Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2018, 2019, 2020, 2021, 2022 ಹಾಗೂ2023ನೇ ಸಾಲಿನ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼಯನ್ನು ಪ್ರಕಟಿಸಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದೇ ಇರುವುದರಿಂದ ಈ ಬಾರಿ 6 ಜನ ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದ್ದಾರೆ. 2018 ನೇ ಸಾಲಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿರುವ ಕೋಲಾರದ ಶ್ರೀ ಕೋಟಿಗಾನಹಳ್ಳಿ ರಾಮಯ್ಯ, 2019ರ ಪ್ರಶಸ್ತಿಗೆ ಕಲಬುರಗಿಯ ಡಾ.ಎಚ್.ಟಿ. ಪೋತೆ, 2020ರ ಪ್ರಶಸ್ತಿಗೆ ವಿಜಯಪುರದ ಶ್ರೀಮತಿ ಇಂದುಮತಿ ಲಮಾಣಿ, 2021ರ ಪ್ರಶಸ್ತಿಗೆ ಬೆಂಗಳೂರಿನ ಡಾ.ಕಾ.ವೆಂ. ಶ್ರೀನಿವಾಸಮೂರ್ತಿ, 2022ರ ಪ್ರಶಸ್ತಿಗಾಗಿ ಗದಗದ ಡಾ.ಅರ್ಜುನ ಗೊಳಸಂಗಿ ಹಾಗೂ 2023ರ ಪ್ರಶಸ್ತಿಗೆ ಹಾಸನದ ಶ್ರೀ ನಾಗರಾಜ ಹೆತ್ತೂರು…
ಕರಾವಳಿಯ ಪ್ರಸಿದ್ಧ ಸ್ಥಾನವನ್ನು ಪಡೆದ ಕಲೆ “ಯಕ್ಷಗಾನ”. ಕರ್ನಾಟಕದ ಗಂಡು ಕಲೆಯಾಗಿರುವ ಯಕ್ಷಗಾನ ಪಾರ್ತಿಸುಬ್ಬರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜೃಂಭಿಸುತ್ತಿದೆ. ಇಂತಹ ಕಲೆಯಲ್ಲಿ ರಾರಾಜಿಸುತ್ತಿರುವ ಕಲಾವಿದ ಶಿವರಾಜ ಬಜಕೂಡ್ಲು. ಶ್ರೀಯುತ ಮೋಹನ ಹಾಗೂ ಸುಗಂಧಿ ಇವರ ಮಗನಾಗಿ 7.12.1997 ರಂದು ಜನನ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್.ಎನ್.ಎಚ್.ಎಸ್ ಪೆರ್ಲ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯಲ್ಲಿ ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರುತ್ತಾರೆ. ಯಕ್ಷಗಾನ ಕಲಿಯುವುದಕ್ಕೆ ಮೂಲ ಪ್ರೇರಣೆ ತಾಯಿ. ಸಬ್ಬಣಕೊಡಿ ರಾಮಭಟ್ ಇವರ ಯಕ್ಷಗಾನ ಗುರುಗಳು. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ :- ಮೇಳದ ಹಿರಿಯ ಕಲಾವಿದರಲ್ಲಿ ಕೇಳಿ ಮತ್ತು ಭಾಗವತರಲ್ಲಿ ಕೇಳಿ ಸಿದ್ಧತೆಯನ್ನು ಮಾಡಿಕೊಳ್ಳುತ್ತೇನೆ ಎಂದು ಹೇಳುತ್ತಾರೆ ಶಿವರಾಜ. ಅಭಿಮನ್ಯು ಕಾಳಗ, ಇಂದ್ರಜಿತು ಕಾಳಗ, ರಕ್ತರಾತ್ರಿ, ಸುದರ್ಶನ ವಿಜಯ, ತರಣಿಸೇನ ಕಾಳಗ, ಬಬ್ರುವಾಹನ ಕಾಳಗ, ಶ್ರೀನಿವಾಸ ಕಲ್ಯಾಣ ನೆಚ್ಚಿನ ಪ್ರಸಂಗಗಳು. ಅಭಿಮನ್ಯು, ಲಕ್ಷ್ಮಣ, ಅಶ್ವತ್ಥಾಮ, ಸುದರ್ಶನ, ಪರಶುರಾಮ ಇತ್ಯಾದಿ ನೆಚ್ಚಿನ ವೇಷಗಳು. ಯಕ್ಷಗಾನದ…
ಕುಳಾಯಿ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಳಾಯಿ ಇಲ್ಲಿನ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಮಂಡಳಿ ಆಯೋಜಿಸುವ ಮಾಸಿಕ ಹುಣ್ಣಿಮೆ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 01-08-2023ನೇ ಮಂಗಳವಾರ ಸಂಜೆ ಶ್ರೀ ದೇವಳದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ‘ಯಕ್ಷಮಿತ್ರರು ಪೊಳಲಿ’ ಇವರಿಂದ ‘ಗರುಡ ಗರ್ವಭಂಗ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಈ ಕಾರ್ಯಕ್ರಮದ ಹಿಮ್ಮೇಳದಲ್ಲಿ ಸರ್ವ ಶ್ರೀಗಳಾದ ಗಜಂತ್ತೋಡಿ ಸುಬ್ರಾಯ ಮಾಸ್ತರ್, ಸರಪಾಡಿ ಶಂಕರನಾರಾಯಣ ಕಾರಂತರು, ರಾಮಹೊಳ್ಳ ತಡಂಬೈಲ್, ವಿನಯ ಕಾರಂತ ಹಾಗೂ ಚಂದ್ರಶೇಖರ್ ಕಾರಂತ ಸಹಕರಿಸಿದರು. ಮುಮ್ಮೇಳದಲ್ಲಿ ಸರ್ವಶ್ರೀಗಳಾದ ಕೃಷ್ಣರಾವ್ ನರ್ಲಪದವು, ನೂಯಿ ರಾಜಶೇಖರ ಭಟ್, ನಾರಾಯಣ ರಾವ್ ಕದ್ರಿ, ಬಾಂಕೆ ರಮೇಶ್, ಜಯಕರ್ ಮಾಸ್ತರ್ ಕೈಕಂಬ, ಪಿ.ಪುರುಷೋತ್ತಮ ರಾವ್ ಕೃಷ್ಣಾಪುರ ಹಾಗೂ ಎನ್.ರಾಮಚಂದ್ರ ಕಾರಂತ್ ಭಾಗವಹಿಸಿದರು.
ಮಂಗಳೂರು : ದಿನಾಂಕ 03-08-2023ರಂದು ಮಂಗಳೂರಿನ ಶಾರದಾ ಪ.ಪೂ.ಕಾಲೇಜಿನಲ್ಲಿ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ‘ಸೌರಭ-2023’ನಡೆಯಿತು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ ವಿಭಾಗದ ನಿರ್ದೇಶಕ ಎಂ.ಶಶಿಧರ ಕೋಟ್ಯಾನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ “ಇಂದಿನ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಹಿಂದೆಂದಿಗಿಂತ ಹೆಚ್ಚು ಸೌಲಭ್ಯ ಮತ್ತು ಅವಕಾಶಗಳು ದೊರೆಯುತ್ತಿರುವುದು ಸಂತೋಷದ ವಿಚಾರ. ಇದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆ, ಅಂತಃಶಕ್ತಿಗಳನ್ನು ಹೊರ ಜಗತ್ತಿಗೆ ಪ್ರಸ್ತುತ ಪಡಿಸುವ ದಿಸೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗಾದಾಗ ಮಾತ್ರ ಅವರ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆ ಸಾಧ್ಯ. ಶಿಕ್ಷಣದೊಂದಿಗೆ ಸಂಸ್ಕೃತಿ ಸಂಪನ್ನರಾದ ಯುವಜನಾಂಗ ರೂಪುಗೊಂಡಾಗ ನಮ್ಮ ಸಮಾಜ, ರಾಷ್ಟ್ರ ವಿಶ್ವಮಾನ್ಯವಾಗಬಹುದು.” ಎಂದು ಅಭಿಪ್ರಾಯಪಟ್ಟರು. ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಪ್ರದೀಪ ಕುಮಾರ ಕಲ್ಕೂರ, ಟ್ರಸ್ಟಿಗಳಾದ ಶ್ರೀ ಸುಧಾಕರ ರಾವ್ ಪೇಜಾವರ, ಶಿಕ್ಷಕ-ರಕ್ಷಕ ಸಂಘದ ಸದಸ್ಯ ಶ್ರೀ ಪ್ರಕಾಶ್ ಇಳಂತಿಲ, ಶಾರದಾ…
ಕುಂದಾಪುರ : ಸರಕಾರಿ ಪ್ರೌಢ ಶಾಲೆ ಗುಂಡ್ಮಿ, ಸಾಸ್ತಾನ ಇಲ್ಲಿ ಕುಂದಾಪುರ ವಿಧಾನಸಭಾ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು ದಿನಾಂಕ 02-08-2023ರಂದು ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಶ್ರೀ ಗೋವಿಂದಪ್ಪನವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಸುಲತಾ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಶ್ರೀ ಮುರಳಿ ಕಡೆಕಾರ್, ಅರ್ಥಧಾರಿಗಳಾದ ಡಾ.ವೈಕುಂಠ ಹೇರ್ಳೆ, ಶಾಲಾಭಿವೃದ್ದಿ ಸಮಿತಿಯ ಗೌರವ ಸದಸ್ಯರಾದ ಶ್ರೀ ಗಣೇಶ್ ಚಲ್ಲಮಕ್ಕಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಶೇರ್ವೆಗಾರ್, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಶೆಟ್ಟಿಗಾರ್ ಹಾಗೂ ಯಕ್ಷ ಗುರು ಮಂಜುನಾಥ ಕುಲಾಲ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಕೆ.ಸತೀಶ ಐತಾಳರು ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಹೆಲೆನ್ ಬಾಂಜ್ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕರಾದ ಶ್ರೀ ಪ್ರತಾಪಚಂದ್ರ ಕಿಣಿಯವರು…
ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಶ್ರೀ ರಾಮಸೌಧ, ದರ್ಬೆ, ಪುತ್ತೂರು. ಇವರ ನೇತೃತ್ವದಲ್ಲಿ ‘ಪುಸ್ತಕ ಹಬ್ಬ, ಪುಸ್ತಕದಾನಿಗಳ ಮೇಳ ಮತ್ತು ಸಾಹಿತ್ಯ ವೈಭವ’ವು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ದಿನಾಂಕ 11-08-2023, 12-08-2023 ಮತ್ತು 13-08-2023ರಂದು ನಡೆಯಲಿದೆ. ಪ್ರಸ್ತುತ ಕಾರ್ಯಕ್ರಮವು ದಿನಾಂಕ 11-08-2023ರಂದು ಸಂಜೆ 4 ಗಂಟೆಗೆ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ವಹಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಿ, ದ್ವಾರಕಾ ಕನ್ಸ್ ಸ್ಟ್ರಕ್ಷನ್ಸ್ ನ ಶ್ರೀ ಗೋಪಾಲಕೃಷ್ಣ ಭಟ್ ಪುಸ್ತಕ ಮೇಳದ ಉದ್ಘಾಟನೆ ಮಾಡಲಿರುವರು. ಪ್ರಥಮ ಪುಸ್ತಕ ದಾನಿಗಳಾದ ಪ್ರೊ.ಬಿ.ವಿ.ಅರ್ತಿಕಜೆ, ಹಿರಿಯ ವೈದ್ಯರಾದ ಡಾ.ಸುಧಾ ರಾವ್ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಶ್ರೀಮತಿ ಸಂಧ್ಯಾ ದತ್ತಾತ್ರೇಯ ರಾವ್ ಇವರ ‘ಸಕ್ಕರೆ ಗೊಂಬೆ’ (ಮಕ್ಕಳ ಕವನ ಸಂಕಲನ) ಹಾಗೂ ‘ಭಾವ ದ್ಯುತಿ’ (ಕವನ ಸಂಕಲನ) ಕೃತಿಗಳನ್ನು ಹಿರಿಯ ಸಾಹಿತಿಗಳಾದ…
ಬೆಂಗಳೂರು : ಗುರು ವಿದುಷಿ ಶ್ರೀಮತಿ ದೀಪ ಭಟ್ ಅವರ ನೃತ್ಯ ಸಂಸ್ಥೆ ನೃತ್ಯಕುಟೀರದ 19ನೇ ವಾರ್ಷಿಕೋತ್ಸವ ಅಂಗವಾಗಿ ‘ನೃತ್ಯ ಮಿಲನ’ ಕಾರ್ಯಕ್ರಮವು ದಿನಾಂಕ 30-07-2023ರಂದು ಅತ್ಯಂತ ರಮಣೀಯವಾಗಿ ನಗರದ ಪ್ರಸಿದ್ಧ ಸಭಾಭವನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರೇಕ್ಷಕರ ಕಣ್ಮನ ಸೂರೆಗೊಳ್ಳುವಂತೆ ಮಾಡಿತು. ಪುಟಾಣಿ ಮಕ್ಕಳಿಂದ ಹಿಡಿದು ವಿದ್ವತ್ ವಿದ್ಯಾರ್ಥಿಗಳವರೆಗಿನ ಕಲಾವಿದರೆಲ್ಲ ಒಟ್ಟಾಗಿ ಸೇರಿ ಸಂಭ್ರಮದಿಂದ, ಅಚ್ಚುಕಟ್ಟಾಗಿ, ಲಯಬದ್ಧವಾಗಿ, ವೈವಿಧ್ಯಮಯ ನೃತ್ಯಗಳನ್ನು ಪ್ರದರ್ಶಿಸಿ ಕಿಕ್ಕಿರಿದು ಸೇರಿದ ಕಲಾ ರಸಿಕರ ಕರತಾಡನಕ್ಕೆ ಪಾತ್ರರಾದರು. ಪುಟ್ಟ ಮಕ್ಕಳ ‘ರಾಮ ಭಜನೆ’ ನೃತ್ಯಕ್ಕೆ ಮನಸೋತ ಪ್ರೇಕ್ಷಕರು ಸಹ ‘ರಾಮ ರಾಮ’ ಉದ್ಗಾರ ಹೇಳುತ್ತ ಮನಸೋತರು. ಪುಷ್ಪಾಂಜಲಿ, ಗಣೇಶ ಸ್ತುತಿ, ಅಲಾರಿಪು, ಜತಿಸ್ವರ, ಜಾನಕೀ ಕೌತ್ವಂ, ಸ್ವಾಗತಂ ಕೃಷ್ಣ, ರಾರ ವೇಣು, ಹರಿ ಕುಣಿದ, ಮಹಿಳಾ ಮಣಿಗಳಿಂದ ಸುಬ್ರಮಣ್ಯನ ಕುರಿತಾದ ಶಬ್ದಂ ಹಾಗೂ ಅಠಾಣರಾಗದಲ್ಲಿ ಹಾಗೂ ಆದಿತಾಳದಲ್ಲಿನ ಕೃಷ್ಣನ ಕುರಿತಾದ ವರ್ಣಂ ಅನ್ನು ವೈವಿಧ್ಯಮಯ ರೀತಿಯಲ್ಲಿ ಸಂಯೋಜಿಸಿ ಶಾಸ್ತ್ರಬದ್ಧವಾಗಿ ಪ್ರದರ್ಶಿಸಲಾಯಿತು. ಗ್ರಾಮೀಣ ಪರಿಸರದ ‘ಕೋಳೂರ ಕೊಡಗೂಸು’ ಎಂಬ ನೃತ್ಯ…
ಮಂಗಳೂರು : ಮಂಗಳೂರಿನ ಕೊಡಿಯಾಲ್ ಬೈಲ್ ಬಿಷಪ್ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಭಾನುವಾರ ದಿನಾಂಕ 30-07-2023ರಂದು, ದೆಹಲಿಯ ಸಾಹಿತ್ಯ ಅಕಾಡೆಮಿ ಆಯೋಜಿಸಿದ ‘ಕಥಾಸಂಧಿ ಕಾರ್ಯಕ್ರಮ’ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅವರು ಮಾತನಾಡುತ್ತಾ “ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ಧತೆಯನ್ನು ಕಾಪಾಡಿಕೊಂಡು ಬರುವುದರ ಜತೆಗೆ, ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಅಭಿಪ್ರಾಯಪಟ್ಟರು. ಅವರು ತಮ್ಮ ಆಯ್ದ ಕಥೆ ‘ಮಾಂಯ್ ಕಿತ್ಯಾಕ್ ರಡ್ತಾ?’ (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತ ಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡಿದರು. ದೆಹಲಿಯ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್ ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತೃತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು. ಸಾಹಿತ್ಯ ಅಕಾಡೆಮಿ ದೆಹಲಿ ಜನರಲ್ ಕೌನ್ಸಿಲ್ ಸದಸ್ಯರೂ,…
ಬೆಳ್ತಂಗಡಿ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ದಿನಾಂಕ ಆಗಸ್ಟ್ 7ರಿಂದ 13ರವರೆಗೆ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮವು ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಲಿದೆ. ಪ್ರತಿ ದಿನ ಸಂಜೆ 6ರಿಂದ 9ರವರೆಗೆ ನಡೆಯುವ ಯಕ್ಷಾವತರಣ 4ರಲ್ಲಿ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈ ಅವರ ಪ್ರಧಾನ ಭೂಮಿಕೆಯ ಅರ್ಥ ಪ್ರಸ್ತುತಿಯೊಂದಿಗೆ ರಾಮ, ವಸಿಷ್ಠ, ಕರ್ಣ, ಕೃಷ್ಣ, ವಿದುರ, ಅತಿಕಾಯ, ಕೃಷ್ಣ ಕೇಂದ್ರಿತ ಪ್ರಸಂಗಗಳು ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ತೆಂಕು ಬಡಗಿನ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಶ್ರೀ ಅಶೋಕ ಭಟ್ ಎನ್. ಉಜಿರೆ, ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಶ್ರೀ ಶಿವಾನಂದ ರಾವ್ ಕಕ್ಕಿನೇಜಿ, ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ರೊ. ಅನಂತ ಭಟ್ ಮಚ್ಚಿಮಲೆ ತಿಳಿಸಿದ್ದಾರೆ.
ಮಣಿಪಾಲ : ಪರ್ಕಳದ ‘ಸರಿಗಮ ಭಾರತಿ ಸಂಗೀತ ವಿದ್ಯಾಲಯ’ ಇದರ ಆಶ್ರಯದಲ್ಲಿ ‘ಸಂಗೀತ ಕಾರ್ಯಕ್ರಮ’ ದಿನಾಂಕ 01-08-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಗೀತದ ಹಿರಿಯ ವಿದ್ವಾಂಸ, ಸಂಗೀತ ಗುರು, ಕಾಸರಗೋಡಿನ ಕಲ್ಮಾಡಿ ಶ್ರೀ ಸದಾಶಿವ ಆಚಾರ್ಯ ಇವರನ್ನು ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಅವರ ಸಂಗೀತ ಕಛೇರಿ ನಡೆಯಿತು. ವಯೊಲಿನ್ ನಲ್ಲಿ ಶ್ರೀ ಪೂರ್ಣಪ್ರಜ್ಞ ಹಾಗೂ ಮೃದಂಗದಲ್ಲಿ ಶ್ರೀ ಬಾಲಚಂದ್ರ ಭಾಗವತ್ ಸಹಕರಿಸಿದರು. ಕಾರ್ಯಕ್ರಮದ ಮೊದಲು ಕುಮಾರಿ ಮನಸ್ವಿನಿ ಹಾಗೂ ಕುಮಾರಿ ಸ್ವಸ್ತಿ ಎಂ.ಭಟ್ ಇವರ ಹಾಡುಗಾರಿಕೆ ನಡೆಯಿತು.