Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸುರತ್ಕಲ್ ಗೋವಿಂದ ದಾಸ ಕಾಲೇಜಿನಲ್ಲಿ ಲಲಿತ ಕಲಾಸಂಘದ ಸಹಕಾರದಲ್ಲಿ ನಡೆದ ಬಾಲ ಪ್ರತಿಭೆಗಳಾದ ಮಾ. ವಿನಮ್ರ ಇಡ್ಕಿದು ಮತ್ತು ಕು. ಅನನ್ಯ ನಾರಾಯಣ್ ಹಾಡಿದ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ‘ಮತ್ತದೇ ಬೇಸರ ಅದೇ ಸಂಜೆ’ ಎಂಬ ದೃಶ್ಯ ಗೀತೆಯನ್ನು ಬಿಡುಗಡೆ ಕಾರ್ಯಕ್ರಮ ದಿನಾಂಕ 09-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ದೃಶ್ಯ ಗೀತೆಯನ್ನು ಬಿಡುಗಡೆ ಮಾಡಿದ ಭಾವಗೀತೆಗಳ ಯುವ ಕವಿ ರವೀಂದ್ರ ನಾಯಕ್ ಸಣ್ಣಕ್ಕಿ ಬೆಟ್ಟು “ಕವಿಯ ಕವಿತೆಯನ್ನು ಸಂಗೀತದ ಮೂಲಕ ವಾಚನ ಮಾಡುವ ಕ್ರಮವೇ ಭಾವಗೀತೆ. ಅಲ್ಲಿ ವಾದ್ಯದ ಅಬ್ಬರಗಳಿರುವುದಿಲ್ಲ, ಸಾಹಿತ್ಯವೇ ಪ್ರಧಾನ. ಜನರ ಹೃದಯಕ್ಕೆ ಮುಟ್ಟುವುದೇ ಅದರ ಗುಣ. ಬಾಲ ಪ್ರತಿಭೆಗಳಾದ ವಿನಮ್ರ ಇಡ್ಕಿದು ಮತ್ತು ಅನನ್ಯ ನಾರಾಯಣ್ ಕವಿ ನಿಸಾರ್ ಅಹಮ್ಮದ ಕವಿತೆಯನ್ನು ಹೃದಯಕ್ಕೆ ಮುಟ್ಟುವ ಹಾಗೆ ಮತ್ತೆ ಹಾಡಿರುವುದು ಶ್ಲಾಘನೀಯ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸುರತ್ಕಲ್ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿಯವರು ಮಾತನಾಡಿ “ಬಾಲ ಪ್ರತಿಭೆಗಳಲ್ಲಿರುವ…
ಮಂಗಳೂರು : ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇವರ ವತಿಯಿಂದ ದಿನಾಂಕ 28-12-2023ರಂದು ಸಂಜೆ ಗಂಟೆ 5ಕ್ಕೆ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಕೆ.ಎ.ಎಂ. ಅನ್ಸಾರಿ ರಚಿಸಿದ ಅಲೀಕತ್ತ್ ಸಣ್ಣಕತೆಗಳು ಮತ್ತು ‘ಚೆಂಡೆ’ ಕೃತಿಗಳ ಅನಾವರಣ ನಡೆಯಲಿದೆ. ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಹಣಕಾಸು ಅಧಿಕಾರಿಗಳಾದ ರೆ.ಫಾ. ಪ್ರದೀಪ್ ಸಿಕ್ವೇರ ಯಸ್.ಜೆ. ಇವರ ಅಧ್ಯಕ್ಷತೆಯಲ್ಲಿ ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ನಾ. ದಾಮೋದರ ಶೆಟ್ಟಿ ಕೃತಿಗಳನ್ನು ಅನಾವರಣಗೊಳಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಡಾ. ಎನ್. ಇಸ್ಮಾಯಿಲ್ ಇವರು ‘ಚೆಂಡೆ’ ಮತ್ತು ಸಹ್ಯಾದ್ರಿ ಕಾಲೇಜಿನ ಪ್ರೊ ಅಕ್ಷಯ ಶೆಟ್ಟಿ ಇವರು ‘ಅಲೀಕತ್ತ್’ ಕೃತಿಗಳ ಪರಿಚಯ ಮಾಡಲಿದ್ದಾರೆ.
ಹಾಸನ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆಯಾದ ಬೆಂಗಳೂರಿನ ರಂಗಕಹಳೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಇದರ ಮಾರ್ಗದರ್ಶನದಲ್ಲಿ ‘22ನೇ ಕುವೆಂಪು ನಾಟಕೋತ್ಸವ 2023’ ಕುವೆಂಪು ಜನ್ಮದಿನೋತ್ಸವ, ವಿಚಾರ ಸಂಕಿರಣ, ಸಾಧಕರಿಗೆ ಗೌರವಾರ್ಪಣೆ, ಚಲನಚಿತ್ರ ಪ್ರದರ್ಶನ, ಕುವೆಂಪು ಗೀತಗಾಯನಗಳು ದಿನಾಂಕ 28-12-2023ರಿಂದ 31-12-2023ರವರೆಗೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ದಿನಾಂಕ 28-12-2023ರಂದು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜನಪದ ವಿದ್ವಾಂಸರಾದ ಡಾ. ಹಂಪನಹಳ್ಳಿ ತಿಮ್ಮೇಗೌಡ ಇವರು ವಹಿಸಲಿದ್ದು, ಹಾಸನ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸತ್ಯಭಾಮ ಸಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ರಂಗಕಹಳೆ ತಂಡದವರಿಂದ ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ಮತ್ತು ಓಹಿಲೇಶ ಎಲ್. ನಿರ್ದೇಶನದಲ್ಲಿ ಗೌರಿಶಂಕರ ಸಾಂಸ್ಕೃತಿಕ ಕ್ರೀಡಾದತ್ತಿ ತಂಡದಿಂದ ‘ಮೋಡಣ್ಣನ ತಮ್ಮ’ ನಾಟಕ ಪ್ರದರ್ಶನ, ದಿನಾಂಕ 29-12-2023ರಂದು ಟಿ.ಎಂ. ಬಾಲಕೃಷ್ಣ ನಿರ್ದೇಶನದ ಬೆಂಗಳೂರಿನ ಬಿ.ಎಂ.ಟಿ.ಸಿ. ಸಾಂಸ್ಕೃತಿಕ ಕಲಾ ಕುಠೀರ ಅಭಿನಯಿಸುವ ‘ಯಮನ…
ಮಡಿಕೇರಿ : ಕೊಡವ ಸಾಂಪ್ರದಾಯಿಕ ವಾಲಗಕ್ಕೆ ಅದರದೇ ಆದ ಹಿನ್ನಲೆ ಹಾಗೂ ಗೌರವ ಸ್ಥಾನಮಾನಗಳಿವೆ. ಕೊಡವ ವಾಲಗದ ನಾದಕ್ಕೆ ಕೈ ಕಾಲು ಆಡಿಸದವರೇ ಇಲ್ಲ. ತೊಟ್ಟಿಲ ಮಗುವಿನಿಂದ ಹಿಡಿದು ಹಾಸಿಗೆಯಲ್ಲಿ ಮಲಗಿರುವ ವಯೋವೃದ್ಧರು ಕೂಡ ಕೊಡವ ವಾಲಗದ ಸದ್ದಿಗೆ ಕಾಲು ಕೈ ಆಡಿಸುತ್ತಾರೆ, ಕುಣಿಯಲು ಪ್ರಯತ್ನಿಸುತ್ತಾರೆ. ಹಬ್ಬಹರಿದಿನಗಳಲ್ಲಿ, ಮದುವೆ ಸೇರಿದಂತೆ ಇತರ ಸಮಾರಂಭಗಳಲ್ಲಿ ಕೊಡವ ಸಾಂಪ್ರದಾಯಿಕ ವಾಲಗ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ವಿಭಿನ್ನವಾದ ಸಂಗೀತ ಪರಿಕರದ ವಾದ್ಯಕ್ಕೆ ಹಬ್ಬದ ಮೆರುಗು ನೀಡಿದವರು ವಿರಾಜಪೇಟೆಯ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಎಂದರೆ ತಪ್ಪಲ್ಲ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಕೊಡವ ವಾಲಗತ್ತಾಟ್ ನಮ್ಮೆ ಜನರನ್ನು ತನ್ನತ್ತ ಸೆಳೆಯುತ್ತಿದೆ ಎನ್ನುವುದು ಗಮನಾರ್ಹ ಸಂಗತಿ. ಖ್ಯಾತ ಸಾಹಿತಿ ದಿವಂಗತ ಮುಲ್ಲೇಂಗಡ ಬೇಬಿ ಚೋಂದಮ್ಮನವರ ಸ್ಮರಣಾರ್ಥ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಸಿದ ಎರಡನೇ ವರ್ಷದ ‘ಕೊಡವ ವಾಲಗತ್ತಾಟ್ ನಮ್ಮೆ-2023’ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪುಟ್ಟ…
ಕಡಬ : ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾಭವನದಲ್ಲಿ ಕಡ್ಯ ಕೊಣಾಜೆ ಭಜನೋತ್ಸವ ಕಾರ್ಯಕ್ರಮವು ದಿನಾಂಕ 10-12-2023ರಂದು ಜರಗಿತು. ಸಾಧಕರ ಅಭಿನಂದನಾ ಸಮಿತಿಯ ನೇತೃತ್ವದಲ್ಲಿ ಭಜನಾ ಸಾಧಕ ಪ್ರಶಸ್ತಿ ಪುರಸ್ಕೃತ ಕಡ್ಯ ವಾಸುದೇವ ಭಟ್ ಹಾಗೂ ಇತರ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿದ್ವಾನ್ ಪಂಜ ಭಾಸ್ಕರ ಭಟ್ ಮಾತನಾಡುತ್ತಾ “ಸಾಧಕರನ್ನು ಗೌರವಿಸುವುದರಿಂದ ನಮ್ಮ ಗೌರವ ಹೆಚ್ಚುತ್ತದೆ. ಸಾಧಕರು ನಡೆದು ಬಂದ ದಾರಿ ಇತರರಿಗೆ ಪ್ರೇರಣೆಯಾಗಲಿದೆ. ಕಡ್ಯ ವಾಸುದೇವ ಭಟ್ ಅವರು ದಾಸ ಸಾಹಿತ್ಯ ಪ್ರಸರಣ ಕಾರ್ಯದೊಂದಿಗೆ ಧರ್ಮ ಜಾಗೃತಿ ಮತ್ತು ರಾಷ್ಟ್ರ ಜಾಗೃತಿಯನ್ನು ಮಾಡಿದವರು. ದೇವ ಸೇವೆ ನಡೆದರೆ ಅಲ್ಲಿ ದೇಶ ಸುರಕ್ಷಿತವಾಗಿರುತ್ತದೆ. ಹಾಗಾದಾಗ ದೇಶವಾಸಿಗಳೂ ಸುರಕ್ಷಿತವಾಗಿರಲು ಸಾಧ್ಯ” ಎಂದು ಹೇಳಿದರು. ಮಂಗಳೂರು ವಿಭಾಗ ಕುಟುಂಬ ಪ್ರಭೋದನ್ ಪ್ರಮುಖ್ ಅಚ್ಯುತ ನಾಯಕ್ ಮಾತನಾಡಿ, “ಭಜನೆ ಇರುವಲ್ಲಿ ವಿಭಜನೆ ಇಲ್ಲ. ಭಜನೆಯ ಮೂಲಕ ವಾಸುದೇವ ಭಟ್ ಇಡೀ ಗ್ರಾಮವನ್ನು ಒಂದಾಗಿಸಿದ್ದಾರೆ. ಸಭಾಂಗಣದಲ್ಲಿ ಇಂದು ಸೇರಿರುವ ಜನಸ್ತೋಮವೇ ಅದಕ್ಕೆ ಸಾಕ್ಷಿಯಾಗಿದೆ.…
ಮಂಗಳೂರು : ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 20-12-2023ರಂದು ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ನಾಡು-ನುಡಿ-ವೈಭವದ ರತ್ನೋತ್ಸವವು ವೈಭವಪೂರ್ಣವಾಗಿ ನಡೆಯಿತು. ಸಮಾರಂಭದ ಸರ್ವಾಧ್ಯಕ್ಷ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡರು ಸರ್ವಾಧ್ಯಕ್ಷರಾಗಿ ಸಾಹಿತ್ಯದ ಒಳಗು ಹೊರಗುಗಳ ವಿವರವಾದ ವಿಶ್ಲೇಷಣೆ ಮಾಡಿದರು. ಪ್ರಧಾನ ಉಪನ್ಯಾಸ ಮಾಲಿಕೆಯಲ್ಲಿ ಡಾ. ಧನಂಜಯ ಕುಂಬಳೆಯವರ ಅಧ್ಯಕ್ಷತೆಯಲ್ಲಿ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ಶ್ರೀ ಮುನಿರಾಜ ರೆಂಜಾಳರು ಕ್ರಮವಾಗಿ ದಾಸ ಸಾಹಿತ್ಯ ಹಾಗೂ ಇಂದಿನ ಸಾಹಿತ್ಯಗಳ ಕುರಿತಾಗಿ ಸೋದಾಹರಣ ಸಹಿತ ಮಾತನಾಡಿದರು. ನಂತರ ನಡೆದ ಕವಿ ಕಾವ್ಯ ಚಿತ್ರ ಗಾಯನದಲ್ಲಿ ಊರಿನ ಪ್ರಸಿದ್ಧ ಕವಿಗಳಾದ ಕರುಣಾಕರ ಬಳ್ಕೂರು, ಸಂಶೀರ್ ಬುಡೋಳಿ, ಜೋಯ್ಸ್ ಪಿಂಟೋ, ಚಂದ್ರಹಾಸ್ ಕೋಟೆಕಾರ್, ಶಾಂತಪ್ಪ ಬಾಬು, ನಾರಾಯಣ ಕುಂಬ್ರ ಮತ್ತು ವಸಂತಿ ನಿಡ್ಕೆಯವರು ಸ್ವರಚಿತ ಗೇಯ ಕವನಗಳನ್ನು ವಾಚನ ಮಾಡಿ, ಅದೇ ಕವನವನ್ನು ಗಾಯಕ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಗಾಯಕಿ ಸೌಮ್ಯಾ ಕಟೀಲ್ ಸಂಗೀತ ಸಹಿತವಾಗಿ ಹಾಡಿದರು.…
ಕಾಸರಗೋಡು : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ (ರಿ) ಇದರ 79ನೇ ವಾರ್ಷಿಕೋತ್ಸವದಲ್ಲಿ ಕೀರಿಕ್ಕಾಡು ಸಂಸ್ಮರಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈವಿಧ್ಯ, ಭಜನೆ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟವು ದಿನಾಂಕ 23-12-2023 ಶನಿವಾರ ದೇಲಂಪಾಡಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಬನಾರಿ ಇಲ್ಲಿ ನಡೆಯಲಿದೆ. ಪೂರ್ವಾಹ್ನ ಗಂಟೆ 9:30ರಿಂದ ಮಧ್ವಾಧೀಶ ವಿಠಲದಾಸ ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಬನಾರಿ ಮತ್ತು ಶ್ರೀ ವಾಗ್ದೇವಿ ಭಜನಾ ಮಂಡಳಿ ಕಾವು ಇವರಿ೦ದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11:15ಕ್ಕೆ ಸಂಘದ ಮಹಿಳಾ ಕಲಾವಿದರಿಂದ ‘ಸಮರ ಸನ್ನಾಹ’ ಯಕ್ಷಗಾನ ತಾಳಮದ್ದಳೆ, ಅಪರಾಹ್ನ ಗಂಟೆ 12:15ರಿಂದ ದೇಲಂಪಾಡಿ ಶಾಲಾ ಮಕ್ಕಳಿಂದ ‘ನೃತ್ಯ ವೈವಿಧ್ಯ’, ಅಪರಾಹ್ನ ಗಂಟೆ 12: 45ರಿಂದ ‘ಚಿಣ್ಣರ ಚಿಲಿಪಿಲಿ’ ಐನಾರಿ ಅಂಗನವಾಡಿಯ ಪುಟಾಣಿಗಳಿಂದ, 2 ಗಂಟೆಗೆ ಹಿರಿಯ ಕವಯತ್ರಿ ಶ್ರೀಮತಿ ಸತ್ಯವತಿ ಎಸ್. ಕೊಳಚೆಪ್ಪು ಇವರಿಂದ ಕೀರಿಕ್ಕಾಡು ಸಂಸ್ಮರಣೆ ಮತ್ತು ಖ್ಯಾತ ಹಿರಿಯ…
ಉಡುಪಿ : ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಮತ್ತು ಕರಾವಳಿ ನೃತ್ಯ ಕಲಾವಿದರ ನೃತ್ಯ ಸಮ್ಮೇಳನ ಸಮಿತಿ ಆಯೋಜಿಸುವ ಕರಾವಳಿ ಭರತನಾಟ್ಯ ಕಲಾವಿದರ ನೃತ್ಯ ಸಮ್ಮೇಳನ ‘ನೃತ್ಯೋತ್ಕರ್ಷ 2023’ ಭರತನಾಟ್ಯ ಪ್ರದರ್ಶನ-ವಿಚಾರ ಸಂಕಿರಣ-ಪರಿಪ್ರಶ್ನೆ ಚಿಂತನ ಮಂಥನ ಕಾರ್ಯಕ್ರಮವು ದಿನಾಂಕ 24-12-2023 ಮತ್ತು 25-12-2023ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ದಿನಾಂಕ 24-12-2023ರಂದು ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಮತ್ತು ಅತಿಥಿಗಳನ್ನು ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾವಿದರು ವೈಭವೋಪೇತ ಮೆರವಣಿಗೆಯೊಂದಿಗೆ ಸಭಾಂಗಣಕ್ಕೆ ಕರೆದುಕೊಂಡು ಬರುವುದು. ನಂತರ ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟಿನ ನಿರ್ದೇಶಕರಾದ ನಾಟ್ಯಾಚಾರ್ಯ ಪ್ರೊ. ಕೆ. ರಾಮಮೂರ್ತಿ ರಾವ್ ಇವರ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆಯನ್ನು ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬಿ. ವಿಜಯ ಬಲ್ಲಾಳ್ ಇವರು ಮಾಡಲಿದ್ದಾರೆ. ಗಂಟೆ 11.35ಕ್ಕೆ ವಿದ್ವಾನ್ ಸುಧೀರ್ ರಾವ್ ಕೊಡವೂರು – ವಿದುಷಿ ಮಾನಸಿ ಸುಧೀರ್ ನೃತ್ಯ ನಿಕೇತನ ಕೊಡವೂರು…
ಬೆಂಗಳೂರು : ಅಂಕಿತ ಪುಸ್ತಕ ಮತ್ತು ಬುಕ್ ಬ್ರಹ್ಮ ಇವರ ಸಹಯೋಗದಲ್ಲಿ ದಿನಾಂಕ 23-12-2023ರಂದು ಬೆಳಿಗ್ಗೆ ಗಂಟೆ 11ಕ್ಕೆ ಮೂರು ಕಾದಂಬರಿಗಳ ಬಿಡುಗಡೆ ಕಾರ್ಯಕ್ರಮ ಆನ್ಲೈನ್ ನಲ್ಲಿ ನಡೆಯಲಿದೆ. ಶ್ರೀ ಕೃಷ್ಣಮೂರ್ತಿ ಹನೂರು ಅವರ ‘ಕನ್ನಮರಿ’, ಶ್ರೀ ಡಿ.ಎನ್. ಶ್ರೀನಾಥ್ ಅವರ ಅನುವಾದಿತ ‘ಒಂದು ಮಸಾಜ್ ಪಾರ್ಲರ್ ಕಥೆ’ ಮತ್ತು ಶ್ರೀಮತಿ ಪಾರ್ವತಿ ಜಿ. ಐತಾಳ್ ಅವರ ಅನುವಾದಿತ ‘ಬೌದಿ’ ಕಾದಂಬರಿಗಳನ್ನು ಭಾಷಾಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಎಸ್.ಎನ್. ಶ್ರೀಧರ್ ಇವರು ಲೋಕಾರ್ಪಣೆ ಮಾಡಲಿದ್ದು, ಪ್ರಸಿದ್ಧ ಚಲನಚಿತ್ರ ನಿರ್ದೇಶಕರಾದ ಶ್ರೀ ಪಿ. ಶೇಷಾದ್ರಿ ಮತ್ತು ಪ್ರಸಿದ್ಧ ಅನುವಾದಕರಾದ ಡಾ. ಗೀತಾ ಶೆಣೈ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಡುಪಿ : ಜಿಲ್ಲಾ ಪಂಚಾಯತಿ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಲಯನ್ಸ್ ಕ್ಲಬ್ ಮಣಿಪಾಲ ಇವರ ಸಹಯೋಗದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರ ಮುಂದಾಳತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ ಅಭಿಯಾನ ಕಾರ್ಯಕ್ರಮವು ದಿನಾಂಕ 16-12-2023ರಂದು ಆದಿಉಡುಪಿ ಕನ್ನಡ ಹಾಗೂ ಇಂಗ್ಲೀಷ್ ಮೀಡಿಯಂ ಶಾಲೆಯ ವಠಾರದಲ್ಲಿ ಚಾಲನೆಗೊಂಡಿತು. ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿಯ ಕಾರ್ಯದರ್ಶಿ ಹಾಗೂ ಲಯನ್ಸ್ ಕ್ಲಬ್ ಮಣಿಪಾಲ ಇದರ ಅಧ್ಯಕ್ಷರಾದ ಡಾ.ಅರ್ಚನ ಭಕ್ತ ಮತ್ತು ಐ.ಎಮ್.ಎ. ಇದರ ಮಹಿಳಾ ವಿಭಾಗದ ಅಧ್ಯಕ್ಷರಾದ ಡಾ. ಇಂದಿರಾ ಶಾನುಭಾಗ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾನಸಿಕ ಖಿನ್ನತೆ, ಆತ್ಮಹತ್ಯೆ ತಡೆ, ಹೆಣ್ಣು ಮಕ್ಕಳ ಆರೋಗ್ಯ ಮತ್ತು ಭ್ರೂಣಹತ್ಯೆ ತಡೆ, ಕ್ಷಯರೋಗದ ಜಾಗೃತಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲಕಾರ್ಮಿಕ ತಡೆ ಇವುಗಳ ಕುರಿತಾದ ಮಾಹಿತಿ…