Subscribe to Updates
Get the latest creative news from FooBar about art, design and business.
Author: roovari
ಸುರತ್ಕಲ್ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ಮತ್ತು ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ 9ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಗಮಕ ಕಲಾ ಸಮ್ಮೇಳನ’ವು ದಿನಾಂಕ 13-07-2024ರಂದು ನಡೆಯಿತು. ಈ ಸಮ್ಮೇಳನವನ್ನು ಜ್ಯೋತಿ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಿದ ಕರ್ನಾಟಕ ಗಮಕ ಕಲಾ ಪರಿಷತ್ನ ಅಧ್ಯಕ್ಷ ಎ.ವಿ. ಪ್ರಸನ್ನ ಮಾತನಾಡಿ “ಕಾವ್ಯದ ಜೊತೆಗೆ ಬೆಳೆದಿರುವ ಗಮಕ ಕಲೆ ಶ್ರೇಷ್ಠವಾದುದು. ಜನ ಸಾಮಾನ್ಯರಿಗೆ ಕಾವ್ಯಗಳನ್ನು ಪರಿಚಯಿಸಿ ನಾಡಿನ ಶ್ರೇಷ್ಠ ಸಂಸ್ಕೃತಿ ಪಸರಿಸುವ ಕಾರ್ಯವನ್ನು ಗಮಕಿಗಳು ಮಾಡುತ್ತಿದ್ದಾರೆ” ಎಂದು ನುಡಿದರು. ಸಮ್ಮೇಳನಾಧ್ಯಕ್ಷ ಗಮಕ ವಿದ್ವಾನ್ ಹೆಚ್. ಯಜ್ಞೇಶಾಚಾರ್ಯ ಹೊಸಬೆಟ್ಟು ಮಾತನಾಡಿ “ಗಮಕ ವಾಚನ ಮನೆಮನೆಗಳಲ್ಲಿ ಚಳುವಳಿಯ ರೂಪದಲ್ಲಿ ನಡೆಸಬೇಕಾಗಿದೆ. ಗಮಕ ಅಭಿಮಾನಿಗಳು ಈ ನಿಟ್ಟಿನಲ್ಲಿ ಶ್ರಮಿಸಬೇಕು. ಶ್ರೇಷ್ಠತರ ಕಲೆಯಾದ ಗಮಕವನ್ನು ಸಾಂಸ್ಕೃತಿಕ ಸಂಸ್ಥೆಗಳು ರಕ್ಷಿಸುವ ಕಾರ್ಯ…
ಕಲಬುರಗಿ : ರಂಗಸಂಗಮ ಕಲಾ ವೇದಿಕೆ ಕಲಬುರಗಿ ಇದರ ವತಿಯಿಂದ ಶ್ರೀ ಎಸ್.ಬಿ. ಜಂಗಮ ಶೆಟ್ಟಿ ಹಾಗೂ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 18-07-2024ರಂದು ಬೆಳಿಗ್ಗೆ 10-30 ಗಂಟೆಗೆ ಕಲಬುರಗಿಯ ಜಿಲ್ಲಾ ಕೋರ್ಟ್ ಎದುರುಗಡೆ ಇರುವ ವಿಶ್ವೇಶ್ವರಯ್ಯ ಭವನದಲ್ಲಿ ನಡೆಯಲಿದೆ. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳ ಸಾನಿಧ್ಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ ಮೂರ್ತಿ ಇವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಇವರು ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಎಸ್.ಬಿ. ಜಂಗಮ ಶೆಟ್ಟಿ ಹಾಗೂ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ಇವರ ಕುರಿತು ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರರಾದ ಶ್ರೀ ಮಹಾದೇವ ಎಮ್. ಹಂಗರಗಿ ಇವರು ಮಾತನಾಡಲಿದ್ದಾರೆ. ರಂಗಸಂಗಮ ಕಲಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಿವಗೀತಾ ಬಸವಪ್ರಭು…
ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ವತಿಯಿಂದ ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಿರಿಬಾಗಿಲು ಯಕ್ಷ ವೈಭವ’ವು ದಿನಾಂಕ 17-07-2024 ರಿಂದ 20-07-2024ರ ವರೆಗೆ ನಡೆಯಲಿದೆ. ಪ್ರಪ್ರಥಮ ಬಾರಿಗೆ ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು ಇದು ಒಳಗೊಂಡಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇದರ ಸಹಯೋಗದೊಂದಿಗೆ ‘ಕರ್ನಾಟಕ ಸಂಭ್ರಮ-50ರ ಸವಿ ನೆನಪು 2023-24’ ಮತ್ತು ಕಲಾಪೋಷಕರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ದಿನಾಂಕ 17-07-2024 ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಚಾಲನೆ ನೀಡುವರು. ಯಕ್ಷಗಾನ ಕಲಾಪೋಷಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಸದಸ್ಯ ಎ.…
ಮಂಗಳೂರು : ಹಿರಿಯ ರಂಗಕರ್ಮಿ ಸದಾನಂದ ಸುವರ್ಣ ಅವರು ದಿನಾಂಕ 16-07-2024ರಂದು ಮಂಗಳೂರಿನಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು ‘ಕೋಟ್೯ ಮಾರ್ಷಲ್’, ‘ಮಳೆ ನಿಲ್ಲುವ ವರೆಗೆ’, ‘ಉರುಳು’, ‘ಕಲಂಕ್ ದಿ ನೀರ್’ ಮುಂತಾದ ಅಧ್ಬುತ ನಾಟಕಗಳು ಇವರ ನಿರ್ದೇಶನದಿಂದ ಮೂಡಿಬಂದಿತ್ತು. ಮೂಲತಃ ಮೂಲ್ಕಿಯವರಾದ ಸುವರ್ಣರು ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ಹತ್ತಾರು ವರ್ಷಗಳ ಹಿಂದೆ ಮಂಗಳೂರಿಗೆ ಬಂದು ನೆಲೆಸಿದ್ದರು. ಇವರು ನಿರ್ಮಿಸಿದ ಮೊದಲ ಸಿನಿಮಾ ‘ಘಟಶ್ರಾದ್ಧ’ ಇದು ಗಿರೀಶ್ ಕಾಸರವಳ್ಳಿಯವರ ಮೊದಲ ನಿರ್ದೇಶನದ ಸಿನಿಮಾ ಕೂಡಾ. ಗಿರೀಶ್ ಕಾಸರವಳ್ಳಿಯವರು ಕನ್ನಡ ಸಿನಿಮಾ ರಂಗದಲ್ಲಿ ಗಟ್ಟಿಯಾಗಿ ನೆಲೆ ಊರಲು ನೆರವಾದವರು ಸುವರ್ಣರು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ‘ಮನೆ’, ‘ಕುಬಿ ಮತ್ತು ಇಯಾಲ’ ಮತ್ತು ‘ತಬರನ ಕಥೆ’ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಬ್ರೇಕ್ ಕೊಟ್ಟಿತು. ದೂರದರ್ಶನಕ್ಕೆ ಇವರ ನಿರ್ದೇಶನದಲ್ಲಿ ಕೋಟ…
ಮಂಗಳೂರು : ಮಂಗಳೂರಿನ ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ ಇದರ ‘ತ್ರಿಂಶೋತ್ಸವ’ದ ಅಂಗವಾಗಿ ನಡೆಯುವ ಸರಣಿ ನೃತ್ಯ ಕಾರ್ಯಕ್ರಮ “ನೃತ್ಯಾಮೃತ -6” ಅಂಗವಾಗಿ ನಾಟ್ಯಾರಾಧನಾ ಕಲಾ ಕೇಂದ್ರದ ಕಿರಿಯ ವಿದ್ಯಾರ್ಥಿಗಳಿಂದ “ಮುಕುಲ ಮಂಜರಿ” ವೈವಿಧ್ಯಮಯ ನೃತ್ಯ ಕಾರ್ಯಕ್ರಮವು ದಿನಾಂಕ 17-07-2024ರ ಬುಧವಾರದಂದು ಸಂಜೆ 4.45 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಭವನ( ಪುರಭವನ)ದಲ್ಲಿ ನಡೆಯಲಿದೆ. ತ್ರಿಂಶೋತ್ಸವದ ಸಹ ಸಮಿತಿಗಳ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ಕಲ್ಬಾವಿ ಕ್ಯಾಶೂಸ್ ಇದರ ಮಾಲಿಕರಾದ ಶ್ರೀ ಪ್ರಕಾಶ್ ರಾವ್ ಕಲ್ಬಾವಿ ಉದ್ಘಾಟಿಸಲಿದ್ದು, ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾ (ರಿ.) ಬೆಂಗಳೂರು ಇದರ ರಾಜ್ಯ ಜತೆ ಕಾರ್ಯದರ್ಶಿ ಶ್ರೀಮತಿ ಕಾತ್ಯಾಯಿನೀ ಸೀತಾರಾಂ, ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ ಮತ್ತು ತುಳು ಅಧ್ಯಯನ ಸ್ನಾತಕೋತ್ತರ ವಿಭಾಗ ಮಂಗಳೂರಿನ ಸಂಯೋಜಕರಾದ ಡಾ. ಮಾಧವ ಎಂ. ಕೆ., ಲಲಿತಕಲಾ ಸದನ ಮಂಗಳೂರಿನ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಪ್ರೇಮನಾಥ್, ನೃತ್ಯಸುಧಾ (ರಿ.)…
ಮೂಡಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಮೂವತ್ತೇಳನೇ ಉಪನ್ಯಾಸ ಕಾರ್ಯಕ್ರಮವು ದಿನಾಂಕ 12-07-2024 ರಂದು ಮೂಡಬಿದಿರೆಯ ಆಳ್ವಾಸ್(ಸ್ವಾಯತ್ತ) ಕಾಲೇಜಿನಲ್ಲಿ ನಡೆಯಿತು. “ಸಮಾಜ ಸೇವೆ: ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಸೋದರಿ ನಿವೇದಿತಾ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳೂರಿನ ಭಾರತ್ ಅಕಾಡೆಮಿಯ ಅಕಾಡೆಮಿಕ್ ಸಂಯೋಜಕರಾದ ಸ್ವಾತಿ ರೈ “ಸೋದರಿ ನಿವೇದಿತಾ, ವಿವೇಕಾನಂದರ ಶಿಷ್ಯೆ, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮತ್ತು ಮಹಿಳಾ ಶಿಕ್ಷಣಕ್ಕೆ ತನ್ನ ಜೀವನವನ್ನೇ ಅರ್ಪಿಸಿದವರು. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಆಳವಾದ ಗೌರವವನ್ನು ಉತ್ತೇಜಿಸಿದರು. ಇವರ ಸೇವಾಭಾವನೆಯು ನಮ್ಮೆಲ್ಲರಿಗು ಪ್ರೇರಣೆಯಾಗಿದೆ. ಜನಸೇವೆಯನ್ನು ಸಮರ್ಥವಾಗಿ ಮಾಡುವ ಮೂಲಕ ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಸುಧಾರಿಸಲು ಇವರ ಆದರ್ಶಗಳು ನಮಗೆ ಮಾರ್ಗದರ್ಶನ.” ಎಂದು ಹೇಳಿದರು. ಈ ಸಂದರ್ಭದಲ್ಲಿ ಮೂಡಬಿದಿರೆಯ ಆಳ್ವಾಸ್(ಸ್ವಾಯತ್ತ) ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ನಾರಾಯಣ ಶೆಟ್ಟಿ, ರಾಮಕೃಷ್ಣ ಮಿಷನ್ ಹಿರಿಯ ಸ್ವಯಂಸೇವಕರಾದ ಶ್ರೀ ಬೆಳ್ಳಾಲ…
ತೆಕ್ಕಟ್ಟೆ: ಕೇಂದ್ರ ಸಂಸ್ಕೃತಿ ಇಲಾಖೆ ನವದೆಹಲಿ ಇದರ ಪ್ರಾಯೋಜಕತ್ವದಲ್ಲಿ ‘ಸಿನ್ಸ್ 1999 ಶ್ವೇತಯಾನ- 42ರ ಕಾರ್ಯಕ್ರಮದಡಿಯಲ್ಲಿ ಯಕ್ಷಾಂತರಂಗ (ರಿ.) ಕೋಟ ಪ್ರಸ್ತುತ ಪಡಿಸಿದ ‘ಅಂಬೆ’ ಯಕ್ಷಗಾನ ಪ್ರದರ್ಶನವು ದಿನಾಂಕ 13-07-2024ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್ ಮಾತನಾಡಿ “ಕತ್ತಲನ್ನು ಹೋಗಲಾಡಿಸುವುದಕ್ಕೆ ಮತ್ತೆ ಮತ್ತೆ ಯಕ್ಷರಂಗದಲ್ಲಿ ದೀಪವನ್ನು ಬೆಳಗ ಬೇಕಾಗುತ್ತದೆ. ಕರಾವಳಿ ಭಾಗದಲ್ಲಿ ಎಷ್ಟೇ ಮಳೆ ಬರಲಿ, ಬಿಸಿಲಿರಲಿ ಯಕ್ಷರಂಗದ ದೀಪವು ಸದಾ ಉರಿಯುತ್ತಿರುತ್ತದೆ. ದಣಿದು ದುಡಿದ ಒಂದಂಶವನ್ನು ಕಲಾ ಪ್ರಪಂಚಕ್ಕೆ ಕೊಡುಗೆಯಾಗಿ ಕೊಡುವ ಸದ್ಗುಣ ಸಜ್ಜನರಲ್ಲಿ ಸದಾ ಕಾಲ ಇರಲಿ. ಇದರಿಂದಾಗಿ ಮತ್ತಷ್ಟು ಎತ್ತರಕ್ಕೆ ಕಲೆ ಬೆಳೆದು ಬೆಳಕಾಗಲಿ.” ಎಂದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ಆಹಾರ್ಯ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ಇವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದ ಪ್ರಸಂಗಕರ್ತ ಹಾಗೂ ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು “ಯಕ್ಷಗಾನ ರಂಗಭೂಮಿಯಲ್ಲಿ ವೇಷಭೂಷಣ ತಜ್ಞರಾಗಿ ಸುದೀರ್ಘ ಕಾಲ ವಿಶಿಷ್ಟವಾದ ಕೊಡುಗೆಯನ್ನು…
ಬೆಂಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪ್ರೊ. ಹಿ. ಚಿ. ಬೋರಲಿಂಗಯ್ಯ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೊ. ಹಿ.ಶಿ. ರಾಮಚಂದ್ರೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಶ್ರೀಯುತರನ್ನು ಆಯ್ಕೆ ಮಾಡಲಾಗಿದೆ. ದಿನಾಂಕ 15-07-2024ರ ಸೋಮವಾರ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ.ಚಿ. ಬೋರಲಿಂಗಯ್ಯ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರೊ. ಹಿ. ಚಿ. ಬೋರಲಿಂಗಯ್ಯ : ಲೇಖಕ, ಪ್ರಾಧ್ಯಾಪಕ, ಕುಲಸಚಿವ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಇವರು 25-10-1955ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಿತ್ತಲಪುರ ಗ್ರಾಮದಲ್ಲಿ ಜನಿಸಿದರು. ಹಿತ್ತಲಪುರ ಹಾಗೂ ಉಜ್ಜನಿಗಳಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ನಡೆಸಿದ ಇವರು ತಮ್ಮ ಪ್ರೌಢಶಿಕ್ಷಣವನ್ನು ಹುಲಿಯೂರುದುರ್ಗದಲ್ಲಿ ಪೂರ್ತಿಗೊಳಿಸಿದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಿ 1981ರಲ್ಲಿ ಜಿ.ಪಿ.ರಾಜರತ್ನಂ ಚಿನ್ನದ ಪದಕದೊಂದಿಗೆ ಕನ್ನಡವಿಷಯದಲ್ಲಿ ಎಂ.ಎ. ಪದವಿ ಪಡೆದರು. ‘ವಿಸ್ಮೃತಿ ಮತ್ತು ಸಂಸ್ಕೃತಿ: ಒಂದು ಬುಡಕಟ್ಟಿನ ಲೋಕದೃಷ್ಟಿ ಹಿನ್ನೆಲೆಯಲ್ಲಿ ಸಂಸ್ಕೃತಿ ಚರ್ಚೆ’ ಎಂಬ ಸಂಪ್ರಬಂಧಕ್ಕಾಗಿ…
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ರಾ.ಹ. ದೇಶಪಾಂಡೆ’ ಪ್ರಶಸ್ತಿ ಎಂದೇ ಪ್ರಸಿದ್ಧವಾಗಿರುವ ಸಿರಿಗನ್ನಡಂ ಗೆಲ್ಗೆ ರಾಮಚಂದ್ರ ಹಣಮಂತ ರಾವ ದೇಶಪಾಂಡೆ ಪ್ರಶಸ್ತಿಗೆ ಸಾಹಿತಿ ನಾ. ಮೊಗಸಾಲೆ ಇವರನ್ನು ಹಾಗೂ ‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ಗೆ ಬೆಳಗಾವಿಯ ‘ಕನ್ನಡಮ್ಮ’ ಪತ್ರಿಕೆಯನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರಗಳು ತಲಾ ರೂಪಾಯಿ 50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿವೆ. ಸಂಘದ 135ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ. ಸಾಹಿತಿ ನಾ. ಮೊಗಸಾಲೆ: ಕಾಸರಗೋಡು ತಾಲೂಕಿನ ಕೋಳ್ಯೂರಿನ ಮೊಗಸಾಲೆ ಎಂಬ ಗ್ರಾಮದಲ್ಲಿ ಜನಿಸಿದ ಡಾ. ನಾರಾಯಣ ಮೊಗಸಾಲೆ ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆಗೆ ಕಥೆ ಕಾದಂಬರಿಗಳನ್ನು ರಚಿಸಿರುವ ಅವರು ಸಾಹಿತ್ಯ ಸೃಷ್ಟಿಯ ಜೊತೆಗೆ ಸಾಹಿತ್ಯ ಪ್ರಸಾರದಲ್ಲಿಯೂ ವಿಶೇಷ ಕೆಲಸ ಮಾಡಿದ್ದಾರೆ. ಕಾಂತಾವರ ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ‘ವಾರ್ತಮಾನದ ಮುಖಗಳು’, ‘ಪಲ್ಲವಿ’, ‘ಮೊಗಸಾಲೆಯ ನೆನಪುಗಳು’,…
ಮಾನವೇತಿಹಾಸದ ನಿರ್ದಿಷ್ಟ ಸಾಮುದಾಯಿಕ ಹೆಜ್ಜೆಗಳನ್ನು ಸಮಕಾಲೀನಗೊಳಿಸುವ ವಿಶಿಷ್ಟ ಪ್ರಯತ್ನ ಭಾರತದ ಶತಮಾನಗಳ ಚರಿತ್ರೆಯಲ್ಲಿ ಬುಡಕಟ್ಟು ಸಮುದಾಯಗಳು ಮತ್ತು ಅಲೆಮಾರಿ ಸಮೂಹಗಳ ಅಧ್ಯಾಯಗಳು ಭಾರತೀಯ ಸಂಸ್ಕೃತಿಯಷ್ಟೇ ವೈವಿಧ್ಯಮಯವಾಗಿದ್ದು ತಮ್ಮದೇ ಆದ ವಿಶಿಷ್ಟ ಸಾಂಸ್ಕೃತಿಕ ನೆಲೆಗಳನ್ನೂ, ಸಾಮಾಜಿಕ ವ್ಯವಸ್ಥೆಗಳನ್ನೂ, ರಾಜಕೀಯ ಅರ್ಥಿಕತೆಯ ನೆಲೆಗಳನ್ನೂ ಸೃಷ್ಟಿಸಿಕೊಂಡು ಬಂದಿವೆ. ಇಂತಹ ಒಂದು ಅಲೆಮಾರಿ ಸಮುದಾಯ ಎಂದರೆ ಉತ್ತರ ಕರ್ನಾಟಕದಲ್ಲಿ ವ್ಯಾಪಕವಾಗಿ ಕಾಣಬಹುದಾದ ಬಂಜಾರ/ಲಂಬಾಣಿ ಸಮಾಜ. ಮೂಲತಃ ಗೋರ್ ಎಂದು ಗುರುತಿಸಲ್ಪಡುವ ಈ ಸಮುದಾಯವು ತನ್ನನ್ನು ́ಗೋರ್ಮಾಟಿʼ ಎಂದೇ ಕರೆದುಕೊಳ್ಳುತ್ತದೆ. ಅಂದರೆ “ನಮ್ಮಜನ-ನಮ್ಮವರು” ಎಂಬ ಅರ್ಥವನ್ನು ಸೂಸುತ್ತದೆ. ರಂಗಕರ್ಮಿ ಸಿ.ಬಸವಲಿಂಗಯ್ಯ (ಬಸು) ಈ ಸಮುದಾಯದ ಚಾರಿತ್ರಿಕ ನಡಿಗೆಯನ್ನು, ಅದರ ಒಳಹೊರಗುಗಳನ್ನು, ಅಲ್ಲಿನ ಶ್ರಮಿಕ ಪ್ರಪಂಚದ ಆಂತರಿಕ ತುಮುಲ-ತಲ್ಲಣ-ಆತಂಕ ಹಾಗೂ ನಿರೀಕ್ಷೆಗಳನ್ನು, ರಂಗ ವೇದಿಕೆಯ ಮೇಲೆ ತಂದಿಡುವ ಮೂಲಕ ಕರ್ನಾಟಕದ ಜನತೆಗೆ, ತಮ್ಮೊಳಗೇ ಇದ್ದೂ ತಮ್ಮವರಾಗಿರದ ಒಂದು ಜನಸಮುದಾಯವನ್ನು ಪರಿಚಯಿಸಿದ್ದಾರೆ. ಅದೇ ರಂಗಾಯಣ ರೆಪರ್ಟರಿ ಪ್ರಯೋಗಿಸಿದ ನಾಟಕ ‘ಗೋರ್ಮಾಟಿ’. ತಮ್ಮ ಪರಂಪರೆ ಮತ್ತು ಜನಜೀವನವನ್ನು ಪುರಾಣ-ಐತಿಹ್ಯಗಳಲ್ಲಿ ಗುರುತಿಸಿಕೊಳ್ಳುವ ಬಂಜಾರ ಸಮುದಾಯ…