Author: roovari

ಮಂಗಳೂರು : ಬೆಂಗಳೂರಿನ ರಂಗಪಯಣ ತಂಡ ತನ್ನ ನಿರಂತರ ರಂಗ ಚಟುವಟಿಕೆಗಳ ನಡುವೆ ಈ ಬಾರಿ 31-07-2023 ರಂದು ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ 55 ನಿಮಿಷಗಳ ಪ್ರೇಮಕಥೆ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಅದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ರಂಗಮಂದಿರದಲ್ಲಿ ಶಿವರಾಜ್.ಎನ್ ಅಭಿನಯಿಸಿದ ನಾಟಕ ಪ್ರದರ್ಶನಗೊಂಡಿತು. ಉಸ್ತಾದ್ ಬಿಸ್ಮಿಲ್ಲಾಖಾನ್ ಪ್ರಶಸ್ತಿ ಪುರಸ್ಕೃತ ಕಲಾವಿದ ದಂಪತಿಗಳಾದ ಶ್ರೀ ರಾಜಗುರು ಹೊಸಕೋಟೆ ಹಾಗೂ ಶ್ರೀಮತಿ ನಯನ ಸೂಡ ಇವರ ನೇತೃತ್ವದಲ್ಲಿ ರಂಗ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರಂಗಪಯಣದ ವಿಶಿಷ್ಟ ದಾಖಲೆಯ ಕಾರ್ಯಕ್ರಮ ಇದಾಗಿತ್ತು. ಕಳೆದ ಹಲವು ವರ್ಷಗಳಿಂದ ತಮ್ಮ ಹೊಸ ನಾಟಕಗಳೊಂದಿಗೆ ಕರಾವಳಿಗೆ ಭೇಟಿ ನೀಡುತ್ತಿರುವ ರಂಗಪಯಣ ಅರೆಹೊಳೆ ಪ್ರತಿಷ್ಠಾನ ಹಾಗೂ ಗೋವಿಂದದಾಸ್ ಕಾಲೇಜುಗಳ ಸಹಯೋಗದೊಂದಿಗೆ ಈ ನಾಟಕವನ್ನು ಆಯೋಜಿಸಿತ್ತು. ಸಂಜು ಎಂಬ ಯುವಕ ಶಾಂತಿ ಎಂಬ ತರುಣಿಯನ್ನು ಮೋಹಿಸಿ ಅವಳನ್ನು ಪಡೆಯಲು ಪ್ರಯತ್ನ ಪಡುವ ಒಂದು ಪ್ರೇಮ ಕಥೆಯೇ ಇದು. ಶಿವರಾಜ್ ನಾಟಕದ ಆರಂಭದಿಂದ ಕಡೆಯವರೆಗೂ…

Read More

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ’ದ 102ನೇ ಸರಣಿ ಕಾರ್ಯಕ್ರಮವು ದಿನಾಂಕ 15-07-2023ರಂದು ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮಂಗಳೂರಿನ ನೃತ್ಯಾಂಗನ್ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ರಾಧಿಕಾ ಶೆಟ್ಟಿಯವರ ಶಿಷ್ಯೆಯಾದ ಕುಮಾರಿ ಅದಿತಿ ಲಕ್ಷ್ಮೀ ಭಟ್ ಇವರು ಭರತನಾಟ್ಯ ಕಾರ್ಯಕ್ರಮ ನೀಡಿದರು. ಕಾರ್ಯಕ್ರಮದ ಮೊದಲಿಗೆ ಸಂಸ್ಥೆಯ ರೂಢಿಯಂತೆ ಶ್ರೀ ಗಿರೀಶ್ ಕುಮಾರ್ ಇವರಿಂದ ಶಂಖನಾದ ಹಾಗೂ ವಿದುಷಿ  ಪ್ರೀತಿಕಲಾ ದೀಪಕ್ ಇವರಿಂದ ಮಂಗಳಮಯ ಓಂಕಾರನಾದ ಹಾಗೂ ಕುಮಾರಿ ದೀಕ್ಷಾ ಇವರಿಂದ ಪ್ರಾರ್ಥನೆ ನಡೆಯಿತು. ಶಮಾ ಚಂದುಕೂಡ್ಲು ಕಾರ್ಯಕ್ರಮದ ನಿರೂಪಣೆಯ ಜೊತೆಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭ್ಯಾಗತರಾಗಿ ಆಗಮಿಸಿದ ಆಕಾಂಶ ಚಾರಿಟೇಬಲ್ ಟ್ರಸ್ಟಿನ ಪ್ರಧಾನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ಶ್ರೀಶ ಭಟ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಮಾರಿಯರಾದ ಸೃಷ್ಠಿ ಎಂ.ಬಿ, ಸಿಯಾ ಹಾಗೂ ಜೀವಿಕ ಕಜೆಯವರು ಅಭ್ಯಾಗತ, ಕಲಾವಿದ ಹಾಗೂ ಕಲಾವಿದರ ಗುರುಗಳ ಪರಿಚಯ ಮಾಡಿದ ನಂತರ ಕುಮಾರಿ ಪ್ರಣಮ್ಯ ಹಸ್ತಗಳ ಬಗ್ಗೆ ವಿಷಯ…

Read More

ಮಂಗಳೂರು : ಭರತಾಂಜಲಿ (ರಿ.), ಕೊಟ್ಟಾರ, ಮಂಗಳೂರು, ಇವರು ಗಮಕ ಕಲಾ ಪರಿಷತ್, ಮಂಗಳೂರು ಇವರ ಸಹಕಾರದಲ್ಲಿ ತೊರವೆ ನರಹರಿ ಕವಿಯ ತೊರವೆ ರಾಮಾಯಣದ ಆಯ್ದ ಪಾದುಕಾ ಪ್ರದಾನ ಕಥಾಭಾಗದ ‘ಗಮಕ ವಾಚನ ಕಾರ್ಯಕ್ರಮ’ವನ್ನು ದಿನಾಂಕ 04-08-2023ರಂದು ಸಂಜೆ 5:30ಕ್ಕೆ ಭರತಾಂಜಲಿಯ ಮಿನಿ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ರಾವ್, ಅತ್ತೂರು ಇವರು ವಾಚನ ಹಾಗೂ ಶ್ರೀ ಭಾಸ್ಕರ. ರೈ, ಕುಕ್ಕುವಳ್ಳಿ ಇವರು ವ್ಯಾಖ್ಯಾನ ನೀಡಲಿದ್ದಾರೆ. ಶ್ರೀಮತಿ ಪ್ರತಿಮಾ ಶ್ರೀಧರ್ ಇವರು ಈ ಕಾರ್ಯಕ್ರಮಕ್ಕೆ ಸರ್ವರಿಗೂ ಗೌರವದ ಸ್ವಾಗತ ಬಯಸಿದ್ದಾರೆ.

Read More

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಆಗಸ್ಟ್ ನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದೆ. ಪೂರ್ವಭಾವಿಯಾಗಿ ಪ್ರತೀ ಜಿಲ್ಲೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಆಯ್ಕೆಯಾದವರು ರಾಜ್ಯ ಮಟ್ಟಕ್ಕೆ ಅವಕಾಶ ಪಡೆಯುತ್ತಾರೆ. ರಾಜ್ಯ ಮಟ್ಟದಲ್ಲಿ ಮೊದಲ ಮೂರು ಕವಿತೆಗಳಿಗೆ ಕ್ರಮವಾಗಿ 10, 7 ಮತ್ತು 5 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಆಗಸ್ಟ್ 2ನೇ ವಾರದಲ್ಲಿ ನಡೆಯುವ ದ.ಕ. ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ‘ಸ್ವರಾಜ್ಯ-ಸುರಾಜ್ಯ’ ವಿಷಯದಲ್ಲಿ 60ರಿಂದ 100 ಶಬ್ದದೊಳಗಿನ ಕವನ ಆಹ್ವಾನಿಸಲಾಗಿದೆ. ‘ಸ್ವರಾಜ್ಯ’ ವಿಷಯದ ಹೊರತಾದ ಕವಿತೆಗಳನ್ನು ಪರಿಗಣಿಸುವುದಿಲ್ಲ. ಯಾವುದೇ ಭಾರತೀಯ ಭಾಷೆಯಲ್ಲಿ ವಾಚನ ಮಾಡಬಹುದು. ಆದರೆ ಅದರ ಕನ್ನಡ ಕವಿತಾ ರೂಪವನ್ನು (ಭಾವಾರ್ಥವಲ್ಲ) ಕಳುಹಿಸಬೇಕು. ವಯೋಮಿತಿ ಇಲ್ಲ. ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ದ.ಕ. ಘಟಕದ ಕಾರ್ಯದರ್ಶಿ ಪರಿಮಳಾ ರಾವ್ ಅವರ ವಾಟ್ಸ್ ಆ್ಯಪ್ 81237 16968ಕ್ಕೆ ಆಗಸ್ಟ್ 5ರೊಳಗೆ ಕಳುಹಿಸಬೇಕು.

Read More

ಮಂಗಳೂರು : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ನೇತೃತ್ವದಲ್ಲಿ ರಾಮಕೃಷ್ಣ ತಪೋವನ ಪೊಳಲಿ ಸಹಕಾರದೊಂದಿಗೆ ಏಳು ದಿನಗಳ ತೆಂಗಿನ ಗೆರಟೆಯಲ್ಲಿ ಕರಕುಶಲ ವಸ್ತು ತಯಾರಿಕೆಯ ಉಚಿತ ತರಬೇತಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 26-07-2023ರಂದು ಪೊಳಲಿ ತಪೋವನದಲ್ಲಿ ನಡೆಯಿತು. ರಾಮಕೃಷ್ಣ ತಪೋವನದ ಗುರು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, “ಮಹಿಳೆಯರು ಮನಸು ಮಾಡಿದರೆ ಯಾವುದೂ ಅಸಾಧ್ಯವಲ್ಲ, ಸಂಸಾರ ನಿಭಾಯಿಸಿಕೊಂಡು ಮನೆಯಲ್ಲಿಯೇ ಸ್ವೋದ್ಯೋಗ ಮಾಡಿಕೊಂಡು ಸ್ವಾವಲಂಬಿ ಜೀವನ ಸಾಗಿಸಬೇಕು. ಮಹಿಳಾ ಶಕ್ತಿ ತಮ್ಮ ಜೀವನ ರೂಪಿಸಿಕೊಳ್ಳಲು ಮುಂದಡಿಯಿಡಬೇಕು” ಎಂದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಸಚಿನ್ ಹೆಗ್ಡೆ ಮಾತನಾಡಿ, ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ಮಹಿಳೆಯರು, ರೈತರು, ಸಮುದಾಯದ ಜನರ ಅಭಿವೃದ್ಧಿಗೆ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ವಿ.ಮಾಲಿನಿ, ಮಹಿಳಾ ಚಿಂತಕಿ ಮಂಗಳಾ ಭಟ್, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ, ತರಬೇತುದಾರ…

Read More

ಪುತ್ತೂರು : ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಮತ್ತು ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 29-07-2023ರಂದು ಜರಗಿದ ‘ಬರ್ಸದ ಪನಿ – ಕಬಿತೆ ಕೇನಿ’ ತುಳು ಕವಿಗೋಷ್ಠಿಯನ್ನು ಖ್ಯಾತ ಸಾಹಿತಿ ಕೆದಂಬಾಡಿ ಜತ್ತಪ್ಪ ರೈಯವರ ಕವಿತೆಯೊಂದನ್ನು ಓದುವ ಮೂಲಕ ಸಾಹಿತಿ, ಕೃಷಿಕ, ಸಹಕಾರಿ ರತ್ನ ದಂಬೆಕ್ಕಾನ ಸದಾಶಿವ ರೈ ಉದ್ಘಾಟಿಸಿ, ತುಳು ಭಾಷೆಯ ಕವಿಗೋಷ್ಠಿ ಮತ್ತು ಸಾಹಿತ್ಯಗೋಷ್ಟಿಗಳು ಹೆಚ್ಚು ಹೆಚ್ಚು ಜರಗಿ ತುಳು ಭಾಷೆ ಇನ್ನಷ್ಟು ಶ್ರೀಮಂತವಾಗಲಿ. ಎಂದು ಹಾರೈಸಿದರು. ಪಾಂಚಜನ್ಯ ರೇಡಿಯೋದ ಕಾರ್ಯದರ್ಶಿ ಪದ್ಮಾ ಕೆ.ಆರ್. ಆಚಾರ್ಯ, ತುಳುಕೂಟದ ಉಪಾಧ್ಯಕ್ಷರುಗಳಾದ ಸಂತೋಷ್ ಶೆಟ್ಟಿ ಎಸ್. ಹಾಗೂ ನ್ಯಾಯವಾದಿ ಹೀರಾ ಉದಯ್, ಮಾಜಿ ಅಧ್ಯಕ್ಷ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು, ಚಿಗುರೆಲೆ ಸಾಹಿತ್ಯ ಬಳಗದ ಅಧ್ಯಕ್ಷ ಚಂದ್ರಮೌಳಿ ಕಡಂದೇಲು ಮತ್ತು ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ನವೀನ್ ಕುಲಾಲ್ ಚಿಪ್ಪಾರ್ ಮತ್ತು…

Read More

ಬದಿಯಡ್ಕ : ನೀರ್ಜಾಲು ಸಮೀಪದ ಕುಂಟಿಕಾನ ಎ.ಎಸ್‌.ಬಿ. ಶಾಲೆಯಲ್ಲಿ ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬದಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪರ್ಯಟನೆಯ 6ನೇ ಸರಣಿ ಕಾರ್ಯಕ್ರಮ ದಿನಾಂಕ 30-07-2023ರಂದು ನಡೆಯಿತು. ಈ ಸರಣಿ ಕಾರ್ಯಕ್ರಮದಲ್ಲಿ ಶಿಕ್ಷಕ ರಾಜೇಶ್ ಎಸ್. ಉಬ್ರಂಗಳ ಇವರು ‘ಕನ್ನಡ ಭಾಷಾ ಪ್ರಜ್ಞೆ ಬೆಳೆಸುವುದು ಹೇಗೆ?” ಎಂಬ ಕುರಿತು ತಮ್ಮ ವಿಚಾರವನ್ನು ಮಂಡಿಸುತ್ತಾ “ಜಿಲ್ಲೆಯ ಮಕ್ಕಳಲ್ಲಿ ಕನ್ನಡ ಪ್ರಜ್ಞೆ ಅರಳಬೇಕಾದರೆ, ಮೊದಲು ಅದು ಮಕ್ಕಳ ಹಿರಿಯರಲ್ಲಿ ಅರಳಬೇಕು. ಕಾಸರಗೋಡಿನ ಕನ್ನಡಿಗರಿಗೆ ಕೇರಳದಲ್ಲಿ ಅನೇಕ ಸವಲತ್ತುಗಳಿವೆ. ಕರ್ನಾಟಕದ ಶಿಕ್ಷಣ ಕ್ಷೇತ್ರದಲ್ಲೂ ಕೂಡಾ ವಿಶೇಷವಾಗಿ ಗಡಿನಾಡ ಕನ್ನಡಿಗರ ಮೀಸಲಾತಿ ಇದೆ. ಅದನ್ನು ಪಡೆದು ಗಳಿಸಿಕೊಳ್ಳಬೇಕು. ಕನ್ನಡದ ಸಂಸ್ಕೃತಿಯನ್ನು ಯಾವತ್ತೂ ಬಿಡಬಾರದು. ಕನ್ನಡಿಗರನ್ನು ಪರಸ್ಪರ ಆಧರಿಸಿಕೊಂಡು ಕನ್ನಡಿಗರೇ ರಕ್ಷಿಸಿಕೊಳ್ಳಬೇಕು. ಕನ್ನಡ ಭಾಷೆಯಲ್ಲಿ, ಬಹುಮುಖಿ ಸಾಹಿತ್ಯ ಹಾಗೂ ಸಂಸ್ಕೃತಿ ಇದೆ. ಆಧುನಿಕ ಸಾಹಿತ್ಯ ಕ್ಷೇತ್ರದಲ್ಲಿ ಡಿಜಿಟಲ್ ಸಾಹಿತ್ಯ ಇನ್ನಷ್ಟೂ ವಿಸ್ತಾರವಾಗಬೇಕು. ಕಾಸರಗೋಡಿನ…

Read More

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 29-07-2023ರಂದು ‘ಸನಾತನ ನೃತ್ಯ ಪ್ರೇರಣಾ’ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ 2022ರಲ್ಲಿ ಭರತನಾಟ್ಯ ವಿದ್ವತ್ ಪೂರೈಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ‘ಸನಾತನ ನೃತ್ಯ ಪ್ರೇರಣಾ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರು ಮಾತನಾಡಿ “ನೃತ್ಯ ಕಲೆ ಮಾತ್ರವಲ್ಲ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಭಾರತೀಯ ಸಂಸ್ಕೃತಿಯನ್ನು ಪಸರಿಸುವ ಸನಾತನ ನಾಟ್ಯಾಲಯದ ಕಾರ್ಯ ವೈಖರಿಯನ್ನು ಸಮಾಜವು ಗುರುತಿಸಬೇಕು. ಕಲೆ ಎಂಬುದು ಯಾವುದಕ್ಕೂ ಅಡೆತಡೆ ಆಗುವುದಿಲ್ಲ. ಅದನ್ನು ನಂಬಿಯೇ ಜೀವನ ಮಾಡುವುದು ಸಾಧ್ಯ. ಕಲೆಯನ್ನು ಪ್ರೀತಿಸಿ ತಪಸ್ಸಾಧನೆ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ” ಎಂದು ಹೇಳಿದರು. ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಹಿರಿಯ ಶಾಖಾಧಿಕಾರಿ ಶ್ರೀ ಎಲ್.ದಿವಾಕರ್, ಮಣಿಪಾಲದ ಹೆಜ್ಜೆ ಗೆಜ್ಜೆ ಸಂಸ್ಥೆಯ ನೃತ್ಯಗುರು ವಿದುಷಿ ಯಶ ರಾಮಕೃಷ್ಣ ವಿದ್ವತ್ ಪೂರೈಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ವತ್ ಪರೀಕ್ಷೆಯಲ್ಲಿ ಪಾಸಾದ ವಿದುಷಿಯರಾದ…

Read More

ಬೆಂಗಳೂರು : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 22-07-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ‘ಗುರು ಸಮ್ಮಾನ’ ಸ್ವೀಕರಿಸಿದ ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೋ ಇವರು ಮಾತನಾಡುತ್ತಾ “ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ. ಇದು ಹೇಗೆ ಸರಿ, ಅದೇಕೆ ಸರಿಯಲ್ಲ ಎಂದು ತರ್ಕಿಸುವ ಬುದ್ಧಿ ನಮಗೆ ಶಾಲಾ ಪಠ್ಯದಿಂದ ದೊರೆತಿದ್ದಲ್ಲ, ಬದಲಾಗಿ ತರ್ಕಶಕ್ತಿ, ಪದ ಭಂಡಾರ, ಪೌರಾಣಿಕ ಜ್ಞಾನ ಇವೆಲ್ಲ ಯಕ್ಷಗಾನದಿಂದ ದೊರೆತಿರುವುದು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಅವರನ್ನು ಸನ್ಮಾನಿಸಲಾಯಿತು. ರಂಗಕರ್ಮಿ ಸೇತುರಾಂ ಎಸ್.ಎನ್., ಟಿ. ಶಿವಾನಂದ ಶೆಟ್ಟಿ, ದೀಪಕ್ ಶೆಟ್ಟಿ ಬಾರ್ಕೂರು, ಡಾ.ಬಾಬು ಗೋವಿಂದ ಪೂಜಾರಿ, ರಘುರಾಮ ಶೆಟ್ಟಿ ಎಳ್ಮುಡಿ, ಪ್ರವೀಣ್ ಕುಮಾರ್ ಶೆಟ್ಟಿ ಮತ್ತು ಅಶ್ವತ್ಥ ಹೆಗ್ಡೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ‘ಕೃಷ್ಣ ಸಂಧಾನ’ ಹಾಗೂ ‘ಕರ್ಣಾರ್ಜುನ’ ಎಂಬ ಅಖ್ಯಾನಗಳ ಯಕ್ಷಗಾನ ತಾಳಮದ್ದಳೆ ಜರುಗಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಆಗಮಿಸಿದ್ದು, ಇನ್ನೂರಕ್ಕೂ…

Read More

ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 29-07-2023ರಂದು ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆದ ವಿದ್ವಾನ್ ರಘುಪತಿ ಭಟ್ ರಚಿಸಿದ ‘ನಾನು ಮತ್ತು ನಾನು’ ಭಾವ ಸಂಕಲನ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ ಸಾಹಿತಿ ಡಾ. ವಸಂತ ಕುಮಾರ್ ಪೆರ್ಲ ಇವರು ಮಾತನಾಡುತ್ತಾ “ಸಾಹಿತ್ಯವು ಭಾವನೆಗಳೊಂದಿಗೆ ಹುಟ್ಟಿಕೊಳ್ಳುತ್ತದೆ ಹೊರತು ಆಧುನಿಕ ಯಂತ್ರಗಳಿಂದಲ್ಲ. ಮನುಷ್ಯನು ಭಾವಜೀವಿ ಹಾಗಾಗೀ ಮನಸ್ಸಿನಲ್ಲಿ ಉಂಟಾಗುವ ಭಾವ ಪ್ರಪಂಚದ ಕಥೆ ವ್ಯಥೆಗಳೇ ಕಾವ್ಯಕ್ಕೆ ವಸ್ತುಗಳು ಆಗುತ್ತವೆ.” ಎಂದು ಹೇಳಿದರು. ಸಾಹಿತಿ ಶಶಿರಾಜ್ ಕಾವೂರು ಮಾತನಾಡಿ, “ರಘುಪತಿ ಭಟ್ ಅವರು ‘ನಾನು ಮತ್ತು ನಾನು’ ಭಾವ ಸಂಕಲನದಲ್ಲಿ ಸಮಕಾಲೀನ ಮನುಷ್ಯ ಮತ್ತು ಆಧ್ಯಾತ್ಮಿಕ ಭಾವ ಪ್ರಪಂಚದ ವಸ್ತುಗಳನ್ನು ಕೇಂದ್ರಿಕರಿಸಿ ಕಾವ್ಯವನ್ನು ರಚಿಸಿದ್ದಾರೆ. ಕಾವ್ಯವು ಮಾನವ ಸಂಬಂಧಗಳನ್ನು ಒಟ್ಟುಗೂಡಿಸುವ ಮೂಲಕ ನಮಗೆ ಒಂದು ರೀತಿಯ ಸುಖವನ್ನು ನೀಡುತ್ತದೆ.” ಎಂದು ಹೇಳಿದರು. ಕ.ಸಾ.ಪ. ಮಂಗಳೂರು ಘಟಕದ ಅಧ್ಯಕ್ಷ ಡಾ.ಮಂಜುನಾಥ್ ರೇವಣಕರ್, ಸಾಹಿತಿ, ನ್ಯಾಯವಾದಿ ಶಶಿರಾಜ್ ಕಾವೂರು,…

Read More