Author: roovari

ಬೆಂಗಳೂರು : ಚಿಗುರು ಕಲ್ಚರಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ‘ಹೆಜ್ಜೆ ಗೆಜ್ಜೆ’ ಶೀರ್ಷಿಕೆಯಡಿ ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಕ್ಕಳಿಂದ ಹಿರಿಯರವರೆಗೆ ನಾಲ್ಕು ಪ್ರತ್ಯೇಕ ತಂಡಗಳಲ್ಲಿ ಸ್ಪರ್ಧೆ ನಡೆಯಲಿದೆ. 3ರಿಂದ 8 ವರ್ಷದೊಳಗಿನ ಮಕ್ಕಳಿಗೆ ಸಬ್ ಜೂನಿಯರ್, 9ರಿಂದ 14 ವರ್ಷದೊಳಗಿನ ಮಕ್ಕಳಿಗೆ ಜೂನಿಯರ್, 15ರಿಂದ 20 ವರ್ಷದೊಳಗಿನವರಿಗೆ ಸೀನಿಯರ್ ವಿಭಾಗದಲ್ಲಿ ಹಾಗೂ 20 ವರ್ಷ ಮೇಲ್ಪಟ್ಟವರಿಗೆ ಸೂಪರ್ ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೋಲೊ ಮತ್ತು ಸಮೂಹ ಸ್ಪರ್ಧೆ ಕೂಡ ಇದೆ. ಸ್ಪರ್ಧೆಯು ಜೂ.25ರಂದು ನಡೆಯಲಿದೆ. ಪ್ರತಿ ವಿಭಾಗದಲ್ಲೂ ಮೂವರು ವಿಜೇತರಿಗೆ ವಿಶೇಷ ಪ್ರಶಸ್ತಿಗಳನ್ನು ನೀಡಲಾಗುವುದು. ಜತೆಗೆ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಗುವುದು. ಆಸಕ್ತರು ಜೂನ್ 3ರೊಳಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಮಾಹಿತಿಗೆ ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ : 98866 13199.

Read More

ಕುಂದಾಪುರ : ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ.) ಕುಂದಾಪುರ ಇವರು ಜೆ.ಸಿ.ಐ. ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಮೇ ತಿಂಗಳ ಓದು’ ಅವಿಭಜಿತ ಕುಂದಾಪುರ ತಾಲೂಕು ಮಟ್ಟದ ಕವಿಗೋಷ್ಠಿಯು ದಿನಾಂಕ 28-05-2023ರಂದು ಕುಂದಾಪುರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಜೆ.ಸಿ.ಐ. ಭವನದಲ್ಲಿ ನಡೆಯಲಿದೆ. ವಿಲ್ಸನ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ರೇಖಾ ಬನ್ನಾಡಿ, ರಾಮಕೃಷ್ಣ ಹೇರ್ಳೆ, ಸುಧಾ ಅಡುಕಳ, ಅಭಿಲಾಷಾ ಹಂದೆ, ಅಬ್ದುಲ್ ರವೂಫ್ ಇವರುಗಳ ವಿಶೇಷ ಉಪಸ್ಥಿತಿಯಲ್ಲಿ ಈ ಕವಿಗೋಷ್ಠಿಯು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಂಕರ ಕೆಂಚನೂರು, ಶಶಿಧರ ಹೆಮ್ಮಾಡಿ, ಉದಯ ಗಾಂವಕರ, ಸಂತೋಷ ಗುಡ್ಡಿಯಂಗಡಿ, ವಿಜಯಶ್ರೀ ಹಾಲಾಡಿ, ಸಂಪೂರ್ಣಾನಂದ ಬಳ್ಳೂರು, ಜಯಲಕ್ಷ್ಮಿ ಸತೀಶ್, ಶರತ್ ಶೆಟ್ಟಿ ವಂಡ್ಸೆ, ಸಚಿನ್ ಅಂಕೋಲ, ವಿಜಯಕುಮಾರ ಕುಂಭಾಶಿ, ಮಂಜುನಾಥ್ ಚಾಂದ್, ರಾಮು ಯು. ಸಿರಿಗೆರೆ, ಉಪ್ಪಿನಕುದ್ರು, ಸುಜಿತ್ ಕಾರ್ಕಳ, ರೇವತಿ ರಾಮ್, ಶ್ರೀಕಲಾ ಅಮರೇಶ ಶೆಟ್ಟಿಗಾರ, ವಿನಯಾ ಕೌಂಜೂರು, ಮಂಜುನಾಥ ಮಧ್ಯಸ್ಥ, ಲೋಲಾಕ್ಷಿ ಮರವಂತೆ, ಗಣೇಶ ಭಟ್, ರಾಘವೇಂದ್ರ ಡಿ. ಆಲೂರು, ದಿಶಾ ಗುಲ್ವಾಡಿ,…

Read More

ಕಾಸರಗೋಡು: ರಂಗ ಚಿನ್ನಾರಿಯ 17ನೆಯ ವಾಷಿ೯ಕೋತ್ಸವವು ನಾರಿಚಿನ್ನಾರಿಯ ಸಹಯೋಗದೊಂದಿಗೆ  ಎಡನೀರು ಶ್ರೀ ಸ್ವಾಮೀಜೀಸ್ ಹೈಯರ್  ಸೆಕೆಂಡರಿಯ ಸಭಾಂಗಣದಲ್ಲಿ 20-05 2023 ರಂದು ಅಥ೯ಪೂಣ೯ವಾಗಿ ಜರಗಿತು. ನಾರಿಚಿನ್ನಾರಿಯ ಸದಸ್ಯೆಯರಾದ  ಉಷಾ ರಾಮ್, ಗೀತಾ ಭಟ್ ಹಾಗೂ ವಿಜಯಲಕ್ಷ್ಮೀ ಶಾನುಭೋಗರ ಪ್ರಾಥ೯ನೆಯೊಂದಿಗೆ ಆರಂಭವಾದ ಕಾಯ೯ಕ್ರಮವನ್ನು  ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ರಂಗಚಿನ್ನಾರಿಯ ಅಧ್ಯಕ್ಷ ರಾದ ಕಾಸರಗೋಡು ಚಿನ್ನಾ ಅವರು ಸಂಘಟನೆಯ ಹುಟ್ಟು ಮತ್ತು ನಡೆದು ಬಂದ ದಾರಿಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನು ಆಡಿ ಮುಂದಿನ ಯೋಜನೆಗಳ ಕುರಿತು ತಮ್ಮ ಕನಸನ್ನು ಬಿಚ್ಚಿಟ್ಟರು. ರಂಗಚಿನ್ನಾರಿಯ  ಶ್ರೀ ಕೇಶವಾನಂದ ಪ್ರಶಸ್ತಿಗೆ ಭಾಜನರಾದ ಹಿರಿಯ ಯಕ್ಷಗಾನ ಕಲಾವಿದ ಪೂಕಳ ಲಕ್ಷ್ಮೀನಾರಾಯಣ ಭಟ್ಟ ರನ್ನು ಶಾಸಕ ಪ್ರತಾಪಸಿಂಹನಾಯಕ್ ಪೇಟತೊಡಿಸಿ,ಹಾರ,ಫಲ ತಾಂಬೂಲ, ಸ್ಮರಣಿಕೆ ನಗದು ನೀಡಿ ಗೌರವಿಸಿದರು.ಹಾಗೆಯೇ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ವಿಠಲ ಗಟ್ಟಿ ಉಳಿಯ ಮತ್ತು ಗಮಕ ಹಾಗೂ ಮಹಿಳಾ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಜಯಲಕ್ಷ್ಮೀ ಕಾರಂತರನ್ನು ಸನ್ಮಾನಿಸಿದರು. ರಂಗಚಿನ್ನಾರಿ ಯುವ ಪ್ರಶಸ್ತಿಯನ್ನು ಜಾನಪದ…

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 ಹಾಗೂ 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿವರ್ಷ ಪರಿಷತ್ತಿನ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅಧ್ಯಕ್ಷರಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿ ಸ್ಥಾಪಿಸಿದ್ದಾರೆ. 12,61,000 ( ಹನ್ನೆರಡು ಲಕ್ಷದ ಅರವತ್ತೊಂದು ಸಾವಿರ)ರೂ. ಗಳ ಖಾಯಂ ದತ್ತಿನಿಧಿಯನ್ನು ಸ್ಥಾಪಿಸಿರುತ್ತಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000 (ಮೂವತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.…

Read More

ಮೈಸೂರು: ಮಂಗಳೂರಿನ ‘ಆಕೃತಿ ಆಶಯ’ ಪ್ರಕಾಶನ 2022ರಲ್ಲಿ ಪ್ರಕಟಿಸಿದ ಲೇಖಕಿ ಬಿ.ಎಂ.ರೋಹಿಣಿ ಅವರ ‘ವೇಶ್ಯಾವಾಟಿಕೆಯ ಕಥೆ-ವ್ಯಥೆ’ ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸ್ಥಾಪಿಸಿರುವ ಈ ಪ್ರಶಸ್ತಿಗೆ 2019 – 2022 ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ ‘ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು’ ಆಹ್ವಾನಿಸಲಾಗಿದ್ದು, 46 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು. ಎಲ್ಲ ಕೃತಿಗಳನ್ನು ಅವಲೋಕಿಸಿದ ಡಾ. ಎಂ.ಉಷಾ, ಡಾ.ಸೆಲ್ವಕುಮಾರಿ ಮತ್ತು ಡಾ.ಆರ್.ಸುನಂದಮ್ಮ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಸಂಶೋಧನೆಯ ವಸ್ತು, ವ್ಯಾಪ್ತಿ, ವಿಷಯ ಮತ್ತು ಒಳನೋಟಗಳನ್ನು ಪರಿಗಣಿಸಿ ರೋಹಿಣಿಯವರ ಕೃತಿಯನ್ನು ಆಯ್ಕೆ ಮಾಡಿದೆ. ಸಾಹಿತ್ಯ ಪ್ರಶಸ್ತಿಯು 25,000 ರೂ. ನಗದು ಬಹುಮಾನ, ಫಲಕವನ್ನು ಒಳಗೊಂಡಿದ್ದು, ಜೂನ್ 1ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ರೋಹಿಣಿ ಪರಿಚಯ ಹೊಸ ವಿಚಾರ, ಆಲೋಚನೆಗಳಿಗೆ ಸದಾ ತೆರೆದುಕೊಳ್ಳುವ…

Read More

ಬೆಂಗಳೂರು : ಕಳೆದ 55 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದು, ತನ್ನದೇ ಆದ ಮಹತ್ವದ ಸ್ಥಾನವನ್ನು ಪಡೆದಿರುವ ಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ಕಾಲೇಜು ಹೊಸ ಶೈಕ್ಷಣಿಕ ವರ್ಷದ ಪತ್ರಿಕೋಧ್ಯಮದ ತರಗತಿಗಳನ್ನು ಆರಂಭಿಸುತ್ತಿದೆ. ಜುಲೈ2023ರಿಂದ ಆರಂಭವಾಗಲಿರುವ ಒಂದು ವರ್ಷದ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮೋದ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಮಾಡಿರುವು ಹಲವು ಸಾಧಕರು ಇಲ್ಲಿ ವಿಶೇಷ ತರಬೇತಿ ನೀಡುತ್ತಾರೆ. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕಾರ್ಪೋರೇಟ್ ಜರ್ನಲಿಸಂ ಮೂರೂ ಕ್ಷೇತ್ರದಲ್ಲಿ ಇಲ್ಲಿ ವಿಶೇಷ ತರಬೇತಿ ನೀಡಲಿದ್ದು ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸ ಬಹುದಾಗಿದೆ. ಪ್ರವೇಶಕ್ಕೆ ಮತ್ತು ಇತರ ವಿವರಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ಭಾರತೀಯ ವಿದ್ಯಾ ಭವನದ ಕಚೇರಿಯನ್ನು ಸಂಪರ್ಕಿಸ ಬಹುದು. ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ: 9538181140

Read More

ಮೈಸೂರು: ಮೈಸೂರಿನ ರಂಗಾಯಣ ವತಿಯಿಂದ ರಂಗ ಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲಮೊ ಕೋರ್ಸ್ ನ 2023-24 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು  ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಜೂನ್ 5 ಕೊನೇ ದಿನವಾಗಿದೆ. ರಂಗ ತರಬೇತಿ  ಕೋರ್ಸ್ ಗೆ ಸೇರ ಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಟ ದ್ವಿತೀಯ   ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷ ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ  ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಮತ್ತು ಮಾಹೆಯಾನ 5 ಸಾವಿರ ರೂಪಾಯಿಗಳ ವಿದ್ಯಾರ್ಥಿವೇತನ ಪಾವತಿಸಲಾಗುವುದು. ಹೆಚ್ಚಿನ ವಿವರಕ್ಕಾಗಿ  ದೂ: 0821-2512639, 9448938661, 9148827720 ಸಂಪರ್ಕಿಸಬಹುದು ಎಂದು ರಂಗಾಯಣದ ಉಪನಿರ್ದೇಶಕರು ತಿಳಿಸಿದ್ದಾರೆ.

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಆಯೋಜಿಸಿದ ‘ದತ್ತಿ ಉಪನ್ಯಾಸ’ ಕಾರ್ಯಕ್ರಮವು ದಿನಾಂಕ 19-05-2023ರಂದು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರೊ. ಉಪೇಂದ್ರ ಸೋಮಯಾಜಿಯವರು “ಓದುಗರೆಲ್ಲ ವೀಕ್ಷಕರಾಗಿ ಬದಲಾದ ಈ ಕಾಲಘಟ್ಟದಲ್ಲಿ ದತ್ತಿ ಉಪನ್ಯಾಸಗಳು ಮಹತ್ವವನ್ನು ಪಡೆಯುತ್ತಿದೆ. ಕಾದಂಬರಿಗಳ ಮರು ಓದು ಮತ್ತು ವಿಮರ್ಶೆ ಮಹತ್ವವನ್ನು ಪಡೆಯುತ್ತಿದೆ. ಇಂತಹ ಕಾರ್ಯಕ್ರಮಗಳು ಹಳ್ಳಿ ಹಳ್ಳಿಗಳಲ್ಲಿ ನಡೆದರೆ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಜನರು ಇನ್ನಷ್ಟು ಸ್ಪಂದಿಸುತ್ತಾರೆ” ಎಂದು ಹೇಳಿದರು. ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಐತಾಳರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕ.ಸಾ. ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗರು ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಯಾಗಿ ದತ್ತಿ ದಾನಿಗಳಾದ ಸೂರಾಲು ನಾರಾಯಣ ಮಡಿ ಹಾಗೂ ಯಕ್ಷಗಾನ ಕೇಂದ್ರ ಹಂಗಾರಕಟ್ಟೆಯ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್ ಭಾಗವಹಿಸಿದರು. ಸಭಾ ಕಾರ್ಯಕ್ರಮದ…

Read More

ಮಸ್ಕತ್: ಕಳೆದ ಮೂರು ದಶಕಗಳಿಂದ ಶನೀಶ್ವರ ಪೂಜಾ ಸಹಿತ ತಾಳಮದ್ದಳೆಯ ಹಿಮ್ಮೇಳ ಕಲಾವಿದರಾಗಿ, ಸಂಘಟಕರಾಗಿ ಪ್ರಸಿದ್ದಿ ಪಡೆದ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಓಮನ್ ಮಸ್ಕತ್ ನಲ್ಲಿ ಬಿರುವ ಜವನೆರ್ ಮಸ್ಕತ್ ನಲ್ಲಿ ಸನ್ಮಾನಿಸಿ ಗೌರವಿಸಿದರು. ಸಹೋದರ ನೋಣಯ್ಯ ಶೆಟ್ಟಿಗಾರ್ ಅವರಿಂದ ಬಾಲ ಪಾಠ, ಮುಂದೆ ದಿವಾಣ ಭೀಮ ಭಟ್ ಅವರಿಂದ ಚೆಂಡೆ ಮದ್ದಳೆ ಕಲಿತು ಹವ್ಯಾಸಿ ವಲಯದಲ್ಲಿ ಹಲವಾರು ಸಂಘಗಳಲ್ಲಿ ತಾಳಮದ್ದಳೆ, ಬಯಲಾಟಗಳಲ್ಲಿ ಹಿಮ್ಮೇಳ ವಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ಎಂಬ ತಂಡ ಕಟ್ಟಿ ಮಸ್ಕತ್, ದುಬೈ, ಅಬುದಾಬಿ, ಮುಂಬೈ ಹೀಗೆ ಊರು ಪರವೂರುಗಳಲ್ಲಿ ಶನಿ ಪೂಜೆ ತಾಳಮದ್ದಳೆ ಸಂಘಟಿಸಿದ್ದಾರೆ. ಎರಡನೇ ಸಲ ಮಸ್ಕತ್ ಗೆ ತಂಡ ಸಂಯೋಜಕರಾಗಿ ಆಗಮಿಸಿ ಸ್ವಾಮಿ ಕೊರಗಜ್ಜ, ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ ನಡೆಸಿಕೊಟ್ಟ ಪದ್ಮನಾಭ ಅವರನ್ನು ಕದ್ರಿ ನವನೀತ ಶೆಟ್ಟಿ ಹಾಗೂ ದಯಾನಂದ ಜಿ. ಕತ್ತಲ್ ಸಾರ್ ಪರಿಚಯಿಸಿ ಅಭಿನಂದಿಸಿದರು. ಬಿರುವ ಜವನೆರ್ ಸಂಘಟನೆಯ ಗುರುಪ್ರಸಾದ್ ರಾಮ…

Read More

ಕಾಸರಗೋಡು: ರಂಗ ಚಿನ್ನಾರಿಯ ಅಂಗ ಸಂಸ್ಥೆಯಾದ ನಾರಿ ಚಿನ್ನಾರಿಯ 5ನೆಯ ಸರಣಿ ಕಾರ್ಯಕ್ರಮ ‘ವೈಶಾಖ ಲಹರಿ’ಯು ದಿನಾಂಕ 20-05-2023ರಂದು ಎಡನೀರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರಗಿತು. ಸಭಾ ಕಾರ್ಯಕ್ರಮ ಆರಂಭವಾಗುವ ಮೊದಲು ಸುದೀರ್ಘಕಾಲ ಸೂಲಗಿತ್ತಿಯಾಗಿ ಕತ೯ವ್ಯ ನಿವ೯ಹಿಸಿ ಸೇವೆಯಿಂದ ನಿವೃತ್ತರಾದ ಬಳಿಕವೂ ಸಮಾಜ ಸೇವೆಯಲ್ಲಿ ಪ್ರವೃತ್ತರಾಗಿ ಪ್ರಸ್ತುತ ವಯೋಸಹಜ ಅನಾರೋಗ್ಯದಿಂದಿರುವ ಎಡನೀರು ನಿವಾಸಿ ಕಮಲಮ್ಮನವರನ್ನು ಅವರ ಮನೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಂಗ ಚಿನ್ನಾರಿಯ ಕಾಸರಗೋಡು ಚಿನ್ನಾ, ಕೋಳಾರು ಸತೀಶ್ ಚಂದ್ರ ಭಂಡಾರಿ, ಸತ್ಯನಾರಾಯಣ ಮಾಸ್ಟರ್, ನಾರಿ ಚಿನ್ನಾರಿಯ ಸವಿತಾ ಟೀಚರ್, ತಾರಾ ಜಗದೀಶ್, ದಿವ್ಯಾ ಗಟ್ಟಿ ಮತ್ತಿತರರು ಹಾಗೂ ಕಮಲಮ್ಮನವರ ಕುಟುಂಬದವರು ಉಪಸ್ಥಿತರಿದ್ದರು. ಮುಂದೆ ನಡೆದ ಸಭಾ ಕಾರ್ಯಕ್ರಮವು ಪೂಜಾ ಅವರ ಪ್ರಾಥ೯ನೆಯ ಮೂಲಕ ಆರಂಭಗೊಂಡಿತು. ಸಂಗೀತ ವಿದುಷಿ ಶ್ರೀಮತಿ ಉಷಾ ಈಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಚಾಲನೆಯನ್ನು ನೀಡಿದರು. ವಿದುಷಿ ಮತ್ತು ಖ್ಯಾತ ಅಭಿನೇತ್ರಿ ಮಾನಸಿ ಸುಧೀರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸಾಂಸ್ಕೃತಿಕ ಕೇಂದ್ರ ಎಡನೀರಿನಲ್ಲಿ ನಡೆಯುವ…

Read More