Subscribe to Updates
Get the latest creative news from FooBar about art, design and business.
Author: roovari
07 ಏಪ್ರಿಲ್ 2023, ಮಂಗಳೂರು: ಉರ್ವಸ್ಟೋರ್ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಭಾಷಾ ಸಂಘದ ಸಹಯೋಗದಲ್ಲಿ ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ “ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ” ಹಾಗೂ 41ನೇ ಕೃತಿ “ಎಲ್ಲಿಗೋ ಪಯಣ ಯಾವುದೋ ದಾರಿ” ಲೋಕಾರ್ಪಣೆಗೊಂಡಿತು. ಇವೆರಡೂ ಲೇಖನಗಳ ಸಂಕಲನವಾಗಿದೆ. ”ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ” ಕೃತಿಯನ್ನು ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ಬಿಡುಗಡೆಗೊಳಿಸಿದರು. ”ಎಲ್ಲಿಗೋ ಪಯಣ ಯಾವುದೋ ದಾರಿ” ಕೃತಿಯನ್ನು ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಬಿಡುಗಡೆಗೊಳಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಡಾ.ಮಾಲಿನಿ ಎನ್. ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಭಾಷಾ ಸಂಘದ ಸಂಯೋಜಕಿ ಪೂರ್ಣಿಮಾ ಕುಮಾರಿ ಬಿ., ಉಪನ್ಯಾಸಕಿ ಡಾ. ನಾಗವೇಣಿ ಮಂಚಿ, ಮಂಗಳಾ ಪತ್ರಿಕೆಯ ಟಿ.ಕೆ. ಸುನಿಲ್, ವಿದ್ಯಾರ್ಥಿ ಸಂಯೋಜಕಿ ಕವಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಸ್ವರಚಿತ ಕವನ ವಾಚಿಸಿದರು. ಕೃತಿಕಾರ ಶ್ರೀನಿವಾಸ ಜೋಕಟ್ಟೆ ಪ್ರಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳಾದ ಕಾವೇರಿ ಸ್ವಾಗತಿಸಿ, ಸಾವಿತ್ರಿ ವಂದಿಸಿದರು. ಭುವನ್ ಶೆಟ್ಟಿ ನಿರ್ವಹಿಸಿದರು.
07 ಎಪ್ರಿಲ್ 2023, ಬಾಗಲಕೋಟೆ: ನಟರಾಜ ಸಂಗೀತ ನೃತ್ಯ ನಿಕೇತನ (ರಿ) ವಿದ್ಯಾಗಿರಿ, ಬಾಗಲಕೋಟೆ, ನೃತ್ಯ ಸಂಸ್ಥೆಯ ನಿರ್ದೇಶಕರಾದ, ಹಿರಿಯ ನೃತ್ಯಗುರುಗಳಾದ ವಿದುಷಿ ಶುಭದಾ ದೇಶಪಾಂಡೆ ಅವರು ತಮ್ಮ ವಿದ್ಯಾರ್ಥಿಗಳಿಗಾಗಿ, ಮಂಗಳೂರಿನ ಯುವ ನೃತ್ಯ ಕಲಾವಿದರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಹ್ವಾನಿಸಿ, ಎರಡು ದಿನಗಳ “ತಾಳ ಪ್ರಕ್ರಿಯಾ” ಕಾರ್ಯಗಾರವನ್ನು ಆಯೋಜಿಸಿದ್ದಾರೆ.ಈ ಕಾರ್ಯಗಾರವು ಇದೇ ಎಪ್ರಿಲ್ 8, ಶನಿವಾರ ಮತ್ತು ಎಪ್ರಿಲ್ 9, ಭಾನುವಾರದಂದು ನಟರಾಜ ನೃತ್ಯ ಸಂಸ್ಥೆ,ಬಾಗಲಕೋಟೆ ಇಲ್ಲಿ ಜರುಗಲಿದೆ. ಇದು ಮಂಜುನಾಥ್ ಅವರ 67 ನೇ ಕಾರ್ಯಾಗಾರವಾಗಿದೆ.
07 ಏಪ್ರಿಲ್ 2023, ಪುತ್ತೂರು: ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ಸದಸ್ಯರಿಂದ ಒಡಿಯೂರು ಶ್ರೀ ಸಂಸ್ಥಾನದಲ್ಲಿ ನಡೆದ “ಹನೂಮ ಜಯಂತಿ”ಯ ಅಂಗವಾಗಿ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಶ್ರೀ ಶ್ರೀ ಮಾತಾನಂದಮಯಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದಿನಾಂಕ 06-04-2023ನೇ ಗುರುವಾರ ಸಂಜೆ “ಹನೂಮ ವಿಜಯ” (ವೀರಮಣಿ ಕಾಳಗ) ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಮುರಳೀಕೃಷ್ಣ ಶಾಸ್ತ್ರೀ ತೆಂಕಬೈಲು, ಉಷಾ ಒಡಿಯೂರು, ಪದ್ಯಾಣ ಶಂಕರನಾರಾಯಣ ಭಟ್, ಪದ್ಯಾಣ ಜಯರಾಮ ಭಟ್ ಸಹಕರಿಸಿದರು. ಮುಮ್ಮೇಳದಲ್ಲಿ ಹನೂಮಂತ (ಶುಭಾ ಜೆ.ಸಿ. ಅಡಿಗ) ಈಶ್ವರ (ಕಿಶೋರಿ ದುಗ್ಗಪ್ಪ ನಡುಗಲ್ಲು) ವೀರಮಣಿ (ಹರಿಣಾಕ್ಷೀ ಜೆ. ಶೆಟ್ಟಿ) ಶತ್ರುಘ್ನ (ಮನೋರಮಾ ಜಿ. ಭಟ್) ಶ್ರೀ ರಾಮ (ಶಾರದಾ ಅರಸ್) ಸಹಕರಿಸಿದರು. ಪೂಜ್ಯ ಶ್ರೀಗಳು ಕಲಾವಿದರನ್ನು ಗೌರವಿಸಿ ಆಶೀರ್ವದಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ ವಂದಿಸಿದರು.
ಯಕ್ಷಗಾನ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿರುವ ಸಾಂಪ್ರದಾಯಿಕ ಕಲೆ. ವಿಭಿನ್ನ ವೇಷಭೂಷಣ, ಲಯಬದ್ಧವಾದ ಸಂಗೀತ, ನೃತ್ಯ, ಸಂಭಾಷಣೆಗಳ ಸಮ್ಮಿಲನವಾದ ಯಕ್ಷಗಾನವನ್ನು ನೋಡುವುದು ಒಂದು ವಿಶಿಷ್ಟ ಅನುಭವ. ಅವಿರತವಾದ ಸಾಧನೆ, ಸತತ ಅಭ್ಯಾಸ, ಅರ್ಪಣಾಭಾವಗಳಿಂದ ಮಾತ್ರ ಸಾಧ್ಯ. ಕಲಾವಿದನು ಪಾತ್ರವಾಗಬೇಕಾದರೆ ಅದರ ಸ್ವಭಾವವೇನೆಂದು ಅರಿತು ಅಭ್ಯಸಿಸಬೇಕು. ಆಳವಾದ ಅಧ್ಯಯನ ಅತ್ಯಗತ್ಯ. ಒಂದರ್ಥದಲ್ಲಿ ‘ಪರಕಾಯ ಪ್ರವೇಶ’. ಇಲ್ಲವಾದರೆ ಪಾತ್ರವು ಪೇಲವವಾಗುವುದನ್ನು ನಾವು ಕಾಣಬಹುದು. ಹೀಗೆ ಸತತ ಪರಿಶ್ರಮದಿಂದ, ಅಧ್ಯಯನದಿಂದ ಉತ್ತಮ ವೇಷಧಾರಿಯಾಗಿ ಹೆಸರನ್ನು ಗಳಿಸಿಕೊಂಡವರು ವೈ ಎಲ್ ವಿಶ್ವರೂಪ ಮಧ್ಯಸ್ಥ. 07.04.1989ರಂದು ಶ್ರೀಯುತ ವೈ ಲಕ್ಷ್ನೀನಾರಾಯಣ ಮಧ್ಯಸ್ಥ ಹಾಗೂ ಶ್ರೀಮತಿ ಮಂಜುಳ ಇವರ ಮಗನಾಗಿ ಜನನ. ಬಿ ಕಾಂ ಇವರ ವಿದ್ಯಾಭ್ಯಾಸ. ತಂದೆ ವೈ ಲಕ್ಷ್ನೀನಾರಾಯಣ ಮಧ್ಯಸ್ಥ ಅವರ ಪ್ರೇರಣೆಯಿಂದ ವಿಶ್ವರೂಪ ಅವರು ಯಕ್ಷಗಾನ ರಂಗಕ್ಕೆ ಬಂದರು. ಶ್ರೀಯುತ ರಾಧಾಕೃಷ್ಣ ನಾಯ್ಕ ಚೇರ್ಕಾಡಿ, ಶ್ರೀಯುತ ಗಣೇಶ ನಾಯ್ಕ ಚೇರ್ಕಾಡಿ, ಶ್ರೀಯುತ ಹಿರಿಯಣ್ಣ ಶೆಟ್ಟಿಗಾರ್, ಮಂದಾರ್ತಿ ಇವರ ಬಡಗುತಿಟ್ಟು ಯಕ್ಷಗಾನ ಗುರುಗಳು. ಶ್ರೀಯುತ ಮಹೇಶ್ ಕುಮಾರ್…
06 ಏಪ್ರಿಲ್ 2023, ಮೈಸೂರು: ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು, ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮೈಸೂರಿನ ಮತ್ತು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ಇದೇ ಏಪ್ರಿಲ್ 08 ಮತ್ತು 09ರಂದು ಸಂಜೆ 06.3೦ಕ್ಕೆ ಸರಿಯಾಗಿ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಟನದ 2022-23ನೇ ಸಾಲಿನ ರಂಗಾಭ್ಯಾಸಿಗಳ ಎರಡನೇ ಅಭ್ಯಾಸಿ ಪ್ರಯೋಗ ಆಂಟನ್ ಚೆಕಾವ್ ಅವರ ರಚನೆಯ ‘ಚೆರ್ರಿ ತೋಟ’ ಎಂಬ ನಾಟಕವು ಎನ್.ಎಸ್.ಡಿ. ಪದವೀಧರೆ ಯಶಸ್ವಿನಿ ರಾವ್ ಅವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ನಾಟಕದ ಅನುವಾದ ಶ್ರೀ ವೆಂಕಟೇಶ್ ಪ್ರಸಾದ್ ಹಾಗೂ ವಿನ್ಯಾಸ ಶ್ರೀ ಅರುಣ್ ಮೂರ್ತಿ…
06 ಏಪ್ರಿಲ್ 2023, ಬ್ರಹ್ಮಾವರ: ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾಸಂಘಟನೆ ಇದರ 4ನೇ ದಿನದ ರಂಗೋತ್ಸವದಲ್ಲಿ ಕೂಡ್ಲಿ ಹೋಳಿ ತಂಡ ಬಾರ್ಕೂರು ಇವರಿಂದ ಹೋಳಿ ಕುಣಿತ ಕಲಾಪ್ರಕಾರ ಮಂಗಳವಾರ 04-04-2023ರಂದು ಪ್ರದರ್ಶನಗೊಂಡಿತು. ನಂತರ ಮುಖ್ಯ ಅತಿಥಿಯಾಗಿ ರಂಗಭೂಮಿ ಕಲಾವಿದೆ ಸುಧಾ ಮಣೂರು ಜೊತೆಯಾದರು. ಆ ವೇಳೆ ಮಾತನಾಡಿದ ಅವರು “ರಂಗಭೂಮಿಯನ್ನ ಸ್ಥಳೀಯವಾಗಿ ಯಾಕೆ ಕಟ್ಟೋಕಾಗಲ್ಲ, ರಂಗಭೂಮಿಯನ್ನ ಗ್ರಾಮೀಣ ಭಾಗದವರೆಗೂ ತಲುಪಿಸಬೇಕು” ಎಂದರು. ಇದೇ ವೇಳೆ ಸುಮನಸಾ ಕೊಡವೂರು (ರಿ.) ತಂಡ ಅಭಿನಯಿಸಿದ ನಿತೀಶ್ ಕೋಟ್ಯಾನ್ ಬಂಟ್ವಾಳ ನಿರ್ದೇಶನದ ‘ಅರುಂಧತಿ ಆಲಾಪ’ ನಾಟಕ ಪ್ರದರ್ಶನಗೊಂಡು ನಾಲ್ಕು ದಿನದ ಮಂದಾರದ ರಂಗೋತ್ಸವ ಸಮಾರೋಪಗೊಂಡಿತು.
06 ಏಪ್ರಿಲ್ 2023, ಬೆಂಗಳೂರು: ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಅರ್ಪಿಸುವ ”ಮಂಜುನಾದ” ಸಂಗೀತ ಕಛೇರಿ ಮತ್ತು ”ಲಲಿತ ಕಲಾ ಪೋಷಕ ಮಣಿ -2022” ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 07-04-2023, ಶುಕ್ರವಾರ ಸಮಯ ಬೆಳಗ್ಗೆ ಗಂಟೆ 9:25ರಿಂದ 12:30ರವರೆಗೆ ಸೇವಾ ಸದನ ಸಭಾಂಗಣ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿ ನಡೆಯಲಿದೆ. ಪ್ರಸಿದ್ಧ ಸಂಗೀತಗಾರ ಡಾ. ರಾಜಕುಮಾರ್ ಭಾರತಿಯವರ ಮಾರ್ಗದರ್ಶನದಲ್ಲಿ ರಚಿತವಾದ ಐದು ಕೃತಿಗಳನ್ನು ಡಾ. ಡಿ. ವೀರೇಂದ್ರ ಹೆಗಡೆಯವರು ದಿನಾಂಕ 14-08-2022ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲೋಕಾರ್ಪಣೆ ಮಾಡಿದ್ದರು. ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ರಚಿಸಿದ ಸುಮಾರು 25 ಕೃತಿಗಳನ್ನು ಜನಪ್ರಿಯಗೊಳಿಸುವ ‘ಮಂಜುನಾದ’ ಯೋಜನೆಯ ಪ್ರಥಮ ಭಾಗ ಇದಾಗಿತ್ತು. ಇದೇ ಕೃತಿಗಳನ್ನು ಆಧರಿಸಿ ನಡೆಯುತ್ತಿರುವ 11ನೆಯ ಸಂಗೀತ ಕಛೇರಿ ಇದಾಗಿದೆ. “ಮಂಜುನಾದ” ಸಂಗೀತ ಕಛೇರಿಯ ಹಾಡುಗಾರಿಕೆಯಲ್ಲಿ ಅದಿತಿ ಬಿ. ಪ್ರಹ್ಲಾದ್, ಬೆಂಗಳೂರು, ಶ್ರೇಯಾ ಕೊಳತ್ತಾಯ, ಸುರತ್ಕಲ್, ಉಷಾ ರಾಮಕೃಷ್ಣ ಭಟ್, ಮಣಿಪಾಲ, ದಿವ್ಯ…
06 ಏಪ್ರಿಲ್ 2023, ಮಂಗಳೂರು: ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಬರೆದ ಕರಾವಳಿ ಜನರ ತೀರ್ಪು (1952-2022) ಕುರಿತ ‘ಮತ ಪೆಟ್ಟಿಗೆ’ ಕೃತಿಯನ್ನು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ದಿನಾಂಕ 05-04-2023 ಬುಧವಾರ ಮಂಗಳೂರಿನ ಜಿ.ಆರ್. ಮಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕರಾವಳಿ, ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್. ಗಣೇಶ್ ರಾವ್ ಲೋಕಾರ್ಪಣೆಗೊಳಿಸಿದರು. ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿದರು. ಕೃತಿಕಾರ ಪಿ.ಬಿ.ಹರೀಶ್ ರೈ ಪ್ರಾಸ್ತಾವಿಕ ಮಾತನಾಡಿ “ಕರಾವಳಿ ರಾಜಕೀಯದ ಚಿತ್ರಣವನ್ನೂ ಇದರಲ್ಲಿ ನೀಡಲಾಗಿದೆ” ಎಂದರು. ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಶಾಂತರಾಮ ಶೆಟ್ಟಿ ಮತ್ತು ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತ ಬಿ.ಎನ್. ಪುಷ್ಪರಾಜ್ ನಿರೂಪಿಸಿ, ಆಕೃತಿ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ವಂದಿಸಿದರು.
ವಿಮರ್ಶಕರ ಬಗ್ಗೆ: ಡಾ. ರವಿಶಂಕರ ಜಿ.ಕೆ. ಡಾ.ರವಿಶಂಕರ ಜಿ.ಕೆ. ಪುತ್ತೂರು ತಾಲೂಕಿನ ಪಾಣಾಜೆಯವರಾಗಿದ್ದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸ್ವಾಯತ್ತ) ಇಲ್ಲಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ‘ಕನ್ನಡ ಸಾಹಿತ್ಯದಲ್ಲಿ ಪ್ರಾಣಿರೂಪಕಗಳು: ಅನ್ಯತೆಯ ಅನುಸಂಧಾನ’ ಎಂಬ ವಿಷಯದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ. ಪದವಿಯನ್ನು ಪಡೆದಿರುವ ಇವರು ‘ಹವಿಗನ್ನಡದ ಅನನ್ಯ ಸಾಹಿತಿ ಡಾ.ಹರಿಕೃಷ್ಣ ಭರಣ್ಯ’, ‘ಅಂತಾರಾಷ್ಟ್ರೀಯ ಕೃಷಿ-ಅರ್ಥಶಾಸ್ತ್ರಜ್ಞ ಡಾ.ವಿಘ್ನೇಶ್ವರ ವರ್ಮುಡಿ’ ಕೃತಿಗಳನ್ನು ಬರೆದಿದ್ದಾರೆ. ಚಿಂತನ ಬಯಲು, ಅಭಿಜಾತ ಕನ್ನಡ, ವಿಶ್ವವಾಣಿ, ವಿಜಯಕರ್ನಾಟಕ, ಉದಯವಾಣಿ, ಸುಧಾ, ಮಂಗಳ, ಕಸ್ತೂರಿ, ಹಸಿರುವಾಸಿ, ಕಾರವಲ್ ಮುಂತಾದ ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ವಾಸುದೇವ ನಾಡಿಗ್ ಕನ್ನಡ ಕಾವ್ಯ ಕ್ಷೇತ್ರಕ್ಕೆ ಚಿರಪರಿಚಿತವಾದ ಹೆಸರು. ʼವೃಷಭಾಚಲದ ಕನಸುʼ ಕವನ ಸಂಕಲನದ ಮೂಲಕ ಕಾವ್ಯ ಕೃಷಿ ಆರಂಭಿಸಿದ ವಾಸುದೇವ ನಾಡಿಗರು ʼಹೊಸ್ತಿಲು ಹಿಮಾಲಯದ ಮಧ್ಯೆʼ ʼಭವದ ಹಕ್ಕಿʼ ʼವಿರಕ್ತರ ಬಟ್ಟೆಗಳುʼ, ʼನಿನ್ನ ಧ್ಯಾನದ ಹಣತೆʼ, ʼಅಲೆ ತಾಕಿದರೆ ದಡʼ, ʼಅವನ ಕರವಸ್ತ್ರʼ ಮುಂತಾದ ಕವನಸಂಕಲನಗಳ ಮೂಲಕ ಗುರುತಿಸಿಕೊಂಡಿದ್ದಾರೆ.…
06 ಏಪ್ರಿಲ್ 2023, ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಸಕ್ತ ಕಥೆಗಾರರಿಗೆ ಸಣ್ಣ ಕತೆಗಳನ್ನು ಬರೆದು ಕಳಿಸಲು ಆಹ್ವಾನಿಸಿತ್ತು. ಸುಮಾರು 400ಕ್ಕೂ ಹೆಚ್ಚು ಸಣ್ಣ ಕಥೆಗಳು ಬಂದಿದ್ದು, ಇದರಲ್ಲಿ ಮೊದಲ ಹಂತದಲ್ಲಿ 117 ಕಥೆಗಳನ್ನು ಆಯ್ಕೆ ಮಾಡಲಾಗಿದೆ. ಇದೀಗ ‘ನೂರಾರು ಲೇಖಕರ ನೂರಾರು ಕಥೆಗಳು’ ಎಂಬ ಕಥಾ ಸಂಕಲನ ಸಿದ್ಧವಾಗಿದೆ. ದಿನಾಂಕ 08-04-2023 ಶನಿವಾರ ಸಂಜೆ 5:00ಕ್ಕೆ ಸರಿಯಾಗಿ ಉಡುಪಿಯ ಪವನ್ ರೂಫ್ ಟಾಪ್ ಕಿದಿಯೂರು ಹೋಟೆಲ್ ನಲ್ಲಿ ಪ್ರಸಿದ್ಧ ಕಾದಂಬರಿಕಾರರು, ಸಾಹಿತಿಯಾದ ಗಿರೀಶ್ ರಾವ್ ಹತ್ತಾರ್ (ಜೋಗಿ) ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ವಸಂತ ಗಿಳಿಯಾರುರವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರೇಂದ್ರ ನಾಯಕ್ ಲೆಕ್ಕ ಪರಿಶೋಧಕರು, ಉಡುಪಿ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಅಧ್ಯಕ್ಷರಾದ ಪ್ರೊ. ಶಂಕರ್ ಇವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಕಿರು ಪ್ರಹಸನವಿರುತ್ತದೆ.