Subscribe to Updates
Get the latest creative news from FooBar about art, design and business.
Author: roovari
ಬದುಕೇ ಒಂದು ರಂಗಭೂಮಿ. ಇಲ್ಲಿ ನಟಿಸುವ ಪಾತ್ರಗಳು ಅನೇಕ. ಬಣ್ಣವೂ ಬಹು ವಿಧ. ಎಲ್ಲರಿಗೂ ಒಗ್ಗುವ, ಎಲ್ಲರೊಳಗೊಂದಾಗಿ ಬೆರೆಯುವ ಪಾಠ ಕಲಿಸುವ ರಂಗಭೂಮಿ ಒಪ್ಪಿಕೊಳ್ಳುವುದು ಕೆಲವರನ್ನಷ್ಟೇ. ಆದರೆ, ಒಮ್ಮೆ ಒಪ್ಪಿಕೊಂಡಿತೆಂದರೆ ಕಲೆಯ ಅಪ್ಪುಗೆಯೇ ಸರಿ. ಹೀಗೆ ಕರಾವಳಿಯ ರಂಗಭೂಮಿ ಒಪ್ಪಿಕೊಂಡು ಲಾಲಿಸಿದ ಕಲಾವಿದೆ, ಬಹುಮುಖ ಪ್ರತಿಭೆ ಮಂಜುಳಾ ಜನಾರ್ದನ್. ಶ್ರೀನಿವಾಸ ರಾವ್ ಹಾಗೂ ಗಿರಿಜಮ್ಮರ ಮಗಳಾಗಿ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ಜನಿಸಿದ ಮಂಜುಳಾ ಜನಾರ್ದನ್ ಇವರು ಬಿ.ಕಾಮ್, ಎಂ.ಎ., ಬಿ.ಎಡ್ ಪದವೀಧರೆ. ರಂಗಭೂಮಿಯಲ್ಲಿ ಬಣ್ಣ ಹಚ್ಚುವ ಮೊದಲು ಇವರನ್ನು ಆಕರ್ಷಿಸಿದ್ದು ಯಕ್ಷಗಾನ ರಂಗ. ಕಾಲೇಜು ವಿದ್ಯಾಭ್ಯಾಸದ ಸಮಯದಲ್ಲಿ ಬಾಳ ಕಾಟಿಪಳ್ಳದ ಶಿವರಾಮ ಪಣಂಬೂರು ಅವರ ನಿರ್ದೇಶನದ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘಕ್ಕೆ ಸೇರಿದವರು, ಪುಣ್ಯಕೋಟಿಯ ‘ಪುಣ್ಯಕೋಟಿ’, ಬಬ್ರುವಾಹನದ ‘ಸುಭದ್ರೆ’, ಸುಧನ್ವಾರ್ಜುನದ ‘ಪ್ರಭಾವತಿ’, ಬ್ರಹ್ಮ ಬೈದರ್ಕಳದ ‘ಕೋಟಿ’, ಮಹಿಷ ಮರ್ದಿನಿಯಲ್ಲಿ ‘ದೇವಿ’, ಭೀಷ್ಮ ವಿಜಯದ ‘ಅಂಬೆ’, ಸುದರ್ಶನ ವಿಜಯದ ‘ಲಕ್ಷ್ಮಿ’, ದಕ್ಷಾದ್ವರದಲ್ಲಿ ‘ದಾಕ್ಷಾಯಿಣಿ’ ಮುಂತಾದ ಹಲವು ಪ್ರಸಂಗಗಳಲ್ಲಿ ಬಣ್ಣದ ವೇಷ ಮಾಡಿದರು.…
ಮಂಗಳೂರು : ‘ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ರಂಗಸ್ಥಳ ಮಂಗಳೂರು (ರಿ.) ಸಂಸ್ಥೆಗಳು ಅರಹೊಳೆ ಪ್ರತಿಷ್ಠಾನ, ರಂಗ ಸಂಗಾತಿ (ರಿ.) ಮಂಗಳೂರು, ಕೊಡಿಯಾಲ್ ಬೈಲ್ ಫ್ರೆಂಡ್ಸ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಕುಡ್ಲದಗಿಪ್ ಕುಂದಾಪ್ರ, ಮಂಗಳೂರು ಯಕ್ಷಾಭಿನಯ ಬಳಗ ಹಾಗೂ ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇವರ ಸಹಕಾರದೊಂದಿಗೆ ಆಯೋಜಿಸುವ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ ಪ್ರಧಾನ ಸಮಾರಂಭ ಹಾಗೂ ಯಕ್ಷಗಾನ ಪ್ರದರ್ಶನವು ದಿನಾಂಕ 09 ಮಾರ್ಚ್ 2025ರ ಭಾನುವಾರ ಸಂಜೆ ಘಂಟೆ 4. 00ರಿಂದ ಮಂಗಳೂರಿನ ಶ್ರೀ ಕ್ಷೇತ್ರ, ಕುದ್ರೋಳಿ ಭಗವತೀ ದೇವಸ್ಥಾನದ ಕೂಟಕ್ಕಳ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಇವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಬಳಿಕ ಬಡಗು ತಿಟ್ಟಿನ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳ ಇವರಿಂದ ಕಾಲಮಿತಿ ಯಕ್ಷಗಾನ ಪೌರಾಣಿಕ ಪ್ರಸಂಗ ‘ಗದಾಯುದ್ಧ ರಾಜಾ ರುದ್ರಕೋಪ’ ಪ್ರದರ್ಶನ ಗೊಳ್ಳಲಿದೆ ಎಂದು ಕರುಣಾಕರ ಬಳ್ಕೂರು ತಿಳಿಸಿದ್ದಾರೆ.
ಬೆಂಗಳೂರು : ನಾಡೋಜ ಡಾ. ಬರಗೂರು ಪ್ರತಿಷ್ಠಾನ (ರಿ.) ಬೆಂಗಳೂರು ಆಯೋಜಿಸುವ ಶ್ರೀಮತಿ ರಾಜಲಕ್ಷ್ಮಿ ಬರಗೂರು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 12 ಮಾರ್ಚ್ 2025ರ ಬುಧವಾರದಂದು ಸಂಜೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಎದುರುಗಡೆ ಇರುವ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ. ರಂಗಭೂಮಿ ಮತ್ತು ಸಿನಿಮಾ ಕಲಾವಿದರಾದ ಶ್ರೀ ಸುಂದರರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಂಗಭೂಮಿ ಮತ್ತು ಸಿನಿಮಾ ಅಭಿನೇತ್ರಿಯಾದ ಶ್ರೀಮತಿ ಗಿರಿಜಾ ಲೋಕೇಶ್ ಹಾಗೂ ಚಿಂತನಶೀಲ ಲೇಖಕಿಯಾದ ಡಾ. ಎನ್. ಗಾಯತ್ರಿ ಇವರಿಗೆ ಲೇಖಕಿ ಮತ್ತು ಮಹಿಳಾ ವಿ.ವಿ. ಇದರ ವಿಶ್ರಾಂತ ಕುಲಪತಿಗಳಾದ ಡಾ. ಸಬಿಹ ಭೂಮಿಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀನಿವಾಸ್ ಉಪಸ್ಥಿತರಿರುವರು.
ಬೆಂಗಳೂರು : ವಿಧಾನ ಸೌಧದ ಆವರಣದಲ್ಲಿ ಏರ್ಪಾಡಿಸಿದ್ದ ಪುಸ್ತಕ ಮೇಳದಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಸರ್ವ ಸಮಭಾವ ಚಿಂತನೆಗಳು’ ಎನ್ನುವ ಸಂವಾದ ಕಾರ್ಯಕ್ರಮವು ದಿನಾಂಕ 02 ಮಾರ್ಚ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ “ಕನ್ನಡ ಸಾಹಿತ್ಯವನ್ನು ಸಮಗ್ರವಾಗಿ ನೋಡಿದರೆ ನಮಗೆ ಕಾಣಿಸುವುದು ಸಾಮರಸ್ಯದ ಭಾವ. ವಿವಿಧ ಧರ್ಮಗಳ ಅನೋನ್ಯ ಸಂಪರ್ಕ. ಸಮಭಾವ ಮತ್ತು ಮನುಷ್ಯ ಜಾತಿ ತಾನೊಂದೆ ಎನ್ನುವ ಐಕ್ಯತೆಯ ದೃಷ್ಟಿ ಇಲ್ಲಿದೆ. ಬೂಕರ್ ಪ್ರಶಸ್ತಿಯ ಪ್ರಧಾನ ಸುತ್ತಿಗೆ ಬಾನುಮುಷ್ತಾಕ್ ಅವರ ಕೃತಿ ಪ್ರವೇಶಿಸಿರುವುದು ಹೆಮ್ಮೆ ಕನ್ನಡಿಗರಿಗೆ ಹೆಮ್ಮೆ. ರಂಜಾನ್ ನ ಪವಿತ್ರ ತಿಂಗಳಿನಲ್ಲಿ ಅವರಿಂದ ಕನ್ನಡಕ್ಕೆ ಶುಭ ಸುದ್ದಿ ದೊರಕಲಿ. ‘ಸಾಮರಸ್ಯದ ಭಾವ ಕನ್ನಡದ ಜೀವ’ ಎನ್ನುವುದು ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಯೋಜಿಸಿದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿಯೇ ಅಳವಡಿಕೆಯಾಗಿತ್ತು. ಪಂಪನು ಕನ್ನಡದ ಆದಿಕವಿ. ಸಮಾನತೆಯ ಭಾವವು ಅವನ ಕಾವ್ಯದಲ್ಲಿಯೇ ಆರಂಭವಾಯಿತು. ಇದು…
ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಇವರು ಶ್ರೀಮಂಗಲ ನಾಡು ನಾಲ್ಕೇರಿ ಗ್ರಾಮದ ಚೆಪ್ಪುಡಿರ ಮುದ್ದಪ್ಪ (ಸನ್ನು) ನಳಿನಿ ದಂಪತಿಗಳ ಪುತ್ರಿ. ಎಂ.ಎ., ಬಿ.ಇಡಿ., ಯು.ಜಿ.ಸಿ., ಎನ್.ಇ.ಟಿ., ಎಂ.ಫಿಲ್.ನೊಂದಿಗೆ ಇತ್ತೀಚೆಗೆ ತಾನೆ ಹಂಪಿ ವಿಶ್ವವಿದ್ಯಾಲಯದ ಜನಪದ ವಿಭಾಗದಲ್ಲಿ ‘ಕೊಡಗಿನ ತೆರೆ ಕಟ್ಟುವ ಆಚರಣೆಗಳ ವಿಶ್ಲೇಷಣೆ’ ಎಂಬ ವಿಷಯದಲ್ಲಿ ಪಿ.ಹೆಚ್.ಡಿ. ಪದವಿಯನ್ನೂ ಪಡೆದಿರುತ್ತಾರೆ. ವೀರಾಜಪೇಟೆಯ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿಯಾಗಿ ತಮ್ಮ ವೃತ್ತಿಜೀವನ ಪ್ರಾರಂಭಿಸಿ ಇದೀಗ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ 2011ನೆಯ ಸಾಲಿನ ಫೆಲೋಶಿಪ್ ಪಡೆದಿರುತ್ತಾರೆ. ಪ್ರವೃತ್ತಿಯಲ್ಲಿ ‘ತೂಕ್ ಮೊಳಕ್’ ಕೊಡವ ವಾರಪತ್ರಿಕೆಯ ಉಪ ಸಂಪಾದಕಿಯಾಗಿದ್ದಾರೆ. ‘ಕೊಡವ ಜನಪದ ನೃತ್ಯಗಳು’ ಸಂಶೋಧನಾ ಕೃತಿ, ‘ನೆಲಂಜಪ್ಪೆ’ ಕೊಡವ ಭಾಷೆಯ ಕವನ ಸಂಕಲನ ಲೋಕಾರ್ಪಣೆ ಮಾಡಿರುತ್ತಾರೆ. ಕವನ, ಲೇಖನ, ಸಂಶೋಧನಾ ಬರಹ ಹಾಗೂ ಚುಟುಕು ರಚನೆಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರ ಹಲವಾರು ಸಂಶೋಧನಾ ಲೇಖನಗಳು ರಾಷ್ಟ್ರ ಮಟ್ಟದ ಸಂಶೋಧನಾ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ನಾಟಕ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಮಹತ್ವದ ಪ್ರಶಸ್ತಿಗಳಲ್ಲೊಂದಾದ ಡಾ. ಎಚ್. ವಿಶ್ವನಾಥ್ ಮತ್ತು ಇಂದಿರಾ ದತ್ತಿ ಪ್ರಶಸ್ತಿಗಾಗಿ ಅರ್ಹ ಬರಹಗಾರರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ದತ್ತಿಯು ವಿಶೇಷ ದೃಷ್ಟಿಚೇತನ ಬರಹಗಾರರಿಗೆ ಮೀಸಲಾಗಿದ್ದು, ಈ ಮಾದರಿಯ ಪುರಸ್ಕಾರ ಇದೊಂದೆ ಎಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ. ಡಾ. ಎಚ್. ವಿಶ್ವನಾಥ್ ಮತ್ತು ಇಂದಿರಾ ದತ್ತಿ ಪ್ರಶಸ್ತಿಯು ರಾಜ್ಯಮಟ್ಟದ ಪ್ರಶಸ್ತಿಯಾಗಿದ್ದು, ರಾಜ್ಯದ ಯಾವುದೇ ಭಾಗದ, ಹೊರನಾಡಿನ, ಹೊರದೇಶದ ಅರ್ಹ ಅಭ್ಯರ್ಥಿಗಳೂ ಕೂಡ ತಮ್ಮ ಕೃತಿಗಳನ್ನು ಕಳುಹಿಸಬಹುದು. ಕೃತಿಗಳನ್ನು 31 ಮಾರ್ಚ್ 2025ರ ಒಳಗಾಗಿ ಕೃತಿ ಮತ್ತು ಸ್ವ ಪರಿಚಯವನ್ನು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಬೆಂಗಳೂರು-5600018 ಇಲ್ಲಿಗೆ ಕಳುಹಿಸಿ ಕೊಡಬೇಕೆಂದು ಕೋರಲಾಗಿದೆ.
ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ‘ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದಂಗವಾಗಿ ಹಿರಿಯ ಯಕ್ಷಗಾನ ಕಲಾವಿದ ಅಡ್ಕ ಗೋಪಾಲಕೃಷ್ಣ ಭಟ್ ಇವರನ್ನು ಅಭಿನಂದಿಸುವ ಕಾರ್ಯಕ್ರಮ ದಿನಾಂಕ 01 ಮಾರ್ಚ್ 2025 ರಂದು ಅವರ ಸ್ವ ಗೃಹದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಡ್ಕ ಗೋಪಾಲಕೃಷ್ಣ ಭಟ್ ಹಾಗೂ ಸುಮತಿ ಕೆ. ದಂಪತಿಯನ್ನು ಅಭಿನಂದಿಸಲಾಯಿತು. ಹಿರಿಯ ತಾಳಮದ್ದಲೆ ಅರ್ಥಧಾರಿ ಬೆಳ್ಳಿಗೆ ನಾರಾಯಣ ಮಣಿಯಾಣಿ, ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ಯತೀಶ ಕುಮಾರ್ ರೈ. ಯಕ್ಷಗಾನ ಭಾಗವತ ತಲ್ಪನಾಜಿ ವೆಂಕಟ್ರಮಣ ಭಟ್, ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ಭಟ್, ಪ್ರೇಮಲತಾ ಕೆ., ಕೃಷ್ಣ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಉಪಸ್ಥಿತರಿದ್ದರು.
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಉದಯರಾಗ – 60’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 09 ಮಾರ್ಚ್ 2025ರಂದು ಬೆಳಗ್ಗೆ 6-00 ಗಂಟೆಗೆ ಸುರತ್ಕಲ್ಲಿನ ಫ್ಲೈ ಓವರಿನ ತಳಭಾಗದಲ್ಲಿ ಎಂ.ಸಿ.ಎಫ್. ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಯಲಿದೆ. ಹೊಸಬೆಟ್ಟುವಿನ ಎಚ್. ಯಜ್ಞೇಶ ಆಚಾರ್ಯ ಮತ್ತು ಸುರತ್ಕಲ್ ಶ್ರೀಮತಿ ಪವಿತ್ರಾ ಮಯ್ಯ ಇವರ ಹಾಡುಗಾರಿಕೆಗೆ ಸುರತ್ಕಲ್ಲಿನ ಪ್ರಸನ್ನ ಕುಮಾರ್ ಇವರು ವಯಲಿನ್, ಸತೀಶ್ ಇವರು ಹಾರ್ಮೋನಿಯಂ ಮತ್ತು ಶ್ರೀ ಪ್ರಥಮ್ ಕುಮಾರ್ ಇವರು ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ನಿಡಸೋಸಿ ಶ್ರೀ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿಯವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ…
ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ.) ಬೆಂಗಳೂರು ಹಾಗೂ ಶೇಷಾದ್ರಿಮರಂ ಸಂಜೆ ಪದವಿ ಕಾಲೇಜು, ಗೋಧೂಳಿ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ದ್ವಾರನಕುಂಟೆ ಪಾತಣ್ಣ 75ರ ಸಂಭ್ರಮ ಹಾಗೂ ‘ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 14 ಮಾರ್ಚ್ 2025ರ ಶುಕ್ರವಾರದಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಶಿಕ್ಷಣ ದತ್ತಿಯ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಕಾದಂಬರಿಕಾರರಾದ ಶ್ರೀ ದ್ವಾರನಕುಂಟೆ ಪಾತಣ್ಣ ಇವರ ಗೌರವ ಉಪಸ್ಥಿತಿ ಹಾಗೂ ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀ ಬಿ. ಎಂ. ಹನೀಫ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿದೇವಿ ಮಾಲಗತ್ತಿ ಇವರು ಶ್ರೀ ತುಂಬಾಡಿ ರಾಮಯ್ಯ ಹಾಗೂ ಶ್ರೀ ಗುರುಪ್ರಸಾದ್ ಕಂಟಲಗೆರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶೇಷಾದ್ರಿಪುರಂ ಶಿಕ್ಷಣ ದತ್ತಿ ಇದರ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಭಾಗವಹಿಸಲಿದ್ದಾರೆ.…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ‘ಆಬೊಲಿಂ’ ಮಹಿಳಾ ಕವಿಗೋಷ್ಠಿ, ದಿನಾಂಕ 07 ಮಾರ್ಚ್ 2025ರಂದು ಸಂಜೆ ಘಂಟೆ 4.00ರಿಂದ ಮಂಗಳೂರಿನ ಕೊಂಕಣಿ ಅಕಾಡೆಮಿ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆ ಸುಚಿತ್ರಾ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ‘ನಮ್ಮ ಸಮಾಜದಲ್ಲಿ ಮಹಿಳೆಯರ ಸ್ಥಿತಿಗತಿ ಅಂದು ಇಂದು’ ವಿಷಯದ ಬಗ್ಗೆ ಆಪ್ತ ಸಮಾಲೋಚಕಿ ಡಾ. ಜೂಡಿ ಪಿಂಟೊ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಗ್ರೇಸ್ ನೊರೊನ್ಹಾ ಅವರನ್ನು ಸಮ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಡಾ. ಆನ್ನಿ ಕ್ಯಾಸ್ತೆಲಿನೊ ಕವಿ ಗೋಷ್ಠಿ ನಡೆಸಿಕೊಡಲಿದ್ದಾರೆ.