Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಶ್ರೀ ಕೃಷ್ಣ ಸೇವಾ ಟ್ರಸ್ಟ್ ಹಾಗೂ ರಜತ ಮಹೋತ್ಸವ ಸಮಿತಿ ಶ್ರೀ ಕೃಷ್ಣ ಮಂದಿರ ಅಶೋಕನಗರ ಇದರ ಆಶ್ರಯದಲ್ಲಿ ಬೆಳ್ಳಿ ಹಬ್ಬ ವರ್ಷಾಚರಣೆಯ ಪ್ರಯುಕ್ತ ‘ಬೆಳ್ಳಿ ಹಬ್ಬದ ಸಂಭ್ರಮ 2023-24’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07-09-2023ರ ಗುರುವಾರ ದಂದು ಮಂಗಳೂರಿನ ಅಶೋಕನಗರದಲ್ಲಿರುವ ಗೋಕುಲ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರು ಮತ್ತು ಯಕ್ಷಗಾನ ಅರ್ಥಧಾರಿಗಳಾದ ಡಾ.ವಿನಾಯಕ ಭಟ್ ಗಾಳಿಮನೆ ಉದ್ಘಾಟಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಾರಾಧನ ಕಲಾಕೇಂದ್ರ ಉರ್ವ ಇದರ ನಿರ್ದೇಶಕಿ ನೃತ್ಯ ವಿದುಷಿ ಶ್ರೀಮತಿ ಸುಮಂಗಲಾ ರತ್ನಾಕರ ರಾವ್ ಮತ್ತು ಬಳಗದವರಿಂದ ‘ಜಾಂಬವತೀ ಕಲ್ಯಾಣ’ ಯಕ್ಷಗಾನ ನಡೆಯಲಿರುವುದು.
ಬಂಟ್ವಾಳ : ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇದರ ಸದಸ್ಯೆಯರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಚಂದ್ರಹಾಸ ಚರಿತ್ರೆ’ ಎಂಬ ಯಕ್ಷಗಾನ ತಾಳಮದ್ದಳೆಯು ದಿನಾಂಕ 08-09-2023ರಂದು ಮಧ್ಯಾಹ್ನ ಗಂಟೆ 2ರಿಂದ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಇಲ್ಲಿ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಹರೀಶ ಬಳಂತಿಮುಗರು, ಚೆಂಡೆಯಲ್ಲಿ ಶ್ರೀ ಸುಬ್ರಹ್ಮಣ್ಯ ಭಟ್ ದೇಲಂತಮಜಲು ಮತ್ತು ಮದ್ದಳೆಯಲ್ಲಿ ಮಾ.ಸಮರ್ಥ ಉಡುಪ. ಮುಮ್ಮೇಳದಲ್ಲಿ ಚಂದ್ರಹಾಸನಾಗಿ ಶ್ರೀಮತಿ ರಾಜಶ್ರೀ ನಾವಡ, ಕಪ್ಪದ ದೂತನಾಗಿ ಶ್ರೀಮತಿ ಸುಲೋಚನ ನಾವಡ, ದುಷ್ಟಬುದ್ಧಿಯಾಗಿ ಶ್ರೀಮತಿ ಸರಸ್ವತಿ ಹೊಳ್ಳ, ವಿಷಯೆಯಾಗಿ ಶ್ರೀಮತಿ ಶ್ರೀಲತಾ ನಾವಡ, ಕುಳಿಂದ ಮತ್ತು ಕಾಳಿಕಾದೇವಿಯಾಗಿ ಶ್ರೀಮತಿ ಜಯಲಕ್ಷ್ಮೀ ಮಯ್ಯ ಮತ್ತು ಮದನನಾಗಿ ಶ್ರೀಮತಿ ಜಯಲಕ್ಷ್ಮೀ ಕಾರಂತ್ ಸಹಕರಿಸಲಿದ್ದಾರೆ.
ಮಂಗಳೂರು : ಕವನ ಸಂಕಲನಗಳಿಗೆ ಲೇಖಕ-ಲೇಖಕಿಯರಿಂದ ಕವನಗಳ ಆಹ್ವಾನ. ಮಂಗಳೂರಿನ ಕಥಾಬಿಂದು ಪ್ರಕಾಶನ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಹಲವು ಸಾಹಿತ್ಯ ಸ್ನೇಹಿ ಯೋಜನೆಗಳನ್ನು ನೀಡುತ್ತಾ ಬಂದಿದೆ. ಈ ವರ್ಷದ ಅಕ್ಟೋಬರ್ 29ರಂದು ಸಂಸ್ಥೆಯ 16ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಿನಪೂರ್ತಿ ಕಾರ್ಯಕ್ರಮವನ್ನು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಪುಸ್ತಕ ಪ್ರಕಟಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಅನ್ವಯ 32 ಪುಟ ಮೀರದ ಸೈಡ್ ಪಿನ್ ಪುಸ್ತಕಗಳನ್ನು ಹೊರ ತರುವ ಗುರಿ ಇಡಲಾಗಿದೆ. ಲೇಖಕರು ಈ ಕೆಳಗಿನ ಒಳ ಹೂರಣವನ್ನು ಕಳಿಸಬೇಕಾಗುತ್ತದೆ. 1. ಒಂದು ಪುಟ ಮೀರದ 30 ಕವನಗಳನ್ನು ವಾಟ್ಸಪ್ ಮುಖಾಂತರ 9341410153 WhatsApp ಗೆ ಸೆಪ್ಟೆಂಬರ್ 20ರ ಒಳಗಾಗಿ ತಲುಪಿಸಬೇಕು. 2. 150 ಶಬ್ದ ಮೀರದ ಲೇಖಕರ ಮಾತು 3. 150 ಶಬ್ದ ಮೀರದ ಮುನ್ನುಡಿ 4. 50 ಶಬ್ಬ ಮೀರದ ಲೇಖಕರ ಪರಿಚಯ ಮತ್ತು ಕಲರ್ ಫೋಟೋ ಇವೆಲ್ಲವನ್ನೂ ಏಕ…
ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ವತಿಯಿಂದ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಕಾರ್ಯಕ್ರಮ ಹಾಗೂ ಕವನ ರಚನಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ದಿನಾಂಕ : 09-09-2023ನೇ ಶನಿವಾರ ಅಪರಾಹ್ನ ಗಂಟೆ 2.30ಕ್ಕೆ ಉರ್ವಸ್ಟೋರಿನ ಸಾಹಿತ್ಯ ಸದನದಲ್ಲಿ ನಡೆಯಲಿದೆ. ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಪ್ರತಿಷ್ಠಾನದ ವಿ.ಜಿ. ಭಟ್ ಇವರು ಪ್ರಸ್ತಾವನೆ ಮಾಡಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಭಾರತಿ ಪಿಲಾರ್ ಇವರು ಸಂಸ್ಮರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಡಾ.ನರಸಿಂಹಮೂರ್ತಿ ಭಾಗವಹಿಸಲಿದ್ದು, ಕ.ಲೇ.ವಾ. ಸಂಘದ ಅಧ್ಯಕ್ಷರಾದ ಡಾ. ಜ್ಯೋತಿ ಚೇಳ್ಯಾರು ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರಗಲಿದೆ. ವಿಶ್ರಾಂತ ಶಿಕ್ಷಕಿಯಾದ ಶ್ರೀಮತಿ ಉಷಾ ಎಂ. ಇವರಿಂದ ತೀರ್ಪುಗಾರರ ಅನಿಸಿಕೆ ಹಾಗೂ ಶ್ರೀಮತಿ ಗುಣವತಿ ರಮೇಶ್ ಮತ್ತು ಶ್ರೀಮತಿ ಸುಮಾ ಬಾರ್ಕೂರ್ ಇವರುಗಳು…
ಮಂಗಳೂರು : ಕಲ್ಲಚ್ಚು ಪ್ರಕಾಶನದ 14ನೇ ಆವೃತ್ತಿಯ 2023ನೇ ಸಾಲಿನ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ಮಹೇಶ ಆರ್.ನಾಯಕ್ ಅವರ ಕೃತಿ ‘ಮೊಹಬ್ಬತ್ ಕಾ ದಾಗ…’ ಕಥಾ ಸಂಕಲನದ ಬಿಡುಗಡೆ ಸಮಾರಂಭವು ದಿನಾಂಕ 02-09-2023ರಂದು ನಡೆಯಿತು. ಈ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿದ ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ “ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕು” ಎಂಬ ಸಂದೇಶವನ್ನು ನೀಡಿ ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿ ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ಧರಾಗಿ ಮಾಡುವಂತೆ ಕರೆನೀಡಿದರು. ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ಅಭಿನಂದನಾ ಮಾತುಗಳಾನ್ನಾಡಿದರು. ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ‘ಡಾ. ಟಿ. ವಿ. ವೆಂಕಟಾಚಲಶಾಸ್ತ್ರೀ ವಿದ್ವತ್ ದತ್ತಿ ಪ್ರಶಸ್ತಿ’ ಮತ್ತು ‘ಶ್ರೀಮತಿ ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿ’ ಪ್ರದಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪತ್ರಿಕೆಯ ನೂರನೇ ಸಂಪುಟದ ವಿಶೇಷ ಸಂಚಿಕೆ ಬಿಡುಗಡೆ ಜೊತೆಗೆ 90 ವರ್ಷಗಳನ್ನು ಪೂರೈಸಿದ ಹಿರಿಯ ವಿದ್ವಾಂಸರಾದ ನಾಡೋಜ ಡಾ. ಟಿ.ವಿ ವೆಂಕಟಾಚಲಶಾಸ್ತ್ರೀ ಅವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 01-09-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ವಿಶಾಲ ಮೈಸೂರು ಎಂದಿದ್ದ ನಮ್ಮ ನಾಡಿನ ಹೆಸರು ‘ಕರ್ನಾಟಕ’ ಎಂದು ಹೆಸರಾಗಲು ನಾಡೋಜ ಡಾ. ಟಿ.ವಿ.ವೆಂಕಟಾಚಲಶಾಸ್ತ್ರಿಗಳು ಬರೆದ ‘ನಮ್ಮ ಕರ್ನಾಟಕ’ ಎನ್ನುವ ಕೃತಿಯ ಪ್ರಭಾವವಿದೆ. ಕರ್ನಾಟಕದ ಪದದ ಮೂಲವನ್ನು ಶಾಸನ-ಶಾಸ್ತ್ರೀಯ ಗ್ರಂಥಗಳಾದಿಯಾಗಿ ಅವರು ಹುಡುಕಿದ ಕ್ರಮ ಮಾದರಿಯಾಗಿದೆ. ಈ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ್ದು ಹೆಮ್ಮೆಯ ಸಂಗತಿ. ಪ್ರೊ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ನಮ್ಮ ನಾಡು ನುಡಿಗಳ…
ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಸಮಿತಿ ಹಾಗೂ ಕರ್ನಾಟಕ ಗಮಕ ಕಲಾ ಪರಿಷದ್ ಇದರ ಕಾರ್ಕಳ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಹರಿಶ್ಚಂದ್ರ ಕಾವ್ಯದ ವಾಚನ ವ್ಯಾಖ್ಯಾನವು ದಿನಾಂಕ 31-08-2023ರಂದು ಕಾರ್ಕಳ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಡೆಯಿತು. “ರಾಘವಾಂಕ ಕವಿ ವಿರಚಿತ ಹರಿಶ್ಚಂದ್ರ ಕಾವ್ಯದ ವಿಶ್ವೇಶ್ವರ ಸಾಕ್ಷಾತ್ಕಾರ” ಎಂಬ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಅವರು ವ್ಯಾಖ್ಯಾನಕಾರರಾಗಿ ಹರಿಶ್ಚಂದ್ರ ಕಾವ್ಯದ ಮಹತ್ವವನ್ನು ಹೇಳಿ ಕಾವ್ಯದ ವ್ಯಾಖ್ಯಾನವನ್ನು ನೆರವೇರಿಸಿದರು. ಗಮಕಿ ವಿದ್ವಾನ್ ಸುರೇಶ್ ರಾವ್ ಅತ್ತೂರು ಅವರು ಕಾವ್ಯದ ವಾಚನಕಾರರಾಗಿ ಭಾಗವಹಿಸಿದ್ದರು. “ಹರನೆಂಬುದೇ ಸತ್ಯ. ಸತ್ಯವೆಂಬುದೇ ಹರ. ಅದನ್ನುಳಿದು ಅನ್ಯವಿಲ್ಲ. ದೇವರೊಬ್ಬನೇ ಎಂಬ ಸಂದೇಶವನ್ನು ಸಾರುವ ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯವು ಹನ್ನೆರಡನೇ ಶತಮಾನದ ಶ್ರೇಷ್ಠ ಕಾವ್ಯಗಳಲ್ಲಿ ಒಂದಾಗಿದೆ” ಎಂಬುದಾಗಿ ಹಿರಿಯ ವ್ಯಾಖ್ಯಾನಕಾರರಾದ ಗಮಕಿ ವಿದ್ವಾನ್ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಬೆಂಗಳೂರು ಇವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ ಸಂಘದ ಕಾರ್ಯಾಧ್ಯಕ್ಷರಾದ ಡಾ.ನಾ.ಮೊಗಸಾಲೆ, ಗಮಕ…
ಕಾಸರಗೋಡು : ಕಾಸರಗೋಡಿನ ರಂಗ ಚಿನ್ನಾರಿ ಹಾಗೂ ಮಹಿಳಾ ಘಟಕ ನಾರಿ ಚಿನ್ನಾರಿಯ ಸಹಯೋಗದೊಂದಿಗೆ ಆಯೋಜಿಸುವ ವಿನೂತನ ಕಾರ್ಯಕ್ರಮ ‘ಸ್ವರ ಚಿನ್ನಾರಿ’ ಇದರ ಉದ್ಘಾಟನಾ ಸಮಾರಂಭ ಹಾಗೂ ‘ಈ ನೆಲ ಈ ಸ್ವರ’ ಭಾವಗೀತೆ ಗಾಯನ ಕಾರ್ಯಕ್ರಮವು ದಿನಾಂಕ 09-09-2023ರ ಶನಿವಾರದಂದು ಸಂಜೆ ಘಂಟೆ 4.30ಕ್ಕೆ ಕಾಸರಗೋಡಿನ ಪಿಲಿಕುಂಜೆಯ ಮುನ್ಸಿಪಲ್ ಕಾನ್ಸರೆನ್ಸ್ ಹಾಲ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಕವಿಗಳು ಹಾಗೂ ಸ್ವರಚಿನ್ನಾರಿಯ ಗೌರವಾಧ್ಯಕ್ಷರಾದ ಶ್ರೀ ಕೃಷ್ಣಯ್ಯ ಅನಂತಪುರ ಇವರು ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರಾದ ಡಾ. ನಾ.ದಾಮೋದರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಗೌರವಾಧ್ಯಕ್ಷರು ಹಾಗೂ ಖ್ಯಾತ ಗಾಯಕರಾದ ವೈ.ಕೆ. ಮುದ್ದುಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟರು ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಮಿಮಿಕ್ರಿ ಕಲಾವಿದರಾದ ಮಿಮಿಕ್ರಿ ದಯಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್.ವಿ.ಭಟ್ ಹಾಗೂ ಧಾರ್ಮಿಕ ಮುಂದಾಳು ಮತ್ತು ಖ್ಯಾತ ನೇತ್ರ…
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗರಾದ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮ’ದ ಸರಣಿ ಎಂಟನೇ ಕಾರ್ಯಕ್ರಮ ದಿನಾಂಕ 26-08-2023ರಂದು ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ಅವರು ಮಾತನಾಡಿ ‘ಕನ್ನಡ ಸಾಹಿತ್ಯ ಪರಿಷತ್ನ ಮೂಲಕ ನಡೆಯುವ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ ಮತ್ತು ಗ್ರಾಮದ ಜನತೆಗೆ ಸಾಹಿತ್ಯದ ಬಗ್ಗೆ ತಿಳಿಸುವ ಕಾರ್ಯವಾಗುತ್ತಿದೆ. ಈ ಕಾರ್ಯಕ್ರಮ ತಾಲೂಕಿನೆಲ್ಲೆಡೆ ನಡೆಯುತ್ತಿದ್ದು ಇದು ಯಶಸ್ವಿಯಾಗಿ ನಡೆಯಲಿ ಎಂದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100…
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ಯಕ್ಷಭಾರತಿಯ 9ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಯಕ್ಷಗಾನ ಪ್ರದರ್ಶನ ದಿನಾಂಕ 10-09-2023ರಂದು ಅಪರಾಹ್ನ ಗಂಟೆ 2ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣಿಯೂರು ರೈತಬಂಧು ಆಹಾರೋದ್ಯಮ ಸಂಸ್ಥೆಯ ಶ್ರೀ ಶಿವಶಂಕರ ನಾಯಕ್ ಇವರು ಉದ್ಘಾಟಿಸಲಿದ್ದಾರೆ. ಉಜಿರೆ ಶ್ರೀ ಜನಾರ್ದನ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ, ಉಜಿರೆ ಗ್ರಾ.ಪಂ. ಅಧ್ಯಕ್ಷೆಯಾದ ಶ್ರೀಮತಿ ಉಷಾ ಕಿರಣ್ ಕಾರಂತ್, ಧರ್ಮಸ್ಥಳ ಗ್ರಾ.ಪ. ಉಪಾಧ್ಯಕ್ಷರಾದ ಶ್ರೀನಿವಾಸ ರಾವ್, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ಶ್ರೀ ಪ್ರೀತಮ್ ಡಿ. ಅತಿಥಿಗಳಾಗಿರುವರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ, ಸಂಘಟಕ ಶ್ರೀ ಭಾಸ್ಕರ ಬಾರ್ಯ ಅವರಿಗೆ ‘ಯಕ್ಷ ಭಾರತಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿದ್ದಾರೆ. ಸಂಜೆ 5ರಿಂದ ವಾರ್ಷಿಕ…