Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ ಆಯೋಜಿಸಿದ್ದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ದಿನಾಂಕ 07-07-2024ರಂದು ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದವನ್ನು ನೀಡಿದರೆ, ತಾಳಮದ್ದಳೆಯು ಬುದ್ದಿಗೆ ಗ್ರಾಸವನ್ನು ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ-ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ. ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ಹಿಂದಿನಿಂದಲೂ ತಾಳಮದ್ದಳೆಯು ಆರಾಧನೆಯ ರೂಪದಲ್ಲಿ ನಡೆಯುತ್ತದೆ.” ಎಂದರು. ಈ ಸಂದರ್ಭದಲ್ಲಿ ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ…
ಪುತ್ತೂರು : ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮವು ದಿನಾಂಕ 10 -07-2024 ರಂದು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕಲಾವಿದ ಹಾಗೂ ಲೇಖಕರಾದ ನಾ. ಕಾರಂತ ಪೆರಾಜೆ ಮಾತನಾಡಿ “ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ಎಲ್ಲೂ ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮಾಡಬೇಕಾದ ಕಾಯಕವಾಗಿದೆ. ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕ ಕಳೆದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು. ಯಕ್ಷಗಾನ ಹಿಮ್ಮೇಳದ ಕಲಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ ಹಾಗೂ ವೇಷಧಾರಿಯಾದ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ದೀಪಪ್ರಜ್ವಲಿಸುವ ಮೂಲಕ…
ಪುತ್ತೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೇತ್ರಾವತಿ ತುಳುಕೂಟ ರಾಮಕುಂಜ (ರಿ.) ಸಹಯೋಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇವರ ಆಶ್ರಯದಲ್ಲಿ ಕಡಬ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ತುಳು ಭಾಷೆ – ಸಂಸ್ಕೃತಿ ಕಾರ್ಯಾಗಾರ’ವನ್ನು ದಿನಾಂಕ 13-07-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಪುತ್ತೂರಿನ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ್ ಗಟ್ಟಿಯವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ತುಳುಕೂಟ ರಾಮಕುಂಜದ ಅಧ್ಯಕ್ಷರಾದ ಶ್ರೀ ಕೆ. ಸೇಸಪ್ಪ ರೈ ಇವರು ಉದ್ಘಾಟನೆ ಮಾಡಲಿದ್ದಾರೆ. ತುಳುಕೂಟ ಕಡಬದ ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಸಾಯಿರಾಂ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಗೋಷ್ಠಿ 1ರಲ್ಲಿ ‘ತುಳು ಬಾಸೆದ ಸಾಹಿತ್ಯೊಲು’ ಎಂಬ ವಿಷಯದ ಬಗ್ಗೆ ತುಳು ಉಪನ್ಯಾಸಕರಾದ ಶ್ರೀಮತಿ ಪ್ರಶಾಂತಿ ಶೆಟ್ಟಿ, ಗೋಷ್ಠಿ 2ರಲ್ಲಿ ‘ತುಳುನಾಡ ಗೊಬ್ಬುಲು’ ಎಂಬ ವಿಷಯದ ಬಗ್ಗೆ ತುಳು ಸಾಹಿತಿ ಶ್ರೀ ಚಂದ್ರಹಾಸ…
ಉಡುಪಿ : ಬಡಗುತಿಟ್ಟಿನ ಪ್ರಸಿದ್ದ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ (75) ಇವರು ದಿನಾಂಕ 09-07-2024ರಂದು ರಾತ್ರಿ ಹೊನ್ನಾವರದಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು ಇದ್ದಾರೆ. ಹೊನ್ನಾವರ ತಾಲೂಕಿನ ಹಡಿನಬಾಳ ಸಮೀಪದ ಕಪ್ಪೆಕೆರೆ ನಿವಾಸಿಯಾದ ಈಶ್ವರ ಹೆಗಡೆ ಮತ್ತು ಗೋಪಿ ದಂಪತಿಗಳ ಸುಪುತ್ರರಾಗಿರುವ ಮಹಾದೇವ ಹೆಗಡೆ 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದವರು. ಅವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿದೆ. ಭೀಮ, ವಲಲ, ಸುಗ್ರೀವ, ವಾಲಿ, ರಾಮ, ಮಹೋಗ್ರ, ಜಮದಗ್ನಿ, ರಾವಣ, ಮಾಗದ, ಹರಿಶ್ಚಂದ್ರ, ವಿಶ್ವಾಮಿತ್ರ ಮುಂತಾದ ಪಾತ್ರಗಳ ಮೂಲಕ ಕಲಾಸೇವೆಗೈದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಸಹೋದರರಾದ ಪ್ರಸಿದ್ದ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಪಳಗಿದ ಇವರು ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು. ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಅಮೃತೇಶ್ವರಿ, ಶಿರಸಿ, ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಾಲ…
ಮಂಜೇಶ್ವರ : ಕೇರಳ ಸರಕಾರದ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05-07-2024ರಂದು ತಿರುವನಂತಪುರದ ಕೊಟ್ಟಾರಕುನ್ನು ನಿಶಾಗಂಧಿ ಆಡಿಟೋರಿಯಂನಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಪಸ್ಥಿತಿಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸಂಸ್ಕೃತಿ ಇಲಾಖೆ ಸಚಿವ ಸಜಿ ಚೆರಿಯನ್ ಅವರು ಪ್ರಸಿದ್ದ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಬಾಯಾರು ಇವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದರು. ರಮೇಶ್ ಶೆಟ್ಟಿ ಬಾಯಾರು ಅವರು ತೆಂಕು ತಿಟ್ಟು ಯಕ್ಷಗಾನ ವಲಯದಲ್ಲಿ ಗುರುತಿಸಿಕೊಂಡಿರುವ ಹವ್ಯಾಸಿ ಕಲಾವಿದರಾಗಿದ್ದು, ತರಬೇತಿಯ ಮೂಲಕವೂ ಹಲವಾರು ಶಿಷ್ಯ ವೃಂದವನ್ನು ಹೊಂದಿದ್ದಾರೆ. ಪೈವಳಿಕೆ ಸಮೀಪದ ಬಾಯಾರು ಮುಳಿಗದ್ದೆ ನಿವಾಸಿಯಾದ ಇವರ ಕಂಸ, ಶಿಶುಪಾಲ, ರಾವಣ, ಕೌರವ ಮತ್ತಿತರ ಪಾತ್ರಗಳು ಜನಮನಸೂರೆಗೊಂಡಿವೆ.
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮ ‘ಮನೆಯೇ ಗ್ರಂಥಾಲಯ’ ಕಾರ್ಯಕ್ರಮದ 50ನೇ ಗ್ರಂಥಾಲಯ ದಿನಾಂಕ 15-07-2024ರಂದು ಸಂಜೆ 5-55 ಗಂಟೆಗೆ ಉಡುಪಿಯ ಸಿಟಿ ಬಸ್ ಸ್ಟಾಂಡ್ ಹತ್ತಿರವಿರುವ ಗಾಂಧಿ ಆಸ್ಪತ್ರೆಯಲ್ಲಿ ಕನ್ನಡದ ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಇವರು ಪುಸ್ತಕ ನೀಡುವ ಮೂಲಕ ಉದ್ಘಾಟಿಸಲಿದ್ದಾರೆ. ಡಾ. ರಾಜಲಕ್ಷ್ಮೀ, ಡಾ. ಆಮ್ನಾ ಹೆಗ್ಡೆ, ಡಾ. ಹರಿಶ್ಚಂದ್ರ, ಡಾ. ವ್ಯಾಸರಾಜ ತಂತ್ರಿ ಉಪಸ್ಥಿತರಿರುವರು. ಉಡುಪಿಯ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ ಅವರು ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತ ಬಂದಿದ್ದಾರೆ. ಈಗ ನಮ್ಮ ಮಹತ್ವದ ಯೋಜನೆಯಾದ ‘ಮನೆಯೇ ಗ್ರಂಥಾಲಯ’ ಇದರ ‘ಸುವರ್ಣ ಸಂಭ್ರಮ’ ಕಾರ್ಯಕ್ರಮವನ್ನು ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ಆಸ್ಪತ್ರೆಯ ಮೊದಲನೆಯ ಮಹಡಿಯಲ್ಲಿ ಸುಸಜ್ಜಿತವಾದ ಗ್ರಂಥಾಲಯವನ್ನು ಪ್ರಾರಂಭಿಸಲು ಸಿದ್ಧತೆಗಳು ಈಗಾಗಲೇ ಕೈಗೊಂಡಿದ್ದು, ಆಸ್ಪತ್ರೆಗೆ ಬರುವ ಎಲ್ಲರೂ ಈ ಗ್ರಂಥಾಲಯ ಬಳಕೆ ಮಾಡಬಹುದು.…
ಮಂಗಳೂರು : ಕುಡ್ಲ ಆರ್ಟ್ಸ್ ಫೆಸ್ಟಿವಲ್, ನೃತ್ಯಾಂಗಣ ಮತ್ತು ಅಮೃತ ವಿದ್ಯಾಲಯಂ ಇವುಗಳ ಸಹಯೋಗದಲ್ಲಿ ಪಸ್ತುತ ಪಡಿಸುವ ‘ಭರತನಾಟ್ಯ ಪ್ರದರ್ಶನ’ವನ್ನು ದಿನಾಂಕ 14-07-2024ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಬೋಳೂರ್ ಅಮೃತ ವಿದ್ಯಾಲಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ನೃತ್ಯಾಂಗಣದ ನಿರ್ದೇಶಕಿಯಾದ ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆಯರಾದ ಅಂಕಿತ ಎಸ್., ಅದಿತಿ ಲಕ್ಷ್ಮೀ ಭಟ್ ಮತ್ತು ಸಾನ್ವಿಕಾ ಕುಡುಂಬಿಲ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ನೃತ್ಯ ಕಾರ್ಯಕ್ರಮ ನೃತ್ಯಾಂತರಂಗದ 113ನೇ ಸರಣಿಯಲ್ಲಿ ಬೆಂಗಳೂರಿನ ಖ್ಯಾತ ಗುರು ವೈಜಯಂತಿ ಕಾಶಿಯವರ ಶಿಷ್ಯೆ ಶ್ರೀಮತಿ ಅಶ್ವಿನಿ ಭಟ್ ಇವರಿಂದ ಕೂಚಿಪುಡಿ ನೃತ್ಯ ಕಾರ್ಯಕ್ರಮವು ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ದಿನಾಂಕ 06-07-2024ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ನಿವೃತ್ತ ಉಪನ್ಯಾಸಕರಾದ ಪ್ರೊ. ದತ್ತಾತ್ರೇಯ ರಾವ್ ಅಭ್ಯಾಗತರಾಗಿ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಕು. ನಿಯತಿ, ನಿನಾದ, ಸ್ನಿಗ್ಧ ಕಿರಣ್, ಬೃಂದಾ ಇವರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕು. ಅಕ್ಷರಿ ಪಂಚಾಂಗ ವಾಚನ, ಶೌರಿ ಕೃಷ್ಣ ಶಂಖನಾದಗೈದರು. ಕು.ಸೃಷ್ಟಿ, ಸಾನ್ವಿ ಆನಂದ್ ಕಲಾವಿದರ ಪರಿಚಯ ಹಾಗೂ ವಿಂಧ್ಯಾ ಕಾರಂತ ನವಗ್ರಹ ಹಸ್ತಗಳ ಬಗ್ಗೆ ಮಾಹಿತಿ ನೀಡಿದರು. ವಿದುಷಿ ಅಪೂರ್ವಗೌರಿ ದೇವಸ್ಯ ಕಾರ್ಯಕ್ರಮದ ನಿರೂಪಣೆ ಮಾಡಿ, ಗುರು ದೀಪಕ್ ಕುಮಾರ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶ್ರೀಮತಿ ಅಶ್ವಿನಿ ಭಟ್ ಇವರ ಕೂಚಿಪುಡಿ ನೃತ್ಯ ಕಾರ್ಯಕ್ರಮದಲ್ಲಿ ಪುಷ್ಪಾಂಜಲಿ, ಶಿವತಾಂಡವ ಸ್ತುತಿ,…
ಮಂಗಳೂರು : ಯಕ್ಷಾರಾಧನಾ ಕಲಾಕೇಂದ್ರ (ರಿ.) ಉರ್ವ ಮಂಗಳೂರು ಇದರ ಹದಿನೈದನೇ ವರ್ಷಾಚರಣೆಯ ಸಂಭ್ರಮ ಪ್ರಯುಕ್ತ ಕವಿ ಅಗರಿ ಶ್ರೀ ನಿವಾಸ ಭಾಗವತ ವಿರಚಿತ ‘ಶ್ರೀ ದೇವಿ ಮಹಾತ್ಮ್ಯೆ’ ಪ್ರಸಂಗದ ಯಕ್ಷಗಾನ ಬಯಲಾಟವು ದಿನಾಂಕ 13-07-2024ರಂದು ಮಧ್ಯಾಹ್ನ 3-00 ಗಂಟೆಗೆ ಸರಿಯಾಗಿ ಮಂಗಳೂರಿನ ಕುದ್ಮುಲ್ ರಂಗರಾವ್ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ. ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಟೀಲು ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀ ಶ್ರೀಹರಿನಾರಾಯಣ ಆಸ್ರಣ್ಣ ಇವರು ಆಶೀರ್ವಚನ ನೀಡಲಿರುವರು. ಇದೇ ಸಂದರ್ಭದಲ್ಲಿ ಖ್ಯಾತ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ವಿಶ್ವೇಶ್ವರ ಭಟ್ ಇವರಿಗೆ ‘ಯಕ್ಷಕಲಾರಾಧಕ ಪ್ರಶಸ್ತಿ-2024’ ಮತ್ತು ಸನಾತನ ಯಕ್ಷಾಲಯ ನಿರ್ದೇಶಕರು ಹಾಗೂ ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ರಾಕೇಶ್ ರೈ ಅಡ್ಕ ಇವರಿಗೆ ‘ಯಕ್ಷ ಶಿಕ್ಷಣ ಪುರಸ್ಕಾರ’ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಗುರು ವಿದುಷಿ ಶ್ರೀಮತಿ ಸುಮಂಗಲಾ ರತ್ನಾಕರ ರಾವ್ ಇವರ ಶಿಷ್ಯವೃಂದದವರಿಂದ ಯಕ್ಷಗಾನ ಪ್ರದರ್ಶನ ಜರುಗಲಿದೆ.
ಬೆಂಗಳೂರು : ಸಂಚಾರಿ ಥಿಯೇಟರ್ ಇದರ ಆದಿರಂಗ 2023-24ರ ಸಮಾರೋಪ ಸಮಾರಂಭವನ್ನು ದಿನಾಂಕ 13-07-2024ರಂದು ಸಂಜೆ 6-30 ಗಂಟೆಗೆ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಆದಿರಂಗದ ಶಿಬಿರಾರ್ಥಿಗಳು ರಾಮಚಂದ್ರ ದೇವ ಅವರ ‘ಕುದುರೆ ಬಂತು ಕುದುರೆ’ ನಾಟಕವನ್ನು ಅಭಿನಯಿಸುವುದರ ಮೂಲಕ ರಂಗಾರ್ಪಣೆ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ನೆನಪಿನಲ್ಲಿ ಈ ಹೊಸ ಗುಂಪು ನಾಟಕ ಮಾಡುವುದರ ಮೂಲಕ ವಿಜಯ್ ಗೌರವ ಸೂಚಿಸುತ್ತಿದೆ. 80ರ ಹರೆಯದ ಹಿರಿಯ ರಂಗಕಲಾವಿದರಾದ ಶ್ರೀನಿವಾಸ ಮೇಷ್ಟ್ರು ಮುಖ್ಯ ಅತಿಥಿಯಾಗಿ ನಮ್ಮೊಡನೆ ಇರುತ್ತಾರೆ. ಜುಲೈ 17ಕ್ಕೆ ಅವನ ಹುಟ್ಟುಹಬ್ಬ. ಜೂನ್ 15ಕ್ಕೇ ಅವನು ಹೊರಟ. ಈ ಆಸುಪಾಸಿನಲ್ಲಿ ಅವನ ನೆನಪಿನಲ್ಲಿ ಸಂಚಾರಿ ಥಿಯೇಟರ್ ಕಳೆದ ಮೂರು ವರುಷದಿಂದ ನಾಟಕ ಪ್ರದರ್ಶನ ಮಾಡುತ್ತಿದೆ. ರಂಗಭೂಮಿಯಲ್ಲಿ ನಮ್ಮೊಡನೆ ಕಳೆದ ಈ ಸಂಚಾರಿ ವಿಜಯನಿಗೆ ಹುಟ್ಟುಹಬ್ಬಕ್ಕೆಂದು ಮತ್ತೆಂಥಹ ಉಡುಗೊರೆ ನೀಡಲು ಸಾಧ್ಯ ? ನಾಟಕದ ಬಗ್ಗೆ : ರಾಮಚಂದ್ರ ದೇವ ಅವರ ರಚನೆಯ ‘ಕುದುರೆ ಬಂತು ಕುದುರೆ’ ನಾಟಕ ಬದುಕಿನ ಪ್ರಯಾಣದಲ್ಲಿ ಹೇಗೆ ಎಲ್ಲಾ…