Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಮಡಿಕೇರಿಯ ಲೇಖಕಿ ದೀಪಾಭಾಸ್ತಿಯವರನ್ನು ಅವರ ನಿವಾಸದಲ್ಲಿ ದಿನಾಂಕ 30 ಮೇ 2025ರಂದು ಸನ್ಮಾನಿಸಲಾಯಿತು. ಲೇಖಕಿಯನ್ನು ಕಾಫಿ ಹಾರದ ಮೂಲಕ ಸನ್ಮಾನಿಸಿದ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಮಾತನಾಡಿ “ಲೇಖಕಿ ದೀಪಾಭಾಸ್ತಿಯವರ ಸಾಹಿತ್ಯ ಸಾಧನೆ ಕೊಡಗಿನ ಜನತೆಗೇ ಹೆಮ್ಮೆ ತಂದಿದ್ದು, ಭವಿಷ್ಯದಲ್ಲಿಯೂ ಲೇಖತಿಯ ಯಾವುದೇ ಸಾಹಿತ್ಯ ಪರ ಚಟುವಟಿಕೆಗಳಿಗೆ ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಬೂಕರ್ ಪ್ರಶಸ್ತಿಯು ಅನುವಾದ ಸಾಹಿತ್ಯದ ನಿಜವಾದ ಶಕ್ತಿಯನ್ನು ನಿರೂಪಿಸಿದೆ. ಬೂಕರ್ ಪ್ರಶಸ್ತಿಯಂಥ ಜಗತ್ತಿನಲ್ಲಿ ಸಾಹಿತ್ಯಕ್ಕಾಗಿನ ಶ್ರೇಷ್ಠ ಪ್ರಶಸ್ತಿಯನ್ನು ಮಡಿಕೇರಿಯ ಲೇಖಕಿ ಪಡೆದುಕೊಳ್ಳುವ ಮೂಲಕ ಕೊಡಗು, ಕರ್ನಾಟಕ ಮಾತ್ರವಲ್ಲದೇ ಭಾರತವೇ ಮಡಿಕೇರಿಯತ್ತ ಗಮನ ಹರಿಸುವಂತೆ ದೀಪಾಭಾಸ್ತಿ ಮಾಡಿದ್ದಾರೆ. ಈ ಸಾಹಿತ್ಯ ಸಾಧನೆ ಜಗತ್ತಿನ ಸಾಹಿತ್ಯ ಲೋಕದ ಇತಿಹಾಸದಲ್ಲಿ ಅಚ್ಚಳಿಯದೇ ದಾಖಲಾಗಿದೆ. ಬಾನುಮುಪ್ತಾಕ್ ಅವರ ‘ಎದೆಯ ಹಣತೆ’ ಕೃತಿಯನ್ನು ‘ಹಾರ್ಟ್ ಲ್ಯಾಂಗ್’ ಎಂಬ ಆಂಗ್ಲ ಭಾಷಾ ಕೃತಿಗೆ ಅನುವಾದಿಸಲು ಪಟ್ಟಿರಬಹುದಾದ ಶ್ರಮ ಊಹೆಗೂ ನಿಲುಕದ್ದು, ಮಡಿಕೇರಿಯ ಪರಿಸರದ ನಡುವಿನ…
ಹುಬ್ಬಳ್ಳಿ: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ಕೊಡಮಾಡುವ ‘ವಿಭಾ ಸಾಹಿತ್ಯ ಪ್ರಶಸ್ತಿ-2025’ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು, ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂಪಾಯಿ 10,000 ನಗದು ಮತ್ತು ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು. ಹಸ್ತಪ್ರತಿ ಕಳುಹಿಸಲು ಜೂನ್ 30 ಕೊನೆಯ ದಿನಾಂಕ. ಸುನಂದಾ ಮತ್ತು ಪ್ರಕಾಶ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2025, ನಂ.90, ‘ನಾಗಸುಧೆ ಜಗಲಿ’ 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ ಹುಬ್ಬಳ್ಳಿ- 580031, ದೂ.ಸಂ. 9380613683, 9845779387ಗೆ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ 141ನೇ ಜಯಂತ್ಯುತ್ಸವ ಮತ್ತು ಶ್ರೀಮತಿ ಮಹಾಲಕ್ಷ್ಮಿ ಟಿ. ಕೃಷ್ಣರಾಜು ದತ್ತಿ, ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ದತ್ತಿ, ಶ್ರೀಮತಿ ಎಸ್. ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 04 ಜೂನ್ 2025ರ ಮಂಗಳವಾರ ಸಂಜೆ 5-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಚುನಾವಣಾ ಆಯುಕ್ತರಾದ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಇವರು ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಇವರ ಕುರಿತು ಹಂಪಿ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ವಿಶೇಷ ಉಪನ್ಯಾಸ ನೀಡಿಲಿದ್ದಾರೆ. ದತ್ತಿದಾನಿಗಳಾದ ಟಿ. ಕೃಷ್ಣರಾಜು ಮತ್ತು ಡಾ. ಎಂ.ಜಿ. ನಾಗರಾಜು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಶ್ರೀಮತಿ ಮಹಾಲಕ್ಷ್ಮಿ ಟಿ. ಕೃಷ್ಣರಾಜು ಸವಿನೆನಪಿನ…
ಸಾಗರ : ಯಕ್ಷಗಾನ ತರಬೇತುದಾರರಿಂದ ಆಸಕ್ತ ಮಕ್ಕಳಿಗೆ ಯಕ್ಷಗಾನ ತರಬೇತಿಯು ಸಾಗರ ತಾಲೂಕಿನಲ್ಲಿ ದಿನಾಂಕ 09 ಜೂನ್ 2025ರಂದು ಸಂಜೆ 5-00 ಗಂಟೆಗೆ ಸಾಗರದ ಶಿವಗೋಪಾಲಕೃಷ್ಣ ದೇವಸ್ಥಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಈಗಾಗಲೇ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಯಕ್ಷಗಾನ ನೃತ್ಯ ಪ್ರದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ ಎಸ್.ಸಿ. ಸೈದೂರ್ 9480289724 ಮತ್ತು ಶಿವು ಶಿರಳಿಗೆ 9900394991 ಸಂಖ್ಯೆಯನ್ನು ಆಸಕ್ತ ಮಕ್ಕಳು ಸಂಪರ್ಕಿಸಬಹುದು.
ಬೆಂಗಳೂರು : ಕಪ್ಪಣ್ಣ ಅಂಗಳ ಹಾಗೂ ಸಮಂಜಸ ಇದರ ವತಿಯಿಂದ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ ಗೌರವಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಎನ್.ಆರ್. ಕಾಲೋನಿಯಲ್ಲಿರುವ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರೊ. ಕೆ.ಈ. ರಾಧಾಕೃಷ್ಣ, ಮಲ್ಲೇಪುರಂ ಜಿ. ವೆಂಕಟೇಶ್, ಬಿ.ಆರ್. ಲಕ್ಷ್ಮಣ ರಾವ್, ರೆವರೆಂಡ್ ಫಾದರ್ ಚಾರ್ಲ್ಸ್ ಲಸ್ರಾಡೋ, ಸುಂದರ್ ವೀಣಾ ಮತ್ತು ಟಿ.ಎನ್. ಸೀತಾರಾಮ್ ಇವರಿಂದ ಸಾಹಿತ್ಯ ಗೌರವ, ಬಿ. ಜಯಶ್ರೀ ಇವರಿಂದ ರಂಗ ಗೌರವ, ಎಂ.ಡಿ. ಪಲ್ಲವಿ ಇವರಿಂದ ಗೀತ ಗೌರವ ಪ್ರಸ್ತುತಗೊಳ್ಳಲಿದೆ. ಪ್ರೊ. ಹಂ.ಪ.ನಾ. ಮತ್ತು ಬಿ.ಎಂ. ವಿಠ್ಠಲ ಮೂರ್ತಿ ಇವರುಗಳು ವಿಶೇಷ ಉಪಸ್ಥಿತಿ ಇರಲಿದೆ.
ಮಂಗಳೂರು : ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇದರ ರಜತ ಮಹೋತ್ಸವ ಸಂಭ್ರಮ ಸಮಾರಂಭದ ಅಂಗವಾಗಿ ಆಯೋಜಿಸಿದ 15 ದಿನಗಳ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದ ಸಮಾರೂಪ ಸಮಾರಂಭ ದಿನಾಂಕ 01 ಜೂನ್ 2025ರ ಬುಧವಾರದಂದು ಕದ್ರಿ ದೇವಳದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಪ್ರೊ ಎಂ. ಬಿ ಪುರಾಣಿಕ್ ಮಾತನಾಡಿ “ಯಾವುದೇ ಸಂಸ್ಥೆಯ ಸಾಧನೆಯನ್ನ ಗುರುತಿಸಲು ಅದು ಗೈದ ಸಾಹಸಕಾರ್ಯಗಳೇ ರಹದಾರಿಯಾಗುತ್ತದೆ. ಸಾಧನಾಪಥದಲ್ಲಿ ಸಾಗುವಾಗ ಕಂಟಕ ಮಾರ್ಗವಿರುತ್ತದೆ. ಅದನ್ನು ಸಾಗುವಾಗ ಕಷ್ಟ ಎದುರಾಗುವುದು ಸಹಜ. ತೆಂಕುತಿಟ್ಟಿನಲ್ಲಿ ಮಕ್ಕಳ ಮೇಳ ಎಂಬ ಕಲ್ಪನೆಯನ್ನು ಹುಟ್ಟುಹಾಕಿ, ದೇಶಾದ್ಯಂತ ಸಂಚರಿಸಿ, ಯಕ್ಷಗಾನದ ಕಂಪನ್ನು ಪಸರಿಸಿದ ಕೀರ್ತಿ ಸರಯೂ ಸಂಸ್ಥೆಯದ್ದು. 25 ವರ್ಷಗಳಿಂದ ಅದು ಬೆಳೆದದ್ದನ್ನು ನಾವು ಹತ್ತಿರದಿಂದ ಕಂಡಿದ್ದೇವೆ. ಇನ್ನು ಇನ್ನು ಹೆಚ್ಚಿನ ಗಣನೀಯ ಸಾಧನೆಯನ್ನು ಈ ಮಕ್ಕಳ ಮೇಳದ ಚಿಣ್ಣರು ನಡೆಸಲಿ” ಎಂದು ಹಾರೈಸಿದರು. ವಾರ್ಡ್ 17ರ ಮನಪಾ ಮಾಜಿ…
ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇವರ ಸಹಯೋಗದೊಂದಿಗೆ ಡಾ. ವಾಣಿಶ್ರೀ ಕಾಸರಗೋಡು ಗಡಿನಾಡ ಕನ್ನಡತಿ ಇವರ ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಕಾಸರಗೋಡು ಇದರ ವತಿಯಿಂದ ಯಶಸ್ವಿ 113ನೇ ಕಾರ್ಯಕ್ರಮ ‘ಶತ ಸಂಭ್ರಮ’ ಮತ್ತು ಪೊಟ್ಟಿಪ್ಪಲ ಆಶುಕವಿ ಶ್ರೀ ಕೀರ್ತಿಶೇಷ ನಾರಾಯಣ ಭಟ್ ರವರಿಗೆ ‘ನುಡಿ ನಮನ’ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಗೀತಗಾಯನ, ಸಾಧಕರಿಗೆ ಸನ್ಮಾನ, ಕುಣಿತ ಭಜನೆ ಮತ್ತು ಭಜನೆ ಹಾಗೂ ಸಾಹಿತ್ಯ ಗಾನ ನೃತ್ಯ ವೈಭವ ನಡೆಯಲಿದೆ. ಪುತ್ತೂರು ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಉಮೇಶ್ ನಾಯಕ್ ಇವರು ‘ಶತ ಸಂಭ್ರಮ’ದ ಉದ್ಘಾಟನೆ ಮಾಡಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಇವರು ದೀಪ ಪ್ರಜ್ವಲನೆ ಮಾಡಲಿರುವರು. ಉದ್ಯಮಿ ಪ್ರಸಾದ್ ಪೆರ್ಲ ಇವರು ನುಡಿ ನಮನ…
ಸಾಣೇಹಳ್ಳಿ : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2025-26ನೆಯ ಸಾಲಿನ ರಂಗಶಿಕ್ಷಣಕ್ಕೆ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್)ಗೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿಗಾಗಿ ರಂಗಶಾಲೆಯ ವೆಬ್ ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 25 ಜೂನ್ 2025ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳಿಸುವುದು. ಸಂದರ್ಶನದ…
ಬೆಂಗಳೂರು : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನವನ್ನು ದಿನಾಂಕ 04 ಜೂನ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ ನ್ ನಲ್ಲಿ ದಿನಾಂಕ 01 ಜೂನ್ 2025 ರಂದು 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ. ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ…