Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು : ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕಾಸರಗೋಡು ಮತ್ತು ಕನ್ನಡ ಭವನ ಪ್ರಕಾಶನ ಇದರ ಸಾರಥ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಇದರ ಸಹಯೋಗದಲ್ಲಿ ಕಾಸರಗೋಡಿನ ನುಳ್ಳಿಪ್ಪಾಡಿಯ ಪಿ.ಎಂ.ಎಸ್. ರಸ್ತೆಯಲ್ಲಿರುವ ಕನ್ನಡ ಭವನ ಸಮುಚ್ಚಯ ಸಭಾಂಗಣದಲ್ಲಿ ದಿನಾಂಕ 22-02-2024ರಂದು ಅಪರಾಹ್ನ 3 ಗಂಟೆಗೆ ‘ಶ್ರೀಮಾನ್ ಪಂಜೆ ಮಂಗೇಶರಾಯರ 150ನೇ ಜನ್ಮದಿನ ಸಂಭ್ರಮ – 2024’ ಕಾರ್ಯಕ್ರಮವು ನಡೆಯಲಿದೆ. ಡಾ. ಪಿ. ಶ್ರೀಕೃಷ್ಣ ಭಟ್, ಡಾ. ಕೆ. ಕಮಲಾಕ್ಷ, ಡಾ. ಯು. ಮಹೇಶ್ವರಿ, ಡಾ. ರಾಧಾಕೃಷ್ಣ ಬೆಳ್ಳೂರು, ಪ್ರೊ. ನಾರಾಯಣ ಮೂಡಿತ್ತಾಯ, ಪ್ರೊ. ಎ. ಶ್ರೀನಾಥ್, ವಿ.ಬಿ. ಕುಳಮರ್ವ, ಅಡ್ವ ಥೋಮಸ್ ಡಿ’ಸೋಜಾ, ಪಿ.ವಿ. ಪ್ರದೀಪ್ ಕುಮಾರ್ ಮಂಗಳೂರು, ಡಾ. ಕೊಳ್ಚಪೆ ಗೋವಿಂದ ಭಟ್, ಎ.ಆರ್. ಸುಬ್ಬಯ್ಯಕಟ್ಟೆ, ಪ್ರದೀಪ್ ಬೇಕಲ್, ವಿಶಾಲಾಕ್ಷ ಪುತ್ರಕಳ, ಅರಿಬೈಲ್ ಗೋಪಾಲ ಶೆಟ್ಟಿ, ವೈ. ಸತ್ಯನಾರಾಯಣ ಮತ್ತು…
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ‘ಚಾಂದ್ರ ಮಧ್ವನವಮಿ’ ಕಾರ್ಯಕ್ರಮವು ದಿನಾಂಕ 18-02-2024ರಂದು ಉಡುಪಿಯ ಮಧ್ವ ಮಂಟಪ ಹಾಗೂ ರಾಜಾಂಗಣದಲ್ಲಿ ನಡೆಯಿತು. ಮಧ್ವ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಆರಂಭದಲ್ಲಿ ಪೂರ್ವಾಹ್ನ ಘಂಟೆ 11.00ರಿಂದ ತೌಳವ ಮಾಧ್ವ ಒಕ್ಕೂಟದ ಸದಸ್ಯರಿಂದ ‘ಮಧ್ವನಾಮಾವಳಿ ಪಾರಾಯಣ’ ನಡೆಯಿತು. ಬಳಿಕ ವಿದ್ವಾನ್ ವಾಗೀಶ್ ಭಟ್ ಇವರಿಂದ ‘ಆಚಾರ್ಯ ಮಧ್ವ’ ಎಂಬ ವಿಷಯದಲ್ಲಿ ಉಪನ್ಯಾಸ ನಡೆಯಿತು. ಮಕ್ಕಳಿಗಾಗಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ರಸಪ್ರಶ್ನೆ ಆಯೋಜಿಸಲಾಗಿತ್ತು. ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಭಾಜನಾ ಮಂಡಳಿಗಳಿಂದ ಮಧ್ವಾಚಾರ್ಯರ ಚರಿತ್ರೆಯ ಹಿನ್ನೆಲೆಯ ಸಾಮೂಹಿಕ ಮಧ್ವಗಾಯನ ಹಾಗೂ ಪರ್ಯಾಯ ಶ್ರೀ ಪಾದದ್ವಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಆಶೀರ್ವಚನ ಹಾಗೂ ವಿದ್ವಾಂಸರಿಗೆ ಅನುಗ್ರಹ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಪ್ರಿಯಾಂಜಲಿ ರಾವ್ ಹಾಗೂ ಶ್ರೀಸ್ವರಂ ಮುಂಬೈ ಇವರಿಂದ ಭರತನಾಟ್ಯ ಕಾರ್ಯಕ್ರಮ ಪ್ರಸ್ತುತಗೊಂಡಿತು.
ಕಾಸರಗೋಡು : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಕಾಸರಗೋಡು ಕೋಟೆಕಣಿಯ ಭರವಸೆಯ ಕವಯತ್ರಿ ಚಂಚಲಾಕ್ಷಿ ಶ್ಯಾಮ್ ಪ್ರಕಾಶ್ ಇವರ ಕವನ ಸಂಕಲನ ‘ಮತ್ತೆ ಚಿಗುರಿದ ಭಾವ’ ದಿನಾಂಕ 22-02-2024ರಂದು ಅಪರಾಹ್ನ 2 ಗಂಟೆಗೆ ಕನ್ನಡ ಭವನ ಪ್ರಕಾಶನದಿಂದ ಕೃತಿ ಬಿಡುಗಡೆಗೊಳ್ಳಲಿದೆ. ಇದು ಕನ್ನಡ ಭವನ ಪ್ರಕಾಶನದಿಂದ ಬಿಡುಗಡೆಯಾಗುವ ನಾಲ್ಕನೇ ಕೃತಿಯಾಗಿದೆ. ಕಥಾಬಿಂದು ಪ್ರಕಾಶನದ ರೂವಾರಿ ಸಾಹಿತಿ ಪ್ರದೀಪ್ ಕುಮಾರ್, ಡಾ. ಕೊಳ್ಚಪೆ ಗೋವಿಂದ ಭಟ್, ಕವಯತ್ರಿ ರೇಖಾ ಸುದೇಶ್ ರಾವ್, ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಜಿಲ್ಲಾ ಮಹಿಳಾ ಸಂಘ ಗೌರವಾಧ್ಯಕ್ಷೆ ಕವಯತ್ರಿ ಆಶಾ ರಾಧಾಕೃಷ್ಣ, ನಿಕಟಪೂರ್ವ ಅಧ್ಯಕ್ಷೆ ಉಷಾಕಿರಣ್, ಲೇಖಕ ಪ್ರದೀಪ್ ಬೇಕಲ್, ಜಗದೀಶ್ ಕೂಡ್ಲು, ಕನ್ನಡ ಭವನದ ಕಾರ್ಯದರ್ಶಿ ವಸಂತ್ ಕೆರೆಮಮನೆ, ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ಮುಂತಾದವರು ಉಪಸ್ಥಿತರಿರುವರು. ಕಲ್ಕೂರ ಪ್ರತಿಷ್ಠಾನ ಮಂಗಳೂರಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಗಂಟೆ 2ರಿಂದ ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ…
ಮಂಗಳೂರು : ಕರ್ನಾಟಕ ಪ್ರಾಂತೀಯ ಕೆಥೋಲಿಕ್ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ‘ಸಂದೇಶ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 11-02-2024ರ ಭಾನುವಾರದಂದು ಮಂಗಳೂರಿನ ಬಜ್ಜೋಡಿಯ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ವಿಧಾನಸಭೆಯ ಸ್ಪೀಕರ್ ಆಗಿರುವ ಯು.ಟಿ. ಖಾದರ್ ”ಕಲೆ, ಸಾಹಿತ್ಯ ಸಂಸ್ಕೃತಿ ಮತ್ತು ಸೌಹಾರ್ದ ಪರಂಪರೆಯೇ ಒಂದು ಪ್ರದೇಶದ ಬಹುದೊಡ್ಡ ಆಸ್ತಿಯೇ ಹೊರತು, ಬೃಹತ್ ಕಟ್ಟಡಗಳಲ್ಲ. ಇಂತಹ ಸೌಹಾರ್ದ ಪರಂಪರೆ ಉಳಿಸಲು ನಾವು ಎಲ್ಲ ರೀತಿಯ ತ್ಯಾಗಕ್ಕಾಗಿ ಸಿದ್ಧರಾಗಬೇಕು. ಪಾಶ್ಚಿಮಾತ್ಯ ಸಂಸ್ಕೃತಿಯ ಒಲವಿನ ಮಧ್ಯೆ ನಮ್ಮ ನೆಲದ ಸಂಸ್ಕೃತಿಯನ್ನು ಜೀವಂತವಾಗಿಡುವ ಕೆಲಸವನ್ನು ಸಂದೇಶದಂಥ ಸಂಸ್ಥೆಗಳು ಮಾಡುತ್ತಿವೆ. ಸಂಸ್ಕೃತಿ ದುರ್ಬಲಗೊಂಡರೆ ಎಲ್ಲವನ್ನೂ ಕಳೆದುಕೊಂಡಂತೆ. ನಮ್ಮ ಸಂಸ್ಕಾರ, ಪರಂಪರೆಯನ್ನು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಕೆಲಸವನ್ನು ಸಂದೇಶ ಪ್ರತಿಷ್ಠಾನ ಮಾಡುತ್ತಿದೆ. ಸಾಧಕರನ್ನು ಗುರುತಿಸುವ ಜತೆಗೆ, ಯುವಜನತೆಗೆ ಪ್ರೇರಣೆ ನೀಡುತ್ತಿದೆ.” ಎಂದರು. ಅಧ್ಯಕ್ಷತೆ ವಹಿಸಿದ ಬೆಂಗಳೂರಿನ ಮಹಾ ಧರ್ಮಪ್ರಾಂತದ ಮಹಾ ಧರ್ಮಾಧ್ಯಕ್ಷ ಡಾ. ಪೀಟರ್ ಮಚಾದೊ ಮಾತನಾಡಿ…
ಪುತ್ತೂರು : ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ ಗಣರಾಜ್ಯೋತ್ಸವದ ಕುರಿತು ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಇದರ ವೆಬ್ಸೈಟ್ನ ಮೊಬೈಲ್ ಆವೃತ್ತಿ ಅನಾವರಣ ಕಾರ್ಯಕ್ರಮವು ದಿನಾಂಕ 14-02-2024ರಂದು ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣಗೊಳಿಸಿದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಮಾತನಾಡಿ, “ಬಾಲವನದಲ್ಲಿ ತೆರೆದ ರಂಗ ಮಂದಿರವಿದೆ. ಇಲ್ಲಿ ಮಕ್ಕಳಲ್ಲಿರುವ ಪ್ರತಿಭೆಗಳ ಬೆಳವಣಿಗೆಗೆ ಮತ್ತು ಅನಾವರಣಕ್ಕೆ ಅವಕಾಶ ಕಲ್ಪಿಸಬಹುದು. ಇದಕ್ಕಾಗಿ ಯೋಜನೆ ರೂಪಿಸಲಾಗುವುದು. ಬಾಲವನದ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ಮಕ್ಕಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಾಲವನದ ತೆರೆದ ರಂಗ ಮಂದಿರವನ್ನು ಆದ್ಯತೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ನಂತರ ವಾರಾಂತ್ಯಕ್ಕೆ ವಿವಿಧ…
ಪಾರ್ವತಿ ಜಿ. ಐತಾಳ್ ಅವರ ‘ಮಹಾಬೆಳಗು ಮತ್ತು ಇತರ ನಾಟಕಗಳು ‘ಎಂಬ ಕೃತಿಯನ್ನು ಶ್ರೀನಿವಾಸ ಪುಸ್ತಕ ಪ್ರಕಾಶನವು ಇತ್ತೀಚೆಗೆ ಪ್ರಕಟಿಸಿದೆ. ಇದರಲ್ಲಿ ‘ಮಹಾಬೆಳಗು’ ಎಂಬ ಪೂರ್ಣ ಪ್ರಮಾಣದ ನಾಟಕದ ಜೊತೆಗೆ ಐದು ಏಕಾಂಕ ನಾಟಕಗಳಿವೆ. ಎಲ್ಲವೂ ಮಾನವೀಯತೆಯ ಬೆಳಕಿನ ಸಂದೇಶವನ್ನು ಸಾರುವ ನಾಟಕಗಳು. ಜಾತಿ-ಧರ್ಮಗಳ ಹೆಸರಿನಲ್ಲಿ ಛಿದ್ರಗೊಳ್ಳುತ್ತಿರುವ ನಮ್ಮ ಸಮಾಜಕ್ಕೆ ಮನುಷ್ಯ ಧರ್ಮಕ್ಕಿಂತ ಮಿಗಿಲಾದುದು ಯಾವುದೂ ಇಲ್ಲ ಎಂಬ ಸಂದೇಶವನ್ನು ಈ ನಾಟಕಗಳು ಸಾರುತ್ತವೆ. ಒಂದು ಗ್ರಾಮೀಣ ಪ್ರದೇಶದಲ್ಲಿ ಶ್ರೀಮಂತರು ಮತ್ತು ಬಲಾಢ್ಯರು ತಮ್ಮ ಪ್ರತಿಷ್ಠೆಗೋಸ್ಕರ ಜಾತಿ-ಧರ್ಮಗಳನ್ನು ಬಳಸಿಕೊಂಡು ಮುಗ್ಧ ಜನರನ್ನು ಹೇಗೆ ವಂಚಿಸುತ್ತಾರೆ ಎಂಬುದನ್ನು ‘ಮಹಾಬೆಳಗು’ ನಾಟಕವು ಮನಮುಟ್ಟುವಂತೆ ಚಿತ್ರಿಸುತ್ತದೆ. ಸ್ವಾರ್ಥಿಗಳಿಂದಾಗಿ ಊರಿನಲ್ಲಿ ಹಿಂದೂ-ಮುಸ್ಲಿಂ ಬಣಗಳು ಹುಟ್ಟಿಕೊಳ್ಳುತ್ತವೆ. ಅವುಗಳ ನಡುವೆ ಸಂಘರ್ಷಗಳು ನಡೆಯುತ್ತವೆ. ಆದರೆ ಸೂಕ್ಷ್ಮಮತಿಯಾದ ಅಂದೂಕಾಕನಿಗೆ ಇದರ ಹಿಂದಿನ ಸಂಚು ಅರ್ಥವಾಗುತ್ತದೆ. ಅವನ ಮೂಲಕ ಕಥಾನಾಯಕ ಸೂರ್ಯನಿಗೆ ಸತ್ಯದ ಅರಿವಾಗುತ್ತದೆ. ಅವನು ಮನುಷ್ಯನಾಗಲು ನಿರ್ಧರಿಸುತ್ತಾನೆ. ಕಾಸರಗೋಡಿನ ಆಡು ಭಾಷೆ, ಮಾಪಿಳ್ಳೆಗಳ ಮಲೆಯಾಳ ಮಿಶ್ರಿತ ಕನ್ನಡದ ಸಂಭಾಷಣೆಗಳು, ನಡುನಡುವೆ ಹಾಡುಗಳು…
ಮಂಗಳೂರು : ದಿನಾಂಕ 19-02-2024 ರಂದು ನಿಧನರಾದ ಖ್ಯಾತ ಕಾದಂಬರಿಕಾರ ಕೆ ಟಿ ಗಟ್ಟಿಯವರಿಗೆ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದಿಂದ ಶ್ರದ್ಧಾಂಜಲಿ ಸಭೆಯು ದಿನಾಂಕ 19-02-2024 ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿದ ಡಾ. ಮೀನಾಕ್ಷಿ ರಾಮಚಂದ್ರ ಮಾತನಾಡಿ “ಪ್ರಚಾರ ಬಯಸದ ಸಹೃದಯಿ ಕೆ. ಟಿ. ಗಟ್ಟಿಯವರು, ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದರು.” ಎಂದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ , ರಘು ಇಡ್ಕಿದು, ಬೆನೆಟ್ ಜಿ ಅಮ್ಮನ್ನ, ನುಡಿ ನಮನ ಸಲ್ಲಿಸಿದರು. ಕೇಂದ್ರ ಪರಿಷತ್ತು ಮಾರ್ಗದರ್ಶಿ ಸಮಿತಿಯ ಡಾ. ಮುರಲೀಮೋಹನ್ ಚೂಂತಾರು ಗೌರವ ನಮನ ಸಲ್ಲಿಸಿದರು. ಕೋಶಾಧಿಕಾರಿ ಎನ್. ಸುಬ್ರಾಯ ಭಟ್, ಸಮಿತಿ ಸದಸ್ಯರಾದ ಬಿ. ಕೃಷ್ಣಪ್ಪ ನಾಯ್ಕ್ , ಶ್ರೀಕೃಷ್ಣ ಭಟ್ ಸುಣ್ಣಂಗುಳಿ , ರತ್ನಾವತಿ ಜೆ. ಬೈಕಾಡಿ , ನಿಜಗುಣ ದೊಡ್ಡಮನಿ ಹಾಗೂ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಪಾರ್ತಿಸುಬ್ಬ ವಿರಚಿತ “ವಾಲಿ ಮೋಕ್ಷ “(ಮುಂದುವರಿದ ಭಾಗ)ಎಂಬ ತಾಳಮದ್ದಳೆ ದಿನಾಂಕ 17- 02- 2024ರಂದು ಶ್ರೀಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಶ್ರೀ ಸತೀಶ್ ಇರ್ದೆ, ಶ್ರೀ ನಿತೀಶ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಶ್ರೀ ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಗುಡ್ಡಪ್ಪ ಬಲ್ಯ ( ಶ್ರೀ ರಾಮ), ಪಕಳಕುಂಜ ಶ್ರೀ ಶ್ಯಾಂ ಭಟ್ (ವಾಲಿ) ಶ್ರೀ ಭಾಸ್ಕರ ಬಾರ್ಯ, ಶ್ರೀಮತಿ ಹರಿಣಾಕ್ಷಿ.ಜೆ.ಶೆಟ್ಟಿ ಹಾಗೂ ಶ್ರೀ ದುಗ್ಗಪ್ಪ ನಡುಗಲ್ಲು (ಸುಗ್ರೀವ), ಶ್ರೀ ಕುಂಬ್ಳೆ ಶ್ರೀಧರ್ ರಾವ್ (ತಾರೆ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು .
ಮಂಗಳೂರು : ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ದಿನಾಂಕ 19-02-2024ರ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಕೆ. ಟಿ. ಗಟ್ಟಿ ಅವರು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಉಡುಪಿಯ ಟಿ. ಎಂ. ಎ. ಪೈ. ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಗಟ್ಟಿಯವರು, ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ ಬೆಳೆಸಿದ್ದರು. ಇಥಿಯೋಪಿಯಾಯದಿಂದ ಹಿಂತಿರುಗಿದ ನಂತರ ಉಜಿರೆಯಲ್ಲಿ ನೆಲೆಸಿದ್ದ ಇವರು ಕೃಷಿಯಲ್ಲಿ ತೊಡಗಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ. ಟಿ. ಗಟ್ಟಿ ಯವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಪದವಿ ಗಳಿಸಿದ್ದರು. ದಿನಾಂಕ 19-02-2024ರ ಸೋಮವಾರ ಮಧ್ಯಾಹ್ನ ಘಂಟೆ 1.00 ರಿಂದ ಸಂಜೆ 3.00ರವರೆಗೆ ಅವರ ಪಾರ್ಥಿವ ಶರೀರವನ್ನು ಬಿಜೈನ ಕೆ.…
ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ಮೂಲಕ ಯುವ ವಿಮರ್ಶಕ ಶ್ರೀ ವಿಕಾಸ ಹೊಸಮನಿ ಅವರ ಸಂಪಾದಕತ್ವದಲ್ಲಿ ಇತ್ತೀಚೆಗೆ ಬರೆಯುತ್ತಿರುವ ಉದಯೋನ್ಮುಖ ಲೇಖಕ/ಕಿಯರ ಕಥೆಗಳನ್ನೊಳಗೊಂಡ ಪ್ರಾತಿನಿಧಿಕ ಕಥಾಸಂಕಲನವೊಂದನ್ನು ತರಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಲೇಖಕ/ಕಿಯರು ಕಥೆಗಳನ್ನು ಕಳಿಸಬಹುದು. ನಿಯಮಗಳು * ಲೇಖಕ/ಕಿಯರಿಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. * ಈ ಪ್ರಾತಿನಿಧಿಕ ಸಂಕಲನಕ್ಕೆ 20 ಕಥೆಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. * ಕಥೆಗಳ ಗುಣಮಟ್ಟವೇ ಆಯ್ಕೆಯ ಮಾನದಂಡ. * ಕಥಾ ವಸ್ತು, ತಂತ್ರ, ಭಾಷೆ, ಶೈಲಿ ಸೇರಿದಂತೆ ಹೊಸ ಪ್ರಯೋಗಗಳಿಗೆ ಆದ್ಯತೆಯನ್ನು ನೀಡಲಾಗುವುದು. * ಸ್ವತಂತ್ರ ಮತ್ತು ಪುಸ್ತಕ ರೂಪದಲ್ಲಿ ಪ್ರಕಟವಾಗದ ಕಥೆಗಳನ್ನು ಮಾತ್ರ ಕಳುಹಿಸಬಹುದು. * ಅನುವಾದಿತ, ರೂಪಾಂತರಿತ ಮತ್ತು ಪ್ರೇರಿತ ಕಥೆಗಳಿಗೆ ಅವಕಾಶವಿಲ್ಲ. * ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. * ಕಥೆಗಳು 5000 ಪದಗಳಿಗೆ ಮೀರದಂತಿರಬೇಕು. * ಕಥೆಯ ಸಾಫ್ಟ್ ಕಾಪಿಯ ಜೊತೆಗೆ ಕಥೆಗಾರರ ಪರಿಚಯ ಮತ್ತು ಭಾವಚಿತ್ರ ಕಳುಹಿಸುವುದು ಕಡ್ಡಾಯ. *…