Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ (ರಿ.), ಇದರ 53ನೇ ವಾರ್ಷಿಕೋತ್ಸವ ಸಮಾರಂಭವನ್ನು ಶಿವಪ್ರಭಾ ಶ್ರೀ ವಾದಿರಾಜವನಂ ಹಯಗ್ರೀವ ನಗರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 25 ಜನವರಿ 2026ರಂದು ಮಧ್ಯಾಹ್ನ 3-00 ಗಂಟೆಗೆ ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಇವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಹೆ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮತ್ತು ಟೆಲಿಕಮ್ಯುನಿಕೇಶನ್ಸ್ ನಿವೃತ್ತ ಇಂಜಿನಿಯರ್ ವೈ ಸೀತಾರಾಮ ಶೆಟ್ಟಿ ಇವರು ಉಪಸ್ಥಿತರಿರುವರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಇದೇ ಸಂದರ್ಭದಲ್ಲಿ ಯಕ್ಷಗಾನ ಪ್ರಸಿದ್ಧ ವೇಷಧಾರಿ ಶ್ರೀ ಚಂದ್ರಗೌಡ ಗೋಳಿಕೆರೆ ಇವರಿಗೆ ‘ಯಕ್ಷರಂಗದ ಭೀಷ್ಮ ಎಂ.ಎಂ. ಹೆಗ್ಡೆ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಯಕ್ಷಗಾನ ಕಲಿಕಾ…
ಹಾಸನ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ರಿಜಿಸ್ಟ್ರಾರ್ ವಿರಾಜಪೇಟೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 18 ಜನವರಿ 2025ರಂದು ಯುವಶಕ್ತಿಯ ಸಕಾರ ಮೂರ್ತಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಪ್ರಯುಕ್ತ ನಡೆದ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಹಾಸನದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು. ಚೆನ್ನಬಸವೇಶ್ವರ ಕ್ಷೇತ್ರದ ಮಲ್ಲಿಕಾರ್ಜುನ ಸ್ವಾಮೀಜಿ, ಅರಕಲಗೂಡು ವಿಧಾನಸಭಾ ಮಾಜಿ ಶಾಸಕ ಎ. ಮಂಜು, ಕನ್ನಡ ಸಾಹಿತ್ಯ ಪರಿಷತ್ ಹಾಸನ ಗೌರವ ಕಾರ್ಯದರ್ಶಿ ಬೊಮ್ಮೇ ಗೌಡ, ಉದ್ಯಮಿ ಸಮಾಜಸೇವಕ ಸಾಧಿಕ್ ಅಹಮದ್ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್., ಕಾರ್ಕಳದ ಉದ್ಯಮಿ ಶಕೀರ್ ಅಹಮದ್, ಕರ್ನಾಟಕ ರಾಜ್ಯ…
ಬೆಂಗಳೂರು : ದೃಶ್ಯ (ರಿ.) ರಂಗತಂಡ ಪ್ರಯೋಗಿಸುತ್ತಿರುವ ದಾಕ್ಷಾಯಿಣಿ ಭಟ್ ಎ. ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನವನ್ನು ದಿನಾಂಕ 22 ಜನವರಿ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವು ಬಸವರಾಜ್ ಕಟ್ಟೀಮನಿಯವರ ‘ರಕ್ತ ಧ್ವಜ’ ಕತೆ ಹಾಗೂ ಆರ್. ಬಸವರಾಜ್ ರವರ ‘ಈಸೂರಿನ ಚಿರಂಜೀವಿಗಳು’ ಕಾದಂಬರಿ ಆಧಾರಿತ ಕಥೆಯಾಗಿದೆ. ಇದೇ ಸಂದರ್ಭದಲ್ಲಿ ಪಿಚ್ಚಳ್ಳಿ ಶ್ರೀನಿವಾಸ್ ಇವರು ಸಿಜಿಕೆ ಕುರಿತು ಮಾತನಾಡಲಿದ್ದಾರೆ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ದಿನಾಂಕ 20 ಜನವರಿ 2026ರಂದು ಮಾಸಿಕ ತಾಳಮದ್ದಲೆ ಕಾಸರಗೋಡು ಸುಬ್ರಾಯ ಪಂಡಿತ ವಿರಚಿತ ‘ರಾವಣ ವಧೆ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಕುಸುಮಾಕರ ಆಚಾರ್ಯ ಹಳೆನೇರಂಕಿ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಲೀಧರ ಕಲ್ಲೂರಾಯ, ಅನೀಶ ಕೃಷ್ಣ ಪುಣಚ ಭಾಗವಹಿಸಿದರು. ಶ್ರೀರಾಮನಾಗಿ ಗುಡ್ಡಪ್ಪ ಬಲ್ಯ, ರಾವಣನಾಗಿ ಗುಂಡ್ಯಡ್ಕ ಈಶ್ವರ ಭಟ್, ಮಂಡೋದರಿಯಾಗಿ ವಿ.ಕೆ. ಶರ್ಮ ಅಳಿಕೆ, ವಿಭೀಷಣನಾಗಿ ದುಗ್ಗಪ್ಪ ಯನ್, ಮಾತಲಿಯಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಸಂಚಾಲಕ ಮೖರ್ಕಳ ವೆಂಕಟಕೃಷ್ಣ ಭಟ್ ಪ್ರಾಯೋಜಿಸಿದರು. ದುಗ್ಗಪ್ಪ ಯನ್. ಸ್ವಾಗತಿಸಿ, ಭಾಸ್ಕರ ಬಾರ್ಯ ವಂದಿಸಿದರು.
ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ, ನಾಡು-ನುಡಿಹಬ್ಬ ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 18 ಜನವರಿ 2026ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸ್ಥಾಪಕ ಸಂಚಾಲಕ ಡಾ. ಎಂ.ಜಿ.ಆರ್. ಅರಸ್ “ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ನಿರತರಾದವರನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಇಲ್ಲಿನ ಕನ್ನಡಿಗರ ನೊಂದ ಮನಸ್ಸಿಗೆ ಸಾಂತ್ವನ ಲಭಿಸಲು ಸಾಧ್ಯ. ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಗೆ ಧಕ್ಕೆಯಾಗುವುದನ್ನು ಸಹಿಸಲಾಗದು. ಕನ್ನಡ ಭಾಷೆಯ ಮೇಲಿನ ದಬ್ಬಾಳಿಕೆ ವಿರುದ್ಧ ಹೋರಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಬೇಕು. ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಇವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿರುವುದು ಸಂತಸದ ವಿಚಾರ” ಎಂದು ಹೇಳಿದರು. ಕನ್ನಡ…
ಮಂಗಳೂರು : ದಶಮಾನದ ಹೊತ್ತಿನಲ್ಲಿರುವ ಕೋಡಿಕಲ್ ನ ವಿಪ್ರ ವೇದಿಕೆಯ ಅಷ್ಟಮ ಕಾರ್ಯಕ್ರಮವು ದಿನಾಂಕ 18 ಜನವರಿ 2026ರಂದು ನಡೆಯಿತು. ದೀಪ ಬೆಳಗಿಸಿ ಉದ್ವಾಟನಾ ಮಾತುಗಳನ್ನಾಡಿ ಸಂಘಟನೆಯ ಅಗತ್ಯವನ್ನು ವಿವರಿಸಿದ ಖ್ಯಾತ ಉದ್ಯಮಿ ಶಿಕ್ಷಣ ತಜ್ಞ ಶ್ರೀ ಅನೂಪ್ ರಾವ್ ಬಾಗ್ಲೋಡಿಯವರು “ಸಮಾಜ ಒಗ್ಗೂಡಿ ಬರುವ ಎಲ್ಲರನ್ನೂ ಸ್ವೀಕರಿಸುತ್ತದೆ. ಸಮಾಜವು ಅದನ್ನೇ ಬಯಸಿ ಸಜ್ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಬಲಿಷ್ಠವಾಗುತ್ತದೆ. ನಾವೂ ಸಮಾಜಕ್ಕಾಗಿ ದುಡಿಯುವ ಹುಮ್ಮಸ್ಸು ಬರುತ್ತದೆ. ಬಹಳವನ್ನು ಸಮಾಜದಿಂದ ಪಡೆದು ಒಂದಂಶವನ್ನು ಸಮಾಜದ ಏಳ್ಗೆಗಾಗಿ ನೀಡುವ ಸದ್ಭುದ್ದಿ ಎಲ್ಲರಲ್ಲೂ ಮೂಡಲಿ” ಎಂದು ಹೇಳಿದರು. ದುರ್ಗಾದಾಸ್ ಕಟೀಲ್, ವಿಶ್ವೇಶ್ವರ ಭಟ್, ವಿ.ಎಸ್. ಹೆಬ್ಬಾರ್, ಗೋಪಾಲಕೃಷ್ಣ ರಾವ್, ವಿದ್ಯಾ ಗಣೇಶ ರಾವ್, ಪ್ರಭಾವತಿ ಮಡಿ, ಉಷಾ ಎ. ಬಾಗ್ಲೋಡಿ, ಅನಂತ ಪದ್ಮನಾಭ ಉಪಾಧ್ಯಾಯ, ಉದ್ಯಮಿ ಗಿರೀಶ್ ರಾವ್ ಕೆ. ಹಾಗೂ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ರೂಪಕಲಾ ರಾಮಚಂದ್ರ ಭಟ್ ನಿರ್ವಹಿಸಿದರೆ, ಕಿಶೋರ್ ಕೃಷ್ಣ ವಂದಿಸಿದರು. ಬಳಿಕ ಕೆ. ಗೌರವ್ ರಾವ್ ನೇತೃತ್ವದಲ್ಲಿ…
ಆಲಮೇಲ : ವಿಜಯಪುರ ತಾಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ನೀಡುವ 2026ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಮಾಜಿ ಸಚಿವ ದಿ. ಎಂ.ಸಿ. ಮನಗೂಳಿ ಸ್ಮರಣಾರ್ಥ ನೀಡಲಾಗುವ ‘ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಯನ್ನು ಬೆಂಗಳೂರಿನ ‘ಅಂಕಿತ ಪುಸ್ತಕ ಪ್ರಕಾಶನ’ ಆಯ್ಕೆಯಾಗಿದ್ದು, ರೂ. ಇಪ್ಪತ್ತೈದು ಸಾವಿರ ನಗದು, ಪ್ರಶಸ್ತಿಫಲಕ ಒಳಗೊಂಡಿದೆ. ಅಂಕಿತ ಪ್ರಕಾಶನವು ಕಳೆದ 30 ವರ್ಷಗಳಲ್ಲಿ ಸಾವಿರ ಪುಸ್ತಕಗಳನ್ನು ಪ್ರಕಟಿಸಿದ್ದು ಬಹುದೊಡ್ಡ ಸಾಧನೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ‘ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ’ಗೆ ಕಲಬುರಗಿಯ ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ ಇವರಿಗೆ ನೀಡಲು ತೀರ್ಮಾನಿಸಿದ್ದು ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಫೆಬ್ರವರಿ ಮೊದಲ ವಾರದದಲ್ಲಿ ಕಡಣಿಯಲ್ಲಿ ನಡೆಯುವ 9ನೇ ವರ್ಷದ ಸಂಭ್ರಮ ಹಾಗೂ 25 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.
ಬೆಳಗಾವಿ : ಸಹೃದಯ ಸಾಹಿತ್ಯ ಪ್ರತಿಷ್ಠಾನವು ಅತ್ಯುತ್ತಮ ಕವನ ಹಾಗೂ ಗಜಲ್ ಸಂಕಲನಗಳಿಗೆ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ ನೀಡಲು ನಿರ್ಧರಿಸಿದ್ದು, ಲೇಖಕರಿಂದ ಕವನ ಸಂಕಲನ ಆಹ್ವಾನಿಸಿದೆ. ಪ್ರಶಸ್ತಿಯು ರೂ. ಐದು ಸಾವಿರ ನಗದು ಬಹುಮಾನ ಒಳಗೊಂಡಿದ್ದು, 2025ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕವನ ಹಾಗೂ ಗಜಲ್ ಸಂಕಲನಗಳ ಮೂರು ಪ್ರತಿಗಳನ್ನು ದಿನಾಂಕ 10 ಮಾರ್ಚ್ 2026ರೊಳಗಾಗಿ ಕಳುಹಿಸಲು ಕೋರಲಾಗಿದೆ. ಕೃತಿಗಳನ್ನು ನಾಗೇಶ ಜೆ. ನಾಯಕ ಅಧ್ಯಕ್ಷರು, ಸಹೃದಯ ಸಾಹಿತ್ಯ ಪ್ರತಿಷ್ಠಾನ (ರಿ.), ಅವ್ವ ಶಿವಬಸವ ನಗರ, ರಾಮಾಪುರ ಸೈಟ್, ಸವದತ್ತಿ-591126 ಬೆಳಗಾವಿ ಈ ವಿಳಾಸಕ್ಕೆ ಕಳುಹಿಸಬಹುದು ಎಂದು ತಿಳಿಸಿದೆ.
ಮಂಗಳೂರು : ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ’ಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತರಾದ ಕಾವ್ಯಶ್ರೀ ಅಜೇರು ಮತ್ತು ರಂಗಭೂಮಿ ಕಲಾವಿದರಿಗೆ ನೀಡಲಾಗುವ ‘ಶ್ರೀ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ಗೆ ಈ ಬಾರಿ ನಟ ಉಮೇಶ್ ಮಿಜಾರು ಇವರುಗಳು ಆಯ್ಕೆಯಾಗಿದ್ದಾರೆ. ಶ್ರೀ ಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ದಿನಾಂಕ 23 ಜನವರಿ 2026ರಂದು ರಾತ್ರಿ 7-00 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ಮಹಿಳಾ ಯಕ್ಷಗಾನ ಮತ್ತು ನಮ್ಮ ಬೆದ್ರ ತಂಡದವರಿಂದ ‘ವೈರಲ್ ವೈಶಾಲಿ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮಾಹೆ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಹಯೋಗದಲ್ಲಿ ದಿನಾಂಕ 17 ಜನವರಿ 2026ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ “ಸಂಶೋಧನೆ ಎಂದರೆ ಇರುವುದನ್ನೇ ಚಂದಮಾಡಿ ಬರೆಯುವುದಲ್ಲ, ಹಾಗೆ ಮಾಡಿದರೆ ಸಂಶೋಧನೆಯಲ್ಲಿ ಯಾವ ಸತ್ವವೂ ಇರುವುದಿಲ್ಲ. ಸಂಶೋಧನೆಯಲ್ಲಿ ಭಾಷೆಯ ಆಳಕ್ಕೆ ಇಳಿದು ಅರ್ಥದ ಅನುಸಂಧಾನ ನಡೆಯಬೇಕು. ಗೋವಿಂದ ಪೈ ಮುಳಿಯ ತಿಮ್ಮಪ್ಪಯ್ಯ, ಪಂಚಮಂಗೇಶ್ ರಾಯರು, ಸೇಡಿಯಾಪು ಕೃಷ್ಣಭಟ್ ಮೊದಲಾದವರು ಸಂಶೋಧನೆ ಮತ್ತು ಕಾವ್ಯ ಎರಡು ಕ್ಷೇತ್ರದಲ್ಲಿ ಸಮಾನವಾಗಿ ಕೆಲಸ ಮಾಡಿದ್ದಾರೆ. ಕರಾವಳಿ ಜಿಲ್ಲೆಯ ಲೇಖನಗಳಲ್ಲಿ ಮಣ್ಣಿನ ಸತ್ವವಿದೆ. ನೆಲದ ಮೂಲಕ ಕಾವ್ಯ ಕಟ್ಟಿದ್ದಾರೆ. ಆದರೆ ಯುವಜನತೆ ಮುಳಿಯ ತಿಮ್ಮಪ್ಪಯ್ಯ ಅವರ ಬಗ್ಗೆ…