Author: roovari

ಮಂಗಳೂರು : ಮುಸ್ಲಿಮ್ ಲೇಖಕರ ಸಂಘವು ದಿನಾಂಕ 12-05-2023ನೇ ಶುಕ್ರವಾರ ಕಂಕನಾಡಿ, ಜಮೀಯತುಲ್ ಫಲಾಹ್ ಸಭಾಂಗಣ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿವಂಗತ ಯು.ಟಿ.ಫರೀದ್ ಸ್ಮರಣಾರ್ಥ ನೀಡುವ 2021ನೇ ಸಾಲಿನ ”ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಸ್ವೀಕರಿಸಿದ ಬರಹಗಾರ ಬೆಂಗಳೂರಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಯಾಗಿರುವ ಡಾ. ನೂರ್ ಸಮದ್‌ ಅಬ್ಬಲಗೆರೆ ಅವರು ಮಾತನಾಡುತ್ತಾ “ಪ್ರತಿಫಲದ ನಿರೀಕ್ಷೆಯಿಲ್ಲದೆ, ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡಿದರೆ ಪ್ರಪಂಚದಲ್ಲಿ ಏನನ್ನು ಬೇಕಾದರೂ ದಕ್ಕಿಸಿಕೊಳ್ಳಬಹುದು. ಪ್ರತಿಯೊಬ್ಬರ ಮಿದುಳಿನಲ್ಲೂ ದೇವರು ಜ್ಞಾನದ ಬೀಜ ಬಿತ್ತಿರುತ್ತಾನೆ. ಅದಕ್ಕೆ ಪೋಷಕಾಂಶ ನೀಡಿ ಜ್ಞಾನ ಉದ್ದೀಪನಗೊಳಿಸಿಕೊಳ್ಳುವುದು ನಮ್ಮ ಹೊಣೆಗಾರಿಕೆಯಾಗಿದೆ.” ಎಂದರು. ‘ಪ್ರಜಾವಾಣಿಯ ಸಹಪಾಠಿ’ ಪತ್ರಿಕೆಯ ಕೀಟ ಪ್ರಪಂಚ ಅಂಕಣದಲ್ಲಿ ಪ್ರಕಟವಾದ ಲೇಖನಗಳ ಸಂಗ್ರಹ ‘ವಿಸ್ಮಯ ಕೀಟ ಪ್ರಪಂಚ’ ಕೃತಿಗೆ ಈ ಪ್ರಶಸ್ತಿ ದೊರೆತಿರುವುದಕ್ಕೆ ಅವರು, ಪತ್ರಿಕೆಯನ್ನು ಸ್ಮರಿಸಿದರು. ಪ್ರಶಸ್ತಿಯು ರೂ.10,000 ನಗದು, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಮಾಡಿದ ಶಾಸಕ ಯು.ಟಿ.ಖಾದರ್ ಮಾತನಾಡಿ, “ಸಮಾಜದಲ್ಲಿ ಸಮುದಾಯಗಳ ನಡುವೆ ಪರಸ್ಪರ ಪ್ರೀತಿ ಬೆಳೆಸುವ, ಮನಸ್ಸುಗಳನ್ನು ಜೋಡಿಸುವ ಶಕ್ತಿ ಸಾಹಿತ್ಯಕ್ಕಿದೆ.…

Read More

ಮಂಗಳೂರು: ಕಲಾಭಿ ಥಿಯೇಟರ್ ಮಂಗಳೂರು ಪ್ರಸ್ತುತ ಪಡಿಸುವ ಬುನ್ರಾಕು ಗೊಂಬೆಯಾಟ ‘ಪುರ್ಸನ ಪುಗ್ಗೆ’ಯು ದಿನಾಂಕ 28-05-2023 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ  ಕೆನರಾ ಪ್ರೌಢಶಾಲೆಯ  ಶ್ರೀ ಭುವನೇಂದ್ರ ಸಭಾಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಆ ದಿನ ಗಂಟೆ 3.30, 5.30 ಮತ್ತು 7.30 ಹೀಗೆ 3 ಪ್ರದರ್ಶನಗಳಿದ್ದು ಪ್ರವೇಶ ದರವಾಗಿ ರೂಪಾಯಿ 100ನ್ನು ನಿಗದಿಪಡಿಸಲಾಗಿದೆ ಬುನ್ರಾಕು ಗೊಂಬೆಯಾಟ ಬುನ್ರಾಕು ಗೊಂಬೆಯಾಟ ಮೂಲತಃ ಜಪಾನಿನ ಜಾನಪದ ಕಲೆಯಾಗಿದ್ದು, ಜಪಾನಿನ ಅತ್ಯಂತ ಪ್ರಾಚೀನ ಹಾಗೂ ಪ್ರಸಿದ್ಧ ಕಲಾ ಪ್ರಕಾರವಾಗಿದೆ. ತನ್ನ ಉತ್ಕೃಷ್ಟ ಕಲಾತ್ಮಕ ತಂತ್ರಗಾರಿಕೆ ಹಾಗೂ ಸೂತ್ರಗಳು ಇಲ್ಲದೆಯೇ ನೇರ ಕೈಗಳ ಬಳಕೆಯಿಂದ ಗೊಂಬೆಗಳಿಗೆ ಜೀವ ತುಂಬುವ ಕ್ರಮದಿಂದಾಗಿ ರಂಗದ ಮೇಲೆ ನಮ್ಮ ವಾಸ್ತವಕ್ಕೆ ತೀರಾ ಹತ್ತಿರ ಎಂಬುವಷ್ಟು ಭಾವನೆ, ಚಲನವಲನಗಳ ಸಾದ್ಯತೆಗಳನ್ನು ಕಲ್ಪಿಸಿ ಬೇರೆ ಎಲ್ಲ ಮಾದರಿಯ ಗೊಂಬೆಗಳಿಂದ ಭಿನ್ನವಾಗಿ ನಿಲ್ಲುವುದು ಇದರ ವಿಶೇಷತೆ. ಇಲ್ಲಿ ಮೂರು ಜನ ಸೇರಿ ಒಂದು ಬೊಂಬೆಯನ್ನು ಅಡಿಸುತ್ತಿರುತ್ತಾರೆ. ಪ್ರಸ್ತುತ ನಾಟಕದಲ್ಲಿ ಬರುವ ಗೊಂಬೆಗಳು ಈ ಬುನ್ರಾಕು ಕಲಾಪ್ರಕಾರದ…

Read More

ಮಂಗಳೂರು : ತುಳು ಕೂಟ (ರಿ.) ಕುಡ್ಲ ಆಯೋಜಿಸುವ ಬಂಗಾರ ಪರ್ಬ ಸರಣಿ ಕಾರ್ಯಕ್ರಮ -3 ಇದರ ಅಂಗವಾಗಿ ‘ತುಳುವೆರೆ ಪರ್ಬದ ಸಂಭ್ರಮ’ ‘ಪತ್ತನಾಜೆ–ಆಟಿ–ಸೋಣ’ (ಹತ್ತನಾವಧಿ–ಆಷಾಢ–ಶ್ರಾವಣ) ಕಾರ್ಯಕ್ರಮವು ದಿನಾಂಕ 19-05-2023ನೇ ಶುಕ್ರವಾರ ಸಂಜೆ 4-30ಕ್ಕೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ತುಳು ಕೂಟದ ಅಧ್ಯಕ್ಷರಾದ ಶ್ರೀ ಬಿ. ದಾಮೋದರ ನಿಸರ್ಗ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶ್ರೀ ಮಹತೋಭಾರ ಮಂಗಳಾದೇವಿ ದೇವಸ್ಥಾನದ ಶ್ರೀ ರಮಾನಾಥ ಹೆಗ್ಡೆ ಇವರು ದೀಪ ಪ್ರಜ್ವಲನೆ ಗೈದು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಆರ್.ಆರ್. ಮಸಾಲ ಇದರ ಮಾಲಕರಾದ ಶ್ರೀ ಶೈಲೇಂದ್ರ ವೈ. ಸುವರ್ಣ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮೀ ಶೆಟ್ಟಿ ಭಾಗವಹಿಸಲಿರುವರು. ಪತ್ತನಾಜೆ (ಹತ್ತನಾವಧಿ)ಯ ಬಗ್ಗೆ ತುಳು ವರ್ಲ್ಡ್ ಇದರ ನಿರ್ದೇಶಕರಾದ ಡಾ. ರಾಜೇಶ್ ಆಳ್ವ, ‘ಆಟಿ’ (ಆಷಾಢ)ಯ ಬಗ್ಗೆ ಮಂಗಳೂರು ಆಕಾಶವಾಣಿಯ ವಿಶ್ರಾಂತ ನಿರ್ದೇಶಕರಾದ ಡಾ. ವಸಂತ ಕುಮಾರ್ ಪೆರ್ಲ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು…

Read More

ಭರತನಾಟ್ಯವು ದಕ್ಷಿಣ ಭಾರತದ ಒಂದು ಪಾರಂಪರಿಕ ನೃತ್ಯ ಕಲೆ. ಭರತಮುನಿಯಿಂದ ರಚಿಸಲ್ಪಟ್ಟ ನಾಟ್ಯ ಶಾಸ್ತ್ರ ಕೃತಿಯಲ್ಲಿ ಇದರ ಮೊದಲ ಉಲ್ಲೇಖವಿರುವುದರಿಂದ ಭರತನಾಟ್ಯ ಎಂದು ಕರೆಯಲ್ಪಟ್ಟಿದೆ. ಪುರಂದರ ದಾಸವರೇಣ್ಯರು “ಆಡಿದನೋ ರಂಗ” ಎನ್ನುವ ಪದದಲ್ಲಿ ಭರತನಾಟ್ಯದ ವರ್ಣನೆಯನ್ನು ಮಾಡಿದ್ದಾರೆ. ಇದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಚಲಿತವಿದೆ. ಇಂತಹ ಒಂದು ಪಾರಂಪರಿಕ ನೃತ್ಯ ಕಲೆಯಲ್ಲಿ ತಮ್ಮ ಪ್ರತಿಭೆ ಹಾಗೂ ಅನೇಕ ಯುವ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಗುರುವಾಗಿ “ನಟನಂ ನೃತ್ಯ ವಿದ್ಯಾಲಯ ಗಂಜಿಮಠ, ಗುರುಪುರ” ಸಂಸ್ಥೆಯ ಮೂಲಕ  ಹೇಳಿಕೊಡುತ್ತಿರುವವರು ವಿದುಷಿ ಕು.ವೈಷ್ಣವಿ ವಿ ಪ್ರಭು. 21.01.2002ರಂದು ವಿವೇಕ್ ಆರ್ ಪ್ರಭು ಹಾಗೂ ಶಾಂತೇರಿ ವಿ ಪ್ರಭು ಇವರ ಮಗಳಾಗಿ ಜನನ. ಮಂಗಳೂರಿನ ಕೆನರಾ ಕಾಲೇಜ್ ಕೊಡಿಯಾಲ್ ಬೈಲ್ ನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಭರತನಾಟ್ಯ ಕಲೆಯೆಡೆಗೆ ಆಕರ್ಷಿತರಾದದ್ದು ಹೇಗೆ ಹಾಗೂ ಭರತನಾಟ್ಯ ಕಲಾವಿದೆಯಾಗಿ  ಬೆಳೆದ ಬಗ್ಗೆ ಹೇಗೆ :- ನೃತ್ಯದಲ್ಲಿ ಇರುವ ಆಸಕ್ತಿಯನ್ನು ನೋಡಿ ನನ್ನ ತಂದೆ ತಾಯಿ 6ನೇ ವಯಸ್ಸಿನಲ್ಲಿ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕಗಳಿಗೆ ನೀಡಲಾಗುವ ವಿವಿಧ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕಗಳ ಆಹ್ವಾನ ಮಾಡಲಾಗಿದೆ. 2022 ಜನವರಿ 01ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  2022ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 51 ಪ್ರಕಾರಗಳ ಪುಸ್ತಕಗಳಿಗೆ ವಿವಿಧ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಬೇರೆ ಬೇರೆ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಇದಕ್ಕಾಗಿ 51 ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತೀ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು – 560018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ. ಹೆಚ್ಚಿನ ಮಾಹಿತಿಯನ್ನು…

Read More

ಭಾರತೀಯ ಕಲೆಗಳೆಲ್ಲಾ ನಮ್ಮ ಶ್ರೇಷ್ಠ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ, ಪ್ರಸಾರ ಮಾಡುತ್ತವೆ. ಶ್ರೇಷ್ಠ ಸಂದೇಶಗಳನ್ನೂ ನೀಡುತ್ತವೆ. ಧರ್ಮಪ್ರಸಾರವನ್ನು ಮಾಡುವುದಕ್ಕೆ ಮಾಧ್ಯಮವಾಗಿವೆ. ಆದುದರಿಂದಲೇ ಅವುಗಳೆಲ್ಲಾ ನಮ್ಮ ಹೆಮ್ಮೆಯ ಸಂಕೇತ ಎಂದು ಅಭಿಮಾನದಿಂದ ಹೇಳುತ್ತೇವೆ. ಯಕ್ಷಗಾನವಂತೂ ಗಂಡುಕಲೆಯೆಂದೇ ಪ್ರಸಿದ್ಧವಾಗಿದೆ. ವೃತ್ತಿ ಕಲಾವಿದರು, ಹವ್ಯಾಸೀ ಕಲಾವಿದರ ಜೊತೆಯಲ್ಲಿ ಶಾಲಾ ವಿದ್ಯಾರ್ಥಿಗಳೂ ರಂಗವೇರಿ ಮಿಂಚುತ್ತಿದ್ದಾರೆ. ಇಂದು ಯುವ ಸಮೂಹ ಯಕ್ಷಗಾನ ಕಲಿತು ಹಿಮ್ಮೇಳ, ಮುಮ್ಮೇಳದ ಕಲಾವಿದರಾಗಿ ರಂಗವೇರುತ್ತಿದ್ದಾರೆ. ಇದು ಸಂತೋಷ ಪಡಬೇಕಾದ ವಿಚಾರ. ಹೀಗೆ ಇಂದು ಕಲಾಸೇವೆಯನ್ನು ಮಾಡುತ್ತಿರುವ ಅನೇಕ ಯುವ ಕಲಾವಿದರ ಸಾಲಿನಲ್ಲಿ ಕಲಾಸೇವೆಯನ್ನು ಮಾಡುತ್ತಿರುವ ಕಲಾವಿದರಲ್ಲಿ ಒಬ್ಬರು ಟಿ.ಎಸ್.ಶ್ರೀವತ್ಸ ಭಟ್. 13.05.2000ರಂದು ಟಿ.ಕೆ.ಶ್ರೀನಿವಾಸ್ ಹಾಗೂ ಟಿ.ಎಸ್ ಸರಳ ಇವರ ಮಗನಾಗಿ ಜನನ. ಬಿ.ಕಾಮ್ ಪದವಿಯನ್ನು ಪಡೆದು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಜೊತೆಗೆ MBA ವ್ಯಾಸಂಗ ಮಾಡುತ್ತಿದ್ದಾರೆ. ಊರಲ್ಲಿ ಆಗ್ತಾ ಇದ್ದಂತಹ ಯಕ್ಷಗಾನಗಳನ್ನು ನೋಡಿ ಹಾಗೂ ತಂದೆಯ ಪ್ರೋತ್ಸಾಹ ಹಾಗೂ ಪ್ರೇರಣೆಯಿಂದ ಯಕ್ಷಗಾನ ಕಲಿಯಲು ಪ್ರೇರಣೆಯಾಯಿತು ಎಂದು ಹೇಳುತ್ತಾರೆ ಶ್ರೀವತ್ಸ. ತೆಂಕುತಿಟ್ಟು ಯಕ್ಷಗಾನವನ್ನು ಟಿ.ಎನ್ ಜ್ಯೋತಿ‌ ಹಾಗೂ…

Read More

ಬಂಟ್ವಾಳ : ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ರಂಗ ಭೂಮಿಕಾ -2023 ದಿನಾಂಕ 20-05-2023ರಿಂದ 22-05-2023ರವರೆಗೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ, ಕುಕ್ಕಾಜೆ ಇಲ್ಲಿ ನಡೆಯಲಿದೆ. 20-05-2023 ಶನಿವಾರ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್ ನ ನಿವೃತ್ತ ಎ.ಜಿ.ಎಂ. ಶ್ರೀ ಶ್ರೀನಿವಾಸ ದೇಶಪಾಂಡೆ ಮಾಡಲಿದ್ದು, ಅರೆಹೊಳೆ ಪ್ರತಿಷ್ಠಾನದ ರಂಗ ಸಂಘಟಕರಾದ ಶ್ರೀ ಅರೆಹೊಳೆ ಸದಾಶಿವ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಶ್ರೀ ರಾಜೇಶ್ ಮತ್ತು ಲಯನ್ಸ್ ಜಿಲ್ಲಾ ಸಂಯೋಜಕರು ಲ| ಶ್ರೀ ಮನೋರಂಜನ್ ಕರೈರವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ‘ಕಲಾಭಿ ಥಿಯೇಟರ್’ ಮಂಗಳೂರು ಪ್ರಸ್ತುತಪಡಿಸುವ ‘ಮೋಗ್ಲಿ’ ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ. ರುಡ್ಯಾರ್ಡ್ ಕಿಪ್ಲಿಂಗ್ ಮೂಲ ಕೃತಿ ಆಧಾರಿತ ಈ ನಾಟಕದ ರಂಗರೂಪ ಮತ್ತು ನಿರ್ದೇಶನ ಭುವನ ಮಣಿಪಾಲ…

Read More

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರಕಾರಿ ಪ್ರ.ದ. ಕಾಲೇಜು ಕೊಡಿಯಾಲಬೈಲು ಸುಳ್ಯ, ಆಂತರಿಕ ಗುಣಮಟ್ಟ ಭರವಸ ಕೋಶ, ಸಂಕಲ್ಪ ಕನ್ನಡ ಸಂಘ ಕನ್ನಡ ವಿಭಾಗ ಇದರ ಸಹಯೋಗದಲ್ಲಿ ಸ. ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಹಾಗೂ ಡಾ.ಪ್ರಭಾಕರ ಶಿಶಿಲರವರ ‘ಅಮರ ಸುಳ್ಯದ ಕ್ರಾಂತಿ 1837’ ನಾಟಕ ಕೃತಿಯನ್ನು ಮೇ.5 ರಂದು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ. ಆರ್. ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕ.ಸಾ.ಪ.ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ‘ಕನ್ನಡದ ಅಸ್ಮಿತ-ಕನ್ನಡ ಸಾಹಿತ್ಯ ಪರಿಷತ್ತು’ ಈ ವಿಷಯದ ಬಗ್ಗೆ ಖ್ಯಾತ ಸಾಹಿತಿ ಡಾ. ಪ್ರಭಾಕರ ಶಿಶಿಲ ಉಪನ್ಯಾಸ ನೀಡಿದರು. “ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಕರ್ನಾಟಕ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ ಆಗಿ ಬದಲಾವಣೆಯಾಯಿತು. ಜಾಗತೀಕರಣ ಮತ್ತು ಕೋಮುವಾದದಿಂದಾಗಿ ಕನ್ನಡದ ಅಸ್ಮಿತೆಗೆ ತೊಂದರೆಯುಂಟಾಗಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಆಡಳಿತ ಸರಕಾರಕ್ಕೆ ನಿಷ್ಠೆ…

Read More

ಬೆಂಗಳೂರು: ಸ್ಪಷ್ಟ ಥಿಯೇಟರ್ ಪ್ರಸ್ತುತಪಡಿಸುವ ಗಿರೀಶ್ ಕಾರ್ನಾಡ್ ರವರ ‘ರಾಕ್ಷಸ ತಂಗಡಿ’ ನಾಟಕ ಪ್ರದರ್ಶನವು ನಿರ್ದೇಶಕ ಗಗನ್ ಪ್ರಸಾದ್ ರವರ ನಿರ್ದೇಶನದಲ್ಲಿ ದಿನಾಂಕ 13-05-2023 ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ಹಾಗೂ 17-06-2023 ರಂದು ರವೀಂದ್ರ ಕಲಾ ಕ್ಷೇತ್ರ ದಲ್ಲಿ ಪ್ರದರ್ಶನಗೊಳ್ಳಲಿದೆ ರಾಕ್ಷಸ ತಂಗಡಿ 1565 ರಲ್ಲಿ ಬಹಮನಿ ಸಾಮ್ರಾಜ್ಯದ ಡೆಕ್ಕನ್ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದ ನಡುವಿನ ‘ರಾಕ್ಷಸ ತಂಗಡಿ’ ಯುದ್ಧವನ್ನು ಸೆರೆಹಿಡಿಯುತ್ತದೆ. ಇದು ಭಾರತದ ರಾಜಕೀಯ ಮತ್ತು ಸಾಂಸ್ಕೃತಿಕ ನಕ್ಷೆಯ ಮೇಲೆ ಪ್ರಭಾವ ಬೀರಿತು. ಈಗಿನ ಬಿಜಾಪುರದಲ್ಲಿ ರಕ್ಕಸಗಿ ಮತ್ತು ತಂಗಡಗಿ ಎಂಬ ಎರಡು ಪ್ರದೇಶಗಳಲ್ಲಿ ಈ ಯುದ್ಧ ಪ್ರಾರಂಭವಾಯಿತು ಎಂದು ಇತಿಹಾಸ ಹೇಳುತ್ತದೆ. ಕೃಷ್ಣಾ ನದಿಯನ್ನು ಕೆಂಪು ಬಣ್ಣಕ್ಕೆ ತಿರುಗಿಸಿ ಹಂಪಿಯ ಸ್ಮಾರಕಗಳನ್ನು ಕೆಡವಿದ ನಂತರ ಈ ಯುದ್ಧವನ್ನು ಮರುಪರಿಶೀಲಿಸಿದಾಗ, ಕೈಗೊಂಬೆ ರಾಜ ಮತ್ತು ವಿಜಯನಗರದ ಶಾಸಕ ಅಳಿಯ ರಾಮರಾಯನ ಸಹೋದರರು ಅಸಹಾಯಕರಾಗಿ ಕಾಣುತ್ತಿದ್ದರೆ – ವಿಜಯನಗರವು ದ್ವಂಸಗೊಂಡಿದ್ದನ್ನು ನೋಡಬಹುದು ಮತ್ತು ಇದು ದೊರೆಗಳ ಗಗನಕ್ಕೇರುವ ಮಹತ್ವಾಕಾಂಕ್ಷೆಯ ನಡುವೆ;…

Read More

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಯೋಜಿಸಿ ಪ್ರಕಟಿಸಿದ “ನೂರಾರು ಕತೆಗಳು” ಕಥಾ ಸಂಕಲನದ ಕುರಿತು ಕನ್ನಡದ ಪ್ರಸಿದ್ಧ ಸಾಹಿತಿ,ವಿಮರ್ಶಕರಾದ ಡಾ.ಪಾರ್ವತಿ ಜಿ.ಐತಾಳ್ ಬರೆದ ವಿಮರ್ಶೆ ಇಲ್ಲಿದೆ… ಕೃತಿಯ ಹೆಸರು : ನೂರಾರು ಕತೆಗಳು ಸಂಪಾದಕರು : ಮರವಂತೆ ನಾಗರಾಜ ಹೆಬ್ಬಾರ್, ಪೂರ್ಣಿಮಾ ಜನಾರ್ದನ್, ರಾಜೇಶ್ ಭಟ್ ಪಣಿಯಾಡಿ ಪ್: ಎಸ್.ಎಲ್.ಎನ್. ಪಬ್ಲಿಕೇಷನ್ಸ್ ಬೆಂಗಳೂರು ಪ್ರ.ವರ್ಷ : 2022 ಪುಟಗಳು : 260 ಬೆಲೆ : ರೂ. 270 ಉಡುಪಿಯ ಪ್ರತಿಷ್ಠಿತ ಸಾಂಸ್ಕ್ರತಿಕ ಸಂಘಟನೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನವು ಪ್ರಕಟಿಸಿ, ಇತ್ತೀಚೆಗೆ ಓದುಗರ ಕೈಸೇರಿದ ೧೧೭ ಮಿನಿ ಕಥೆಗಳ ಸಂಕಲನ ‘ನೂರಾರು ಕತೆಗಳು’. ಕೊರೋನಾ ಮಹಾಮಾರಿಯು ಮನುಷ್ಯ ಮನಸ್ಸುಗಳಿಗೆ ಮಂಕು ಬಡಿಸಿ, ಸಾವಿನ ಅಟ್ಟಹಾಸವು ಮಿತಿ ಮೀರಿ ಮನುಷ್ಯರನ್ನು ಕಂಗೆಡಿಸಿದ ಕಾಲದಲ್ಲಿ ಸಂಘಟನೆಯ ರೂವಾರಿಗಳು ಹಾಕಿಕೊಂಡ ಯೋಜನೆ ಇದು. ಹೊರಗೆಲ್ಲೂ ಸ್ವಚ್ಛಂದವಾಗಿ ಹೋಗಲಾರದೆ ಮನೆಗಳೊಳಗೆ ಬಂಧಿತರಾದ ಮಂದಿ ಒಂದಷ್ಟು ಕ್ರಿಯಾಶೀಲರಾಗಿ ಓದು ಮತ್ತು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸುವಂತಾಗಲಿ ಎಂಬ ಸದುದ್ದೇಶದಿಂದ ಹುಟ್ಟು ಹಾಕಿದ…

Read More