Author: roovari

ಮಂಗಳಾದೇವಿ : ಮಂಗಳೂರು ರಾಮಕೃಷ್ಣ ಮಠದ ನೂತನ ಯೋಜನೆ ‘ಭಜನ್‌ ಸಂಧ್ಯಾ’ ಕಾರ್ಯಕ್ರಮಕ್ಕೆ ದಿನಾಂಕ : 02-07-2023ರಂದು ಚಾಲನೆ ನೀಡಲಾಯಿತು. ಮಠದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಭಜನಾ ಮಂಡಳಿಗಳು ಪ್ರತಿ ತಿಂಗಳ ಮೊದಲ ಮತ್ತು ಎರಡನೇ ರವಿವಾರ ಭಜನಾ ಸೇವೆ ನೀಡಲಿವೆ. ಕಾರ್ಯಕ್ರಮವನ್ನು ಮಂಗಳೂರಿನ ಎಸ್.ಸಿ.ಎಸ್‌. ಆಸ್ಪತ್ರೆಯ ಮುಖ್ಯಸ್ಥ ಡಾ. ಜೀವರಾಜ್ ಸೊರಕೆ ಅವರು ಉದ್ಘಾಟಿಸಿದರು, ಈ ಸಂದರ್ಭ ಮಾತನಾಡಿದ ಅವರು “ರಾಮಕೃಷ್ಣ ಮಠದ ಈ ಸಾನ್ನಿಧ್ಯದಲ್ಲಿ ಭಜನೆ ಸಲ್ಲಿಸುವುದು ಒಂದು ಸುಕೃತವೇ ಸರಿ. ಇದಕ್ಕೆ ಅನುವು ಮಾಡಿಕೊಟ್ಟ ಸ್ವಾಮೀಜಿ ಶ್ಲಾಘನೆಗೆ ಪಾತ್ರರು, ಭಜನಾ ಸೇವೆ ನಿರತರವಾಗಿ ಮುಂದುವರಿಯಲಿ” ಎಂದರು. ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಸೀತಾರಾಮ ಎ. ಉಪಸ್ಥಿತರಿದ್ದರು. ಕ್ಯಾ. ಗಣೇಶ್ ಕಾರ್ಣಿಕ್ ಸ್ವಾಗತಿಸಿ ಪ್ರಸ್ತಾಪಿಸಿದರು. ರಾಮಕೃಷ್ಣ ಮಿಷನ್‌ನ ಮೌಲ್ಯ ಶಿಕ್ಷಣ ಕಾರ್ಯಕ್ರಮಗಳ ಸಂಯೋಜಕ ರಂಜನ್‌ ಬೆಳ್ಳರ್ಪಾಡಿ ಅವರು ವಂದಿಸಿ, ಮಂಜುಳಾ ನಿರೂಪಿಸಿದರು. ಭಜನ್ ಸಂಧ್ಯಾದ ಮೊದಲ ಕಾರ್ಯಕ್ರಮದಲ್ಲಿ…

Read More

ಉಡುಪಿ: ಯಕ್ಷಗಾನ ಕಲಾರಂಗ (ರಿ) ಆಯೋಜಿಸಿದ ‘ಯವಕ್ರೀತೋಪಾಖ್ಯಾನ’ ಬಡಗುತಿಟ್ಟು ಯಕ್ಷಗಾನ ಪ್ರದರ್ಶನವು 2 ಜುಲೈ, 2023ರ ಭಾನುವಾರ ಉಡುಪಿಯ ಪೂರ್ಣಪ್ರಜ್ಞ ಸಭಾಭವನದಲ್ಲಿ ನೆರವೇರಿತು. ಈ ಯಕ್ಷಗಾನದ ಪದ್ಯ ರಚನೆ ಐ. ಡಿ. ಗಣಪತಿ ಅವರು ಮಾಡಿದ್ದು ಹಿಮ್ಮೇಳದಲ್ಲಿ ಭಾಗವತರಾಗಿ ರಾಮಕೃಷ್ಣ ಹೆಗಡೆ ಹಿಲ್ಲೂರು ಮತ್ತು ಪ್ರಸನ್ನ ಭಟ್ ಬಾಳ್ಕಲ್, ಮದ್ದಳೆಗಾರರಾಗಿ ಸುನೀಲ್‌ ಭಂಡಾರಿ ಕಡತೋಕ ಮತ್ತು ರಾಘವೇಂದ್ರ ಹೆಗಡೆ ಯಲ್ಲಾಪುರ, ಚೆಂಡೆಯಲ್ಲಿ ಪ್ರಜ್ವಲ್ ಮುಂಡಾಡಿ ಮತ್ತು ಸೃಜನ್ ಹಾಲಾಡಿ ಸಹಕರಿಸಿದರು. ಮುಮ್ಮೇಳದಲ್ಲಿ ವಿಶ್ವರಥನಾಗಿ ಪ್ರಸನ್ನ ಶೆಟ್ಟಿಗಾರ್, ಹೇಮಾವತಿಯಾಗಿ ಗೋವಿಂದ ವಂಡಾರು, ಇಂದ್ರನಾಗಿ ಗಣಪತಿ ಗುಂಡಿಬೈಲ್ ವಿಶ್ವಾಮಿತ್ರನಾಗಿ ಥಂಡಿಮನೆ ಶ್ರೀಪಾದ ಭಟ್, ನಾರದನಾಗಿ ಅಶೋಕ ಭಟ್‌ ಸಿದ್ಧಾಪುರ, ವಸಿಷ್ಠನಾಗಿ ಸುಬ್ರಹ್ಮಣ್ಯ ಕೋಣಿ , ಬ್ರಹ್ಮನಾಗಿ ಚಂದ್ರಕುಮಾರ್ ನೀರ್ಜಡ್ಡು, ವಿಶಾಖೆಯಾಗಿ ಸುಧೀರ್ ಉಪ್ಪೂರು, ಚಿತ್ರಲೇಖೆಯಾಗಿ ಶ್ರೀಕಾಂತ ರಟ್ಟಾಡಿ, ರೈಭ್ಯನಾಗಿ ಕೃಷ್ಣಯಾಜಿ ಬಳ್ಕೂರು, ಯವಕ್ರೀತನಾಗಿ ವಿದ್ಯಾಧರ ಜಲವಳ್ಳಿ, ಭಾರದ್ವಾಜನಾಗಿ ಆನಂದ ಭಟ್ ಕೆಕ್ಕಾರು, ವಟು ಇಂದ್ರನಾಗಿ ಹಾಗೂ ಶೂದ್ರಕನಾಗಿ ಶ್ರೀಧರ ಭಟ್‌ ಕಾಸರಕೋಡು, ಪರಾವಸುವಾಗಿ ಈಶ್ವರ…

Read More

 ಉಡುಪಿ : ರಾಗ ಧನ ಸಂಸ್ಥೆಯು ದಿನಾಂಕ : 26-06-2022ರಂದು ಹಮ್ಮಿಕೊಂಡ ಗೃಹ ಸಂಗೀತ ಕಾರ್ಯಕ್ರಮ ರಾಗ ರತ್ನ ಮಾಲಿಕೆ -1 ಶ್ರೀಮತಿ ನಯನ ಮತ್ತು ಶ್ರೀ ನರಸಿಂಹ ನಾಯಕ್ ಇವರ ಆತಿಥ್ಯ ಮತ್ತು ಸಹ ಪ್ರಯೋಜತ್ವದಲ್ಲಿ ನಡೆಯಿತು. ಮಣಿಪಾಲದ ಇವರ ನಿವಾಸ “ಶ್ರೀ ನಿಕೇತನ”ದಲ್ಲಿ ಬೆಂಗಳೂರಿನ ಗಾಯಕರಾದ ಶ್ರೀ ಹರಿಹರನ್ ಎಂ.ಬಿ. ಮತ್ತು ಶ್ರೀ ಎಸ್. ಅಶೋಕ್ ಹಾಡುಗಾರಿಕೆಯಲ್ಲಿ ಶ್ರೀ ವಿಶ್ವಜಿತ್ ವಯೊಲಿನ್ ನಲ್ಲಿ, ಶ್ರೀ ಅನಿರುದ್ಧ್ ಎಸ್. ಭಟ್ ಮೃದಂಗದಲ್ಲಿ ಮೋರ್ಸಿಂಗ್ ನಲ್ಲಿ ಶ್ರೀ ಡಿ.ವಿ. ಪ್ರಸನ್ನ ಸಹಕರಿಸಿದರು. ದಿನಾಂಕ : 14-07-2023ರಂದು ರಾಗ ರತ್ನ ಮಾಲಿಕೆ -2 ಕಾರ್ಯಕ್ರಮವು ನಡೆಯಿತು. ಶ್ರೀಮತಿ ಉಷಾ ಕೆಂಬ್ಬಾರ್ ಇವರ ಆತಿಥ್ಯದಲ್ಲಿ ಮಣಿಪಾಲದ ಇವರ ನಿವಾಸ ‘ಜಲದರ್ಶಿನಿ’ಯಲ್ಲಿ ಶ್ರೀ ಮುಡಿಕೊಂಡಾನ್ ರಮೇಶ್, ಚೆನ್ನೈ – ಇವರ ವೀಣಾ ವಾದನ ಕಛೇರಿ ನಡೆಯಿತು. ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್ ಮತ್ತು ಶ್ರೀ ಶಿಸುಪಾದಕೃಷ್ಣ ಸಹಕರಿಸಿದರು. ಪೂರ್ವಭಾವಿಯಾಗಿ ‘ನಾಮ ಸಂಕೀರ್ತನೆ – ಶ್ರೀಮತಿ ಉಷಾ…

Read More

ಹವ್ಯಾಸಿ ಯಕ್ಷಗಾನ ರಂಗದಲ್ಲಿ ಎಲ್ಲಾ ರೀತಿಯ ವೇಷಗಳನ್ನು ಮಾಡುವವರ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಅದರಲ್ಲಿಯೂ ಇತ್ತಿಚಿನ ದಿನಗಳಲ್ಲಿ ಸ್ತ್ರೀ ವೇಷ ಮಾಡುವವರ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಇಂತಹ ಸಮಯದಲ್ಲಿ ಅನೇಕ ವರ್ಷಗಳಿಂದ ಅನೇಕ ಸಂಘ ಸಂಸ್ಥೆಗಳಲ್ಲಿ ಸಂಪ್ರದಾಯ ಶೈಲಿಯಲ್ಲಿಯೇ ನಾಟ್ಯ, ಅಭಿನಯ, ಮಾತು ಹೀಗೆ ಯಕ್ಷಗಾನದ ಎಲ್ಲಾ ವಿಭಾಗಗಲ್ಲಿಯೂ ಕಲಾಭಿಮಾನಿಗಳ ಮನದಲ್ಲಿ ಸಂತಸವನ್ನುಂಟು ಮಾಡಿದ ಹವ್ಯಾಸಿ ಯಕ್ಷ ಕಲಾವಿದ ಕೆ ಶಂಕರ ದೇವಾಡಿಗ. 10.05.1967ರಂದು ಉಡುಪಿ ಜಿಲ್ಲೆಯ ಸಾಲಿಗ್ರಾಮದ ಕಾರ್ಕಡದ ಗೋವಿಂದ ದೇವಾಡಿಗ ಹಾಗೂ ಪದ್ದು ದೇವಾಡಿಗ ಮಗನಾಗಿ ಜನನ. ಆರನೇ ತರಗತಿವರೆಗೆ ವಿದ್ಯಾಭ್ಯಾಸ. ಕಾರ್ಕಡದಲ್ಲಿ ಯಕ್ಷಗಾನ ತರಬೇತಿ ನಡೆಯುತಿತ್ತು, ಕುಟುಂಬದಲ್ಲಿ ಯಕ್ಷಗಾನ ಹಿನ್ನಲೆ ಇಲ್ಲದೇ ಇದ್ದರೂ ಯಕ್ಷಗಾನದ ಆಸಕ್ತಿ ತುಂಬಾ ಇತ್ತು. ಹಾಗಾಗಿ ಯಕ್ಷಗಾನ ಕಲಿಯಲು ಪ್ರಾರಂಭಿಸಿದರು. ಯಕ್ಷಗಾನದ ಪ್ರಥಮ ಗುರುಗಳು ಸುಬ್ರಾಯ ಮಲ್ಯ ಹಳ್ಳಾಡಿಯವರು. ಯಕ್ಷಗಾನ ರಂಗದ ಎಲ್ಲಾ ಪೌರಾಣಿಕ ಪ್ರಸಂಗಗಳು ಇವರ ನೆಚ್ಚಿನ ಪ್ರಸಂಗಗಳು. ಅಂಬೆ, ದ್ರೌಪದಿ, ಸುಭದ್ರೆ, ಸುರುಚಿ ನೆಚ್ಚಿನ ವೇಷಗಳು. ಯಕ್ಷಗಾನದ…

Read More

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಮಂಗಳೂರಿನ ಸಪ್ನ ಬುಕ್‌ ಹೌಸ್ ಆಶ್ರಯದಲ್ಲಿ ದಿನಾಂಕ : 02-07-2023ರಂದು ಸತೀಶ್ ಚಪ್ಪರಿಕೆ ಅವರ ‘ಘಾಂದ್ರುಕ್’ ಕಾದಂಬರಿ ಹಾಗೂ ಲೇಖಕರ ಜತೆ ಸಂವಾದ ಕಾರ್ಯಕ್ರಮವು ಕೆ. ಎಸ್. ರಾವ್ ರಸ್ತೆಯ ಸಪ್ನ ಬುಕ್‌ ಹೌಸ್‌ನಲ್ಲಿ ನಡೆಯಿತು. ‘ಘಾಂದ್ರುಕ್’ ಕಾದಂಬರಿ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಕವಿ, ಸಾಹಿತಿ ಡಾ. ವಸಂತಕುಮಾರ್ ಪೆರ್ಲ “ಲೇಖಕ ಸತೀಶ್ ಚಪ್ಪರಿಕೆ ಅವರು ‘ಘಾಂದ್ರುಕ್’ ಕನ್ನಡ ಕಾದಂಬರಿಯನ್ನು ವಿಶಿಷ್ಟ ರೀತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಪ್ರವಾಸ ಕಥನದಂತಿರುವ ಕೃತಿಯು ಓದುಗನ ಮನಗೆಲ್ಲುತ್ತದೆ. ‘ಘಾಂದ್ರುಕ್’ ಅಂದರೆ ಹಿಮಾಲಯದ ತಪ್ಪಲಿನ ಟಿಬೆಟ್‌ನಲ್ಲಿ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಒಂದು ಹಳ್ಳಿಯ ಹೆಸರು. ಹಳ್ಳಿಯೊಂದರಿಂದ ನಗರಕ್ಕೆ ಬಂದು ಐಟಿ ಕಂಪನಿಯ ಸಿಇಒ ಆಗುವ ಹಂತಕ್ಕೆ ಬೆಳೆದ ಯುವಕನಿಗೆ ಹಣ, ಬೌದ್ಧಿಕ ಸುಖಕ್ಕೆ ಒಂದು ಮಿತಿ ಇದೆ ಅನಿಸುತ್ತದೆ ಮತ್ತು ಇದರ ಆಚೆಗೂ ಒಂದು ಬದುಕಿದೆ ಎಂಬ ಒಳಅರಿವು ಮೂಡುತ್ತದೆ. ನಂತರ ಆತ ಹೊರ ಜಗತ್ತಿನ…

Read More

ಆಂಧ್ರ ಪ್ರದೇಶ: ನವದೆಹಲಿಯ ಗೋಲ್ಡನ್ ಗ್ಲೋಬ್ ಟ್ರಸ್ಟ್ ಮತ್ತು ವಿಶಾಖಪಟ್ಟಣದ ಪ್ರತಿಮಾ ಫೌಂಡೇಶನ್ ಜಂಟಿ ಸಹಯೋಗದಲ್ಲಿ ಆಗಸ್ಟ್ ತಿಂಗಳ 5 ಮತ್ತು 6ನೇ ತಾರೀಕಿನಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿ ‘ದಕ್ಷಿಣ ಭಾರತೀಯ ಭಾಷೆಗಳ ಸಮಕಾಲೀನ ಕಥನ ಸಾಹಿತ್ಯ’ದ ಕುರಿತು ನಡೆಯಲಿರುವ ಒಂದು ದಿನದ ರಾಷ್ಟ್ರಮಟ್ಟದ ವಿಚಾರಗೋಷ್ಠಿಗೆ ಯುವ ವಿಮರ್ಶಕ ಮತ್ತು ಲಲಿತ ಪ್ರಬಂಧಕಾರರಾದ ವಿಕಾಸ ಹೊಸಮನಿಯವರು ಕನ್ನಡ ಭಾಷೆಯ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ‘ಸಮಕಾಲೀನ ಕನ್ನಡ ಕಥಾ ಸಾಹಿತ್ಯ’ ಎಂಬ ವಿಷಯದ ಬಗ್ಗೆ ಪ್ರಬಂಧವನ್ನು ಮಂಡಿಸಲಿದ್ದಾರೆ. ಮೂಲತಃ ಅರ್ಥಶಾಸ್ತ್ರದ ವಿದ್ಯಾರ್ಥಿಯಾಗಿದ್ದರೂ ಆಧುನಿಕ ಕನ್ನಡ ಸಾಹಿತ್ಯ, ಭಾರತೀಯ ಸಾಹಿತ್ಯ ಮತ್ತು ಇಂಗ್ಲಿಷ್ ಸಾಹಿತ್ಯವನ್ನು ಓದಿಕೊಂಡಿರುವ ವಿಕಾಸ ಹೊಸಮನಿಯವರು ಹೊಸ ಒಳನೋಟಗಳಿಂದ ಕೂಡಿದ ಸಾಹಿತ್ಯಿಕ ಲೇಖನಗಳ ಮೂಲಕ ಕನ್ನಡ ವಿಮರ್ಶಾ ಕ್ಷೇತ್ರದಲ್ಲಿ ಭರವಸೆಯನ್ನು ಮೂಡಿಸಿದ ಯುವ ಪ್ರತಿಭೆಯಾಗಿದ್ದಾರೆ. ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ಮುಖ್ಯಸ್ಥರಾಗಿ ಮತ್ತು ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸಂಚಾಲಕರಾಗಿ, ರಾಜ್ಯಮಟ್ಟದ ಸಾಹಿತ್ಯಿಕ ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಇವರ ‘ಕನ್ನಡಿ ಮತ್ತು…

Read More

ಸುಬ್ರಹ್ಮಣ್ಯ: ಮನಸ್ಸನ್ನು ಅರಳಿಸುವ ಭಾರತೀಯ ಕಲಾ ಪ್ರಕಾರಗಳು ಎಂದೆಂದಿಗೂ ವಿದ್ಯಾರ್ಥಿಗಳಿಗೆ ಸಂತಸ ನೀಡುವುದರೊಂದಿಗೆ ಪಠ್ಯ ವಿಚಾರದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಳ್ಳಲು ಸ್ಪೂರ್ತಿ ನೀಡುತ್ತದೆ. ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತು ಅಭೂತಪೂರ್ವ ಕೊಡುಗೆ ನೀಡಿದೆ. ವಿದ್ಯಾರ್ಥಿಗಳು ತಮ್ಮ ಕಲಾಸಂಪತ್ತಿನ ಶ್ರೇಷ್ಠತೆಗೆ ತಮ್ಮದೆ ಆದ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದ ಪ್ರತಿಭಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು.ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಶನಿವಾರ ಕಾಲೇಜಿನ ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶೇಷ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಪೋಷಿಸುವ ಉದ್ದೇಶದಿಂದ ಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಭೆಯು ಸರ್ವರಿಗೂ ತಿಳಿಸುವ ಉದ್ದೇಶದಿಂದ ಸಾಂಸ್ಕೃತಿಕ ತಂಡ ರಚಿಸಲಾಗುತ್ತದೆ. ತಂಡವನ್ನು ಸಂಘದ ಸಂಚಾಲಕರ ನೇತೃತ್ವದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಸಜ್ಜುಗೊಳಿಸಲಾಗುವುದು. ಕುಕ್ಕೆ ಸೇರಿದಂತೆ ವಿವಿಧ ಊರುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಾಲೇಜಿನ ತಂಡವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು…

Read More

ಮಂಗಳೂರು: ಕುಳಾಯಿಯ ಶ್ರೀ ವಿಷ್ಣುಮೂತಿ೯ ಯಕ್ಷಗಾನ ಮಂಡಳಿಯ ಮಾಸಿಕ ಹುಣ್ಣಿಮೆ ತಾಳಮದ್ದಳೆ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮ ವನಾಗಮನ ಮತ್ತು ಪಾದುಕಾ ಪ್ರಧಾನ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 03-07-2023ನೇ ಸೋಮವಾರ ಸಂಜೆ ಕುಳಾಯಿಯ ಶ್ರೀ ವಿಷ್ಣುಮೂತಿ೯ ದೇವಸ್ಥಾನದ ಆವರಣದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತಾರಾಗಿ ಪುತ್ತಿಗೆ ರಘುರಾಮ ಹೊಳ್ಳ ಭಾಗವಹಿಸಿದ್ದು ಚಂಡೆ ಹಾಗೂ ಮದ್ದಳೆಯಲ್ಲಿ ಲಕ್ಷೀಶ ಅಮ್ಮಣ್ಣಾಯ, ಚಿತ್ರಾಪುರ ಸುಬ್ರಹ್ಮಣ್ಯ ಹಾಗೂ ಸುರೇಶ್ ಕಾಮತ್ ಭಾಗವಹಿಸಿದ್ದು ಅರ್ಥಧಾರಿಗಳಾಗಿ ಶಂಭು ಶಮ೯ ದಶರಥನಾಗಿ, ಸುಣ್ಣಂಬಂಳ ವಿಶ್ವೇಶ್ವರ ಭಟ್ ಶ್ರೀ ರಾಮನಾಗಿ, ವಾಸುದೇವ ರಂಗಾ ಭಟ್ ಭರತನಾಗಿ, ಹರೀಶ್ ಬೊಳಂತಿಮೊಗರು ಕೈಕೇಯಿಯಾಗಿ ಹಾಗೂ ವಾದಿರಾಜ ಕಲ್ಲೂರಾಯ ಲಕ್ಷಣನಾಗಿ ಭಾಗವಹಿಸಿದರು.

Read More

ಮೈಸೂರು: ಕರ್ನಾಟಕ ರಂಗಭೂಮಿಗೆ ಅಪಾರ ಕೊಡುಗೆ ನೀಡಿರುವ ಗುರು ಶ್ರೀ ಕೆ.ವಿ. ಸುಬ್ಬಣ್ಣನವರ ನೆನಪಿನಲ್ಲಿ ತಿಂಗಳಿಡೀ ನಟನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ 01-07-2023ರಂದು ನಾಡಿನ ಪ್ರಖ್ಯಾತ ರಂಗಕರ್ಮಿ ಕಲ್ಕತ್ತಾದ ಮನೀಶ್ ಮಿತ್ರ ಅವರಿಂದ ‘ಸಾವಯವ ರಂಗಭೂಮಿ’ಯ ಕುರಿತಾದ ಕಾರ್ಯಾಗಾರ ನಡೆಯಿತು. “ತಿಂಗಳಿಡೀ ನಡೆಯುವ ನಾಟಕ ಪ್ರದರ್ಶನಗಳು, ರಂಗಕಾರ್ಯಾಗಾರ, ರಾಷ್ಟ್ರೀಯ ವಿಚಾರ ಸಂಕಿರಣ, ರಂಗಚರ್ಚೆ, ರಂಗಗೀತೆಗಳು, ಸಾಕ್ಷಚಿತ್ರ ಪ್ರದರ್ಶನಗಳನ್ನು ಗುರು ಸುಬ್ಬಣ್ಣ ಅವರಿಗೆ ಅರ್ಪಿಸಲಾಗಿದೆ” ಎಂದು ನಟನ ರಂಗಶಾಲೆಯ ಪ್ರಾಂಶುಪಾಲರಾದ ಶ್ರೀ ಮೇಘಸಮೀರ ಅವರು ತಿಳಿಸಿದರು. ಮನೀಶ್ ಮಿತ್ರ ಅವರು ಭಾರತದಾದ್ಯಂತ ಹುಟ್ಟುಹಾಕಿರುವ ರಂಗಾಂದೋಲನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಪಾಲ್ಗೊಂಡ ಆಸಕ್ತ ಶಿಬಿರಾರ್ಥಿಗಳು ಅಭಿನಯದ ಹೊಸ ಹೊಸ ಮಜಲುಗಳನ್ನು ಹಾಗೂ ಸಾವಯವ ರಂಗಭೂಮಿಯ ಕುರಿತಾಗಿ ಪ್ರಾತ್ಯಕ್ಷಿಕೆಗಳ ಮೂಲಕ, ಉಸಿರಾಟದ ನಿಯಂತ್ರಣದ ಮೂಲಕ ಮತ್ತು ಮಾತಿನ ಗ್ರಹಿಕೆಗಳ ಮೂಲಕ ಮನೀಶ್ ಮಿತ್ರ ಅವರಿಂದ ಶಿಬಿರದಲ್ಲಿ ಅಭ್ಯಾಸ ಮಾಡಿ ತಿಳಿದುಕೊಂಡರು. ಇದೊಂದು ಅಪರೂಪದ ಅರ್ಥಪೂರ್ಣ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ನಟನದ ಸಂಸ್ಥಾಪಕರಾದ…

Read More

ಬ್ರಹ್ಮಾವರ: ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿನಗರ ಬೈಕಾಡಿ ಬ್ರಹ್ಮಾವರ ಇದರ ವತಿಯಿಂದ ಮಳೆಗಾಲದ ಕಾರ್ಯಕ್ರಮ ಅಂಗವಾಗಿ ಆಯೋಜಿಸಲಾದ ಜನಮನದಾಟ ರಂಗತಂಡ ಮತ್ತು ಸತ್ಯಶೋಧನ ರಂಗಸಮುದಾಯ ಹೆಗ್ಗೋಡು ಪ್ರಸ್ತುತಪಡಿಸಿದ “ರೊಟ್ಟಿಯ ಸಲುವಾಗಿ ಇಷ್ಟೆಲ್ಲ” ಎಂಬ ನಾಟಕವು ದಿನಾಂಕ 01-07-2023 ರಂದು ಬ್ರಹ್ಮವಾರದ ಎಸ್. ಎಂ. ಎಸ್ ಪ. ಪೂ. ಕಾಲೇಜಿನ ಸಭಾಂಗಣದಲ್ಲಿ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮವನ್ನು ತಮಟೆ ಬಾರಿಸುವುದರ ಮೂಲಕ ಉದ್ಘಾಟಿಸಲಾಯಿತು. ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಐತಾಳ್, ಲೇಖಕಿ ಸುಧಾ ಆಡುಕಳ, ರಾಘವೇಂದ್ರ ಶೆಟ್ಟಿ ಕರ್ಜೆ, ಬ್ರಹ್ಮಾವರದ ಎಸ್.ಎಮ್.ಎಸ್ ಪ‌.ಪೂ ಕಾಲೇಜಿನ ಪ್ರಾಂಶುಪಾಲರಾದ ಐವನ್ ಡೊನಾತ್ ಸುವಾರಿಸ್ ಉಪಸ್ಥಿತರಿದ್ದರು.

Read More