Subscribe to Updates
Get the latest creative news from FooBar about art, design and business.
Author: roovari
13-03-2023, ಉಡುಪಿ: ಅಂದು ಆ ಪುಟ್ಟ ಬಾಲೆ ತನ್ನ ಅಪ್ಪ ಅಮ್ಮ ರಂಗ ವೇದಿಕೆಯಲ್ಲಿ ಹೆಜ್ಜೆ ಹಾಕುತ್ತಿರಲು ಪರದೆಯ ಬದಿಯಲ್ಲಿ ನಿಂತು ತನ್ನ ಕಾಲ್ಗೆಜ್ಜೆ ಸದ್ದು ಮಾಡುತ್ತ ಎಲ್ಲರ ಗಮನ ಸೆಳೆಯುತ್ತಿದ್ದರೆ ಇಂದು ಅದೇ ಬಾಲೆ ಯುವ ಪೀಳಿಗೆಯ ಸಮೂಹವನ್ನೇ ರಂಗ ಭೂಮಿಯತ್ತ ಸೆಳೆದು ನಿಲ್ಲಿಸಲು ಕೈಗೊಂಡ ಧೃಡತೆಯ ಹೆಜ್ಜೆಯ ಸದ್ದು ಅಪಾರ ರಂಗಾಸಕ್ತರ ಹೃದಯ ಕದ್ದಿದೆ ಮನ ಮುಟ್ಟಿದೆ. ಎ.ಎಸ್ ಮೂರ್ತಿ ಕಮಲಾ ಮೂರ್ತಿಯವರ ಮುದ್ದಿನ ಮಗಳು ಶೋಭಾ ನಾಲ್ಕನೇ ತರಗತಿಯಲ್ಲಿ ಕುರ್ತುಕೋಟಿಯವರ “ಆ ಮನಿ ” ಮಕ್ಕಳ ನಾಟಕದ ಮೂಲಕ ನಾಟಕರಂಗ ಪಯಣಕ್ಕೆ ನಾಂದಿ ಹಾಡಿದರೆ ತಂದೆಯವರ ಚಿತ್ರಾ ನಾಟಕ ತಂಡ ಅಭಿನಯದಲ್ಲಿ ಪ್ರಬುದ್ಧತೆಯನ್ನು ತಂದುಕೊಟ್ಟಿತ್ತು. ಆವತ್ತು ಬೀದಿನಾಟಕಗಳು ಸಮಾಜಮುಖಿಯಾಗಿ ಬೆಳೆಯಲು ಆ ಕಂದಮ್ಮನಿಗೆ ಸಹಕರಿಸಿದ್ದರೆ ಬಾಲ್ಯದ ಆ ದಿನದಲ್ಲಿ ಕುವೆಂಪುರವರ “ಕರಿಸಿದ್ದ ” ನಾಟಕಕ್ಕೆ ಅವರ ಮನೆ ಮುಂದೆಯೇ ಹೆಜ್ಜೆ ಹಾಕಿದ ಸವಿ ಸದಾ ಮಾಸದ ನೆನಪಾಗಿ ಉಳಿದಿತ್ತು. ಹೀಗೆ ಹುಟ್ಟಿನಿಂದಲೇ ರಂಗಭೂಮಿಯನ್ನು ಒಪ್ಪಿಕೊಂಡು ಅಪ್ಪಿಕೊಂಡು ಬೆಳೆದವರು,…
13 ಮಾರ್ಚ್ 2023, ಬೆಂಗಳೂರು: ರಂಗಶಾಲಾ ಅಭಿನಯ ತರಬೇತಿ ಕೇಂದ್ರ ಪ್ರಸ್ತುತಪಡಿಸುತ್ತಿರುವ. ಮೂಲ ಫೆಡರಿಕೊ ಗಾರ್ಸಿಯ ಲೋರ್ಕ ರಚಿಸಿ, ಕೆ.ಎನ್. ವಿಜಯಲಕ್ಷ್ಮಿ ಕನ್ನಡಕ್ಕೆ ಅನುವಾದಿಸಿ, ಡಾಕ್ಟರ್ ಉದಯ್ ಸೊಸ್ಲೆ ಅವರ ನಿರ್ದೇಶನದಲ್ಲಿ ಮೂಡಿ ಬಂದ ನಾಟಕವೇ ‘ಬ್ಲಡ್ ವೆಡ್ಡಿಂಗ್’ ಈ ನಾಟಕವು ಇದೆ ಬರುವ 16-03-2023ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶನ ಗೊಳ್ಳಲಿದೆ. ಫೆಡರಿಕೊ ಗಾರ್ಸಿಯ ಲೋರ್ಕ ಎನ್ನುವ ಸ್ಪೇನಿನ ನಾಟಕಕಾರನ “ಬ್ಲಡ್ ವೆಡ್ಡಿಂಗ್” ಅನ್ನೋ ನಾಟಕ, ಸರ್ವಕಾಲಕ್ಕೂ ಸಲ್ಲಬಹುದಾದ, ಮನುಷ್ಯನ ಸಹಜ ಆಯ್ಕೆಗಳನ್ನ ಅಷ್ಟೇ ನಿಷ್ಠೂರವಾಗಿ ಪ್ರಶ್ನೆಗಚ್ಚುವ ಸ್ಕ್ರಿಪ್ಟ್.. ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ಅದರೊಟ್ಟಿಗೆ ಬಿಗಿತುಗೊಂಡ ಗಂಡು ಮತ್ತು ಹೆಣ್ಣಿನ ಸಹಜ ಆಕರ್ಷಣೆ, ಆಯ್ಕೆ, ದ್ವಂದ್ವ, ನಿಲುವು, ಅಸ್ಮಿತೆ, ಅಸ್ತಿತ್ವ ಇವುಗಳ ಚಂದದ ಕಟ್ಟುವಿಕೆಯೆ ಬ್ಲಡ್ ವೆಡ್ಡಿಂಗ್.. ರ೦ಗಶಾಲಾ ಅಭಿನಯ ತರಬೇತಿ ಕೇಂದ್ರ: ರಂಗಶಾಲಾ ಬೆಂಗಳೂರು ಸಂಸ್ಥೆಯು ವಿನಯ್ ನೀನಾಸಮ್ ರವರ ರಂಗಭೂಮಿ ಕನಸುಗಳಲ್ಲೊಂದು ಈ ತರಬೇತಿ ಸಂಸ್ಥೆಯು ಸಮಾಜಕ್ಕೆ ನೇರವಾಗಿ ಉಪಯುಕ್ತವಾಗಬಲ್ಲಂತಹ ಸಂವಹನ ತರಬೇತಿ,ವ್ಯಕ್ತಿತ್ವ ವಿಕಸನ ತರಬೇತಿ,…
ಯುವ ಜನತೆ ನೃತ್ಯ, ಸಂಗೀತ, ಯಕ್ಷಗಾನ ಮೊದಲಾದ ಕಲಾ ಪ್ರಕಾರಗಳಿಂದ ದೂರ ಉಳಿಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿರುವ ಈ ದಿನಗಳಲ್ಲಿ, ಆ ಮಾತಿಗೆ ಅಪವಾದದಂತೆ ಯಕ್ಷಗಾನವನ್ನೇ ತನ್ನ ಜೀವಾಳವನ್ನಾಗಿಸಿ ಯಕ್ಷಗಾನ ರಂಗದಲ್ಲಿನ ಹೆಚ್ಚಿನ ಎಲ್ಲಾ ವೇಷ ಪ್ರಕಾರಗಳಲ್ಲೂ ಪಳಗಿರುವ ಅದರಲ್ಲೂ ಪ್ರಮುಖವಾಗಿ ಬಣ್ಣದ ವೇಷಗಳಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿರುವ ತರುಣರೊಬ್ಬರು ನಮ್ಮ ನಿಮ್ಮೆಲ್ಲರ ಮಧ್ಯೆ ಇದ್ದಾರೆ. ಅವರೇ ಗುರುವಾಯನಕೆರೆಯ ಬೇಬಿ ಶೆಟ್ಟಿ ಹಾಗೂ ಸಂಪ ಶೆಟ್ಟಿ ದಂಪತಿಯರ ಸುಪುತ್ರ ಪ್ರಜ್ವಲ್ ಕುಮಾರ್ ಗುರುವಾಯನಕೆರೆ 09.05.1987ರಂದು ಇವರ ಜನನ. ಬಾಲ್ಯದ ದಿನಗಳಲ್ಲಿ ಗುರುವಾಯನಕೆರೆಯ ಸುತ್ತಮುತ್ತ ಸಾಕಷ್ಟು ಟೆಂಟಿನ ಮೇಳಗಳು ಯಕ್ಷಗಾನವನ್ನು ಆಡುತ್ತಿದ್ದವು, ಆ ಬಯಲಾಟಗಳನ್ನು ತಪ್ಪದೇ ವೀಕ್ಷಿಸುತ್ತಿದ್ದ ಪ್ರಜ್ವಲ್ ತಾನೂ ಒಬ್ಬ ಯಕ್ಷಗಾನ ಕಲಾವಿದನಾಗಬೇಕೆಂಬ ಹಂಬಲದಿಂದ ಯಕ್ಷಗಾನ ರಂಗದತ್ತ ಆಕರ್ಷಿತರಾದರು. ತಾರಾನಾಥ ಬಲ್ಯಾಯ ಮತ್ತು ದಿವಾಣ ಶಿವಶಂಕರ್ ಭಟ್ ಪ್ರಜ್ವಲ್ ಅವರ ಯಕ್ಷಗಾನ ಗುರುಗಳು. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ತೀರಾ :- ಹಿರಿಯ…
11 ಮಾರ್ಚ್ 2023, ಉಡುಪಿ: ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನ ಕಲಾವಿದರಾದ ಹರಿನಾರಾಯಣ ಬೈಪಡಿತ್ತಾಯ ಹಾಗೂ ಲೀಲಾವತಿ ಬೈಪಡಿತ್ತಾಯ ದಂಪತಿಯನ್ನು ಆಯ್ಕೆ ಮಾಡಲಾಗಿದೆ. ಯಕ್ಷಗಾನ ರಂಗದಲ್ಲಿ ತಮ್ಮದೇ ಆದ ಶೈಲಿಯ ಮೂಲಕ ಛಾಪು ಮೂಡಿಸಿರುವ ಇವರು ಯಕ್ಷಗಾನ ಪರಂಪರೆಯ ಉಳಿವಿಗೆ ಶ್ರಮಿಸುತ್ತಿರುವ ದಂಪತಿಗಳು. ಯತಿಶ್ರೇಷ್ಠ ವಿದ್ಯಾಮಾನ್ಯ ತೀರ್ಥ ಸ್ವಾಮೀಜಿ ಅವರ ಹೆಸರಿನಲ್ಲಿ ಕೊಡಮಾಡುವ ಈ ಪ್ರಶಸ್ತಿಯು ರೂ.50 ಸಾವಿರ ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನು ಒಳಗೊಂಡಿರುತ್ತವೆ. ಏ.6ರಂದು ಪಲಿಮಾರಿನಲ್ಲಿರುವ ಮೂಲಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ಪ್ರಕಟಣೆ ತಿಳಿಸಿದೆ.
10 ಮಾರ್ಚ್ 2023, ಮಂಗಳೂರು: “ಸಾಹಿತ್ಯದಿಂದ ಮಾನವೀಯತೆ, ಸಾಮರಸ್ಯದ ಭಾವನೆ ಜಾಗೃತಗೊಳ್ಳುತ್ತದೆ. ಸಾಹಿತ್ಯ ಸಮ್ಮೇಳನಗಳು ಅಲ್ಲಲ್ಲಿ ಜರುಗಿ ಜನರಲ್ಲಿ ಸಾಹಿತ್ಯಾಸಕ್ತಿಯನ್ನು ಬೆಳೆಸಬೇಕು. ಉಳ್ಳಾಲದಲ್ಲಿ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಘಟಿಸಿರುವುದು ಶ್ಲಾಘನೀಯ.” ಎಂದು ಶಾಸಕ ಯು ಟಿ ಖಾದರ್ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಉಳ್ಳಾಲ ತಾಲೂಕು ಘಟಕದ ವತಿಯಿಂದ ಮಾರ್ಚ್ 17ರಂದು ಆಯೋಜಿಸಿರುವ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ ಎಂ. ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಸಮ್ಮೇಳನಗಳು ಸ್ಥಳೀಯ ಸಾಹಿತಿಗಳಿಗೆ ವೇದಿಕೆಗಳನ್ನು ನೀಡುವುದರ ಜೊತೆಗೆ ಹೊಸ ಬರಹಗಾರರನ್ನು ನಾಡಿಗೆ ಪರಿಚಯಿಸುವ ಕಾರ್ಯವನ್ನು ನಡೆಸಬೇಕು. ಉಳ್ಳಾಲ ಸಾಹಿತ್ಯ ಸಮ್ಮೇಳನದಲ್ಲಿ ಉಚ್ಚಿಲ ಮೂಲದ ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ಶ್ಯಾಮಲಾ ಮಾಧವ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರ ಮೂಲಕ ಊರಿಗೂ ಹೊರನಾಡಿಗೂ ಗೌರವ ಕೊಟ್ಟಂತೆ…
10 ಮಾರ್ಚ್ 2023, ಚಿಕ್ಕಮಗಳೂರು: ಸಾಹಿತಿ ಪೂರ್ಣಚಂದ್ರ ತೇಜಸ್ವಿ ನೆನಪಿನಾರ್ಥ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಏಪ್ರಿಲ್ 5ರಿಂದ 7ರವರೆಗೆ ರಾಜ್ಯಮಟ್ಟದ “ಜೀವಿಲೋಕ ಸಾಹಿತ್ಯ ಸಂಭ್ರಮ” ಆಯೋಜಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಪರಿಸರ, ನಿಸರ್ಗ ರಕ್ಷಣಾ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ಜೀವಿಲೋಕ ಕುರಿತ ತಮ್ಮ ಕವನ, ಕಿರುಕಥೆ, ಚಿತ್ರಪಟ ಕಥನ, ಪ್ರಬಂಧ ಹಾಗೂ ಬೇರೆ ಭಾಷೆಗಳ ಜೀವಿಲೋಕ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿ ಇದೇ ಮಾರ್ಚ್ 18ರೊಳಗೆ ಕಳಿಸಬೇಕು. ಆಯ್ಕೆಯಾದ ಸಾಹಿತ್ಯ ಪ್ರಕಾರಗಳನ್ನು ‘ಜೀವಿಲೋಕ ಸಾಹಿತ್ಯ ಸಂಭ್ರಮ”ದಲ್ಲಿ ಪ್ರಸ್ತುತಪಡಿಸಲು ಅವಕಾಶ ಕಲ್ಪಿಸಲಾಗುವುದು. ಮಾಹಿತಿಗೆ ಮೊ: 94480 77019 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
10 ಮಾರ್ಚ್ 2023, ಮಂಗಳೂರು: ಇಂದು ಸಮಾಜದಲ್ಲಿ ಅನ್ಯೋನ್ಯವಾಗಿ ಬದುಕುವುದು ಕಡಿಮೆಯಾಗುತ್ತಿದೆ. ಒಂದಾಗಿ ಬಾಳಿದಲ್ಲಿ ಸರ್ವತ್ತೋಮುಖ ಅಭಿವೃದ್ದಿ ಸಾದ್ಯ ಎಂದು ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ ಪುನರೂರಿನ ವಿಶ್ವನಾಥ ದೇವಾಲಯದಲ್ಲಿ ಶ್ರೀ ವಿದ್ಯಾಲಯ ಮತ್ತು ಅಖಿಲ ಕರ್ನಾಟಕ ಬೆಳಂದಿಗಳ ಸಾಹಿತ್ಯ ಸಮ್ಮೇಳನ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ, ಪುನರೂರು ಪ್ರತಿಷ್ಠಾನ, ಕನ್ನಡ ಸಂಸ್ಕೃತಿ ಇಲಾಖೆ, ಪುನರೂರು ಆರ್ಟ್ಸ್ ಸಹಯೋಗದಲ್ಲಿ ದಿನಾಂಕ 05-03-2023 ಭಾನುವಾರದಂದು ನಡೆದ 13ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಜೀವಮಾನದ ಸಾಧನೆಗಾಗಿ ವಿಶ್ವ ತುಳುವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾದ್ಯಕ್ಷ ಡಾ. ಹರಿಕೃಷ್ಣ ಪುನರೂರು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯ ಬೆಳವಣಿಗೆ ಕಾಣಬೇಕಾದರೆ ಕನ್ನಡಿಗರು ಒಗ್ಗಟ್ಟಾಗಿ ನಾಡು, ನುಡಿಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಬೆಳದಿಂಗಳ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಸಂಘಟಕರಾದ ಡಾ. ಶೇಖರ ಅಜೆಕಾರು ಅವರು…
10 ಮಾರ್ಚ್ 2023 ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ “ಅತಿಕಾಯ ಕಾಳಗ” ನಡೆಯಿತು. ಹಿಮ್ಮೇಳದಲ್ಲಿ ಆನಂದ ಸವಣೂರು, ಚಂದ್ರಶೇಖರ್ ಹೆಗ್ಡೆ ನೆಲ್ಯಾಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀರಾಮ) ಗುಂಡ್ಯಡ್ಕ ಈಶ್ವರ ಭಟ್ (ರಾವಣ) ಗುಡ್ಡಪ್ಪ ಬಲ್ಯ (ಅತಿಕಾಯ) ಚಂದ್ರಶೇಖರ್ ಭಟ್ ಬಡೆಕ್ಕಿಲ (ಲಕ್ಷ್ಮಣ) ಸಹಕರಿಸಿದರು. ಟಿ ರಂಗನಾಥ ರಾವ್ ಸ್ವಾಗತಿಸಿ, ಮನೋರಮಾ ಜಿ. ಭಟ್ ವಂದಿಸಿದರು.
0 ಮಾರ್ಚ್ 2023, ಪುತ್ತೂರು: ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ಅವರು ಅನಾರೋಗ್ಯದಿಂದ ಮಂಗಳವಾರ 07-03-2023ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಸಮೀಪದ ಪದಡ್ಕದಲ್ಲಿ ವಿಶ್ವ ಕಲಾನಿಕೇತನ ಸಂಸ್ಥೆಯನ್ನು ನಡೆಸುತ್ತಿದ್ದ ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ-ನಯನಾ ವಿ. ರೈ ದಂಪತಿಯ ಕಿರಿಯ ಪುತ್ರಿ ಆಸ್ತಿಕಾ ರೈ. ಇವರು ವಿಶ್ವ ಕಲಾನಿಕೇತನದಲ್ಲಿ ಕಲಿತು ಭರತನಾಟ್ಯ ಮತ್ತು ಯಕ್ಷಗಾನದಲ್ಲಿ ಪಳಗಿದ್ದರು. ಎಳೆಯ ಪ್ರಾಯದಲ್ಲಿಯೇ ತಂದೆ ತಾಯಿಯ ನೃತ್ಯ ಗರಡಿಯಲ್ಲಿ ಪಳಗಿದ ಆಸ್ತಿಕಾ ಒಂದು ಕಲಾ ಕುಟುಂಬದಲ್ಲಿ ಜನಿಸಿದ ಕಲಾವಿದೆಯಾಗಿ ಸುದೀರ್ಘ ಕಾಲ ಕಲಾಸರಸ್ವತಿಯನ್ನು ಆರಾಧಿಸುತ್ತಾ ಬಂದು ಎಲ್ಲರಿಗೂ ಅಚ್ಚು ಮೆಚ್ಚಿನವರಾಗಿದ್ದವರು. ವಿವಾಹದ ಬಳಿಕ ಬಹರೈನ್ ನಲ್ಲಿ ಪತಿಯ ಜೊತೆ ನೆಲೆಸಿ ಇಲ್ಲಿಯ ಕಲೆಯನ್ನು ಅಲ್ಲಿ ಪರಿಚಯಿಸಿದರು. ಬಹರೈನ್ ಯಕ್ಷಗಾನ ರಂಗದಲ್ಲಿ ಅವರು ಸುಧನ್ವ ಮೋಕ್ಷದ ಕೃಷ್ಣನಾಗಿ, ಕೋಟಿ-ಚೆನ್ನಯದ ಕಿನ್ನಿದಾರುವಾಗಿ, ಶಾಂಭವಿ ವಿಲಾಸದ ಶಾಂಭವಿ…
10 ಮಾರ್ಚ್ 2023, ಉಳ್ಳಾಲ: ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಜಿಸಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಇದೇ 17ರಂದು ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕಿನ ಮೊದಲ ಸಾಹಿತ್ಯ ಸಮ್ಮೇಳನ ಇದಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಮತ್ತು ತಜ್ಞರ ಸಮಿತಿ ಶ್ರೀಮತಿ ಶ್ಯಾಮಲಾ ಮಾಧವ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದು ಕಸಾಪ ಉಳ್ಳಾಲ ಘಟಕದ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಉಳ್ಳಾಲ ಸೋಮೇಶ್ವರದ ಯು. ನಾರಾಯಣ ಮತ್ತು ವಸಂತಿ ದಂಪತಿಯ ಪುತ್ರಿ ಶ್ಯಾಮಲಾ ಮಾಧವ ಅವರು ಮುಂಬೈಯಲ್ಲಿ ವಾಸವಾಗಿದ್ದು, ಹಿಂದಿ ಕಾದಂಬರಿ ‘ಅಲಂಪನಾ’, ಇಂಗ್ಲೀಷ್ ವಿಶ್ವ ಸಾಹಿತ್ಯ ಕೃತಿಗಳಾದ ‘ಗಾನ್ ವಿದ್ ದ ವಿಂಡ್’, ಫ್ರಾಂಕ್ಲಿನ್ ಸ್ಟೈನ್’, ‘ಜೇನ್ ಏರ್’, ‘ವುದರಿಂಗ್ ಹೈಟ್ಸ್’, ರಾಮಯ್ಯ ರೈ ಅವರ ‘ಪೊಲೀಸ್ ಡೈರಿ’, ಎಂ.ಆರ್. ಪೈ ಅವರ ‘ಏನ್ ಅನ್ ಕಾಮನ್ ಕಾಮನ್ ಮ್ಯಾನ್’…