Author: roovari

ಬೆಂಗಳೂರು : ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಣೆಯಾಗಿದೆ. ಪ್ರಥಮ : ಹಿರಿಯ ವೈದ್ಯ ಅಧಿಕಾರಿ ಡಾ. ಸುರೇಶ್ ನೆಗಳಗುಳಿ, ದ್ವಿತೀಯ : ಶ್ರೀಮತಿ ಸ್ವಪ್ನ ಆರ್.ಎ ಹಾಗೂ ತೃತೀಯ ಸ್ಥಾನ ಡಾ. ಪೂರ್ಣಿಮಾ ಧಾಮಣ್ಣವರ ಪಡೆದುಕೊಂಡರೆ ತೀರ್ಪುಗಾರರಿಂದ ಕುಮಾರಿ ಜ್ಯೋತಿ ಆನಂದ ಚಂದುಕರ, ಪಲ್ಲವಿ ಎಂ.ಓ., ಪ್ರತಿಭಾ ಬಿ. ತಲ್ಲೂರ, ರೇಣುಕಾ ಸಂಗಪ್ಪನವರ ಮತ್ತು ಝುಲೇಖ ಮಮ್ತಾಝ್ ಇವರುಗಳು ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಸಾರ್ವಜನಿಕ‌ ನೆಲೆಯಲ್ಲಿ ದೇಶಾದ್ಯಂತ ನೆಲಸಿರುವ ಅರುವತ್ತೈದಕ್ಕೂ ಹೆಚ್ಚಿನ ಕನ್ನಡ ಪ್ರಜೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಲೇಖನ ಸ್ಪರ್ಧೆಗೆ ಹಿರಿಯ ಸಾಹಿತಿಗಳು ಹಾಗೂ ವಕೀಲರಾದ ಬಿ.ಎಸ್. ಅಪರಂಜಿ, ಶಿಕ್ಷಕರು ಲೇಖಕರಾದ ಮೊಹಮ್ಮದ್ ಹುಮಾಯುನ್ ಎನ್. ಹಾಗೂ ಶಿಕ್ಷಕಿ ಅಂಕಣ ಬರಹಗಾರರಾದ ಶ್ರೀಮತಿ ಅಶ್ವಿನಿ ಎಸ್. ಅಂಗಡಿ ಇವರುಗಳು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ದಿನಾಂಕ 31 ಮೇ 2025ರಂದು ಸಂಜೆ ಗೂಗಲ್ ಮೀಟ್ ಮೂಲಕ…

Read More

ತೆಕ್ಕಟ್ಟೆ : ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ ಇದರ ಆಶ್ರಯದಲ್ಲಿ ಗಂಪು ಪೈ ಸಾಲಿಗ್ರಾಮ ಸಹಕಾರದಲ್ಲಿ ಕಾಳಿಂಗ ನಾವಡರ ಸಂಸ್ಮರಣೆಯಾಗಿ ‘ಯಕ್ಷ ಗಾನ ನಮನ’ ಕಾರ್ಯಕ್ರಮವು ತೆಕ್ಕಟ್ಟೆ ಹಯಗ್ರೀವದಲ್ಲಿ ದಿನಾಂಕ 31 ಮೇ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಮರಣಾ ನುಡಿಗಳನ್ನಾಡಿದ ಯಕ್ಷಗುರು ಲಂಬೋದರ ಹೆಗಡೆ ನಿಟ್ಟೂರು “ಕಾಳಿಂಗ ನಾವಡರ ಹೆಸರೇ ಯಕ್ಷ ಪ್ರಪಂಚದಲ್ಲಿ ರೋಮಾಂಚನ. ಸರಿಸಾಟಿಯಿಲ್ಲದ ಕಂಠ ಸಿರಿಯನ್ನು ಹೊಂದಿದ ಕಾಳಿಂಗ ನಾವಡರು ತನ್ನ ಎಳವೆಯಲ್ಲಿಯೇ ಅದ್ಭುತ ಸಾಧನೆಗೈದು ಇಹಲೋಕ ತ್ಯಜಿಸಿ ಅಜರಾಮರರಾದರು. ಗಾನಗಾರುಡಿಗರಾಗಿ ಯಕ್ಷ ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದರು” ಎಂದು ಹೇಳಿದರು. ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಹೆರಿಯ ಮಾಸ್ಟರ್ ಮಾತನ್ನಾಡಿ, ಲಕ್ಷೋಪಲಕ್ಷ ಕಲಾಭಿಮಾನಿಗಳ ಮನ ತಟ್ಟಿದ ಕಾಳಿಂಗ ನಾವಡರು ಯಕ್ಷ ಪರಂಪರೆಯಲ್ಲಿ ಇನ್ನಿಲ್ಲದ ಸಾಧನೆಗೈದವರು. ಇವರ ಸ್ಮರಣೆಯಲ್ಲಿಯೇ ಅನುದಿನವೂ ಯಕ್ಷಾಭಿಮಾನಿಗಳು ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದರು. ರಂಗ ನಿರ್ದೇಶಕ ರೋಹಿತ್ ಎಸ್. ಬೈಕಾಡಿ, ಉದ್ಯಮಿ ಗೋಪಾಲ ಪೂಜಾರಿ ಬಾಳೆಹಿತ್ಲು ಉಪಸ್ಥಿತರಿದ್ದರು. ಯುವ ಭಾಗವತರಾದ ರಾಜೇಶ್ ಕೋಡಿ, ಹರೀಶ್ ಕಾವಡಿ,…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪ್ರೌಢಶಾಲೆ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ ಹಾಗೂ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಡಿಕೇರಿಯ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 04 ಜೂನ್ 2025ರಂದು ಬೆಳಿಗ್ಗೆ 11-00 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರುರವರು ನಡೆಸಿಕೊಡಲಿದ್ದಾರೆ. ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಯ ಪ್ರಥಮ ವರ್ಷದ ಪುರಸ್ಕೃತರಾದ ಸಾಹಿತಿ ಶ್ರೀಮತಿ ಸ್ಮಿತಾ ಅಮೃತರಾಜ್ ಸಂಪಾಜೆ ಇವರಿಗೆ ಆಕಾಶವಾಣಿಯ ನಿವೃತ್ತ ಉದ್ಘೋಷಕರು, ಸಾಹಿತಿಯೂ ಆದ ಸುಬ್ರಾಯ ಸಂಪಾಜೆಯವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ರಾಜಶ್ರೀ…

Read More

ಉಡುಪಿ : ಪ್ರತಿವರ್ಷ ಯಕ್ಷಗಾನ ಕಲಾರಂಗ ಮೇ 31ರಂದು ನಡೆಸುವ ಕಲಾವಿದರ ಸಮಾವೇಶಕ್ಕ ಈ ವರ್ಷ ಸುವರ್ಣದ ಮೆರಗು. ಶ್ರೀಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ದಿನಪೂರ್ತಿ ಕಾರ್ಯಕ್ರಮವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 31 ಮೇ 2025ರಂದು ಸಂಪನ್ನಗೊಂಡಿತು. ಅಪರಾಹ್ನದವರೆಗಿನ ಕಲಾಪಗಳು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಜರಗಿತು. ಬೆಳಿಗ್ಗೆ 10-00 ಗಂಟೆಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ ಗೋಪಾಲ ಸಿ. ಬಂಗೇರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಅಕಾಡೆಮಿಯ ಸದಸ್ಯ ಸತೀಶ ಅಡಪ ಉಪಸ್ಥಿತರಿದ್ದರು. ಅಕಾಡೆಮಿಯ ರಿಜಿಸ್ಟ್ರಾರ್ ನಮೃತ ಸ್ವಾಗತಿಸಿ, ಗಣೇಶ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಪೂರ್ವಾಹ್ನ 10-30 ಗಂಟೆಗೆ ಮಾಧವ ಮಾತೃಗ್ರಾಮಂ ಕೂಡಿಯಾಟ್ಟಮ್ ಗುರುಕುಲಂ, ತ್ರಿಶೂರ್ ಇವರಿಂದ ‘ಸೀತಾಪಾರಣಂ-ಜಟಾಯುವಧಂ ಕೂಡಿಯಾಟ್ಟಮ್’ ಪ್ರದರ್ಶನಗೊಂಡಿತು. ಪ್ರೊ. ಕೆ. ಸದಾಶಿವ ರಾವ್ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಬ್ರಹ್ಮಾವರ ವಂದಿಸಿದರು. ಅಪರಾಹ್ನ 11.30 ಗಂಟೆಗೆ ‘ಕಲೆ ಪೂರ್ಣಾವಧಿ…

Read More

ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ‘ನಾಡೋಜ ಡಾ. ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ-2025’ಯನ್ನು ಕನ್ನಡದ ಯುವ ಲೇಖಕರಿಗಾಗಿ ಏರ್ಪಡಿಸಲಾಗಿದೆ. ಸೂಚನೆಗಳು : * ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18ರಿಂದ 35 ವರ್ಷ ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20 ಜೂನ್ 2025. * ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು. * ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ. ಈವರೆಗೂ ಎಲ್ಲಿಯೂ ಪ್ರಕಟವಾಗಿರಬಾರದು. * ಕೈಬರಹದ ಕವನ ಮತ್ತು ಕಥೆಗಳನ್ನು ಮಾತ್ರ ಕಳಿಸಬೇಕು. (ಕವನ ಮತ್ತು ಕಥೆ ಕೈ ಬರಹದ್ದಾಗಿರಬೇಕು) * ನಿರ್ಣಾಯಕರ ನಿರ್ಣಯವೇ ಅಂತಿಮ. * ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 28ರಂದು ಏರ್ಪಡಿಸುವ ಡಾ. ಚನ್ನವೀರ ಕಣವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. * ಕವನ ಮತ್ತು ಕಥೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು : ಪ್ರಧಾನ ಕಾರ್ಯದರ್ಶಿ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ…

Read More

ಮೂಡುಬಿದಿರೆ : ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ವತಿಯಿಂದ 2025-26ನೇ ಸಾಲಿನ ಆಳ್ವಾಸ್ ರಂಗ ತಂಡದ ನಾಟಕಗಳಲ್ಲಿ ಅಭಿನಯಿಸಲು ಕಲಾವಿದರು ಬೇಕಾಗಿದ್ದು, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಒಂದು ವರ್ಷದ ರಂಗ ಶಿಕ್ಷಣ ಪದವಿ ಹಾಗೂ ವಯೋಮಿತಿ 20ರಿಂದ 35 ವರ್ಷ. ಆಯ್ಕೆ ಆದ ಕಲಾವಿದರಿಗೆ ಉಚಿತ ಊಟ, ಉಪಹಾರ, ಉತ್ತಮ ವಸತಿ ವ್ಯವಸ್ಥೆಯ ಜೊತೆಗೆ ತಿಂಗಳ ವೇತನ ಇರುತ್ತದೆ. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ಅಭಿನಯದ ನಾಟಕಗಳ ಫೋಟೋ ಹಾಗೂ ತಮ್ಮ ರಂಗ ಅನುಭವದ ಸ್ವವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕೂಡಲೇ ಕಳುಹಿಸಿ. ಅರ್ಜಿ ತಲುಪಲು ಕೊನೆಯ ದಿನಾಂಕ 10 ಜೂನ್ 2025 ಆಗಿದ್ದು, ಅರ್ಜಿ ಕಳುಹಿಸುವ ವಿಳಾಸ : ಡಾ. ಎಂ. ಮೋಹನ ಆಳ್ವ ಅಧ್ಯಕ್ಷರು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ದ.ಕ -574227. ಮಾಹಿತಿಗಾಗಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರು ಡಾ. ಜೀವನ್ ರಾಂ ಸುಳ್ಳ 6362043317 ಮತ್ತು 9448215946 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಮಂಗಳೂರು : ಡಾ. ವಾಮನ್ ರಾವ್ ಬೇಕಲ್ ಸಾರಥ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆಯು ದಿನಾಂಕ 25 ಮೇ 2025ರಂದು ಮಂಗಳೂರು ತಾಲೂಕು ಮಹಿಳಾ ಒಕ್ಕೂಟ ಸಭಾ ಭವನದಲ್ಲಿ ನಡೆಯಿತು. ಈ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷೆಯಾದ ಡಾ. ವಾಣಿಶ್ರೀ ಕಾಸರಗೋಡು ಇವರು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡುತ್ತಾ “ಯುವ ಪ್ರತಿಭೆಗಳನ್ನು ಸಮಾಜದ ಮುಂದೆ ಅನಾವರಣಗೊಳಿಸುವುದೇ ಸಂಸ್ಥೆಯ ಯೋಜನೆ. ಯುವ ಪ್ರತಿಭೆಗಳಲ್ಲಿ ಕನ್ನಡತನ, ಕನ್ನಡ ಸಂಸ್ಕೃತಿ ಮೂಡಿಸುವುದೇ, ಸಂಸ್ಥೆಯ ಗುರಿ, ಇದಕ್ಕಾಗಿ ಸಂಸ್ಥೆಯು ಸರ್ವ ಸಮರ್ಪಣಾ ಭಾವದಲ್ಲಿ ಮುನ್ನಡೆಯಲಿದೆ ಎಂದು ಹೇಳಿದ್ದಾರೆ. ಕನ್ನಡ ಭವನ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭವನ ಪ್ರಕಾಶಾನದ ರೂವಾರಿ ಸಂಧ್ಯಾರಾಣಿ ಟೀಚರ್, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ರೇಖಾ ಸುದೇಶ್ ರಾವ್, ಕನ್ನಡ ಭವನ ಕಾಸರಗೋಡು ಗೌರವ ಅಧ್ಯಕ್ಷ…

Read More

ಕೊಪ್ಪಳ : ಮಹಾಂತಯ್ಯನ ಮಠ ಕಲ್ಯಾಣ ಮಂಟಪದಲ್ಲಿ ದಿನಾಂಕ 25 ಮೇ 2025ರಂದು ಹಿರಿಯ ಪತ್ರಕರ್ತ ರಮೇಶ್ ಸುರ್ವೆಯವರ ಪುತ್ರ ಕಿಶನ್ ಜೊತೆ ತೇಜಸ್ವಿಯವರ ವಿವಾಹ ಆರತಕ್ಷತೆ ಕಾರ್ಯಕ್ರಮ ನಿಮಿತ್ತ ಚುಟುಕು ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕವಿಗೋಷ್ಠಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಭಾಗ್ಯಜ್ಯೋತಿ ಮಾತನಾಡಿ “ಕನ್ನಡ ಸಾಹಿತ್ಯ ಇಂದು ಹಲವಾರು ಪ್ರಕಾರಗಳನ್ನು ತನ್ನ ಒಡಲೊಳಗೆ ಇಟ್ಟುಕೊಂಡು ಅತ್ಯಂತ ಶ್ರೀಮಂತವಾದ ಸಾಹಿತ್ಯವಾಗಿದೆ. ಕಾದಂಬರಿ, ನಾಟಕ, ಎನರ್ಜಿ, ಜೀವನ ಚರಿತ್ರೆ, ಆತ್ಮಚರಿತ್ರೆಯಂತೆ ಕಾವ್ಯವೂ ಕೂಡ ಒಂದು ಅತ್ಯಂತ ಮಹತ್ವದ ಸಾಹಿತ್ಯ ಪ್ರಕಾರವಾಗಿದೆ. ಕಾವ್ಯ ರಚನೆಗೆ ಕವಿಗೆ ಸತತ ಅಧ್ಯಯನದ ಅವಶ್ಯಕತೆ ಇದೆ ಮತ್ತು ಶಬ್ದ ಭಂಡಾರದ ತಿಳುವಳಿಕೆ ಜ್ಞಾನ ಇರಬೇಕು. ಆಧುನಿಕ ಹನಿಗವನ, ಮಿನಿ ಗವನ, ಚುಟುಕು, ಹಾಯ್ಕುಗಳು ಕೂಡ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ. ಚುಟುಕು ನಾಲ್ಕು ಸಾಲುಗಳನ್ನು ಹೊಂದಿರಬೇಕು ಮತ್ತು ಅಂತ್ಯ…

Read More

ಬೆಳಗಾವಿ : ರಂಗ ಸಂಪದ (ರಿ.) ಬೆಳಗಾವಿ ಇದರ ವತಿಯಿಂದ ಖ್ಯಾತ ಶಿಕ್ಷಕ ತಜ್ಞ, ವಾಗ್ಮಿ, ಲೇಖಕ ಡಾ. ಗುರುರಾಜ ಕರಜಗಿ ಇವರಿಂದ ‘ಬದುಕಿನಲ್ಲಿ ಮಾನವೀಯ ಮೌಲ್ಯಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 02 ಜೂನ್ 2025ರಂದು ಸಂಜೆ 4-00 ಗಂಟೆಗೆ ಬೆಳಗಾವಿಯ ಹಿಂದವಾಡಿ ಗೊಮಟೇಶ ವಿದ್ಯಾ ಪೀಠದ ಹತ್ತಿರ ಆಯ್.ಎಂ.ಈ.ಆರ್. ಸಭಾಗೃಹದಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯ ಸಮೃದ್ಧ ವಿಶೇಷ ಚೇತನರ ಸಂಸ್ಥೆಯ ಅಂಧ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.

Read More

ಬೆಂಗಳೂರು : ಶ್ರೀ ಪುರಂದರದಾಸ ಮೆಮೋರಿಯಲ್ ಟ್ರಸ್ಟ್ (ರಿ.) ಇದರ ವತಿಯಿಂದ ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ (ಹಿಂದೂಸ್ಥಾನಿ ಶೈಲಿಯಲ್ಲಿ) ಕಾರ್ಯಕ್ರಮವನ್ನು ದಿನಾಂಕ 01 ಜೂನ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ದೇವರಕೆರೆ ಇಸ್ರೋ ಲೇಔಟ್ ಹತ್ತಿರ ಪುರಂದರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಪಂಡಿತ್ ನಾಗರಾಜ ರಾವ್ ಹವಲ್ದಾರ್ ಹಾಗೂ ಶ್ರೀ ಓಂಕಾರನಾಥ ಹವಲ್ದಾರ್ ಇವರ ಹಾಡುಗಾರಿಕೆಗೆ ಕೇದಾರನಾಥ ಹವಲ್ದಾರ್ ಇವರು ತಬಲಾದಲ್ಲಿ ಹಾಗೂ ಸಮೀರ್ ಹವಲ್ದಾರ್ ಇವರು ಹಾರ್ಮೋನಿಯಂನಲಿ ಸಾಥ್ ನೀಡಲಿದ್ದಾರೆ.

Read More