Subscribe to Updates
Get the latest creative news from FooBar about art, design and business.
Author: roovari
ಮೂಡುಬಿದಿರೆ : ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಿದ ‘ಚಾರುವಸಂತ’ ನಾಟಕವನ್ನು ದಿನಾಂಕ 29-10-2023ರಂದು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದ ಕೃತಿಕಾರ ಡಾ. ಹಂ.ಪ. ನಾಗರಾಜಯ್ಯ (ಹಂಪನಾ) ಅವರು ಮಾತನಾಡುತ್ತಾ “ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ಚಾರುವಸಂತ. ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ ಯುವಕನಾಗಲು ಬಯಸುತ್ತೇನೆ. ಭಾರತೀಯ ಕುಟುಂಬಗಳಲ್ಲಿ ಮಾತ್ರವಲ್ಲ, ಎಲ್ಲಾ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ ಇರುತ್ತದೆ. ಏಳು ಬೀಳುಗಳ ಜೀವನದ ಕಥನವೇ ಚಾರುವಸಂತ. ಎಲ್ಲಾ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ ಬಿಡಬೇಕು. ಮೋಹನ ಆಳ್ವ ಅವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯಾದರೂ ಕೃತಿಯಾಗುತ್ತದೆ” ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, “ಕೃತಿಗಳು ಹೆಚ್ಚು ಮಾತನಾಡಬೇಕು. ಪರಿಸರ ರಕ್ಷಣೆಯ ಮಹತ್ವ ಮತ್ತು ಸುಖ-ದುಖವನ್ನು ಸಮಾನವಾಗಿ ಸ್ವೀಕರಿಸಿ…
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2023ನೇ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಬೆಂಗಳೂರಿನ ಡಾ. ಲಕ್ಷ್ಮಣ ವಿ.ಎ. ಅವರ ‘ಕಾಯಿನ್ ಬೂತ್’ ಎಂಬ ಕವನ ಸಂಕಲನದ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಐವತ್ತ ಒಂಬತ್ತು ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಡಾ. ರಾಜಶೇಖರ ಹಳೆಮನೆ, ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಮತ್ತು ಡಾ. ಚಿದಾನಂದ ಸಾಲಿ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಯನ್ನು ನಿರ್ಣಯಿಸಲಾಗಿದೆ. 1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು 2024ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯಲಿದ್ದು, ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು…
ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪದವಿ ಇಂಗ್ಲಿಷ್ ವಿಭಾಗವು ಹಮ್ಮಿಕೊಂಡ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ ಕಾರ್ಯಕ್ರಮವು ದಿನಾಂಕ 27-10-2023ರ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಧವಲಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಪದ್ಮಜಾ ಶೆಟ್ಟಿ “ಮಹಿಳೆ ಸೋತರೂ ಸಲಹುತ್ತಾಳೆ. ಶಕ್ತಿಯಾಗಿ ನಿಲ್ಲುತ್ತಾಳೆ. ಹೆನ್ರಿಕ್ ಹಿಪ್ಸನ್ ಬರೆದ ‘ಎ ಡಾಲ್ಸ್ ಹೌಸ್’ ಎಂಬ ಪುಸ್ತಕವು ಮಹಿಳೆಯ ಶಕ್ತಿ ಮತ್ತು ಸಾಮರ್ಥ್ಯವನ್ನು ತಿಳಿಸುತ್ತದೆ. ಮಹಿಳೆಯರು ಬದುಕಿನುದ್ದಕ್ಕೂ ಹೋರಾಡುತ್ತಾರೆ. ಯಾರಿಲ್ಲದಿದ್ದರೂ ಮತ್ತು ಎಲ್ಲರೂ ಇದ್ದರೂ ಧೈರ್ಯದಿಂದ ಮುನ್ನುಗ್ಗಬೇಕು ಎಂಬ ಆಶಯವನ್ನು ಕತೆ ಬಿಂಬಿಸುತ್ತದೆ. ಸ್ತ್ರೀಯರಿಗೆ ಜೀವನದ ಹಾದಿಯಲ್ಲಿ ಆತ್ಮವಿಶ್ವಾಸ ಮುಖ್ಯ. ಅದುವೇ ಅವರನ್ನು ಗೆಲ್ಲಿಸುತ್ತದೆ” ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ “ಬೇರೆ ಬೇರೆ ವಿಷಯಗಳನ್ನು ಕಲಿಯುವ ಮನಸ್ಸಿರಬೇಕು. ಅಂತಹ ಆಲೋಚನೆ ಪ್ರತಿಯೊಬ್ಬರಲ್ಲೂ ಬರಬೇಕು. ಸಾಹಿತ್ಯವು ವಿಶ್ಲೇಷಣೆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ನೀಡುತ್ತದೆ. ಏಕದೃಷ್ಟಿಯ ಅಭಿವೃದ್ಧಿಯಿಂದ ಮಾತ್ರ ಬೆಳವಣಿಗೆ ಸಾಧ್ಯವಿಲ್ಲ. ವೈವಿಧ್ಯಮಯ ದೃಷ್ಟಿಕೋನ ಅವಶ್ಯ” ಎಂದರು. ಕಾಲೇಜು…
ಬೆಂಗಳೂರು : ಬೆಂಗಳೂರಿನ ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯ ಮತ್ತು ಮೋಹನ ತರಂಗಿಣಿ ಸಂಗೀತ ಸಭಾ ಪ್ರಸ್ತುತ ಪಡಿಸುವ ‘76ನೇ ವಾರ್ಷಿಕ ಸಾಂಸ್ಕೃತಿಕ ಸಂಗೀತ ನೃತ್ಯ ಮಹೋತ್ಸವ’ವು ದಿನಾಂಕ 04-11-2023ರಂದು ನಾದಬ್ರಹ್ಮ ಶಾರದ ಮಂದಿರ ವಿದ್ಯಾಲಯದಲ್ಲಿ ಉದ್ಘಾಟನೆಗೊಳ್ಳಲಿದೆ. ದಿನಾಂಕ 04-11-2023 ಶನಿವಾರದಿಂದ ದಿನಾಂಕ 04-05-2024 ಶನಿವಾರದವರೆಗೆ ಕರ್ನಾಟಕ ಸಂಗೀತ ತ್ರಿಮೂರ್ತಿಗಳ ಹಾಗೂ ಕನಕ ಪುರಂದರ ಸಂಗೀತೋತ್ಸವದ ಅಂಗವಾಗಿ ನಡೆಸುವ 76 ಕಾರ್ಯಕ್ರಮಗಳು. ಈ ಕಾರ್ಯಕ್ರಮವು ಮೋಹನ ತರಂಗಿಣಿ ಸಂಗೀತ ಸಭಾದ ಕಾರ್ಯದರ್ಶಿ ಶ್ರೀಮತಿ ಮರಿಯಮ್ಮ (ಲಕ್ಷ್ಮೀದೇವಿ) ಮೋಹನ ಕುಮಾರ ಮತ್ತು ಕರ್ನಾಟಕ ಕಾಂಪೋಸ್ಟ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಇದರ ಮಾಜಿ ಉಪಾಧ್ಯಕ್ಷರಾದ ಶ್ರೀ ಎಂ. ವೆಂಕಟೇಶ್ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ‘ಮಂಜುದಾಸ ರಾಜ್ಯ ಪ್ರಶಸ್ತಿ ಪುರಸ್ಕಾರ’ವನ್ನು ಸಾಹಿತ್ಯ ಕ್ಷೇತ್ರದಲ್ಲಿ ಶ್ರೀ ಸುಬ್ಬು ಹೊಲಿಯರ್, ಸಮಾಜಸೇವೆಗೆ ಶ್ರೀ ಜಿ. ಮಾದೇಶ್ ಬೆಂಗಳೂರು, ಹಿಂದೂಸ್ಥಾನಿ ಸಂಗೀತಕ್ಕೆ ಪಂಡಿತ್ ಶ್ರೀ ರಾಮಪ್ಪ ಪಕೀರಪ್ಪ ಭಜಂತ್ರಿ ಮತ್ತು ಶಹನಾಯಿ ವಾದನಕ್ಕೆ ಆನವಟ್ಟಿ ತಿಮ್ಮಾಪುರ…
ಮೈಸೂರು : ನಟ ಪ್ರಕಾಶ್ ರಾಜ್ ಇವರ ‘ನಿರ್ದಿಗಂತ’ ಪ್ರಸ್ತುತ ಪಡಿಸುವ ಶರಣ್ಯ ರಾಮಪ್ರಕಾಶ್ ನಿರ್ದೇಶನದ ‘ಪ್ರಾಜೆಕ್ಟ್ ಡಾರ್ಲಿಂಗ್’ ನಾಟಕದ ಪ್ರಥಮ ಪ್ರದರ್ಶನವು ದಿನಾಂಕ 05-11-2023ರಂದು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 7259537777 ಮತ್ತು 9945281772. ನಾಟಕದ ಬಗ್ಗೆ : ಪ್ರಾಜೆಕ್ಟ್ ಡಾರ್ಲಿಂಗ್ ಒಂದು ಪ್ರಾಯೋಗಿಕ ನಾಟಕ. ರಂಗಭೂಮಿಯನ್ನು ಕಟ್ಟಿದ ಕಲಾವಿದೆಯರು ಯಾರು? ಯಾರ ಹೆಗಲ ಮೇಲೆ ನಮ್ಮ ರಂಗಭೂಮಿಯು ನಿಂತಿದೆ ? ಎಂದು ತಮ್ಮ ಹಿಂದಿನ ತಲೆಮಾರಿನ ಹುಡುಕಾಟದಲ್ಲಿರುವ ಕಲಾವಿದರ ನಡೆದಾಡನ್ನು ಈ ನಾಟಕ ಕಟ್ಟಿಕೊಡುತ್ತದೆ. ನಟರು ತಮ್ಮ ಈ ಹುಡುಕಾಟದಲ್ಲಿ, ಖಾನಾವಳಿ ಚೆನ್ನಿ ಎಂಬ ಅದ್ಭುತ ಪಾತ್ರದೊಂದಿಗೆ ಮುಖಾಮುಖಿಯಾಗುತ್ತಾರೆ. ತನ್ನ ಆಶುತ್ವದ ಮಾತು, ಲೈಂಗಿಕ ವ್ಯಂಗೋಕ್ತಿ, ಡಬಲ್ ಮೀನಿಂಗ್ ಕಾಮಿಡಿಯಿಂದ ಜನಪ್ರಿಯವಾಗಿ ಇಡೀ ರಂಗವನ್ನು ಆಳಿ ಬಾಳಿದ ಚೆನ್ನಿ ಪಾತ್ರದ ಕಥೆಗಳನ್ನು ಕೇಳಿ, ಈ ಚೆನ್ನಿ ಪಾತ್ರದ ನಟಿಯನ್ನು ಭೇಟಿಯಾಗಲೇಬೇಕೆಂಬ ಆಸೆಯಿಂದ ಅವಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಾರೆ. ಈ ಹುಡುಕಾಟದಲ್ಲಿ, ತಮ್ಮ ಬದುಕು ಮತ್ತು…
ಉಡುಪಿ : ಭಾವನಾ ಫೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಉಡುಪಿಯ ಸ್ಟುಡಿಯೋ ನೆರಳು ಹಾಗೂ ಎಬಿಸಿಡಿ ಡಿಸೈನ್ ಫಂಡಮೆಂಟಲ್ಸ್ ಸಹಯೋಗದಲ್ಲಿ ಆಯೋಜಿಸಿದ ‘ಜನಪದ’ ದೇಶೀಯ ಸರಣಿ ಕಲಾ ಕಾರ್ಯಾಗಾರದ ಎಂಟನೇ ಆವೃತ್ತಿಯು ದಿನಾಂಕ 02-11-2023ರ ಗುರುವಾರದಂದು ಬಡಗುಪೇಟೆಯ 10.03.28 ಗ್ಯಾಲರಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಟುಡಿಯೋ ‘ನೆರಳು’ ಇದರ ಆರ್ಕಿಟೆಕ್ಟ್ ಸಂಪ್ರೀತ್ ರಾವ್ “ ಭಾರತೀಯ ಕಲಾ ಪ್ರಕಾರಗಳೆಲ್ಲ ಬಹಳ ವಿಶಿಷ್ಟತೆಯಿಂದ ಕೂಡಿದುದು. ಇವುಗಳ ಹಿಂದಿರುವ ಜ್ಞಾನವನ್ನು ಈ ತೆರನಾದ ಕಾರ್ಯಾಗಾರಗಳ ಮುಖೇನ ಉಡುಪಿಯ ಪರಿಸರದಲ್ಲಿ ನಡೆಸಿಕೊಡುತ್ತಿರುವ ಭಾವನಾ ಪೌಂಡೇಶನ್ನ ಕಾರ್ಯ ಶ್ಲಾಘನೀಯ “ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಗಳಾದ ಉಡುಪಿಯ ಚಿತ್ರಕಲಾ ಮಂದಿರ ಕಲಾಶಾಲೆಯ ನಿರ್ದೇಶಕರಾದ ಡಾ. ನಿರಂಜನ್ ಯು.ಸಿ ಇವರು “ಶಾಲಾ ಮಕ್ಕಳಿಗೆ ದೇಸೀಯ ಕಲಾಪ್ರಕಾರಗಳನ್ನು ಕಲಿಯಲು ಇದೊಂದು ಉತ್ತಮ ಅವಕಾಶ. ನಾನೂ ಕೂಡ ಈ ಹಿಂದಿನ ಸರಣಿ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಕಲಾ ಪರಂಪರೆಯ ಹಿಂದಿರುವ ಜ್ಞಾನವನ್ನು ಅರಿತುಕೊಂಡೆ. ಇವೆಲ್ಲ ಒಂದಕ್ಕಿಂತ ಒಂದು ಭಿನ್ನವಾದುದು,…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ಕನ್ನಡದ ಹಿರಿಯ ಸಾಹಿತಿಗಳಾದ ಶಿರಸಿಯ ಸುಬ್ರಾಯ ಮತ್ತಿಹಳ್ಳಿ (ವಿಮರ್ಶನ ಸಾಹಿತ್ಯ), ಉಡುಪಿಯ ಅಂಶುಮಾಲಿ (ಬಹುಭಾಷಾ ಸಾಹಿತ್ಯ), ಕೋಟಾದ ನೀಲಾವರ ಸುರೇಂದ್ರ ಅಡಿಗ (ಸಮಗ್ರ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ದಿನಾಂಕ 01-11-2023ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2003’ವನ್ನು ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ ಇದರ ಮುಖ್ಯಸ್ಥರಾದ ಪ್ರೊ. ವರದೇಶ್ ಹಿರೇಗಂಗೆ ಅವರು ಪ್ರದಾನ ಮಾಡಿ ಮಾತನಾಡುತ್ತಾ “ನಾನು ಇಂಗ್ಲಿಷ್ ವಿರೋಧಿಯಲ್ಲ, ಆದರೆ ಎಲ್ಲ ಭಾಷೆಗಳನ್ನು ಇಂಗ್ಲಿಷ್ ನುಂಗಿ ನೀರು ಕುಡಿಯಬಾರದು. ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿಯಾದ ಡಾ.…
ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು, ಮಂಗಳೂರು ಹವ್ಯಕ ಸಭಾ, ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಸಹಯೋಗದಲ್ಲಿ ಶ್ರೀ ಭಾರತೀ ಕಾಲೇಜಿನ ಶಂಕರಶ್ರೀ ಸಭಾಭವನದಲ್ಲಿ ರಾಜ್ಯೋತ್ಸವ ರಸಸಂಜೆ ಕಾರ್ಯಕ್ರಮ ದಿನಾಂಕ 01-11-2023ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದ ವೈ.ವಿ. ಗುಂಡೂರಾವ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ “ಆಂಗ್ಲರಿಗೆ ವರ್ಷದಲ್ಲಿ ಎರಡು ತಿಂಗಳು ‘ವರಿ ‘ ಜನವರಿ ಫೆಬ್ರವರಿ, ಉತ್ತರ ಕರ್ನಾಟಕದವರಿಗೆ ಗಂಟೆ ಗಂಟೆಗೆ ‘ವರಿ’ ಆರೂವರಿ ಏಳೂವರಿ, ಬ್ಯಾಂಕ್ ನವರಿಗೆ ರಿಕ’ವರಿ’ ಹೀಗೆ ಎಲ್ಲರಿಗೂ ವರಿ ಇದೆ, ಎಲ್ಲರ ವರಿಯನ್ನೂ ಪರಿಹರಿಸುವವಳು ನಮ್ಮ ಕನ್ನಡ ತಾಯಿ ಭುವನೇಶ್ವರಿ” ಎಂದು ವಿವರಿಸಿದರು. ಕಬಾಲಿಡ ಎಂದರೆ ಕನ್ನಡ (ಕರ್ನಾಟಕ ಬ್ಯಾಂಕ್ ಲಿ. ಡ -ಕನ್ನಡ) ಹಾಸ್ಯಗಳ ಪ್ರಸ್ತುತಿಯ ಮೂಲಕ, ಸಭಾಂಗಣದಲ್ಲಿ ತುಂಬಿದ್ದ ಕನ್ನಡ ಮನಸ್ಸುಗಳನ್ನು ನಗೆಗಡಲಲ್ಲಿ ತೇಲಿಸುವುದರೊಂದಿಗೆ ಹೆಚ್. ಡುಂಡಿರಾಜ್ ಅವರು ಸೈಬರ್ ಅಪರಾಧದ…
ಮಂಗಳೂರು : ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 29-10-2023ರಂದು ಆಯೋಜಿಸಿದ್ದ ‘ಕಥಾಬಿಂದು ಸಾಹಿತ್ಯೋತ್ಸವ’ವನ್ನು ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯಾಧಿಕಾರಿ ಶ್ರೀಧರ್ ಇವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಓದು ಜ್ಞಾನ ಸಂಪಾದನೆಗೆ ಮೂಲ. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಮಕ್ಕಳು ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದಾರೆ. ಅದರಿಂದ ದೂರಸರಿಸಿ, ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಅವರನ್ನು ಒತ್ತಾಯಿಸಬೇಕು. ಇಂದು ಪುಸ್ತಕ ಓದುವವರ ಸಂಖ್ಯೆಯೇ ಕಡಿಮೆಯಾಗಿದೆ. ಹಾಗಾಗಿ ಪುಸ್ತಕಗಳನ್ನು ಮುದ್ರಿಸಿ ಮಾರಾಟ ಮಾಡುವುದು ಸುಲಭದ ಕೆಲಸವಲ್ಲ”” ಎಂದು ಹೇಳಿದರು. ಲೇಖಕಿ ವೀಣಾ ಕಾರಂತ್ ಮಾತನಾಡಿ, “ಕಥಾಬಿಂದು ಸಂಚಾಲಕ ಪ್ರದೀಪ್ ಅವರ ಸಹಕಾರ, ಪ್ರೋತ್ಸಾಹದಿಂದ 10 ಕೃತಿಗಳ ಬಿಡುಗಡೆಯಾಗಿರುವುದು ಸಂತೋಷದ ವಿಚಾರ. ಒಂದೇ ಬಾರಿ 50 ಕೃತಿಗಳನ್ನು ಬಿಡುಗಡೆಗೊಳಿಸುವುದು ಸುಲಭದ ಕೆಲಸವಲ್ಲ” ಎಂದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ, “ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಹೆಚ್ಚು ಕನ್ನಡ…
ಬಳ್ಳಾರಿ : ಅರಿವು ಟ್ರಸ್ಟ್ ಸಾಹಿತ್ಯ ಬಳಗದಿಂದ “ಸಂಗಂ ಸಾಹಿತ್ಯ ಪುರಸ್ಕಾರ-2023”ಕ್ಕೆ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 2021, 2022 ಮತ್ತು 2023ನೇ ಸಾಲಿನಲ್ಲಿ ಪ್ರಥಮ ಮುದ್ರಣ ಕಂಡ ಕನ್ನಡ ಕಥಾ ಸಂಕಲನಗಳನ್ನು ಮಾತ್ರ ಆಯ್ಕೆಗೆ ಕಳುಹಿಸಬಹುದು. ಪ್ರಶಸ್ತಿಯು ರೂ.25,000/- ನಗದು ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ಆಸಕ್ತ ಬರಹಗಾರರು, ಪ್ರಕಾಶಕರು ತಮ್ಮ ನೆಚ್ಚಿನ ಕೃತಿಗಳ 4 ಪ್ರತಿಗಳನ್ನು ಸ್ಪರ್ಧೆಗೆ ಕಳುಹಿಸಲು ಕೋರಿದೆ. ನಿಯಮಗಳು : • ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತಪ್ರತಿಗಳಿಗೆ, ಅನುವಾದಿತ ಹಾಗೂ ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. • ಈ ಮೇಲ್ಕಂಡ ವರ್ಷಗಳಲ್ಲಿ ಪ್ರಕಟಗೊಂಡ ಕಥಾ ಸಂಕಲನಗಳು 22-11-2023ರೊಳಗಾಗಿ ನಮಗೆ ತಲುಪುವಂತೆ ಕಳುಹಿಸಬೇಕು. • ಸಾಹಿತ್ಯ ಪುರಸ್ಕಾರ ಆಯ್ಕೆ ಪ್ರಕ್ರಿಯೆಯ ಕುರಿತು ಸಂಗಂ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. • ಪುಸ್ತಕಗಳನ್ನು ಈ ಕೆಳಕಂಡ ವಿಳಾಸಕ್ಕೆ ರಿಜಿಸ್ಟರ್ ಅಂಚೆಯ ಮೂಲಕ ಕಳುಹಿಸಿಕೊಡತಕ್ಕದ್ದು. • ನಿಗದಿತ ದಿನಾಂಕದೊಳಗೆ ಕಳುಹಿಸಲು ಕೋರಿದೆ. ಅವಧಿಯ ನಂತರ ಬಂದ ಕೃತಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :…