Subscribe to Updates
Get the latest creative news from FooBar about art, design and business.
Author: roovari
ಅದು ಇಂಜಿನಿಯರುಗಳು ಆಡಿದ ನಾಟಕ. ರಾಜ್ಯದ ವಿವಿಧೆಡೆಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಇಂಜಿನಿಯರುಗಳೇ ಪ್ರದರ್ಶಿಸಿದ ನಾಟಕವದು. ರಂಗಾಸಕ್ತರು ಕಲೆಯೊಂದಿಗೆ ಜೀವಿಸುವ ಆಶಯದೊಂದಿಗೆ 2018ರಲ್ಲಿ ಕಟ್ಟಿಕೊಂಡಿದ್ದೇ ‘ಕಲಾವಿಲಾಸಿ’ ತಂಡ. ಕನ್ನಡ ಕಲಾ ರಂಗದ ಶ್ರೀಮಂತಿಕೆಗೆ ಪೂರಕವಾಗುವಂತೆ ಕನ್ನಡತನವನ್ನು ಬಿಂಬಿಸುವ ಕೆಲಸ ಮಾಡುವ ಗುರಿ ಕಲಾವಿಲಾಸಿ ತಂಡದ್ದು. ಈಗಾಗಲೇ ‘ಮಾನಸಪುತ್ರ’ ಹಾಗೂ’ ಚಿಗರಿಗಂಗಳ ಚೆಲುವೆ’ ನಾಟಕಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿರುವ ಈ ತಂಡದ ಹೊಸ ನಾಟಕ ಚಂಪಾ (ಚಂದ್ರಶೇಖರ ಪಾಟೀಲ) ಅವರ ಮೂರು ನಾಟಕಗಳನ್ನು ಸೇರಿಸಿ ‘ಅಸಂಗತಗಳು’ ಎಂಬ ಶೀರ್ಷಿಕೆಯೊಂದಿಗೆ ರಂಗಕ್ಕೆ ತಂದಿದ್ದು ಗಮನಾರ್ಹ. ಜೊತೆಗೆ ಚಂಪಾ ಅವರ ಅಸಂಗತ ನಾಟಕಗಳನ್ನು ಮತ್ತೆ ಪ್ರದರ್ಶಿಸಿದ್ದು ಅಭಿನಂದನೀಯ (ಈ ನಾಟಕ ಬೆಂಗಳೂರಿನ ಹನುಮಂತನಗರದ ಕೆ.ಎಚ್. ಕಲಾಸೌಧದಲ್ಲಿ ಎಪ್ರಿಲ್ 23ರಂದು ಪ್ರದರ್ಶನ ಕಂಡಿತು). 1967-680 ಚಂಪಾ ಅವರು ರಚಿಸಿದ ಈ ನಾಟಕಗಳ ಕುರಿತು ಅವರು ಹೇಳಿದ್ದು ಹೀಗೆ- “ಯಾವುದೋ ಒಂದು ಸಾಹಿತ್ಯದ ಪ್ರಕಾರ ಎಂದೂ ‘ಮುಗಿದುಹೋದ ಅಧ್ಯಾಯ’ ಆಗುವುದಿಲ್ಲ. ನವೋದಯ, ನವ್ಯ, ಪ್ರಗತಿಶೀಲ, ಅಸಂಗತ, ಬಂಡಾಯ ಇವುಗಳೆಲ್ಲವೂ ಮತ್ತೆ…
ತುಮಕೂರು : ತುಮಕೂರು ತಾಲ್ಲೂಕಿನ ಮೆಳೇಹಳ್ಳಿಯ ಡಮರುಗ ರಂಗ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ 18ನೇ ವರ್ಷದ ಚಿಣ್ಣರ ಬಣ್ಣದ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 06-05-2023ನೇ ಶನಿವಾರ ವಿ. ರಾಮಮೂರ್ತಿ ರಂಗಸ್ಥಳದಲ್ಲಿ ನೆರವೇರಿತು. ಅತಿಥಿಯಾಗಿ ಭಾಗವಹಿಸಿದ ಜಿ.ಎಂ.ಹೆಚ್.ಪಿ.ಎಸ್. ಕೋರಾ ಇದರ ಮುಖ್ಯ ಶಿಕ್ಷಕರಾದ ಶ್ರೀ ಮಧುಸೂಧನ್ ರಾವ್ ಮಾತನಾಡುತ್ತಾ “ಶಾಲೆಯಲ್ಲಿ ಒಂದು ವರ್ಷ ಪೂರ್ತಿ ಮಾಡಲಾಗದ ಕಾರ್ಯವನ್ನು ಒಂದು ತಿಂಗಳ ಶಿಬಿರ ಮಾಡಿ ಬಿಡುತ್ತದೆ. ಇದು ಉತ್ಪ್ರೇಕ್ಷೆಯಲ್ಲ. ನನ್ನ ಶಾಲೆಯ ಮಕ್ಕಳು ಶಿಬಿರದಲ್ಲಿದ್ದಾರೆ ಅವರ ಬದಲಾವಣೆಯನ್ನು ಕಂಡು ನಾನು ಹೇಳುತ್ತಿದ್ದೇನೆ. ಮಕ್ಕಳು ಬಹುಮುಖಿಯಾಗಿ ವಿಕಾಸಗೊಳ್ಳಲು ಇಂತಹ ಶಿಬಿರಗಳು ಬೇಕು” ಎಂದು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಸಾಹಿತಿಗಳಾದ ಪ್ರಕಾಶ್ ನಾಡಿಗ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧಕ್ಷರಾದ ಸಿದ್ದರಾಮಯ್ಯ, ನಿವೃತ್ತ ಪ್ರಾಂಶುಪಾಲರಾದ ಕುಮಾರಸ್ವಾಮಿ ಹಾಗೂ ತುಮಕೂರಿನ ಉಪನಿರ್ದೇಶಕ ಕಚೇರಿಯ ಡಿ.ವೈ.ಎಸ್.ಪಿ. ರಂಗಧಾಮಯ್ಯ ಉಪಸ್ಥಿತರಿದ್ದರು. ನಂತರ ಸುಮಾರು ಐವತ್ತು ಮಕ್ಕಳು ಮೆಳೇಹಳ್ಳಿ ದೇವರಾಜ್ ನಿರ್ದೇಶನದಲ್ಲಿ ಕುವೆಂಪುರವರ ‘ನನ್ನ ಗೋಪಾಲ’ ನಾಟಕ ಪ್ರಯೋಗಿಸಿದರು. ಕಾಡಿನ ಸೌಂದರ್ಯ, ಪ್ರಾಣಿ-ಪಕ್ಷಿಗಳ…
ಬೆಂಗಳೂರು: ಸ್ಪಿನಿಂಗ್ ಟ್ರೀ ಥಿಯೇಟರ್ ಕಂಪನಿ ಪ್ರಸ್ತುತ ಪಡಿಸುವ ಶಕೀಲ್ ಅಹ್ಮದ ನಿರ್ದೇಶನದ ‘ಅನಾಮಿಕನ ಸಾವು’ ನಾಟಕದ ಪ್ರದರ್ಶನವು ಇದೇ ಬರುವ ದಿನಾಂಕ 11-05-2023ರಂದು ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ನಡೆಯಲಿದೆ. ನಾಟಕದ ಆಶಯ ಒಂದು ಕಾಗದ, ಒಂದು ಗುರುತಿನ ಚೀಟಿ, ನಮ್ಮ ಇರುವಿಕೆಯನ್ನೇ ನಿರ್ಧರಿಸುವಂತಾದರೆ? ನಮ್ಮ ಅಸ್ತಿತ್ವವನ್ನೇ ಅಲುಗಾಡಿಸುವಂತಾದರೆ? ಹಾಗಾಗಿದ್ದಲ್ಲಿ, ನಾವು ಹುಟ್ಟಿದ್ದು-ಬೆಳೆದದ್ದು-ಬದುಕಿದ್ದು ಸುಳ್ಳೆ? ನಮ್ಮ ನರಗಳಲ್ಲಿ ಹರಿಯುವ ರಕ್ತ ಸುಳ್ಳೆ? ನಮ್ಮ ಸಾಕಿಸಲುಹಿದ ಈ ನೆಲ ಸುಳ್ಳೆ? ಹೀಗೆಯೇ, ಹುಟ್ಟಿದ ನೆಲದಿಂದಲೇ ನೆಲೆ ಕಳೆದುಕೊಳ್ಳಬೇಕಾಗಿ ಬಂದಾಗ, ತನ್ನ ಅಸ್ತಿತ್ವಕ್ಕಾಗಿ ಒದ್ದಾಡುವವನ ಕಥೆ ಇದು. ತಮ್ಮ ಹೆಸರು ಮತ್ತು ಬದುಕೆಂಬ ಎರಡು ದಂಡೆಯ ನಡುವಿರುವ ಅಸ್ತಿತ್ವವೆಂಬ ತೂಗುಯ್ಯಾಲೆಯಲ್ಲಿ ತಮ್ಮನ್ನು ತಾವು ಹುಡುಕುತ್ತಿರುವವರ, ನೆಲೆ ಕಾಣಬಯಸುವವರ ಕಥೆ ಅಥೊಲ್ ಫುಗಾರ್ಡ ದಕ್ಷಿಣ ಆಫ್ರಿಕಾದ ನಟ ಮತ್ತು ನಿರ್ದೇಶಕರಾದ ಅಥೊಲ್ ಫುಗಾರ್ಡ ಅವರು ತಮ್ಮದೇ ಆದ ವಿಶಿಷ್ಟ ನಾಟಕೀಯ ಅಭಿವ್ಯಕ್ತಿಯಿಂದಾಗಿ ಪ್ರಪಂಚದಾದ್ಯಂತ ಹೆಸರುವಾಸಿಯಾದ ನಾಟಕಕಾರರೂ ಹೌದು. ರಂಗಭೂಮಿಯನ್ನು ಪ್ರತಿರೋಧದ ಮಾಧ್ಯಮವಾಗಿ ಬಳಸಿಕೊಂಡ ಫುಗಾರ್ಡ…
ಮಂಗಳೂರು: “ಜನರಲ್ಲಿ ಕಲಾಭಿರುಚಿ ಬೆಳೆಸಬೇಕಿದೆ” – ಚೇತನಾ ದತ್ತಾತ್ರೇಯ ಪ್ರಚಲಿತ ವಿದ್ಯಮಾನದಲ್ಲಿ ಮಾನವೀಯ ಸಂಸ್ಕೃತಿಕ ಮೌಲ್ಯಗಳು ಕುಸಿಯುತ್ತಿರುವ ಈ ಸಂದರ್ಭದಲ್ಲಿ ಜನರಲ್ಲಿ ಅಭಿರುಚಿ ಕಲಾಸಕ್ತಿ ಬೆಳೆಸುವ ಕಾರ್ಯಕ್ರಮಗಳು ಹೆಚ್ಚಾಗಬೇಕಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ)ಬೆಂಗಳೂರು ಇದರ ರಾಜ್ಯ ಸಹ ಸಂಚಾಲಕಿ ಚೇತನ ದತ್ತಾತ್ರೇಯ ಅಭಿಪ್ರಾಯ ಪಟ್ಟರು ಅವರು ಇತ್ತೀಚೆಗೆ ಭರತಾಂಜಲಿ ಕೊಟ್ಟಾರ ಮಂಗಳೂರು ಇವರು ವಿಪ್ರವೇದಿಕೆ (ರಿ)ಕೊಟ್ಟಾರ ಇವರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬೆನಕ ಸಭಾಭವನ ಕೋಡಿಕಲ್ ಇಲ್ಲಿ ಹಮ್ಮಿಕೊಂಡಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಕಾಸರಗೋಡು ಇವರ ಬೊಂಬೆಯಾಟ ಪ್ರದರ್ಶನವನ್ನು ಉದ್ಘಾಟಿಸಿದರು. ಮನುಷ್ಯ ಇಂದು ಒತ್ತಡದ ನಡುವೆ ಬದುಕುವಂತಾಗಿದೆ ಬದುಕಿನ ಜಂಜಾಟದಲ್ಲಿ ಸಂಬಂಧ ಮೌಲ್ಯಗಳು ದೂರವಾಗುತ್ತಿವೆ. ಕಳಚುತ್ತಿರುವ ಸಂಬಂಧಗಳ ಕೊಂಡಿಯನ್ನು ಭಾರತೀಯ ಪುರಾತನ ಲಲಿತ ಕಲೆಗಳಿಂದ ಬೆಳೆಸಲು ಸಾಧ್ಯವಿದೆ. ಯಕ್ಷಗಾನ ಬೊಂಬೆ ಆಟವು ಇಂದು ಅಳಿವಿನ ಅಂಚಿನಲ್ಲಿದೆ ಇಂತಹ ಸಾಧಕ ಕಲೆಯನ್ನು ಪ್ರೋತ್ಸಾಹಿಸಬೇಕಾದ್ದು ಪ್ರತಿಯೊಬ್ಬರ ಕರ್ತವ್ಯ ಎಂದರು. ತನ್ನ…
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರದಂದು ಎಂಜಿಎಂ ಕಾಲೇಜಿನಲ್ಲಿ ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶ್ರೀ ಕೆ .ಜಯಪ್ರಕಾಶ್ ರಾವ್ ಉಪನ್ಯಾಸ ನೀಡುತ್ತಾ “ವ್ಯಕ್ತಿಯಲ್ಲಿರುವ ಶಕ್ತಿಯನ್ನು ಗುರುತಿಸುವ ಕೆಲಸ ಮಾಡಬೇಕೆಂದು ಅಬ್ದುಲ್ ಕಲಾಂ ಯಾವಾಗಲೂ ಹೇಳುತ್ತಿದ್ದರು. ಅವರೊಂದಿಗಿನ ಏಳು ವರ್ಷದ ಒಡನಾಟಗಳನ್ನು ನೆನಪಿಸಿಕೊಳ್ಳುತ್ತಾ ರಾಕೆಟ್ ತಂತ್ರಜ್ಞಾನದ ಮೇರು ವ್ಯಕ್ತಿ ಕಲಾಂ, ಅತ್ಯಂತ ಸರಳ ವ್ಯಕ್ತಿತ್ವದ ಅವರು ಹೊಸ ತಂತ್ರಜ್ಞಾನಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಸರಳ ಜೀವನವನ್ನು ನಡೆಸುತ್ತಾ ನಮಗೆಲ್ಲರಿಗೂ ಮಾದರಿಯಾಗಿದ್ದರು” ಎಂದರು. ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯನ್ನಾಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ದಾನಿಗಳಾದ ಭವಾನಿ ವಿ. ಶೆಟ್ಟಿ,…
ಉಡುಪಿ : ರಾಗ ಧನ ಉಡುಪಿ (ರಿ.) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ರಾಗರತ್ನಮಾಲಿಕೆ -12’ನೆಯ ಗೃಹ ಸಂಗೀತ ಕಛೇರಿ ಉಡುಪಿಯ ಶ್ರೀ ಕೆ. ದಿನೇಶ್ ಅಮ್ಮಣ್ಣಾಯ ಇವರ ಆತಿಥ್ಯ ಹಾಗೂ ಸಹ ಪ್ರಯೋಜಕತ್ವದಲ್ಲಿ ದಿನಾಂಕ 12-05-2023ರಂದು ಸಂಜೆ 4-30ಕ್ಕೆ ಅವರ ಸ್ವಗೃಹ ‘ಉಷಾ ನಿಲಯ’ದಲ್ಲಿ ನಡೆಯಲಿದೆ. ಮೈಸೂರಿನ ಶ್ರೀ ಎ. ಚಂದನ ಕುಮಾರ್ ಕೊಳಲು ವಾದನದಲ್ಲಿ, ಮತ್ತೂರು ಶ್ರೀನಿಧಿ ವಯೊಲಿನ್ ನಲ್ಲಿ, ಮೃದಂಗದಲ್ಲಿ ಶ್ರೀ ಅನಿರುದ್ಧ್ ಎಸ್. ಭಟ್ ಹಾಗೂ ಶ್ರೀ ಸುನಾದ ಆನೂರು ಖಂಜೀರದಲ್ಲಿ ಈ ಕಛೇರಿಯನ್ನು ನಡೆಸಿಕೊಡಲಿರುವರು. ಶ್ರೀಮತಿ ಮತ್ತು ಶ್ರೀ ದಿನೇಶ್ ಅಮ್ಮಣ್ಣಾಯ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.
08.05.2001ರಂದು ಉಡುಪಿಯ ಕುಂಜಾರುಗಿರಿಯ ವಿಷ್ಣುಮೂರ್ತಿ ಆಚಾರ್ಯ ಹಾಗೂ ಸ್ನೇಹ ಆಚಾರ್ಯ ಇವರ ಮಗಳಾಗಿ ಜನನ. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜ್ ನಲ್ಲಿ BA ಇನ್ ಇಂಗ್ಲಿಷ್ ಮುಗಿಸಿ, ಪ್ರಸ್ತುತ ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ Masters Of Performing Arts- Bharathanatyam ಹಾಗೂ Masters In English Literature ವಿಷಯದಲ್ಲಿ ಉನ್ನತ ಪದವಿಯ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಮುಖಾಂತರ ನಡೆದ ಪ್ರತೀ ಶಾಲೆಗೂ ಬಡಗು ಯಕ್ಷ ಶಿಕ್ಷಣದ “ಯಕ್ಷ ಕಿಶೋರ” ಎಂಬ ಕಾರ್ಯಕ್ರಮದಿಂದ ೩ನೇ ತರಗತಿಯಲ್ಲಿ ಇರುವಾಗ ಯಕ್ಷಗಾನ ಕಲೆಗೆ ಪಾದಾರ್ಪಣೆಯಾಯಿತು. ಆಗ ಗುರುಗಳಾಗಿ ಶ್ರೀ ಮಂಜುನಾಥ ಕುಲಾಲ ಐರೋಡಿ, ಶ್ರೀ ಕೃಷ್ಣಮೂರ್ತಿ ಉರಾಳ ಹಾಗೂ ಶ್ರೀ ನರಸಿಂಹ ತುಂಗ ಅವರ ಬಳಿ ಬಡಗುತಿಟ್ಟು ಯಕ್ಷಗಾನವನ್ನು ಅಭ್ಯಾಸ ಮಾಡಿ, ಪ್ರಸ್ತುತ ಯಕ್ಷ ಗುರು ಶ್ರೀ ರಾಕೇಶ್ ರೈ ಅಡ್ಕ ಅವರ ಗರಡಿಯಲ್ಲಿ ತೆಂಕುತಿಟ್ಟು ಯಕ್ಷಗಾನವನ್ನು ಕಲಿಯುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಯಕ್ಷಗಾನದ ಮೇಲೆ ಆಸಕ್ತಿ ಬೆಳೆದಿತ್ತು. ತಂದೆ, ತಾಯಿ, ಅಜ್ಜ, ಅಜ್ಜಿ…
ಸುರತ್ಕಲ್ : ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟಿನ ಕೇಂದ್ರೀಯ ಮಹಿಳಾ ಘಟಕದ ‘ಪ್ರಮದಾ ಪ್ರಭಾ’ 6ನೇ ವಾರ್ಷಿಕ ಸಂಭ್ರಮವು ದಿನಾಂಕ 01-05-2023ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಟ್ಲ ಫೌಂಡೇಷನ್ ಟ್ರಸ್ಟಿನ ಪ್ರಧಾನ ಸಂಚಾಲಕ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ಮಾತನಾಡುತ್ತಾ “ಯಕ್ಷಗಾನದಲ್ಲಿ ಮಹಿಳೆಯರು ಮತ್ತು ಮಕ್ಕಳು ತೊಡಗಿಸಿಕೊಳ್ಳಬೇಕು. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹಿಳಾ ಘಟಕ ಕೆಲಸ ಮಾಡುವಂತಾಗಲಿ. ಇದಕ್ಕೆ ಪ್ರತೀ ವರ್ಷ ಪಟ್ಲ ಫೌಂಡೇಷನ್ ಟ್ರಸ್ಟಿಗೆ ಐದು ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡುವುದಾಗಿ” ಹೇಳಿದರು. ಇನ್ನೋರ್ವ ಮುಖ್ಯ ಅತಿಥಿ, ಖ್ಯಾತ ಉದ್ಯಮಿಗಳು ಹಾಗೂ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಗೌರವಾಧ್ಯಕ್ಷರೂ ಆದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಮಾತನಾಡಿ “ಪಟ್ಲ ಫೌಂಡೇಷನ್ ಟ್ರಸ್ಟಿಗೆ ಮಹಿಳಾ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಮಹಿಳಾ ಘಟಕ ಇನ್ನಷ್ಟು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ” ಎಂದರು. ಇನ್ನೋರ್ವ ಮುಖ್ಯ ಅತಿಥಿ ಜಾಗತಿಕ ಬಂಟರ ಸಂಘಗಳ…
ಕೊಡಗು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಪರಿಷತ್ತಿನ 109ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ದಿನಾಂಕ 05-05-2023ರಂದು ಸಾಹಿತ್ಯ ಪರಿಷತ್ತಿನ ಸದಸ್ಯೆ ಶ್ರೀಮತಿ ಚೊಕ್ಕಾಡಿ ಪ್ರೇಮ ರಾಘವಯ್ಯ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಅವರು ಕನ್ನಡ ಸಾಹಿತ್ಯ ಪರಿಷತ್ತು ಕುರಿತು ಮಾತನಾಡುತ್ತಾ “ಕನ್ನಡ ನಾಡು, ನುಡಿ, ಸಂಸ್ಕೃತಿಗಳ ರಕ್ಷಣೆ, ಉಳಿವು ಮತ್ತು ಪರಿಚಯ ಇವುಗಳಿಗಾಗಿ ಸ್ಥಾಪನೆಯಾದ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು 108 ವರ್ಷಗಳ ಹಿಂದೆ 1915ರಲ್ಲಿ ಮೈಸೂರು ಸಂಸ್ಥಾನದ ದೊರೆಗಳಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದಿವಾನರುಗಳಾದ ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ರವರು ಸ್ಥಾಪಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು 1935ರಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ಎಂದು ಮರುನಾಮಕರಣಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಲೋಕದ ಬೆಳವಣಿಗೆಗೆ ಅಪಾರವಾದ ಕೊಡುಗೆ ನೀಡಿದೆ. ಹೋಬಳಿ ಮಟ್ಟದಲ್ಲಿಯೂ ಪರಿಷತ್ತಿನ ಘಟಕಗಳನ್ನು ರಚಿಸುವ ಮೂಲಕ ಪ್ರತಿ…
ಮುಲ್ಕಿ : ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ವತಿಯಿಂದ ದಿನಾಂಕ 05-05-2023ರಂದು ಶುಕ್ರವಾರ ಮುಲ್ಕಿಯ ಸ್ವಾಗತ್ ಹೊಟೇಲು ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆಯಲ್ಲಿ ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡುತ್ತಾ “ಕನ್ನಡ ಶಾಲೆಗಳು ಮುಚ್ಚುತ್ತಿವೆ. ಏಳೆಂಟು ಕನ್ನಡ ಶಾಲೆಗಳನ್ನು ನಡೆಸುತ್ತಿರುವ ನನಗೆ ಕನ್ನಡ ಶಾಲೆಗಳನ್ನು ನಡೆಸುವ ಸವಾಲುಗಳ ಅರಿವಿದೆ. ಸರಕಾರ ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ಕೊಡದೆ ಅನ್ಯಾಯ ಮಾಡುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸುವ ಕೆಲಸ ಆಗಬೇಕಾಗಿದೆ. ಅಂಗಡಿ ಸಂಸ್ಥೆಗಳ ಫಲಕಗಳು ಇಂಗ್ಲಿಷ್ ಭಾಷೆಗಳಲ್ಲೇ ಇವೆ. ಕನ್ನಡದಲ್ಲಿ ಕಡ್ಡಾಯವಾಗಿದ್ದರೂ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಬೆಂಗಳೂರಿನವರಲ್ಲದವರು ಅಧ್ಯಕ್ಷರಾಗುವುದು ಸಾಧ್ಯವೇ ಇಲ್ಲ ಎಂಬಂತಿದ್ದ ಸಾಹಿತ್ಯ ಪರಿಷತ್ತಿನಲ್ಲಿ ಮುಲ್ಕಿಯವನಾದ ನಾನು ಅಧ್ಯಕ್ಷನಾದೆ. ಸಾಹಿತ್ಯ ಪರಿಷತ್ತಿನಲ್ಲಿ ಅನೇಕ ಬದಲಾವಣೆಗಳನ್ನು ತಂದೆ. ಲಕ್ಷಾಂತರ ರೂಪಾಯಿಯ ದತ್ತಿನಿಧಿಗಳನ್ನು ಸ್ಥಾಪಿಸಿದೆ. ನಷ್ಟದಲ್ಲಿದ್ದ ಸಂಸ್ಥೆಯನ್ನು ಲಾಭದಾಯಕವನ್ನಾಗಿಸಿದೆ. ಸಿಬಂದಿಗಳಲ್ಲಿ ಶಿಸ್ತು ತರುವ ಪ್ರಯತ್ನ ಮಾಡಿದೆ. ವಾಹನ ಶುಲ್ಕ, ಇತರ ಯಾವುದೇ ಭತ್ಯೆ ಪಡೆದಿಲ್ಲ. ಪರಿಷತ್ತು 90…