Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ದಿನಾಂಕ 23-06-2023 ರಂದು 80 ವಸಂತಗಳನ್ನು ಕಂಡ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು ಕನ್ನಡ ಕಾವ್ಯಕ್ಕೆ ಹೊಸ ನೆಲೆಯನ್ನು ನೀಡಿದವರು. ತಮ್ಮ ಎಲ್ಲಾ ಅನುಭವಗಳನ್ನು ಸೂಕ್ಷ್ಮಗಳನ್ನು ಕವಿತೆಯ ಮೂಲಕವೇ ಹೇಳಿಕೊಂಡು ಬಂದಿರುವವರು. ಹಾಗಾಗಿ ʻಇದನ್ನು ನಿಲ್ಲಿಸಿದರೆ ನನ್ನ ಮಾತೂ ನಿಂತು ಹೋದಂತೆʼ ಎನ್ನುತ್ತಲೇ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಎಚ್.ಎಸ್.ವಿ. ಅವರಿಗೆ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಅವರ ಸ್ವಗೃಹದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ಎಚ್.ಎಸ್.ವಿಯವರ ಬದುಕಿನ ಯಾನದತ್ತ ಒಮ್ಮೆ ಕಣ್ಣು ಹಾಯಿಸಿದರೆ ಅವರದ್ದು ಪ್ರತಿ ಹಂತವೂ ಹೋರಾಟವೇ. ಸ್ವಯಂ ಪರಿಶ್ರಮದಿಂದ ಎತ್ತರಕ್ಕೆ ಏರಿ, ಇನ್ನೇನು ಬದುಕು ಸಹನೀಯ ಎನ್ನುವಾಗ ಮಡದಿಯ ಅಗಲುವಿಕೆ, ಮಗನ ಅನಾರೋಗ್ಯ ಹೀಗೆ ಶೋಕದ ಸೆಲೆಗಳು ಅವರನ್ನು ಬೆನ್ನಟ್ಟಿದ್ದವು. ಅದನ್ನು ಸಹನೀಯವಾಗಿಸಿ ಬದುಕಿನ ‘ಸ್ಥಿತಿ’ಯನ್ನಾಗಿಸುವುದು ಎಚ್.ಎಸ್.ವಿ ಕಾವ್ಯದಲ್ಲಿ ಹೆಚ್ಚು ಎದ್ದು ಕಾಣುತ್ತದೆ. ‘ಚಿನ್ನಾರಿ ಮುತ್ತ’ದ ಮೂಲಕ ಮಕ್ಕಳ ಮುಗ್ಧ ಲೋಕವನ್ನು…
ವರ್ಕಾಡಿ : ಗಡಿನಾಡಿನ ಖ್ಯಾತ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆ ರಂಗ ಚಿನ್ನಾರಿ ಕಾಸರಗೋಡು (ರಿ) , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಜೂನ್ 24ರಿಂದ ಜೂನ್ 30ರವರೆಗೆ ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ ಕಾಸರಗೋಡು ಕನ್ನಡ ಹಬ್ಬ ಸಪ್ತಾಹದ ಎರಡನೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಭಕ್ತಿ, ಭಾವ, ಜನಪದಗೀತೆಗಳ ‘ಕನ್ನಡ ಡಿಂಡಿಮ’ ದಿನಾಂಕ : 25-06-2023ರಂದು ವರ್ಕಾಡಿ ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನ ಸಭಾಂಗಣದಲ್ಲಿ ಜರಗಿತು. ಕಾವಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಾಯೋಜಿಸಿದ ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಸುಭಾಷ್ ಚಂದ್ರ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವರ್ಕಾಡಿ ಚರ್ಚ್ನ ಗುರುಗಳಾದ ರೆ|ಪಾ| ಬಾಸಿಲ್ವಾಜ್ ಆಶೀರ್ವದಿಸಿ ಮಾತನಾಡುತ್ತಾ “ರಂಗ ಚಿನ್ನಾರಿ ಸಂಸ್ಥೆ ಕಳೆದೆರಡು ದಶಕಗಳಿಂದ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿದೆ. ಕರ್ನಾಟಕ ಸರಕಾರ ಉತ್ತಮವಾಗಿ ಸಹಕಾರ ನೀಡುತ್ತಿರುವುದು ಸಂತಸದ…
ಕಣಿಯೂರು : ಕನ್ಯಾನದ ಶ್ರೀ ಚಾಮುಂಡೇಶ್ವರೀ ಕ್ಷೇತ್ರ ಕಣಿಯೂರಿನಲ್ಲಿ ದಿನಾಂಕ : 25-06-2023 ಆದಿತ್ಯವಾರ ಅಪರಾಹ್ನ ಗಂಟೆ 2.30ಕ್ಕೆ ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಇವರಿಂದ ಮಾಸದ 9ನೇ ತಾಳಮದ್ದಳೆ ಕಾರ್ಯಕ್ರಮ ‘ಭೀಷ್ಮ ಪರ್ವ’ವು ಯಶಸ್ವಿಯಾಗಿ ನಡೆಯಿತು. ಹಿಮ್ಮೇಳದಲ್ಲಿ ಶ್ರೀಗಳಾದ ಸೂರ್ಯನಾರಾಯಣ ಭಟ್ ಕಣಿಯೂರು, ಡಾ. ವಿಶ್ವೇಶ್ವರ ಭಟ್ ಕನ್ಯಾನ, ಪ್ರಶಾಂತ್ ಶೆಟ್ಟಿ ವಗೆನಾಡು, ಮತ್ತು ಮಾ. ಅದ್ವೈತ್ ಕನ್ಯಾನ ಭಾಗವಹಿಸಿದರು. ಅರ್ಥಧಾರಿಗಳು ಶ್ರೀಗಳಾದ ಶ್ರೀಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀಕ್ಷೇತ್ರ ಕಣಿಯೂರು, ಪಕಳಕುಂಜ ಶ್ಯಾಂ ಭಟ್, ವೆಂಕಟಕೃಷ್ಣ ಶರ್ಮಾ ಅಳಕೆ, ಜಯರಾಮ ಭಟ್ ದೇವಸ್ಯ ಮತ್ತಿತರರು ಭಾಗವಹಿಸಿದ್ದ ಈ ಕಾರ್ಯಕ್ರಮವು ಕಲಾಸಕ್ತರನ್ನು ರಂಜಿಸಿತು.
ಮೀಯಪದವು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಗಡಿನಾಡಿನ ಖ್ಯಾತ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆ ‘ರಂಗ ಚಿನ್ನಾರಿ’ ಕಾಸರಗೋಡು (ರಿ) ಆಯೋಜಿಸಿ, ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ ಕಾಸರಗೋಡು ಕನ್ನಡ ಹಬ್ಬವು ಜೂನ್ 24 ರಿಂದ ಜೂನ್ 30ರವರೆಗೆ ನಡೆಯಲಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 24-06-2023ರಂದು ಶ್ರೀ ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ವಿದ್ಯಾಸಂಸ್ಥೆಯ ‘ನಾರಾಯಣೀಯಂ’ ವೇದಿಕೆಯಲ್ಲಿ ವಿಕಾಸ ಸಂಘಟನೆಯ ಆಶ್ರಯದಲ್ಲಿ ದೀಪ ಬೆಳಗಿಸಿ ನೆರವೇರಿಸಿದರು. ಆಶಿರ್ವದಿಸಿ ಮಾತನಾಡಿದ ಎಡನೀರು ಶ್ರೀಗಳು ‘’ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಿತ್ಯ ಕನ್ನಡ ಹಬ್ಬ ನಡೆಯಲಿ, ಜಿಲ್ಲೆಯ ಗ್ರಾಮ ಗ್ರಾಮಗಳಲ್ಲೂ ಕನ್ನಡ ಧ್ವನಿ ಮೊಳಗುವಂತಾಗಲಿ ಎಂದು ಆಶಯ ವ್ಯಕ್ತ ಪಡಿಸಿದರು. ರಂಗ ಚಿನ್ನಾರಿ ಕಾಸರಗೋಡು ಸಂಸ್ಥೆ ಹಲವು ವರ್ಷಗಳಿಂದ ಕನ್ನಡದ ಸೇವೆಯನ್ನು ನಿರಂತರ ನಡೆಸುತ್ತಾ ಬಂದಿದೆ, ಸಂಸ್ಥೆಯ ರೂವಾರಿಗಳಾದ…
ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಶಾನಭಾಗ ಇವರು ಸಂಪಾದಿಸಿದ ‘ಆನ್ವೀಕ್ಷಿಕೀ‘ ಸಮಕಾಲೀನ ಆಖ್ಯಾನಗಳು ಪುಸ್ತಕ ಲೋಕಾರ್ಪಣೆ ಹಾಗೂ ಸಂವಾದ ಕಾರ್ಯಕ್ರಮವು ದಿನಾಂಕ 28-06-2023ರ ಸಂಜೆ 06.30ಕ್ಕೆ ಮಂಗಳೂರಿನ ಪ್ರತಾಪನಗರದ ಸಂಘನಿಕೇತನದಲ್ಲಿ ನಡೆಯಲಿದೆ. ಮಂಗಳೂರು ಮಹಾನಗರದ ಮಾನ್ಯ ಸಂಘಚಾಲಕರಾದ ಡಾ.ಸತೀಶ್ ರಾವ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಪ್ರಾಧ್ಯಾಪಕರು ಮತ್ತು ಖ್ಯಾತ ಚಿಂತಕರಾದ ಡಾ. ಅಜಕ್ಕಳ ಗಿರೀಶ್ ಭಟ್ ವಕ್ತಾರರಾಗಿ ಭಾಗವಹಿಸಲಿದ್ದಾರೆ.
ಮುಂಬಯಿ : ಡೊಂಬಿವಲಿ ಪೂರ್ವದ ಮಂಜುನಾಥ ಸಭಾಗೃಹದಲ್ಲಿ ದಿನಾಂಕ :18-06-2023ರಂದು ನಡೆದ ಅನಿತಾ ಪಿ. ತಾಕೊಡೆಯವರ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ವಹಿಸಿದ ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಇಂದ್ರಾಳಿಯವರು “ನಮ್ಮ ಮುಖ್ಯ ಉದ್ದೇಶವೇ ಕನ್ನಡವನ್ನು ಉಳಿಸಿ ಬೆಳೆಸುವುದು. ಕನ್ನಡವು ನಿಂತ ನೀರಾಗಬಾರದು ಅದು ನದಿಯಂತೆ ಹರಿಯುತ್ತಿರಬೇಕು. ಇದರ ಸಲುವಾಗಿ ಕನ್ನಡ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಘದ ಮುಖಾಂತರ ಸಹಕರಿಸುತ್ತಿದ್ದೇವೆ. ಇಂದಿನ ಕಾರ್ಯಕ್ರಮಕ್ಕೆ ಕನ್ನಡದ ಅಭಿಮಾನಿಗಳ ಬಳಗವೇ ಬಂದಿದೆ. ರಾಜಕಾರಣಿಗಳ ಹಿಂದೆ ಜನ ಹೋಗುವುದನ್ನು ನೋಡಿದ್ದೇನೆ. ಕವಿಗಳಿಗೆ ಇಷ್ಟು ದೊಡ್ಡ ಅಭಿಮಾನಿ ಬಳಗವಿದೆಯೆಂದು ಇವತ್ತೇ ಗೊತ್ತಾಗಿದ್ದು. ಅನಿತಾ ತಾಕೊಡೆಯವರು ನಮ್ಮ ಡೊಂಬಿವಲಿಯ ಹೆಮ್ಮೆ. ಸಣ್ಣ ವಯಸ್ಸಿನಲ್ಲಿಯೇ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರ ಸಾಹಿತ್ಯ ಕೈಂಕರ್ಯಕ್ಕೆ ಕರ್ನಾಟಕ ಸಂಘದ ಬೆಂಬಲ ಯಾವತ್ತಿಗೂ ಇದೆ” ಎನ್ನುತ್ತ ಸಂಘದ ಕಾರ್ಯಚಟುವಟಿಕೆಗಳಲ್ಲಿ ಸಹಕಾರ ನೀಡುತ್ತ ಬಂದವರನ್ನು ಸ್ಮರಿಸಿದರು. ಸಂಘದ ಕಾರ್ಯಾಧ್ಯಕ್ಷರಾದ ಸುಕುಮಾರ್ ಶೆಟ್ಟಿಯವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ,…
ಕಾರ್ಕಳ : ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ದಿನಾಂಕ : 18-06-2023ರಂದು ನಡೆದ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ ಶ್ರೀ ಜಯಕೀರ್ತಿ ಹೆಚ್. ಇವರು ರಚಿಸಿರುವ ‘ಮುಕ್ತ ಜಿನದತ್ತ’ ಕಾದಂಬರಿಯನ್ನು ಬಿಡುಗಡೆಗೊಳಿಸಲಾಯಿತು. ‘ಮುಕ್ತ ಜಿನದತ್ತ’ ಹೊಂಬುಜ ಕ್ಷೇತ್ರದ ಐತಿಹಾಸಿಕ ಕಾದಂಬರಿಯಾಗಿದ್ದು, ಇದನ್ನು ಹೊಂಬುಜ ಕ್ಷೇತ್ರದ ಮಠಾದೀಶರಾದ ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಮೊದಲೇ ಸಾಂಕೇತಿಕವಾಗಿ ಬಿಡುಗಡೆ ಮಾಡಿದ್ದು, ಜೈನ್ ಮಿಲನ್ ಮಾಸಿಕ ಸಭೆಯ ಕಾರ್ಯಕ್ರಮದಲ್ಲಿ ಮಾನ್ಯ ಜೈನ ವಿದ್ವಾಂಸರೂ, ಕವಿ ರತ್ನಾಕರ ವರ್ಣಿ ಪ್ರಶಸ್ತಿ ವಿಜೇತರೂ ಆದ ನಿವೃತ್ತ ಮುಖ್ಯ ಶಿಕ್ಷಕ ಶ್ರೀಯುತ ಮುನಿರಾಜ ರೆಂಜಾಳ ಇವರಿಂದ ಲೋಕಾರ್ಪಣೆಗೊಂಡಿತು. ಶ್ರೀಯುತ ರೆಂಜಾಳರು ಮಾತನಾಡುತ್ತಾ “ಮುಕ್ತ ಜಿನದತ್ತ ಕಾದಂಬರಿಯು ಇಂದಿನ ದಿನಗಳಲ್ಲಿ ಹೊಂಬುಜ ಕ್ಷೇತ್ರದ ಬಗೆಗಿನ ಪೂರ್ಣ ಇತಿಹಾಸವನ್ನು ಜನರಿಗೆ ತಲುಪಿಸಲು ಬಹಳ ಅನುಕೂಲವಾಗಲಿದೆ. ಹಿಂದೆ ಪದ್ಮನಾಭ ಕವಿ ವಿರಚಿತ ಜಿನದತ್ತರಾಯ ಚರಿತ್ರೆಯು ಕಾವ್ಯ ರೂಪದಲ್ಲಿದ್ದು ಓದುಗರಿಗೆ ಕಷ್ಟವಾಗಿತ್ತು. ಆದರೆ ಈ ‘ಮುಕ್ತ ಜಿನದತ್ತ’ ಕಾದಂಬರಿಯು ಇಂದಿನ…
ಮುಡಿಪು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂಬಲಪಾಡಿ ವ್ಯಾಸ ಬಲ್ಲಾಳ ಜಾನಕಿ ದತ್ತಿನಿಧಿ ಉಪನ್ಯಾಸವನ್ನು ಜೂನ್ 28ರಂದು ಅಪರಾಹ್ನ 2.30 ಕ್ಕೆ ಕೊಣಾಜೆ ವಿವಿಯ ವಿಜ್ಞಾನ ಸಂಕೀರ್ಣದಲ್ಲಿರುವ ಯು.ಆರ್ ರಾವ್ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ಸೇಡಿಯಾಪು ಕೃಷ್ಣ ಭಟ್ಟರ ಬದುಕು ಮತ್ತು ಸಾಹಿತ್ಯದ ಕುರಿತು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಡಾ.ಯು ಮಹೇಶ್ವರಿ ಉಪನ್ಯಾಸ ನೀಡಲಿದ್ದಾರೆ. ಗಾಯಕಿ ಶ್ರೀದೇವಿ ಕಲ್ಲಡ್ಕ ಸೇಡಿಯಾಪು ಕವಿತೆಗಳನ್ನು ಹಾಡಲಿದ್ದಾರೆ. ವಿವಿ ಕನ್ನಡ ವಿಭಾಗದ ಅಧ್ಯಕ್ಷ ಡಾ.ಸೋಮಣ್ಣ ಹೊಂಗಳ್ಳಿ, ಉಳ್ಳಾಲ ಕಸಾಪ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ಯಕ್ಷಗಾನ ಭಾಗವತರಾಗಿ ಹಲವು ಯಕ್ಷಗಾನ ಸಂಘ ಮತ್ತು ಉಡುಪಿ ಯಕ್ಷಶಿಕ್ಷಣ ಟ್ರಸ್ಟಿನಲ್ಲಿ ಗುರುಗಳಾಗಿ ಸಾವಿರಾರು ಕಲಾವಿದರನ್ನು ಸಿದ್ಧಪಡಿಸಿದ ಯಕ್ಷವಾರಿಧಿ, 77ವರ್ಷದ ತೋನ್ಸೆ ಜಯಂತ ಕುಮಾರ್ 26-06-2023ರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಯ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದ ತೋನ್ಸೆಯವರಿಗೆ ಯಕ್ಷಗಾನ ಪ್ರವೃತ್ತಿಯಾಗಿತ್ತು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಬಡಗು ತಿಟ್ಟಿನಲ್ಲಿ ಯಕ್ಷಗಾನ ಸವ್ಯಸಾಚಿ ಎಂದೇ ಖ್ಯಾತಿಗಳಿಸಿದ್ದ ಅವರಿಗೆ ಅದೇ ಹೆಸರಿನ ಅಭಿನಂದನಾ ಗ್ರಂಥ ಸಮರ್ಪಣೆಯಾಗಿದೆ. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟ್ರಸ್ಟಿನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾದ ಇವರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಮತ್ತು ಯಕ್ಷಾಂಗಣ ಮಂಗಳೂರು ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿ-ಗೌರವಗಳು ಲಭಿಸಿವೆ. ಇತ್ತೀಚೆಗೆ ಅನಾರೋಗ್ಯದಿಂದ ಮನೆಯಲ್ಲೇ…
ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು ಇದರ ಮಂಗಳೂರು ವಲಯ ಸದಸ್ಯರ ಸಮಾವೇಶವು ದಿನಾಂಕ 29-06-2023ರಂದು ಕದ್ರಿಯ ಶ್ರೀಕೃಷ್ಣ ಕಲ್ಯಾಣ ಮಂದಿರದಲ್ಲಿ ನಡೆಯಲಿರುವುದು. ಸಮಾವೇಶದಲ್ಲಿ ಮೊದಲಿಗೆ ಕದ್ರಿ ಕಂಬಳದ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಾಗೂ ಕಾವೂರು ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ ಇವರಿಂದ ‘ದಾಸ ಸಂಕೀರ್ತನೆ’ ನಡೆಯಲಿರುವುದು. ಬಳಿಕ ‘ಹರಿಕಥಾ ರಂಗ-ನಿರೀಕ್ಷೆಗಳು ಹಾಗೂ ಸವಾಲುಗಳು’ ಎಂಬ ವಿಷಯದಲ್ಲಿ ಸಂವಾದ ಗೋಷ್ಠಿ ನಡೆಯಲ್ಲಿದ್ದು, ಹರಿದಾಸರು ಹಾಗೂ ವಕೀಲರಾದ ಶ್ರೀ ಮಹಾಬಲ ಶೆಟ್ಟಿ ಕೂಡ್ಲು ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪರಿಷತ್ತಿನ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ. ಶ್ರೀ ಹರಿಕೃಷ್ಣ ಪುನರೂರು ಇವರು ನೆರವೇರಿಸಲಿದ್ದಾರೆ. ಸಂವಾದ ಗೋಷ್ಠಿಯಲ್ಲಿ ಸಂಪನ್ಮೂಲ ಮಹನೀಯರಾದ ಬಹುಶ್ರುತ ವಿದ್ವಾಂಸರು ಹಾಗೂ ವಿಮರ್ಶಕರಾದ ಡಾ. ಎಂ. ಪ್ರಭಾಕರ ಜೋಶಿ, ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ನಿರ್ದೇಶಕರಾದ ಡಾ. ಧನಂಜಯ್ ಕುಂಬ್ಳೆ, ನಿವೃತ್ತ ಪ್ರಾಂಶುಪಾಲರು ಹಾಗೂ ಯಕ್ಷಗಾನ ಅರ್ಥಧಾರಿಯಾದ ಶ್ರೀ ಸರ್ಪಂಗಳ ಈಶ್ವರ ಭಟ್, ಅರ್ಥಧಾರಿಗಳು ಹಾಗೂ ವಿಮರ್ಶಕರಾದ ಶ್ರೀ…