Author: roovari

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ದಿನಾಂಕ 29 ಏಪ್ರಿಲ್ 2025ರಂದು ವಿಚಾರಗೋಷ್ಠಿ ಮತ್ತು ಪಡೀಲು ಶಂಕರಭಟ್ಟ ಸಂಸ್ಮರಣಾ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀ ನಿವಾಸ ಪೂಜಾರಿ “ಕಾರಂತರು ಒಂದು ತುಂಬಿದ ಕೊಡವಿದ್ದಂತೆ. ಅವರು ಎಂದೂ ಪ್ರಶಸ್ತಿಯ ಹಿಂದೆ ಹೋದವರಲ್ಲ. ಕಾರಂತರಲ್ಲಿ ಹಾಸ್ಯ ಪ್ರಜ್ಞೆಯೂ ಇತ್ತು. ಅವರು ಬಹಳ ನೇರವಾಗಿ ಮಾತನಾಡುವ ವ್ಯಕ್ತಿ. ಕಾರಂತರ ವಿಚಾರಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವುದು ಅವಶ್ಯ” ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತಕುಮಾರ “ಕಾರಂತರು ಬಹುಮುಖಿ ವ್ಯಕ್ತಿತ್ವದ ವ್ಯಕ್ತಿ. ಕಾರಂತರ ಬರಹ…

Read More

ಮೂರ್ನಾಡು : ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಘಟಕ, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಮೂರ್ನಾಡು ಹೋಬಳಿ ಘಟಕದ ವಿವಿಧ ಸಂಘ ಸಂಸ್ಥೆಗಳು ಇವರುಗಳ ಸಹಯೋಗದಲ್ಲಿ 7ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಮಕ್ಕಳಿಗೆ ‘ಚಿನ್ತನೆ ಚಲನೆ’ 10 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ದಿನಾಂಕ 12 ಮೇ 2025ರಿಂದ 22 ಮೇ 2025ರವರೆಗೆ ಮೂರ್ನಾಡು ಪಿ.ಎಂ.ಶ್ರೀ. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 9-30 ಗಂಟೆಯಿಂದ ಮಧ್ಯಾಹ್ನ 1-00 ಗಂಟೆ ತನಕ ನಡೆಯುವ ಈ ಶಿಬಿರದಲ್ಲಿ ಕನ್ನಡದ ಮಹತ್ವ, ಜಾನಪದ ಮಹತ್ವ, ಸಿನಿಮಾ ಪ್ರಪಂಚ, ಕೊಡಗಿನ ಸಾಮಾನ್ಯ ಜ್ಞಾನ, ಮಕ್ಕಳ ಮುಂದಿನ ಭವಿಷ್ಯ ಹಾಗೂ ವೃತ್ತಿಪರತೆ ಬಗ್ಗೆ ಚರ್ಚೆ, ಕೊನೆಯ ದಿನ ಕಲಿಕೆಯ ಎಲ್ಲಾ ವಿಷಯಗಳ ಬಗ್ಗೆ ಸ್ಪರ್ಧೆಗಳನ್ನು ನಡೆಸಲಾಗುವುದು.

Read More

ಕನ್ನಡದ ಪ್ರಮುಖ ವೈಚಾರಿಕ ಬರಹಗಾರ್ತಿ ಹಾಗೂ ಸೃಜನಶೀಲ ಕವಿ ಶಶಿಕಲಾ ವೀರಯ್ಯಸ್ವಾಮಿ. ಸ್ತ್ರೀವಾದಿ ಎಂದೇ ಗುರುತಿಸಲ್ಪಟ್ಟವರು ವೈಚಾರಿಕ ಬರಹಗಾರ್ತಿ ಶಶಿಕಲಾ ವೀರಯ್ಯಸ್ವಾಮಿ. ಮೂಲತಃ ಶಿಕ್ಷಕಿಯಾದ ಇವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಿ ಅಪ್ರತಿಮ ಸಾಧನೆ ಮಾಡಿದವರು. ಹಲವಾರು ಸಂಘ-ಸಂಸ್ಥೆಗಳಿಗೆ, ಅಸಹಾಯಕ ಬಡ ರೋಗಿಗಳಿಗೆ ಆರ್ಥಿಕ ಸಹಾಯವನ್ನು ನೀಡುವ ಮಾನವೀಯ ಗುಣವುಳ್ಳವರು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಇವರು ದೇಹದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸಿದ್ದಲಿಂಗಯ್ಯ ಮತ್ತು ಅನ್ನಪೂರ್ಣಾ ದೇವಿ ದಂಪತಿಯ ಸುಪುತ್ರಿ ಶಶಿಕಲಾ ವೀರಯ್ಯ 01 ಮೇ 1948ರಂದು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನಲ್ಲಿ ಮುಗಿಸಿ, ಕಾಲೇಜು ವಿದ್ಯಾಭ್ಯಾಸವನ್ನು ಬಿಜಾಪುರ ಮತ್ತು ಗುಲ್ಬರ್ಗದಲ್ಲಿ ಪೂರೈಸಿದರು. “ಸಿಂದಗಿಯ ಜಿಗುಟು ಮಣ್ಣಿನ ನೆಲದ ಚೈತನ್ಯ ತನ್ನನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ” ಎಂಬ ಮಾತುಗಳಿಂದ ಹುಟ್ಟೂರಿನ ಮೇಲೆ ಅವರಿಗಿರುವ ಅಭಿಮಾನ ವ್ಯಕ್ತವಾಗುತ್ತದೆ. ಎಂ.ಎ. ಪದವಿಯನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದ ಶಶಿಕಲಾ ಅವರು ತನ್ನ ಹುಟ್ಟೂರಿನಲ್ಲೇ ಸಿಂದಗಿ ಜೂನಿಯರ್ ಕಾಲೇಜಿನಲ್ಲಿ…

Read More

ಕಮತಗಿ  : ಮೇಘಮೈತ್ರಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಸವಿನೆನಪಿನ “ಶ್ರೀಮತಿ ಮಾಪಮ್ಮ ಎಸ್. ಹೊಸಮನಿ ದತ್ತಿ” ಪ್ರಶಸ್ತಿಗೆ ಶ್ರೀ ಮಲ್ಲಿಕಾರ್ಜುನ ಶೆಲ್ಲಿಕೇರಿ ಅವರ ‘ಹವೇಲಿ ದೊರೆಸಾನಿ’ ಕಥಾ ಸಂಕಲನ, ಮೇಘಮೈತ್ರಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಸವಿನೆನಪಿನ “ಡಾ. ಪ್ರಕಾಶ ಖಾಡೆ ಮೇಘಮೈತ್ರಿ ಕಥಾ ಸಾಹಿತ್ಯ ದತ್ತಿ” ಪ್ರಶಸ್ತಿಗೆ ಶಂಕರ ಬೈಚಬಾಳ ಇವರ ‘ಆಯ್ದ ಕಥೆಗಳು’ ಕಥಾ ಸಂಕಲನ ಹಾಗೂ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸವಿನೆನಪಿನ “ಡಾ. ವಿಜಯಕುಮಾರ ಕಟಗಿಹಳ್ಳಿಮಠ ಸಾಹಿತ್ಯ ದತ್ತಿ” ಪ್ರಶಸ್ತಿಗೆ ಲಕ್ಷ್ಮಣ ಬದಾಮಿ ಅವರ ‘ಮಾತಿಗಿಳಿದ ಚಿತ್ರ’ ಕೃತಿ ಆಯ್ಕೆಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ರಮೇಶ ಕಮತಗಿ ತಿಳಿಸಿದ್ದಾರೆ. ಈ ಪ್ರಶಸ್ತಿ ಪ್ರದಾನವನ್ನು ದಿನಾಂಕ 08 ಜೂನ್ 2025ರ ಭಾನುವಾರದಂದು ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಿರಿಯ ಸಾಹಿತಿಗಳು ಹಾಗೂ ಖ್ಯಾತ ವೈದ್ಯರಾದ ಡಾ. ಸಿ. ಶರತ್ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಿ…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಆಯೋಜಿಸಿದ ‘ಸುಕೃತಿ’ 17ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇದರ ಉದ್ಘಾಟನಾ ಸಮಾರಂಭವು ದಿನಾಂಕ 30 ಏಪ್ರಿಲ್ 2025 ರಂದು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪಾದೇಕಲ್ಲು ವಿಷ್ಣುಭಟ್ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾತನಾಡಿ “ಕನ್ನಡ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗಿಂತ ಶ್ರೀಮಂತವಾದುದು ಮತ್ತು ಕನ್ನಡ ನಾಡು ಕಲೆ, ಸಾಹಿತ್ಯ, ಅಧ್ಯಾತ್ಮದ ತವರೂರು. ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಷರ ಪುರುಷೋತ್ತಮನಾದ ಶ್ರೀ ಕೃಷ್ಣನ ಸನ್ನಿಧಾನದಲ್ಲಿ ಅಕ್ಷಯ ತೃತೀಯದಂದು ಆಯೋಜನೆಯಾಗಿರುವುದು ನಿಜವಾದ ಅಕ್ಷರ ತೃತೀಯವಾಗಿದೆ. ಸಾಹಿತ್ಯ ಸಮ್ಮೇಳನ ಸಾರ್ಥಕ ಆಗಬೇಕಾದರೆ ಸಾಹಿತ್ಯವು ಹಿತದಿಂದ ಸಹಿತವಾಗಿರಬೇಕು. ಈ ಸಮ್ಮೇಳನ ಶ್ರೀ ಕೃಷ್ಣನ ಆರಾಧನೆಯಾಗಿದೆ” ಎಂದರು. ಕ. ಸಾ. ಪ. ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಮಾತನಾಡಿ “ಕನ್ನಡಿಗರು ಸ್ವಾಭಿಮಾನಿಗಳು. ಪರಶುರಾಮ…

Read More

ಮಂಗಳೂರು : ಮಲ್ಲಿಕಟ್ಟೆಯಲ್ಲಿರುವ ನೂಪುರ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಅಕಾಡೆಮಿ ಆಯೋಜಿಸಿರುವ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ ಕಾರ್ಯಕ್ರಮವನ್ನು ದಿನಾಂಕ 04 ಮೇ 2025ರಂದು ಸಂಜೆ 5-00 ಗಂಟೆಗೆ ಮಂಗಳೂರು ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯಗುರು, ನೂಪುರ ಭಾರತೀಯ ಶಾಸ್ತ್ರೀಯ ನೃತ್ತ ಮತ್ತು ಸಂಗೀತ ಅಕಾಡೆಮಿಯ ನಾಟ್ಯ ವಿದುಷಿ ಸುಲೋಚನಾ ವಿ. ಭಟ್ ತಿಳಿಸಿದ್ದಾರೆ. ಕಿಯಾರಾ ಇವರ ರಂಗಪ್ರವೇಶವು ಭರತನಾಟ್ಯ, ಕುಚಿಪುಡಿ, ಕಥಕ್ ಮತ್ತು ಮೋಹಿನಿ ಅಟ್ಟಂನಂತಹ ಶಾಸ್ತ್ರೀಯ ನೃತ್ಯ ಪ್ರಕಾರಗಳ ಮಿಶ್ರಣದೊಂದಿಗೆ ವಿಶಿಷ್ಟವಾಗಿ ನಡೆಯಲಿದೆ. ನಾಟ್ಯಾಚಾರ್ಯ ಗುರು ಉಳ್ಳಾಲ ಮೋಹನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸ್ವಸ್ತಿಕ ರಾಷ್ಟ್ರೀಯ ವ್ಯವಹಾರ ಶಾಲೆಯ ಪ್ರಾಂಶುಪಾಲೆ ಡಾ. ಮಾಲಿನಿ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

Read More

ಸುಳ್ಯ : ವಿಶ್ವ ನೃತ್ಯ ದಿನದ ಅಂಗವಾಗಿ ಗುರುದೇವ ಲಲಿತಕಲಾ ಅಕಾಡೆಮಿ ವತಿಯಿಂದ ದಿನಾಂಕ 29 ಏಪ್ರಿಲ್ 2025ರಂದು ವಿಶ್ವ ನೃತ್ಯ ದಿನ 2025 ಸುಳ್ಯ ತಾಲೂಕಿನ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ನಡೆಯಿತು. ಇದರ ಅಂಗವಾಗಿ ಬೆಳಗ್ಗೆ 9-00 ಗಂಟೆಯಿಂದ ರಾತ್ರಿ ತನಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಾಂಸ್ಕೃತಿಕ ಕಲಾ ಕಾರ್ಯಕ್ರಮಗಳನ್ನು ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್‌ ಭಾರದ್ವಾಜ್ ಉದ್ಘಾಟಿಸಿ ಶುಭ ಹಾರೈಸಿದರು. ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್‌, ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರ್, ಭರತನಾಟ್ಯ ಕಲಾವಿದೆ ಮಂಜುಶ್ರೀ ರಾಘವ್, ಕನಕಮಜಲು ಗ್ರಾ.ಪಂ. ಅಧ್ಯಕ್ಷೆ ಶಾರದಾ ಉಗ್ಗಮೂಲೆ, ಎಸ್. ಗೋಪಾಲಕೃಷ್ಣ ಮೂರ್ಜೆ ಭಾಗವಹಿಸಿದ್ದರು. ಗುರುದೇವ ಲಲಿತ ಕಲಾ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಧಾಕೃಷ್ಣ ಪಿ.ಎಂ. ಉಪಸ್ಥಿತರಿದ್ದರು. ಅಕಾಡೆಮಿಯ ಕಲಾ ನಿರ್ದೇಶಕಿ ಡಾ. ಚೇತನಾ ರಾಧಾಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ದಾಮೋದರ ಕಣಜಾಲು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.…

Read More

ಮೈಸೂರು : ಮಂಡ್ಯ ರಮೇಶ್ ನೇತೃತ್ವದ ‘ನಟನ ಮೈಸೂರು’ ಆಯೋಜಿಸಿದ ‘ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರ 2025’ದ ಸಮಾರೋಪ ಸಡಗರ ಕಾರ್ಯಕ್ರಮವು ದಿನಾಂಕ 05 ಮತ್ತು 06 ಮೇ 2025ರಂದು ಸಂಜೆ 5-00 ಗಂಟೆಗೆ ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಕರ್ನಾಟಕ ಕಲಾಮಂದಿರದಲ್ಲಿ ನಡೆಯಲಿದೆ. ಶಿಬಿರದ ಮಕ್ಕಳಿಂದ ರಂಗಗೀತೆಗಳು, ಕಿರು ನಾಟಕಗಳು, ಕಂಪನಿ ಶೈಲಿಯ ನಾಟಕ, ಮೂಡಲಪಾಯ ಯಕ್ಷಗಾನ, ವೀರಗಾಸೆ, ಕಂಸಾಳೆ, ಮುಳ್ಳು ಕುಣಿತ, ಮಲ್ಲಗಂಬ, ಹಗ್ಗದ ಮಲ್ಲಗಂಬ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಳ್ಳಲಿವೆ.

Read More

ಬೈಂದೂರು : ಲಾವಣ್ಯ (ರಿ.) ಬೈಂದೂರು ಇವರ ಆಶ್ರಯದಲ್ಲಿ ಕುಂದಾಪುರದ ಪ್ರಥಮದರ್ಜೆ ಗುತ್ತಿಗೆದಾರರಾದ ಶ್ರೀ ರಾಮಕೃಷ್ಣ ಶೇರುಗಾ‌ರ್ ಬಿಜೂರು, ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಹಾಗೂ ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಸಹಾಯಕ ಆಯುಕ್ತರಾದ ಶ್ರೀ ಸತೀಶ್ ಬಟವಾಡಿ ಇವರ ಸಹಯೋಗದೊಂದಿಗೆ ದಿ. ಕೂರಾಡಿ ಸೀತಾರಾಮ ಶೆಟ್ಟಿ ಸ್ಮರಣಾರ್ಥ ‘ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರ’ದಲ್ಲಿ ರೂಪುಗೊಂಡ ನಾಟಕಗಳ ಪ್ರದರ್ಶನವು ದಿನಾಂಕ 10 ಮೇ 2025ರ ಶನಿವಾರದಂದು ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಅಂದು ಕೇಶ್ ಎಲ್ಲಂಗಳ ರಚನೆ ಹಾಗೂ ರಾಜೇಶ್ ನಾಯ್ಕ ನಿರ್ದೇಶನದ ‘ಅಜ್ಜಿಕಥೆ’ ಮತ್ತು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚನೆ ಹಾಗೂ ಬಿ. ಗಣೇಶ್ ಕಾರಂತ್, ರೋಶನ್ ಕುಮಾರ್ ನಿರ್ದೇಶನದ ‘ಹಿಮಮಣಿ’ ನಾಟಕಗಳು ಪ್ರದರ್ಶನಗೊಳ್ಳಲಿವೆ. ಈ ನಾಟಕಗಳಿಗೆ ಚಂದ್ರ ಬಂಕೇಶ್ವರ ಮತ್ತು ಮೂರ್ತಿ ಬೈಂದೂರು ಸಂಗೀತ ನೀಡಿದ್ದು, ಪ್ರಸಾಧನ ಹಾಗೂ ರಂಗ ಸಜ್ಜಿಕೆಯಲ್ಲಿ ತ್ರಿವಿಕ್ರಮ್ ರಾವ್ ಉಪ್ಪುಂದ, ಎಚ್. ಉದಯ್ ಆಚಾರ್ಯ, ನಾಗರಾಜ…

Read More

ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಶುಭದ ಚಾರಿಟಬಲ್ ಟ್ರಸ್ಟ್, ಮಗ್ಗೆ ಸುಗ್ಗಿ ಟ್ರಸ್ಟ್ ಮತ್ತು ಸ್ನೇಹ ಸೇವಾ ಫೌಂಡೇಶನ್ ಇದರ ವತಿಯಿಂದ ಹಮ್ಮಿಕೊಂಡಿದ್ದ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭವನ್ನು ದಿನಾಂಕ 04 ಮೇ 2025ರಂದು ಸಂಜೆ 4-30 ಗಂಟೆಗೆ ಸಿವಗಂಗ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಸವ ಜಯಂತಿ, ಮಕ್ಕಳ ಸಾಂಸ್ಕೃತಿಕ ಉತ್ಸವ ಮತ್ತು ನಾಡಿನ‌ ಖ್ಯಾತ ರಂಗಸಂಘಟಕ ಹಾಗೂ ಜನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ ಇವರಿಗೆ ‘ ಸಿವಗಂಗ ರಂಗ ಪ್ರಶಸ್ತಿ ‘ ಪ್ರದಾನ ಮಾಡಲಾಗುವುದು. ಶಿಬಿರದ ಮಕ್ಕಳಿಂದ ‘ಭಕ್ತ ಪ್ರಹ್ಲಾದ’ ನಾಟಕ ಪ್ರದರ್ಶನ ಹಾಗೂ ಗೀತಾ ಭತ್ತದ್ ಬಳಗದಿಂದ ‘ವಚನ ಸಂಗೀತ’ ಪ್ರಸ್ತುತಗೊಳ್ಳಲಿದೆ.

Read More