Subscribe to Updates
Get the latest creative news from FooBar about art, design and business.
Author: roovari
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷಪಯಣದ ಸ್ವಗತ ‘ಯಕ್ಷಾಯಣ- ದಾಖಲೀಕರಣ’ ಸರಣಿಯ 8ನೇ ಕಾರ್ಯಕ್ರಮ ದಿನಾಂಕ 05 ಆಗಸ್ಟ್ 2025ರ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ತಮ್ಮ ಯಕ್ಷ ಪಯಣದ ಅನುಭವವನ್ನು ಹಂಚಿಕೊಂಡ ಯಕ್ಷಗಾನ ರಂಗದ ಹಿರಿಯ ಕಲಾವಿದರಾದ ರಾಮಕೃಷ್ಣ ರಾವ್ ರೆಂಜಾಳ “ಕಲಿತು ಮುಗಿಯದ ಕಲೆ ಯಕ್ಷಗಾನ. ಪರಿಶ್ರಮ, ಪ್ರಯತ್ನ, ಆಸಕ್ತಿ ಇದ್ದರೆ ಮಾತ್ರ ಈ ಕಲೆ ಒಲಿದು ಬರುತ್ತದೆ. ಕಲಾವಿದರಿಗೂ ಪರಂಪರೆಯ ಒಲವು, ಕಾಲ ಜ್ಞಾನ ಮತ್ತು ತಿಟ್ಟಿನ ಶಿಸ್ತು ಬೇಕು. ಬೆರಕೆ ಬೇಡ. ಯಕ್ಷಗಾನ ಕಲೆಯು ಪರಂಪರೆ ಹಾಗೂ ಚೌಕಟ್ಟನ್ನು ಮೀರದೆ ಕಲೆಯ ಮೌಲ್ಯವನ್ನು ಉಳಿಸಿಕೊಂಡು ಬೆಳೆಯಬೇಕು. ನಾಟಕೀಯತೆ ಹೆಚ್ಚಾಗಿ ಯಕ್ಷಗಾನ ಎಂದಿಗೂ ನಾಟಕ ಸಭಾ ಆಗದಿರಲಿ. ಕಾಲಮಿತಿ ಬಂದನಂತರ ಹೊಸತನದೊಂದಿಗೆ ಪರಂಪರೆಯ ವೇಷಗಳು ಮರೆಯಾಗುತ್ತಿವೆ. ಈಗಿನ ಕಲಾವಿದರಿಗೆ ಮೇಳ ತಿರುಗಾಟ ಕಷ್ಟ ಇಲ್ಲ. ಆಗ ಮೂರು ರೂಪಾಯಿ ಸಂಬಳ ಸಿಗುತ್ತಿದ್ದ ಕಾಲದಲ್ಲೂ…
ತಮಿಳುನಾಡು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿನಿಯಾದ ಕುಮಾರಿ ಮೇಧಾ ಸಾವಿತ್ರಿಯವರು ದಿನಾಂಕ 19 ಜುಲೈ 2025ರಂದು ತಮಿಳುನಾಡಿನ ಕರೂರು ಜಿಲ್ಲೆಯ ನಾರದ ಗಾನ ಸಭಾ (ರಿ.) ಇದರ 81ನೇ ವರ್ಷದ ಸಲುವಾಗಿ ನಡೆಸಿದ ಜಿಲ್ಲಾ ಮಟ್ಟದ ಜೂನಿಯರ್ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಮೇಧಾರವರು ವಿದ್ವಾನ್ ದೀಪಕ್ ಕುಮಾರ್ ಹಾಗೂ ಅವರ ಶಿಷ್ಯೆ ವಿದುಷಿ ಅಪೂರ್ವಗೌರಿಯವರಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಾರೆ. ಇವರು ಕರೂರಿನ ಶ್ರೀ ಮಹೇಶ್ ಉಪಾಧ್ಯಾಯ ಮತ್ತು ಶ್ರೀಮತಿ ಅಕ್ಷತಾ ಮಹೇಶ್ ರವರ ಪುತ್ರಿ ಹಾಗೂ ಕಬಕದ ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀ ಶ್ಯಾಮ್ ಭಟ್ ಕೂವೆತ್ತಿಲರವರ ಮೊಮ್ಮಗಳು. ಮೇಧಾರವರ ತಾಯಿ ಶ್ರೀಮತಿ ಅಕ್ಷತಾ ಮಹೇಶ್ ರವರೂ ಕೂಡ ಭರತನಾಟ್ಯ ಕಲಾವಿದೆಯಾಗಿತ್ತು ಭರತನಾಟ್ಯದಲ್ಲಿ ವಿದ್ವತ್ ಪೂರ್ವ ಪರೀಕ್ಷೆಯವರೆಗೆ ವಿದ್ವಾನ್ ದೀಪಕ್ ಕುಮಾರ್ ರವರಲ್ಲಿಯೇ ಭರತನಾಟ್ಯ ಕಲಿತಿದ್ದಾರೆ.
ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ, ಬೆಂಗಳೂರು ಆರ್ಟ್ ಫೌಂಡೇಷನ್, ಕಿರಂ ಪ್ರಕಾಶನ ಇವರ ವತಿಯಿಂದ ದಿನಾಂಕ 07 ಆಗಸ್ಟ್ 2025ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕಿ.ರಂ. ನಾಗರಾಜ ಇವರ ನೆನಪಿನಲ್ಲಿ ‘ಕಾಡುವ ಕಿರಂ’ ಅಹೋರಾತ್ರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಇವರು ನೆರವೇರಿಸಲಿದ್ದಾರೆ. ‘ಕಿರಂ ಹೊಸ ಕವಿತೆ 2025’ ಕೃತಿಯನ್ನು ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಅಂತರರಾಷ್ಟ್ರೀಯ ಕಲಾವಿದರಾದ ಡಾ. ಎಂ.ಎಸ್. ಮೂರ್ತಿಯವರು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪನ್ಯಾಸಕಿ ಸಹನಾ ಕೆ.ಎನ್., ವಾರ್ತಾ ಇಲಾಖೆಯ ಜಂಟಿ ನಿರ್ದೇಶಕಿ ಡಾ. ಕವನ ಕೆ.ಎನ್., ಉಪನ್ಯಾಸಕಿ ಚಂದನ ಕೆ.ಎನ್. ಭಾಗವಹಿಲಿದ್ದಾರೆ. ಕಾರ್ಯಕ್ರಮದ ಪ್ರಸ್ತಾವನೆಯನ್ನು ಸಂಶೋಧಕ ಮತ್ತು ಪತ್ರಕರ್ತ ಡಾ. ಪ್ರದೀಪ್ ಮಾಲ್ಗುಡಿ ಮಾಡಲಿದ್ದು, ‘ಕಿರಂ ಹೊಸ ಕವಿತೆ 2025’ ಕೃತಿಯ ಸಂಪಾದಕ ಎಸ್. ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ…
ಮಡಿಕೇರಿ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ದಿನಾಂಕ 31 ಜುಲೈ 2025ರಂದು ಆಯೋಜಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಜಿಲ್ಲೆ ವತಿಯಿಂದ ವಿಶೇಷ ಘಟಕ ಯೋಜನೆಯಡಿಯಲ್ಲಿನ ವಿದ್ಯಾರ್ಥಿನಿಯರಿಗೆ ‘ಸುಗಮ ಸಂಗೀತ’ ಕಲಾ ತರಬೇತಿ ಶಿಬಿರ ನಡೆಯಿತು. ಈ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ “ವಿದ್ಯಾರ್ಥಿ ಜೀವನದಲ್ಲಿಯೇ ಕಲಾ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ, ಮನಸ್ಸಿನಲ್ಲಿನ ಋಣಾತ್ಮಕ ಅಂಶಗಳೂ ಮರೆಯಾಗಲು ಸಹಕಾರಿಯಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಸುಗಮ ಸಂಗೀತ ತರಬೇತಿ ಶಿಬಿರವನ್ನು ಸರ್ಕಾರ ಹಮ್ಮಿಕೊಂಡಿರುವುದು ಶ್ಲಾಘನೀಯ. ಸುಗಮ ಸಂಗೀತ ಮಾಧ್ಯಮವು ನಮ್ಮ ಭಾವನೆಗಳ ಅಭಿವ್ಯಕ್ತಿಗೆ ಸೂಕ್ತವಾಗಿದೆ. ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ವಿದ್ಯಾರ್ಥಿಗಳು ಮಾದರಿಯಾಗಿ ಪರಿಗಣಿಸಿಕೊಂಡಲ್ಲಿ ಅವರು ಕೂಡ ಅಮೂಲ್ಯವಾದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಸರ್ಕಾರ ಆಯೋಜಿಸುವ ವಿವಿಧ ಕಾರ್ಯಕ್ರಮಗಳಿಗೆ ಸಮಾಜದ ವಿವಿಧ ಸಂಘಸಂಸ್ಥೆಗಳೂ ಕೈಜೋಡಿಸಿದರೆ ಅಂತಹ…
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಸುಮನಸಾ ಕೊಡವೂರು, ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಕೊಡವೂರು ಶಂಕರನಾರಾಯಣ ದೇವಸ್ಥಾನದ ಸಹಯೋಗದೊಂದಿಗೆ ಕೊಡವೂರಿನಲ್ಲಿ ದಿನಾಂಕ 03 ಆಗಸ್ಟ್ 2025ರಂದು ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು. ಕರ್ನಾಟಕ ಸರಕಾರದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ “ಯಕ್ಷಗಾನ ಕೇವಲ ಕಲೆಯಷ್ಟೇ ಅಲ್ಲಾ, ಅದು ನಮ್ಮ ಸಂಸ್ಕ್ರತಿಯ ಪ್ರತೀಕ, ಈಗಿನ ಒತ್ತಡದ ಬದುಕಿನ ನಡುವೆ ಸಾಂಸ್ಕೃತಿಕವಾಗಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಆರೋಗ್ಯಕ್ಕೂ ಉತ್ತಮ” ಎಂದು ಹೇಳಿದರು. ವೇದಿಕೆಯಲ್ಲಿ ಬ್ರಹ್ಮಬೈದೇರುಗಳ ಗರಡಿ ಕಲ್ಮಾಡಿ ಇದರ ಅಧ್ಯಕ್ಷರಾದ ಶಶಿಧರ್ ವಡಬಾಂಡೇಶ್ವರ, ಯಕ್ಷ ಸಂಜೀವ ಟ್ರಸ್ಟ್ ಬುಡ್ನಾರು ಇದರ ಪ್ರವರ್ತಕರಾದ ಗುರು ಬನ್ನಂಜೆ ಸಂಜೀವ ಸುವರ್ಣ, ಸುಮನಸಾ ಅಧ್ಯಕ್ಷರಾದ ಪ್ರಕಾಶ್ ಜಿ. ಕೊಡವೂರು, ಸುಮನಸಾ ಸಂಚಾಲಕರಾದ ಭಾಸ್ಕರ್ ಪಾಲನ್ ಬಾಚನಬೈಲ್, ಶಂಕರನಾರಾಯಣ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಜಾ ಸೇರಿಗಾರ್ ಉಪಸ್ಥಿತರಿದ್ದರು.…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಹಲವು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಒಡನಾಟ ಹೊಂದಿದ ಸಿಖ್ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಸಾಹಿತ್ಯ, ಸಂಸ್ಕೃತಿಯ ಕುರಿತು ಅಪಾರ ಆಸಕ್ತಿಯನ್ನು ಹೊಂದಿದ ಸರ್ದಾರ್ ಮನ್ ಪ್ರಿತ್ ಸಿಂಗ್ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಸರ್ದಾರ್ ಮನ್ ಪ್ರಿತ್ ಸಿಂಗ್ ಇವರು ಸಿಖ್ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿ ಹಾಗೂ ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು ಅಭಿಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ ಎಂದು…
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನಾ ಸಮಾರಂಭವು ದಿನಾಂಕ 05 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕರಾದ ಡಾ. ಗೀತಾಕುಮಾರಿ ಟಿ. ಮಾತನಾಡಿ “ಸಾಹಿತ್ಯವು ಜೀವನ ಮೌಲ್ಯವನ್ನು ರೂಪಿಸುವಂತಹ ಒಂದು ಕಲೆ. ಅದು ಬದುಕಿಗೆ ಭರವಸೆಯನ್ನು ನೀಡಿ ಒಂದು ವಿಶಿಷ್ಟ ವ್ಯಕ್ತಿತ್ವವನ್ನು ಕಟ್ಟಿಕೊಡುವುದರ ಮೂಲಕ ಮಹತ್ತರವಾದ ಸ್ಥಾನವನ್ನು ವಹಿಸುತ್ತದೆ. ಸಾಹಿತ್ಯದ ಓದು ಅರಿವಿನ ವಿಸ್ತಾರದ ಜೊತೆಗೆ ಸಮಾಜವನ್ನು ವೀಕ್ಷಿಸುವ ಹೊಸ ದೃಷ್ಟಿಕೋನವನ್ನು ನೀಡುತ್ತದೆ ” ಎಂದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ. ಉಪಸ್ಥಿತರಿದ್ದರು. ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಾಮಾಜಿಕ ವಸ್ತುವನ್ನೊಳಗೊಂಡ ಪ್ರಹಸನವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ…
ಬೊಗಸೆಯಲ್ಲಿ ಸಿಕ್ಕ ಬಾಳು ಚಿಕ್ಕದಿರಬಹುದು. ಆದರೆ ಮನದಾಳದಲ್ಲಿ ತುಂಬಿಕೊಂಡ ಪ್ರೀತಿಯ ನೆನಪು ದೊಡ್ಡದಾಗಿದ್ದರೆ ಬದುಕು ಸುಂದರವಾಗಿರುತ್ತದೆ. ನಮ್ಮ ಸೌಭಾಗ್ಯಕ್ಕೆ ಸಿಕ್ಕಿದ ಪ್ರೀತಿಯನ್ನು ಕೃತಜ್ಞತೆಯೊಂದಿಗೆ ನೆನೆಯುತ್ತಿರಬೇಕು. ಅಂಥ ಸಂದರ್ಭದಲ್ಲಿ ಮುಳ್ಳುಗಳ ನಡುವೆ ನಿಂತು ನಳನಳಿಸುವ ಗುಲಾಬಿಯಂತೆ ಬದುಕಿನ ದುಗುಡಗಳ ನಡುವೆ ನೆನಪಿನಲ್ಲಿ ಬಂದು ನಿಲ್ಲುವ ವ್ಯಕ್ತಿ ಸುನಂದಾ ಬೆಳಗಾಂವಕರ. ತನ್ನ ಏಳು ಜನ ಸೋದರ ಸೋದರಿಯರಲ್ಲಿ ಸುನಂದಾ ತನ್ನ ಬದುಕು ಬರಹಗಳಿಂದ ವಿಶಿಷ್ಟ ವ್ಯಕ್ತಿಯಾಗಿ ನಿಲ್ಲುತ್ತಾಳೆ. ಒಡಹುಟ್ಟುಗಳ ಕರೆಗೆ ಆಕೆ ಸದಾ ಓಗೊಟ್ಟವಳು. ಅವರ ನಡೆನುಡಿಗಳಲ್ಲಿ ಉತ್ತಮಿಕೆಯನ್ನು ಕಂಡಾಗ ಹಿಗ್ಗಿದವಳು. ಬದುಕು ಬರಹಗಳಲ್ಲಿ ತನ್ನ ತಂದೆತಾಯಿಯರನ್ನು ದೇವರ ಸ್ಥಾನದಲ್ಲಿಟ್ಟು ನೆನೆದವಳು. ಜೀವನವಿಡೀ ಅವರನ್ನು ಪೂಜಿಸಿದವಳು. ಪತಿ ಶ್ರೀ ಬಿಂದುಮಾಧವ ಬೆಳಗಾಂವಕರರನ್ನು ಪೊರೆದ ರೀತಿಯೂ ಅನನ್ಯ. ಬಿಂದು ಅವರ ತಾಯಿ ದಿನವೂ ಪಕ್ವಾನ್ನವನ್ನು ಮಾಡಿ ಮಗನಿಗೆ ಉಣಬಡಿಸಿದಂತೆ ಸುನಂದಾಳೂ ಪ್ರತಿದಿನ ಹಲವು ಪದಾರ್ಥಗಳನ್ನು ತಯಾರಿಸಿ ಉಣಬಡಿಸಿದ್ದನ್ನು ಕಂಡು ಹೊಗಳಿದ್ದೇನೆ. ನನಗೆ ತಿಳಿದಂತೆ ಪಾಕಶಾಸ್ತ್ರ ಚಾತುರ್ಯದಲ್ಲಿ ಆಕೆಯನ್ನು ಸರಿಗಟ್ಟುವವರು ಯಾರೂ ಇರಲಿಲ್ಲ. ಆಕೆ ತನ್ನ ಮನೆ…
ಪುತ್ತೂರು : ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿಯು ದಿನಾಂಕ 03 ಆಗಸ್ಟ್ 2025ರಂದು ನಡೆಯಿತು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲಾ ಘಟಕ, ಕಥಾ ಬಿಂದು ಪ್ರಕಾಶನ ಮಂಗಳೂರು ಮತ್ತು ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಇದರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರೂ ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ “ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು. ವಿವಿಧ ಬಗೆಯ ಸಾಹಿತ್ಯ ಓದು ಕಡಿಮೆಯಾಗುತ್ತಿದೆ. ಶಿಕ್ಷಕರು ಸಾಹಿತ್ಯದ ಬಗೆಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಬರೆವಣಿಗೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯ ಸೌಂದರ್ಯವನ್ನು ಉಳಿಸಿಕೊಳ್ಳಬೇಕು” ಎಂದು ಶಿಕ್ಷಕ ಸಾಹಿತಿಗಳಿಗೆ ಕಿವಿಮಾತು ಹೇಳಿದರು. ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಇದರ…
ಮಂಗಳೂರು : ಕಲಾಂಗಣದಲ್ಲಿ ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 284 ನೇ ಕಾರ್ಯಕ್ರಮ ‘ಕವಿತಾ ಫುಲೊತಾ’ ದಿನಾಂಕ 03 ಆಗಸ್ಟ್ 2025ರಂದು ನಡೆಯಿತು. ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಸಾಹಿತಿ ಗ್ಲೇಡಿಸ್ ರೇಗೊ ಇವರಿಗೆ ಲೇಖಕ ರೊನಿ ಅರುಣ್ ನುಡಿನಮನ ಸಲ್ಲಿಸಿದರು. ಪಶ್ಚಿಮ್ ಟ್ರಸ್ಟ್ ಇದರ ನಿರ್ದೇಶಕರಾದ ರೋಹಿತ್ ಸಾಂಕ್ತುಸ್ ಪುಷ್ಪಾಂಜಲಿ ಅರ್ಪಿಸಿದರು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಎಲ್ರೊನ್ ರೊಡ್ರಿಗಸ್, ಕ್ಲಾರಾ ಡಿಕುನ್ಹಾ, ರೈನಾ ಸಿಕ್ವೇರಾ, ಕೇರನ್ ಮಾಡ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಎವರೆಸ್ಟ್ ಕ್ರಾಸ್ತಾ ಇವರು ಗಂಟೆ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಂಕಣಿ ಕವಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯ ರೊನಿ ಕ್ರಾಸ್ತಾ ಕೆಲರಾಯ್ ಇವರ ಹನ್ನೆರಡು ಕವಿತೆಗಳಿಗೆ ಸ್ವರ ಸಂಯೋಜಿಸಿ, ಸಂಗೀತ ನೀಡಿ ಹಾಡಲಾಯಿತು. ಎರಿಕ್ ಒಝೇರಿಯೊ, ಜೊಯ್ಸ್ ಒಝೇರಿಯೊ, ಶಿಲ್ಪಾ ಕುಟಿನ್ಹಾ, ಸುನಿಲ್ ಮೊಂತೇರೊ, ರೊಬಿನ್ ಸಿಕ್ವೇರಾ, ರೈನಲ್ ಸಿಕ್ವೇರಾ, ಸೋನಲ್ ಮೊಂತೇರೊ, ಜೀವನ್ ಸಿದ್ದಿ, ಪ್ರಿಥುಮಾ ಮೊಂತೇರೊ,…