Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಮಂಗಳೂರಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಾಂಸ್ಕೃತಿಕ ವೇದಿಕೆಯಲ್ಲಿ ಕೊಟ್ಟಾರದ ‘ಭರತಾಂಜಲಿ’ಯ ವಿದುಷಿ ಪ್ರತಿಮಾ ಶ್ರೀಧರ್ ನಿರ್ದೇಶನದಲ್ಲಿ ‘ನೃತ್ಯಾರ್ಪಣಂ’ ಮತ್ತು ‘ಪುಣ್ಯಕೋಟಿ’ ಎಂಬ ನೃತ್ಯರೂಪಕಗಳು ದಿನಾಂಕ 20-05-2023ರಂದು ಪ್ರದರ್ಶನಗೊಂಡವು. ಪುಣ್ಯಕೋಟಿ ರೂಪಕದ ಹಾಡಿನ ಪ್ರತಿಯೊಂದು ವಾಕ್ಯಗಳಿಗೂ ಭಾವನೆಗಳನ್ನು ತುಂಬಿ ಅರ್ಥಪೂರ್ಣವಾಗಿ ಜನರ ಮುಂದೆ ಪ್ರದರ್ಶಿಸಿ ಮುಕ್ತ ಪ್ರಶಂಸೆಗೆ ಪಾತ್ರರಾದರು ಶ್ರೀಧರ ಹೊಳ್ಳ ದಂಪತಿಗಳು. ಹುಲಿಯ ಚಿತ್ರಣವನ್ನು ಯಕ್ಷ ಮತ್ತು ನಾಟ್ಯ ಶೈಲಿಯಲ್ಲಿ ಪ್ರದರ್ಶನ ಮಾಡಲಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರನ್ನೂ ಆಕರ್ಷಿಸಿತು. ಗೋವನ್ನು ಆಧರಿಸಿರುವ ಈ ಕಥೆಯಲ್ಲಿ ಭಾವ-ಅನುಭಾವ, ತುಡಿತ-ಮಿಡಿತ, ಕೊನೆಗೆ ಹುಲಿರಾಯನ ಸಾವು ಎಲ್ಲವೂ ಅತ್ಯುತ್ತಮವಾಗಿ ಮೂಡಿ ಬಂದು, ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. ಕಥೆಯ ಪ್ರಮುಖ ಪಾತ್ರಗಳಾದ ಹುಲಿ ಮತ್ತು ಧೇನುವನ್ನು ಶ್ರೀಧರ ಹೊಳ್ಳ ಮತ್ತು ಪ್ರತಿಮಾ ಶ್ರೀಧರ್ರವರು ಆಭಿನಯಿಸಿ ಆ ಪಾತ್ರಗಳು ಅದ್ಭುತವಾಗಿ ಮೂಡಿ ಇಡಿ ರೂಪಕದ ಅಂದವನ್ನು ಹೆಚ್ಚಿಸಿತು. ಕರುವಿನ ಪಾತ್ರಧಾರಿ ತಾಯಿ ಪುಣ್ಯಕೋಟಿಯೊಂದಿಗೆ ‘ಅಮ್ಮ ನೀನು ಸಾಯಲೇಕೆ ಎನ್ನ ತಬ್ಬಲಿ ಮಾಡಲೇಕೆ’ ಎಂಬ ಮಾತು, ಹುಲಿಯ…
ಮಸ್ಕತ್: ಪ್ರಪ್ರಥಮ ಬಾರಿ ಒಮನ್ ಮಸ್ಕತ್ ನಲ್ಲಿ ತುಳು ನಾಡಿನ ಕಾರಣೀಕದ ದೈವ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನ ಕಂಡಿತು. ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ತಂಡದವರು ಹರೀಶ್ ಶೆಟ್ಟಿ ಸೂಡ ವಿರಚಿತ “ಸ್ವಾಮಿ ಕೊರಗಜ್ಜ” ಪ್ರಸಂಗವನ್ನು ಕಾಲಮಿತಿಯಲ್ಲಿ ಪ್ರಸ್ತುತಿ ಮಾಡಿದರು. ಬಿರುವ ಜವನೆರ್ ಮಸ್ಕತ್ ವಾಟ್ಸಾಪ್ ಬಳಗದ ಸೇವಾ ಸಂಘಟನೆಯು ಸಂಯೋಜಿಸಿದ ಈ ಕಾರ್ಯಕ್ರಮ ಸಾವಿರಾರು ತುಳುವ ಯಕ್ಷಗಾನ ಅಭಿಮಾನಿಗಳ ಹಾಗೂ ಕೊರಗಜ್ಜ ಭಕ್ತರ ಮನ ಗೆದ್ದಿತು. ಭಾಗವತಿಕೆಯಲ್ಲಿ ಹನುಮಗಿರಿ ಮೇಳದಲ್ಲಿ ಕಲಾ ವ್ಯವಸಾಯ ಮಾಡುತ್ತಿರುವ ಖ್ಯಾತ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಮತ್ತು ಚೆಂಡೆ ಮದ್ದಳೆ ಹಿಮ್ಮೇಳದಲ್ಲಿ ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್ ಹಾಗೂ ಭಾಸ್ಕರ ಭಟ್ ಕಟೀಲು ಅವರು ಸಹಕರಿಸಿದರು. ಶಿವಯೋಗಿಯಾಗಿ ಕದ್ರಿ ನವನೀತ ಶೆಟ್ಟಿ, ಕೊರಗಜ್ಜನಾಗಿ ಸದಾಶಿವ ಆಳ್ವ ತಲಪಾಡಿ, ಮೈರಕ್ಕೆ ಪಾತ್ರದಲ್ಲಿ ರಾಮಚಂದ್ರ ಮುಕ್ಕ, ಮೈಸ0ದಾಯನಾಗಿ ಕಾವಲಕಟ್ಟೆ ದಿನೇಶ್ ಶೆಟ್ಟಿ, ಪಂಜಂದಾಯ ದೈವವಾಗಿ ದಯಾನಂದ ಜಿ. ಕತ್ತಲ್ಸಾರ್ ಹಾಗೂ ಪುಷ್ಪರಾಜ್ ಕುಕ್ಕಾಜೆ ಇವರುಗಳು ಅರಸು…
ಮೂಡಬಿದರೆ: ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆ ವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು. ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ ಮೇಲ್ಪಟ್ಟು ಕಟೀಲು ಮೇಳದಲ್ಲಿ ಪ್ರಸಿದ್ಧ ಭಾಗವತರಿಗೆ ಚಂಡೆ-ಮದ್ದಲೆ ವಾದಕರಾಗಿ ಕಲಾಸೇವೆಗೈದಿದ್ದರು. ಪೂರ್ವರಂಗದ ಹಾಡುಗಳನ್ನು ಹಾಡುವ ಕ್ರಮವನ್ನು ತಿಳಿದಿದ್ದರು. 2020ರಲ್ಲಿ ಇವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಡಾ.ಪುನೀತ್ ರಾಜಕುಮಾರ ಕೋಚಿಂಗ್ ಸೆಂಟರ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ ಪರೀಕ್ಷಾ ತರಗತಿಗಳ ಉದ್ಘಾಟನಾ ಸಮಾರಂಭವು ದಿನಾಂಕ 22-05-2023ರಂದು ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜುರವರು ʻಈ ನೆಲದ ಭಾಷೆಯನ್ನು ಕಲಿಯದಿದ್ದಲ್ಲಿ ಇಲ್ಲಿ ಬದುಕನ್ನು ಕಟ್ಟಿಕೊಳ್ಳುವ ಜನರಿಗೆ ಈ ಮಣ್ಣಿನ ಪ್ರೀತಿ ಹುಟ್ಟುವುದಾದರು ಹೇಗೆ..? ಕನ್ನಡ ನಾಡಿನಲ್ಲಿ ನೆಲೆನಿಂತ ದೇಶ ವಿದೇಶದ ಜನರು ಈ ನೆಲದ ಭಾಷೆಯನ್ನು ಕಲಿಯುವ ಅನಿವಾರ್ಯತೆಯನ್ನು ಕನ್ನಡಿಗರಾದ ನಾವು ಮಾಡುತ್ತಿಲ್ಲ’. ಕನ್ನಡ ನಮ್ಮವರ ಜೊತೆ ಎಲ್ಲರಿಗೂ ಅನ್ನದ ಭಾಷೆಯಾಗಿದೆ ಎನ್ನುವ ಸತ್ಯ ಎಲ್ಲರೂ ಅರಿತುಕೊಳ್ಳಬೇಕು ಎಂದು ಅವರು ಹೇಳಿದರು. ಕೇಂದ್ರಿಯ ವಿದ್ಯಾಲಯದಲ್ಲಿ ಕಲಿಯುತ್ತಿರುವ ಮಕ್ಕಳು ಕನ್ನಡ ಭಾಷೆಯಿಂದ ವಂಚಿತರಾಗಿರುವುದನ್ನು ಮನಗಂಡು ಅಲ್ಲಿಯದೇ ಶಾಲೆಯ ಶಿಕ್ಷಕರಾದ ಶ್ರೀ ನಾರಾಯಣಸ್ವಾಮಿಯವರು ಕನ್ನಡದ ಮೇಲಿನ ಪ್ರೀತಿಯಿಂದಾಗಿ ತಮ್ಮ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರವೇಶ ಪರೀಕ್ಷೆಯನ್ನು ಕಟ್ಟಿಸುವ ಮೂಲಕ ಕನ್ನಡವನ್ನು ಉಳಿಸುವ ಬೆಳೆಸುವ ಕೆಲಸ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2023ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ ರಾಜ್ಯಮಟ್ಟದ ಈ ಪುರಸ್ಕಾರವನ್ನು ಕನ್ನಡ ಪತ್ರಿಕೋದ್ಯಮದಲ್ಲಿ ನಿರ್ಭಿತವಾಗಿ ಯಾವುದೇ ಆಮಿಷಗಳಿಗೂ ಒಳಗಾಗದೆ ಪ್ರಾಮಾಣಿಕವಾಗಿ ವಿಮರ್ಶಿಸಿ, ಸರ್ಕಾರದ, ರಾಜಕಾರಣಿಗಳ, ಸರಕಾರಿ ನೌಕರರ. ಸಮಾಜದ ನ್ಯೂನತೆಗಳನ್ನು ಎತ್ತಿ ಹಿಡಿದು ತೋರಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡಬೇಕು ಎನ್ನುವುದು ದತ್ತಿ ದಾನಿಗಳ ಆಶಯವಾಗಿದೆ. ಈವರೆಗೆ ಕನ್ನಡ ಪತ್ರಿಕೋದ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ 13 ಜನರಿಗೆ ಈ ಪ್ರಶಸ್ತಿʼಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರದಾನ ಮಾಡಲಾಗಿದ್ದು ಈ ಬಾರಿ 2023ನೇ ಸಾಲಿನ ಪ್ರಶಸ್ತಿಯು 14ನೇ ಪ್ರಶಸ್ತಿಯಾಗಿದೆ. ಪ್ರಸ್ತುತ ಕನ್ನಡದ ಪ್ರಮುಖ ದಿನಪತ್ರಿಕೆಯಾಗಿರುವ…
ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಪ್ರಥಮ ಮಕ್ಕಳ ಮೇಳ ‘ಸರಯೂ ಬಾಲ ಯಕ್ಷ ವೃಂದ ಕೋಡಿಕಲ್’ ಇವರು ಕದ್ರಿ ದೇವಸ್ಥಾನ ಸಹಕಾರದೊಂದಿಗೆ ನಡೆಯುವ ‘ಸರಯೂ ಸಪ್ತಾಹ -2023’ ದಿನಾಂಕ 25-05-2023 ರಿಂದ 31-05-2023ರವರೆಗೆ ಪ್ರತಿ ದಿನ ಸಂಜೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ. ಈ ಸಪ್ತಾಹ ಕಾರ್ಯಕ್ರಮದಲ್ಲಿ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳಮದ್ದಳೆಗಳು ನಡೆಯಲಿದ್ದು, ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಶ್ರೀ ಕ್ಷೇತ್ರ ಕದ್ರಿಯ ವೇ.ಮೂ. ಶ್ರೀ ನರಸಿಂಹ ತಂತ್ರಿಗಳು ನೆರವೇರಿಸಲಿರುವರು. ಯಕ್ಷಗಾನ ಬಯಲಾಟಗಳು ಪ್ರತೀದಿನ ಸಂಜೆ 5.30ರಿಂದ 25-05-2023 ಗುರುವಾರ : ವಿಜಯದ್ವಯ 26-05-2023 ಶುಕ್ರವಾರ : ಓಂ ನಮೋ ಭಗವತೇ ವಾಸುದೇವಾಯ, ಓಂ ನಮಃ ಶಿವಾಯ 27-05-2023 ಶನಿವಾರ : ದೇವಿ ಮಹಾತ್ಮೆ (ಅಪರಾಹ್ನ 2:30ರಿಂದ) 28-05-2023 ರವಿವಾರ : ವೀರ ವೀರೇಶ (ಕಥೆ : ಉದನೇಶ್ವರ ಪ್ರಸಾದ್ ಮೂಲಡ್ಕ ಪ್ರಸಂಗ ರಚನೆ : ರವಿ ಅಲೆವೂರಾಯ…
ಬೆಳಗಾವಿ: ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ದಿನಾಂಕ 22-05-2023 ರಂದು ಪ್ರದರ್ಶನವಾದ ಹಾಸ್ಯ ನಾಟಕ ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ತುಂಬಿದ ರಂಗಮಂದಿರದಲ್ಲಿಯ ಪ್ರೇಕ್ಷಕರಿಗೆ 90 ನಿಮಿಷಗಳು ಸತತವಾಗಿ ನಗಿಸುತ್ತಾ ಹಾಸ್ಯದ ಔತಣ ಕೊಡುವಲ್ಲಿ ಯಶಸ್ವಿಯಾಯಿತು. ನಾಟಕದ ನಂತರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ ಬೆಳಗಾವಿಯವರು ನಾಟಕದ ನಿರ್ದೇಶಕ ಡಾ.ಅರವಿಂದ ಕುಲಕರ್ಣಿ ಮತ್ತು ಶ್ರೀಮತಿ ಪ್ರತಿಭಾ ಕಳ್ಳಿಮಠ ಇವರನ್ನು ಸನ್ಮಾನಿಸಿ ನಾಟಕದ ಬಗ್ಗೆ ತುಂಬಾ ಅಭಿಮಾನದ ಮಾತುಗಳನ್ನು ಆಡಿದರು. “ತಮ್ಮ ಜೀವನದಲ್ಲಿ ಈ ರೀತಿಯ ಸತತವಾಗಿ ನಗಿಸುವ ಅತ್ಯುತ್ತಮವಾಗಿ ಅಭಿನಯಿಸಿದ ಮತ್ತು ನಿರ್ದೇಶನದ ನಾಟಕವನ್ನು ಪ್ರಥಮ ಬಾರಿ ನೋಡಿದ್ದೇನೆ” ಎಂದು ಹೇಳಿದರು. ಈ ನಾಟಕವನ್ನು ಬೇರೆ ಕಡೆಗೆ ಸಹ ಪ್ರದರ್ಶನಕ್ಕೆ ಅನುವು ಮಾಡಿಕೊಡುವುದಾಗಿ ಆಶ್ವಾಸನೆ ನೀಡಿದರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಶ್ರೀಮತಿ ಜೈಶೀಲಾ ಬ್ಯಾಕೋಡಿ ಮತ್ತು ಶ್ರೀಮತಿ ಶೈಲಜಾ ಭಿಂಗೆ ಅವರೂ ಸಹ ನಾಟಕದ ಉತ್ತಮ ಪ್ರದರ್ಶನ ಹಾಗೂ ಅಭಿನಯದ ಕುರಿತು ಮೆಚ್ಚಗೆಯ ಮಾತುಗಳನ್ನಾಡಿದರು. ಶೈಲಜಾ ಭಿಂಗೆ ಅವರು…
ಉಡುಪಿ: ತುಳು ಕೂಟ ಉಡುಪಿ (ರಿ.) ಈ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ 28ನೇ ವರ್ಷದ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು 28 ಮೇ 2023ರಂದು ಉಡುಪಿ ಕಿದಿಯೂರು ಹೊಟೇಲಿನ ಪವನ್ ರೂಫ್ ಟಾಪ್ ಸಭಾಂಗಣದಲ್ಲಿ ನಡೆಸಲಿದೆ. ತುಳು ಕೂಟ ಉಡುಪಿಯ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಉಡುಪಿ ಕ್ಷೇತ್ರದ ಶಾಸಕರಾದ ಶ್ರೀ ಯಶಪಾಲ್ ಸುವರ್ಣ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನ ಚಿತ್ರನಟಿ ಶ್ರೀಮತಿ ಹರಿಣಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮತ್ತು ಉದ್ಯಮಿ ಹಾಗೂ ಸಮಾಜ ಸೇವಕರಾದ ಶ್ರೀ ಯು. ವಿಶ್ವನಾಥ ಶೆಣೈ ಇವರುಗಳು ಪಾಲ್ಗೊಳ್ಳಲಿದ್ದಾರೆ. ತುಳು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿ ದಿ.ಎಸ್.ಯು.ಪಣಿಯಾಡಿ ಸ್ವಾತಂತ್ರ್ಯ ಹೋರಾಟಗಾರರಾಗಿಯೂ ಗುರುತಿಸಿಕೊಂಡವರು. ಇವರ ಸವಿನೆನಪಿಗಾಗಿ ಉಡುಪಿ ತುಳು ಕೂಟವು ಕಳೆದ 28 ವರ್ಷಗಳಿಂದ…
ಮಂಗಳೂರು : ಪಕ್ಕಲಡ್ಕ ಯುವಕ ಮಂಡಲ (ರಿ), ಡಿವೈಎಫ್ಐ ಪಕ್ಕಲಡ್ಕ ಘಟಕದ ನೇತೃತ್ವದಲ್ಲಿ ಒಂದು ವಾರಗಳ ಕಾಲ ನಡೆದ ‘ಆಟ ಪಾಠ’ ಮಕ್ಕಳ ಸಂತಸ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 20-05-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಿಟೆಲ್ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಠಲ್ ಎ.ರವರು ಮಾತನಾಡುತ್ತಾ “ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಈ ಸಮಾಜದಲ್ಲಿ ಬಡವರ ಮಕ್ಕಳೂ ಶಿಕ್ಷಣ ಪಡೆಯುತ್ತಿದ್ದಾರೆ. ಅವರ ಜೀವನ ಕ್ರಮಗಳು, ಬದುಕು, ಕಷ್ಟ ಸುಖಗಳು ಶ್ರೀಮಂತ ವಿದ್ಯಾರ್ಥಿಗಳಿಗೆ ಅದರ ಅರಿವೇ ಇಲ್ಲದ ರೀತಿಯಲ್ಲಿದ್ದು ಬಡವರ ಮತ್ತು ಶ್ರೀಮಂತರ ನಡುವಿನ ಅಂತರ, ತಾರತಮ್ಯಗಳು ಹೆಚ್ಚಾಗಲು ಕಾರಣವಾಗಿದೆ. ಮಕ್ಕಳಲ್ಲಿ ಸಹೋದರತೆ, ಪ್ರೀತಿ, ವಾತ್ಸಲ್ಯ, ಸೌಹಾರ್ದತೆಗಳೆಲ್ಲವೂ ಜೀವಂತವಾಗಿರಬೇಕಾದರೆ ಸರಕಾರ ಪದವಿ ಪೂರ್ವವರೆಗಿನ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಬೇಕು. ಸರಕಾರ ಸರಿಯಾಗಿ ಮನಸ್ಸು ಮಾಡಿದರೆ ಸರಕಾರಿ ಶಾಲೆಗಳನ್ನು ಮಾದರಿಯಾಗಿ ನಡೆಸುವುದು ಬಹಳ ಕಷ್ಟದ ಕೆಲಸವೇನಲ್ಲ. ಈ ಹಿಂದೆ ಎಲ್ಲರೂ ಸರಕಾರಿ ಶಾಲೆಯಲ್ಲೇ…
16.04.1996ರಂದು ರಾಜಕುಮಾರ್ ಹಾಗೂ ಕಸ್ತೂರಿ ಇವರ ಮಗಳಾಗಿ ಛಾಯಾಲಕ್ಷ್ಮೀ ಆರ್.ಕೆ ಅವರ ಜನನ. Msc.(Chemistry), BEd ಇವರ ವಿದ್ಯಾಭ್ಯಾಸ. ತಂದೆಯೇ ಯಕ್ಷಗಾನದ ಮೊದಲ ಗುರು. ನಂತರದಲ್ಲಿ ಪೂರ್ಣಿಮಾ ಯತೀಶ್ ರೈ, ರಮೇಶ್ ಶೆಟ್ಟಿ ಬಾಯಾರು ಇವರ ಬಳಿ ಹೆಚ್ಚಿನ ನಾಟ್ಯವನ್ನು ಕಲಿತು ಯಕ್ಷಗಾನ ರಂಗದಲ್ಲಿ ಸೇವೆಯನ್ನು ಮಾಡುತ್ತಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಬರಲು ಮೂಲ ಪ್ರೇರಣೆ ಇವರ ತಂದೆ ಹಾಗೂ ಗಣೇಶಪುರ ಕೈಕಂಬದಲ್ಲಿ ಪ್ರತೀ ವರ್ಷ ನವರಾತ್ರಿಯ ಸಂದರ್ಭದಲ್ಲಿ ನಡೆಯುತ್ತಿದ್ದ ಯಕ್ಷಗಾನಗಳು ಯಕ್ಷಗಾನಕ್ಕೆ ಬರಲು ಪ್ರೇರಣೆ ಎಂದು ಹೇಳುತ್ತಾರೆ ಛಾಯಾಲಕ್ಷ್ಮೀ. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಪೂರ್ತಿ ಕಥೆಯನ್ನು ತಿಳಿದುಕೊಳ್ಳುತ್ತೇನೆ. ನಾವು ಬರೀ ನಮ್ಮ ವೇಷದ ಬಗ್ಗೆ ತಿಳಿದುಕೊಂಡರೆ ಸಾಕಾಗುವುದಿಲ್ಲ, ಅದರಿಂದ ಜ್ಞಾನವು ಬೆಳೆಯುವುದಿಲ್ಲ. ಮೊದಲೆಲ್ಲ ಪುಸ್ತಕಗಳನ್ನು ಓದಬೇಕಿತ್ತು, ಆದರೆ ಈಗ ಸುಲಭವಾಗಿ ಯೂಟ್ಯೂಬ್ ಅಲ್ಲಿ ಬೇರೆ ಬೇರೆ ಮೇಳಗಳು ಆಡಿದ ಇಡೀ ಪ್ರಸಂಗವೇ ಸಿಗುತ್ತದೆ, ಆದ್ದರಿಂದ ಇಡೀ ಪ್ರಸಂಗವನ್ನು ನೋಡಿಕೊಳ್ಳುತ್ತೇನೆ ಹಾಗೂ ಪ್ರತಿಯೊಂದು ವೇಷದ ನಡೆಯನ್ನು ನೋಡಿಕೊಳ್ಳುತ್ತೇನೆ. ನಾನು ಎಷ್ಟೊತ್ತಿಗೆ ರಂಗ…