Author: roovari

‘ಮಾತಾ’ ನಾಟಕವು ಮೇ 17ರಂದು ಬೆಂಗಳೂರಿನಲ್ಲಿ ಚೊಚ್ಚಲ ಪ್ರದರ್ಶನವನ್ನು ಕಂಡಿದ್ದು, ಮೇ 21ರಂದು 4ನೇ ಪ್ರಯೋಗವು ನೆರವೇರಿದೆ. ‘ಮಾತಾ’ ನಾಟಕದ ಬಗ್ಗೆ : ಕನ್ನಡ ರಂಗಭೂಮಿಯ ಚರಿತ್ರೆಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತ ಮಹಿಳೆಯರ ಕುರಿತಾದ ನಾಟಕಗಳು ಬೆರಳೆಣಿಕೆಯಷ್ಟು ಮಾತ್ರ. ಅದರಲ್ಲೂ, ಜೋಗತಿ ಸಂಪ್ರದಾಯ ಮತ್ತು ಜೋಗತಿ ಕಲೆಯನ್ನು ಕುರಿತಾದ ನಾಟಕದ ಹಿನ್ನೆಲೆಯಲ್ಲಿ ಹೇಳುವುದೇ ಆದರೆ ಕನ್ನಡದ ಮಟ್ಟಿಗೆ ‘ಮಾತಾ’ ಅಗ್ರ ಸ್ಥಾನದಲ್ಲಿ ನಿಲ್ಲುತ್ತದೆ. ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿಯವರ ಜೀವನವನ್ನು ಆಧರಿಸಿದ ನಾಟಕವಾದರೂ ಗಂಡಿನ ಒಳಗಿರುವ ಹೆಣ್ತನ, ಜನಪದ ಕಲಾಸಕ್ತಿ, ರಂಗಭೂಮಿಯ ವಾತಾವರಣ, ಕೌಟುಂಬಿಕ ಸಾಮಾಜಿಕ ಹಿನ್ನಲೆ, ಸೃಜನಶೀಲತೆ ಮತ್ತು ಸಾಧನೆ ಹೀಗೆ ಮುಂತಾದ ನೆಲೆಗಳಲ್ಲಿ ಮಾತಾ ನಾಟಕ ಅನಾವರಣಗೊಳ್ಳುತ್ತದೆ. ಜೋಗತಿ ಹಾಗೂ ಎಲ್ಲವ್ವನ ಪರಂಪರೆ ನಾಟಕದ ಜೀವಾಳವಾಗಿದೆ. ಅಷ್ಟೆ ಅಲ್ಲದೇ ಮನುಷ್ಯನನ್ನು ಮನುಷ್ಯನೇ ಅತ್ಯಂತ ಹೀನವಾಗಿ ನೋಡುವ ಮನಸ್ಥಿತಿಯನ್ನು ಕನ್ನಡಿ ಹಿಡಿದಂತೆ ಮನುಷ್ಯನಿಗೇ ಅರ್ಥ ಮಾಡಿಸುತ್ತದೆ. ಅರುಣ್ ಜೋಳದ ಕೂಡ್ಲಿಗಿ ಅವರು ಮಂಜಮ್ಮ ಜೋಗತಿಯವರ ಆತ್ಮ ಕಥನ ‘ನಡುವೆ ಸುಳಿವ ಹೆಣ್ಣು’…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಕುರ್ನಾಡು ಸಹಯೋಗದೊಂದಿಗೆ ದಿನಾಂಕ 25-05-2023ರಂದು ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಕವನ ಸ್ಪರ್ಧೆ ಕಾರ್ಯಕ್ರಮ’ವು ಸೂರಜ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕೀರ್ತನ ಎಂ — ಪ್ರಥಮ ಪಾತಿಮಾತುಲ್ ಆಶಿಕಾ – ದ್ವಿತೀಯ ಪಾತಿಮಾತುಲ್ ಅಪೀಪಾ — ತೃತೀಯ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಬಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ಇವರ ಅಧ್ಯಕ್ಷತೆಯಲ್ಲಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ 2021 ಇದರ ದತ್ತಿ ಕೊಡುಗೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಸುಮಾರು 35 ಮಂದಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗಿದೆ. ಸ್ಪರ್ಧೆಯಲ್ಲಿ ಪ್ರಥಮ,…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠ, ಡಾ.ಜಿ.ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕನ್ನಡ ವಿಭಾಗ ಮತ್ತು ಅಜ್ಜರಕಾಡು ಸಾಹಿತ್ಯ ಸಂಘದ ಸಹಯೋಗದಲ್ಲಿ ದಿನಾಂಕ 24-05-2023ರಂದು ಡಾ.ಜಿ.ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಡಾ.ಗಣನಾಥ ಶೆಟ್ಟಿ ಎಕ್ಕಾರು “ರಾಣಿ ಅಬ್ಬಕ್ಕ ತುಳುನಾಡಿನಲ್ಲಿ ಕೇವಲ ಪ್ರತಿಮೆಯಾಗಿ ಉಳಿದಿಲ್ಲ ಮಹಿಳಾ ಸ್ವಾಭಿಮಾನದ ಸಂಕೇತವಾಗಿ ತುಳುವರ ಬದುಕಿನ ಭಾಗವಾಗಿ ಇತಿಹಾಸದ ಪುಟಗಳಲ್ಲಿ ಕಾಣಿಸಿಕೊಳ್ಳುವ ವೀರ ಮಹಿಳೆ” ಎಂದು ಅಭಿಪ್ರಾಯಪಟ್ಟರು. ಪ್ರೊ. ಭಾಸ್ಕರ ಶೆಟ್ಟಿ ಎಸ್. ಇವರ ಅಧ್ಯಕ್ಷತೆಯಲ್ಲಿ ‘ರಾಣಿ ಅಬ್ಬಕ್ಕ ಮತ್ತು ತುಳುನಾಡಿನ ಸಾಂಸ್ಕೃತಿಕ ಅನನ್ಯತೆ’ ಎಂಬ ವಿಷಯದ ಕುರಿತು ಡಾ.ಜ್ಯೋತಿ ಚೇಳಾಯರು ಉಪನ್ಯಾಸ ನೀಡಿದರು. ತುಳುನಾಡಿನಲ್ಲಿ ಸಮೃದ್ಧ ಜಾನಪದ ಇತಿಹಾಸ ಇದೆ. ಆದರೆ, ತುಳುನಾಡಿನ ಪಾಡ್ಡನಗಳಲ್ಲಿ ಎಲ್ಲಿಯೂ ಅಬ್ಬಕ್ಕ ರಾಣಿಯ ಕುರಿತು ಪ್ರಸ್ತಾಪ ಬಾರದಿರಲು ಕಾರಣ ಏನು ಎಂಬ ಪ್ರಶ್ನೆಯನ್ನು ಮುಂದಿಟ್ಟರು. ವಿದ್ಯಾರ್ಥಿ ಪ್ರತಿನಿಧಿ ಮಂಗಳ ಗೌರಿ…

Read More

ಉಡುಪಿ : ಉಡುಪಿ ರಥಬೀದಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ನೇತೃತ್ವದಲ್ಲಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲೆ ಹಾಗೂ ಸಂಗಮ ಜಾನಪದ ಕಲಾಮೇಳ ಕಲ್ಮಾಡಿ ಉಡುಪಿ ಇವರ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯು ದಿನಾಂಕ 21-05-2023ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ “ಭಗವಂತನನ್ನು ಒಲಿಸುವ ಸುಲಭ ಮಾರ್ಗವೇ ಭಜನೆ. ಭಗವಂತನ ನಾಮ ಸ್ಮರಣೆಯನ್ನು ನಿರಂತರ ಭಜಿಸುವವರಿಗೆ ಮೋಕ್ಷವನ್ನೂ ಕರುಣಿಸುವ ಶಕ್ತಿ ಭಜನೆಗಿದೆ. ಭಜನೆ ಭಕ್ತಿಮಾರ್ಗದ ಮುಖ್ಯ ಅಂಗ. ಭಜನೆ ಎಂದರೆ ಭಗವಂತನ ಸ್ತುತಿ ಎಂದರ್ಥ. ಕುಳಿತು ಏಕಾಗ್ರತೆಯಿಂದ ಭಗವನ್ನಾಮ ಸ್ಮರಣೆಯಲ್ಲಿ ಮೈಮರೆತರೆ, ಕುಣಿತ ಭಜನೆಯಲ್ಲಿ ಕುಣಿಯುತ್ತಾ ಹಾಡುತ್ತಾ ಮೈಮರೆಯುವುದು ಕೂಡಾ ಭಗವಂತನ ಸೇವೆಯೇ ಆಗಿದೆ. ಜಾನಪದ ಸೊಗಡಿನಿಂದ ಕೂಡಿರುವ ಈ ಭಜನೆ ಅಧ್ಯಾತ್ಮದ ಕೊಂಡಿಯಾಗಿದೆ. ಶ್ರೀಕೃಷ್ಣನ ಸನ್ನಿಧಾನದಲ್ಲಿ ಇಂತಹ ಉಪಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಂಡ ತಲ್ಲೂರು ಫ್ಯಾಮಿಲಿ…

Read More

ಬೆಂಗಳೂರು : ಕನ್ನಡ ಸಾರಸ್ವತ ಲೋಕದ ವಿಮರ್ಶಕ ಎಂದು ಗುರುತಿಸಿಕೊಂಡ ವಿಶ್ರಾಂತ ಪ್ರಾಧ್ಯಾಪಕ 88 ವರ್ಷದ ಹಿರಿಯ ಸಾಹಿತಿ, ವಿದ್ವಾಂಸ ಪ್ರೊ. ಜಿ.ಎಚ್. ನಾಯಕ ಅವರು ದಿನಾಂಕ 26-05-2023ರಂದು ನಮ್ಮನ್ನು ಅಗಲಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ.ಜಿ.ಎಚ್. ನಾಯಕ ಎಂದೇ ಚಿರಪರಿಚಿತರಾಗಿರುವ ವಿಮರ್ಶಕ ಗೋವಿಂದರಾಯ ಹಮ್ಮಣ್ಣ ನಾಯಕ ಅವರು 1935 ಸೆಪ್ಟೆಂಬರ 18ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದ್ದರು. ಅಂಕೋಲೆಯಲ್ಲಿ ತನ್ನ ಬಾಲ್ಯವನ್ನು ಕಳೆದ ಅವರಲ್ಲಿ ಸ್ವಾಭಾವಿಕವಾಗಿಯೇ ಸ್ವಾತಂತ್ರ್ಯದ ಕಿಚ್ಚು ಹತ್ತಿಕೊಂಡಿತ್ತು. ಪರಿಣಾಮವಾಗಿ ತಮ್ಮ ಇಪ್ಪತ್ತನೆಯ ವಯಸ್ಸಿನಲ್ಲೇ ಚಲೇಜಾವ್ ಚಳವಳಿಯಲ್ಲಿ ಭಾಗವಹಿಸಿದ್ದ ಪ್ರೊ. ನಾಯಕರು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಅವರು ನಾಡಿನಾದ್ಯಂತ ಅಪಾರ ಶಿಷ್ಯ ವೃಂದವನ್ನು ಹೊಂದಿದ್ದು ತಮ್ಮ ನೇರ ನುಡಿಯಿಂದಲೇ ಪ್ರಖ್ಯಾತರಾಗಿದ್ದರು. ಕೇಂದ್ರ ಮತ್ತು ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿ ಅನೇಕ ವಿದ್ವತ್ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದರು.…

Read More

ಮಂಗಳೂರು : ದೇರೆಬೈಲು ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನಗರದ ನೃತ್ಯ ಸುಧಾ ಸಂಸ್ಥೆಯ ವಿದುಷಿ ಸೌಮ್ಯಾ ಸುಧೀಂದ್ರ ರಾವ್ ಅವರ ಶಿಷ್ಯ ವರ್ಗ ದಿನಾಂಕ :23-05-2023 ಮಂಗಳವಾರ ರಾತ್ರಿ ಪ್ರಸ್ತುತಪಡಿಸಿದ ಭರತನಾಟ್ಯ ಕಾರ್ಯಕ್ರಮ ಕಲೆ ಮತ್ತು ಭಕ್ತಿ ಮೇಳೈಸಿ ಸಂಭ್ರಮದ ವಾತಾವರಣ ಸೃಷ್ಟಿಸಿತು. ಭಾವಪೂರ್ಣ ನಾಟ್ಯಭಂಗಿ ಮತ್ತು ಮೋಹಕ ಆಂಗಿಕ ಅಭಿನಯದ ಮೂಲಕ ಕಥಾಸಾರವನ್ನು ಪ್ರಸ್ತುತಪಡಿಸಿದ ಕಲಾವಿದರು ಸಹೃದಯಿಗಳನ್ನು ರಸಸಾಗರದಲ್ಲಿ ಮುಳುಗೇಳುವಂತೆ ಮಾಡಿದರು. ಕೃಷ್ಣನ ಲೀಲೆ, ರಾಮನ ಮಹಿಮೆ ಮತ್ತು ಹನುಮನ ನಿಷ್ಠೆ ಇತ್ಯಾದಿಗಳನ್ನು ನೃತ್ಯ ರೂಪಕದ ಮೂಲಕ ಕಂಡ ಕಲಾಪ್ರೇಮಿಗಳ ಮನಸ್ಸು ಭಕ್ತಿ-ಭಾವದಲ್ಲಿ ಆರ್ದ್ರವಾಯಿತು. ಪುಷ್ಪಾಂಜಲಿಯ ನಂತರ ಗೌಳ ರಾಗದಲ್ಲಿ ಏಕದಂತ ಗಣೇಶನ ಸ್ತುತಿಯ ಮೂಲಕ ಪ್ರೇಕ್ಷಕರ ಮನೋರಂಗಕ್ಕೆ ಕಲಾವಿದರು ಪ್ರವೇಶ ಮಾಡಿದ ಬೆನ್ನಲ್ಲೇ ಚಿಕ್ಕಮಕ್ಕಳು ಪ್ರಸ್ತುತಪಡಿಸಿದ ಗಣೇಶ, ಸರಸ್ವತಿ ಮುಂತಾದವರನ್ನು ಕೊಂಡಾಡುವ ನಾಲ್ಕು ಶ್ಲೋಕಗಳ ಗುಚ್ಛವು ಮುದ ನೀಡಿತು. ಬೇಹಾಗ್ ರಾಗದಲ್ಲಿ ಡಿವಿಜಿ ಅವರ ಅಂತಃಪುರ ಗೀತೆಗಳ ‘ಏನೇ…

Read More

ಮಂಗಳೂರು : ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಿನಾಂಕ 19-05-2023 ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಹಾಗೂ ವಿವಿ ಕಾಲೇಜಿನ ಕನ್ನಡ ವಿಭಾಗ ಮತ್ತು ಕನ್ನಡ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ‘ಅಂಬಿಗರ ಚೌಡಯ್ಯ : ವಚನ ಮೀಮಾಂಸೆ’ ಎಂಬ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಆರ್. ಜೈನ್ ಅವರು “ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ನಿಖರವಾದ ಗುರಿಯಿದ್ದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಗುರಿ ಸ್ಪಷ್ಟವಾಗಿದ್ದರೆ ಯಾರೂ ನಮ್ಮನ್ನು ಗೊಂದಲಕ್ಕೀಡುಮಾಡುವಂತಿಲ್ಲ. ಅರ್ಹರ ಜೊತೆ ಮಾತುಕತೆ, ವಿಶ್ಲೇಷಣೆ ನಮ್ಮ ಗುರಿಯನ್ನು ನಿಖರವಾಗಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲಾಗದಿದ್ದರೆ ನಮ್ಮ ಋಣಾತ್ಮಕ ಅಂಶಗಳೆಡೆಗೆ ಗಮನಹರಿಸಬೇಕು. ಯಾವುದೇ ನೆಪವೊಡ್ಡಿದ ನಮ್ಮ ಕೊರತೆಯನ್ನು ಒಪ್ಪಿಕೊಳ್ಳಬೇಕು” ಎಂದರು. ತಮ್ಮ ಆಶಯ ನುಡಿಗಳಲ್ಲಿ ಮದರಾಸು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್‌ನ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರು ಡಾ. ತಮಿಳ್…

Read More

ಧಾರವಾಡ: ಧಾರವಾಡದ ಅಭಿನಯ ಭಾರತಿ ಪ್ರದರ್ಶಿಸುವ, ಶ್ರೀ ಗಜಾನನ ಯುವಕ ಮಂಡಳ (ಶೇಷಗಿರಿ ಕಲಾತಂಡ ) ಪ್ರಸ್ತುತಪಡಿಸುವ ‘ಚಾವುಂಡರಾಯ’ ನಾಟಕವು ದಿನಾಂಕ 28-05-2023ರ ಸಂಜೆ ಕರ್ನಾಟಕ ಕಾಲೇಜು ಆವರಣದಲ್ಲಿರುವ ಅಣ್ಣಾಜಿರಾವ ಸಿರೂರ ರಂಗ ಮಂದಿರ ‘ಸೃಜನಾ’ ದಲ್ಲಿ ಪ್ರದರ್ಶನಗೊಳ್ಳಲಿದೆ . ಜಯರಾಮ್ ರಾಯ್‌ಪುರ ರಚಿಸಿದ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಶ್ವೇತಾರಾಣಿ ಎಚ್. ಕೆ ಅವರದ್ದು. ಹರೀಶ ಗುರಪ್ಪನವರ ಬೆಳಕಿನ ವಿನ್ಯಾಸ ಮಾಡುವ ಈ ನಾಟಕಕ್ಕೆ ಡಾ. ಶ್ರೀಪಾದ ಭಟ್ ಸಂಗೀತ ನೀಡಿದ್ದು ಗಣೇಶ್ ಹೆಗ್ಗೋಡು ಮತ್ತು ಲಕ್ಷ್ಮಣ ರೊಟ್ಟಿ ಸಂಗೀತ ನಿರ್ವಹಿಸಲಿರುವರು.

Read More

ಮಂಗಳೂರು: ‘ಸರಯೂ ಬಾಲ ಯಕ್ಷ ವೃಂದ ಕೋಡಿಕಲ್’ ಇವರು ಕದ್ರಿ ದೇವಸ್ಥಾನ ಸಹಕಾರದೊಂದಿಗೆ ನಡೆಯುವ ಸರಯೂ ಬಾಲ ಯಕ್ಷ ವೃಂದದ 23ನೇ ವರ್ಷದ ಸಪ್ತಾಹವನ್ನು ದಿನಾಂಕ 25-05-2023ರಂದು ವೇದಮೂರ್ತಿ ನರಸಿಂಹ ತಂತ್ರಿಗಳು ಶ್ರೀ ಕ್ಷೇತ್ರ ಕದ್ರಿ ದೇವಳದ ರಾಜಾಂಗಣದಲ್ಲಿ ಉದ್ಘಾಟಿಸುತ್ತಾ “ಯಕ್ಷಗಾನವು ಸರ್ವರನ್ನೂ ತಲಪುವ ರಂಗ ಕಲೆ, ಹಿರಿಯರಿಂದಾರಂಭಿಸಿ ಕಿರಿಯರವರೆಗೂ ಅದು ಸರ್ವವ್ಯಾಪಿಯಾಗಿ ಆಕರ್ಷಿಸುತ್ತಿದೆ. ಹೊಸ ಚಿಗುರು ಚಿಣ್ಣರು ಸರಯೂ ಸಂಸ್ಥೆಯ ಮೂಲಕ ಜಗತ್ತಿಗೇ ಪರಿಚಯಿಸಲ್ಪಡುತ್ತಾರೆ. 23 ವರ್ಷಗಳಿಂದ ಅನೇಕ ವಿದ್ಯಾರ್ಥಿಗಳು ರಂಗಕ್ಕೆ ಪರಿಚಯಿಸಲ್ಪಟ್ಟಿದ್ದಾರೆ. ಮೇಳಗಳಲ್ಲೂ ಕಲಾವಿದರಾಗಿ ಕಲಾಸೇವೆ ನಡೆಸುತ್ತಿದ್ದಾರೆ. ಪತ್ತನಾಜೆಯ ಈ ದಿನದಿಂದಾರಂಭವಾಗುವ ಈ ಮಕ್ಕಳ ಮೇಳಕ್ಕೆ ಸಪ್ತಾಹಕ್ಕೆ ಶುಭ ಕೋರುತ್ತೇನೆ” ಎಂದು ಕಿಶೋರರಿಗೆ ಶುಭವನ್ನು ಕೋರಿದರು. ಸಂಸ್ಥೆಯ ಗೌರವ ಸಂಚಾಲಕರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು “ಸಂಸ್ಥೆಯ ಏಳು-ಬೀಳುಗಳನ್ನು ವಿವರಿಸುತ್ತಾ ಕಲೆಗೆ ರಾಜಾಶ್ರಯ ಬೇಕು. ಆ ಕಾರ್ಯವನ್ನು ಸಜ್ಜನ ಕಲಾಪೋಷಕರು ಮಾಡಬೇಕು. ಸರಯೂ ಸಂಸ್ಥೆಯನ್ನು ಎಲ್ಲರೂ ಸೇರಿ ಬೆಳೆಸೋಣ” ಎಂದರು. ಮುಖ್ಯ ಅತಿಥಿಗಳಾಗಿ ಎಸ್.ಸಿ ಎಸ್. ಕಾಲೇಜಿನ…

Read More

ಮೈಸೂರು : ಮೈಸೂರಿನ ‘ಸಮತಾ ಅಧ್ಯಯನ ಕೇಂದ್ರ’ವು ಸ್ಥಾಪಕ ಅಧ್ಯಕ್ಷೆ ಡಾ.ವಿಜಯಾ ದಬ್ಬೆ ಅವರ ನೆನಪಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ‘ಕವನ/ಕಥಾ ಸ್ಪರ್ಧೆ-2023’ಯ ಕವನ ವಿಭಾಗದಲ್ಲಿ ಬೆಂಗಳೂರು ವಿಜಯಾ ಟೀಚರ್ಸ್‌ ಕಾಲೇಜಿನ ಎಂ.ಸಿ.ಜಗದೀಶ ಪ್ರಥಮ, ಕಾಸರಗೋಡಿನ ಕೇರಳ ಕೇಂದ್ರೀಯ ವಿವಿಯ ಕೆ. ಸ್ವಾತಿ ದ್ವಿತೀಯ ಹಾಗೂ ಸಾಗರ ತಾಲೂಕು ಹೊಸಕೊಪ್ಪದ ಎಚ್‌.ಜಿ. ಅಭಿನಂದನ್ ತೃತೀಯ ಬಹುಮಾನ ಪಡೆದಿದ್ದಾರೆ. ಪ್ರೋತ್ಸಾಹಕರ ಬಹುಮಾನ ಪಡೆದವರು ಪಿ. ರಂಜಿತಾ (ಕೇರಳ ಕೇಂದ್ರೀಯ ವಿವಿ), ಜಿ.ಎಂ ಸಂಜಯ್ (ಉಜಿರೆ ಎಸ್‌.ಡಿ.ಎಂ. ಕಾಲೇಜು), ಚೇತನ್ (ಮೈಸೂರು ಕುವೆಂಪು ನಗರ ಪ್ರ.ದ.ಕಾಲೇಜು), ತರುಣ್‌ ವಿಶ್ವಜಿತ್ (ಚಿಕ್ಕ ಬಳ್ಳಾಪುರ, ಪ್ರ.ದ.ಕಾಲೇಜು), ಎನ್.ಲಾವಣ್ಯ (ಎಚ್.ಡಿ.ಕೋಟೆ ತಾ.ರಾಗಲಕುಪ್ಪೆ), ಲಕ್ಷ್ಮಿ ಶ್ರೀಶೈಲ ಕಾತ್ರಾಳ (ಹೊನವಾಡ, ವಿಜಯಪುರ ಜಿಲ್ಲೆ), ಆನಂದ ಕುಮಾರ್ (ಮೈಸೂರು ಸಿದ್ಧಾರ್ಥ ನಗರ ಪ್ರ.ದ.ಕಾಲೇಜು), ಬಿ.ಎಸ್‌. ಕಿಶನ್‌ ಗೌಡ (ಮೂಡುಬಿದಿರೆ ಆಳ್ವಾಸ್ ಕಾಲೇಜು), ಶಿಲ್ಪಾ ಶ್ರೀನಿವಾಸ ರಾಜು (ಸಂತ ಫ್ರಾನ್ಸಿಸ್ ಕಾಲೇಜು, ಕೋರಮಂಗಲ), ಸುಮಾ ಎಂ. (ಸುರಾನಾ ಕಾಲೇಜು, ಪೀಣ್ಯಾ ಕ್ಯಾಂಪಸ್).…

Read More