Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೆಯ ಸರಣಿ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ ದಿನಾಂಕ 04 ಮಾರ್ಚ್ 2025ರಂದು ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಪ್ರಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕ ಭಾಷಣದಲ್ಲಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕೃತಿ ಲೋಕಾರ್ಪಣೆ ಮಾಡಿದ ಯು.ಎ.ಇ. ಬಂಟ್ಸ್ ಅಧ್ಯಕ್ಷರಾದ ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿಯವರು “ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ” ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಚಿತ್ರಶಿಲ್ಪ ಕಲಾವಿದ, ಕ್ರಿಯಾತ್ಮಕ ಕಲಾನಿರ್ದೇಶಕರು ಹಾಗೂ ಲೇಖಕರಾಗಿರುವ…
ಆರ್. ಎಸ್. ಕೇಶವಮೂರ್ತಿ ಎಂದೇ ಪ್ರಸಿದ್ಧರಾದ ರುದ್ರಪಟ್ಣ ಸುಬ್ಬರಾಯ ಕೇಶವಮೂರ್ತಿಗಳು, ಪ್ರಸಿದ್ಧ ವೀಣೆ ಸುಬ್ಬಣ್ಣನವರ ಪಟ್ಟ ಶಿಷ್ಯರು. 1903 ಮಾರ್ಚ್ 4 ರಂದು ಬೇಲೂರಿನ ರುದ್ರಪಟ್ಣ ಸುಬ್ಬರಾಯರು ಮತ್ತು ಪುಟ್ಟಕ್ಕಯ್ಯನವರಿಗೆ ಜನಿಸಿದ ಸುಪುತ್ರ. ರುದ್ರಪಟ್ಣ ಸುಬ್ಬರಾಯರು 24 ತಲೆಮಾರುಗಳ ವೈಣಿಕ ವಂಶಜರಾದ ರುದ್ರಪಟ್ಣ ಸುಬ್ಬರಾಯರು ವೃತ್ತಿಯಲ್ಲಿ ಶಾಲೆಯ ಸಂಗೀತ ಅಧ್ಯಾಪಕರಾಗಿದ್ದರು. ಈ ಸಂಗೀತದ ಅಭಿರುಚಿ ತಲೆಮಾರುಗಳಿಂದ ಮುಂದುವರಿದುಕೊಂಡು ಕೇಶವಮೂರ್ತಿಗಳಲ್ಲೂ ಮನೆ ಮಾಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಾಲ್ಯದಿಂದಲೇ ಸಂಗೀತದ ಕಡೆಗೆ ಹೆಚ್ಚು ಒಲವು ಇದ್ದ ಇವರು, ತಂದೆಯವರ ಬಳಿಯೇ ವೀಣೆಯ ಆರಂಭದ ಪಾಠ ಕಲಿತರು. ಮುಂದೆ ಮೈಸೂರಿನಲ್ಲಿ ಅವರ ಬಂಧುಗಳಾದ ರಾಯಪ್ಪನವರ ಮನೆಯಲ್ಲಿ ಉಳಕೊಳ್ಳುವ ಅನಿವಾರ್ಯತೆ ಒದಗಿ ಬಂದಾಗ ಪಕ್ಕದ ಮನೆಗೆ ವೀಣೆ ಪಾಠಕ್ಕೆ ಬರುತ್ತಿದ್ದ ವೀಣೆ ಸುಬ್ಬಣ್ಣನವರ ಕಲಾ ಪಾಂಡಿತ್ಯ ತಿಳಿದ ಕೇಶವಮೂರ್ತಿಗಳು ಒಂದು ದಿನ ಅವರ ಪಾದಗಳಿಗೆ ನಮಸ್ಕರಿಸಿ, ತಮ್ಮ ಮನಸ್ಸಿನ ಅದಮ್ಯ ಬಯಕೆಯನ್ನು ಅರಿಕೆ ಮಾಡಿಕೊಂಡರು. ಸುಬ್ಬಣ್ಣನವರು ಎಲ್ಲವನ್ನು ಕೇಳಿಸಿಕೊಂಡ ನಂತರ ಮೌನದಿಂದಲೇ ನಗುತ್ತಾ ಆಶೀರ್ವಾದ…
ಬೆಂಗಳೂರು : ಬೆಂಗಳೂರಿನ ರಂಗಮಂಡಲ ಸಿವಗಂಗ ಟ್ರಸ್ಟ್ ಇವರು ಮಲ್ಲಕಾರ್ಜನಸ್ವಾಮಿ ಮಹಾಮನೆ ಇವರ ನಿರ್ದೇಶನದಲ್ಲಿ ಆಯೋಜಿಸುವ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರವು ದಿನಾಂಕ 06 ಏಪ್ರಿಲ್ 2025 ರಿಂದ 04 ಮೇ 2025ರ ವರೆಗೆ ಬೆಳಿಗ್ಗೆ ಘಂಟೆ 9.30 ರಿಂದ ಮಧ್ಯಾಹ್ನ 1.00ರ ತನಕ ಬೆಂಗಳೂರಿನ ಕೆಂಗೇರಿ ಉಪನಗರ 1ನೇ ವಿಭಾಗದಲ್ಲಿರುವ # 3386 ಸರ್. ಎಂ. ವಿ. ಬಡಾವಣೆಯಲ್ಲಿರುವ ಸಿವಗಂಗ ರಂಗಮಂದಿರದಲ್ಲಿ ನಡೆಯಲಿದೆ. ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ನಟನೆ, ನೃತ್ಯ, ಸಂಗೀತ, ಚಿತ್ರಕಲೆ, ಬೊಂಬೆಯಾಟ, ಕಥಾಪ್ರಸ್ತುತಿ, ಮೂಕಾಭಿನಯ, ಮಕ್ಕಳ ಕವಿತಾವಾಚನ, ಕ್ಲ-ಮಾಡೆಲಿಂಗ್, ಒರಿಗಾಮಿ, ಗಾಳಿಪಟ, ಯೋಗ-ಧ್ಯಾನ, ನಿರೂಪಣಾ ಕಲಿಕೆ, ನಾಟಕ ಕಲಿಕೆ ಮತ್ತು ಪ್ರದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ – 9448970731, 9035093955
ಕುಶಾಲನಗರ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಹಾಗೂ ವಿವಿಧ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ -2025’ ಕಾರ್ಯಕ್ರಮವು ದಿನಾಂಕ 02 ಮಾರ್ಚ್ 2025ರಂದು ಕುಶಾಲನಗರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಮಾತನಾಡಿ “ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ. ತಾಯಿನುಡಿಗಳನ್ನು ಬಳಕೆ ಮಾಡುವ ಮೂಲಕ ಉಳಿಸುವುದರೊಂದಿಗೆ ಅಕಾಡೆಮಿ ಮೂಲಕ ಭಾಷೆಯ ಅಭಿವೃದ್ಧಿಗೆ ಕಾರ್ಯಸೂಚಿ ನೀಡುವ ಕೆಲಸವಾಗಬೇಕಾಗಿದೆ. ಪ್ರಸಕ್ತ ಭಾಷೆ ಸಂಸ್ಕೃತಿ ದಿಕ್ಕಾಪಾಲಾಗಿ ಹೋಗುತ್ತಿದ್ದು, ಜನಗಣತಿ ಮೂಲಕ ತಮ್ಮ ಸಮುದಾಯದ ಜನಸಂಖ್ಯೆ ಮಾಹಿತಿಯನ್ನು ಸರಕಾರಕ್ಕೆ ಲಭಿಸುವಂತೆ ಮಾಡುವುದು, ಮುಖ್ಯ ಭಾಷೆ -ಉಪಭಾಷೆಗಳ ನಡುವೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಈ ಮೂಲಕ ಭಾಷೆಗಳ ಬೆಳವಣಿಗೆ ಸಾಧ್ಯ. ಅಧಿಕಾರದ ಮೂಲಕ ಭಾಷೆಗಳನ್ನು ನಿರ್ಧಾರ ಮಾಡುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಚರಿತ್ರೆಗಳು ಜನರಿಗೆ ಭಾರ ಆಗದೇ…
ಸುಳ್ಯ : ರಂಗ ಮಯೂರಿ ಕಲಾಶಾಲೆ (ರಿ.) ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯಮಟ್ಟದ ರಂಗ ಶೈಲಿಯ ‘ಬಣ್ಣ 2025’ ಬೇಸಿಗೆ ಶಿಬಿರವನ್ನು ದಿನಾಂಕ 12 ಏಪ್ರಿಲ್ 2025ರಿಂದ 20 ಏಪ್ರಿಲ್ 2025ರವರೆಗೆ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. 7ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಅವಕಾಶ. ಈ ವರ್ಷ ಹೊಸದಾಗಿ, ಮಕ್ಕಳಿಗೆ ಅಭಿನಯ ಪ್ರಧಾನ ರಂಗ ಶಿಬಿರದೊಂದಿಗೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಭಾಷಾ ಪರಿಚಯದ ಸಲುವಾಗಿ ಕನ್ನಡ, ಅರೆಭಾಷೆ, ತುಳು, ಹಿಂದಿ, ಇಂಗ್ಲೀಷ್ ಭಾಷೆಗಳ ಮಕ್ಕಳ ನಾಟಕ ತಯಾರಿ ಮತ್ತು ಪ್ರದರ್ಶನ ಕಾರ್ಯಾಗಾರವನ್ನು ಏರ್ಪಡಿಸಿದ್ದೇವೆ. ಜೊತೆಗೆ ಹತ್ತು ಹಲವು ಕ್ರಿಯಾತ್ಮಕ ಚಟುವಟಿಕೆಯೊಂದಿಗೆ ಹೆಸರಾಂತ ರಂಗ ಸಂಸ್ಥೆಗಳಾದ ನೀನಾಸಂ, ರಂಗಾಯಣ, ರಂಗ ಅಧ್ಯಯನ ಕೇಂದ್ರ, ಶಿವ ಸಂಚಾರ ಸಾಣೆಹಳ್ಳಿಯ ನಾಟಕ ನಿರ್ದೇಶಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಈ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಊರುಬೈಲ್ 9611355496,…
ಕಾಸರಗೋಡು : ದ್ರಾವಿಡ ಭಾಷಾ ಅನುವಾದಕರ ಸಂಘ (ರಿ.), ವೈಟ್ ಫೀಲ್ಡ್ ಬೆಂಗಳೂರು ಮತ್ತು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ (ರಿ.) ನುಳ್ಳಿಪ್ಪಾಡಿ ಕಾಸರಗೋಡು ಇವುಗಳ ಸಂಯುಕ್ತಾಶ್ರಯದಲ್ಲಿ ಒಂದು ದಿನದ ‘ಮಲಯಾಳಂ – ಕನ್ನಡ ಅನುವಾದ ಕಾರ್ಯಾಗಾರ’ವನ್ನು ದಿನಾಂಕ 09 ಮಾರ್ಚ್ 2025ರಂದು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಾಗಾರದ ಉದ್ಘಾಟನೆಯನ್ನು ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತಡ್ಕ ಇವರ ಅಧ್ಯಕ್ಷತೆಯಲ್ಲಿ ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷರಾದ ಡಾ. ಸುಷ್ಮಾ ಶಂಕರ್ ಇವರು ನಿರ್ವಹಿಸಲಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಕೆ.ವಿ. ಕುಮಾರನ್ ಮತ್ತು ದ್ರಾವಿಡ ಭಾಷಾ ಅನುವಾದಕರ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಎಸ್. ಶಿವಕುಮಾರ್ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪಿ.ಎಂ.ಶ್ರೀ ಪ್ರಾಥಮಿಕ ಶಾಲೆ ಮೂರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ 22ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣಕತೆಗಳ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆಯನ್ನು ದಿನಾಂಕ 07 ಮಾರ್ಚ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಮೂರ್ನಾಡಿನ ಪಿ.ಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಂತೂರು ಮುರುನಾಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಎಸ್. ಕುಶನ್ ರೈ ಇವರು ನಿರ್ವಹಿಸಲಿರುವರು. ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಶ್ರೀಮತಿ ಕೂಡಕಂಡಿ ಓಂ ಶ್ರೀ ದಯಾನಂದರವರಿಗೆ ಮೈಸೂರಿನ ಯುವರಾಜ ಕಾಲೇಜಿನ ಸಾಹಿತಿಗಳಾದ ಶ್ರೀಮತಿ ನಿವೇದಿತಾ ಎಚ್. ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ…
ಬೆಂಗಳೂರು : ಎನ್.ಆರ್. ಕಾಲನಿಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದ ಕಲಾಭವನದಲ್ಲಿ ಅಂಕಿತ ಪುಸ್ತಕವು ಏರ್ಪಡಿಸಿದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಲೇಖಕ ಎಚ್. ದುಂಡಿರಾಜ್ ಇವರ ‘ಹದಿನಾಲ್ಕು ಕಿರು ಹಾಸ್ಯ ನಾಟಕಗಳು’, ಶ್ರೀ ರಘುನಾಥ ಚ.ಹ. ಇವರ ‘ಇಳಿಸಲಾಗದ ಶಿಲುಬೆ’ ಮತ್ತು ‘ಇಲ್ಲಿಂದ ಮುಂದೆಲ್ಲ ಕಥೆ’ ಹಾಗೂ ಶ್ರೀಮತಿ ಪಾರ್ವತಿ ಜಿ. ಐತಾಳ್ ಇವರ ‘ಅಂತರಂಗದ ಸ್ವಗತ’ ಕೃತಿಗಳು ದಿನಾಂಕ 02 ಮಾರ್ಚ್ 2025ರಂದು ಲೋಕಾರ್ಪಣೆಗೊಂಡವು. ಈ ಸಮಾರಂಭದಲ್ಲಿ ಕೃತಿ ಅನಾವರಣಗೊಳಿಸಿದ ಪ್ರಸಿದ್ಧ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಪೂರ್ವ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಇವರು ಮಾತನಾಡಿ “ಬದುಕಿನಲ್ಲಿ ಸಂಭವಿಸಿದ ಪ್ರಮುಖ ಘಟನೆಗಳನ್ನು ಸತ್ಯ ಹಾಗೂ ಪ್ರಾಮಾಣಿಕತೆಗಳಿಂದ ಸ್ಪೂರ್ತಿದಾಯಕವಾಗಿ ಓದುಗರೊಂದಿಗೆ ಹಂಚಿಕೊಳ್ಳುವುದು ಆತ್ಮಕಥೆಗಳ ಉದ್ದೇಶ. ‘ಅಂತರಂಗದ ಸ್ವಗತ’ ಎಂಬ ಪಾರ್ವತಿ ಜಿ. ಐತಾಳ್ ಇವರ ಈ ಆತ್ಮಕಥನದಲ್ಲಿ ನೇರ ಮತ್ತು ಸರಳ ನಿರೂಪಣೆಯ ಸೊಗಸಿದೆ. ಬಾಲ್ಯದಿಂದ ಆರಂಭಿಸಿ ಇದುವರೆಗಿನ ಎಲ್ಲ ಮುಖ್ಯ ಘಟನೆಗಳನ್ನು ಮನಮುಟ್ಟುವ ರೀತಿಯಲ್ಲಿ ಇವರು ಹಂಚಿಕೊಂಡಿದ್ದಾರೆ” ಎಂದು ಹೇಳಿದರು. ಪತ್ರಕರ್ತ ಲೇಖಕ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯಲ್ಲಿ ‘ಶಲ್ಯ ಸಾರಥ್ಯ’ ಆಖ್ಯಾನವು ದಿನಾಂಕ 03 ಮಾರ್ಚ್ 2025ರಂದು ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್ ಬಟ್ಯಮೂಲೆ, ತೆಂಕಬೈಲು ಗೋಪಾಲಕೃಷ್ಣ ಭಟ್, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಕುಮಾರಿ ಶರಣ್ಯ ನೆತ್ತರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಕೌರವ (ಗುಂಡ್ಯಡ್ಕ ಈಶ್ವರ ಭಟ್), ಶಲ್ಯ (ಗುಡ್ಡಪ್ಪ ಬಲ್ಯ), ಕರ್ಣ (ವಿ.ಕೆ. ಶರ್ಮ ಅಳಿಕೆ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಟಿ. ರಂಗನಾಥ ರಾವ್ ವಂದಿಸಿದರು.
ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ.) ಕೊಡಮಾಡುವ 2024ರ ಸಾಲಿನ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ತುಂಬಾಡಿ ರಾಮಯ್ಯರವರ ‘ಜಾಲ್ಕಿರಿ’ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ‘ಅಟ್ರಾಸಿಟ’ ಕಾದಂಬರಿಗಳು ಈ ಪ್ರಶಸ್ತಿಯನ್ನು ಸಮನಾಗಿ ಹಂಚಿಕೊಂಡಿವೆ. ಪ್ರಶಸ್ತಿಯು 25,000 ರೂಪಾಯಿ ನಗದು (ಇಬ್ಬರಿಗೂ ಸೇರಿ) ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ತೀರ್ಪುಗಾರರಾಗಿ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ್ ಮತ್ತು ಹಿರಿಯ ಲೇಖಕಿ ಅನುಪಮಾ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಸ್ಪರ್ಧೆಗೆ 54 ಕಾದಂಬರಿಗಳು ಬಂದಿದ್ದು, ಅಂತಿಮ ಹಂತಕ್ಕೆ ತುಂಬಾಡಿರಾಮಯ್ಯ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ಕೃತಿಗಲ್ಲದೆ, ಧರಣೇಂದ್ರ ಕುರಕುರಿ ಇವರ ‘ಜಾತ್ರಿ’, ಡಾ. ಶುಭದಾ ಎಚ್.ಎಸ್. ಇವರ ‘ದೇವಿ ಕುರುಬತಿ’ ಹಾಗೂ ಡಾ. ಹಳೆಮನೆ ರಾಜಶೇಖರ್ ಇವರ ‘ಒಡಲುಗೊಂಡವರು’ ಕಾದಂಬರಿಗಳು ತಲುಪಿದ್ದವು. ದ್ವಾರನಕುಂಟೆ ಪಾತಣ್ಣನವರ ಜನ್ಮದಿನವಾದ ದಿನಾಂಕ 14 ಮಾರ್ಚ್ 2025ರ ಸಂಜೆ 5-00ಕ್ಕೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.…