Author: roovari

ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 25 ಜೂನ್ 2025ರಂದು ಉಡುಪಿಯ ಗೀತಾ ಮಂದಿರದಲ್ಲಿ ಪರ್ಯಾಯ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಟ್ರಸ್ಟ್ ನ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ಮತ್ತು ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತಿಯಲ್ಲಿ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ, ಅನುಮೋದಿಸಲಾಯಿತು. ಬಳಿಕ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಗಾನ ಗುರುಗಳ ಪ್ರಥಮ ಸಭೆ ಶಾಸಕರ ಉಪಸ್ಥಿತಿಯಲ್ಲಿ ನಡೆಯಿತು. ಉಡುಪಿ, ಕಾಪು, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ 40 ಗುರುಗಳನ್ನು ಯಕ್ಷಗಾನ ಕಲಿಸಲು ನಿಯುಕ್ತಿಗೊಳಿಸಲಾಯಿತು. “ಯಕ್ಷಶಿಕ್ಷಣ ಒಂದು ಅಪೂರ್ವ ಯೋಜನೆ, ಇದಕ್ಕೆ ತನ್ನ ಸಂಪೂರ್ಣ ಸಹಕಾರವಿದೆ” ಎಂಬುದಾಗಿ ಶಾಸಕರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ವಿಶೇಷ ಸೂಚನೆಗಳನ್ನು ನೀಡಿದರು. ಟ್ರಸ್ಟ್ ನ ವಿಶ್ವಸ್ಥರಾದ ಎಂ. ಗಂಗಾಧರ ರಾವ್, ನಾರಾಯಣ ಎಂ. ಹೆಗಡೆ, ವಿ. ಜಿ.…

Read More

ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘವು ನಾಡೋಜ ಚೆನ್ನವೀರ ಕಣವಿ ಮತ್ತು ಶಾಂತಾದೇವಿ ಕಣವಿ ದತ್ತಿ ಅಂಗವಾಗಿ ಆಯೋಜಿಸಿದ್ದ ಕನ್ನಡ ಯುವ ಲೇಖಕರಿಗೆ ಚೆನ್ನವೀರ ಕಣವಿ ಕಾವ್ಯಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆಯಲ್ಲಿ ಹಾವೇರಿಯ ಮಧು ಕಾರಗಿ ಪ್ರಥಮ, ದಕ್ಷಿಣ ಕನ್ನಡದ ಜಯಶ್ರೀ ಇಡ್ಕಿದು ದ್ವಿತೀಯ, ರಾಯಚೂರಿನ ಸಂಜೀವ ಜಗ್ಲಿ ಹಾಗೂ ಶಿರಸಿಯ ಚಂದನಾ ಡಿ.ನಾಯ್ಕ ತೃತೀಯ ಬಹುಮಾನ ಪಡೆದಿದ್ದಾರೆ. ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯಲ್ಲಿ ಶಿವಮೊಗ್ಗದ ದಿವ್ಯಶ್ರೀ ಪ್ರಥಮ, ಬೆಳಗಾವಿಯ ವಿಕ್ರಮಹಾಜನ ದ್ವಿತೀಯ, ಕೊಪ್ಪಳದ ವಿದ್ಯಾಶ್ರೀ ಹಡಪದ ಹಾಗೂ ಹಾವೇರಿಯ ಡಾ| ಕಾವ್ಯಾ ಕೆ.ಎಸ್. ತೃತೀಯ ಬಹುಮಾನ ಪಡೆದಿದ್ದಾರೆ. ವಿಜೇತರಿಗೆ 28 ಜೂನ್ 2025 ರಂದು ಬೆಳಗ್ಗೆ ಘಂಟೆ 10:30ಕ್ಕೆ ಚೆನ್ನವೀರ ಕಣವಿ ಜನ್ಮದಿನಾಚರಣೆ ಸಮಾರಂಭದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.

Read More

ಕುಶಾಲನಗರ : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿ ನಿಧಿ ಕಾರ್ಯಕ್ರಮ ದಿನಾಂಕ 25 ಜೂನ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಮಾತನಾಡಿ “ವಿದ್ಯಾರ್ಥಿಗಳು ತಮ್ಮ 10ನೇ ತರಗತಿಯ ಒಳಗೆ ಕನ್ನಡದ ಬಗ್ಗೆ ಚೆನ್ನಾಗಿ ಅರಿಯಬೇಕು. ಕನ್ನಡದಲ್ಲಿ ಮಾತನಾಡುವುದು, ಓದುವುದು ಮತ್ತು ಬರೆಯುವುದು ಅಭ್ಯಾಸ ಮಾಡಿದಾಗ ಮಾತ್ರ ಕನ್ನಡ ಭಾಷೆಯನ್ನು ಉಳಿಸಿ, ಬೆಳಸಲು ಸಾಧ್ಯ. ಶಾಲೆಗಳಲ್ಲಿ ಮತ್ತು ಮನೆಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು. ಮಕ್ಕಳಲ್ಲಿ ಕನ್ನಡದ ಬಗ್ಗೆ ಯಾವುದೇ ತಾತ್ಸಾರ ಭಾವನೆ ಮೂಡದ ಹಾಗೆ ವಾತಾವರಣ ನಿರ್ಮಾಣವಾಗಬೇಕು. ಕನ್ನಡದ ಬದಲಾಗಿ ಬೇರೆ ಯಾವುದೇ ಭಾಷೆಯಿಲ್ಲ. ಕನ್ನಡಕ್ಕೆ ತನ್ನದೇ ಆದ ಸ್ಥಾನಮಾನವಿದೆ. ಅದನ್ನು ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ತುಂಬಾ ಮಕ್ಕಳಿಗೆ ಕಾಲೇಜಿಗೆ ಬಂದರು ಕಾಗುಣಿತ ಗೊತ್ತಿರುವುದಿಲ್ಲ. 10ನೇ ತರಗತಿ ಒಳಗೆ ಕನ್ನಡವನ್ನು ಚೆನ್ನಾಗಿ ಅಭ್ಯಾಸ ಮಾಡಿಸಿದಾಗ…

Read More

ಕಾರ್ಕಳ : ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಕಲಾರಂಗ (ರಿ.) ಕಾರ್ಕಳ ಮತ್ತು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭ ದಿನಾಂಕ 25 ಜೂನ್ 2025ರಂದು ನಡೆಯಿತು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಶೋಕ ಅಡ್ಯಂತಾಯ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ವಿಜ್ಞಾನಿ ಜನಾರ್ದನ ಇಡ್ಯ ಮಾತನಾಡಿ “ಕಲೆಯು ಜೀವನ ಮೌಲ್ಯ ವೃದ್ದಿಸುತ್ತದೆ, ಕಲೆಯಿಂದ ಸಂಸ್ಕಾರಯುತ ಮಕ್ಕಳು ರೂಪುಗೊಳ್ಳುತ್ತಾರೆ” ಎಂದರು. ಕಾರ್ಯದರ್ಶಿ ದಿನೇಶ್ ಹೆಗ್ಡೆ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ವೇಣಿ ಸುಬ್ರಹ್ಮಣ್ಯ ಭಟ್, ಯಕ್ಷ ಶಿಕ್ಷಣ ಅಭಿಯಾನಕ್ಕೆ ಶುಭ ಹಾರೈಸಿದರು. ಕಾರ್ಕಳ ಕಲಾರಂಗ ಮತ್ತು ಘಟಕದ ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ, ಕೋಶಾಧ್ಯಕ್ಷರಾದ ಪ್ರೊ. ಶ್ರೀವರ್ಮ ಅಜ್ರಿ, ಯಕ್ಷ ಗುರು ಸತೀಶ್ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಲಾರಂಗದ…

Read More

ಮಂಗಳೂರು : ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಮಾಲೆಮಾರ್ ಇದರ ‘ಸಪ್ತಮ ಸಂಭ್ರಮ’ ಸಮಾರಂಭವನ್ನು ದಿನಾಂಕ 28 ಮತ್ತು 29 ಜೂನ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 28 ಜೂನ್ 2025ರಂದು ಅಂಬುರುಹ ಕುಣಿತ ಭಜನಾ ತಂಡದವರಿಂದ ‘ಕುಣಿತ ಭಜನೆ’ ಹಾಗೂ ವಿವಿಧ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಅಂಬುರುಹ ಕಲಾವಿದರು ಕುಡ್ಲ ಇವರು ಅಭಿನಯಿಸುವ ಕುಮಾರ್ ಮಾಲೆಮಾರ್ ಇವರ ನಿರ್ದೇಶನದಲ್ಲಿ ‘ಶ್ರೀ ಶಿರಡಿ ಸಾಯಿಬಾಬ’ ಎಂಬ ಐತಿಹಾಸಿಕ ತುಳು ನಾಟಕ ಪ್ರದರ್ಶನ ನಡೆಯಲಿದೆ. ದಿನಾಂಕ 29 ಜೂನ್ 2025ರಂದು ಅಂಬುರುಹ ಯಕ್ಷ ಕಲಾ ಕೇಂದ್ರದ ಪುಟಾಣಿ ಮಕ್ಕಳಿಂದ ‘ಅಮರ್ ಬೊಳ್ಳಿಲು’ ತುಳು ಯಕ್ಷಗಾನ, ಸಭಾ ಕಾರ್ಯಕ್ರಮದಲ್ಲಿ ‘ಅಂಬುರುಹ ಪ್ರಶಸ್ತಿ’ ಪ್ರದಾನ ಹಾಗೂ ಸಂಜೀವ ಕಜೆಪದವು ಇವರ ನಿರ್ದೇಶನದಲ್ಲಿ ‘ಮಹಿಮೆದ ಅಪ್ಪೆ ಮಂತ್ರದೇವತೆ’ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

Read More

ಕಾಂತಾವರ : ಯಕ್ಷಕಲಾರಂಗ(ರಿ.) ಕಾರ್ಕಳ ಮತ್ತು ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಅಭಿಯಾನ 2025/26 ಯೋಜನೆಯ ಮೂಲಕ ಕಲಿಕಾಸಕ್ತ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ತರಗತಿ ದಿನಾಂಕ 25 ಜೂನ್ 2025ರಂದು ಆರಂಭಗೊಂಡಿತು. ದೀಪ ಬೆಳಗಿಸಿ ನಾಟ್ಯ ತರಬೇತಿ ತರಗತಿಯನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ ಕುಲಾಲ್ ಬೇಲಾಡಿ ಮಾತನಾಡಿ “ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯಪೂರ್ಣವಾದ ಕಲೆ ಯಕ್ಷಗಾನ” ಎಂದರು. ಯಕ್ಷ ಕಲಾರಂಗ(ರಿ.) ಕಾರ್ಕಳ ಇದರ ಕಾರ್ಯದರ್ಶಿ ಶ್ರೀ ಮಹಾವೀರ ಪಾಂಡಿ ಯಕ್ಷ ಶಿಕ್ಷಣ ಅಭಿಯಾನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾಡಿ ಇದರ ಮಹತ್ವದ ಬಗ್ಗೆ ಹೇಳಿದರು. ಯಕ್ಷಕಲಾರಂಗದ ಅಧ್ಯಕ್ಷರಾದ ಉದ್ಯಮಿ ಶ್ರೀ ವಿಜಯ ಶೆಟ್ಟಿ ಮಕ್ಕಳಿಗೆ ಶುಭ ಹಾರೈಸಿ ಯೋಜನೆಯ ಸದುಪಯೋಗ ಮಾಡಿಕೊಳ್ಳಿ ಎಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀ ಕೆ. ಶ್ರೀಪತಿ ರಾವ್ ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾದ ಕೆ. ಧರ್ಮರಾಜ ಕಂಬಳಿ, ನಿವೃತ್ತ ಮುಖ್ಯ…

Read More

ತೀರ್ಥಹಳ್ಳಿ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಇದರ ಜಿಲ್ಲಾ ಘಟಕ ಶಿವಮೊಗ್ಗ ಮತ್ತು ತಾಲೂಕು ಘಟಕ ತೀರ್ಥಹಳ್ಳಿ ವತಿಯಿಂದ ಕುವೆಂಪು ನೆಲೆವೀಡು ಕುಪ್ಪಳ್ಳಿಯ ಹೇಮಾಂಗಣದಲ್ಲಿ ದಿನಾಂಕ 22 ಜೂನ್ 2025ರಂದು ಹಮ್ಮಿಕೊಂಡಿದ್ದ ತಾಲೂಕು ಘಟಕ ಉದ್ಘಾಟನೆ, ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭವನ್ನು ದೀಪ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಇವರು ಮಾತನಾಡಿ “ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಳಕಳಿ ಹೊಂದಿ ಕಾರ್ಯೋನ್ಮುಖವಾಗುವ ಕನ್ನಡಪರ ಸಂಘಟನೆಗಳಿಗೆ ಪಾರದರ್ಶಕತೆ, ಪ್ರಾಮಾಣಿಕತೆ, ತತ್ತ್ವ ಸಿದ್ಧಾಂಥ ಹಾಗೂ ಬದ್ಧತೆ ಬಹಳ ಮುಖ್ಯ. ಸಾಹಿತ್ಯ ವೇದಿಕೆ ಹುಟ್ಟಿರುವುದೇ ಎಲೆಮರೆಕಾಯಿಯಂತಹ ಸಾಧಕರನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವುದಕ್ಕಾಗಿ. ಸಾಹಿತ್ಯ ಸೇವೆ ಕೇವಲ ಪರಿಷತ್ತಿಗೆ ಮಾತ್ರ ಸೀಮಿತವಲ್ಲ. ಸುಮಾರು ಐದು ಸಾವಿರ ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿದ ಕನ್ನಡ ಸಾಹಿತ್ಯವನ್ನು ನಾಡಿಗರಿಗೆ ಪಸರಿಸಲು…

Read More

ಬೆಂಗಳೂರು : ವಿಜಯನಗರ ಬಿಂಬದ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ 12ನೇ ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಂದ ‘ಕಕೇಷಿಯನ್ ಚಾಕ್ ಸರ್ಕಲ್’ ನಾಟಕ ಪ್ರದರ್ಶನವನ್ನು ದಿನಾಂಕ 27 ಜೂನ್ 2025ರಂದು ಸಂಜೆ 4-00 ಹಾಗೂ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಬರ್ಟೊಲ್ಟ್ ಬ್ರೆಕ್ಟ್ ಇವರ ನಾಟಕವನ್ನು ಜಿ.ಎನ್. ರಂಗನಾಥ್ ರಾವ್ ಇವರು ಕನ್ನಡಕ್ಕೆ ಅನುವಾದಿಸಿರುತ್ತಾರೆ. ವಿಶೇಷ ಅಂದರೆ 30 ಪಾತ್ರಗಳಿರುವ ಈ ನಾಟಕವನ್ನು ಎಂಟು ಜನ ವಿದ್ಯಾರ್ಥಿಗಳು ರಂಗದ ಮೇಲೆ ತರುತ್ತಿದ್ದು, ವಿದ್ಯಾರ್ಥಿಗಳ ಈ ಪ್ರಸ್ತುತಿಗೆ ತಾವೆಲ್ಲರೂ ಬಂದು ಪ್ರೋತ್ಸಾಹಿಸಬೇಕೆಂದು ಕೋರುತ್ತೇನೆ. ರಂಗದ ಮೇಲೆ ಕಲ್ಪನಾ, ಸರಿತಾ, ಯಶಸ್, ಪ್ರಜ್ವಲ್, ಗೌತಮ್, ದಿಯಾ, ಸಂಜಿತ್, ಸ್ಕಂದ ಹಾಗೂ ಮೇಳದಲ್ಲಿ ಸಂಸ್ಕೃತಿ, ಸನತ್, ಭೂಮಿಸಾತಿ, ಅಚಿಂತ್ಯ, ಸಂವಿತ್, ಅಸ್ಮಿತ, ಶ್ರೀಕಂಠ ಭಾಗವಹಿಸಲಿದ್ದಾರೆ. ಸಂಗೀತ ನಿರ್ದೇಶನ : ರಾಘವೇಂದ್ರ ಬಿಜಾಡಿ, ವಸ್ತ್ರವಿನ್ಯಾಸ : ಶೋಭಾ ವೆಂಕಟೇಶ್, ಸಹಾಯ : ಸಾನ್ವಿ, ಬೆಳಕು : ಸೂರ್ಯ ಸಾತಿ ನೀಡಿದ್ದು, ಈ ನಾಟಕಕ್ಕೆ…

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 129ನೇ ಕಾರ್ಯಕ್ರಮ 14 ಜೂನ್ 2025 ರಂದು ಪುತ್ತೂರು ದರ್ಬೆ ಯ ಶಶಿಶಂಕರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಶಿಲ್ಪಾ ನಂಜಪ್ಪ ಇವರ ಕೊಡವ ಕಥೆಗಳ ಆಧಾರಿತ ವಿಶೇಷ ಭರತನಾಟ್ಯ ರೂಪಕ ‘ಟೇಲ್ಸ್ ಇನ್ ಕೊಡವ ‘ ಪ್ರಸ್ತುತಗೊಂಡು ಸಭಿಕರ ಮೆಚ್ಚುಗೆ ಪಡೆಯಿತು. ಸಮಾರಂಭದಲ್ಲಿ ಅಭ್ಯಾಗತರಾದ ಯೇಳ್ತಿಮಾರ್ ವಿಜಯಲಕ್ಷ್ಮೀ ಶೆಣೈರವರು ಶಿಲ್ಪಾರವರ ಕಲಾಪ್ರಸ್ತುತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಕಾರ್ಯಕ್ರಮವನ್ನು ವಿದ್ವಾನ್ ದೀಪಕ್ ಕುಮಾರ್ ಆಯೋಜಿಸಿದ್ದರು. ಕಾರ್ಯಕ್ರಮದ ನಿರೂಪಣೆ ಕು. ಆದ್ಯ ಕೆ. , ಪ್ರಾರ್ಥನೆಯನ್ನು ವಿ. ಪ್ರೀತಿಕಲಾ, ಶಂಖನಾದವನ್ನು ಶೌರೀಕೃಷ್ಣ, ಪರಿಚಯವನ್ನು ಕು. ವಿಷ್ಣುಪ್ರಿಯ & ಆರಾಧ್ಯ ಕೆ. ಮತ್ತು ವಿಷಯ ಮಂಡನೆಯನ್ನು ಕು. ಆಪ್ತ ಚಂದ್ರಮತಿ ಮುಳಿಯ ಇವರು ನಿರ್ವಹಿಸಿದರು.

Read More

ಮುಂಬೈ : ಕಲಾ ಜಗತ್ತು ಕ್ರಿಯೇಷನ್ಸ್ ಮುಂಬೈ ಪ್ರಸ್ತುತ ಪಡಿಸುವ ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ನಿರ್ದೇಶನದ ‘ಚೋಖಾ ಮೇಳ’ ಕನ್ನಡ ಐತಿಹಾಸಿಕ ಸಂಗೀತ ನಾಟಕ ಪ್ರದರ್ಶನವನ್ನು ದಿನಾಂಕ 28 ಜೂನ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮುಂಬೈಯ ಕುರ್ಲಾ ಈಸ್ಟ್, ಬಂಟರ ಭವನದ ಶ್ರೀಮತಿ ರಾಧಬಾಯಿ ಟಿ. ಭಂಡಾರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಸದಾನಂದ ಸ್ವಾಮೀಜಿ ತುಂಗರೇಶ್ವರ ಇವರು ಈ ನಾಟಕದ ಮೂಲ ಮರಾಠೀ ಲೇಖಕರು, ಡಾ. ಜಿ.ಪಿ. ಕುಸುಮ್ ಇವರು ಕನ್ನಡ ಭಾಷಾಂತರ ಮಾಡಿರುತ್ತಾರೆ.

Read More