Subscribe to Updates
Get the latest creative news from FooBar about art, design and business.
Author: roovari
ಸಾಗರ : ಲಯನ್ಸ್ ಕ್ಲಬ್ ಸಾಗರ, ಎಂ.ಜೆ.ಎಫ್. ಡೋನರ್ ಕ್ಲಬ್ ಮತ್ತು ಕರ್ನಾಟಕ ಜಾನಪದ ಪರಿಷತ್ತು ಸಾಗರ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 21 ಆಗಸ್ಟ್ 2025ರಂದು ಸಂಜೆ 4-30 ಗಂಟೆಗೆ ಸಾಗರದ ಲಯನ್ಸ್ ಕ್ಲಬ್ ನಲ್ಲಿ ‘ವಿಶ್ವ ಜಾನಪದ ದಿನಾಚರಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಿರಿಯ ಜಾನಪದ ಕಲಾವಿದರಾದ ಬೇಗೂರ್ ಶಿವಪ್ಪ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಜಾನಪದ ಕಲಾವಿದರಾದ ನಾರಾಯಣಪ್ಪ ಕುಗ್ವೆ, ವಸಂತ ಕುಗ್ವೆ, ಲಕ್ಷ್ಮಣ ಕುಗ್ವೆ, ರಾಜು ಜನ್ನೆಹಕ್ಲು ಮತ್ತು ಶ್ರೀಮತಿ ಉಷಾರಾಣಿ ಇವರನನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ಜಾನಪದ ಪರಿಷತ್ತಿನ ಕಲಾವಿದರಿಂದ ಜಾನಪದ ಗಾಯನ ಪ್ರಸ್ತುತಗೊಳ್ಳಲಿದೆ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ದಿನಾಂಕ 19 ಆಗಸ್ಟ್ 2025ರಂದು ‘ಕೃಷ್ಣ ಸಂಧಾನ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಕುಸುಮಾಕರ ಆಚಾರ್ಯ ಹಳೆನೇರಂಕಿ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ, ಅನೀಶ್ ಕೃಷ್ಣ ಪುಣಚ ಭಾಗವಹಿಸಿದರು. ಮುಮ್ಮೇಳದಲ್ಲಿ ಕೌರವನಾಗಿ ಗುಂಡ್ಯಡ್ಕ ಈಶ್ವರ ಭಟ್, ಕೃಷ್ಣನಾಗಿ ಮಾಂಬಾಡಿ ವೇಣುಗೋಪಾಲ ಭಟ್, ಭೀಮನಾಗಿ ದುಗ್ಗಪ್ಪ ಯನ್., ದ್ರೌಪದಿಯಾಗಿ ಬಡೆಕ್ಕಿಲ ಚಂದ್ರಶೇಖರ ಭಟ್, ವಿದುರನಾಗಿ ಅಚ್ಯುತ ಪಾಂಗಣ್ಣಾಯ ಪಾತ್ರಗಳನ್ನು ಪೋಷಿಸಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಾಂಬಾಡಿ ವೇಣುಗೋಪಾಲ ಭಟ್ ಪ್ರಾಯೋಜಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದುಗ್ಗಪ್ಪ ಯನ್. ವಂದಿಸಿದರು.
ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನಮಾಲಿಕೆ – 40’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯನ್ನು ದಿನಾಂಕ 22 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇರಳದ ಭಾರದ್ವಾಜ್ ಸುಬ್ರಹ್ಮಣ್ಯ ಇವರ ಹಾಡುಗಾರಿಕೆಗೆ ವಯೋಲಿನ್ ನಲ್ಲಿ ಚೆನೈಯ ಭಾರ್ಗವ ವಿಘ್ನೇಶ್ ಹಾಗೂ ಮೃದಂಗದಲ್ಲಿ ಉಡುಪಿಯ ಡಾ. ಬಾಲಚಂದ್ರ ಆಚಾರ್ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ.
ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ ಕಾರ್ಯಕ್ರಮದಲ್ಲಿ ದಿನಾಂಕ 31 ಆಗಸ್ಟ್ 2025ರಂದು ಬೆಳಗ್ಗೆ ಗಂಟೆ 9-00ರಿಂದ ಸಂಜೆ 5-00ರ ತನಕ ಶ್ರೀ ಶಾರದಾ ನಾಟ್ಯಾಲಯದಲ್ಲಿ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರಿಂದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 98454 16376 ಭಾರತಿ ಸುರೇಶ್ ಮತ್ತು 9449592025 ಪ್ರಣತಿ ಸತೀಶ್ ಇವರನ್ನು ಸಂಪರ್ಕಿಸಿರಿ.
ಮುಂಬಯಿ: ಚೆಂಬೂರು ಪಶ್ಚಿಮದ ಚೆಡ್ಡಾ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24ನೇ ತಾಳಮದ್ದಳೆ ಸರಣಿ ಅಂಗವಾಗಿ ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 14 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಪರವಾಗಿ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ಕರಾವಳಿ ಭಾಗದಲ್ಲಿ ಹುಟ್ಟಿ ಬೆಳೆದ ಯಕ್ಷಗಾನವಿಂದು ಜಗದಗಲ ತನ್ನ ಪ್ರಭಾವವನ್ನು ಬೀರಲು ಅಲ್ಲಲ್ಲಿ ನೆಲೆಸಿರುವ ಕಲಾಸಕ್ತರು ಮತ್ತು ಕರಾವಳಿ ಮೂಲದ ಸಂಘ – ಸಂಸ್ಥೆಗಳು ಪ್ರಮುಖ ಕಾರಣವೆನ್ನಬಹುದು. ಇದರಲ್ಲಿ ಮಠ – ಮಂದಿರಗಳ ಕೊಡುಗೆಯೂ ಅಪಾರ. ದೇಶ ವಿದೇಶಗಳಲ್ಲಿರುವ ಪ್ರಸಿದ್ಧ ಸಂಸ್ಥಾನಗಳ ಶಾಖಾಮಠಗಳು ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹ ನೀಡಿವೆ. ಈ ನಿಟ್ಟಿನಲ್ಲಿ ಚೆಡ್ಡಾನಗರ ಶ್ರೀ ಸುಬ್ರಮಣ್ಯ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಾರ್ಹವೆನಿಸಿವೆ. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥರ…
ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ದಿನಾಂಕ 16 ಆಗಸ್ಟ್ 2025ರ ಶನಿವಾರದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜ್ ಉಜಿರೆ ಗ್ರೇಡ್ ಎ.+.+ ಇವರ ವಿದ್ಯಾರ್ಥಿಗಳು ಯಕ್ಷಗಾನ ಅಧ್ಯಯನಕ್ಕಾಗಿ ಭೇಟಿಯಿತ್ತರು. ಯಕ್ಷ ಗುರು ಅರುಣ್ ಕುಮಾರ್ ನೇತೃತ್ವದಲ್ಲಿ 55ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಾನದ ಮ್ಯೂಸಿಯಂ ವೀಕ್ಷಿಸಿ ಸಂತೋಷಪಟ್ಟರು. ತೆಂಕತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯ ಗುರುಗಳಾದ ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ ವಿದ್ಯಾರ್ಥಿಗಳಿಗೆ ಯಕ್ಷಗಾನ ಕುರಿತಾದ ಪ್ರಾತ್ಯಕ್ಷಿಕೆ ಮೂಲಕ ವಿವರಣೆಯನ್ನು ನೀಡಿದರು. ಹಿಂದಿನ ಕಾಲದ ಕೀರ್ತಿಶೇಷ ಪಾರ್ಥಿಸುಬ್ಬನಿಂದ ಮೊದಲ್ಗೊಂಡು ಕಾಸರಗೋಡಿನವರ ಕೊಡುಗೆಯನ್ನು ವಿವರಿಸಿದರು. ಸಿರಿಬಾಗಿಲು ಪ್ರತಿಷ್ಠಾನ ಇದೊಂದು ಅದ್ಭುತ, ಒಂದು ವೇಳೆ ಬಾರದಿದ್ದರೆ ತುಂಬಾ ನಷ್ಟವಾಗುತ್ತಿತ್ತು .ತುಂಬಾ ಸಂತೋಷವಾಗಿದೆ. ಯಕ್ಷಗಾನದ ಅಧ್ಯಯನಕ್ಕೆ ಹಲವು ಸೂಕ್ತ ವಿಚಾರಗಳು ಇವೆ ಎಂಬುದು ನಮಗೆ ಮನದಟ್ಟಾಯಿತು. ಎಂದು ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಇವರು ಸಿರಿಬಾಗಿಲು ವೆಂಕಪ್ಪಯ್ಯನವರ ಕೊಡುಗೆ ಹಾಗೂ ಪ್ರತಿಷ್ಠಾನ ಬೆಳೆದು ಬಂದ ರೀತಿಯನ್ನು ವಿದ್ಯಾರ್ಥಿಗಳಿಗೆ…
ಮೈಸೂರು : ಸಂಚಲನ ಮೈಸೂರು (ರಿ.) ಇದರ ವತಿಯಿಂದ ರಂಗರಥ (ರಿ.) ಇದರ ಸಹಯೋಗದಲ್ಲಿ ದೀಪಕ್ ಮೈಸೂರು ಇವರ ಸಾರಥ್ಯದಲ್ಲಿ ಸಂಚಲನ ರಂಗ ತಂಡದವರಿಂದ ‘ಎರಡೆರಡ್ಲಾ ಐದು’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 20 ಮತ್ತು 21 ಆಗಸ್ಟ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಿಫ್ ಕ್ಷತ್ರಿಯ ಈ ನಾಟಕದ ರಚನೆ ಮಾಡಿದ್ದು, ಶ್ವೇತ ಶ್ರೀನಿವಾಸ್ ಇವರ ಜೊತೆ ನಿರ್ದೇಶನ ಮಾಡಿರುತ್ತಾರೆ.
ಕಾಸರಗೋಡು : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ ಕೊಡಮಾಡುವ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ, ಸಾಹಿತಿ ಗಣೇಶ್ ಕಾಸರಗೋಡು ಇವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನವು ದಿನಾಂಕ 27 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ಭವನ ಸ್ಥಾಪಕ ಅಧ್ಯಕ್ಷರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ನಿರ್ದೇಶಕರಾದ ಡಾ. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸುವರು. ಗಣೇಶ್ ಕಾಸರಗೋಡು ಇವರ ಬಗ್ಗೆ ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತಡ್ಕ ಮಾತನಾಡಲಿರುವರು. ಪತ್ರಕರ್ತ ಪ್ರದೀಪ್ ಬೇಕಲ್ ಮೊದಲಾದ ಹಿರಿಯ ಪತ್ರಕರ್ತರು, ಹಿರಿಯ ಸಾಹಿತಿಗಳು ಹಾಗೂ ಗಣೇಶ್ ಕಾಸರಗೋಡು ಅವರ ನಿಕಟವರ್ತಿಗಳು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕನ್ನಡ ಭವನ ಸಂಚಾಲಕಿ, ಸಂದ್ಯಾರಾಣಿ ಟೀಚರ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
ಮಂಗಳೂರು : ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಚೇಳ್ಯಾರು ಗುತ್ತು ಮನೆಯಲ್ಲಿ ದಿನಾಂಕ 16 ಆಗಸ್ಟ್ 2025ರಂದು ಆಯೋಜಿಸಿದ್ದ ಸೋಣದ ಸಂಕ್ರಾಂತಿ ಮತ್ತು ಆಗೋಳಿ ಮಂಜಣ್ಣ ನೆಂಪು ಹಾಗೂ ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಇದರ ಅಧ್ಯಕ್ಷೆ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಇವರು ಮಾತನಾಡಿ “ತುಳುವ ಸಂಸ್ಕೃತಿ, ಇತಿಹಾಸ ಮತ್ತು ಜನಪದ ಸಾಂಸ್ಕೃತಿಕ ನಾಯಕರ ಅಧ್ಯಯನದ ಕುರಿತು ಅಧ್ಯಯನಗಳು ಇನ್ನಷ್ಟು ನಡೆಯಬೇಕು. ಆಗೋಳಿ ಮಂಜಣ್ಣ ತುಳುನಾಡಿನ ವೀರ ನಾಯಕನಾಗಿದ್ದು, ತುಳುನಾಡ ಇತಿಹಾಸದ ಹಿನ್ನೆಲೆಯಲ್ಲಿ ಅಧ್ಯಯನಗಳು ನಡೆಯುವ ಅಗತ್ಯವಿದೆ. ಚೇಳ್ಯಾರು ಗುತ್ತು ಮಂಜನ್ನಾಯ್ಗೆರ್.. ಸಾಂಸ್ಕೃತಿಕ-ಐತಿಹಾಸಿಕ ಶೋಧ.. ಕೃತಿಯಲ್ಲಿ ಹೊಸ ವಿಚಾರಗಳು ನಿರೂಪಿತವಾಗಿದೆ. ತುಳುನಾಡ ಆಚರಣೆಯಲ್ಲಿ ಸೋಣ ಸಂಕ್ರಾಂತಿಗೆ ವಿಶೇಷ ಮಹತ್ವವಿದ್ದು, ವಾರ್ಷಿಕ ಆವರ್ತನದ ಕ್ರಮಗಳು ಕೃಷಿ ಬದುಕಿನೊಂದಿಗೆ ನಂಟನ್ನು ಹೊಂದಿದೆ”…
ಕಟೀಲು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕ ಇದರ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 17 ಆಗಸ್ಟ್ 2025ರಂದು ಮೂಲ್ಕಿ ತಾಲೂಕಿನ ಶಿಕ್ಷಣ ಸಂಸ್ಥೆಗಳ ಆಸಕ್ತ ವಿದ್ಯಾರ್ಥಿಗಳಿಗೆ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ನ ಕಲಾವಿದರಿಂದ ಆಯೋಜಿಸಿದ ರಂಗಗೀತೆಗಳ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಾಹಿತ್ಯಾಸಕ್ತ ಪಾಂಡುರಂಗ ಭಟ್ ಕಟೀಲು “ಬಿ.ವಿ. ಕಾರಂತ, ಪು.ತಿ.ನ., ಸಿಂದೂವಳ್ಳಿ ಅನಂತಮೂರ್ತಿ, ಕೆಮ್ತೂರು ದೊಡ್ಡಣ್ಣ ಶೆಟ್ಟಿ ಮುಂತಾದವರು ರಂಗಭೂಮಿಯನ್ನು ಬೆಳೆಸಿದವರು. ರಂಗಗೀತೆಗಳ ಮೂಲಕ ಸಾಹಿತ್ಯ, ಸಾಹಿತಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕಾರ್ಯ ಅಭಿನಂದನೀಯ ಎಂದು ಹೇಳಿದರು. ಗಜವದನ ಹೇರಂಬ, ಬಂದೇವು ನಾವು ನಿಮ್ಮ ಚರಣಕ, ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸೋ… ಹೀಗೆ ಪುರಂದರ ದಾಸರು, ಪು.ತಿ.ನ., ಬಿ.ವಿ. ಕಾರಂತ, ಎಚ್.ಎಸ್. ವೆಂಕಟೇಶ ಮೂರ್ತಿ ಮುಂತಾದ ಸಾಹಿತಿಗಳ ರಂಗ ಗೀತೆ, ವಚನಗಳ ಹಾಡಿಸಲಾಯಿತು. ಮೂಲ್ಕಿ ತಾಲೂಕಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.…