂ ಶ್ರೀ ಬಾಲಕೃಷ್ಣ ಮಂಜೇಶ್ವರ ಇವರಲ್ಲಿ ನೃತ್ಯಾಭ್ಯಾಸ ಆರಂಭಿಸಿ ಅವರ ಪ್ರೋತ್ಸಾಹದಿಂದಲೇ ಹಲವಾರು ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾದವಳು.…

Read More

ಜನಮನಕೆ ಹತ್ತಿರವಾಗುವ ವೈದ್ಯ, ಸಾಹಿತಿ, ಸಾಧಕ – ಡಾ. ಮುರಲೀಮೋಹನ್ ಚೂಂತಾರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‘ಚೂಂತಾರು’ ಇಲ್ಲಿ ಜನಿಸಿದ ಮುರಳಿ ಮೋಹನ ಚೂಂತಾರು ಇವರು ಶ್ರೀಮತಿ ಸರೋಜಿನಿ ಭಟ್ ಮತ್ತು ಲಕ್ಷ್ಮೀನಾರಾಯಣ ಭಟ್ ದಂಪತಿಗಳ ಸುಪುತ್ರ. ಸರಕಾರಿ ಮೆರಿಟ್ ಕೋಟಾದಲ್ಲಿ ಸರಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು ಇಲ್ಲಿ ಉಚಿತ ಅರ್ಹತೆ ಪಡೆದು ಬಿ.ಡಿ.ಯಸ್. ಪದವಿ, ಯಮ್.ಡಿ.ಯಸ್. ಸೀಟನ್ನು ಕೂಡ ಸರಕಾರಿ ಕೋಟಾದಲ್ಲಿಯೇ ಪಡೆದ ಇವರು ದಂತ ವೈದ್ಯಕೀಯ ಶಾಸ್ತ್ರದಲ್ಲಿ ಡಿ.ಎನ್.ಬಿ. ಪದವಿಯನ್ನು ಪಡೆದಿದ್ದಾರೆ. ಹೊಸಂಗಡಿ – ಮಂಜೇಶ್ವರ ಹೃದಯಭಾಗದಲ್ಲಿ ‘ಸುರಕ್ಷಾ ದಂತ ಚಿಕಿತ್ಸಾಲಯ’ವನ್ನು ತೆರೆದು ತಮ್ಮ ಧರ್ಮಪತ್ನಿ ಡಾ. ರಾಜಶ್ರೀ ಮೋಹನ್ ಇವರ ಜೊತೆಗೂಡಿ ದಂತ ಸಂಬಂಧಿ ತೊಂದರೆಗಳಿಗೆ ಪರಿಹಾರ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ. ಚೂಂತಾರು ತಮ್ಮ ವಿಷಯ ತಜ್ಞತೆ ಮತ್ತು ಅನುಭವಗಳ ಮೂಲಕ ಮೌಲಿಕ ಹಾಗೂ ಜನಸಾಮಾನ್ಯರಿಗೆ ಮುಟ್ಟುವಂತೆ ಕನ್ನಡದಲ್ಲಿ ವೈದ್ಯಕೀಯ ಲೇಖನಗಳನ್ನು ಬರೆಯುವುದರ ಜೊತೆಗೆ, ವಿವಿಧ ಮಾಧ್ಯಮಗಳ ಮೂಲಕ ಎಲ್ಲರನ್ನೂ ಅತಿ…

Read More

ಕನ್ನಡ ಮತ್ತು ತುಳು ಚಿತ್ರರಂಗದ ಹಿನ್ನೆಲೆ ಗಾಯಕರು ಮತ್ತು ಸಂಗೀತ ನಿರ್ದೇಶಕರು. ರಾಘವ ಆಚಾರ್ಯ ಹಾಗೂ ಮೀರಾ ಇವರ ಪುತ್ರರಾಗಿ ಜನಿಸಿದ ಡಾಕ್ಟರ್ ನಿತಿನ್ ಆಚಾರ್ಯ ಅವರು ತಮ್ಮ ದಂತ ವೈದ್ಯಕೀಯ ಪದವಿಯನ್ನು ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿ ಪಡೆದು 2009ನೇ ಇಸವಿಯಿಂದ ಕೆ.ಸಿ.ರೋಡಲ್ಲಿ ತಮ್ಮದೇ ಆದ ಮೀರಾ ಡೆಂಟಲ್ ಕ್ಲಿನಿಕ್ ಅನ್ನು ನಡೆಸುತ್ತಿದ್ದಾರೆ. ಬಾಲ್ಯದಿಂದಲೇ ಸಂಗೀತದ ಬಗ್ಗೆ ಅಪಾರ ಒಲವನ್ನು ಹೊಂದಿದ್ದ ಇವರು ತಮ್ಮ ಸಂಗೀತ ಶಿಕ್ಷಣವನ್ನು ಸಾಂಪ್ರದಾಯಿಕವಾಗಿ ಪಡೆದವರಲ್ಲ. ಸಂಗೀತದ ಬಗೆಗಿನ ಅಪಾರವಾದ ಆಸಕ್ತಿ ಗುರುವಿಲ್ಲದೆ ಕಲಿಕೆಯ ಕಡೆಗೆ ಸೆಳೆಯಿತು. ಎ.ಆರ್. ರಹಮಾನ್, ಚಿತ್ರ, ಎಸ್.ಪಿ.ಬಿ.ಯವರು ಇವರ ಮಾನಸ ಗುರುಗಳು ಎಂದರೆ ತಪ್ಪಾಗದು. ಆರಂಭದಲ್ಲಿ ಇವರ ಪ್ರತಿಭೆಗೆ ಇವರೇ ಕಲ್ಪಿಸಿಕೊಂಡ ವೇದಿಕೆ ‘band aid’ ಎನ್ನುವ ಫ್ಯೂಶನ್ ಬ್ಯಾಂಡ್ ನ ಮುಖಾಂತರ ಇಡೀ ಕರ್ನಾಟಕದಾದ್ಯಂತ ಬೇರೆ ಬೇರೆ ವೇದಿಕೆಗಳಲ್ಲಿ ಸಂಗೀತಪ್ರಿಯರ ಮನಗೆದ್ದ ಇವರಿಗೆ ಕನ್ನಡಿಗರ ಜನಮಾನಸವನ್ನು ತಲುಪಲು ಸಿಕ್ಕ ಅದ್ಭುತ ಅವಕಾಶ ಟಿವಿ9…

Read More

ಡಾ. ಲಕ್ಷ್ಮೀ ರೇಖಾ ಅರುಣ್ – ಚಿಕಿತ್ಸಕ ದೃಷ್ಟಿಯಿಂದ ನೋಡುತ್ತಿರುವ ದಂತವೈದ್ಯೆ ಹಾಗೂ ಭರತನಾಟ್ಯ ಕಲಾವಿದೆ ಲಕ್ಷ್ಮೀ ರೇಖಾ ಅವರು ಮೂಲತಃ ಬೆಂಗಳೂರಿನವರು. ಶ್ರೀ ಜನಾರ್ದನ ಅಯ್ಯಂಗಾರ್ ತಂದೆ, ಶ್ರೀಮತಿ ಅಮೃತ ನಳಿನಿ ತಾಯಿ. ಸಾಮಾನ್ಯ ಶಿಕ್ಷಣ ಹಾಗೂ ಕಲಾಸಕ್ತಿ ತಾಳಿದ್ದು ಚಿಕ್ಕಪ್ಪ ಎ.ಶ್ರೀಕಾಂತ್ ಹಾಗೂ ಚಿಕ್ಕಮ್ಮ ಕಾಂತಿಮತಿಯವರ ಮನೆಯಲ್ಲಿದ್ದು ಬೆಳೆದಾಗ. ಕಲಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ತುಡಿತವೊಂದು ಹುಟ್ಟಿತೆಂದರೆ ಅದೇ ಮುಂದೆ ನಾವು ಅತಿಯಾಗಿ ಪ್ರೀತಿಸುವ, ನಮಗೆ ಭಾವಸೌಖ್ಯವೊದಗಿಸುವ, ನಮ್ಮನ್ನು ಕಾಡುವ, ಕೆಣಕುವ, ಸವಾಲಾಗುವ, ಹಳತೊಂದನ್ನು ಹುಡುಕುವ, ಹೊಸತೊಂದನ್ನು ಸೃಜಿಸುವ ವಿದ್ಯಮಾನವಾಗಿ ನಿರಂತರವಾಗಿ ಅರಳುತ್ತಾ ಸಾಗುತ್ತದೆ. ಸುಖವೋ ದುಃಖವೋ, ಮೇಲೋ ಕೆಳಗೋ, ಹಿಂದೆಯೋ ಮುಂದೆಯೋ ಎಲ್ಲ ಅನುಭವಗಳನ್ನು ಎದುರಿಸಲು ನಮ್ಮನ್ನು ಪ್ರೇರೇಪಿಸುತ್ತದೆ. ಅಂಥ ತುಡಿತವೊಂದನ್ನು ಒಪ್ಪಿ ಅಪ್ಪಿ ಪ್ರೀತಿಸಿದವರಿಂದಲೇ ಕಲೆಯ ವಿಕಸನ ಸಾಧ್ಯವಾಗಿದೆ. ಜೀವನದ ಈ ರೀತಿಯ ಆಯಾಮವನ್ನು ಕಾಣಿಸುವ ಕಲಾ ಸಾಧಕರಲ್ಲಿ ಡಾ. ಲಕ್ಷ್ಮೀ ರೇಖಾ ಅರುಣ್ ಒಬ್ಬರು. ಶಾಲೆ ಕಾಲೇಜಿನ ವಿದ್ಯಾರ್ಥಿ ಜೀವನವು ದಂತ ವೈದ್ಯಕೀಯ ಪದವಿಯೆಡೆಗೆ ಕೊಂಡೊಯ್ದರೂ ಕಲೆಯ…

Read More

ಅಗಲ್ಪಾಡಿ: ಕಾಸರಗೋಡಿನ ಪ್ರಖ್ಯಾತ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗ ಚಿನ್ನಾರಿ ಕಾಸರಗೋಡು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಅಗಲ್ಪಾಡಿಯಲ್ಲಿ ‘ಕಾಸರಗೋಡು ಕನ್ನಡ ಹಬ್ಬ’ದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ದಿನಾಂಕ 30-06-2023 ರಂದು ಅಗಲ್ಪಾಡಿಯ ಶ್ರೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಅಗಲ್ಪಾಡಿಯ ಆಡಳಿತ ಮಂಡಳಿಯ ವಿಶ್ವಸ್ಥರಾದ ಶ್ರೀ ಎ.ಜಿ.ಶರ್ಮರು ದೀಪ ಬೆಳಗಿಸಿ ಕಾಸರಗೋಡು ಕನ್ನಡ ಹಬ್ಬದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕವಿ, ಸಾಹಿತಿ, ಜನಪ್ರಿಯ ವೈದ್ಯ ಡಾ. ರಮಾನಂದ ಬನಾರಿಯವರು “ಕಾಸರಗೋಡಿನಲ್ಲಿ ಕನ್ನಡ ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಹೊಸತನದ ಆಕರ್ಷಣೀಯ ಕಾರ್ಯಕ್ರಮಗಳು ಬೇಕು. ಹಳ್ಳಿ ಹಳ್ಳಿಗಳಲ್ಲಿ ಚಟುವಟಿಕೆಗಳು ವಿಸ್ತರಣೆಯಾಗಬೇಕು. ಕನ್ನಡದ ಪ್ರೀತಿ ಇರುವವರೆಲ್ಲ ಕೈಜೋಡಿಸಬೇಕು. ಹೆಚ್ಚು ಹೆಚ್ಚು ಜನರ ಒಳಗೊಳ್ಳುವಿಕೆಯಿಂದ ಈ ಕನ್ನಡದ ಬೇರುಗಳು ಬಲವಾಗುತ್ತವೆ. ಕಾಸರಗೋಡು ಚಿನ್ನಾ ಅವರು ಕನ್ನಡದ ಜೀವಂತಿಕೆಗೆ ನೀಡಿದ ಕೊಡುಗೆ ಅನುಕರಣೀಯ” ಎಂದು ನುಡಿದರು. ಶ್ರೀ ಕಾಸರಗೋಡು ಚಿನ್ನಾ ಹಾಗೂ…

Read More

ದಿವಂಗತರಾದ ಶ್ರೀ ರಾಮಚಂದ್ರ ಉಡುಪ ಮತ್ತು ಶ್ರೀಮತಿ ವಾಗ್ದೇವಿಯಮ್ಮ ಅವರ ಮಗಳಾಗಿ ಜನಿಸಿದ ರತೀದೇವಿಯವರು ಅದಮಾರಿನ ಪದವಿ ಪೂರ್ವ ವಿದ್ಯಾ ಸಂಸ್ಥೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಕೂಡಲೇ ವಿವಾಹವಾಯಿತು. ಇವರ ಪತಿ ದಿವಂಗತ ಶ್ರೀ ಲಕ್ಷ್ಮೀನಾರಾಯಣ ಭಟ್ಟರು ಮದುವೆಯಾದ ಎರಡೂವರೆ ವರ್ಷದೊಳಗೆ ನಿಧನರಾದರು. ಎರಡು ಪುಟ್ಟ ಗಂಡು ಮಕ್ಕಳ ತಾಯಿಯಾದ ರತೀದೇವಿಗೆ ಆಕಾಶವೇ ತಲೆ ಮೇಲೆ ಬಿದ್ದಂತಾಯಿತು. ಗಂಡನ ಮನೆಯಿಂದ ತಿರಸ್ಕೃತರಾದ ರತೀದೇವಿ ಎದೆಗುಂದಲಿಲ್ಲ. ಹೆತ್ತವರು, ಸೋದರ, ಸೋದರಿಯರು ನೀಡಿದ ಪ್ರೋತ್ಸಾಹದಿಂದ ಮತ್ತೆ ಶಿಕ್ಷಣವನ್ನು ಮುಂದುವರಿಸಿದರು. ವೈದ್ಯಕೀಯ ಶಿಕ್ಷಣದ ಕನಸುಗಳನ್ನು ಕಣ್ಣಲ್ಲಿ ತುಂಬಿಕೊಂಡು, ಗೆದ್ದೇ ಗೆಲ್ಲುತ್ತೇನೆಂಬ ಛಲವನ್ನು ಮನಸ್ಸಿನಲ್ಲಿ ಗಟ್ಟಿ ಮಾಡಿಕೊಂಡು ಪಿ.ಯು.ಸಿ. ಪರೀಕ್ಷೆ ತೇರ್ಗಡೆ ಹೊಂದಿದ ಕೂಡಲೇ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ಸೇರಿ ವೈದ್ಯಕೀಯ ವಿದ್ಯೆಯನ್ನು ಪೂರೈಸಿ, ಮುಂದೆ ಸ್ತ್ರಿರೋಗ ತಜ್ಞೆಯಾಗಿ ಅವರು ಮಾಡಿದ ಸಾಧನೆ ಅತ್ಯಂತ ಶ್ಲಾಘನೀಯ. ವೈದ್ಯ ವೃತ್ತಿಯಲ್ಲಿದ್ದ ಅನೇಕರು ಕನ್ನಡದಲ್ಲಿ ಕೃತಿಗಳನ್ನು ರಚಿಸಿ ಪ್ರಸಿದ್ಧರಾಗಿದ್ದಾರೆ. ಆದರೆ ಡಾ. ರತೀದೇವಿಯವರ ಸಾಹಿತ್ಯ ಕೃಷಿಯ…

Read More

ಡಾ. ಸುಮಂತ ಶೆಣೈ ಇವರು ವೃತ್ತಿಯಲ್ಲಿ ಮೂಡಬಿದ್ರಿಯ ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ವೈದ್ಯರು ಮತ್ತು ಉಪನ್ಯಾಸಕರು. ಮೂಲತಃ ಕಾರ್ಕಳ ತಾಲೂಕಿನ ಹೊಸ್ಮಾರಿನವರು. ಹೊಸ್ಮಾರಿನ ಶ್ರೀ ಸುದರ್ಶನ್ ಮತ್ತು ವಸುಧಾ ಶೆಣೈ ದಂಪತಿಗಳ ಸುಪುತ್ರರು. ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ್ಮಾರು ಮತ್ತು ನಾರಾವಿ ಪ್ರೌಢಶಾಲೆಯಲ್ಲಿ ಪಡೆದು, ಪ. ಪೂರ್ವ ಶಿಕ್ಷಣವನ್ನು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಪೂರೈಸಿ, ಆಯುರ್ವೇದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯನ್ನು ಮೂಡುಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಪಡೆದಿರುತ್ತಾರೆ. ಆಯುರ್ವೇದದಲ್ಲಿ ದ್ರವ್ಯಗುಣ ವಿಭಾಗದಲ್ಲಿ ಪಿಎಚ್.ಡಿ ಪದವಿಯನ್ನು ರಾಜಸ್ಥಾನದ ಜೈಪುರದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಇಲ್ಲಿ ಪೂರೈಸಿರುತ್ತಾರೆ. ಬಾಲ್ಯದಿಂದಲೇ ಕಲೆ, ಸಾಹಿತ್ಯ, ಸಂಗೀತದ ಕಡೆಗೆ ಒಲವಿದ್ದ ಇವರು ಕವಿತೆ ರಚನೆ, ಸುಗಮ ಸಂಗೀತ, ಭಕ್ತಿ ಸಂಗೀತಗಳ ಜೊತೆಗೆ ತಬಲಾ ಮತ್ತು ಹಾರ್ಮೋನಿಯಂ ಕಲಿಕೆಯಲ್ಲೂ ತಮ್ಮನ್ನು ತೊಡಗಿಸಿಕೊಂಡವರು. ತಮ್ಮ ಸಂಗೀತ ಶಿಕ್ಷಣವನ್ನು ಶ್ರೀ ಯೋಗೀಶ್ ಬಾಳಿಗಾ, ವೆಂಕಟೇಶ ಚಿಪ್ಳೂಣ್ಕರ್ ಹಾಗೂ ಶ್ರೀ ಸಂತೋಷ್…

Read More

ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ದಿನಾಂಕ : 27-06-2023ರಂದು ನಡೆದ ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಶ್ರೀ ಕೆ.ಆರ್. ಪ್ರಸಿನ್ ಗೌಡ ರಚಿತ ಚೊಚ್ಚಲ ಕೃತಿ ‘ಮನ ಮಾತದಾಗ’ ಬಿಡುಗಡೆ ಸಮಾರಂಭ ಜರಗಿತು. ಈ ಸಮಾರಂಭವನ್ನು ಉದ್ಘಾಟಿಸಿದ ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ.ನವೀನ್ ಕುಮಾರ್ ಅವರು ಮಾತನಾಡಿ “ಪುಸ್ತಕಗಳು ಸಂವಹನ ಶೀಲತೆ, ಸಾಮಾಜಿಕ ಕಳಕಳಿ, ಕ್ರಿಯಾಶೀಲತೆ, ಸೃಜನಶೀಲತೆ ಮತ್ತು ಬುದ್ದಿಯ ಮಟ್ಟವನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪುಸ್ತಕಗಳ ಮಹತ್ವದ ಕುರಿತು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡರೂ ಅಲ್ಲಿ ನಮ್ಮದೇ ಆದ ಹೆಜ್ಜೆಯನ್ನು ಮೂಡಿಸುವಂತಾಗಬೇಕು ಎಂಬುದು ಮಕ್ಕಳಿಗೆ ಮಾತ್ರವಲ್ಲ ಸಮಾಜಕ್ಕೂ ತಿಳುವಳಿಕೆ ಮೂಡಲು ಪುಸ್ತಕಗಳು ಹೆಚ್ಚು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಸಮಾಜಕ್ಕಾಗಿ ತ್ಯಾಗ ಮಾಡಿದವರನ್ನು ಸದಾ ನೆನಪಿಸುವುದು ಪುಸ್ತಕಗಳು, ಹೊರ ಜಗತ್ತಿಗೆ ಸ್ನೇಹಿತನಂತಿರುವ ಪುಸ್ತಕಗಳೇ ಕಿಟಕಿಗಳು. ಆದ್ದರಿಂದ ಪುಸ್ತಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪುಸ್ತಕ…

Read More

ಮಂಗಳೂರು : ಧ್ವನಿ ಬಳಗದವರಿಂದ ಪದವಿ ಪೂರ್ವ, ಪದವಿ ಹಂತ, ಸ್ನಾತಕೋತ್ತರ ಹಾಗೂ ಸಾರ್ವಜನಿಕರಿಗೆ ‘ಧ್ವನಿ ಕವನ ಸ್ಪರ್ಧೆ’ಯನ್ನು ಆಯೋಜಿಸಿದೆ. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಕೊನೆಯ ದಿನಾಂಕ : 20-07-2023 ಆಗಿರುತ್ತದೆ. ನಿಬಂಧನೆಗಳು : 1. ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿರುವುದು 1) ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ 2) ಸ್ನಾತಕೋತ್ತರ ಮತ್ತು ಸಾರ್ವಜನಿಕ 2) ಕೈಪಿಡಿಯಲ್ಲಿ ನೀಡಿರುವ ಎರಡು ವಿಷಯಗಳಲ್ಲಿ ಒಂದು ವಿಷಯದ ಕುರಿತು ಹನ್ನೆರಡು ಸಾಲುಗಳ ಕವಿತೆ ರಚಿಸಬೇಕು ಪದವಿ ಪೂರ್ವ ಮತ್ತು ಪದವಿ ಹಂತ 1) ಚಿಗುರು 2) ಮಳೆ ಸ್ನಾತಕೋತ್ತರ ಮತ್ತು ಸಾರ್ವಜನಿಕ 1) ಅಂಬೆಗಾಲು 2) ಕೈತುತ್ತು 3) ಕವಿತೆಯನ್ನು ಕನ್ನಡ ಭಾಷೆಯಲ್ಲಿಯೇ ರಚಿಸಬೇಕು. ಕೃತಿ ಚೌರ್ಯ ಕಂಡುಬಂದಲ್ಲಿ ಕವಿತೆಯನ್ನು ಸರ್ಧೆಗೆ ಪರಿಗಣಿಸಲಾಗುವುದಿಲ್ಲ. 4) ಸ್ಪರ್ಧಿಯು ರಚಿಸಿದ ಕವಿತೆ ಈಗಾಗಲೇ ಯಾವುದೇ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟಗೊಂಡಿರಬಾರದು. 5) ಸ್ಪರ್ಧಿಯು ತಮ್ಮ ಕವಿತೆಯನ್ನು ಸಂಸ್ಥೆ ವತಿಯಿಂದ ಪಡೆದ ಕೈ ಪಿಡಿಯಲ್ಲಿಯೇ ಬಾಲ್ ಪೆನ್ ಬಳಸಿ ಬರೆಯಬೇಕು.…

Read More