Subscribe to Updates
Get the latest creative news from FooBar about art, design and business.
Author: roovari
‘ಹಚ್ಚೇವು ಕನ್ನಡದ ದೀಪ’ ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ ಮತ್ತು ಆ ಗೀತೆಯಲ್ಲಿ ಅಡಗಿರುವ ಕನ್ನಡತ್ವವನ್ನು ಅನುಭವಿಸದವರೇ ಇಲ್ಲ. ಇಂದಿಗೂ ಆ ಹಾಡನ್ನು ಕೇಳಿದರೆ ಮೈಮನಗಳಲ್ಲಿ ಇರುವ ನರವನ್ನು ಹೊಸೆದು ಬತ್ತಿ ಮಾಡಿ ದೀಪ ಬೆಳಗಿದ ಅನುಭವ. ಅಷ್ಟೊಂದು ಉತ್ಕಟ ಭಾಷಾ ಅಭಿಮಾನವನ್ನು ಮತ್ತು ಪ್ರೀತಿಯನ್ನು ತಮ್ಮ ಸಾಹಿತ್ಯದ ಮೂಲಕ ಪ್ರತಿಬಿಂಬಿಸಿದವರು ಕರ್ಕಿಯವರು. ಡಿ.ಎಸ್. ಕರ್ಕಿಯವರು ಬೆಳಗಾವಿ ಜಿಲ್ಲೆಯ ಹಿರೆಕೊಪ್ಪ ಗ್ರಾಮದಲ್ಲಿ 1907 ನವೆಂಬರ್ 15ರಂದು ಜನಿಸಿದರು. ಇವರ ತಾಯಿ ದುಂಡವ್ವ, ತಂದೆ ಸಿದ್ದಪ್ಪ. ದುಂಡಪ್ಪ ಸಿದ್ದಪ್ಪ ಕರ್ಕಿ ಎಂಬುದು ಇವರ ಪೂರ್ಣನಾಮ. ಚಿಕ್ಕಂದಿನಲ್ಲಿಯೇ ತಾಯಿಯನ್ನು ಕಳೆದುಕೊಂಡ ಇವರ ಪ್ರಾಥಮಿಕ ಶಿಕ್ಷಣ ತಾಯಿಯ ತವರೂರಾದ ಬೆಲ್ಲದ ಬಾಗೇವಾಡಿಯಲ್ಲಿ ಆಯಿತು. ಬೆಳಗಾವಿಯ ಗಿಲಗಂಜಿ ಅರಟಾಳ ಹೈಸ್ಕೂಲಿನಲ್ಲಿ ಮಾಧ್ಯಮಿಕ ಶಿಕ್ಷಣ ಪೂರೈಸಿದ ಕರ್ಕಿಯವರು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಅಭ್ಯಾಸದ ನಂತರ 1935ರಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಬೆಲ್ಲದ ಬಾಗೇವಾಡಿಯಲ್ಲಿ ಪ್ರಾಥಮಿಕ ಶಿಕ್ಷಣ, ಬೆಳಗಾವಿಯ ಜಿ.ಎ. ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪಡೆದರು. ಕೊಲ್ಲಾಪುರದ ರಾಜಾರಾಮ ಕಾಲೇಜು,…
ಉಡುಪಿ : ಭರತನಾಟ್ಯ, ಸಂಗೀತ, ಸಂಸ್ಕೃತಿ, ನಾಟಕ ಮತ್ತು ಶಿಕ್ಷಣಗಳ ವಿಶಿಷ್ಟ ಸಮ್ಮಿಲನವಾಗಿ ಹೆಸರು ಮಾಡಿರುವ ‘ನಾಟ್ಯಾಯನ’ ಯುಗಳ ನೃತ್ಯ ಕಾರ್ಯಕ್ರಮ ಉಡುಪಿಯ ಅಮೃತ್ ಗಾರ್ಡನಿನಲ್ಲಿ ದಿನಾಂಕ 04-11-2023 ರಂದು ಪ್ರದರ್ಶನಗೊಂಡಿತು. ಗೌಡ ಸಾರಸ್ವತ ಸಾಮಾಜದ ಪುರೋಹಿತ ಪ್ರಮುಖರಲ್ಲಿ ಒಬ್ಬರಾದ ವೇ.ಮೂ. ಚೇಂಪಿ ರಾಮಚಂದ್ರ ಅನಂತ ಭಟ್ ಅವರ ಷಷ್ಠಿ ಪೂರ್ತಿ ಸಂಭ್ರಮದ ಪ್ರಯುಕ್ತ ಆಯೋಜನೆಗೊಂಡ ಈ ಕಾರ್ಯಕ್ರಮ ವಿದ್ವಜ್ಜನ ಸಹಿತ ಸರ್ವರ ಮನಸೂರೆಗೊಂಡು ಎಲ್ಲರ ಪ್ರಸಂಶೆಗೆ ಪಾತ್ರವಾಯಿತು. ವಿದುಷಿ ಅಯನಾ.ವಿ. ರಮಣ್ ಪ್ರಸ್ತುತ ಪಡಿಸಿದ ಸನ್ಯಾಸ ಸೂಕ್ತ, ಅದ್ಭುತ ಸ್ಮರಣಶಕ್ತಿಯ ಕವಿನಾಮಾವಳಿ, ವಿದ್ವಾನ್ ಮಂಜುನಾಥ್. ಎನ್. ಪುತ್ತೂರು ಅವರೊಂದಿಗೆ ಅಭಿನಯಿಸಿದ ಅವರದೇ ರಚನೆಯ ಮೇಳಪ್ರಾಪ್ತಿ, ವಿಭಿನ್ನವಾಗಿ ಯುಗಳ ನೃತ್ಯಕ್ಕೆ ಅಳವಟ್ಟ ಪುರಂದರ ದಾಸರ ‘ಭಾಗ್ಯದ ಲಕ್ಷ್ಮೀ ಬಾರಮ್ಮ’ ಮುಂತಾದವು ವಿಶೇಷ ಮೆಚ್ಚುಗೆ ಗಳಿಸಿದವು. ಕಾರ್ಯಕ್ರಮದ ಬಳಿಕ ನಾಟ್ಯಾಯನದ ನಿರ್ದೇಶಕ ಕೆ.ವಿ. ರಮಣ್ ಮಂಗಳೂರು – ಡಾ. ಮೂಕಾಂಬಿಕ ಜಿ.ಎಸ್. ದಂಪತಿ ಸಹಿತ ಕಲಾವಿದರನ್ನು ಗೌರವಿಸಲಾಯಿತು. ಉಪನ್ಯಾಸಕ ರಾಮಚಂದ್ರ ನಿರೂಪಿಸಿ ಚೇಂಪಿ…
ಮಂಗಳೂರು : ಮಧುರತರಂಗ (ರಿ.), ದ.ಕ. ಮಂಗಳೂರು ಅರ್ಪಿಸುವ ಶ್ರೀ ಲಕ್ಷ್ಮೀ ವೆಂಕಟರಮಣ ಮಠ ಪೋಳ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದೊಂದಿಗೆ ‘ಭಾವ-ಗಾನಾಮೃತ ಸಮೂಹ ಗಾಯನ’ 2023ನೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜ್ಯೂ. ರಾಜ್ಕುಮಾರ್ ಖ್ಯಾತಿಯ, ಕರ್ನಾಟಕ ಸ್ವರಕಂಠೀರವ, ಸ್ವರತಪಸ್ವಿ ಜಗದೀಶ ಶಿವಪುರ ಮತ್ತು ಬಳಗದವರಿಂದ ದಿನಾಂಕ 22-11-2023ನೇ ಬುಧವಾರ ಸಂಜೆ ಗಂಟೆ 4.30ರಿಂದ ಪೋಳ್ಯ ಶ್ರೀವಾರಿ ವೇದಿಕೆ, ಶ್ರೀನಿವಾಸ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀವೆಂಕಟರಮಣ ಪೋಳ್ಯ ಮಠದ ಅಧ್ಯಕ್ಷರಾದ ಶ್ರೀ ಉಮಾಶಂಕರ ಎದುರ್ಕಳ ಇವರು ಜ್ಯೋತಿ ಬೆಳಗಿ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಗಾಯಕ ಕಲಾವಿದರಾದ ಶ್ರೀ ಪ್ರಭಾಕರ ಆಚಾರ್ಯ ಎನ್. ವಿಟ್ಲ ಮತ್ತು ಕಲ್ಲಚ್ಚು ಪ್ರಕಾಶನದ ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ಶ್ರೀ ಮಹೇಶ್ ಆರ್ ನಾಯಕ್ ಇವರುಗಳನ್ನು ಸನ್ಮಾನಿಸಲಾಗುವುದು. ಮಧುರತರಂಗದ ಅಧ್ಯಕ್ಷರು,…
ಬಂಟ್ವಾಳ : ಕಾರಿಂಜ ‘ಯಕ್ಷಾವಾಸ್ಯಮ್’ನ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಕಾವಳ ಪಡೂರು ಗ್ರಾಮದ ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ದಿನಾಂಕ 05-11-2023ರಂದು ಪಚ್ಚಾಜೆಗುತ್ತು ಜಿನರಾಜ ಅರಿಗ ಇವರು ಉದ್ಘಾಟಿಸಿದರು. ಈ ಸಂದರ್ಭ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ ಗಣೇಶ ಕೊಲಕಾಡಿ ಅವರಿಗೆ 2013ರ ‘ಯಕ್ಷಾವಾಸ್ಯಮ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ.ಕೆ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಯಕ್ಷಗಾನ ಕಲೆಯಲ್ಲಿ ಜನ ಸಂಸ್ಕೃತಿ ಮತ್ತು ಧರ್ಮವಿದೆ. ಕಲೆಯ ಮೇಲೆ ಅಭಿರುಚಿ ಹೊಂದಿದಾಗ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಕಲೆ ಮತ್ತು ಕಲಾವಿದರನ್ನು ಬೆಳಸುತ್ತಿರುವ ಯಕ್ಷವಾಸ್ಯಮ್ ಕಾರ್ಯ ಪ್ರಶಂಸನೀಯ” ಎಂದು ಹೇಳಿದರು. ಗಣೇಶ ಕೊಲಕಾಡಿ ಅವರ ಶಿಷ್ಯ ದೀವಿತ್ ಕೆ.ಎಸ್. ಪೆರಾಡಿ ಅಭಿನಂದನಾ ಮಾತುಗಳನ್ನಾಡಿ, “ಗಣೇಶ ಕೊಲಕಾಡಿ ಅವರು ತಮ್ಮ ಅನಾರೋಗ್ಯದಲ್ಲಿಯೂ ಯಕ್ಷಗಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ ಯಕ್ಷಗಾನಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ…
ಬೆಳಗಾವಿ : ರಂಗಸಂಪದ (ಲಿ), ಬೆಳಗಾವಿ, ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್, ಧಾರವಾಡ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನ’ ಕಾರ್ಯಕ್ರಮವು ದಿನಾಂಕ 18-11-2023ರಂದು ಸಂಜೆ 5 ಗಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿಗಳಾದ ಶ್ರೀ ಎಸ್.ಎಮ್, ಕುಲಕರ್ಣಿ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಡಾ. ಸರಜೂ ಕಾಟಕರ ಮತ್ತು ಡಾ. ರಾಮಕೃಷ್ಣ ಮರಾಠೆ ಇವರುಗಳು ಭಾಗವಹಿಸಲಿರುವರು. ಕಾರ್ಯಕ್ರಮದ ಕೊನೆಯಲ್ಲಿ ರಂಗಸಂಪದ ಬೆಳಗಾವಿ ಪ್ರಸ್ತುತಪಡಿಸುವ ದಿ. ಶಿಂಪಿ ಲಿಂಗಣ್ಣ ರಚನೆ ಮತ್ತು ಡಾ. ಅರವಿಂದ ಕುಲಕರ್ಣಿ ನಿರ್ದೇಶನದಲ್ಲಿ ‘ಅಣ್ಣ-ಬಾಪು’ (ಸ್ವರ್ಗದಲ್ಲಿ ಬಾಪೂಜಿ ಮತ್ತು ಬಸವಣ್ಣ ಇವರ ಸಂಭಾಷಣೆ) ದ್ವಿಪಾತ್ರ ಕಿರು ನಾಟಕ ಪ್ರದರ್ಶನ ನಡೆಯಲಿದೆ. ಶ್ರೀ ಅರವಿಂದ ಪಾಟೀಲ ಮತ್ತು ಡಾ. ಅರವಿಂದ ಕುಲಕರ್ಣಿ ಈ ನಾಟಕದಲ್ಲಿ ಅಭಿನಯಿಸುವ ಕಲಾವಿದರು. ರಂಗಸಂಪದ ಇದರ ಅಧ್ಯಕ್ಷರಾದ ಡಾ.…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮಾಹೆ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಇದರ ಆಶ್ರಯದಲ್ಲಿ ಬಾರಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಉಡುಪಿ ಜಿಲ್ಲಾ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 18-11-2023 ಶನಿವಾರ ಬೆಳಿಗ್ಗೆ 9 ಘಂಟೆಗೆ ಎಂ.ಜಿ.ಎಂ. ಕಾಲೇಜು ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ನಡೆಸಲಾಗುವುದು. ಆಸಕ್ತರು ಶಾಲಾ ಗುರುತು ಚೀಟಿಯೊಂದಿಗೆ ಅಂದು ಬೆಳಿಗ್ಗೆ 9-00 ಗಂಟೆಗೆ ಹೆಸರು ನೋಂದಾಯಿಸಿ ಸ್ಪರ್ಧೆಯಲ್ಲಿ ಭಾಗವಹಿಸುವುದು. ಪ್ರವೇಶ ಶುಲ್ಕವಿರುವುದಿಲ್ಲ. ಸ್ಪರ್ಧಾ ವಿಷಯ : 1ರಿಂದ 4ನೇ ತರಗತಿ : ಐಚ್ಛಿಕ 5ರಿಂದ 7ನೇ ತರಗತಿ : ಐಚ್ಛಿಕ 8ರಿಂದ 10ನೇ ತರಗತಿ : ಗೂಡುದೀಪ ಅಥವಾ ರಾಷ್ಟ್ರೀಯ ಹಬ್ಬ ಪಿಯುಸಿಯವರಿಗೆ : ಸ್ವಾತಂತ್ರ್ಯ ಹೋರಾಟಗಾರರು ಅಥವಾ ಪರಿಸರ ಸಂರಕ್ಷಣೆ ಪದವಿ ವಿದ್ಯಾರ್ಥಿಗಳಿಗೆ : ಉಡುಪಿ ಪರ್ಯಾಯೋತ್ಸವ ಅಥವಾ ವಿಶ್ವಶಾಂತಿ ಸ್ಪರ್ಧಾಳುಗಳು ಈ ಕೆಳಗಿನ ವಿಷಯಗಳನ್ನು ಗಮನದಲ್ಲಿಡುವುದು…
ಬಂಟ್ವಾಳ : ದ.ಕ. ಜಿಲ್ಲೆ, ಬಂಟ್ವಾಳ ತಾಲೂಕು, ಪಾಣೆಮಂಗಳೂರು, ಮೆಲ್ಕಾರ್ ಇಲ್ಲಿರುವ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ (ರಿ.) ಇವರು ಮೀಲಾದ್ ಪ್ರಯುಕ್ತ ದ.ಕ. ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಯ ‘ಬಹುಮಾನ ವಿತರಣಾ ಸಮಾರಂಭ’ವನ್ನು ದಿನಾಂಕ 17-11-2023 ಶುಕ್ರವಾರ ಸಂಜೆ 4.00ಕ್ಕೆ ಫರಂಗಿಪೇಟೆಯ ಮುಹಿಯುದ್ದೀನ್ ಜುಮಾ ಮಸೀದಿ ಹತ್ತಿರ ಇರುವ ಸುಹಾ ಕಾಂಪ್ಲೆಕ್ಸ್ ಇಲ್ಲಿ ನಡೆಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಮಿಟಿಯ ಅಧ್ಯಕ್ಷರಾದ ಹಾಜಿ ಜಿ. ಮುಹಮ್ಮದ್ ಹನೀಪ್ ಇವರು ವಹಿಸಲಿದ್ದು, ಬಹುಮಾನ ವಿತರಣೆಯನ್ನು ತುಂಬೆ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ.ಎನ್. ಗಂಗಾಧರ ಆಳ್ವ ಇವರು ನಡೆಸಿಕೊಡಲಿದ್ದಾರೆ. ಅತಿಥಿಗಳಾಗಿ ಫರಂಗಿಪೇಟೆಯ ಮುಹಿಯುದ್ದೀನ್ ಜುಮಾ ಮಸೀದಿ ಇದರ ಅಧ್ಯಕ್ಷರಾದ ಜನಾಬ್ ಉಮರ್ ಫಾರೂಕು ಮತ್ತು ಫರಂಗಿಪೇಟೆಯ ಉದ್ಯಮಿಯಾದ ಜನಾಬ್ ಆಶಿರ್ ಮೇಲ್ಮನೆ ಇವರುಗಳು ಭಾಗವಹಿಸಲಿರುವರು. ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತಮಗೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.
ತೆಕ್ಕಟ್ಟೆ ಹಯಗ್ರೀವದಲ್ಲಿ ‘ಸಂಯಮಂ ಯಕ್ಷ ಮಹಿಳಾ ಬಳಗ’ ಕೋಟೇಶ್ವರ ಇವರ ನೇತೃತ್ವದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ ಇವರ ಸಹಯೋಗದೊಂದಿಗೆ ದಿನಾಂಕ 08-11-2023ರಂದು ನಡೆದ ‘ಮಲ್ಪೆ ವಾಸುದೇವ ಸಾಮಗರ ಸಂಸ್ಮರಣೆ’ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ದೇವದಾಸ ರಾವ್ ಕೂಡ್ಲಿ ಹಾಗೂ ಭರತನಾಟ್ಯ ಹಾಗೂ ಯಕ್ಷ ಕಲಾವಿದೆ ಭಾಗೀರಥಿ ರಾವ್ ಅವರನ್ನು ಸಮ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಶೆಟ್ಟಿ ಕೋಟೇಶ್ವರ “ತಾಳಮದ್ದಳೆ ಕ್ಷೇತ್ರದಲ್ಲಿ ಮೇಳ ಕಟ್ಟಿ ಮುನ್ನಡೆಸಿ ಸಾಧಿಸಿದ ಮೇರು ಕಲಾವಿದರು ಸಾಮಗರು. ಕಲೆ ಉಳಿಯುವುದು ಕಲಾವಿದರಿಂದ. ನಲಿದಾಡುವ ಜ್ಙಾನಕೋಶದಂತಿದ್ದ ವಾಸುದೇವ ಸಾಮಗರಿಗೆ ವಿದ್ವತ್ತು, ಅಭಿವ್ಯಕ್ತಿ ಮೂಲ ಬಂಡವಾಳ. ಪರಂಪರೆಗೆ ಅಂಟಿಕೊಂಡವರಲ್ಲ ಸಾಮಗರು. ಸಂಪ್ರದಾಯದ ಜೊತೆಗೆ ಹೊಸ ಹೊಸ ಆಯಾಮಗಳನ್ನು ಹುಡುಕಿ ಅನುಷ್ಠಾನಕ್ಕೆ ತಂದ ಮೇರು ಕಲಾವಿದರು. ಯಕ್ಷರಂಗದ ಪರಿಪೂರ್ಣ ಕಲಾವಿದರಾದ ಸಾಮಗರು ವ್ಯಾಕರಣ ಜ್ಙಾನ ಹೊಂದಿ, ಅನೇಕಾನೇಕ ಕಲಾವಿದರಿಗೆ ದಿಗ್ದರ್ಶನ ನೀಡಿ ಉಳಿದ ಕಲಾವಿದರನ್ನೂ ಅತ್ಯಂತ ಎತ್ತರಕ್ಕೆ ಏರಿಸಬಲ್ಲ ಶ್ರೇಷ್ಠ ಕಲಾವಿದರು. ಯಕ್ಷಗಾನ ಕ್ಷೇತ್ರ…
ಪುತ್ತೂರು : ಬಪ್ಪಳಿಗೆ ಜೈನ ಭವನದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರವು ದಿನಾಂಕ 05-11-2023ರಂದು ಏರ್ಪಡಿಸಿದ ‘ವರ್ಷ ಸಂಭ್ರಮ-19’ ಕಾರ್ಯಕ್ರಮಕ್ಕೆ ಮಂಗಳೂರು ಕೊಲ್ಯ ನಾಟ್ಯ ನಿಕೇತನದ ನೃತ್ಯಗುರು, ಶಾಂತಲಾ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಉಳ್ಳಾಲ ಮೋಹನ ಕುಮಾರ್ ಇವರು ಚಾಲನೆ ನೀಡಿ ಮಾತನಾಡುತ್ತಾ “ಸಂಸ್ಕೃತಿ, ಪರಂಪರೆ ಉಳಿವಿಗೆ ಸನಾತನ ನೃತ್ಯದ ಸಂಪ್ರದಾಯ ಉಳಿಯಬೇಕು. ಈ ನಿಟ್ಟಿನಲ್ಲಿ ಶಾಸ್ತ್ರೀಯ ನೃತ್ಯ ತರಗತಿಗಳನ್ನು ನಡೆಸುವ ಮೂಲಕ ಸಾಕಷ್ಟು ಶ್ರಮ ಪಡುತ್ತೇವೆ. ಇಂತಹ ನೃತ್ಯವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಇನ್ನಷ್ಟು ನೃತ್ಯಗುರುಗಳನ್ನು ತಯಾರು ಮಾಡಬೇಕಾಗಿದೆ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, “ಗುರು-ಶಿಷ್ಯರ ಸಂಬಂಧ ಹೇಗೆ ಇರಬೇಕು ಎಂಬುದಕ್ಕೆ ಈ ವೇದಿಕೆ ಸಾಕ್ಷಿಯಾಗಿದೆ. ಸಂಸ್ಕೃತಿ ಪೋಷಣೆಯ ಇಂತಹ ಕಲೆಯನ್ನು ಮಕ್ಕಳು ಬೆಳೆಸಿಕೊಳ್ಳಬೇಕು” ಎಂದು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ‘ಗ್ರಾಮೀಣ ಪ್ರದೇಶದ ಅನೇಕ ಪ್ರತಿಭೆಗಳಿಗೆ ನೃತ್ಯೋಪಾಸನಾ…
ಮಂಗಳೂರು : ತುಳು ಕೂಟ (ರಿ) ಕುಡ್ಲದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ನೀಡುತ್ತಿರುವ ‘ರತ್ನವರ್ಮ ಹೆಗ್ಗಡೆ ಪ್ರಶಸ್ತಿ – 2023’ಕ್ಕೆ ಅಪ್ರಕಟಿತ ತುಳು ನಾಟಕ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಎ-4 ಹಾಳೆಯಲ್ಲಿ 60-70 ಪುಟಗಳಿಗೆ ಮೀರದಂತೆ 2023ರಲ್ಲಿ ರಚಿಸಿದ ತುಳು ಕೃತಿಗಳು ಮಾತ್ರ ಸ್ವೀಕಾರಾರ್ಹ. 2024ರ ಮಕರ ಸಂಕ್ರಾಂತಿ ತನಕ ಕೃತಿಯ ರಂಗ ಪ್ರದರ್ಶನ, ಪ್ರಕಟಣೆ ಕೂಡದು. 1976 ರಿಂದ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಕಳೆದ 46 ವರ್ಷಗಳಲ್ಲಿ ಹತ್ತು ಬಾರಿ ಪ್ರಶಸ್ತಿ ಪಡೆದವರ ಕೃತಿಯನ್ನು ಸ್ವೀಕರಿಸುವುದಿಲ್ಲ. ಸತತ ಮೂರು ವರ್ಷ ಪ್ರಶಸ್ತಿ ವಿಜೇತರ ಕೃತಿಯನ್ನು ಮಾನ್ಯ ಮಾಡುವುದಿಲ್ಲ. ಇತರ ಪುರಸ್ಕಾರಕ್ಕೆ ಆಯ್ಕೆಯಾದ / ಭಾಷಾಂತರ ಗೊಂಡ / ಆಧಾರಿತ ಕೃತಿಗಳನ್ನು ನಿರಾಕರಣೆ ಮಾಡಲಾಗುವುದು. ಪೌರಾಣಿಕ, ಸಾಮಾಜಿಕ, ಚಾರಿತ್ರಿಕ, ಜಾನಪದ ಕಥಾನಕದ ಕೃತಿಗಳನ್ನು ಪರಿಗಣಿಸಲಾಗುವುದು. ಎಲ್ಲಿಯೂ ಲೇಖಕನ ಹೆಸರು ನಮೂದಿಸಬಾರದು. ಸ್ವ _ವಿವರ ಗಳನ್ನು ಪ್ರತ್ಯೇಕ ಹಾಳೆಯಲ್ಲಿ ನಮೂದಿಸಿ ಕಳಿಸ ಬೇಕು.…